ಒಟ್ಟು 43 ಕಡೆಗಳಲ್ಲಿ , 29 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನನಲ್ಲದೆ ಯಾರ ಸನ್ನುತಿಸಿ ಫಲವೇನೋ ಪನ್ನಗಾದ್ರಿನಿವಾಸ ಶ್ರೀವೆಂಕಟೇಶ ಪ ಮನ್ನಣೆಯು ಬೇಡಯ್ಯ ಎನ್ನ ತಪ್ಪುಗಳನ್ನು ಮನ್ನಿಸೆಂದೊರಲುವೆನು ಶ್ರೀವೆಂಕಟೇಶ ಅ.ಪ ತಪ್ಪುಹಾದಿಯ ಹಿಡಿದು ಬೆಪ್ಪನಾಗಿರುವೆನ್ನ ಒಪ್ಪಿ ಪರಿಪಾಲಿಸುವ ಅಪ್ಪ ನೀನೋ ತಪ್ಪೊಪ್ಪುಗಳನೆಲ್ಲಾ ಒಪ್ಪಿಸಿದೆ ನಿನಗೆ ತಿಮ್ಮಪ್ಪ ಮಾಂಗಿರಿವಾಸ ಕೈಹಿಡಿದು ಕಾಯೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಡಕೊ ನಿಜಗುರುತಾ ನಿಜಗುರುತಾ ಪಡೆವದಿದೆ ನಿಜ ನೀ ಗುರುತಾ ಧ್ರುವ ಸಾಧಿಸಿ ಗುರು ಗುರುತಾ, ಸಾಧಿಸಿ ಗುರು ಗುರುತಾ ಅದೇ ತುಂಬೇದ ಜಗಭರಿತಾ 1 ಮನ್ನಿಸೆ ತಿಳಿ ತ್ವರಿತಾ ಮನ್ನಿಸಿ ತಿಳಿತ್ವರಿತಾ ನಿನ್ನದಲ್ಲಿದು ಹೊರತಾ 2 ತರಣೋಪಾಯದ ವರತಾ ತರಣೋಪಾಯದ ವರತಾ ಗುರುಕರುಣದ ದಯಗರತಾ 3 ಪರಮ ಙÁ್ಞನಾಮೃತಾ ಪರಮ ಙÁ್ಞನಾಮೃತಾ ತರಳ ಮಹಿಪತಿ ಮನೋಹರಾ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾಲಿಸೈಯಪಾರ ಮಹಿಮ ಪತಿತ ಪಾವನ ಪ. ನೀಲ ಎನ್ನ ಅ.ಪ. ಇಂದಿರಾ ಮನೋಹರ ಆನಂದ ಮೂರುತಿಯೆ ನಿನ್ನ ವಂದಿಸಿ ಬೇಡುವ ಎನಗೆ ಸಂದರುಶನವೀಯ ರಾಯ ತಂದೆ ಮುಕುಂದ ಮನ್ನಿಸೆಲೊ ಕಂದನಾದೆನ್ನ ಮರೆಯದೆ ಬಂದು ನಿಂದು ಮುಖವ ತೋರೊ ಸುಂದರ ಅರವಿಂದನಯನ 1 ತಾತನಾಗಿ ಎನ್ನೊಳೊಂದ ಮಾತನಾಡದಿರುವರೇನೊ ನಾಥ ನೀನೇ ಕಾಯದಿರಲು ಖ್ಯಾತಿವಂತರನ್ನು ಕಾಣೆ ಪರಾಕು 2 ವಾಸುದೇವ ಕೈಯ ಬರದೆ ದೋಷವ ನಾಶಮಾಡಿ ನಿನ್ನ ದಾಸನೆಂದೆನಿಸೊ ನಿನ್ನ ಬೇಸರಿಸದೆ ಶೇಷಗಿರಿವಾಸ ವೆಂಕಟೇಶ ಪೊರೆಯೊ 3
