ಒಟ್ಟು 1067 ಕಡೆಗಳಲ್ಲಿ , 92 ದಾಸರು , 853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
ಶೇಷಪ್ರಭುಗಳ ರಚನೆಗಳು ಪಾಲಿಸು ಶ್ರೀಹರಿಯೇ | ಸದ್ಗುಣ | ಶೀಲ ಭಾಗ್ಯನಿಧಿಯೇ | ಶ್ರೀಲಲಾಮ ಶೇಷಾಚಲಾಧೀಶ ಶ್ರೀಲೋಲ ಬಾಲಭಾಸ್ಕರ ಸಂಕಾಶನೆ ಪ ಕಂಡವರಿಗೆರಗಿ ದೈನ್ಯವ | ಗೊಂಡೆ ಖಿನ್ನನಾಗಿ ಭಂಡನಾಗಿ ಬಳಲಿಸಿ ಬಹು ಕಾಯವ ದಂಡಿಸಿದೆನು ರಕ್ಷಿಸೋ ಶ್ರೀಹರಿಯೇ 1 ಯಾರಿಗೆ ದೂರುವೆನು ಭಕ್ತೋ | ದ್ಧಾರನಲ್ಲವೆ ನೀನು | ಘೋರದುರಿತ ದಾರಿದ್ರ್ಯದ ವ್ಯಥೆಯ ಇ- ನ್ಯಾರಿಗೊರೆವೆ ಅದನ್ಯಾರು ಕಾವರೈ 2 ಏನಪರಾಧವ | ಗೈದೆ ನಾ -ನೇನು ಪಾಪಾತುಮನೋ | ಈಸಪರಾಧವನೆಣಿಸದೆ | ಎನ್ನಯ | ಕ್ಲೇಶವ ಪರಿಹರಿಸೋ ದಯಾನಿಧೇ 3 ಪರ ಪುರುಷೋತ್ತಮ | ಪರಂಜ್ಯೋತಿ ಪರಬ್ರಹ್ಮಸ್ವರೂಪನೆ 4 ಗಮನ ಮಾಧವ ಕರುಣಾ-| ಪಾಂಗರಂಗ ಮಂಗಲಾಂಗ ರಕ್ಷಿಸು 5
--------------
ಅನ್ಯದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
------------------- ಪ --------------------- -------------------- --------------------- 1 -------------------- -------------------- ------------------- 2 ಖ್ಯಾತಿಲಿ ನಿನ್ನ ಸ್ತುತಿಸುವ ಭಕುತನ ಪ್ರೀತಿಲಿ ರಕ್ಷಿಪ ರಾಮ ಪೂತನಿ --- ಪಾತಕ ಭವದೂರ ಪುರ 'ಹೊನ್ನವಿಠ್ಠಲ ' ರಾಮ 3
--------------
ಹೆನ್ನೆರಂಗದಾಸರು
-------ಅರಿಯೆ ----ನಡತಿ ಮಾರ್ಗವನೂ ಹೀನಮಾನವ ನಾನು ಯಂ ---- ಹರೇ ಪ ನಾನಾಯೋನಿಗಳಲ್ಲಿ ನಟಿಸಿನಟಿಸಿ ಇಲ್ಲದೆ ಇರೊ ವಿಧಾನ ಒಂದಲ್ಲದೆ 1 ದರಿ----ರ್- ಸರತಿ ತಿಳಿದಿನ್ನು ಧೀನ ರಕ್ಷಕ ನಿನ್ನ ದಿನಚರ್ಯ ವರ್ಣಿಸುವರ ಕಾಣುತಲೆ ವಂದಿಸಿ ಕಾಲುಹಿಡಿವದು ಅರಿಯೆ 2 ವೇದಾದಿ ಸಕಲವು ವಿದ್ಯಶಾಸ್ತ್ರವನರಿಯೆ ಮೇದಿನಿಯೊಳು ನಡೆವ ಸುಮಾರ್ಗ ನಾನರಿಯೆ ಗಾಧಿ ಬೋಧಿಗಳೀಗೆ ಒಳಗಾಗಿ ಈ ಪರಿಯೆಗಾಧೆಯೊಳಗೆ ಬಿದ್ದನ ಕೈ ಪಿಡಿಯೊಧೊರಿಯೆ 3 ಆಗ ಅಂತರಂಗದಾ ಭಾವನರಿಯೆ ನಾಗಶಯನ ನಿಮ್ಮ ನಾಮವೆಂಬುದು ಅರಿಯೆ ಕೃಪೆತೋರಿ ರಕ್ಷಿಸಯ್ಯಾ ಹರಿಯೆ 4 ಸಕಲಾವು ನೀನೆಂದು ಸಾರುವ ಧರೆಯಾ ಭಕ್ತವತ್ಸಲನೆಂಬ ಬಿರುದು ನಿಂದರಿಯಾ ಅಕಳಂಕ ಮಹಿಮ `ಹೊನ್ನವಿಠ್ಠಲನೆ’ ಪ್ರೀಯಾ ಮುಕುತಿದಾಯಕ ಆಲಸ್ಯನಾದವನ ಪೊರೆಯಾ 5
--------------
ಹೆನ್ನೆರಂಗದಾಸರು
(3) ರಂಗನಬೆಟ್ಟ(ಸೋಲೂರು ಸಮೀಪ)ರಂಗನಾಥ ತಟ್ಟೇಕೆರೆಯಾ ರಂಗಾ ಜಯ ಮಂಗಳಾಂಗ ಪ ಪಾದ ಭಂಗ ಅ.ಪ ಲಕ್ಷ್ಮೀನಾಯಕ ಭಕ್ತವೃಂದ ರಕ್ಷಕ ಶಕ್ತ ರಕ್ಷಿಸು ಕಮಲಾಕ್ಷ ಕರುಣಾಕಟಾಕ್ಷ 1 ಪತಿತ ಪಾವನ ಪುಣ್ಯಧಾಮ ಮಹಿತಮಾನ್ಯ ಶ್ರುತಿನುತ ಗುಣಭೂಷಾ ಭವನಾಶಾ 2 ಗಾಂಗೇಯನುತನಾಮ ಹಿಂಗದೆನ್ನಲಿ ಪ್ರೇಮ ಸಾಂಗವೇದಸ್ತೋಮ ಸುತ್ರಾಮಾ 3 ಸುರಮುನಿವಂದ್ಯ ಭಾಗವತರ ವೃಂದ ಕರಿರಾಜ ಪರಿಪೋಷಾ ಹೆಜ್ಜಾಜೀಶ 4
--------------
ಶಾಮಶರ್ಮರು
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಆ) ಆತ್ಮನಿವೇದನಾ ಕೃತಿಗಳು ಪರಿ ಪ ನೊಂದಮನವ ನೋಯಿಸದೆ ಹರಸು ಬೇಗ ಶ್ರೀಹರಿ ಅ.ಪ ನನ್ನ ಹೃದಯ ವೀಣೆಯೇಕೊ ಇನ್ನೂ ನಿನಗೆ ಕೆಳಿಸದೆ ಸನ್ನುತ ವೀಣೆ ನುಡಿಸಿ ನುಡಿಸಿ ಸೋತೆ ನಿನ್ನ ಕಾಣದೆ 1 ನೋಡೆ ಇರದ ನಿನ್ನ ರೂಪ ಮನದಲೇಗೊ ನಿಂತಿದೆ ಹಾಡಿ ಹಾಡಿ ಮಧುರಗೀತೆ ಆ ನೆನಪಿನಲ್ಲೆ ದಣಿದಿಹೆ 2 ನೀ ಕರುಣಿಸಿದೆ ವಿಶ್ವರೂಪವನು ಕಂಡಳಾ ಯಶೋದೆ ಬ್ರಹ್ಮಾಂಡವನು 3 ನಂಬಿ ನಿನ್ನನೆ ಭಜಿಸುತಲಿದ್ದ ಭಕ್ತ ಸುಧಾಮನ ರಕ್ಷಿಸಿದಾತನೆ ಸಲಹು ಜಾಜಿಪುರೀಶ ಚೆನ್ನಕೇಶವನೆ 4
--------------
ನಾರಾಯಣಶರ್ಮರು
(ಉ) ಲೋಕನೀತಿ ಕುರಿತ ಕೀರ್ತನೆಗಳು ಏಳಿಸು ನಂಜನನೂ ಬೇಗದೊಳೇಳಿಸು ನಂಜನನೂ ಬಾಳುವ ಮಗನನು ಕೋಳುವಿಡಿದುದು ಯಮನ ನಾಳಿದೊಡೆಯ ವೇಲಾಪುರದರಸಾ ಪ ಪತಿಯನು ನೀಗಿದ ಸತಿಮಾದಮ್ಮನು ಸುತನಿಂ ಬದುಕುವೆನೆಂದೀ ಊರೊಳು ಅತಿ ತಿರಿತಂದೋವುತಲಿದ್ದಳು ಸುತ ಅಚ್ಯುತ ಸಲಹಯ್ಯಾ 1 ಉರಿಯೊಳು ಬಿದ್ದಂತೊರಲಿ ಪೊರಲಿ ವೋ ಹರಿ ಹರಿ ಹರಿ ಯೆಂದುರುಳಿ ಬಡಿದುಕೊಳ್ಳೇ ದುರಿಯಶ ವೊಡೆಯಗೆ ಬರುವುದೆಂದು ನರ ಹರಿ ರಕ್ಷಿಪನೆಂದೊರೆದೆನು ಹರಿಯೆ 2 ಸತ್ತಮಗನ ನೀ ತಂದಿತ್ತುದಿಲ್ಲವೇ ಹೇ ಕತರ್ುೃವೆ ಸಾಂದೀಪೋತ್ತಮನಿಗೆ ಅಂದು ಉತ್ತರೆಯೊಡಲೊಳು ಅತ್ತು ಶಿಶುವು ಸಾ ವುತ್ತಿರಲುಳುಹಿದೆ ಚಿತ್ತಜನಯ್ಯಾ 3 ಇರಿದಪಮೃತ್ಯು ಪೊತ್ತಿರಿದಪವಾದವು ಉರುಳಿದೆ ನೋಡುತ್ತಿರುವರೆ ಸುಮ್ಮನೆ ಅರಿಯದಂತಿರ್ದಡೆ ಪರಿಪಾಲಿಪರಾರು ವರಮೃತ್ಯುಂಜಯ ಕರುಣಾಕರನೇ 4 ಮರಣವನೈದಿದ ತರಳ ನಂಜುಂಡನ ಕರುಣಿಸದಿರ್ದಡೆ ಶಿರವನರಿದು ನಾ ಚರಣದೊಳಿಡುವೆನು ದುರಿತಬಾಹುದು ನಿನ ಗರಿಯದೆ ವೈಕುಂಠವಿಠಲ ಚೆನ್ನಿಗನೇ 5
--------------
ಬೇಲೂರು ವೈಕುಂಠದಾಸರು
(ಏ) ವಿಶೇಷ ಸಂದರ್ಭದ ಹಾಡುಗಳು ಬರಗಾಲ ಮತ್ತು ಯುದ್ಧವನ್ನು ಕುರಿತು ನಿರ್ದಯನಾಗಬೇಡವೋ ಭಗವಂತ ದುರ್ದಿನ ದೂರಮಾಡೋ ದೇಶಕ್ಕೆ ಪ್ರಶಾಂತ ಪ ಮಳೆಗಾಲ ಮರೆತುಹೋಗಿ ಬೇಸಗೆ ಬೆಳೆದು ಬಂದು ನೆಲವೆಲ್ಲ ದುರ್ಭಿಕ್ಷ ತಾಂಡವವಾಡುತಿದೇ 1 ಕೆರೆಕಟ್ಟೆತೊರೆಭಾವಿ ಹೊಳೆಯಲ್ಲಿ ನೀರಿಲ್ಲ ಧರೆಯಲ್ಲಿ ತೃಣವಿಲ್ಲ ಬರಿಗಾಡಾಯ್ತೋ 2 ಹೊಲಗದ್ದೆ ತೋಟಗಳ ಬೆಳೆಯೆಲ್ಲ ಒಣಗಿತು ಫಲವಿಲ್ಲ ಜನವೆಲ್ಲ ಗೋಳಾಡುತಿಹರೋ 3 ಅನ್ನಾಹಾರಗಳಿಲ್ಲ ಗೋಗಳಿಗೆ ಗ್ರಾಸವಿಲ್ಲ ಚಿನ್ನದಂಥ ಮಕ್ಕಳೆಲ್ಲ ಉಣಿಸಿಲ್ಲದಿಹರೋ4 ಧನಿಕರ್ಗೆ ಧನದಾಸೆ ಬಡವರ್ಗೆ ಕೂಳಿಲ್ಲ ದಿನಕಳೆವುದು ಕಷ್ಟವಾಗಿ ಬರಗಾಲ ಬಂತೋ 5 ಕಳವು ಕೊಲೆಯು ದಂಗೆ ದಾರಿದರೋಡೆಯು ಉಳಿಗಾಲ ಬರಲಿಲ್ಲ ಯುದ್ಧದ ಭಯವು6 ಒಂದೊಂಬತ್ತಾರೈದು ಹತ್ತು ಹನ್ನೊಂದರ ಮಧ್ಯೆ ಬಂದು ಜಗದ ಕುತ್ತು ಕತ್ತಿಯಂತೆ ಕಂಡಿತು 7 ಬೆಳಗುಪೂರ್ವ ಆಶ್ವಿಜ ಕಾರ್ತಿಕದೆ ಧೂಮಕೇತು ಇಳೆಗಂಡಕಳೆ ಯಮದ್ವಾರವ ಮುಚ್ಚಿ 8 ಅವಿಶ್ವಾಸದ ವಿಶ್ವವಸುವ ಪರಾಭವದಿಂ ಪ್ರೀತಿತೋರಿ ಭಂಗ ಹರಿಸೋ 9 ಪಾಕಿ-ಚೀನಾ ಪತನಗೈದು ಜೋಕೆಯಿಂ ಭಾರತವ ರಕ್ಷಿಸಿ ಲೋಕಕ್ಕೆ ಕ್ಷಾಮಹರಿಸಿ ಕ್ಷೇಮಕೊಟ್ಟು ಪೊರೆಯೋ10 ನಗೆಯಿಲ್ಲ ಸಂತೋಷ ಸುದ್ಧಿ ಕೇಳುತಲಿಲ್ಲ ಮಿಗಿಲಾಗಿ ಜನರೆಲ್ಲ ಸೊರಗಿ ಸುತ್ತುವರೋ11 ಕನ್ನಡದ ನಾಡಿಗೆ ಹೊನ್ನಿನ ಬಿರುದಿದೆ ಖಿನ್ನತೆ ತಾರದೆ ಉನ್ನತಿ ಕಾಪಾಡು 12 ಮುಂದೆಮಗೆ ಗತಿಯೇನು ಬಾಳುವಬಗೆಯೆಂತು ಬಂಧು ನೀನಿದ್ದುಕೊಂಡು ಅನ್ಯಾಯವಾಗಿದೆ13 ತಂದೆ ತಾಯಿಯು ನೀನು ಹೊಂದಿದ ಬಳಗ ನೀನು ಕುಂದಿಲ್ಲದೆಮ್ಮನ್ನು ಕಾವ ಪ್ರಭು ನೀನು 14 ಸುವೃಷ್ಟಿ ಸಸ್ಯವೃದ್ಧಿ ಜೀವನ ಸಮೃದ್ಧಿಯು ಸುವೃತ್ತಿ ಕರುಣಿಸಿ ಪೊರೆ ಜಾಜಿಶ್ರೀಶ 15
--------------
ಶಾಮಶರ್ಮರು
(ಚಿಂತಾಮಣಿಯ ನರಸಿಂಹದೇವರು) ಚಿಂತಾಮಣಿ ನರಸಿಂಹನ ನೆನೆದರೆ ಚಿಂತಿತ ಫಲವೀವನು ಭ್ರಾಂತ ಬುದ್ಧಿಯೊಳನ್ಯ ದೈವವ ಭಜಿಸದೆ ಕಂತು ಜನಕ ಲಕ್ಷ್ಮೀಕಾಂತನ ನೆರೆನಂಬು ಪ. ಜಲಜ ಸಂಭವ ಶಂಭು ಬಲವೈರಿ ಮುಖದೇವ- ರ್ಕಳನೆಲ್ಲ ಸುಲಭದಿ ಸಲಹುವ ದೊರೆಯು ಕಲಿಕೃತ ಮಲವನ್ನು ಕಳವನು ನಿರತ ಬೆಂ ಬಲವಾಗಿ ದುರಿತಾಳಿಗಳ ಓಡಿಸುವನು ಕಳೆಯ ಪುರದಲಿ ನೆಲೆಯದೋರುವ ಚೆಲುವ ಲಕ್ಷ್ಮೀನಿಲಯ ಮೂರುತಿ ಯೋಗಿನಿಗಣ ಭಯಕ್ಕಾಗಿ ಸಂಸ್ತುತಿವೇದ 1 ನಾಗಭೂಷಣ ನಮ್ಮುದಾಗಿ ರಕ್ಷಿಸೀದ ವಾಗೀಶ ಪದಯೋಗ್ಯನಾಗಿ ಭೂಮಿಗೆ ಬಂದ ಯೋಗೀಶ ವಾದಿರಾಜರಿಗೊಲಿದನಾ ಬೇಗದಲಿ ಭಕ್ತಾಳಿ ರಕ್ಷಣ- ರಾಗಿಯೆನಿಪ ವಿರಾಗಿ ಹೃದ್ಗತ 2 ಶಂಖಾರಿ ಪದ್ಮ ಗದಾಧರ ನಿಜ ಜನ ಶಂಕಾನಿವಾರ ಶಂಕರ ವರದಾ ಲಿಂಗ ಸುಲಾಲಿತ ಪ್ರಲ್ಹಾದ ರಮಾಕುಚ ಕುಂಕುಮಲಿಪ್ತಾ ವಕ್ಷೋವೀವರ ಶಂಕಿಸದೆ ಸಕಲಾರ್ಥವೀವ ಮೃ- ಮಾಧವ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಣ್ಯತೀರ್ಥರು) ಬ್ರಹ್ಮಣ್ಯತೀರ್ಥರ ಚರಣಾಬ್ಜಯುಗ್ಮವ ಸಂಭ್ರಮದಲಿ ಸೇವಿಪೆ ಪ ಅಂಬುಜಬಂಧು ಸನ್ನಿಭಸಾಧುವೆನುತ ಶ್ರೀ ಕುಂಭಿಣಿ ಮುನಿವರ್ಯರಾ ಆರ್ಯರಾ ಅ.ಪ. ತಿದ್ದಿದ ಶ್ರೀಪುಂಡ್ರ ಮುದ್ರೆಗಳಿಂದಲಿ ಸಂ- ಶುದ್ಧಿ ಮಂಗಳಗಾತ್ರರ ರುದ್ರಗಳೊಲಿದು ಸದ್ವಿದ್ಯೆಗಳನಿತ್ತು ಉದ್ಧಾರ ಮಾಡಲೆಂದೂ ನಾ ಬಂದೂ 1 ಶಿಷ್ಯರುಗಳು ತಂದ ಭಿಕ್ಷಾನ್ನಂಗಳನಂದು ಆಕ್ಷಣ ಮಂತ್ರದಿಂದ ತÀಕ್ಷಣ ಕಲ್ಪಸಿದಂತೆ ಗೈದಾ ಧೀರ ರÀಕ್ಷಿಸೆಂದೆರಗುವೆ ನಾ ಬೇಡುವೆ 2 ಕಾಂತೆಯೋರ್ವಳು ತನ್ನ ಕಾಂತ ಸ್ವರ್ಗವನೈದೆ ಚಿಂತಿಸುತತಿ ಶೋಕದಿ ಕಾಂತೆ ವಂದಿಸಲು ಸೌಮಾಂಗಲ್ಯವರವನಿತ್ತು ಕಾಂತನ ರಕ್ಷಿಸಿದ ಕೋವಿದರಾದ 3 ಕುಂದದೆ ಸನ್ಮುನಿವೃಂದದೊಡನೆ ಬಹು ವೃಂದಾವನದಿ ಶೋಭಿಪ ಇಂದಿರೆಯರಸ ನರಸಿಂಹವಿಠ್ಠಲನ ಸನ್ನಿಧಿವರ ಪಾತ್ರರಾ ಪೂತಾತ್ಮರಾ 4
--------------
ನರಸಿಂಹವಿಠಲರು
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಭೀಮನಕಟ್ಟೆ ಶ್ರೀರಾಮ) ಅಚ್ಯುತಪ್ರೇಕ್ಷ ಕರಾರ್ಚಿತ ರಾಮ ರಕ್ಷಿಸು ಚಂದನಚಾರ್ಚಿತ ರಾಮ ಪ. ದಾಸಾಗ್ರಣಿ ಭೀಮಸೇನನ ಮನ ದಾಸೆ ಪೂರಿಪೆನೆಂದು ಬಂದಿಲ್ಲಿ ವಾಸವಾಗಿಹೆ ತುಂಗಾ ತೀರದಿ ಜಾನ ಕೀಶ ನಿನ್ನನು ಕಂಡೆ ಮೋದದಿ 1 ಶ್ರೀ ರಾಮದುರಿತಾಬ್ಧಿವಾರಣ ಹಾದಿ ದೋರೊ ಮುಂದಕೆ ಫಲಪೂರಣ 2 ಕೀಶಗೆ ಕಪಿರಾಜ್ಯ ಕೊಡಿಸಿದಿ ವಿ- ಭೀಷಣನನು ತೋಷಗೊಳಿಸಿದಿ ಶೇಷಾದ್ರಿ ಶಿಖರದಿ ನಿಲಿಸಿದಿ ನೀನೆ ಪೋಷಿಪನೆಂದಿಗು ನಿರುತದಿ 3
--------------
ತುಪಾಕಿ ವೆಂಕಟರಮಣಾಚಾರ್ಯ