ಒಟ್ಟು 35 ಕಡೆಗಳಲ್ಲಿ , 18 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾಲೆಯಾದಾನು ಬಲಭೀಮ ಪ ಬಾಲೇಂದು ಮುಖ ಸೋಲಿಪ ವದನದಿಂದೊಪ್ಪುತಅ.ಪ. ಸೊಲ್ಲು ಸೊಲ್ಲಿಗೆ ಬಲು ಕಳವಳಿಸುವನಾ ತರುಣಿ ದ್ರೌಪದಿ ತಾ ತಾಳದೆ ತನ್ನೊಳು ತಿಳುಪಿದಳು ಪತಿಯೊಡನೆಕೇಳಿದ ಮಾತ್ರದಿ ಸೀಳುವೆನೆನುತಲಿ ಕೋಪದಿಂದೊಮ್ಮೆಗೆ 1 ಸನ್ನುತ ಶಶಿಮುಖಯೆಂಬೋದು ಸರಿಯಾ-ಶ್ವಾಸನ ಸತಿಯಳ ಸರಸಾಟ ಸಹಿಸದೆ ಮೀಸೆಯ ತಿರುವುತ ಸಾರಿ ಸರಿ ಯಾರೆನ್ನುತ ಸತಿಯಾಗಿರು ಸುಖಸತಿಯಳ ಮಾಡಿ ನಿನ್ನಾಳುವೆನೆಂಬೋದು ಕೇಳಿ ಭರದಿ 2 ಸುಮಶರ ಶೋಷಕೆ ಹಿಮಕರ ವ್ಯಾಪಿಸಿ ಹರುಷವಗೊಳುತಾ ಸರಸಿಜಮುಖಿಯೆಂದು ಸರಸರ ಸಾಗಲು ಶಿರದೊಳು ಚರಣವ ಸೇರಿಸಿದಾ ಶಾಮರೂಪ ತಂದೆವರದಗೋಪಾಲವಿಠ್ಠಲನ ಸ್ಮರಿಸುತ 3
--------------
ತಂದೆವರದಗೋಪಾಲವಿಠಲರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ರಾಘವೇಂದ್ರ ರಾಯರಡಿಗೆ ಬಾಗಿ ನಮಿಸಿರೊ ನೀಗಿ ಭವದ ಬಂಧದಿಂದ ಮುಕ್ತರಾಗಿರೊ ಪ ಶಂಕೆಯಿಲ್ಲದೆ ವರಗಳ ಕೊಟ್ಟು ಚಿಂತೆ ಹರಿಸುವರ ಕಂತುಪಿತನ ಭಕ್ತರಿಗೆ ನಿರಂತರ ಸಂತಸ ನೀಡುವರ ಪಂಕಜನಾಭನ ಕಿಂಕರರ ಭಯ ಚಿಂತೆಯ ನೀಗುವರ ಶಂಖು ಕರ್ನರಿವರೆನ್ನುತ ಅಭಯದ ಕಂಕಣ ಕಟ್ಟಿಹರ 1 ಹಾಟಕಶ್ಯಪುತ್ರನು ವಿನಯದಿ ಪ್ರಾರ್ಥಿಸಿ ಪೂಜಿಸಿದ ಮಾಟಮುಖದ ದೇವನ ಪಾದಾಂಬುಜ ಧ್ಯಾನಿಸಿ ಸೇವಿಸಿದ ಕೋಟಲೆ ಭವದೊಳು ತಾಪವ ಪಡುವರ ಆಪದ ಪರಿಹರಿಸಿ ಭ- ವಾಟವಿದಾಟಿಸಿ ಪೊರೆದ ಪ್ರಹ್ಲಾದರ ಉಲ್ಲಾಸದಿ ಭಜಿಸಿರಿ2 ವ್ಯಾಸರಾಯರೆಂದು ಜಗದಿ ಪ್ರಖ್ಯಾತಿ ಪಡೆದವರ ದೇಶ ದೇಶದ ಭಕುತರ ಉಲ್ಲಾಸ ಕೊಡುವರ ಶ್ರೀ ಸುಧೀಂದ್ರಾರ್ಯರ ಪುತ್ರರೆನಿಸಿಕೊಂಬರ ಕ್ಲೇಶಗಳನೆ ಕಳೆವರೆಂಬ ಕೀರ್ತಿಪಡೆದರ3 ಕಂಗೊಳಿಪ ಕೋರೆಯಿಂದ ಬಂದ ಭದ್ರೆಯ ತೀರದಿ ಚಂದದಿಂದ ಮೆರೆವ ರಾಘ- ವೇಂದ್ರ ರಾಯರ ಕೊಂಡಾಡಿ ಪಾಡಿರೊ ಮನಕೆ ಸಂಭ್ರಮ ನೀಡುವರು ಪೊಂದಿದ ಪಾಪಗಳೆಲ್ಲವ ನೀಗಿಸಿ ಚಂದದಿ ಸಲಹುವರು 4 ಕರುಣದಿಂದ ಭಕ್ತರನೆಲ್ಲ ಸಲಹುತಿರ್ಪರ ಕಮಲನಾಭ ವಿಠ್ಠಲನಂಘ್ರಿ ಭಜನೆ ಮಾಳ್ಪರ ಕನಕಮಯದ ಮಂಟಪದಲಿ ಮರೆಯುತಿರ್ಪರ ಕರೆದು ಪ್ರಾರ್ಥಿಸುವವರ ಮನಕೆಹರುಷ ತೋರ್ಪರ 5
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ಶ್ರೀ ಪಾದರಾಜರ ಶ್ರೀ ಪಾದಾರ್ಚನೆ ಮಾಳ್ಪ- ರೀ ಪೃಥುವಿಯೊಳು ಧನ್ಯರು ಪ ಗೋಪಿನಾಥ ಪದಾಬ್ಜ ಮಧುಪ ದ- ಯಾ ಪಯೋನಿಧಿ ಸುಜನರಂತಃ- ಸ್ತಾಪಹಾರಕ ಗೋಪ ಸಕಲ ಕ- ಲಾಪವಿದ ತಾಪತ್ರಯಾಪಹ ಅ.ಪ. ಊರೆಲ್ಲಿ ತೋರೆಷ್ಟು ದೂರದಲ್ಲಿಹುದೆಂದು ಹೀರ ವರ್ಣರು ಬಂದು ಕೇಳಲು ತೋರಿ ತುರುಗಳ ಗತಿಯ ಸೂರ್ಯನ ತೋರಿ ತಮ್ಮಯ ಪೋರ ವಯಸನು ಸೂರಿಗಳೇ ನೀವರಿಯರೆನ್ನುತ ಚಾರು ಉತ್ತರವಿತ್ತ ಧೀರರ 1 ಭೂದೇವನನು ಕೊಂದು ಬಾಧೆಗಾರದೆ ನೃಪ ತಾ ದೈನ್ಯದಲಿ ನಿಂದು ಬೇಡಲು ಪಾದ ಪದ್ಮಾ- ರಾಧನೆಯ ತೀರ್ಥವನು ಪ್ರೋಕ್ಷಿಸಿ ಆದರದಲೀಕ್ಷಿಸುತ ಭೂಪನ ಕಾದ ಕಾಂಚನದಂತೆ ಮಾಡಿದ 2 ಶಂಕಿಸಿ ದ್ವಿಜವೃಂದ ಆತಂಕಗೊಳ್ಳುತಲಿರೆ ಮಂಕುಗಳಾ ಡೊಂಕು ತಿದ್ದಲು ಬಿಂಕದಲಿ ತರಿಸಿ ಗೇರೆಣ್ಣೆ ