ಒಟ್ಟು 311 ಕಡೆಗಳಲ್ಲಿ , 73 ದಾಸರು , 266 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಾಧಾರಣ ವಿಠಲ ನೀ ಸಲಹೊ ಇವಳಾ |ಈಶಾದಿ ದಿವಿಜೇಡ್ಯ | ಶ್ರೀರಾಮಚಂದ್ರಾ ಪ ವಿಶ್ವ ಮೂರುತಿಯೇ |ಮೀಸಲ ಮನದಲಿರೆ | ನೀ ಸ್ವಪ್ನ ಸೂಚಿಸಿದೆಏಸು ಕರುಣವೊ ನಿನಗೆ | ದಾಸ ಜನರಲ್ಲೀ1 ಪರಿಪರಿಯ ಭವಣೆಗಳ | ಪರಿಹರಿಸಿ ಭಕ್ತಳಿಗೆಪೊರೆಯೊ ಕರುಣಾವನಧಿ ನರಹರಿಯೇ ಸ್ವಾಮೀ |ತರತಮದ ಜ್ಞಾನ ಸ | ದ್ವೈರಾಗ್ಯ ಭಕುತಿಯನುಕರುಣಿಸೀ ಪೊರೆ ಇವಳ | ಮರುತಾಂತರಾತ್ಮ 2 ಪಂಚಾತ್ಮಕನೆ ಪ್ರಾ | ಪಂಚ ಸುಖದೊಳಗೆ ತವಸಂಚಿಂತನೆಯ ಕೊಟ್ಟು | ಕಾಪಾಡೊ ಹರಿಯೇಪಂಚಭೇದವು ಅಂತೆ | ನೀಚೋಚ್ಚ ಕ್ರಮ ತಿಳಿಸೀವಾಂಛಿತಾರ್ಥದ ಕಳೆಯೊ | ಸಂಚಿತಾಗಮವಾ 3 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಭ್ರಷ್ಟಸಂಗವ ಕೊಡವೆ | ಶಿಷ್ಟರಲ್ಲಿಡಿಸೋ |ಇಷ್ಟ ಮೂರ್ತಿಯ ಮನದಿ | ಸ್ಪಷ್ಟ ತೋರುತ ಸಲಹೋಶಿಷ್ಟ ಜನ ಸದ್ವಂದ್ಯ | ವಿಷ್ಣು ಪ್ರಾರ್ಥಿಸುವೇ 4 ಗೋವರ್ಧನೋದ್ದರಗೆ | ಭಾವುಕರ ಪರಿಪಾಲಪಾವನಕೆ ಪಾವನನೆ | ಕಾವುದೀಕೆಯನುದೇವನೀನಲ್ಲದಲೆ | ಕಾವರನ್ಯರನ ಕಾಣೆಗೋವಿದಾಂಪತಿ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆನೆಂತು ವರ್ಣಿಸಲಿ ಆ ದಿವ್ಯ ಮೂರುತಿಯನ ಪ ಆನಂದಮಯ ನಮ್ಮ ಆನಂದಕಂದನನು ಅ.ಪ. ಪಾದ ಆ ಜಾನು ಆ ನಡುವು ಆ ನಾಭಿ ಆ ವಕ್ಷ ಆ ಬಾಹು ಆ ಮುಖದ ಭಾವ ಆ ನೇತ್ರ ಆ ನಿಲುವು ಆ ಮಂದಹಾಸಗಳ ಆದ್ಯಂತ ಬಣ್ಣಿಸಲು ಆದಿಶೇಷಗೆ ವಶವೆ 1 ಆವನಿಗೆ ಸಮರÀಧಿಕರಿಲ್ಲವಾತಗಿನ್ನು ಆವಸಾಮ್ಯವ ಕೊಟ್ಟು ಬಣ್ಣಿಸುವೆನು ಆವನೀ ಜಗಕ್ಕೆಲ್ಲ ಆಧಾರವಾಗಿಹನೊ ಆವನಂಘ್ರಿಗಳ ಮುನಿಗಳಾವಾಗ ಚಿಂತಿಪರೊ 2 ಆವ ಮಂಗಳ ಮೂರ್ತಿಯಾ ಲಕ್ಷಣಗಳೆಲ್ಲ ಆವ ಶಾಸ್ತ್ರದೊಳುಂಟು ಅವನಿಯೊಳಗೆ ವಾಸುದೇವ ತಾನಾವಾಗಲೆಲ್ಲರೊಳು ಆವಾಸವಾಗಿಹನು ಆ ಕರಿಗಿರೀಶನು 3
--------------
ವರಾವಾಣಿರಾಮರಾಯದಾಸರು
ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ಅಖರದಿ ನಮ್ಮ ಧ್ರುವ ಎಂದಿಗೆ ಬಿಡಬಾರದಿನ್ನು ತಂದೆ ನಮ್ಮಪ್ಪನ ಹೊಂದಿ ಸುಖಿಯಾಗಬೇಕು ಭಕ್ತಪಾಲಿಪನ ವಂದಿಸಬೇಕಿಂದು ಸಹಸ್ರಳದಲಿಪ್ಪನ ಸಂದೇಹವಿಲ್ಲದೆ ನೋಡಿ ಸ್ವರ್ಗಕೆ ಸೋಪಾನ 1 ಹರುಷವಾಯಿತು ಎನಗೆ ಧರೆಯೊಳಿಂದು ನೋಡಿ ಕರುಣಾಳು ಗುರುಮೂರ್ತಿಯ ಸ್ತುತಿಸ್ತವನ ಪಾಡಿ ಎರಡಿಲ್ಲದೆ ಶ್ರೀಚರಣ ವರಕೃಪೆಯ ಬೇಡಿ ಶಿರಸಾ ನಮಿಸಿದೆ ಗರ್ವಾಂಹಕಾರ ಈಡ್ಯಾಡಿ2 ಲೇಸುಲೇಸಾಯಿತು ನಮ್ಮ ವಾಸುದೇವನ ಕಂಡು ಭಾಸ್ಕರಕೋಟಿ ತೇಜನ ಸ್ಮರಣಿಯ ಸವಿಯುಂಡು ವಾಸನೆ ತೃಪ್ತ್ಯಾಯಿತು ಶ್ರೀಯೀಶನಾ ಮನಗಂಡು ದಾಸಮಹಿಪತಿಗಾನಂದವಾಯಿತು ಸದ್ಗತಿ ಸೂರೆಗೊಂಡು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಈ ಸುಖವ ಬಿಟ್ಟನ್ನು ಬೇರೆ ಸುಖವುಂಟೆ ವಾಸುದೇವನ ಭಜಿಸಿ ಸುಖಿಯಾಗು ಮನವೆ ಈ ಸುಖವ ಬಿಟ್ಟಿನ್ನು ಬೇರೆ ಸುಖವುಂಟೆ ಪ ಕಾಮಕ್ರೋಧಾದಿಗಳ ಕಡೆಗೊತ್ತಿ ನಿರತ ನಿ ಷ್ಕಾಮನಾಗಿಯೆ ತುಲಸಿ ಕುಸುಮಗಳ ತಂದು ಪ್ರೇಮಪೂರಿತನಾಗಿ ಸರ್ವಪರಿಪೂರ್ಣ ಶ್ರೀ ರಾಮಪೂಜೆಯಗೈದು ಸುಖಿಯಾಗು ಮನವೆ 1 ಸೂನು ಮನೆ ಮೊದಲಾದ ಮಮಕಾರವನು ಬಿಟ್ಟು ಧ್ಯಾನವನು ಶ್ರೀಹರಿಯ ಮೂರ್ತಿಯೊಳಗಿಟ್ಟು