ಒಟ್ಟು 1938 ಕಡೆಗಳಲ್ಲಿ , 107 ದಾಸರು , 1583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡಿಕೊಂಬೆನೆ ವರವ ನಾ ನಿನ್ನ ಮಾಲಕ್ಷ್ಮಿತಾಯಿ ಮಾಡಿ ದಯವನು ನೋಡೆ ನೀ ಎನ್ನ ಪಾಡಿ ಕೊಂಡಾಡುವೆನು ಪಂಚಗಂಗಾ ತೀರದಲಿ ಕರವೀರ ವಾಸಿಯೆ ಪ ಒದೆಯುತಿರಲು ಆ ಪಾದದಿ ಬಂದು ಪದುಮಾಕ್ಷ ಮುನಿಯ ಮುದದಿ ಮನ್ನಿಸಿ ಕಳುಹುತಿರೆ ಕಂಡು ಒದಗಿ ಬಂದ ಕೋಪದಿಂದ ಯದುನಾಥನ ಎದೆಯಿಳಿದು ಬೇಗನೆ ಕದನ ಮಾಡುತ ಕೊಲ್ಲಾಪುರವನು ಸದನ ಮಾಡಿದೆ ಸುಂದರಾಂಗಿಯೆ 1 ಬಿಟ್ಟು ನಿನ್ನ ವೈಕುಂಠದಿ ಹರಿಯು ಇಳಿದು ಅಂಜನಾ ಬೆಟ್ಟದಲಿ ನಿಂತಿದ್ದನೆ ಬಂದು ಪಟ್ಟದರಸಿಯು ನೀನು ಜನಕನ ಪುತ್ರಿಯಾದ ಕಾಲದಲಿ ಕೊಟ್ಟ ವಚನವ ನಡೆಸಿ ಪತಿಗೆ ನೀ ಪತ್ನಿಮಾಡಿದೆ ಪದ್ಮಾವತಿಯ 2 ರಮ್ಯವಾದ ರಜತ ಹೇಮಗಳು ಗುಡಿಗೋಪುರಗಳು ನಿನ್ನಶಿರ ಶೃಂಗಾರಾಭರಣಗಳು ಅಮ್ಮ ತ್ರಿಜಗದಂಬಾ ನಿನ್ನ ಮುಖ ಒಮ್ಮೆ ನೋಡಲು ಧನ್ಯರಾಗೋರು ಬ್ರಹ್ಮನಪಿತನರಸಿ ಎನಗೆ ನೀ ರಮ್ಮೆಪತಿಪಾದಾಂಘ್ರಿ ತೋರಿಸೆ 3 ಪಕ್ಷಿವಾಹನನ್ವಕ್ಷಸ್ಥಳದಲ್ಲಿ ಆವಾಸವಾಗಿ ಲಕ್ಷ್ಮಿ ನೀ ಅಧ್ಯಕ್ಷಳಾಗಿದ್ದು ಇಕ್ಷುಚಾಪನ ಜನನಿ ಕರವೀರ ಕ್ಷೇತ್ರದಲಿ ಪ್ರತ್ಯಕ್ಷಳಾಗಿ ಮೋಕ್ಷಾಪೇಕ್ಷಿಗಳಾದ ಜನರಿಗೆ ರಕ್ಷಿಸಿ ವರಗಳ ಕೊಡುವ ಮಾತೆಯೆ4 ನೇಮದಿಂದಲಿ ನಮಿಸುವೆನು ನಿನಗೆ ಮಾಲಕ್ಷ್ಮಿತಾಯಿ ಪ್ರೇಮದಿಂದಲಿ ಪಾಲಿಸಿ ನೀನು ಶ್ಯಾಮವರ್ಣನ ದಿವ್ಯ ಸಾಸಿರ ನಾಮ ನಾಲಿಗೆಲಿರಲು ನಿಲಿಸಿ ಭೂಮಿಗೊಡೆಯ ಭೀಮೇಶಕೃಷ್ಣನ ಧಾಮದ ದಾರಿಗಳ ತೋರಿಸೆ 5
--------------
ಹರಪನಹಳ್ಳಿಭೀಮವ್ವ
ಭಜ ಭಜ ಮಾನಸ ಗರುಡತುರಂಗಂ ಅಜ ಸುರಸೇವಿತ ಪಾಂಡುರಂಗಂ ಪ ಗಜರಾಜಾನತ ಮೋಹನರಂಗಂ ವಿಜಯಧ್ವಜ ಶ್ರೀಪಾವನರಂಗಂ ಅ.ಪ ಗಿರಿಧರ ಮುರಹರ ಭೂವರ ರಂಗಂ ನರಕೇಸರಿ ಮುಖರಾಜಿತ ರಂಗಂ ವರಶುದ್ಧಾಚ್ಚುತ ಸುರುಚಿರ ರಂಗಂ ಪರಶಿವ ದಾನವ ವಿನಮಿತ ರಂಗಂ 1 ಸನಕ ಸನಂದನ ಮುನಿನುತ ರಂಗಂ ಹನುಮ ವಿಭೀಷಣ ಸನ್ನುತ ರಂಗಂ ಘನಮಣಿ ಮೌಕ್ತಿಕ ಶೋಭಿತ ರಂಗಂ ಜನಕ ಧರಾವಿವ ಪೂಜಿತ ರಂಗಂ 2 ಮಂಗಳದಾಯಕ ಶುಭಕರ ರಂಗಂ ಸಂಗರ ಧೀರ ಸುಧಾಕರ ರಂಗಂ ಗಂಗಾಜನಕ ಕೃಪಾಂಬುಧಿ ರಂಗಂ ಅಂಗಜ ಜನಕ ಶ್ರೀ ಮಾಂಗಿರಿ ರಂಗಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸಿ ಬೇಡುವೆ ನಾ ವರಗಳ ಇಂದಿರೆ ಮುಡಿದಂಥ ಕುಂದ ಮಂದಾರ ನಂದಿವರ್ಧನ ನಾಗಸಂಪಿಗೆ ಪ ಕುಸುಮ ಮಲ್ಲಿಗೆದಂಡೆ ಎಸೆವೊ ಕ್ಯಾದಿಗೆ ಪಾರಿಜಾತದ ವರಗಳ1 ಕಟ್ಟಿದ್ದ ಮಾಂಗಲ್ಯ ಕುಂಕುಮ ಗಾಜಿನ ಬಳೆ ಮುತ್ತೈದೆತನ ಸಂಪತ್ತು ಸಂತಾನಕೆ2 ಕಮಲಾಕಾಂತ ಭೀಮೇಶಕೃಷ್ಣನ್ನ ರಾಣಿ ಮುಡಿದ ಕಮಲ ಮಲ್ಲಿಗೆ ಕಾಮಿತಾರ್ಥದ ವರಗಳ 3
--------------
ಹರಪನಹಳ್ಳಿಭೀಮವ್ವ
ಶರಣೆಂಬೆ ನಾ ಶರ್ವಾಣಿ ವರನ | ಸಿರಿಪತಿ ಶಾಙ್ರ್ಗಧರನ ವರಸಿಂಧು ನಗರದೊಳು |ಸ್ಥಿರ ಭೋಗಗೊಂಬ ಸಂಗಮನ ಪ ಬಾಲೇಂದು ಮುಡಿದ ಭಸಿತಾಂಗ | ಕಾಳಿಗರ್ಧಾಂಗಾ |ಪಾಲಿಸಿ ಕೊಡುವರೆ ದೊರೆಯ ಪೇಳಲಿಕಿನ್ನಾರನೈದಾರೆ |ಭಾಲಾಕ್ಷನ ಲೀಲಾ ವಿಲಾಸ ಭೋಳಾ ದೇವೇಶ | ಕಾಲಿ ಗೆರಗಿ ಬ್ರಹ್ಮಾದಿಕರು ಕಾಲಾಂತಕನ ವರ ಪಡೆವರು |ನೀಲಕಂಧರನ ನಿಗಮೋದ್ಧಾರನ ಸ್ಥೂಲ ಶರೀರನ ಸುಖಸಂಚಾರನ ಶೀಲಕ ದೂರನ | ಶಾಂತಾಕಾರನ |ಮಾಲಾಧರನ ಮಹಾ ಗುರುಹರನ1 ಕಳೇವರ ತಾಪ ಪಾವಕ ನೇತ್ರನ ಸುರಮುನಿ ಸ್ತೋತ್ರನ ಸುಂದರ ಗಾತ್ರನ ನರಹರಿ ಮಿತ್ರನಹಿಗಳ ಸೂತ್ರನ ಶಿರಕರ ಪಾತ್ರನ ಶಿವಸ್ವತಂತ್ರನ 2 ಅಮಿತ ಭಕ್ತರು ಇಳೆಯೋಳ್ ಇಹರು ನಮಿಸಲು ಸಲಹಿಕಾವನು |ಅಮರರ ಹೊರೆವನ ಅಧಿಕ ಪ್ರಭಾವನ ತಿಮಿರವ ಕಳೆವನ ತೀರದಲಿವನ ಹಿಮಸುತೆ ಜೀವನ ಹಿಡಿದಿಹ ತ್ರಿಭುವನನ | ಶ್ರಮಗಳನಳಿವನ ಶಂಕರ ಭೀಮಾ ಶಂಕರನ 3
--------------
ಭೀಮಾಶಂಕರ
ಶಾರದಾಂಬ ದಯ ಹರುಷದಿ ಶಾರದಾಂಬ ಪ ಕಮಲ ಭವನ ರಾಣಿ ಶಾರದಾಂಬ ಕರುಣದಿ ಸಲಹೆನ್ನ ಕಾಮಿತ ಫಲದಾಯಕಿ ಶಾರದಾಂಬ 1 ಸುರಮುನಿವಂದಿತೆ ಸಕಲ ಜಗನ್ಮಾತೆ ಶಾರದಾಂಬ ಮೂರ್ತಿ ಕೀರ್ತಿ ಶಾರದಾಂಬ 2 ಸೃಷ್ಟಿಗಧಿಕವಾದ ಶೃಂಗೇರಿ ಪುರವಾಸಿ ಶಾರದಾಂಬ ಕೃಪೆಮಾಡು ಶಾರದಾಂಬ 3
--------------
ಕವಿ ಪರಮದೇವದಾಸರು
ಶ್ಯಾಮಸುಂದರ ಕಾಮಿತಾರ್ಥದಾ ಪ್ರೇಮದಿ ಬಾಶ್ಯಾಮಸುಂದರಾ ಕಾಮಜನಕನೆ ಪ್ರೇಮದಿಂದಲಿಸೋಮಶೇಖರ ನುತ ಶಾಮಸುಂದರಾ ಪ ಭೂರಿ ಸಭೆಯೊಳು ನೀ ಶ್ಯಾಮಸುಂದರಾ 1 ಸಣ್ಣ ಶಿಶುವು ಬಂದು ವನದಿ ನಿಮ್ಮ ನಾಮ ಸ್ಮರಿಸೆ ಮನದಿಧನ್ಯಬಾಲಕನನ್ನು ಕರುಣದಿ ಮನ್ನಿಸಿದೆಯೋ ನೀಶ್ಯಾಮಸುಂದರಾ 2 ಈ ಶರೀರದೊಳಗೆ ನಿನ್ನ ವಾಸುದೇವನೇ ನೋಡೋಆಶೆಯಿಂದಲಿ ಪೋಷಿಸಿಂದಿರೇಶಾ ಬೇಗನೆ ಬಾಶ್ಯಾಮಸುಂದರಾ 3
--------------
ಇಂದಿರೇಶರು
ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಹೇಮವತಿಯ ತೀರವಾಸನೇ | ನಾರಸಿಂಹಪ್ರೇಮದಿಂದ ಕಾಯೋ ಬೇಗನೇ ಪ ನಾಮಮಾತ್ರ ಸಲಹುತಿರುವ | ಸ್ವಾಮಿ ನಿಮ್ಮ ಕಂಡು ಭಜಿಸೆಕಾಮಿತಾರ್ಥವಿತ್ತು ಪೊರೆವೆ | ಕಾಮ ಜನಕ ಕಮಲನಾಭ ಅ.ಪ. ಭವದೊಳಾನು ಬಳಲಿ ಬಂದೆನೋ | ಭವ್ಯರೂಪಿಹವಣೆ ತಿಳಿಸಿ ಭವವ ಕಳೆಯಲೋಪವನ ಮತದಿ ಉದಿಸಿಹೇನು | ಭುವನ ಧರಿಸಿ ಮೆರೆಯುವಾನರವಿಯ ಕಂಡು ಹಾರಿದವನ | ಪವನರಾಯನ ಕಾಣೆ ನಾನು 1 ತನುವು ಮನವು ಧನದ ಆಶೆಯೂ | ಪೋಗಲಿಲ್ಲಘನ ಸುಜ್ಞಾನ ಭಕ್ತ್ಯಿ ಭಾವವೂಕನಸಿಲಾದರೊಮ್ಮೆ ಎನ್ನ | ಮನಸ್ಸು ನಿಮ್ಮ ಚರಣ ದ್ವಂದ್ವವನಜದಲ್ಲಿ ನೆಲೆಸಲಿಲ್ಲ | ಅನಘ ನೀನೇ ದಯವ ಬೀರೊ 2 ವನಧಿ ಹರಿಯೆ | ಗುರು ಗೋವಿಂದ ವಿಠ್ಠಲಾನೆ 3
--------------
ಗುರುಗೋವಿಂದವಿಠಲರು
(ಅ) ಜಯಜಯತು ಶ್ರೀರಾಮ ಜಯಜಯತು ಘನಶ್ಯಾಮ ಜಯಜಯತು ಮುನಿಪ್ರೇಮ - ರಿಪು ಭೀಮ ಜಯಜಯತು ಸುರಸ್ತೋಮ - ವಿನಮಿತ ಮಂಗಳ ನಾಮ ಜಯತು ಸದ್ಗುಣಧಾಮ - ರಘುರಾಮ 1 ಆನಂದ ಜ್ಞಾನದನೆ - ಆನಂದ ಮಾಸದನೆ ಆನಂದ ಸಿದ್ಧಿದನೆ - ಅನಘನೇ ಆನಂದ ಮಂದಿರನೆ - ಆನಂದ ಚಂದಿರನೆ ಆನಂದ ಸುಂದರನೆ - ಅಘಹಾನೇ 2 ಸುರಾರಿದರ್ಪಹರ - ಪುರಾರಿ ಮಿತ್ರವರ ದರಾರಿ ಅಭಯಕರ-ಸುಕುಮಾರ ಕಾರುಣ್ಯಪಾಂಗವರ-ಲಾವಣ್ಯರೂಪಧರ ವರೇಣ್ಯನಿಕರ - ಸಿರಿಕಾಂತ 3
--------------
ಲಕ್ಷ್ಮೀನಾರಯಣರಾಯರು
(ಪ್ರಮೇಯ ಪ್ರಕರಣ) ಸುವ್ವಿ ಸುವ್ವಿ ಉರಗಾದ್ರಿವಾಸ ಶ್ರೀ ವೆಂಕಟೇಶ ಸುವ್ವಿ ಶ್ರೀ ಸಚ್ಚಿದಾನಂದಾತ್ಮಕಾನೆ ಸುವ್ವಿ ಪ ಮೂಲನಾರಾಯಣ ಮೂಲಪ್ರಕೃತಿಯನ್ನು ಮೂರುಭಾಗಗೈಸಿ ಸೃಷ್ಟಿಮಾಡಿದನೆ ಸುವ್ವಿ ಸೃಷ್ಟಿಯೊಳು ಗುಣವ್ಯಷ್ಟಿಸಮಷ್ಟಿಯಿಂದ ಸೃಷ್ಟಿಸಿದ ಜಗಸಂಸೃಷ್ಟನೆನಿಸಿದಸುವ್ವಿ 1 ಸತ್ವರಜತಮ ಸಂಯುಕ್ತದಿಂದ ಕರ್ಮ ಮುಕ್ತಿ ಪರ್ಯಂತ ಜನ್ಮಕರ್ಮಂಗಳು ಸುವ್ವಿ ಕರ್ಮಂಗಳು ಸವೆದು ಉತ್ಕ್ರಾಂತ ಮಾರ್ಗ ಪಿಡಿದು ತಮ್ಮ ಸ್ವರೂಪ ಕರ್ಮನೆಸಗುವರೋ ಸುವ್ವಿ 2 ಮಹದಹಂಕಾರದಿಂದ ವೈಕಾರಿಕದಿಂದ ವ್ಯಸ್ತ- ರಾದರು ತತ್ವದೇವತೆಗಳು ಸುವ್ವಿ ದೇವತೆಗಳಾದರು ಮೇಲೆ ರಾಜಸಾಹಂಕಾರದಿಂದ ಇಂದ್ರಿಯಾದಿಗಳೆಲ್ಲ ಸೃಷ್ಟಿಯಾದವು ಸುವ್ವಿ 3 ಭೂತಪಂಚಕವು ತನ್ಮಾತ್ರಪಂಚಕಗಳು ತಾಮ- ಸಾಹಂಕಾರಗಳುದಿಸಿದವೆನ್ನು ಸುವ್ವಿ ಉದಿಸಿದಹಂಕಾರತ್ರಯದೊಳು ಬಂದು ಸರ್ವಸೃಷ್ಟಿ ಅದುಭುತವಾದುದು ಅನಿರುದ್ಧನಿಂದ ಸುವ್ವಿ 4 ಎಲ್ಲಜೀವರು ಮುನ್ನಾಸೃಷ್ಟಿಗೆ ಬಾರದಿರೆ ಇನ್ನು ಸುಪ್ತಾವಸ್ಥೆಯಲ್ಲಿ ಸುಮ್ಮನಿರ್ಪರೋ ಸುವ್ವಿ ಸೃಷ್ಟಿಗೆ ತಂದ ಗುಣವೈಷಮ್ಯದಿಂದಲೀ ಸುವ್ವಿ 5 ಭೇದಪಂಚಕವು ನಿತ್ಯತಾರತÀಮ್ಯ ಸತ್ಯ ವಿಧಿ ಮೊದಲು ತೃಣಾಂತ ಜೀವರು ತ್ರಿವಿಧವು ಸುವ್ವಿ ನಿತ್ಯ ತ್ರಿವಿಧಕಾರ್ಯ ಅರಿತು ತ್ರಿವಿಧಸಾಧನದಂತೆ ತ್ರಿವಿಧಗತಿಯು ಸುವ್ವಿ 6 ಜೀವರು ಅನಾದಿಯು ಸಾವು ನೋವುಗಳಿಲ್ಲ ಆ- ವಾವಸ್ಥೆಗಳೆಲ್ಲ ಸ್ಥೂಲ ದೇಹಕೆ ಸುವ್ವಿ ಸ್ಥೂಲದೇಹವ ಧರಿಸಿ ಪೂರ್ವಕರ್ಮದಂತೆ ಸಾಧನದಿಂ- ದಲೆ ಕರ್ಮಕ್ಷಯವಹುದು ಸುವ್ವಿ 7 ವೃದ್ದಿಹ್ರಾಸಗಳಿಲ್ಲ ಶುದ್ದ ಜೀವಸ್ವರೂಪ ವಿಧಿಮೊದಲು ತೃಣಾಂತ ಪರಿಮಿತಿ ಒಂದೆ ಸುವ್ವಿ ಪರಿಮಿತಿ ಒಂದೇ ರೀತಿ ಗುಣಕ್ರಿಯ ವಿವಿಧರೀತಿ ಅ- ದರಂತೆ ಜಡ ಪ್ರಕೃತಿ ಕಾರ್ಯವು ಪರಿಪರಿ ಇಹುದು ಸುವ್ವಿ 8 ಸರ್ವತ್ರ ಹರಿವ್ಯಾಪ್ತನಿರ್ಲಿಪ್ತನು ಸುವ್ವಿ ನಿರ್ಲಿಪ್ತನು ಅನಂತಾನಂತಗುಣಗಣಪೂರ್ಣ ಅವ್ಯಯ ಅಪ್ರಮೇಯ ಅಚ್ಯುತಾನಂತ ಸುವ್ವಿ9 ಅನಂತಾನಂತರೂಪಾನಂತ ಚೇತನ ಜಡದಿ ಅಂತರಾತ್ಮ ತಾ ನಿರಂತರ ನಿಂತಿಹ ಸುವ್ವಿ ನಿಂತು ತದಾಕಾರದಿ ತದ್ಭಿನ್ನ ತನ್ನಾಮದಲಿ ಕಂತುಪಿತನು ತಾ ನಿಂತಿಹನೆನ್ನು ಸುವ್ವಿ 10 ಇಂಥಾಜೀವರಿಗೆ ಲಿಂಗದೇಹ ಅನಾದಿಯಲ್ಲಿದ್ದು ಜ್ಯೋತಿರ್ಮಯವಾಗಿ ಪ್ರಕಾಶಿಸುವುದು ಸುವ್ವಿ ಪ್ರಕಾಶದ ಜೀವಕ್ಕೆ ಗಜ್ಜಗಬೀಜದಂತೆ ತ್ರಿಗುಣಾ ವರ್ಕವು ಲಿಂಗಕ್ಕಾವರ್ಕವು ಸುವ್ವಿ 11 ಗುಣಬದ್ಧನಾದುದರಿಂದ ಗುಣಕಾರ್ಯ ಫಲಗಳಿಂದೆ ಶೀ ತೋಷ್ಣಸುಖದುಃಖಾನುಭವವಾಗುವುದೆನ್ನು ಸುವ್ವಿ ಅನುಭವದಭಿಮಾನ ಸಾಧನದಂತೆ ಜೀವಾ ಜೀವ ಜನುಮಜನುಮಾಂತರದ ವಾಸನವಿಹುದು ಸುವ್ವಿ 12 ಸತ್ವಜೀವರ ಲಿಂಗಕ್ಕೆ ಸತ್ವಾವರಣವೇ ಪ್ರಥಮ ದ್ವಿತೀಯಾವರಣವೆ ರಜ ತೃತೀಯ ತಮವೆನ್ನು ಸುವ್ವಿ ತಮೋ ಆವರಣವೆ ಪ್ರಥಮ ರಜ ಸತ್ವವು ತದುಪರಿ ತ್ರಿವಿಧಾವರ್ಕವು ತಮೋಜೀವರಿಗಿಹುದು ಸುವ್ವಿ 13 ರಜೋ ಜೀವರಿಗೆ ರಜವು ಪ್ರಥಮಾವರಣದಿ ಇಹುದು ತಮಸತ್ವಾವರಣಾನಂತರವಿಹುದು ಸುವ್ವಿ ತಮರಜಸತ್ವಾವರಣತ್ರಯಗಳು ಲಿಂಗಕ್ಕೆ ನಿತ್ಯ ಇರಲು ತ್ರಿವಿಧಬದ್ದರಾಗಿ ಸುತ್ತುತಿಪ್ಪರು ಸುವ್ವಿ 14 ಸತ್ವಾವರ್ಕದಿ ವಿಶ್ವರಜತಮ ತ್ವೆಜಸ ಪ್ರಾಜ್ಞ ನಿತ್ಯದಿ ಜೀವನವಸ್ಥಾ ತೋರಿಸುವರು ಸುವ್ವಿ ತೋರಿಸುವರು ಜೀವರ ಜಾಗ್ರಸ್ವಪ್ನಾ ವಸ್ಥೆಯೊಳು ಶ್ರೀಭೂದುರ್ಗಾ ಲಿಂಗಕಭಿಮಾನಿಗಳುಸುವ್ವಿ 15 ಸತಿಸಹಿತರಾಗಿ ಬ್ರಹ್ಮವಾಯು ಬಿಡದೆ ನಿತ್ಯ ಭಕ್ತಿಯಿಂದ ಹರಿಯಾರಾಧಿಸುವರೋ ಸುವ್ವಿ ನಿತ್ಯಭಕ್ತಿಯಿಂದ ಸ್ತುತಿಯ ಮಾಡಿ ಜಗ- ಕತೃವಿನಾಜ್ಞೆಯಿಂ ತೃಪ್ತರಾಗೋರೋ ಸುವ್ವಿ 16 ಜ್ಞಾನ ಕರ್ಮೇಂದ್ರಿಯ ಭೂತಪಂಚಕಗಳು ಮನಸು ಎಂದು ಇನಿತು ಕೂಡಿ ಷೋಡಶಕಳೆಗಳು ಲಿಂಗಕ್ಕೆ ಸುವ್ವಿ ಷೋಡಶಕಳೆಗಳಿಂದ ಕೂಡಿ ಲಿಂಗವು ಇಹದು ಕಳೆಗಳಲ್ಲಿನ ಭಗವದ್ರೂಪವ ತಿಳಿಯೋ ಸುವ್ವಿ 17 ಮನಸಿಗೆ ಶ್ರವಣಕೆ ಶ್ರೀ ಕೇಶವನಾರಾಯಣ ತ್ವ- ಮಾಧವ ಗೋವಿಂದನೆ ಸುವ್ವಿ ಜಿಹ್ವೆ ಘ್ರಾಣದಿ ವಿಷ್ಣುಮಧುಸೂದನ ತ್ರಿವಿಕ್ರಮನೆನ್ನು ಸುವ್ವಿ 18 ಹಸ್ತ ಪಾದಕ್ಕೆಲ್ಲ ವಾಮನ ಶ್ರೀಧರ ಗುಹ್ಯಕ್ಕೆ ಹೃಷೀಕೇಶ ಮೂರುತಿ ಇಹರೋ ಸುವ್ವಿ ಮೂರುತಿ ಇಹರೋ ಮತ್ತೆ ಗುದದೊಳು ಪದ್ಮನಾಭ ಮುದದಿಂದ ಜ್ಞಾನ ಕರ್ಮೇಂದ್ರಿಯದಲ್ಲಿ ಸುವ್ವಿ 19 ಶಬ್ದದೊಳು ದಾಮೋದರ ಸ್ಪರ್ಶದಿ ಸಂಕರ್ಷಣನು ವಾಸುದೇವ ಮೂರುತಿ ಇಹರೋ ಸುವ್ವಿ ರೂಪಸುಗಂಧಗಳಲಿ ಈರೂಪಗಳಹವೋ ಸುವ್ವಿ 20 ಷೋಡಶ ಕಳೆಗಳಲ್ಲಿ ಅಭಿಮಾನಿಗಳಂತರದಲ್ಲಿ ನೀ ಬಿಡದೆ ನೆನೆಸು ಈ ಭಗವದ್ರೂಪಗಳಲ್ಲಿ ಸುವ್ವಿ ಭಗವದ್ರೂಪಗಳಲಿ ಧೃಡಭಕುತಿಯಿಂದಲಿ ಎಡೆಬಿಡದೆ ನಡೆನುಡಿಗಳಲ್ಲಿ ಸುವ್ವಿ 21 ಆಚ್ಛಾದಿಕವು ಜೀವರಿಗೆ ಎರಡುಂಟು ನಿತ್ಯದಲ್ಲಿ ಜೀವನ ಮರೆಯಮಾಡಿದ ಜೀವಾಚ್ಛಾದಿಕ ಸುವ್ವಿ ಜೀವಾಚ್ಛಾದಿಕ ಇದೆ ಹರಿಚ್ಛಾಬಂದಕಾಲದಿ ಬಿಚ್ಚಿ ಹೋಗುವುದು ನಿಶ್ಚಯ ಕೇಳೋ ಸುವ್ವಿ 22 ಪರಮಾಚ್ಛಾದಿಕವೆಂಬುದು ನಿರುತವು ತಪ್ಪಿದ್ದಲ್ಲ ಹರಿಇಚ್ಛಾ ಇಂಥಾದ್ದೆ ಇಂಥಾದ್ದೆನ್ನು ಸುವ್ವಿ ಇಂತಿದ್ದರು ಹರಿಯು ಒಮ್ಮೆ ಇಚ್ಛೆಮಾಡಿದರೆ ಒಮ್ಮೆ ಒಮ್ಮೆ ತೋರಿದರೆ ಒಮ್ಮೆ ತೋರದಿಹನೋ ಸುವ್ವಿ 23 ಲಿಂಗದೇಹಕ್ಕೆ ತಮ ಮೋಹ ಮಹಮೋಹ ತಾಮಿಶ್ರ ಅಂಧತಾಮಿಶ್ರವೆನ್ನು ಸುವ್ವಿ ತಾಮಿಶ್ರದಿ ಪಂಚ ನರಕಂಗಳಲ್ಲಿರ್ಪ ಕೃದ್ಧೋಲ್ಕಾದಿ ಪಂಚಭಗವದ್ರೂಪವಿಹುದೋ ಸುವ್ವಿ 24 ದೈತ್ಯರಿಗವಕಾಶ ಲಿಂಗದೊಳೆಂದಿಗಿಲ್ಲ ದೈತ್ಯಾರಿಜನಾರ್ದನ ಹರಿ ಅಲ್ಲೆ ಇಹನು ಸುವ್ವಿ ದೈತ್ಯಾರಿ ಜನಾರ್ದನನು ಲಿಂಗವ ರಕ್ಷಿಸುತ್ತ ನಿತ್ಯನಿರ್ಲಿಪ್ತನಾಗಿ ನಿಂತಿಹನೋ ಸುವ್ವಿ 25 ವಿಧಿಮೊದಲು ತೃಣಾದಿ ಜೀವರ ಲಿಂಗದಲಿ ದಗ್ಧಪಟದ ತೆರದಿ ವಿಧಿಗೆ ಲಿಂಗವು ಸುವ್ವಿ ವಿಧಿಗಿಹ ಲಿಂಗದ ಕಾರ್ಯ ಹರಿಯ ಪ್ರೀತ್ಯರ್ಥವು ಲಿಂಗಗುಣದ ಕಾರ್ಯವೆಂದಿಗಿಲ್ಲವೋ ಸುವ್ವಿ 26 ಲಿಂಗದೇಹಕೆ ಮುಂದೆ ಅನಿರುದ್ಧದೇಹವು ಅಂಗಿಯ ತೊಟ್ಟಂತೆ ಸಂಗಮಾದುದು ಸುವ್ವಿ ಅದರಿಂದ ಅನಿರುದ್ಧದೇಹ ಇಹುದು ಸಪ್ತಾವರಣ ಆವರಣಗಳಲ್ಲಿ ವಿವರಣೆ ತಿಳಿಯೋ ಸುವ್ವಿ 27 ಅನಿರುದ್ಧ ಪ್ರದ್ಯುಮ್ನ ಆವರಣಗಳೆರಡು ವಾಸುದೇವ ನಾರಾಯಣ ಸುವ್ವಿ ಸರ್ವತತ್ತ ್ವ ವ್ಯಕ್ತವಾದವು ನೀ ಮತ್ತೆ ತಿಳಿಯೋದು ಸುವ್ವಿ 28 ಮಹತ್ತತ್ವ ತಿಳಿ ಶ್ರೀ ವಾಸುದೇವಾವರಣದಿ ನಾರಾಯಣಾವರಣದಿ ಅವ್ಯಕ್ತ ತತ್ವವು ಸುವ್ವಿ ಅವ್ಯಕ್ತ ತತ್ವಾದಿಚತುರ್ವಿಂಶತಿ ತತ್ವದಲಿ ಕೇಶವಾದಿ ಚತುರ್ವಿಂಶತಿ ರೂಪವಿಹುದು ಸುವ್ವಿ 29 ತತ್ವಂಗಳಲಿ ತತ್ತದಭಿಮಾನಿಗಳಂತರದಿ ನಿತ್ಯ ಹರಿಯು ತನ್ನ ಸತಿಯರಿಂದಲಿ ಸುವ್ವಿ ಸತಿಯರಿಂದಲಿ ಕೂಡಿ ಕೃತ್ಯವ ನಡೆಸಿ ಅಭಿ ವ್ಯಕ್ತಮಾಡಿಸುತ್ತಿರುವನು ಹರಿ ಸತ್ಯವೆನುಸುವ್ವಿ 30 ಹೃದಯದೊಳಿರುತಿರ್ಪ ಅನಿರುದ್ಧದೇಹದೊಳು ಮುದದಿಂದ ದೈತ್ಯದಾನವಾದಿಗಳಿರುವರು ಸುವ್ವಿ ದೈತ್ಯರೆಲ್ಲರು ಪಾಪಕಾರ್ಯಗಳ ಮಾಳ್ಪರು ಪುಣ್ಯಕಾರ್ಯಗಳೆಲ್ಲ ಸುರರಿಂದಾಹುದು ಸುವ್ವಿ 31 ಲಿಂಗದೇಹದ ಸಂಗಡ ಭಂಗವಿರುವುದು ಸುವ್ವಿ ಭಂಗವಾಗಲು ವಿಷಯ ಸಂಗರಹಿತನಾಗು ರಂಗ ಅಂತರದಿ ತಿಳಿಯಗೊಡುವನು ಸುವ್ವಿ 32 ಜೀವಪ್ರಕಾಶವು ಲಿಂಗಾನಿರುದ್ಧದೊಳು ಷೋಡಶಕಳೆಗಳಿಂದ ವ್ಯಾಪಿಸಿಹುದು ಸುವ್ವಿ ವ್ಯಾಪಿಸಿಹುದು ಮುಂದೆ ಸ್ಥೂಲದೇಹವು ಒಂದು ಸ್ಥೂಲಜಡದೇಹದ ಕಾರ್ಯ ಅಭಿವ್ಯಕ್ತವಾಹುದು ಸುವ್ವಿ 33 ಸ್ಥೂಲ ದೇಹದೊಳು ಸುಷುಮ್ನಾಧಾರ ಹಿಡಿದು ಸಪ್ತಕಮಲಗಳಲ್ಲುಂಟು ತಿಳಿಯೋ ಸುವ್ವಿ ಸಪ್ತಕಮಲದಿ ಮೊದಲು ಮೂಲಾಧಾರದಿ ನಾಲ್ಕು ಕಮಲ ಹವಳವರ್ಣವಿದೆ ಭೂಲೋಕವೆನ್ನು ಸುವ್ವಿ 34 ಕಮಲ ನಾಭಿಯಲ್ಲಿ ವಾಯುಮಂಡಲವಿದೆ ಭುವರ್ಲೋಕವು ಸುವ್ವಿ ಭುವರ್ಲೋಕ ಇಲ್ಲಿ ವಾಯುಬೀಜಾಕ್ಷರದಲ್ಲಿ ನಿತ್ಯ ಸುವ್ವಿ 35 ಹೃದಯಕಮಲದಿ ಎಂಟುದಳ ಉಂಟು ರವಿಭಾ ಸತ್ರಿಕೋಣ ಅಗ್ನಿಮಂಡಲವಿಹುದಿಲ್ಲಿ ಸುವ್ವಿ ಇಹುದು ಸುವರ್ಲೋಕ ಇಲ್ಲಿ ಅಗ್ನಿ ಬೀಜಾಕ್ಷರ ನಿತ್ಯ ಸುವ್ವಿ 36 ಹೃದಯಕಮಲದ ಮಧ್ಯ ಕರ್ಣಿಕಮಧ್ಯದಲ್ಲಿ ಮೂಲೇಶನಿಪ್ಪ ಸ್ಥೂಲಾಂಗುಷ್ಟ ಮೂರುತಿ ಸುವ್ವಿ ಮೂರುತಿ ಮೂಲೇಶನ ಪಾದಮೂಲದಲ್ಲಿಪ್ಪ ಅನಿರುದ್ಧ ದೇಹವೇ ಸುವ್ವಿ 37 ನಿತ್ಯ ಇಪ್ಪತ್ತೊಂದು ಸಾವಿರದಾರುನೂರು ಸುವ್ವಿ ಆರುನೂರು ಜಪ ಮೂರು ಮೂರು ವಿಧಜೀವರೊಳು ಮೂರು ವಿಧ ನಡೆಸಿ ಮೂರ್ಗತಿ ನೀಡುವ ಸುವ್ವಿ 38 ಅಷ್ಟದಳಗಳ ಮೇಲೆ ಅಷ್ಟಭುಜನಾರಾಯಣ ನಿಷ್ಟೆಯಿಂದಲಿ ಚರಿಸಿ ಜೀವರಿಷ್ಟವ ತೋರುವ ಸುವ್ವಿ ಜೀವರಿಷ್ಟದೊಳು ಪೂರ್ವದಳದಲಿ ಪುಣ್ಯ ನಿದ್ರಾಲಸ್ಯವು ಶ್ರೀ ಆಗ್ನೇಯ ದಳದಲಿ ಸುವ್ವಿ 39 ಆಗÉ್ನೀಯದಳದ ಮುಂದೆ ಯಮದಿಕ್ಕಿನಲ್ಲಿ ಕ್ರೂರ ಬುದ್ಧಿಯು ಜೀವಗಾಗುವುದೆನ್ನು ಸುವ್ವಿ ನಿರುತ ದಳದಲ್ಲಿ ಸಂಚರಿಸುವ ಸುವ್ವಿ 40 ವಾಯುವ್ಯದಲ್ಲಿ ಗಮನಾಗಮನವು ಸುವ್ವಿ ಗಮನಾಗಮನದಿಮೇಲೆ ರತಿಬುದ್ಧಿಯ ಉತ್ತರದಲಿ ದಾನಬುದ್ಧಿಯು ಈಶಾನ್ಯದಲಿ ಸುವ್ವಿ41 ಬರಲು ಸ್ವಪ್ನಾವಸ್ಥೆಯು ಸುವ್ವಿ ಸ್ವಪ್ನಾನಂತರದಿ ಕರ್ಣಿಕೆಯಲ್ಲಿ ಜಾಗ್ರತಿಯು ಮಧ್ಯದೊಳು ಸುಷುಪ್ತಾವಸ್ಥೆಯು ಸುವ್ವಿ 42 ಉರದಲ್ಲಿ ಮುತ್ತಿನವರ್ಣ ಎರಡಾರುದಳಕಮಲದಿ ವಿರುಪಾಕ್ಷನಭಿಮಾನಿ ನರಸಿಂಹನ ಪೂಜಿಪ ಸುವ್ವಿ ನರಸಿಂಹನ ಪೂಜಿಪ ಈ ಲೋಕ ಮಹರ್ಲೋಕ ದ್ವಾದಶದಳದಿ ಕಲಾಭಿಮಾನಿಗಳಿಹರು ಸುವ್ವಿ43 ಕಂಠದಲಿ ಎರಡೆಂಟರಷ್ಟದಳಕಮಲ ಕಮಲ ರಕ್ತವರ್ಣ ಜನಲೋಕವು ಸುವ್ವಿ ಜನಲೋಕದಲಿ ಶೇಷ ಸಂಕರ್ಷಣ ಮೂರ್ತಿಯನು ನಿತ್ಯ ಸ್ತುತಿಸುತ ತಾ ಭೃತ್ಯನಾಗಿಹನೊ ಸುವ್ವಿ 44 ಭ್ರೂಮಧ್ಯ ದ್ವಿದಳಕಮಲ ಉಂಟೊಂದಿಲ್ಲಿ ತಾ ಮಧುಪುಷ್ಪದಂತೆ ಪೊಳೆಯುತ್ತಿಹುದು ಸುವ್ವಿ ತಪೋಲೋಕವೆನ್ನು ಸುವ್ವಿ 45 ಶಿರದೊಳು ಸಾವಿರದಳಕಮಲವು ವಜ್ರದ ಕಲಾ ವರುಣ ಮಂಡಲವಿದೆ ಸತ್ಯಲೋಕವೆ ಸುವ್ವಿ ಉತ್ತಮೋತ್ತಮ ಶ್ರೀರಂಗನ ಪೂಜಿಸುವನು ಸುವ್ವಿ 46 ಅಷ್ಟಾಕ್ಷರU
--------------
ಉರಗಾದ್ರಿವಾಸವಿಠಲದಾಸರು
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಅ ಸಾಗಿ ಬಾರೋ ಗುರುರಾಘವೇಂದ್ರರಾಯ | ವರ ಸತ್ಕಲುಗೇಯ ಪ ಕೂಗುತ ಕರೆಯುವ ಭಾಗವತರ ಮೊರೆಯ ಲಾಲಿಸೋ ಮುನಿವರ್ಯ ಅ.ಪ ಪಾವನಘನ ವೃಂದಾವನ ಮಂದಿರನೆ ಸದ್ಗುಣ ಬಂಧುರನೇ ಪಾವಮಾನಿಮತಶರಧಿ ಚಂದಿರನೇ ಧರಸಮ ಕಂದರನೇ ಛಾವಣಿಪುರ ಸುಜನಾವಳಿ ಕೋರಿಕೆಯ ಗರೆಯಲು ಶುಭಕಾಯ 1 ಶರಣಜನರು ಮೈಮರೆದು ಕರೆಯಲಾಗಿ ನಿಲ್ಲದೆ ವರಯೋಗಿ | ಭರದಿ ಬಂದು ಕರಪಿಡಿಯುವ ಧೊರೆ ನೀನು ಎಂದರೀತೆವು ಸುರಧೇನು ಗತಿದಾಯಕ ನೀನೆಂದು ಭಜಿಪೆವು ದಯಾಸಿಂಧು 2 ಶಾಮಸುಂದರನ ಪ್ರೇಮವ ಪಡೆದಾತ ಜಗದೊಳು ಪ್ರಖ್ಯಾತ ನೇಮದಿ ಭಜಿಪರ ಕಾಮಿತ ಕೊಡುವಾತ ದೈಶಿಕ ಕುಲನಾಥ ಹೇಮಶಯ್ಯ ಸುಕುಮಾರ ಮಮತೆಯಿಂದ ಮಂತ್ರಾಲಯದಿಂದ 3
--------------
ಶಾಮಸುಂದರ ವಿಠಲ
ಅಂಬಿಕಾತನಯ ಭೂತಂಬರಾಧಿಪ ಸುರಕ ನಿರವದ್ಯ ನಿರವದ್ಯ ನಿನ್ನ ಪಾ ದಾಂಬುಜಗಳೆನ್ನ ಸಲಹಲಿ 1 2 ಕಕುಭೀಶ ನಿನ್ನ ಸೇವಕನ ಬಿನ್ನಪವ ಚಿ ತ್ತಕೆ ತಂದು ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅಕುಟಿಲಾತ್ಮಕನೆ ಅನುಗಾಲ 2 3 ಗಜವಕ್ತ್ರ ಷಣ್ಮುಖಾನುಜ ಶಬ್ದ ಗುಣಗ್ರಾಹಕ ಭುಜಗ ಕಟಿಸೂತ್ರ ಸುಚರಿತ್ರ | ಸುಚರಿತ್ರ ತ್ವತ್ಪಾದಾಂ ಬುಜಗಳಿಗೆ ಎರಗಿ ಬಿನ್ನೈಪೆ 3 4ವಿತ್ತಪತಿ ಮಿತ್ರಸುತ ಭೃತ್ಯಾನುಭೃತ್ಯನ್ನ ವಿ ಪತ್ತು ಬಡಿಸುವ ಅಜ್ಞಾನ | ಅಜ್ಞಾನ ಬಿಡಿಸಿ ಮಮ ಚಿತ್ತ ಮಂದಿರದಿ ನೆಲೆಗೊಳ್ಳೊ 4 5ಮಾತಂಗ ವರದ ಜಗನ್ನಾಥವಿಠಲನ್ನ ಸಂ ಪ್ರೀತಿಯಿಂದ ಸಾರೂಪ್ಯ | ಸಾರೂಪ್ಯವೈದಿ ವಿ ಖ್ಯಾತ ಯುತನಾದೆ ಜಗದೊಳು 5
--------------
ಜಗನ್ನಾಥದಾಸರು