ಒಟ್ಟು 41 ಕಡೆಗಳಲ್ಲಿ , 21 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರ ದೇವರು ಕಂಟಕವ ಪರಿಹರಿಸೊ ಶ್ರೀ ಕಂಠಮೂರುತಿಯೇ ಪ ಬಂಟನೆಂದೆನಿಸೆನ್ನ ವೈಕುಂಠಮೂರುತಿಗೇ ಅ.ಪ ತಂಟೆಸಂಸಾರದ ಲಂಪಟದಲೆನ್ನ ಮನ ಮರ್ಕಟದÀ ತೆರದಿ ಪರ್ಯಟನ ಮಾಡೆ ಅಂಟಿಕೊಂಡಿಹ ಈ ಭವಾಟವಿಯ ದಾಂಟಿಸುವೆ ನೆಂಟ ನೀನಹುದಯ್ಯ ಶಿತಿಕಂಠದೇವಾ 1 ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲ ಧೂರ್ಜಟಯೆ ನೀನೆ ಭವವರ್ಜಿತನ ಮಾಡೋ ದುರ್ಜಯವು ಎನ್ನ ಮನ ಆರ್ಜಿಸದೆ ಹರಿಭಕುತಿ ಪತಿ ಜನಾರ್ದನನೊಳ್ ಮನ ನಿಲ್ಲಿಸೋ2 ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದ ಅಂಬುರುಹ ತೋರಯ್ಯ ಶಂಭೋ ಮಹಾದೇವಾ ಕುಂಭಿಣಿಯೊಳು ಒಂದೆ ಇಂಬುತೋರದು ಎನಗೆ ವೈರಿ ಭವಭಯ ಹಾರೀ 3 ವಾಮದೇವನೆ ಕಾಯೊ ತಾಮಸಮತಿ ಹರಿಸಿ ಶ್ರೀ ಮನೋಹರನಲ್ಲಿ ಸನ್ಮನವ ನೀಡೋ ಸೋಮಶೇಖರ ಸುರಸ್ತೋಮದಲಿ ನಿನ್ನಂಥ ಪ್ರೇಮಿಗಳ ನಾ ಕಾಣೆ ಉಮೆಯರಸ ಸಲಹಯ್ಯ 4 ಶಿಕ್ಷಕನು ನೀ ಜ್ಞಾನಚಕ್ಷುವ ನೀಡು ವಿರೂ ಪಾಕ್ಷಮೂರುತಿ ಶ್ರೀ ವೇಂಕಟೇಶನ ಭಕ್ತ ಈ ಕ್ಷಿತಿಯೊಳ್ ಉರಗಾದ್ರಿವಾಸವಿಠಲನ ಪ್ರ ತ್ಯಕ್ಷದಲಿ ನೋಳ್ಪ ಶ್ರೀ ತ್ರ್ಯಕ್ಷಮೂರುತಿಯೇ 5
--------------
ಉರಗಾದ್ರಿವಾಸವಿಠಲದಾಸರು
ರುದ್ರದೇವರ ಪ್ರಾರ್ಥನೆ ಫಾಲಲೋಚನ ಎನ್ನ ಪಾಲಿಸು ಬೇಗ ನೀಲಕಂಧರ ಕರುಣಾಳು ಕೇಳೀಗ ಪ. ಬಂದ ಮೋಕ್ಷಕೆ ಹೇತುವೆಂದು ಪುಟ್ಟಿದ ಮನ ಮಂದಿರ ನೀ ಎನ್ನ ಕುಂದನೆಣಿಸದಿರು 1 ತುಂಬಿತ್ತೆನ್ನುವ ಶಶಿಬಿಂದಾ ಕೂಡಿಟ್ಟಿದೀ- ಡಂಬ ನೀನೆಂತು ತ್ರಯಂಬಕನಾಗುವಿ 2 ರಾಮಚಂದ್ರನ ದಿವ್ಯ ನಾಮಾಮೃತವ ನಿತ್ಯ ನೇಮದಿ ಪನ್ನಂಗ ಲಲಾಮನ ಸೇವಿಸುವಿ 3 ಪಾವನಾತ್ಮಕ ಲಕ್ಷ್ಮಿಧಾಮನ ಸಹಸ್ರ ಸುತ್ರಾಮ ತಾನರಿಯನು 4 ವೈಷ್ಣವಾಗ್ರಣಿ ನೀನು ಕೃಷ್ಣನ ಪ್ರೀತಿಗಾಗಿ ದುಷ್ಟರಿಗೊರವಿತ್ತು ಭ್ರಷ್ಟಗೊಳಿಸುವಿ 5 ಜೇಡಿ ಮೈಯಲಿ ಧರಿಸಿ ಮೂಢರ ಮೋಹಿಸುವಿ ನೋಡುವಿ ಮನದಿ ಗರೂಡಗಮನನ 6 ಪಾದ ಪಂಕಜ ಭಜಿಸುತಕಿಂಕರವರದನಾದ ಶಂಕರರಾಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ವೃಷಭಾರೂಡಗೆ ರವಿಶಶಿ ನಯನಗೆ ವೃಷಭಪಾವನತ್ರಿಯಂಬಕಗೆ || ವೃಷಭಸ್ವರೂಪದಿ ಮೆರೆವ ಆಕಾರದೇವಗೆ | ವೃಷಭ ಕನ್ನಿಕೆಯರಾರುತಿ ಎತ್ತಿರೆ ವೃಷಭಾಶಿವಗೆ ಸಂಗಮಗ ಜಗದೀಶ ಮಹೇಶ-ಗಾರುತಿಯನೆತ್ತಿರೆ ವೃಷಭ ಶಿವಗೆ ಸಂಗಮಗೆ 1 ಭಾನು ಕೋಟಿ ದಿವ್ಯ ತೇಜ ಪ್ರಕಾಶಗೆ ಆನಂದಮಯಗೆ ಚಿನ್ಮಯಗೆ | ಮಾನಸದಿಂದಲಿಮೆರೆವೆನ್ನ ದೇವಗೆ ಮಾನ ಕನ್ನಿಕೆಯರಾರುತಿ ಎತ್ತಿರೆ |ವೃಷಭ ಶಿವಗೆ ಸಂಗಮಗೆ 2 ಭಾಗೀರಥಿ ಪ್ರಿಯಗೆ ಭಾಲನೇತ್ರಗೆ ಶ್ರೀ ಗೌರಿಯ ಮನೋಹರಗೆ | ನಾಗಭೂಷಣನಾರಾಯಣ ಪ್ರಿಯಗೆ ನಾಗ ಕನ್ನಿಕೆಯರಾರುತಿ ಎತ್ತಿರೆ 3 ದೇವರ ದೇವಗೆ ದೇವ ಜಗದೀಶಗೆ | ದೇವಸನ್ಮೋಹನಸ್ವಾಮಿಗೆ | ದೇವ ಸಿಂಧಾಪುರದ ಶ್ರೀ ವಿಶ್ವನಾಥಗೆದೇವ ಕನ್ನಿಕೆಯರಾರುತಿ ಎತ್ತಿರೆ 4
--------------
ಭೀಮಾಶಂಕರ
ಶಂಕರಾ ಪೊರೆಯಯ್ಯ ನಾ ನಿನ್ನ ಕಿಂಕರ ಪ ಪಂಕಜಾಸನಕುವರ ಮನದ ಶಂಕ ನಾಶಗೈಸಿ ಶೇಷಪ ರ್ಯಂಕಶಯನನ ಪಾದ ಪಂಕಜದೇಕ ಭಕುತಿಯನಿತ್ತು ಸಲಹಯ್ಯಅ.ಪ ನಿಟಿಲನಯನ ಧೂರ್ಜಟಿಯೆ ಸೋಮಧರಾ ಜಟಾಜೂಟನೆ ಕಠಿಣವೆನ್ನಯ ಕುಟಿಲಮತಿಯ ಜಟಿಲಕಳೆದು ನಿಷ್ಕುಟಿಲ ಮನದೊಳು ವಿಠಲಮೂರ್ತಿಯ ಧೇನಿಸಲು ಹೃ ತ್ತಟದಿ ದಿಟಮನ ಕೊಟ್ಟು ರಕ್ಷಿಸಯ್ಯ 1 ಘೋರ ದುರಿತಾಪಹಾರ ತ್ರಿಪುರಹರ ಕರುಣಾಸಮುದ್ರನೆ ನಿರುತ ಶ್ರೀಹರಿಚಾರುಚರಣಸ್ಮರಣೆ ಕರುಣಿಸಿ ಪೊರೆಯೋ ಗುರುವರ ಸುರನದೀಧರ ಪಾರ್ವತೀವರ ಕರಿಗೊರಳ ಕೈಲಾಸಮಂದಿರ2 ಸರ್ಪಭೂಷಣ ಶೂಲಿ ಡಮರುಧರ ಕಂದರ್ಪಹರ ಶಿವ ಸರ್ಪಗಿರಿ ಶ್ರಿ ವೆಂಕಟೇಶಗೆ ಸರ್ವಭಕ್ತಿ ಸಮರ್ಪಿಸಯ್ಯ ಆಪತ್ತುಹರ ಸಂಪತ್ತುಕರ ಶಾರ್ವರೀಕರಧರ ಶುಭಕರ 3 ಶಂಬರಾಂತಕವೈರಿ ಭಸಿತಧರ ಬೆಂಬಿಡದೆ ಸಲಹೊ ಶಂಭು ಶಚಿಪತಿಬಿಂಬ ಗುರುವರ ಸಾಂಬ ಪೊಂಬಸುರಕುವರ ತ್ರ್ಯಂಬಕಾ ತ್ರಿಪುರಾಂತಕ ಶುಕ 4 ಗಿರೀಶ ಸುರವರ ರುಂಡಮಾಲಾಧರ ಕರಿಚರ್ಮಾಂಬರ ನಿರುತ ಹೃದಯಸದನದೊಳನ ವರತ ಉರಗಾದ್ರಿವಾಸ ವಿಠಲನ ಚರಣಸರಸಿಜಮಧುಪ- ನೀ ಸುಖ ಸವಿದು ಸೇವಿಪ ವೈಷ್ಣವಾಗ್ರಣಿ5
--------------
ಉರಗಾದ್ರಿವಾಸವಿಠಲದಾಸರು
ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶಿವ ಶಿವಯನ್ನಿ ಮನದೊಳೂ ಹರಹರಯನ್ನಿಪ ತೃಯಂಬಕ ನೆನ್ನಿ 1 ಗಂಗಾಧರ ಜಿತ - ನುಂಗನುಯನ್ನಿ ಮಂಗಳಮಹಿಮ ಸಿತಾಂಗನುಯನ್ನಿ2 ಅದ್ರಿನಿವಾಸ ಕಪರ್ದಿಯೆಯನ್ನಿ ರುದ್ರಗುಣದ ಸಮುದ್ರನೆಯನ್ನಿ3 ಆಗಮ ವೇದ್ಯ ವಿರಾಗಿಯೆಯನ್ನಿ ಭೋಗ ಭೂಷಣ ಮಹಾಯೋಗಿಯೆಯನ್ನಿ4 ಸುರಮುನಿಧೇಯ ಸುಚರಣನುಯನ್ನಿ ಗುರುಮಹಿಪತಿಪ್ರಭು ಕರುಣನುಯನ್ನಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಸ್ಕಂದಗುರು ಸ್ಕಂದಗುರು ಸುರ- ವೃಂದ ಮುನಿಜನರು ವಂದಿಪರುಪ. ಮಂದರಧರ ಗೋವಿಂದನ ಶರಣರ ಸಂದೋಹಕಾವ ವೃಂದಾರಕತರುಅ.ಪ. ತಾಮಸರು ದ್ವೇಷ ಬೇಡುವರು ಕಾಮಿತ ಕೇಳ್ವರು ರಾಜಸರು ಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವ ಪ್ರೇಮದಿ ಕೇಳ್ವರು ಸಾತ್ವಿಕರು1 ವಿಘ್ನಹರನು ನಿನ್ನಗ್ರಜನು ವಿಬು- ಧಾಗ್ರಣಿಯೆನಿಸುವೆಯೊ ನೀನು ಉಗ್ರ ತ್ರಿಯಂಬಕತಾತನು ಖ್ಯಾತನು ದುರ್ಗಾದೇವಿಯೆ ಜನನಿ ನಿರುಪಮಳು2 ತಾರಕಾಂತಕ ನಿಶ್ಯೋಕ ಲಕ್ಷ್ಮೀ- ನಾರಾಯಣನಿಗೆ ಸಖ ಭೂರಿನಿಗಮಾರ್ಥಸಾರ ಕೋವಿದನೆ ಧೀರನೆ ವೀರ ಮಹಾರಣಶೂರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಶಯ್ಯ - ಹರಿಶಯ್ಯ ಪ ಪೂರ್ವ ತ್ರಿಯಂಬಕ | ಜೀವರ ಮಾನಿಯೆ ಅ.ಪ. ಪತಿ ಚಾರು ಭವ ವಾರಿಧಿ ದಾಟಿಸು 1 ದಾತನೆ ಪ್ರಾರ್ಥಿಪೆ | ವಾತೋದ್ಭವ ಎನಪ್ರೀತಿಲಿ ಕರಪಿಡಿ | ವಾತಾಶನ ಗುರು2 ನಿಕರ ಸಿರಿ | ಕೇಶವನಲಿ ಬಿಡು 3 ಭವ 4 ಪಕ್ಷಿಯ ವಹ ಹರಿ | ಪಕ್ಷಸಾಧಕ ಗುರುಚಕ್ಷುಶ್ರ್ಯವ ಎನ | ಈಕ್ಷಿಸು ಕರುಣದಿ 5 ಸ್ವಪ್ನದಿ ಇತ್ತಿಹ | ಆಜ್ಞೆಯಂತೆ ಗುರುಸ್ವಪ್ನಾಖ್ಯಾನದಿ | ಪ್ರಜ್ಞೆಯ ನಿರಿಸೋ 6 ಸಾವಿರ ಮುಖದಲಿ | ಭುವಿಧರಭಿಧ ಗುರುಗೋವಿಂದ ವಿಠಲನ | ಸೇವಿಪೆ ಭಕುತಿಲಿ 7
--------------
ಗುರುಗೋವಿಂದವಿಠಲರು
(ಮೂಲ್ಕಿಯ ನರಸಿಂಹದೇವರು)ನಂಬಿದೆ ನಿನ್ನ ಇಂಬಿದೆಯೆಂದುಅಂಬುಜಾಯತಾಂಬಕ ತ್ರ್ಯಂಬಕಸನ್ನುತಪ.ಕಂಬದಿಂದ ಕಾಣಿಸಿದಗಂಭೀರಗುಣಾಂಭೋನಿಧಿ ಡಿಂಬೋದ್ಧರ ನರಮೃಗವರ ಅ.ಪ.ಭಾನುಕೋಟಿಭಾಸ್ಕರಪವ-ಮಾನನಯ್ಯ ಪ್ರಾಣದಸುತ್ರಾಣಸುಗುಣದೀನಜನಸಂತಾನ ಮಾನದಆನಂದ ಗುಣಾನಂತ ವಿತಾನಾಬ್ಧಿಶಯಹರಿ1ಎಷ್ಟೊ ಪಾಪಿ ಕನಿಷ್ಠನೆಂದುಬಿಟ್ಟರೇನು ಬಿರುದು ಹಿರಿದು ಬರುವುದುಸೃಷ್ಟಿಕರ್ತರಿಷ್ಟಹರ್ತಮುಷ್ಟಿಕಭಿದ ತುಷ್ಟಿಪ್ರದ ವಿಠಲ ಕೈಗೊಟ್ಟುಳುಹು 2ಚಿತ್ತಸಾಕ್ಷಿ ಚಿನುಮಯಾತ್ಮಸತ್ಯರೂಪ ಸದಯೋದಯ ಸದುಪಾಶ್ರಯದೈತ್ಯಭಂಜನ ಸತ್ಯರಂಜನಕ್ಷೇತ್ರಜÕ ಪವಿತ್ರಕಥಾಸ್ತೋತ್ರಾರ್ಹ ಶ್ರೀವತ್ಸಾಂಕಿತ 3ಮೂಲಿಕಾಪುರ ಮೌಳಿರುತುನನೀಲೇಂದೀವರಶ್ಯಾಮಲ ಕಲಿಮಲಭೀಷಣಕಾಲಕಾಲ ವಿಶಾಲ ಭುಜಬಲಮೂಲೇಶಮುನೀಂದ್ರಾರ್ಚಿತ ಶ್ರೀಲಕ್ಷುಮಿನಾರಾಯಣ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾಯೋ ಶ್ರೀ ನಾರಸಿಂಹ ಕಾಯೋಕಾಯೋ ಶ್ರೀನಾರಸಿಂಹ ತ್ರಿಯಂಬಕಾದ್ಯಮರೇಶಘೋರಅಕಾಲಮೃತ್ಯು ಮೀರಿಬರಲು ಕಂಡುಭೀಷಣನೆ ಸುಭದ್ರ ದೋಷ ಮೃತ್ಯುಗೆ ಮೃತ್ಯುಜ್ಞಾನರಹಿತನಾಗಿ ನಾ ನಿನ್ನ ಮರೆತರೆಪ್ರಬಲೋತ್ತಮನೆನಿಸಿ ಅಬಲರ ಕಾಯದಿರೆಪಾಲಮುನ್ನೀರಾಗರ ಪದುಮೆ ಮನೋಹರ ಗೋ-
--------------
ಗೋಪಾಲದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು
ನಿನ್ನ ಸೇರಿದೆ ಮಹಾಲಿಂಗ ಎನ-ಗಿನ್ಯಾರುಗತಿಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗಪ.ನಿನ್ನಂತೆ ಕೊಡುವ ಉದಾರ ತ್ರಿಭು-ವನ್ನದೊಳಿಲ್ಲದಕ್ಯಾವ ವಿಚಾರಮುನ್ನ ಮಾರ್ಕಾಂಡೇಯ ಮುನಿಯ ಭಯವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1ಸರ್ವಾಪರಾಧವ ಕ್ಷಮಿಸು ಮಹಾ-ಗರ್ವಿತರಾಶ್ರಯಕ್ಕೊಲ್ಲದು ಮನಸುಶರ್ವರೀಶಭೂಷ ನಿನ್ನ ಹೊರ-ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2ಅಂತರಂಗದ ದಯದಿಂದ ಯುದ್ಧ-ಮಂ ತೊಡಗಿದೆ ಪಾರ್ಥನೊಳತಿಚಂದಪಂಥದ ನೆಲೆಯನ್ನು ತಿಳಿದು ಸರ್ವ-ಮಂತ್ರಾಸ್ತ್ರಗಳನಿತ್ತೆಯೊ ಭಕ್ತಗೊಲಿದುದೊಡ್ಡದು ನಿನ್ನ ಬಿರುದು 3ಸಿದ್ಧಿಸು ಸರ್ವಸಂಕಲ್ಪ ಅಡ್ಡ-ಬಿದ್ದು ಬೇಡುವೆ ನಿನಗ್ಯಾವದನಲ್ಪಬುದ್ಧಿಯ ನಿರ್ಮಲಮಾಡು ನಿನ್ನಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು 4ಅಂಜಿಕೆ ಬಿಡಿಸಯ್ಯ ಹರನೆ ಪಾ-ವಂಜಾಖ್ಯವರಸುಕ್ಷೇತ್ರಮಂದಿರನೆಸಂಜೀವನ ತ್ರಿಯಂಬಕನೆ ನವ-ಕಂಜಾಕ್ಷ ಲಕ್ಷುಮಿನಾರಾಯಣಸಖನೆಸಲಹೊ ಪಂಚಮುಖನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸೆನ್ನ ಮಂದಬಾಲಿಶನ್ನಪಾಲಗಡಲೊಡೆಯ ಸಿರಿಲೋಲ ಪ.ಅಂಬುರುಹಸಂಭವ ತ್ರಿಯಂಬಕ ಶೇಷಾಂಬರಗದಂಭೋಳಿಸಂಭೃತನುತಾಂಘ್ರಿ 1ಅಷ್ಟಕೃತ್ಯ ಅಷ್ಟವಿಭವ ಅಷ್ಟ ಭೋಗ್ಯಥೇಷ್ಟ ಶಕ್ತಅಷ್ಟಹರಿತ ಶ್ರೇಷ್ಠವರ್ಯ ಶ್ರೇಷ್ಠ 2ದ್ಯುಗ ಶಶಿಭಾಯುಗನಯನ ಜಗಜಠರಘಹರಾಹಿನಗನಿಲಯ ಜಘನಕಟಿಪಾಣಿ 3ಕಿರೀಟ ಕುಂಡಲರಿದರಕೇಯೂರಕೌಸ್ತುಭಸಿರಿವತ್ಸವರಾಂಬರ ಮನೋಹರ ಮೇಖಲಧಾರಿ 4ದ್ರೌಪದಿ ಮುನಿವಧು ಬಾಲಧ್ರುವ ಪ್ರಹ್ಲಾದ ವಿಭೀಷಣೋದ್ಧವಾಕ್ರೂರ ಮುಖ್ಯವಮಾನಹಾರಿ 5ಋಗ್ಯಜುಸಾಮನಿಗಮಧರವಗೋಚರ ಮುನಿಗಣ ಸುಮನಗೇಹನಂತ ಸುಗುಣಾನಂದ ಪೂರ್ಣ 6ಮಧು ಕೈಟಭ ಮದನೇಮಿ ಜಲಂಧರಕಂಬುಸದನಖಳಾಬುಧಿ ಕುಲಾಂತಕ ದ್ವಿಜೋಪಕಾರಿ 7ಋಷಿ ಹನುಮ ರಸಗಾಯನ ತೋಷಭರಿತ ಹಾಸವದನಪ್ರಸನ್ನ ವೆಂಕಟೇಶ ನಮೋ ಸ್ವಾಮಿ 8
--------------
ಪ್ರಸನ್ನವೆಂಕಟದಾಸರು