--------------
ಸರಸ್ವತಿ ಬಾಯಿ
ಬೇಡ ಬೇಡ ಹೋಗೆಂದು ಕಾಡದಿರು ಕೃಪೆಯೊಂದ ಬೇಡದಿರಲಾರೆ ಮಾಂಗಿರಿಯರಂಗ ಪ ಬೇಡುವನ ಕೈ ಕೀಳು ನೀಡುವನ ಕೈ ಮೇಲು ಬೇಡಿದಲ್ಲದೆ ಕೃಪೆಯ ಮಾಡನೈರಂಗಾ ಅ.ಪ ಗಾನಕೆ ನಲಿಯುವೆಯೋ ಧ್ಯಾನಕೆ ಒಲಿಯುವೆಯೋ ಜ್ಞಾನಕೆ ಸಿಗುವೆಯೋ ನಾನರಿಯೆನು ಗಾನದರಿವೆನಗಿಲ್ಲ ಧ್ಯಾನಮಾಡುವನಲ್ಲ ಜ್ಞಾನಾನುಭವವಿಲ್ಲ ಆಧಾರವಿಲ್ಲ 1 ನೀನೆನ್ನ ಕಡೆಗಣಿಸಿ ಹೀನ ಹೋಗೆಂದೆನಲು ನಾನಳುವೆನನವರತ ಶ್ವಾನದಂತೆ ಸೂನು ಬಾ ಬಾರೆಂದು ಸಾನುರಾಗದಿ ರಮಾದೇವಿ ಸಂತೈಪಳು 2 ಎನ್ನಮ್ಮ ಕೃಪೆಯಿಂದ ನಿನ್ನ ಕಾಲ್ವಿಡಿಯೆಂದು ಎನ್ನ ಕಳುಹುತ ನಿನಗೆ ಎನ್ನ ತೋರ್ದು ಎನ್ನನತಿಕೃಪೆಯಿಂದ ಮನ್ನಿಸೆನ್ನುವಳಾಗ ನಿನ್ನ ಕೃಪೆ ಯೆನಗುಂಟು ಮಾಂಗಿರೀಶಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಾರತೀ ಪತಿನುತ ವಿಠಲ ನೀನಿವಳ ಉದ್ಧಾರ ಮಾಡುವುದು ಹರಿಯೇ ಪ ತಾರಕನು ನಿನಗನ್ಯ ಉಂಟೇ ಈರೇಳು ಲೋಕದಲಿ ಧೊರೆಯೇ ಅ.ಪ. ಜನ್ಮಜನ್ಮದಲಿ ಬಲುನೊಂದು ಸತ್ಪುಣ್ಯಗಳನೇ ಮಾಡಿಜನ್ಮಪೊಂದುತಲಿ ಸತ್ಕುಲದಿ ಸನ್ಮತದವನ ಕೈಯ ಪಿಡಿದು |ಸನ್ಮಧ್ವಮತ ದೀಕ್ಷೆಗಳ - ಒಮ್ಮನದಿ ತಾಳುತ್ತನಿಮ್ಮಡಿಯ ನಾಶ್ರಯಿಸಿ ಬಂದಿಹಳ ಸಲಹುವುದು 1 ತರತಮ ಜ್ಞಾನದಲಿ - ಉರುತರೋತ್ಸುಕತೆಯನುನಿರತ ಹರಿಗುರುಗಳಲಿ ಉರುತರದ ಭಕ್ತಿಯನೂ |ಹಿರಿಯರನು ವಿನಯದಿಂ ಪರಿಚರಿಪ ಮತಿಯನ್ನುಕರುಣಿಸೀ ಸಲಹಯ್ಯ ಮರುತಾಂತರಾತ್ಮಾ 2 ಪಂಚಭೇಧದ ಜ್ಞಾನ ಸಂಚಿಂತನೆಯನೇ ಕೊಟ್ಟುಮಿಂಚಿನಂದದಿ ತೋರೊ - ಹೃತ್ಪಂಕಜನಲೀಅಂಚೆವಹಪಿತ ನಿನ್ನ ಪದಕಮಲ ಭಜಿಪಳಿಗೆವಾಂಛಿತಾರ್ಥದನಾಗಿ - ಸಲಹ ಬೇಕಿವಳಾ 3 ಪತಿ ನೀನೆ ಎಂಬಂಥಮತಿಯಿತ್ತು