ಒಟ್ಟು 446 ಕಡೆಗಳಲ್ಲಿ , 66 ದಾಸರು , 396 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಋ) ತಾತ್ತ್ವಿಕ ಕೃತಿಗಳು ಜಗವ ಪೆತ್ತಿಹ ಪ್ರಭು ನೀನಯ್ಯ ಶ್ರೀರಂಗದ ವಿಜಯ ಪ ಸಾಸಿರ ಶೀರ್ಷನೆ ಸಾಸಿರನೇತ್ರನೆ ಭಾಸಿಸುವಾನಂತ ಪಾದನೆ ಹಸ್ತನೆ 1 ಆದಿಮಧ್ಯಾಂತರಹಿತ ಅಸಂಖ್ಯನಾಮನೆ ಆಧಾರಮೂರುತಿ ಸಾಧುಸಂರಕ್ಷಕ 2 ಆಖಿಲಾಂಡಕೋಟಿ ಬ್ರಹ್ಮಾಂಡ ನಾಯಕನೆ ಸಕಲಚರಾಚರ ಕರ್ತೃವು ನೀನೆ 3 ಚರಂಗಳೆಲ್ಲ ಯೀ ಭೂಮಿತಳವೋ ಪರಮನಾಭಿಯೆ ಆಕಾಶವಯ್ಯ 4 ಶಿರವೇ ವೈಕುಂಠ ಕವಿಗಳೆ ದಶದಿಕ್ಕು ಉರುತರ ಮನಸೇ ಮನ್ಮಥನಹುದು 5 ಹರಿಯ ಪಾಶ್ರ್ವಂಗಳೆ ಹಗಲು ರಾತ್ರಿಗಳು ಪರಮವೇದಂಗಳು ಸಕಲಶರೀರವು 6 ಮುಖ ಭುಜ ತೊಡೆ ಪಾದಗಳಲಿ ವರ್ಣಂಗಳ ಸುಕರದಿ ಪಡೆದ ಭೂಸೂತ್ರಧಾರಿಯು ನೀಂ7 ಇಂದ್ರ ಮೊದಲಾದ ದೇವರೆಲ್ಲ ನಿನ್ನಯ ಮುಖ ಚಂದ್ರಸೂರ್ಯರ ಕಣ್ಣಿನಿಂದ ಪಡೆದಾತನೆ 8 ಮಗುವಾದೆನ್ನ ಪಿಡಿ ಮೂಜಗದೊಡೆಯ ಹಗರಣ ಹರಿಯೊ ಜಾಜಿಕೇಶವ 9
--------------
ಶಾಮಶರ್ಮರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ
(ಲಿಂಗಸುಗೂರಿನ ಹತ್ತಿರ ಚಿಲಕರಾಗಿ ಗ್ರಾಮದಲ್ಲಿರುವ ಗೇಣರಾಯನೆಂಬ ಪ್ರಾಣದೇವರು) ಗೇಣುರಾಯ ನಿನ್ನಾಮಹಿಮಿಯ |ಸ್ಥಾಣು ಅರಿಯ ಮುನ್ನಾ |ದೀನ ರಕ್ಷಕನೆಂಬೋ ಬಿರುದು ಕೇಳಿತವ |ಧ್ಯಾನವ ಕೊಡು ಎಂದೇ, ತಂದೇ ಪ ರವಿಜನ ಭಯದಿಂದ ಕಪಿಗಳು |ಲಯ ಚಿಂತೆಗಳಿಂದಾ ||ಪವನ ಕುವರ ಕಂಡಾಕ್ಷಣ ಈ ಭಯ |ತವಕನಚ್ಚಿ ಪೊರದೀ, ಮೆರದೇ 1 ಭೂಸುರ ಚಿಂತಿಸೆ ಬರಿದೀ ಈ |ಮೊರಿ ಕೇಳಿ ಆ ಶಿಶುವಿನ ಉಳಾಹಿದೇ ||ಘಾಸಿಗೊಳಿಸುವ ಘಳಬಕನೊರಸಿ |ಭಾಸುರ ಕೀರ್ತನೆಯ ಪೊರದಿ ಇಷ್ಟಾರ್ಥವ ಕರದೀ 2 ಪರಿಯೊಳು ಚಿಲಕರಾಗಿ ಗ್ರಾಮದೊಳು |ಮೆರೆಯುವ ಯತಿಯೋಗೀ ||ಗುರುಶ್ರೀಶ ಪ್ರಾಣೇಶ ವಿಠಲನ |ಚರಣ ಪೊಕ್ಕವರ ಸಲಹುವ ಕರುಣೀ | ಯೇಧಣಿ 3
--------------
ಶ್ರೀಶಪ್ರಾಣೇಶವಿಠಲರು
ಅನಾಥ ರಕ್ಷಕ ಆಪದ್ಬಾಂಧವ ಶ್ರೀಪತಿ ಕೇಶವ ಮಾಧವನೆ ಪ ಮದನ ಗೋಪಾಲನೆ ಮಾತರಿಶ್ವಪ್ರಿಯ ಹರಿ ಶ್ರೀಶ ಅ.ಪ ಬಿಟ್ಟ ಕಂಗಳ ಮುಚ್ಚದೆ ತಿರುಗುವ ಬೆಟ್ಟವ ಬೆನ್ನಿನೊಳಾಂತಿರುವ ಗಟ್ಟಿನೆಲವ ಕೆದರುತ ಬೇರರಸುವ ಹೊಟ್ಟೆಯ ಕರುಳನೆ ಬಗೆದಿರುವ1 ಪೊಡವಿಯ ಬೇಡುತ ಕೊಡಲಿಯ ಪಿಡಿಯುತ ಪೊಡವಿಪರೆಲ್ಲರ ಗೆಲಿದವನೆ ಮಡದಿಯನರಸುತ ಕಡಲನು ಕಟ್ಟುತ ಕಡಹಲ್ದ ಮರನೇರ್ದ ಮೃಡಸಖನೆ2 ಬುದ್ಧನಾಗಿ ತ್ರಿಪುರರ ಗೆಲಿದವನೆ ಶುದ್ಧ ಹಯವನೇರಿ ಮೆರೆದವನೆ ಹದ್ದುವಾಹನವೇರುತ ನಲಿದಾಡುವ ಪದ್ಮನಾಭ ಪುರುಷೋತ್ತಮನೆ3 ಅಗಣಿತ ಮಹಿಮನೆ ಖಗವರವಾಹನ ನಿಗಮವೇದ್ಯ ನಿರ್ಮಲಚರಿತ ಬಗೆಬಗೆಯಿಂದಲಿ ಭಜಿಸುವ ಭಕುತರ ಅಘನಾಶನ ಸುಜನರ ಪ್ರಿಯ 4 ಸೌಮ್ಯ ವತ್ಸರದಿ ಸುಂದರಶ್ಯಾಮನ ಸಾಮಗಾನಲೋಲನ ಭಜಿಸಿ ಕಾಮ್ಯಕರ್ಮಗಳ ತ್ಯಜಿಸಲು ಹರುಷದಿ ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ
ಅಂಬೆ ಶಿರಿ ವಿಹಾರಾ | ಜಗದಂಬೆ ಶಿರಿ ವಿಹಾರಾ | ಜಯ | ಶ್ರೀ ಬಿಂಬ ಪ್ರಾಣಾದಿ ರೂಪಿ ಬಹುರೂಪಿ ಪ ಜನಿತ ಪಾದ | ಶ್ರೀ ಕುಮದಾಪ್ತ ಕುಲಜ | ಭೋಸುದೀಪ್ತ ಅನಂತ ಅಚಿಂತ್ಯ 5Àುಹಿಮೋಪೇತ ಸುವ್ಯಾಪ್ತಅ.ಪ. ತುಂಬಿದಾಂಗ | ಸಿಂಧುಜೆ ಶಿರಿ ಸು | zs5iÁ | ಪ್ರತಿಬಿಂಬ ನೆನಿಪ | ಜಂಭಾರಿಯಾ | ಪ್ರೇಮಾ | ಸ್ಪದಕಂಬುಧರ ಘನ | ಶ್ಯಾಮಾ ವರ್ಣ ಸ | ನ್ನಾಮಾಜಾಂಬೂನದ | ದಾಮಧರ ಸು | ವೇಷಾ | ದು-ರ್ಗಾಂಬೆ ರಮಣ | ಭಕುತ ಸಂ | ತೋಷಾ | ನೀ-ಲಾಂಬುದಾಭ | ಸತಿರಕ್ಷಕ | ದಯೆ ಭೂಷಾ | ಭೂಮಾಂಬೆ ಸುತನ | ಹರಣ ಹರ ಸು | ವಿಶೇಷಾ | ಶ್ರೀಅಂಬುಜನಾಭ ಗೋವಿಂದ | ಅಂಬೆಯ ಅಗ್ರಜ ಮುಕುಂದನಂಬೀದವರನು ಕಾವ | ಗುರು ಗೋವಿಂದ ವಿಠಲ 1
--------------
ಗುರುಗೋವಿಂದವಿಠಲರು
ಅಬ್ಧಿ ಸೋಮಾ ಪ ದಶರಥನಂದನ ರಾಮಾ ಜಗದೇಕ ರಾಮಾ ರಾಮ ಜಾನಕಿ ಪ್ರೇಮ ಸುರಕ್ಷಕ ಸುಧಾಮಾ ಸಕಲಲೋಕ ಸ್ವಾಮಿ ಜಗನ್ನಾಥ ಅ.ಪ ದಂಡಿ ದಾನವರ ಕುಲತರಿದೂ ದಶಶಿರನಳಿದೂ ಭೂ ಮಂಡಲ ಮಾತೆ ಸೀತೆತಂದಾ ಅತಿ ಶರತಿನಿಂದಾ ಹಿಂಡು ವಾನರ ಬಹು ದಂಡನೆ ಕೂಡಿಸಿ ಪುಂಡ ರಕ್ಕಸರೆದೆ ಗುಂಡಿಗೆ ಮುರಿದಾ 1 ವೀರಾಧಿ ವೀರರಲಿ ಗಂಭೀರಾ ಸುಂದರಾಕಾರಾ ಧೀರಾ ವಿಜಯರಣಶೂರಾ ಪೋಷಿತಾಮರ ಸÁರ ಜಗಂಗಳೊಳು ಮೀರಿದವರ ಗರ್ವ ಕಾರಿಸಿ ಮುರಿದಾ ಹೋ ಧೀರ ಮಹಾನುಭಾವಾ 2 ಪನ್ನಗಾದ್ರಿಯ ವಾಸಾ ಈಶಾ ಭಕ್ತರ ಪೋಷಾ ಚಿನ್ಮಯ ರೂಪ ಜಗದೀಶಾ ಚಿದ್ಪಿಲಾಸಾ- ಪನ್ನ ಶರಣ್ಯ 'ಶ್ರೀ ಹೆನ್ನ ವಿಠ್ಠಲ’ ಎನ್ನ ಮರೆಯದಲೆ ಇನ್ನು ರಕ್ಷಿಸೊ 3
--------------
ಹೆನ್ನೆರಂಗದಾಸರು
ಅರ ಹು ನೀಡೊ ನೀ ಸ್ವಾಮಿ ಶ್ರೀನಿಧೇ ಶರಣ ರಕ್ಷಕಾಗಿರಬೇಕಿದೆ ಕರುಣಿಸೊ ದಯ ಗುರುಕೃಪಾನಿzs É 1 ತ್ಯರನೆ ತಿಳಿಯದೆ ಬರಿದೆ ಭ್ರಮಿಸಿದೆ ಕರುವ್ಹುದೋರೋ ನೀ ಸ್ಮರಣಿ ಅಹುದೆ 2 ಸೆರಗು ಶಿಲುಕವಾ ಪರಮ ಪುಣ್ಯಿದೆ ಕರುಣಿಸೊ ದಯ ಗುರು ಕೃಪಾನಿಧೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವತಾರತ್ರಯ ಅಕ್ಷಯ ನೀನಾಮೃತಂ ಕುಕ್ಷಿಯೊಳಗೆ ಪೂರ್ಣವಾಗಿಹ ಅಕ್ಷಯಾಂತಕನೀಕ್ಷಿಪುದು ಸುಜನರು ಪ ಇಕ್ವಾಕು ಕುಲಾಧ್ಯಕ್ಷ ರಾಘವನಾ ಶಿಕ್ಷೆಯಲಿ ಪ್ರಾಣ ರಕ್ಷಕನೆÉಂದರುಹಲು ಧರೆಗೆ ತಕ್ಷಣದಿ ಮರುದ್ವಾಕ್ಷ ಮರಕಟ ಕೃತಿಯ ತೋರಿ ಜಲಧಿಯನೆ ಪಾರಿ ರಕ್ಷಕೇಂದ್ರನ ಪುರಸೇರಿ ರಕ್ಕಸಿಯದೆಡೆಯಲಿ ಜನನಿಗೊಂದಿಸಿ ಲಕ್ಷಣದುಂಗುರವ ತೋರಿ ರಕ್ಷಸದಕ್ಷರವನಳಿದಾ 1 ಯದುಕುಲದೊಳುದಯಿಸೆÉ ಹರಿಯು ತದನರಿತು ವಾಯು ಉದಭವಿಸಿ ಭೀಮಾಭಿಧಾನದಿ ಮುದಗೊಳಿಸಲಿಳೆಗೆ ಕುದಿಯುವ ಬಕ ಹಿಡಿಂಬರರಳಿದು ಕೀಚಕನ ಸದೆದು ಅಧಮಕಾರವ ಕುಲವನಳಿದು ವಧಿಸಿzಖಿಲ ಬಲವ ತೋರಿ ಮುದವ ಬೀರಿ ಧರೆಯ ಜನಕೆ ಯಶವ ಗಳಿಸಿದವನ ಇಹಕೆ ಚರಕೆ2 ಗುರುವಾಗವತರಿಸಿ ಧರೆಯ ಸುಜನರು ಕರುಣಾಬ್ಧಿ ಹರಿಯು ಧರೆಯೊಳುಡುಪಿ ಪುರದಿ ಜನಿಸಲಿ ಸುರರಿಗೆ ತಿಳಿಯಲು ಹರಿಯ ಮತವ ಸೃಜಿಸಲಿಳೆಯಲು ತದಾಜ್ಞೆಯ ಕೇಳಲು ಭರದಿ ಮಧ್ವನಾಮ ಪಡೆದು ಹರಿಮತವ ಪಿಡಿಯ ಬೋಧಿಸಲು ನರಸಿಂಹವಿಠಲನ ಸ್ಮರಣೆಯಗೈದು ನರಜನ್ಮ ಸಾರ್ಥಕವು ಪರಮಪದವ ಗೈದು 3
--------------
ನರಸಿಂಹವಿಠಲರು
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1 ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2 ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3 ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................4
--------------
ಕನಕದಾಸ
ಆತ್ಮನಿವೇದನೆ ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1 ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2 ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3 ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4 ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5
--------------
ವೆಂಕಟೇಶವಿಟ್ಠಲ
ಆತ್ಮಲಿಂಗ ಭವನದಿಆತ್ಮಲಿಂಗ ಭವನದಲಿ ವಿಚಿತ್ರವನೆ ಕಂಡುಆತ್ಮನೆಂತಿಹನೆಂದು ಅರಸನಾ ಬಲಗೊಂಡುಆತ್ಮನಾನೆರಡೆಂಬ ಅವಿ ವಾಚ್ಯನಳಿಗೊಂಡುಆತ್ಮನಾಗಿರುತಿಪ್ಪನು ಪ ಪರಿ ಪರಿಯ ಸರಗಳನೆ ಕಂಡೆಮಾತಿಗುತ್ತರಿಸದಿಹ ಮಹಾ ಮಹಿಮೆಯ ಕಂಡೆ 1 ಈಕ್ಷಿಸಿಯೆ ವಸ್ತುವನ ಏಳು ಬಾಗಿಲು ಕಂಡೆದಕ್ಷಿಣೋತ್ತರ ಎಂಬುದರ ಬಾಗಿಲನು ಕಂಡೆಅಕ್ಷಯಾಗಿಹ ಲಕ್ಷವಹ ದಿಡ್ಡಿಯನೆ ಕಂಡೆರಕ್ಷಕನಾಗಿಹನ ರಾಗದಲಿ ಕಂಡೆ 2 ಪಂಚಇಂದ್ರಿಯಗಳೆಂಬ ಪರಿಚಾರಕರನು ಕಂಡೆಕಿಂಚ ಕೆಲಸಕ್ಕಿರುವ ಕರ್ಮೇಂದ್ರಿಯರ ಕಂಡೆಸಂಚರಿಪ ಮೂರೆರಡು ಸತ್ಪ್ರಾಣಿಗಳ ಕಂಡೆವಚನಾಂತಃಕರಣ ವರ್ತಕರ ಕಂಡೆ 3 ಸತ್ಯಗುರು ಪೂರಿತಹ ಸಾರಣೆಯ ಕಂಡೆತಥ್ಯವೆನಿಸುವ ಶಾಂತ ತೋರಣವ ಕಂಡೆಅತ್ಯಧಿಕ ಬುದ್ಧಿಯ ರಂಗವಲ್ಲಿಯ ಕಂಡೆಎತ್ತ ನೋಡಿದಡತ್ತ ಎಸೆದಿಹುದ ಕಂಡೆ 4 ಆರು ಅಂತಸ್ಥನು ಕಂಡೆ ಅಲ್ಲಿರುವವರ ಕಂಡೆಬೇರೆ ಮೂರಿಹ ಮಧ್ಯ ರಂಗಗಳ ಕಂಡೆಘೋರ ಘೋಷಣ ಪ್ರಣವ ಘಂಟನಾದವ ಕಂಡೆಸಾರವಮೃತ ಕಲಶ ಪಾನಕವ ಕಂಡೆ 5 ಜ್ಯೋತಿ ಎಂದೆನ್ನುತಿಹ ಜ್ಯೋತಿರ್ಮಯನ ಕಂಡೆಸಾತಿಶಯ ಗರ್ಭಗುಡಿ ಶೀಘ್ರದಲಿ ಕಂಡೆಆತುರದಲೊಳ ಪೊಕ್ಕು ಆತ್ಮಲಿಂಗವ ಕಂಡೆಪೂತು ರಕ್ಷಿಸು ಎಂದು ಪೂಜೆ ಕೈಗೊಂಡೆ 6 ನಿತ್ಯ ನಿಶ್ಚಲ ನಿಷ್ಕಲಂಕ ನಿಜನೆ ಎಂದುಪ್ರತ್ಯಗಾತ್ಮ ಪರಬ್ರಹ್ಮನೆ ಸ್ಥಿರವೆಂದುಸತ್ಯ ಸಂವಿದ್ರೂಪ ಸಕಲಕಧಿಪತಿ ಎಂದುಅತ್ಯಧಿಕ ಚಿದಾನಂದ ಆತ್ಮ ತಾನೆಂದು7
--------------
ಚಿದಾನಂದ ಅವಧೂತರು
ಆಪನ್ನ ರಕ್ಷಕ ಎನ್ನ ಪಾಲಿಸೊ ಪ. ಪನ್ನಗಾದ್ರಿನಿವಾಸ ಸಂಪನ್ನ ಶ್ರೀಶಾ ಶ್ರೀನಿವಾಸ ಅ.ಪ. ಆದಿ ಮೂರುತಿ ವೇದ ವಂದ್ಯ ಪಾದ ನಂಬಿದೆ ಅಗಾಧರೂಪ ನಾರಸಿಂಹ ಆದರದಿಂದ ಮೋದ ಕೊಡುತ ಎನ್ನ ಪಾಲಿಸು 1 ನೊಂದೆನಯ್ಯ ಈ ಭವದಿ ಸಿಲುಕಿ ತಂದೆ ಎನ್ನ ಕಾವರಿಲ್ಲ ಬಂಧ ಬಿಡಿಸಿ ಈ ಭವದಿಂದ ನಿನ್ನ ಸಂದರುಶನವಿತ್ತು ಸಲಹಿ ಎನ್ನ 2 ನಿನ್ನ ನಂಬಿದ ಭಕ್ತರ ಪೊರೆಯೆ ಇನ್ನು ಸಂಶಯವ್ಯಾಕೊ ದೇವಾ ಚೆನ್ನಗಿರಿಯ ವೆಂಕಟೇಶಾ ಮನ್ನಿಸೆನ್ನ ಶ್ರೀ ಶ್ರೀನಿವಾಸ ಎನ್ನ 3
--------------
ಸರಸ್ವತಿ ಬಾಯಿ