ಒಟ್ಟು 157 ಕಡೆಗಳಲ್ಲಿ , 47 ದಾಸರು , 142 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೆ ಗತಿಯೆಂದು ನಂಬಿದೆನೆ ನಾ ನೀತನಂಥ ನಿಷ್ಕರುಣನ ಕಾಣೆ ಪಾತಕಹರ ಅ ನಾಥರಕ್ಷಕ ಮಹದಾತ ಪರಮಭಕ್ತ ಪ್ರೀತನೆಂಬುದ ಕೇಳಿ ಪ ಮರುಳಾಗಿವನ ಬೆನ್ಹತ್ತಿದೆನೆ ಮನೆ ಮಾರುಗಳೆಲ್ಲವ ತೊರೆದೆನೆ ಕರುಣವಿಲ್ಲ ತುಸು ಹೊರಳಿ ನೋಡುವಲ್ಲ ತಿರುತಿರುಗಿ ಮನಕರಗಿ ಸಾಕಾಯಿತು 1 ಜಾತಿಹೀನನೆಂಬುವೆನೇನೆ ಲೋಕ ನಾಥನಿಗೆ ಕುಲ ಅದೇನೆ ಈತನ ಹೊರ್ತು ಮತ್ತಾರಾಸೆನಗಿಲ್ಲ ನೀತಿಯೆ ಈತಗೆ ಜಾತಿಭೇದವೆಂಬ 2 ಹೊಲೆಯರ ಮನೆಯಲ್ಲುಂಡನೆ ಇವ ಗೊಲ್ಲರ ಕುಲದಲ್ಹುಟ್ಟಿದನೆ ಗೊಲ್ಲರ ನಲ್ಲೆಯರಲ್ಲಿ ಹೋಗಿ ಈತ ಗುಲ್ಲುಮಾಡಿ ಬೆಣ್ಣೆಗಳ್ಳನೆನಿಸಿಕೊಂಡ 3 ಪಾತರದವಳಲ್ಲಿಗ್ಹೋದನೆ ತಾ ನೀತಿವಂತನ ಕಟ್ಟೊಡ್ಹೆಸಿದನೆ ನೀತಿವಂತರು ಕೇಳಿರೀತನ ರೀತಿಯ ದಾತ ಜಗನ್ನಾಥ 4 ನಿಲ್ಲದು ಮನ ಘಳಿಗಿವನಲಿ ನಾ ಸಲ್ಲದ್ಹಾಂಗ್ಹೋದೆ ಮತ್ತೆಲ್ಲ್ಹೋಗಲಿ ಬಲ್ಲಿದ ಶ್ರೀರಾಮನೆಲ್ಲ್ಹೋದರು ಬಿಡೆ ಕಲ್ಲೆದೆಯವಗಾಗಿ ಪ್ರಾಣಹೋಗಲಿನ್ನು 5
--------------
ರಾಮದಾಸರು
ಉದ್ದಂಡ ಚಿದಾನಂದ ಪ ಅವರಿಗೆ ನಾ ಮರುಳಾಗಿ ತನಯರೈವರ ಬಿಟ್ಟೆ ನಾಲ್ವರು ಭಾವಂದಿರನು ಬಿಟ್ಟೆ ಸನುಮ-ತವಾಗಿದ್ದ ಸರಿವರ್ಗತನವ ಬಿಟ್ಟೆನಿನಗೆ ಮಾಡಿದ ಲೇಸ ಎನ್ನಲೇಸನು ನೀನು1 ಅರಸನೊಳ್ಳಿದನೆಂದು ಆರಣ್ಣರ ಬಿಟ್ಟೆಹಿರಿಯ ಮಮತೆಯಲ್ಲಿದ್ದ ಅಕ್ಕಂದಿರನು ಬಿಟ್ಟೆಸರಿಹೋಗಿ ಎನಗಿಷ್ಟದ ಸವತಿ ಮೂವರ ಬಿಟ್ಟೆಕರುಣಾಕರನು ಕೈ ವಿಡಿಯ ಲಂತಾದುದಾ2 ಅತಿಮೋಹ ಮಾಡುವ ಅಷ್ಟಾಪ್ತರನು ಬಿಟ್ಟೆಪಿತರೀರ್ವರನು ನಾನು ಹೇವರಿಸಿ ಬಿಟ್ಟೆಸತತ ಚಿಂತಿಪ ಹತ್ತು ಸಖಿಯರನು ನಾ ಬಿಟ್ಟೆಮತಿ ಎನಗಿನ್ನೇನೆ ಮಂದಗಮನೆ ಹೇಳೆ 3 ನಿತ್ಯ ಕಾಲದಿ ಅವನ ನಿಜಸೇವೆ ಮಾಡುತಿಹೆಸತ್ಯ ಸತ್ಯವೆ ಎಂಬ ತೆರದಿಂದಲಿಪ್ರತ್ಯಗಾತ್ಮನು ತನ್ನ ಕೀರ್ತಿವಾರ್ತೆಯ ನೆಲ್ಲಕೂರ್ತು ಮರೆಯಾದಂತೆ ಎನಗೆ ಮಾಡಿದುದ ನೀನು4 ಎನ್ನ ಸುಖದುಃಖ ಫಲ ಎನ್ನ ಕೈ ಮೇಲುಂಟೆನೆಚೆನ್ನ ಚಿದಾನಂದ ಗುರುವಿನಿಂದಉನ್ನತ ನಂಬುಗೆ ಎಂಬುದಿಂತಾಯಿತೇಬಣ್ಣಿಸಲೇನವ್ವ ಬಯಲ ಕೂಡಿಸಿ ಬಿಟ್ಟ 5
--------------
ಚಿದಾನಂದ ಅವಧೂತರು
ಉಮಾ ಹಿಮಗಿರಿ ಸಮಸ್ತ ಸಮಾನ ಸುಗುಣವಂದ್ಯೆ ಪ ಕಮಲಾಕ್ಷನÀ ಭಗಿನಿಯೆನ್ನಮಲನ ಮಾಡಿ ವಿಮ¯ ಮನಸು ಶಮದಮಗಳ ನೀಡಮ್ಮ ಅ.ಪ. ತ್ರಿಪುರ ಸುಂದರಿ ನಿನ್ನ ಅಪಾರ ರೂಪಕೆ ತ್ರಿಪುರಾರಿ ಮರುಳಾದನಮ್ಮ ಶಫರಾಕ್ಷಿ ಕೇಳೆನ್ನ ಬಿನ್ನಪವನು ಮನ ಚಪಲಾಕೆರಗದಂತೆ ಕೃಪೆ ಮಾಡಬೇಕಮ್ಮ 1 ಜಪವ ನಾನರಿಯೆನು ತಪವ ನಾನರಿಯೆನು ಎ ನ್ನಪರ ಬುದ್ಧಿಯ ಬಿಡಿಸಮ್ಮ ಕೃಪಣ ವತ್ಸಲೆ ಎನ್ನ ಕುಪಥಾವ ತಪ್ಪಿಸಿ ಅಪವರ್ಗ ಸೇರುವ ಸುಪಥವ ತೋರಮ್ಮ 2 ಅಪ್ಪ ರಂಗೇಶವಿಠಲ ಒಪ್ಪುವ ರೀತಿಲಿ ತಪ್ಪದೆ ಮತಿ ಪ್ರೇರಿಸಮ್ಮ ತಪ್ಪು ಒಪ್ಪುಗಳೆಲ್ಲ ಸರ್ಪಶಯನಗೆಅರ್ಪಿಸಿ ಎನ್ನ ನಿರ್ಲಿಪ್ತನ ಮಾಡಿಸಮ್ಮ 3
--------------
ರಂಗೇಶವಿಠಲದಾಸರು
ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ | ಪಂಥದಲ್ಲಿ ಕೆಡಲಿಬೇಡ ಎರಡು ದಿನ | ಸಂತೆ ನೆರೆದಂತೆ ಮೂಢ ಇಪ್ಪದಿದು | ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ | ಸಂಚಿತಾರ್ಥವ ತಿಳಿಯದೆ ಮರುಳಾದ | ಪರ | ಪಂಚವನು ನೀ ಕಳಿಯದೆ ವ್ಯರ್ಥಾಯ | ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು | ಹಂಚಿಕೆ ತೋರಿದಂತೆ ಮೃತ್ಯುವಿನ | ಪಂಚದಲಿ ಸೇರಿದಂತೆ | ಆಗುವುದು | ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1 ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ | ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ | ಬಗ್ಗು ನಡೆವಳಿ ನಡೆದು | ವೆಗ್ಗಳದ ನಡೆವಳಿ ನಡೆದು | ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ | ಬಿಡು ಬಿಡು ಅಗ್ಗಳಿಕೆತನವೆ | ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2 ಇನ್ನಾದರೂ ಕೇಳು | ಪುಣ್ಯವಂತರ ಕೂಡು | ನಿನ್ನವರು ನಿನಗೆ ದಾರೊ | ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ | ಬೆನ್ನಿಗೆ ಬಂದ ವಿಚಾರೊ ತುದಿಯಲಿ | ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು | ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ | ಖಿನ್ನನಾಗುವದೇತಕೊ ಸಾವಿರಕು | ಮುನ್ನಿಲ್ಲವೊ ಮನಸಿತೊ ಪ್ರಾಣಿ 3 ವೇದಶಾಸ್ತ್ರವನರಿಯೆ ಆದಿಪುರಾಣಗಳು | ಅದ್ವೈತ | ವಾದವರ ಕೂಡದಿರು ಇದೆ ಮಿಗಿ ಲಾದರು ಮರಿಯದಿರು ಉತ್ತಮ | ಸಿರಿ ವಿಜಯವಿಠ್ಠಲನ ಶ್ರೀ | ಪಾದವನು ಒಂದೇ ಭಕ್ತಿಯಿಂದಲಾ | ರಾಧಿಸು ಇದಕೆ ಯುಕ್ತಿ ಕಡಿಯದಲೆ | ಮಾಧವನು ಕೊಡುವ ಮುಕ್ತಿ ಪ್ರಾಣಿ4
--------------
ವಿಜಯದಾಸ
ಎಂಥ ಗರವು ನೋಡಮ್ಮಯ್ಯರುಕ್ಮಿಣಿಗೆಂಥ ಗರವು ನೋಡಮ್ಮಯ್ಯಕಂತುನಯ್ಯನ ಎನಗಂತ್ರವ ಮಾಡಿದ ಮಂತ್ರವ ಮಾಡಿದಳಮ್ಮಯ್ಯ ಪ. ಹಿಡಿದ ವೀಳ್ಯವ ನಾನು ಕೊಡುವೊ ಸಮಯದಿಬಂದು ಕಿಡಿ ಹಾಕಿದಳು ನೋಡಮ್ಮಯ್ಯಭಾವೆ ಕಿಡಿಯ ಹಾಕಿದಳು ನೋಡಮ್ಮಯ್ಯ ಹುಡುಗೆ ವೀಳ್ಯಕೆ ಮುಖಕೊಡಬಹುದುಕೃಷ್ಣನು ಬಿಡನು ಇವಳದೇನಮ್ಮಯ್ಯಇಂಥ ಭಿಡೆಯು ಇವಳದೇನಮ್ಮಯ್ಯ 1 ಮೋದ ಇಟ್ಟವಳಿಗೆಆದರವಿಲ್ಲ ನೋಡಮ್ಮಯ್ಯಏನೂ ಆದರವಿಲ್ಲ ನೋಡಮ್ಮಯ್ಯ ಕಾಡುತ ಕೊಟ್ಟ ವೀಳ್ಯವ ಮಾಧವಗೆಕೊಟ್ಟರೆ ಹೋದೀತು ಬುದ್ದಿ ನೋಡಮ್ಮಯ್ಯರುಕ್ಮಿಣಿಯಲ್ಲೆ ಹೋದೀತು ಬುದ್ಧಿ ನೋಡಮ್ಮಯ್ಯ 2 ಥಾಟು ಥೀಟಿನ ಭಾವೆ ಮಾಟ ಮಾಡಿದಳೇನಮ್ಮಯ್ಯಬೂಟಕತನ ನೋಡಮ್ಮಯ್ಯಬೂಟಕಗುಣದವಳ ಕೂಟಕೆ ಮೆಚ್ಚಿದಹರಿಯ ಆಟವÀ ನೋಡಮ್ಮಯ್ಯಮರುಳಾಟವ ಹರಿಯ ನೋಡಮ್ಮಯ್ಯ3 ಸೃಷ್ಟ್ಯಾದಿಕರ್ತಗೆ ಇಟ್ಟಳು ಮದ್ದಾನೆ ಧಿಟ್ಟತನವ ನೋಡಮ್ಮಯ್ಯರುಕ್ಮಿಣಿಯ ದಿಟ್ಟತನವ ನೋಡಮ್ಮಯ್ಯಎಷ್ಟು ಧೈರ್ಯವೆಂದು ಕೃಷ್ಣತಾ ಬೆರಗಾಗಿ ಬಿಟ್ಟನುವೀಳ್ಯವ ನೋಡಮ್ಮಯ್ಯ4 ವಟಪತ್ರ ಶಾಯಿಗೆ ಕುಟಿಲ ಮಂತ್ರವಮಾಡೊ ಚಟುಲತನ ನೋಡಮ್ಮಯ್ಯ ಭಾವೆಯ ಚಟುಲತನವ ನೋಡಮ್ಮಯ್ಯಸಟಿಯಲ್ಲ ಇವಳೆದೆ ಕಠಿಣತಿಶÀಯವೆಂದು ಮಿಟಿಮಿಟಿ ನೋಡಿದನಮ್ಮಯ್ಯಕೃಷ್ಣ ಮಿಟಿಮಿಟ ನೋಡಿದನಮ್ಮಯ್ಯ 5 ಭಾಳೆ ದಯಾಳು ಎಂದು ಹೇಳುವ ಶೃತಿಗಳುಕೇಳಿ ಆಟವು ನೋಡಮ್ಮಯ್ಯಹರಿಯ ಕೇಳಿ ಆಟವು ನೋಡಮ್ಮಯ್ಯಕಾಳ ಕೂಟವ ಕೈತಾಳವ ಹಿಡಿದಂತೆಆಳುವನಿವಳ ನೋಡಮ್ಮಯ್ಯಕೃಷ್ಣ ಆಳುವನಿವಳ ನೋಡಮ್ಮಯ್ಯ6 ಸರ್ವದಾ ತನ್ನ ಕೂಡ ಇರಬೇಕೆಂದೆನುತಲಿಎರೆದಳು ತೈಲವ ನೋಡಮ್ಮಯ್ಯಹರಿಗೆ ಎರೆದಳು ತೈಲವಮ್ಮಯ್ಯಭರದಿ ಕೋಪಿಸಿ ಕಣ್ಣು ತೆರೆದು ನೋಡುವರೆನ್ನಧರಿಸಲಿನ್ನೆಷ್ಟು ನೋಡಮ್ಮಯ್ಯನಾ ಧರಿಸಲಿನ್ನೆಷ್ಟು ನೋಡಮ್ಮಯ್ಯ 7 ಪುಂಡರೀಕಾಕ್ಷನ ಕೊಂಡಾಡಿ ಸುಖಿಸುವಹೆಂಡಿರು ಕಡಿಮೆಯೇನಮ್ಮಯ್ಯಹರಿಗೆ ಹೆಂಡಿರು ಕಡಿಮೆಯೇನಮ್ಮಯ್ಯಕೆಂಡವ ತುಂಬಿದ ಮಂಡಿ ತೋರಿಸಿದಂತೆಚಂಡಿಯನಾಳುವ ನಮ್ಮಯ್ಯಕೃಷ್ಣ ಚಂಡಿಯನಾಳುವ ನಮ್ಮಯ್ಯ8 ಧಿಟ್ಟಿಯರಿಬ್ಬರು ಕೋಪ ಬಿಟ್ಟರೆ ಇವರಿಗೆಎಷ್ಟು ಒಲುಮೆ ನೋಡಮ್ಮಯ್ಯನಾ ಎಷ್ಟು ಒಲುಮೆ ನೋಡಮ್ಮಯ್ಯಧಿಟ್ಟ ರಾಮೇಶನಲೆ ಇಟ್ಟರೆ ಇವರಿಗೆಎಷ್ಟರೆ ಗರ್ವ ನೋಡಮ್ಮಯ್ಯಬೇಡಿದ್ದು ಎಷ್ಟರೆ ಗರ್ವ ನೋಡಮ್ಮಯ್ಯ 9
--------------
ಗಲಗಲಿಅವ್ವನವರು
ಎಂದಿಗೂ ಮರುಳಾಗೆನೋ ಸಂಸಾರಕ್ಕೆ ಎಂದಿಗೂ ಮರುಳಾಗೆನೋ ಪ ಬಂಧವ ತರಿವ ಕೇಶವನ ದಾಸನಾಗಿ ಪಾದ ಸೇರುವೆನಯ್ಯ ಅ.ಪ ನಾರಿಯರನು ನೆಚ್ಚಿಸೀ ಧರ್ಮವ ಬಿಡಿಸಿ ಮಾರಿಯರ ಸಾಕಿಸೀ ಆರರ ವಶಮಾಡಿ ರತಿಕ್ರೀಡೆ ನಂಬಿಸಿ ಮಾರಿಯ ಗೃಹಕೆನ್ನ ಗುರಿಮಾಡ್ವ ಭವಕೇ 1 ಹÉೂನ್ನುಗಳಿಗೆ ಮೆಚ್ಚಿಸೀ ಸತ್ಯವ ಬಿಡಿಸಿ ಮಣ್ಣುಗಳಿಗೆ ಸೊಕ್ಕಿಸೀ ಬಣ್ಗೆಣ್ಣಿಸಲಾಗದ ಪಾಪವ ಮಾಡಿಸಿ ಚಿನ್ನನ ಮರೆಸುವ ಪುಸಿಯಾದ ಭವಕೇ 2 ಸ್ಮರಣೆಗಳನ್ನೇ ಮಾಡಿ ಸರಸದಿ ಪಾಲಿಪ ಭಕ್ತರ ಪರಿಯನ್ನು ಭರದಿ ಸೇರಿಸಿ ಚನ್ನಕೇಶವಾ ಗತಿಯೆಂಬೇ 3
--------------
ಕರ್ಕಿ ಕೇಶವದಾಸ
ಎಂದಿಗೆನಗೆ ಬುದ್ಧಿ ಬಂದಿತೋ ಹರಿಯೆ ಇಂದೀವರಾಕ್ಷ ನೀನೆ ಗತಿ ದೊರೆಯೆ ಪ. ಕಣ್ಣಿದಿರಲಿ ಕಂಡು ಕಾಲಗತಿಗಳನ್ನು ತನ್ನ ಸಂಸ್ಥಿತಿ ಮುಂದೆಂತಾಹುದನು ಚೆನ್ನಾಗಿ ಗ್ರಹಿಸದೆ ಚಪಲ ಚಿತ್ತದಿ ಗೃಹ ಸನ್ಮಹದಲಿ ಮನವನಿಟ್ಟು ಬಳಲುವೆ 1 ಸಾಗದ ಕಾರ್ಯವ ಸುಲಭವೆಂದೆಣಿಸಿದ- ರಾಗದು ಹಗಲಿರಳೊರಳಿದರು ನಾಗಶಯನ ನೀನು ನಿರ್ಣಯಿಸಿದ ರೀತಿ ಯಾಗುವದೆಂಬುದನರಿಯದೆ ಮರುಳಾದೆ 2 ಇಂತಾದ ಮ್ಯಾಲೆ ಶ್ರೀಕಾಂತ ನೀ ದೊರಕುವ- ದೆಂತು ಸಂಘಟ್ಟಿಪದೋ ನಾನರಿಯೆ ಕಂತುಜನಕ ವೆಂಕಟೇಶನೆ ಮಾನಸ ಭ್ರಾಂತಿಯ ಬಿಡಿಸು ನಿಶ್ಚಿಂತೆಯಿಂದಿರಿಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಏತಕೆ ಮರುಳಾದೆಯೋ ಆ ಹೆಣ್ಣಿನಿ-ನ್ನೇತಕೆ ಭ್ರಮಿಸಿದೆಯೋಜಾತಿನಾಯಕಿಯರೊಳ್ಕತೆಯೆನುತಲಿ ಬಿ-ಟ್ಟ ತರುಣೀ ಸುಮ್ಮನೇತಕೆ ಮನಸೋತಿನ್ ಏತಕೆ ಪ ರೂಪಿನೊಳಗೆ ಚಂದವೆ ಕಾಮಶಾಸ್ತ್ರ ಕ-ಲಾಪ ಬಲ್ಲವಳೇತಾ ಪತಿವ್ರತೆ ಪರರೆಲ್ಲಾ ಜಾರೆಯರೆನು-ತೀಪತಿ ಬೊಗಳುವ ಪಾಪಿ ಕುರೂಪನೀಂ 1 ಬಣಗು ಭಿಕಾರಿ ನೀಂ 2 ಬರಲಿದಿರೇಳುವಳೆ ಪದವ ತೊಳೆದುಸೆರಗಿನಿಂದೊರಸುವಳೇತರುಣಿಯರುಗಳ ಮನಸ ಕಂಡವರುಂಟೆದುರುಳೆಯೆಂಬುದನೆಲ್ಲಾ ರಾಮೇಶ ಒಲ್ಲ 3
--------------
ಕೆಳದಿ ವೆಂಕಣ್ಣ ಕವಿ
ಏನ ಹೇಳಲೆನ್ನ ಬುದ್ಧಿಹೀನತೆಯನಿಂದು ಹರಿಯೆ ಶ್ವಾನಕಿಂತ ನೀಚನಾದೆ ಧ್ಯಾನಿಸದೆ ಮರುಳಾದೆ ಪ. ಪಂಚವಿಂಶತ್ವದಲ್ಲಿ ಮಿಂಚುತ್ತಿರುವ ನಿನ್ನ ರೂಪ ಕಿಂಚಿತ್ತಾದರರಿಯದೆ ಕೀಳ್ಹಂಚಿನೊಳಸಂಚ ನಂಬಿ 1 ಮಾಯಾ ಶಕ್ತಿ ಪಾಶಬಂಧದಲ್ಲಿ ಸಿಲುಕಿ ಲೇಶ ಸ್ವಾತಂತ್ರ್ಯವರಿಯದಾಶೆಯೆಂಬ ಕಡಲೊಳಿಳಿದೆ 2 ಗಣನೆಯಿಲ್ಲದೆನ್ನ ಕೆಟ್ಟ ಗುಣಗಳೊಂದನೆಣಿಸದಿಂದು ಮೂರ್ತಿ ದೋರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏನನಾದರೂ ಬರೆಯೋ ಎನ್ನ ಪಣೆಯೊಳಗೆನೀನಿಷ್ಟ ಬರೆಯಬೇಡವೋ ಮೂಢ ವಿಧಿಯೇ ಪ ಬಾಲತನದಲಿ ಬಹಳ ಭಾಗ್ಯ ಸಂಪದಗಳನುಮೇಲೆ ಯೌವನ ಬರಲು ಬಡತನವನುಲೋಲಾಕ್ಷಿಯರಿಗೆ ಮರುಳಾಗಿ ಸಂಚರಿಪುದನುಹಾಲು ಅನ್ನವನಿಕ್ಕಿದವರಿಗೆ ಮುನಿವುದನು1 ಮುಪ್ಪಿನಲಿ ಯೌವನದ ಸ್ತ್ರೀಯ ಸಂಭೋಗವನುತುಪ್ಪವಿಲ್ಲದ ಭೋಜನದ ರುಚಿಯನುಅಪ್ಪುತಿಹ ಮಕ್ಕಳಿಲ್ಲದ ಕುಸಂಸಾರವನುಕಪ್ಪುಗೊರಲನ ನೆನೆಯದೇ ದಿನವ ಕಳೆವುದನು 2 ಪರರೊಡವೆಯನು ತಿಂದ ಶರೀರವನೆ ಪೊರೆವುದನುಪರರ ನಿಂದೆಯ ಮಾಡಿ ಬಾಳುವುದನುವರ ಕೆಳದಿ ರಾಮೇಶ ನಿನ್ನ ಪಾದಾಂಬುಜವಸ್ಮರಿಸಿದಂತನ್ಯಮತದಲ್ಲಿ ಸಂಭವಿಪುದನು 3
--------------
ಕೆಳದಿ ವೆಂಕಣ್ಣ ಕವಿ
ಏನಿದ್ದರೇನಯ್ಯ ಜ್ಞಾನವಿಲ್ಲದಿರೆ ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1 ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ ಪರಿಪರಿಯ ಭೋಗದಿಂ ಮರುಳಾದೆನಲ್ಲ 2 ಬಂದೇ ದಾನವಿರದ ಧನವೇಕೆ ಪೇಳು ತಿಂದುಂಡು ಮಲಗುವಾನರಜನ್ಮ ಹಾಳು3 ಕರ ಚರಣ ಮೊದಲಾದ ಕರಣಂಗಳಂ ಪಡೆದು ಹರಿಪದವ ಪೊಂದುವಾ ಪರಿಯುಂಟೆ ಪೇಳು 4 ಆನಂದ ಸಾಮ್ರಾಜ್ಯ ನಿನಗಹುದು ಕೇಳು 5
--------------
ನಂಜನಗೂಡು ತಿರುಮಲಾಂಬಾ
ಏನು ಕಾರಣ ವೆನ್ನ ಮನೆಗಿಂದು ಬಾರನು | ಮಾನಿನಿತಂದು ತೋರಮ್ಮಾ ರಂಗನ ಪ ದೀನ ವತ್ಸಲನೆಂಬ ನಾನ್ನುಡಿ ಮಾತಿಗೆ | ನಾನೆರೆ ಮರುಳಾದೆನಮ್ಮಾ ರಂಗಗೆ 1 ಇಂದು ಜರಿದು ತನ್ನ| ಹೊಂದಿದೆ ಚರಣ ನೋಡಮ್ಮಾ ರಂಗನೆ 2 ತಾನೆ ದಯಾಂಬುಧಿ ನಾನೆವೆ ಅಪರಾಧಿ | ನ್ಯೂನಾರಿಸುವ - ರೇನಮ್ಮಾ ರಂಗನು 3 ತನ್ನ ಹಂಬಲಿಸುವ ಕಣ್ಣಿಗೆ ಮೈದೋರಿ | ಧನ್ಯಳ ಮಾಡನೇನಮ್ಮಾ ರಂಗನು 4 ಸಾರಥಿ | ಒಂದು ನೆರದಪುಣ್ಯಲೆಮ್ಮಾ ರಂಗನು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು
ಏನು ಮಾಡಿದರೇನು ನಾನಾ ಸಾಧನೆಗಳನು | ಜ್ಞಾನಿಗಳ ಕೂಡದನಕಾ ಮರುಳೇ ಪ ಸಕಲ ಸಾಮಗ್ರಿಯನು ತಂದಿರಲೇನು ಪಾ | ಕಕೆ ವಹ್ನಿ ಇಲ್ಲದನಕಾ ಮರುಳಾ 1 ಪ್ರಕಟವಾಗಿರಲು ನಯನಾದಿಂದ್ರಿಯಗಳಿಗೆ ಐಂ | ದ್ರಿಕ ಬೆಳಗವಿಲ್ಲದನಕಾ ಮರುಳೇ 2 ಹಸನ ಭೂಮಿಯ ಮಾಡಿ ಬೀಜ ಉಡಿಗಟ್ಟಿರಲು | ವಸೆದು ಮಳೆಯಾಗದನಕಾ ಮರುಳೇ 3 ಪ್ರಕಟಿಸಿದ ಅನ್ನ ಭಕ್ಷದಿ ಶಾಖಗಳಿರಲು | ಯಶವಾಜ್ಯ ಬಡಿಸದನಕಾ ಮರುಳೇ 4 ತುಂಬಿ ಕುಳಿತೇನು ದೊಡ್ಡವರೆಲ್ಲಾ ನಾವಿಯೊಳು | ಅಂಬಿಗನು ಬಾರದನಕಾ ಮರುಳೇ 5 ನಂಬಿ ಗುರು ಮಹಿಪತಿಸುತಸ್ವಾಮಿ ಶ್ರೀಚರಣ | ದಿಂಬವನು ಪಡೆಯದನಕಾ ಮರುಳೇ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು