ಒಟ್ಟು 30 ಕಡೆಗಳಲ್ಲಿ , 18 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಮಾನವನೆ ನೀ ಮರುಗದಿರೈ ಪ ನಾನು ನನ್ನದೆಂಬಭಿಮಾನದಲಿ ಅ.ಪ ಹೊಟ್ಟೆಗೋಸುಗ ಪರರಿಷ್ಟಾನು ಸಾರದಿ ಕೆಟ್ಟ ನುಡಿಗಳನು ನುಡಿಯುತಲಿ 1 ಸಾವುತಪ್ಪದೆ ಮುಂದೆ ಭಾವಿಸಿ ನೋಡದೆ ಜೀವನಕ್ಕಿಲ್ಲದೆ ನಿರ್ಜೀವಿ ನಾನೆಂದು 2 ಓಲಗ ನಷ್ಟವಾಗೋದಲ್ಲದೆ ಲಾಭವುಂಟೇನೋ3 ದುರುಳರ ಬೇಡುವರೆ ಕರೆಕರೆ ಯಾಕೆ 4 ಹಿರಿಯರು ಪೇಳಿದ ಪರಮಬೋಧೆಯಿಂದಾ ಗುರುರಾಮವಿಠ್ಠಲನ ಚರಣವ ನಂಬಿದೆ 5
--------------
ಗುರುರಾಮವಿಠಲ
ಮಾವಿನಕೆರೆ 6 ಮಾಧವನಿವನೋ ಉಮಾಧವನಿವನೋ ಮಧುಸೂದನನೋ ಗಂಗಾಧರನೋ ಪ ವೇದವನುಲಿದನೋ ನಾದಕೆ ಒಲಿದನೋ ಮೇದಿನಿಗೈದಿ ಮಾಂಗಿರಿಯ ಸೇರಿದನು ಅ.ಪ ಹಿರಿಯ ಕಲ್ಲ ಗುಡಾರದೊಳಿರುವ ಒರಳಲಿ ನಲಿವ ಹರನವೊಲೆಸೆವ ಕರಗಳಿಂದೆಳೆದರೂ ಬಾರನೆಂದೆನುವ ಸ್ಮರಿಸುವ ಮಾನವನೆದುರಲಿ ನಿಲುವ 1 ಎರೆದ ಹಾಲಾದರೂ ಸುರಿದ ನೀರಾದರೂ ದೊರಕದು ಕರಕೆ ತೊಟ್ಟೊಂದಾದರೂ ಹರಕೆ ಹೊತ್ತವರು ನೆರೆನಮಿಸುವರು ಹರುಷದಿ ಕುಣಿದು ಕೊಂಡಾಡುತಿಹರು 2 ಸಾವಿರ ನಾಮನು ದೇವನೀನೊಬ್ಬನು ಭಾವದೊಳಿರುವನು ಕಾವವನು ನೋವ ಬಿಡಿಸುವನು ಪಾವನಚರಣನು ಭಾವುಕಗೊಲಿವನು ಗಿರಿಯ ಮೇಲಿಹನು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ವಿಕ್ರಮಾ - ಪಾಹಿ - ತ್ರಿವಿಕ್ರಮಾ ಪ ವಿಕ್ರಮ ನಮಿಪೆ ನಾ ನಿನ್ನ | ನೀನುಚಕ್ರವ ಪಿಡಿದೊಂದು ದಿನ್ನ | ಆಹನಕ್ರನುದ್ದರಿಸಿದ | ಪ್ರಕ್ರಯ ನಾನರಿತುರುಕ್ರಮ ಶರಣೆಂಬೆ | ವಕ್ರ ಮನವ ಕಳೆಅ.ಪ. ಪುಟ್ಟ ರೂಪವನೆ ತಾಳುತ್ತಾ | ಬಲಿಯಇಷ್ಟಿಯೊಳವನ ಬೇಡುತ್ತಾ | ದಾನಕೊಟ್ಟೆನೆಂದವನು ಪೇಳುತ್ತಾ | ಬರೆಶಿಷ್ಟ ಶುಕ್ರನು ಬೇಡೆನ್ನುತ್ತಾ | ಆಹಕಟ್ಟಲು ಗಿಂಡೀಯ | ದಿಟ್ಟ ಶುಕ್ರನ ಕಣ್ಣಪುಟ್ಟ ದರ್ಭೆಲಿ ಚುಚ್ಚಿ ಮೆಟ್ಟಿ ನಿಂತೆಯೊ ಬಲಿಯ 1 ಥೋರ ರೂಪದೊಳು ಅಂಬರಾ | ಹಬ್ಬಿಧಾರುಣಿ ಅಳೆದ ಗಂಭೀರ | ಮತ್ತೆಮೂರನೇದಕೆ ಬಲಿಯ ಶಿರ | ವತ್ತಿಭಾರಿ ಪಾತಾಳಕ್ಕೆ ಧೀರಾ | ಆಹಪೌರೋಚನಿಯನ್ವತ್ತಿ | ದ್ವಾರವ ಕಾಯುತ್ತತೋರಿದೆ ಕರುಣವ | ಭೋರಿ ದೈವರ ಗಂಡ3 ಪಾದ ತೊಳೆದೂ | ಬಿಡೆಬ್ರಹ್ಮಾಂಡದೊಳು ತಾನು ಬಂದೂ | ಆಹಸುಮ್ಮನಸರ ಲೋಕ | ಕ್ರಮ್ಮಿಸುತಲಿ ಬರುವಅಮ್ಮಹ ಗಂಗೆ ಪೆ | ತ್ತೆಮ್ಮನುದ್ದರಿಸಿದಾ 3 ಬಾದರಾಯಣ ಬಳಿ ಭವ್ಯಾ | ನಾಗಿಮೋದ ತೀರ್ಥರಿಂದ ಸೇವ್ಯಾ | ನೀನುವಾದಿರಾಜರಿಗೊಲಿದು ತ್ವರ್ಯಾ | ಬಂದುಸ್ವಾದಿ ಪುರದಿ ನಿಂದು ಸ್ತವ್ಯಾ | ಆಹಮೋದದಿ ನೆಲೆಸುತ್ತ | ಕಾದುಕೊಂಡಿಹೆ ನಿನ್ನಪಾದವ ಪೊಗಳೂವ | ಸಾದು ಸಂತತಿಯನ್ನ 4 ಹೀನ ಮಾನವನೆಂದು ಎನ್ನಾ | ಉದಾಸೀನ ಮಾಡುವಿಯೇನೊ ಘನ್ನ | ಕೇಳೊನೀನು ತ್ರೈಭುವದಿ ಪಾವನ್ನಾ | ನೆಂದುಗಾನದೋಳ್ ತವ ಪಾದವನ್ನಾ | ಆಹಆಗಮಿಸುತ ಬಂದ | ಮಾನವನೆನ್ನನುಧೀನನೆಂದೆನಿಸಾರೆ | ಜ್ಞಾನವ ನೀಡೆನಗೇ 5 ಪ್ರತಿ ಪ್ರತಿ ವತ್ಸರದೊಳು | ಮಾಸಹತ್ತೆರಡು ಪೂರ್ಣಿಮದೊಳು | ತವರಥದೊತ್ಸವ ಕಾರ್ಯಗಳೂ | ಬಲುಹಿತದಿ ತವ ದಾಸರುಗಳೂ | ಆಹಅತಿ ವೈಭವದಿಂದ | ವಿತರಣೆಯಿಂದಲಿಪ್ರತಿಯಿಲ್ಲವೆಂದೆನ್ನೆ | ವಿಸ್ತರಿಸುವರಯ್ಯ 6 ಪರಿ ಪೊಗಳುತ ಚೆನ್ನಾ | ಆಹಗುರು ಗೋವಿಂದ ವಿಠ್ಠಲ | ಪರಮ ಪುರುಷನೆಂದಾನರ್ತನಗೈಯುತ | ನರರೇನು ಧನ್ಯರೋ7
--------------
ಗುರುಗೋವಿಂದವಿಠಲರು
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಸಾಕು ಇಹಕೆನ್ನ ನೂಕದಿರು ತಂದೆ ಪರಾಕು ಮಾಡದೆ ಸಾಕು ದಯದಿಂದನೇಕ ಮಹಿಮನೆ ಏಕಾಮೇವಾದ್ವಿತೀಯ ಪ ಮಂಗಳಾಂಗ ಮಾತಂಗವರದ ವಿ- ಹಂಗಗಮನ ಭುಜಂಗಶಯನ ತು- ರಂಗವದನ ಶುಭಾಂಗ ರಿಪುಕುಲ- ಭಂಗ ಅಸಿತಾಂಗ ಅ.ಪ. ಶೃಂಗಾರಾಂಬುಧಿ ರಂಗ ನಿನ್ನಯ ಅಂಗಸಂಗಕ್ಕೆ ಅಂಗೀಕರಿಸಿದ ಸಂಗಿತರ ಚರಣಂಗಳಬ್ಜಕೆ ಭೃಂಗನಪ್ಪೆನೆಂತೊ 1 ಮಾನವಾವುದು ಸುಮ್ಮನಿರೆ ಪವ- ಮಾನವಂದಿತ ನಿನ್ನ ಪೋಲ್ವ ಸ- ಮಾನರಾರನು ಕಾಣೆ ಎನ್ನಭಿ- ಮಾನವಾಧೀಶ ಮಾನವಮಾನ- ಮಾನದಿಂದ ಕ್ರಮಾನುಸಾರನು ಮಾನಗೊಳಿಸದೆ ಮಾನವಿತ್ತು ದು- ಮ್ಮಾನವನೆ ಬಿಡಿಸೊ 2 ಬಲ್ಲೆ ನಿನ್ನಯ ಎಲ್ಲ ಪರಿಯಲಿ ಬಲ್ಲಿದರಿಗತಿ ಬಲ್ಲಿದನು ಸಿರಿ- ವಲ್ಲಭಾ ನೀನಲ್ಲದಿಲ್ಲೆಂದು ಎಲ್ಲ ತುತಿಸುತಿದೆ ಸೊಲ್ಲುವೊಂದನು ನಿಲ್ಲುತಲಿ ಕೇಳು ಎಲ್ಲು ಬಯಸದೆ ಇಲ್ಲಿಗೇ ಬಂದೆ ಕೊಲ್ಲು ಕಾಯ್ಸಿರಿ ವಿಜಯವಿಠ್ಠಲ ಬಲ್ಲದನು ಮಾಡೋ3
--------------
ವಿಜಯದಾಸ
ಸಾಲವ ಕೊಡದಿದ್ದರೆ ನಿನಗೆ | ನಾಲಿಗೆಂಬೊದು ಇಲ್ಲೊ ಉತ್ತರಾಡುವುದಕ್ಕೆ ಪ ಏಸು ದಿವಸದಿಂದ ಎಲ್ಲರ ಸೇವಿಸಿ | ಕಾಸು ಕಾಸಿಗೆ ನಾನು ಕೂಡಹಾಕಿ | ಲೇಸು ಉಳ್ಳವನೆಂದು ಕೊಟ್ಟರೆ ನೀ ನಿಂತು | ಮೋಸಗೊಳಿಸುವರೆ ಕಾಣಿಸಿಕೊಳ್ಳಿದಲೆ 1 ಬಡ್ಡಿ ಏನಾಯಿತೊ ಕೊಟ್ಟ ಗಂಟಿಗೆ ನಿನ | ಗಡ್ಡ ಬೀಳುವೆನೊ ಸಾಲವ ತೀರಿಸೊ | ಖಡ್ಡಿ ಮಾನವನೆಂದು ನೋಡ ಸಲ್ಲಾ ಎನ್ನ | ದೊಡ್ಡವರು ಕಂಡರೆ ಅಡ್ಡಗೈಸದೆ ಬಿಡರು 2 ಗುಣಿಸಿ ನೋಡಿದರೆ ಏನಯ್ಯಾ ಮುತ್ತಯ್ಯಾ ಯಾ ಕೆ ನಿಲ್ಲದೆ ನಿನಗೆ ಸಾಲವಿತ್ತೆ | ಧನವ ಎಣಿಸಲಾಗಿ ನೆಲೆಗಾಣೆಯಿನ್ನು ಸು | ಮ್ಮನೆ ಕೂಗದೆ ನಿಂದು ಋಣವ ತಿದ್ದು ಚಲುವಾ3 ಸಾಲಾ ಬಂದರೆ ಒಳಿತೆ ಇಲ್ಲದಿದ್ದರೆ ಕೇಳು | ಮೇಲೆ ಮೇಲೆ ಬಿದ್ದು ನಿನ್ನ | ಕೀಲಿಸಿ ಬಿಡದಲೆ ತೊಲಗ ಬಿಡೆ ದೇವಾ 4 ಬತ್ತಲಿದ್ದವರಿಗೆ ಭಯವಿಲ್ಲವೆಂಬೊ ಗಾದಿಗೆ | ನೆತ್ತಿಯೆತ್ತಿ ಮೋರೆ ತೋರ ಬೇಕೊ | ಹತ್ತರ ಇದ್ದು ತೀರಿಸಬೇಕೊ ಸರ್ವೇಶಾ | ಸುತ್ತಿ ಭಳಿರೆ ಸಂದೇಹ ಬೇಡ ನೀ ಬರೆದ ಬರಹ ನೋಡು 5 ಬಡತನ ಬಂದರಾಗ ನಾ ನಿನಗೆ ಬಾಯಿ | ಬಿಡುವೆನೆ ದೈನ್ಯದಲಿ ಭಾಗ್ಯವಂತಾ | ತಡ ಮಾಡಲಾಗದು ಕೊಡು ಎನ್ನ ಒಡಿವೆ | ಪೊಡವಿಲಿ ಪರರಿಗೆ ಸಲ್ಲದೊ ಸರ್ವೇಶಾ 6 ಗತಿಯಿಲ್ಲ ನಾನಪ್ರಮಾಣಿಕ ನಾನಹುದೆಂದು | ಸಂತತ ಸಂತರ ಮುಂದೆ ನುಡಿದು ಬಿಡುವೆ | ಪತಿತ ಪಾವನ ನಮ್ಮ ವಿಜಯವಿಠ್ಠಲ ನಿನ್ನ | ನುತಿಸಿಕೊಳ್ಳುತ್ತ ಕಾಲಕ್ರಮಣ ಮಾಡುವೆ 7
--------------
ವಿಜಯದಾಸ
ಸುಳಾದಿ ಕೌಸ್ತುಭ ಫಾಲ ಸಿಂಗಾಡಿಯಂತಿಪ್ಪ ಪುರ್ಬುಕೂರ್ಮನಂದದಿಗಲ್ಲ ಚುಬುಕ ಚುಬುಕಾಗ್ರದಿಂಸಿರಿಯರಸ ಹಯವದನ ಶೇಷಗಿರಿ ಅರಸನ ಕಿರೀಟದÀಪರಿಪರಿಯ ಸೊಬಗ ನಾ ಕಂಡು ಕೃತಾರ್ಥನಾದೆ ನಾ 1 ಮಠ್ಯತಾಳ ಇಂದಿನದಿನ ಸುದಿನ ಗೋವಿಂದನ ಕಂಡ ಕಾರಣಹಿಂದಿನ ಪಾಪವೃಂದವು ಬೆಂದುಹೋಯಿತು ಎನಗೆಮುಂದಿನ ಮುಕುತಿ ದೊರಕಿತುತಂದೆ ಹಯವದನನೊಲವಿಂದ 2 ತ್ರಿಪುಟತಾಳ ಪಾದ ಪದುಮದ ನೆನಹೊಂದಿದ್ದರೆ ಸಾಕು 3 ರೂಪಕತಾಳ ಗುರು ಭಕುತಿಯಿರಬೇಕು ಹಿರಿಯರ ಕರುಣವು ಬೇಕುಹರಿಕಥೆಗಳ ನಿತ್ಯದಲಿ ಕೇಳುತಿರಬೇಕುವಿರಕುತಿ ಬೇಕು ವಿಷ್ಣುವಿನಾರಾಧನೆ ಬೇಕುವರಮಂತ್ರ ಜಪಬೇಕು ತಪಬೇಕು ಪರಗತಿಗೆಪರಿಪರಿಯ ವ್ರತಬೇಕು ಸಿರಿಪತಿ ಹಯವದನನಪರಮಾನುಗ್ರಹ ಬೇಕು ವಿಷಯನಿಗ್ರಹಬೇಕು 4 ಝಂಪೆತಾಳ ಹರಿಸಗುಣ ಸಾಕಾರ ಸಕಲಸುರರೊಡೆಯ ನಿ-ರ್ಜರರೆಲ್ಲ ಹರಿಯ ಕಿಂಕರರೆಂದರಿಯಬೇಕುಮರಣಜನನ ದೋಷಗಳಿಗತಿ ದೂರತರನೆನಿಪಸ್ಮರಣೆ ಸಂತತಬೇಕು ದುರಾಚಾರ ಬಿಡಬೇಕುಸಿರಿ ಹಯವದನ ಶೇಷಗಿರಿ ಅರಸನಸ್ಮರಣೆಯಿದ್ದವನು ಸಂಸಾರ ಭಯವನುತ್ತರಿಸುವ 5 ಆದಿತಾಳ ಶ್ರೀನಾಥ ಪ್ರಭುವೆತ್ತ ಹೀನಯೋನಿಗಳೊಳುನಾನಾದುಃಖಗಳುಂಬ ಹೀನ ಮಾನವನೆತ್ತಭಾನುಮಂಡಲವೆತ್ತ ಶ್ವಾನನುಬ್ಬರವೆತ್ತಮಾನವ ಹರಿ ನಾನೆಂಬುದ ನೆನೆಯದಿರುದಾನವಕುಲವೈರಿ ಹಯವದನ ವೆಂಕಟಶ್ರೀನಿವಾಸನ ದಾಸರ ದಾಸನೆನಿಸಿಕೊ 6 ಏಕತಾಳ ಕೈವಲ್ಯವನೀವ ನಮ್ಮಶ್ರೀವಲ್ಲಭನ ಕೈಯಿಂದನೀವೆಲ್ಲ ಕ್ಷುದ್ರವ ಬೇಡಿಗಾವಿಲನ ಪೋಲದಿರಿಸಾವಿಲ್ಲದ ಮುಕುತಿಪಥವಬೇಡಿಕೊಳ್ಳಿರೊನೋವಿಲ್ಲದಂತೆ ಸುಖಿಸಬಲ್ಲಕೋವಿದರೆಲ್ಲರುಪೂವಿಲ್ಲನಯ್ಯ ವೆಂಕಟಪತಿ ಹ-ಯವದನನ್ನ ಪ-ದವಲ್ಲದನ್ಯತ್ರ ದಾವಲ್ಲಿ ಭಯ ತಪ್ಪದು 7 ಅಟ್ಟತಾಳ ಗಾತ್ರವ ಬಳಲಿಸಿ ಸ್ತೋತ್ರವ ಪಾಡುತ್ತಯಾತ್ರೆಯ ಮಾಡಿ ವೆಂಕಟೇಶನ ಮೂರ್ತಿಯನೇತ್ರದಿ ನೋಡಿ ತಮ್ಮಿಷ್ಟವ ಪಡೆವ ಸ-ದ್ಭಕ್ತರ ಕಂಡುನಿನ್ನ ಮನದ ಭ್ರಮೆಯ ಬಿಡುದೈತ್ಯ ಪೌಂಡ್ರಕಮತವ ನೆಚ್ಚಿ ಕೆಡಬೇಡಚಿತ್ರಚರಿತ್ರ ಹಯವದನನೊಲಿಸಿಕೊ 8 ದಿಲ್ಲಿಯರಾಯನ ಕಂಡು ಪುಲ್ಲಿಗೆಯ ಬೇಡುವರೆತಲ್ಲೆಯೂರಿ ತಪಸು ಇದ್ದಲ್ಲಿ ಸಾಧಿಸಿಕೊಳ್ಳಿರೊಕ್ಷುಲ್ಲಕರೆಂಜಲನುಂಡು ಬಾಳ್ವರ ನೋಡು ಲಕ್ಷುಮಿವಲ್ಲಭನಲ್ಲದೆ ಹೀನಫಲದಾಸೆ ಸಲ್ಲದಯ್ಯಚೆಲ್ವ ಹಯವದನ ತಿಮ್ಮನಲ್ಲದೆ ಕೈವಲ್ಯಕೆಹಲ್ಲು ಹಂಚಿಗೆ ಬಾಯಿತೆರೆದಂತೆ ಅಲ್ಲಲ್ಲಿಗೆ ಪೋಗದಿರಿ 9 ರೂಪಕತಾಳ ಹನುಮಂತನ ನೋಡು ತನುಮನಧನಂಗಳಶ್ರೀನರಸಿಂಹಗರ್ಪಿಸಿದಪ್ರಹ್ಲಾದನ ನೋಡುಅನುದಿನ ವನದಲ್ಲಿ ತಪವ ಮಾಡುವಮುನಿಜನರ ಕಂಡು ನಿನ್ನ ಮನದ ಭ್ರಮೆಯ ಬಿಡುಘನಮಹಿಮ ವೆಂಕಟಪತಿ ಹಯವದನನ ಭೃತ್ಯರ ಪರಿಚಾರಕರ ಭೃತ್ಯನೆನಿಸಿಕೊ 10 ಜತೆÀ ತಿರುಮಲೆರಾಯ ತ್ರಿವಿಕ್ರಮಮೂರುತಿಸಿರಿ ಹಯವದನನ [ಚರಣವೆ ಗತಿಯೆನ್ನು]
--------------
ವಾದಿರಾಜ
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು
ಹರಿ ಎಂಬ ನಾಮ ಎರಡಕ್ಷರವ ದುರಿತ ಕಾನನ ಛೇದ ಪ ವೇದರಾಶೀ ಎಂಬ ಭೂಸುರನು ಯಮಪುರದ ಹಾದಿಯಲಿ ಪೋಗುತಿರೆ ಎಡಬಲದಲಿ ಬಾಧೆ ಬಡುವ ಪಾಪಿ ಜೀವರಾಶಿಯ ನೋಡಿ ಮಾಧವಾ ಹರಿ ಎನಲು ಮುಕ್ತರಾದರು ಎಲ್ಲಾ 1 ಮತ್ತೆ ಪುಷ್ಕರನೆಂಬ ಹರಿಭಕ್ತ ಬರಲಾಗಿ ಮೃತ್ಯು ನಡುಗೀ ನಿಂದು ಪೂಜೆ ಮಾಡೀ ಉತ್ತಮಗೆ ಅಲ್ಲಿದ್ದ ನರಕಗಳು ತೋರಿಸೆ ಬತ್ತಿ ಪೋದವು ಹರಿ ಎಂಬ ಶಬ್ದವ ಕೇಳಿ 2 ಕೀರ್ತಿ ಮಾನವನೆಂಬೊ ಭೂಪಾಲ ಯಮಪುರದ ಆರ್ತಿಯನು ಕಳೆದ ಶ್ರೀಹರಿಯ ವೊಲಿಸೀ ಅಂತಕ ಬಂದು ಕಾದೆ ಸ ಮರ್ಥನಾಗದೆ ಪೋದ ಏನೆಂಬೆ ಜಗದೊಳಗೆ3 ಹದಿನಾರು ಸಾವಿರ ತರುಣಿಯರು ಅಸುರನ್ನ ಸದನದಲಿ ಸೆರೆಬಿದ್ದು ಹರಿಯ ತುತಿಸೇ ಮುದದಿಂದ ಹರಿಪೋಗಿ ಖಳನ ಕೊಂದು ಆ ಸುದತಿಯರಿಗೆ ತನ್ನ ಅಂಗಸಂಗವನಿತ್ತ4 ಕಂಡವರ ಮನೆ ಉಂಡು ಚಾಂಡಾಲರ ಕೂಡ ಮಂಡಲದೊಳಗೆ ಪಾತಕನಾದರೂ ಗಂಡುಗಲಿ ವಿಜಯವಿಠ್ಠಲ ಹರೆ ಹರೇ ಎಂದುಕೊಂಡಾಡಿದರೆ ಮುಕುತಿ ಸುರರಿಗಿಂತಲೂ ವೇಗ5
--------------
ವಿಜಯದಾಸ
ಙ್ಞÕನವೊಂದೇ ಸಾಕು ಮುಕ್ತಿಗೆ - ಇ - |ನ್ನೇನು ಬೇಕು ಹುಚ್ಚುಮರುಳು ಮಾನವನೆ ಪ.ಪಿತ ಮಾತೆಸತಿ ಸುತರನಗಲಿರಬೇಡ |ಯತಿಯಾಗಿ ಆರಣ್ಯ ಚರಿಸಲು ಬೇಡ ||ವ್ರತ - ನೇಮವ ಮಾಡಿ ದಣಿಯಲು ಬೇಡ |ಸತಿಯಿಲ್ಲದವಗೆ ಸದ್ಗತಿಯಿಲ್ಲೋ ಮೂಢ 1ಜಪತಪವನೆ ಮಾಡಿ ಸೊರಗಲುಬೇಡ |ಕಪಿಯಂತೆ ಅಡಿಗಡಿಗೆ ಹಾರಲುಬೇಡ ||(ಉಪವಾಸಪಾಶಕ್ಕೆ) ಸಿಕ್ಕಲುಬೇಡ |ಚಪಲತನದಲೇನು ಫಲವಿಲ್ಲೋ ಮೂಢ 2ಜಾಗರದಲಿ ನಿದ್ರೆ ಕೆಡಿಸಲು ಬೇಡ |ಓಗರವನು ಬಿಟ್ಟು ಒಣಗಲು ಬೇಡ ||ಸೋಗುಮಾಡಿ ಹೊತ್ತು ಕಳಿಯಲು ಬೇಡ |ಗೊಗೆ ಹಾಗೆ ಕಣ್ಣು ತಿರುಗಿಸಬೇಡ 3ಹೊನ್ನು - ಹೆಣ್ಣು - ಮಣ್ಣು ಜರೆದಿರಬೇಡ |ಅನ್ನ - ವಸ್ತ್ರಗಳನ್ನು ತೊರೆದಿರಬೇಡ ||ಬಣ್ಣದ ದೇಹವ ನೆಚ್ಚಲುಬೇಡ |ತಣ್ಣೀರೊಳಗೆ ಮುಳುಗಿ ನಡುಗಲು ಬೇಡ 4ಮಹಾವಿಷ್ಣುಮೂರ್ತಿಯ ಮರೆತಿರಬೇಡ |ಸಾಹಸದಿಂದಲಿ ಶ್ರಮ ಪಡಬೇಡ ||ಕುಹಕ ಬುದ್ಧಿಯಲಿ ಕುಣಿದಾಡಬೇಡ |ಮಹಿಮ ಪುರಂದರವಿಠಲನ ಮರೆಯದಿರೊ ಮೂಢ 5
--------------
ಪುರಂದರದಾಸರು