ಸಾನುರಾಗದಿ ಹರಿಯ ನಾಮಸುಧೆಯನು ನೀನು ಪಾನವನುದಿನ ಗೈದು ಸುಖಿಯಾಗು ಮನವೆ 2 ಧರೆಯೊಳತ್ಯಧಿಕವೆಂದೆನಿಪ ಚಿಕ್ಕನಾಗಾಖ್ಯ ಪುರದೊಳಗೆ ಮಹಿಮೆಯಿಂ ಭಕ್ತರನು ಪೊರೆವ ಗುರು ವಾಸುದೇವಾರ್ಯರೂಪ ವೆಂಕಟಪತಿಯ ಚರಣದಾಸ್ಯವ ಪಡೆದು ಸುಖಿಯಾಗು ಮನವೆ3
--------------
ನಾರಾಯಣದಾಸರು
ಈ ಸೊಬಗನಿನ್ನ್ಯಾವ ದೇವರೊಳು ಕಾಣೆ ಈಶ ಪರಮೇಶ ಜಗದೀಶ ಶ್ರೀ ಶಿವನ ಪ ಸುಂದರತ್ವದಿ ನೋಡೆ ತ್ರಿಪುರಸುಂದರಿಯರಸ ಬಂಧುತ್ವದಲಿ ವಿಷ್ಣು ಸೋದರಿಯ ರಮಣ ಅಂದ ಚಂದದಿ ನೋಡೆ ಸುಂದರೇಶ್ವರನಿವನು ಚಂದ್ರ ನಾಗಾಭರಣ ಲೋಕ ಶಂಕರನು 1 ಭೋಗದಲಿ ನೋಡೆ ತಾಂ ಮೋಹಿನಿಯನಾಳ್ದವನು ಯೋಗದಲಿ ಯೋಗೇಶ ಯೋಗ ಭಾವಿತನು ತ್ಯಾಗದಲಿ ನೋಡೆ ತಾಂ ಸರ್ವಸಂಗ ತ್ಯಾಗಿ ನಿಗಮ ಗೋಚರನು 2 ವೀರತನದೊಳಗಿವನು ತ್ರಿಪುರ ಸಂಹಾರಕನು ಧೀರತನದೊಳಗಿವನು ಮದನವಿಧ್ವಂಸಿ ಸಾರತನದೊಳಗಿವನು ಶ್ರೀ ಮಹಾದೇವನು ಕಾರಣಕೆ ಕಾರಣನು ಜಗದಾದಿ ಗುರುವು 3 ಹುಟ್ಟು ಸಾವುಗಳೆಲ್ಲ ಎಷ್ಟಾರ್ಥದಾಯಕನು ಪಟ್ಟಣವು ರತ್ನ ರಜತಾದ್ರಿಯಾಗಿಹುದು ಪುಟ್ಟ ಬಾಲನಿಗೊಲಿದು ಕಟ್ಟು ಮಾಡಿದ ಯಮನ ಅಷ್ಟ ಮೂರ್ತಿಯು ಲೋಕ ಸೃಷ್ಟಿ ಕಾರಣನು 4 ಎಲ್ಲಿ ನೋಡಿದರಲ್ಲಿ ವಿಶ್ವರೂಪದೊಳಿಹನು ಎಲ್ಲಿ ನೋಡಿದರಲ್ಲಿ ಸೂಕ್ಷ್ಮದಿಂದಿಹನು ಎಲ್ಲಿ ನೋಡಿದರಲ್ಲಿ ಸರ್ವಾತ್ಮನಾಗಿಹನು ಎಲ್ಲಿ ನೋಡಲು ಧೇನುಪುರನಾಥ ಶಿವನು 5
--------------
ಬೇಟೆರಾಯ ದೀಕ್ಷಿತರು
ಈತ ಶ್ರೀಗುರು ಪರಬ್ರಹ್ಮನೆನ್ನಿ ಅತೀತವಾದ ಗುಣತ್ರಯ ಪರಮಾತ್ಮನೆನ್ನಿ ಧ್ರುವ ನಿರ್ಗುಣಾಂದನೆನ್ನಿ ನಿಗಮಗೋಚರನೆನ್ನಿ ಅಗಣಿತಗುಣ ಪರಿಪೂರ್ಣನೆನ್ನಿ 1 ಯೋಗಾನಂದಾತ್ಮನೆನ್ನಿ ಯೋಗಿವಂದಿತನೆನ್ನಿ ಯೋಗಿಹೃದಯವಾಸ ಯೋಗನಿಧಾನನೆನ್ನಿ 2 ಸಾಧುಸಹಕಾರನೆನ್ನಿ ಸದಾನಂದಾತ್ಮನೆನ್ನಿ ಸದ್ಬ್ರಹ್ಮಾನಂದ ಸದೋದಿತನೆನ್ನಿ 3 ಙÁ್ಞನಸಾಗರನೆನ್ನಿ ಙÁ್ಞನಾನಂದಾತ್ಮನೆನ್ನಿ ಙÁ್ಞನಿಗಳೊಂದಿಹ ಸುಙÁ್ಞನಸ್ವರೂಪನೆನ್ನಿ 4 ಪರಮಪುರಷನೆನ್ನಿ ಪರಮಪ್ರಕಾಶನೆನ್ನಿ ಪರಮಾನಂದಸ್ವರೂಪ ಪರಾತ್ಪರ ಪೂರ್ಣನೆನ್ನಿ 5 ಇಹಪರನೀತನೆನ್ನಿ ಗುಹ್ಯಗುಪಿತನೆನ್ನಿ ಬಾಹ್ಯಾಂತ್ರಪರಿಪೂರ್ಣ ತ್ರೈಲೋಕ್ಯನಾಥನೆನ್ನಿ 6 ಕಾವಕರುಣನೆನ್ನಿ ಭವಭಂಜನನೆನ್ನಿ ಜೀವಸಂಜೀವ ಮಹಿಪತಿ ಗುರುಮೂರ್ತಿಯೆನ್ನಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಉ. ತತ್ವ ವಿವೇಚನೆ ಹರಿಯಾದರೇನು ತಾ ಹರನಾದರೇನು ಮೂರ್ತಿ ದೊರಕಿ ಫಲವೇನು ಪ ಪಿತನೊಳಗೆ ಸೇರದಿಹ ಸುತನಿಂದ ಫಲವೇನು ಸತಿ ಇದ್ದರೇನು ಮತಿಹೀನ ಗುರು ತಾನು ಜೊತೆಯಾಗಿ ಇದ್ದರೇನು ಮತ ಮೀರಿ ನಡೆವಾತ ಯತಿಯಾದರೇನು 1 ಸಾಯವಿಲ್ಲದ ನ್ಯಾಯ ಸತ್ಯವಾದರೆ ಏನು ಬಾಯಸವಿಯಿಲ್ಲದ ರಸಾಯನದಲೇನು ಕಾಯ ಕುಂದಿದ ಮೇಲೆ ಜೀವದಾಶೆಯದೇನು ಮಾಯವಾದಿಯ ಮಾತು ಮತ್ತೆ ದೃಢವೇನು 2 ಋಣವ ಮಾಡಿದ ತಾತ ಗುಣವಂತನಾದರೇನು ಭಣಿತೆ ತಪ್ಪಿದ ತಾಯಿ ರಕ್ಷಿಣಿಯು ಆದರೇನು ಎಣಿಕೆ ಬಾರದ ಮನುಜ ಕರಣಿಕನಾದರೇನು ಫಣಿರಾಜನೊತ್ತಿನೊಳು ಹಣವಿದ್ದರೇನು 3 ವಿಪ್ರ ವೇದ ಓದಿದರೇನು ಮಾದಿಗನು ತಾ ಮಡಿಯನುಟ್ಟರೇನು ಬೂದಿಮುಚ್ಚಿದೆ ಕೆಂಡವಾದ ಸೋದರವೇನು ಸಾಧಿಸುವ ಊರೊಳಗೆ ಆದ ಫಲವೇನು 4 ಹರಿಯನರ್ಚಿಸದಿರ್ದ ಕರವಿರ್ದು ಫಲವೇನು ಹರಿಯ ಸ್ಮರಣೆಯ ಮಾಡದರಿಯದವನೇನು ಸಿರಿಯು ನಿಲ್ಲದ ಗೃಹದ ಪರಿಯ ಸೌಖ್ಯವದೇನು ಮರೆಯಾದ ಮನುಜನೊಳು ವ್ಯವಹಾರವೇನು 5 ವಾರಿಯಿಲ್ಲದ ಊರ ಸೇರಿರ್ದು ಫಲವೇನು ಚೋರನೊಡನೇ ದಾರಿ ನಡೆವುದೇನು ಬೇರು ಇಲ್ಲದ ವೃಕ್ಷ ಏರಿ ನೋಡುವುದೇನು ಮಾರಿ ಮನೆಯೊಳಗಿರಲು ಸಾಕಾರವೇನು 6 ಲಕ್ಷಣದ ಮೂರ್ತಿಯಿರಲಕ್ಷಯವ ತೋರುವುದು ಪಕ್ಷಿವಾಹನ ಲಕ್ಷ್ಮ್ಯಪೇಕ್ಷೆಯಾಗಿಹರು ಲಕ್ಷಣವಿರಹಿತ ನರ ಪ್ರದಕ್ಷಿಣದಿ ಬಳಲಿದರು ಭಿಕ್ಷುಕನೇ ಸರಿಯಾತನೀಕ್ಷಿಸರು ಜನರು 7 ಬುದ್ದಿವಂತರ ಕೈಯ ಶುದ್ಧವಾದೆರಕದಲಿ ತಿದ್ದಿರ್ದ ಮೂರ್ತಿಯನು ಕದ್ದುಕೊಂಡು ಹೊದ್ದಿ ಬಲವಂತನೊಳು ಬದ್ದವಾಗಿರುತಿರ್ದು ಎದ್ದು ಹೋಗದ ಸ್ಥಳದಿ ಮುದ್ದನಾಗಿಹುದು 8 ಕಾಮಿತಾರ್ಥನೀವ ಸೀಮೆಯಲಿ ಕೌರವನು ರಾಮರಾಜ್ಯದಿ ಬೇಡಿಕೊಳಲು ಕೊಡುತಿಹನು ಪ್ರೇಮದೊಳು ವರಾಹತಿಮ್ಮಪ್ಪ ಮನದಣಿಯೆ ಸೌಮನಸ್ಯವೀವ ಬರಿದೆ ಬಳಲದಿರು 9
--------------
ವರಹತಿಮ್ಮಪ್ಪ
ಉದ್ಧವನು ಯಮುನೆಗೆ ಪೋಗುವಾಗಗದ್ದಲವ ಕೇಳಿದನು ಗೋಪನಾರಿಯರ ಪ ಎದ್ದು ಗೋಪಿಯರೆಲ್ಲ ಮುದ್ದು ಮುಖವನೆ ತೊಳೆದುತಿದ್ದಿ ತಿಲ್ಕವನಿಟ್ಟು ಬಾಲ್ಯದಲ್ಲೆಶ್ರದ್ಧೆಪೂರ್ವಕ ಹರಿಯ ಪದ್ಮಂಗಳಿಗೆ ನಮಿಸಿಉದ್ಧಾರ ಮಾಡೆಂದು ಪ್ರಾರ್ಥಿಸಿದರು 1 ಅಂಗಳಕೆ ಥಳಿಹಾಕಿ ರಂಗವಾಲಿಯನಿಕ್ಕಿಮಂಗಳಾತ್ಮಕ ದೀಪ ಮನೆಯ ಮುಂದತೆಂಗುಬಾಳೆ ಸ್ತತ್ಥ ಫಲಂಗಳ್ಹೊಸ್ತಲಿಕಿಟ್ಟುರಂಗಗರ್ಪಿತವೆಂದು ನುಡಿದಲಾಗ 2 ವಾಲೆ ಸರಪಣಿಯಾ ಕಿವಿಯಲಿಟ್ಟುಮಂದಹಾಶ್ಯದಿ ಮುಖದಿ ಮುಖರೆನಿಟ್ಟು3 ಕಾಲಿಕಾಲ್ಕಡ್ಗ ರುಳಿಯು ಘಾಲು ಪೈಝಣಕಾಲುಂಗ್ರಗಳು ಪಿಲ್ಲೆ ಕಾಲಿನಲ್ಲೆಸಾಲುಗೆಜ್ಜೆಗಳುಳ್ಳ ಮೇಲೆ ಕಾಂಚಿಯನುಟ್ಟುಮುಕ್ತಮಾಲೆಗಳು ಕೊರಳಲ್ಲೆ ಲೋಲಪದಕ 4 ಕಂಕಣವು ಕರದಲ್ಲಿ ವಂಕಿ ತಾಯಿತ ಭುಜದಿಬಿಂಕದಿಂದಲೆ ಮಂಲಿ ಹೆರಳ್ಹಾಕಿಅಂಕೆಯಿಲ್ಲದ ಸರ್ವಲಂಕಾರಗಳನಿಟ್ಟುಪಂಕಜಾಕ್ಷನ ಮನದಿ ಸ್ಮರಿಸಿದ 5 ಲೋಲಾಕ್ಷಿ ಗೋಪಿಯರು ಭಾಳ ವಸ್ತ್ರಗಳಿಟ್ಟುಲೋಲ ಲತೆಯಂತೆ ಬಳುಕಾಡುತಮಾಲೆ ಹೆಗಲ್ಹಾಡುತಿರೆ ಮೇಲೆ ಸ್ವರಗಳನೆತ್ತಿನೀಲವರ್ಣನ ಮಹಿಮಿ ಪಾಡಿದರು 6 ಬಂಗಾರದ ತಬಕಿನಲಿ ಮಂಗಳಾರುತಿಯೆತ್ತಿಶೃಂಗಾರ ಪದಗಳನೆ ಪಾಡುತಲೆರಂಗು ನೀಲದ ರತ್ನದುಂಗುರವು ಬೆರಳಲ್ಲೆರಂಗಗಾರತಿ ಬೆಳಗಿ ಬೇಡಿದರು 7 ಕಂದರ್ಪ ಶರಾದರತಿ 8 ಘಿಲ್ಲು ಘಿಲುಕೆಂದು ಮೈಯ್ಯಲ್ಲಿ ವಸ್ತ್ರದ ಶಬ್ದಪುಲ್ಲಾಕ್ಷಿಯರು ಕಡಿದ ಮಥನ ಶಬ್ದನಲ್ಲೆರ್ಹಾಡುವ ಕಂಠದಲ್ಲೆ ಗಾಯನದ ಶಬ್ದಎಲ್ಲ ಶಬ್ದವು ಸ್ವರ್ಗ 9 ನಿಂತು ನಿಜಕರದಿಂದ ಮಂತಧಾಮವ ಪಿಡಿದುಕಂತುಪಿತ ಕೃಷ್ಣನ್ನ ಪಾಡುತಲೆಕಾಂತೆರೆಲ್ಲರು ಮಸರು ಕಡೆವ ಶಬ್ದವ ಕೇಳಿಭ್ರಾಂತಿಯಲಿ ಉದ್ಧವನು ನಿಂತನಲ್ಲೆ 10 ಅವರ ಭಕುತಿಯ ನೋಡಿ ಅನುದಿನದಿ ಉದ್ಧವನುಅವರ ಪಾದದ ಧೂಳಿ ಸ್ವೀಕರಿಸಿದಅವರರುಹದೊಳಗೆನ್ನ ಆಗಲುದಯವು ಎಂದಅವರೊಳಗೆ ಅವರಂತೆ ಅನುಕರಿಸಿದ 11 ಇಂಥ ಪರಿಯಲಿ ಗೋಪಕಾಂತೆ ಕಾಲಾಪಗಳುನಿಂತು ನೋಡುತ ತನ್ನ ಮೈಯ್ಯ ಮುರಿದಭ್ರಾಂತನಾಗುತಲೆ ಅವರಂತೆ ಮಥನವ ಮಾಡಿಅವರಂತೆ ಕರಗಳ ಮಾಡಿ ನಲಿದು ಕುಣಿವ 12 ಎರಡು ಸಾಲಲಿ ದೀಪ ಕರಗಳಂಬಾರಗಳುತುರವು ತರಿಸುವ ದನಿಯು ಮಥನ ಶಬ್ದಸರಸಿಜಾಕ್ಷಿಯರೆಲ್ಲ ಗಾಯನ ಮಾಡುವ ಶಬ್ದಬೆರಗಾಗಿ ಕೇಳಿದನು ಪರಿಹರುಷದಿ 13 ಮಂದ ಸುಗಂಧಡಗಿತು 14 ಸರಸಿಜಾಕ್ಷಿಯರೆಲ್ಲ ಪರಮಪುರುಷನ ಸ್ಮರಿಸಿಸುರಿಸುತಲಿ ಕಣ್ಣೀರು ಪರವಶದಲೇನೆರಗು ಬೀಳಲು ಹೊರದೆ ಹೆರಳ ಮಾಲೆಯ ಮರೆದುಬರೆದ ಚಿತ್ರಗಳಂತೆ ಪರಿಯಾದರು 15 ವಾರಿಜಾಕ್ಷಿಯರ್ಹರಿಯ ಧ್ಯಾನಮನದಲಿ ಕೃಷ್ಣಸಾರ ಸುಂದರ ಮೂರ್ತಿಯಳೆ ಕಾಣುತಮದ ಜಾನಕನ ಮಾತನಾಡುತ ಮನದಿಪಾರುಗಾಣದೆ ಸುಖದ ವಾರಿಧಿಯೊಳು 16 ಮನೆಯ ಹಂಬಲವಿಲ್ಲ ಮಾವನಂಕೆಯಿಲ್ಲಮೊದಲೆಯಿಲ್ಲ ಅತ್ತಿ ಪತಿಗಳಂಜಿಕೆಮಾರಜನಕನ ಕೂಡ ಮೈಯ್ಯಕೈಯನ ಮುರಿದುಮಾಧವನೆ ಪಾಲಿಸೆಂದೊದರಿದಾರು 17 ಮಂದಜಾಕ್ಷರು ಮಾಳ್ಪ ನಂದಬಾಲನ ಕಥೆಯಆನಂದದಲಿ ಕೇಳಿ ಉದ್ಧವನುಇಂದಿರೇಶನ ಚರಣ ದ್ವಂದ್ವ ಸ್ಮರಿಸುತಮಧುರೆಲ್ಹಿಂದ ಬಂದ್ಹೇಳಿದನು ನಂದಸುತಗೆ 18
--------------
ಇಂದಿರೇಶರು
ಎಂದಿಗೆ ಶ್ರೀಹರಿಯಾ ಮಾತಿಲಿ ಕಾಲವು ಕಳೆದಲ್ಲಿ ಘನವೇನಿಲ್ಲಯ್ಯ ಪ ಸ್ಥಳಕುಲ ಮೋದಿಸಿ ತಾಂಡವಮೂರ್ತಿಯ ಕುಲನೆನಿಸಿ ಮಾರ್ಗದಲಿ ಕುಲನೆಲೆ ತಿಳಿದು ಕಾಣುತಹೋಗುವ ನೆನೆಗಳ್ಳರ ಕೂಡೆ ಚಲೊ ಚಲೊ ಬೋಧಿಗೆ ಒಳಗಾಗಿ ಮಧುರಸ ಚಂಚಲ ನತಿ------ದು ಭಲ ಭಲ ಎನಿಸಿಕೊ ಬೇಗನೆ ಪರಮ ಭಕ್ತರ ಒಳಗೆಂದೂ 1 ಸರಸರ ಮಾರ್ಗದ ಸರಳಿಯ ತಿಳಿದಾ ಶರಣರ ನೆಲೆಗಾಣೊ ನೆರೆಹೊರೆಲಿರುವರ ಕರಕರಿಗಳುಯೆಂಬ ಕಲ್ಮಿಷ-----ಕಾಣೊ ಹರಿಗುರು ಕರುಣಾದಿ ಅಂತರಂಗದಿ ಅರಿತಿರುವರ ಕೂಡೋ ಪರಿ ಪರಿಯಲಿ ಆ ಭಂಡಾರದ ಗುರುಭಾರವು ನೀನೋಡೊ 2 ಮನಘನ ಕಾಂತಿಯ ಮಹಿಮೆಯ ತಿಳಿದಾ ಮರ್ಮಜ್ಞರ ಬೆರಿಯೊ ದಿನ ದಿನ ಸಂಭ್ರಮವನು ಅಘಸರಿಸಿ ದೃಢಭವವು ಪಿಡಿಯೊ ತನುವನು------ದ್ರಿಸಿ ತಾರಕ ಜಪಿಸಿ ಧನ್ಯನಾಗೊ ಇನ್ನೂ ದೀನಜನ ರಕ್ಷಕ ಧೀರ 'ಹೆನ್ನೆ ವಿಠ್ಠಲನ’ ಧಿಟ್ಟದಿ ಸ್ಮರಿಸಿನ್ನು 3
--------------
ಹೆನ್ನೆರಂಗದಾಸರು