ಒಟ್ಟು 31 ಕಡೆಗಳಲ್ಲಿ , 15 ದಾಸರು , 28 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ ಪ ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ 1 ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2 ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3 ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ 4 ವರಧೀರ ಹನುಮೇಶವಿಠಲನಾ ನಿಜದಾಸಾ ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5
--------------
ಹನುಮೇಶವಿಠಲ
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಧವವೇರಿದ ಚಂದ್ರಾ ರಾಘವೇಂದ್ರನೋಡು ಪಾಡು ಕುಣಿದಾಡಿ ಭಜನೆಮಾಡುಬೇಡಿದ ವರವ ಕೊಡುವಾ ಪಖಂಬದಿ ನರಹರಿ ಬರಿಸಿದ ಕಂಡಾಕುಂಭಿಣಿಪತಿ ಕುಹಯೋಗವ ಕಳೆದಾನಂಬಿದವರ ಪೊರೆವಾ 1ಆದ್ಯ ಸತ್ಯಾಗ್ರ' ಭಕ್ತ ಶಿರೋಮಣಿಉದ್ಗ್ರಂಥಗಳನು ರಚಿಸಿದ ದಿನಮಣಿಮಧ್ವಮತೋದ್ಧಾರಾ2ಭೂಪತಿ - 'ಠ್ಠಲಗೆ ಪ್ರೀತಿ 'ಖ್ಯಾತಾಆಪದ್ಬಾಂಧವ ಅನಾಥನಾಥಾರಥೋತ್ಸವದಿ ಮೆರೆವಾ 3
--------------
ಭೂಪತಿ ವಿಠಲರು
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಘವೇಂದ್ರನೆಂದು ನುಡಿದವರಿಗೆ | ಅನುರಾಗದಿಸಲಹುವರಾ ಯೋಗಿ ಶ್ರೀ ರಾಘವೇಂದ್ರರಾಯಾ ಪ ರಾಮಧ್ಯಾನವನು ಮಾಡುತಲನುದಿನ | ಜಯಿಸಿದಿ ರಾಕ್ಷಸರಾ ರಾಯರಾವ್ಯಾಧಿಗಳಳಿದು ಸೇವಾ ಕೊಡುತಿಹರಾ ರಮಾವಲ್ಲಭನಾಶ್ರಯ ಮಾಡಿ | ರಾಜ್ಯವಾಳಿದರೆ ರಾಘವೇಂದ್ರ 1 ಘಾತುಕ ದನುಜನ ಕಾಲವಿದೆಂದು ಎಣಿಸದೆ ಕಲಿಯುಗ ಘನ ಪರಾಕ್ರಮದಿಂದ ಮೆರೆಯುವಿ | ಸುಯತೀಂದ್ರ ನೀ ಘನ ಜಾಡ್ಯಗಳ ಕಳೆದು ಜನರಿಗೆ ಸುರಿಸಿದಿ ಸುಖಮೇಘ ಘಾ ಬುರಿಯಿಂದಲಿ ಬಂದ ಆತುರರಿಗೆ ಕಳದಿರೊ ನೀ ಅಘವಾ 2 ವೇದಶಾಸ್ತ್ರ ಪಾರಾಯಣ ಮಾಡುತ | ವೃಂದಾವನ ದೊಳಿರುವೇ ವ್ಯಥೆಯಿಂದಲಿ ಬಂದಾ ತುರರಿಗೆ | ಅತಿಸುಖವನು ಸುರಿವೇ ವೇದವ್ಯಾಸರು ಮೊದಲಾದರೊಳು | ಆಧಾರದೊಲಿರುವೇ ವೇಷತಾಳಿ ನೀ ಯತಿಯಾಗಿ ಈ ಜಗದೊಳುನೀ ಮೆರೆವೆ 3 ಬಿಡುವೆನುರಾಘವೇಂದ್ರಾ ಮತ್ಸ್ಯ ದ್ರಾಕ್ಷಾಫಲದಂತೆ ಮಧುರವು ತೋರಿಸಲಹೊಗುಣಸಾಂದ್ರಾ ದ್ರವ್ಯ ಪತಿಸಿರಿ ನರಸಿಂಹ ವಿಠಲನ ತೋರೋದಯದಿಂದ ನೀರಾಘವೇಂದ್ರಾ 4
--------------
ಓರಬಾಯಿ ಲಕ್ಷ್ಮೀದೇವಮ್ಮ
ಶ್ರೀ ರಾಘವೇಂದ್ರರು ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ರಾಘವೇಂದ್ರನ ಕಂಡಿರೇನಮ್ಮ ಪ ಅಮ್ಮಾ ನಿಮ್ಮ ಮನೆಗಳಲ್ಲಿ ನಮ್ಮ ಗುರುಗಳ ಕಂಡಿರೇನಮ್ಮ ಅ.ಪ. ಕಾಲಲಿ ಕಡಾಂವಿಗಿ ಕರದಲ್ಲಿ ದಂಡಕಾಷ್ಟಾ ಮೈಯೊಳು ಕಾವಿಶಾಟಿ ಪೊತ್ತಿರುವರಮ್ಮ ಬಂದ ಬಂದ ಜನರಿಗೆಲ್ಲ ಆನಂದ ನೀಡುತ ಛಂದಾಗಿ ತಾಂವು ಇಲ್ಲಿ ಇರುತಿಹರಮ್ಮ 1 ಬಂದ ಬಂದ ಜನರಿಗೆ ಅಭೀಷ್ಟವ ನೀಡುತ ಛಂದಾಗಿ ಅಭಯವ ನೀಡುತಿಹರಮ್ಮ ಒಂದಿನ ಸ್ವಪ್ನದಿ ಫಲಮಂತ್ರಾಕ್ಷತೆ ಕೊಡುತಲಿ ಅಂದಿನ ಆನಂದನ ಕಾಣಮ್ಮ 2 ಬಂದ ಬಂದ ಜನರು ಪ್ರದಕ್ಷಿಣೆ ನಮಸ್ಕಾರ ತಾಂವ ದಿಂಡು ಉರುಳುವರಮ್ಮಾ ಬಂದ ಬಂದ ಜನರಿಗೆಲ್ಲಾ ಅಭಯವ ನೀಡುತ ತಾಂವ ತುಂಗಾ ತಟದೊಳು ಇರುತಿಹರಮ್ಮಾ 3 ಮೈಯೊಳು ಕೇಸರಿಗಂಧಾ ಪೋಷಿಸಿದಾರಮ್ಮಾ ಎದುರಲಿ ಶ್ರೀ ಕೃಷ್ಣನ ಪೂಜಿಪರಮ್ಮಾ ಢಾಳ ಅಕ್ಷಂತಿ ತಿದ್ದಿದ ಅಂಗಾರವು ಮುದ್ರಿಯು ತಾಂವ್ ಧರಿಸಿಹರಮ್ಮ 4 ಕರದಲಿ ಜಪಮಾಲೆ ಕೊರಳಲಿ ಕಮಲಾಕ್ಷಿ ತಾವ್ ಧರಿಸಿಹರಮ್ಮಾ ಬಿಡದೆ ನಿರಂತರ ನರಸಿಂಹವಿಠಲನ ಜಪಿಸುತ ತಾಂವರಿಂದಾವನದೊಳ್ ಇರುಹರಮ್ಮಾ 5
--------------
ನರಸಿಂಹವಿಠಲರು