ಭವಗಳನ ಉತ್ತರಿಸು ಹರಿಯೇ 4 ನಿನ್ನ ಪದ ಕಮಲದಲಿ ಜ್ಞಾನಭಕುತಿಗಳಿತ್ತುನನ್ನೆ ಯಿಂದಿವಳ ಚೆನ್ನಾಗಿ ಸಲಹೊ ಹರಿಯೇ |ಸನ್ನುತಿಸಿ ಪ್ರಾರ್ಥಿಸುವೆ - ಮನ್ನಿಸೆನ ಬಿನ್ನಪವಘನ್ನ ಮಹಿಮನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಧುಹರನಿಗರ್ಪಿತವು ಸರ್ವಕರ್ಮ ಪ ಕರ್ಮ ಅನುಭವವು ಅ.ಪ ಸ್ಮøತಿ ವಿಸ್ಮøತಿಯಲ್ಲಿ ಕೃತ ಉತ್ತಮಾಧಮ ಕರ್ಮ ಮತ್ತೆ ಅನುಭವಿಸಿದ ಸುಖ ದುಃಖಗಳಿಗೆ ಚಿತ್ತ ನಿನ್ನದು ಮೂಲ ಸರ್ವ ಸ್ಥಿತಿಗತಿ ಧರ್ಮ ವೃತ್ತಿಗಳಿಗನವರತ ಸತ್ಯ ಸಂಕಲ್ಪನೆ 1 ನೀನಮ್ಮನಿಟ್ಟಪರಿ ನಿನ್ನಿಷ್ಟವಾಗಿರಲು ಎನ್ನಿಷ್ಟವೆನಲ್ಯಾಕೊ ಪ್ರೇಷ್ಠತಮನೆ ವಾಣೀಶ ಹರಸುರರು ನಿನ್ನ ಪ್ರೀತಿಗಾಗಿ ಏನು ಕೊಟ್ಟರು ಮುದದಿ ಉಂಡು ನಿನಗರ್ಪಿಪರೊ 2 ಅಧಿಕಾರಿ ನಾನಲ್ಲದದರಿಂದ ಬೆದರುವೆನು ಮದನನಯ್ಯನೆ ದಯದಿ ಮನ್ನಿಸೆನ್ನ ಉದಯಾಸ್ತ ಕೃತಕರ್ಮ ಜಯೇಶವಿಠಲ ಮುದಖೇದಗಳು ನಿನ್ನ ಪ್ರೀತಿಗೊದಗಲೋ ದೇವ 3
--------------
ಜಯೇಶವಿಠಲ
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮನ್ನಿಸೆನ್ನ ಮನ್ಮಥಜನಕ ಮಧು ಸೂ-ದನ್ನ ಮಂದರೋದ್ಧಾರ ನಿನ್ನ ನಂಬಿದೆ ನಿರಂತರದಿ ನೀನಿಹಪರದಲಿ ಕಾಯಯ್ಯ ಅ ಖಗ ತುರಂಗ ಜಗದಂತÀರಂಗವಿಧಿ ಕುರಂಗಧರ ನಮಿತ ಸಾರಂಗಪರಿಪಾಲ ಸುಗುಣಜಾಲ ಲಕುಮಿಲೋಲಕೃಪಾರಸತರಾಂಗಿತಾಪಾಂಗ ದುರಿತಭಂಗಧsÀೃತರಥಾಂಗ ಶುಭಾಂಗ 1 ಕಾರುಣ್ಯನಿಧಿ ಶರಣ್ಯವತ್ಸಲ ಲೋಕಶರಣ್ಯ ದೇವವರಣ್ಯ ಘನಶ್ಯಾಮ ಚರಣ ಕಮಲಕ್ಕೆ ಶರಣು ಹೊಕ್ಕೆ ತಾಮಸವ್ಯಾಕೆಸಲಹೊ ಶ್ರೀಧರ ಯದುವೀರ ದುರಿತದೂರವೇದಸಾರ ಗಂಭೀರ 2 ಸನಂದನಾದಿ ಮುನಿಪ್ರಿಯ ಸಚ್ಚಿದಾನಂದನಂದತನಯ ಏನೆಂದು ಪೇಳ್ವೆ ನಿನ್ನ ಮಾಯಾಮರೆಯಲರಿಯೆ ಯುಧಿಷ್ಠಿರ ಧನಂಜಯಸಹಾಯ ಶ್ರೀಕೃಷ್ಣರಾಯ ಸಹೃದಯಗೇಯ ನಮೋ ನಮೋ ಜೀಯ3
--------------
ವ್ಯಾಸರಾಯರು
ಮನ್ನಿಸೆನ್ನ ಮಹಾಲಿಂಗ ದೇವೋತ್ತುಂಗ ಪುಣ್ಯಶ್ಲೋಕ ನಿನ್ನ ವರ್ಣಿಪೆ ಮುಕ್ಕಣ್ಣ ಪ. ಭಕ್ತಪಾರಿಜಾತ ಶಕ್ತಿದೇವಿಪ್ರೀತ ಸತ್ಯಧರ್ಮಯೂಥ ಸ್ವಾಮಿಲೋಕನಾಥ 1 ವಂದನೀಯ ಕೃಪಾಸಿಂಧು ದಿವ್ಯರೂಪ ಚಂದ್ರಚೂಡ ಸಾಂದ್ರಾನಂದ ವೈಷ್ಣವೇಂದ್ರ 2 ಮಾರವೈರಿ ಲಕ್ಷ್ಮೀನಾರಾಯಣಪ್ರೇಮಿ ಸಾರತತ್ತ್ವಬೋಧ ಸಾಧುಸುಪ್ರಸೀದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮನ್ನಿಸೆನ್ನ ವೆಂಕಟರನ್ನ ಅನ್ಯಥಾ ಗತಿಗಾಣೆ ನಾ ಪ ಹಲವು ಜನುಮದಿ ಬಂದೆ ಬಲು ಪರಿಯಲಿ ನೊಂದೆ ತೊಳಲಿ ಬಳಲಿ ನಿಂದೆ ಸಲಹೊ ತಂದೆ 1 ವಾಸವ ವಂದಿತ ಕೇಶವ ಅಚ್ಯುತ ದಾಸರ ಮನ ಹಿತ ಬಾ ಶಾಶ್ವತ 2 ಲಕುಮಿಕಾಂತನೆ ಎನ್ನ ಉಕುತಿ ಲಾಲಿಸಿ ಘನ್ನ ಭಕುತಿ ಪಾಲಿಸೊ ಮುನ್ನ ಮುಕುತೀಶನೆ3
--------------
ಲಕ್ಷ್ಮೀನಾರಯಣರಾಯರು
ಮೌನಮೇಂ ಪ್ರಾಣೇಶ ಎನ್ನೊಳೀಪರಿರೋಷ ಇನ್ನೇತಕೀ ದ್ವೇಷ ಜೀವಿತೇಶ ಅನ್ಯಾಯಮೇಂಗೈದೆ ನಿನ್ನನಾನೇನೆಂದೆ ನಿನ್ನ ಚರೈಯನೊರೆದೆ ನಿನ್ನ ಮುಂದೆ ಇಷ್ಟು ಮಾತ್ರದಿಯೆನ್ನ ದಿಟ್ಟಿಸದೆ ನೀಂಘನ್ನ ಸಿಟ್ಟಿನಿಂ ಕುಳ್ಳಿಹುದೆ ದಿಟ್ಟತನದೆ ಕರುಣಾಳು ನೀಕೇಳು ತರುಣಿ ನಾ ನಿನ್ನವಳು ಪರರ ಭಾವಿಸಲೊಲ್ಲೆ ನೀನೆ ಬಲ್ಲೆ ಇನ್ನಾದೊಡೀ ಪಂಥವುಳಿದು ದಯದಿ ಕಣ್ತೆರೆದು ನೋಡಿನ್ನು ಮನ್ನಿಸೆನ್ನ ನಿನ್ನುಳಿದು ಕಾಣೆನಾನನ್ಯರನ್ನು ಘನ್ನ ಶೇಷಾದ್ರೀಶನಹುದು ನೀನು
--------------
ನಂಜನಗೂಡು ತಿರುಮಲಾಂಬಾ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