ಶ್ರೀ ರಾಘವೇಂದ್ರರು ದಿನಕರನುದಿಸಿದನು ಧರೆಯೊಳಗೆದಿನಕರನುದಿಸಿದನು ದಾನವ ಕುಲದಲಿ ಕ್ಷೋಣಿಯೊಳಗೆ ಪ ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ 1 ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ 2 ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ 3
--------------
ಐಹೊಳೆ ವೆಂಕಟೇಶ
ಶ್ರೀ ರಾಘವೇಂದ್ರರು ಯೋಗಿ ಕುಲವರ ಮಕುಟ ಗುರು ಶ್ರೀರಾಘವೇಂದ್ರನ ಭಜಿಸಿರೋ ಪ ಮೋದತೀರ್ಥ ಪಯೋಧಿ ಚಂದಿರಸಾಧುಜನ ಸತ್ಕುಮುದಕೇಐದು ಆನನವಾಗಿಹನು ದು ರ್ವಾದಿ ಗಜಸಮುದಾಯರೇ 1 ದೂಷಿಸುವ ಜನರುಗಳ ಗರ್ವ ಅಶೇಷ ಪರಿಹಾರಗೈಸುವಾ 2 ದಿನಪನಂದದಿ ಕಾಂತಿಬೃಂದಾ ಬನದೊಳಿದ್ದು ಪ್ರಕಾಶವಾಅಣುಗರಿಗೆ ಸಂತೃಪ್ತಿ ಸುಖವನುಅನವರತ ಪೂರೈಸುವಾ 3 ವ್ಯಾಕ್ತರಾಗಿಹ ಅಖಿಳರಿಗೆ ಫಲಪ್ರಾಪ್ತಿಗೋಸುಗ ಚರಿಸುವಾ 4 ಆಪ್ತರಿಲ್ಲದೆ ಈತನೇಯೆನಗಾಪ್ತನನುದಿನವಾಗುವಾ 5 ಕೋಲ ತನಯೆಯ ತೀರದಲಿ ಹೊ-ನ್ನಾಳಿಯಲಿ ವಿಹರಿಸುವಾಶೀಲ ಗೋಪತಿವಿಠಲನ ಕೃಪೆಗಾಲಯನು ಯೆಂದೆನಿಸುವಾ6
--------------
ಗೋಪತಿವಿಠಲರು
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸುರಪನಾಲಯದಂತೆ ಮಂತ್ರಾಲಯ ಕರೆಸುವುದು ಕಂಗೊಳಿಸುವುದು ನೋಳ್ಪ ಜನಕೆ ಪ ಕಾಮಧೇನುವಿನಂತೆ ಇಪ್ಪ ಗುರುವರ ಸಾರ್ವ ಭೌಮ ಸುಧೀಯೀಂದ್ರಸುತ ರಾಘವೇಂದ್ರ ಆಮಯಾಧಿಪ ಖಳತಮಿಶ್ರ ಓಡಿಸುವ ಚಿಂ ತಾಮಣಿ ಪ್ರಕಾಶದಂತಿಪ್ಪ ವೃಂದಾವನದಿ 1 ಸುರತರುವಿನಂತಿಪ್ಪ ಕೀರ್ತಿ ಸಚ್ಚಾಯಾಶ್ರಿ ತರ ಮನೋರಥಗಳನು ಪೂರೈಸುವಾ ಧರಣಿಸುರಾಖ್ಯ ಷಟ್ಟದಗಳಿಗೆ ಸತ್ಯದಾ ಪರಿಮಳದಿ ತೃಪ್ತಿಬಡಿಸುವ ಮರುತನಂತೆ 2 ವಾರಾಹಿ ಎಂಬ ನಂದನ ವನದಿ ಜನರತಿ ವಿ ಹಾರ ಮಾಳ್ಪರು ಸ್ನಾನಪಾನದಿಂದಾ ಶ್ರೀ ರಾಘವೇಂದ್ರನಿಲ್ಲಿಪ್ಪ ಕಾರಣ ಪರಮ ಕಾರುಣ್ಯ ನಿಧಿ ಜಗನ್ನಾಥ ವಿಠಲನಿಹನು 3
--------------
ಜಗನ್ನಾಥದಾಸರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು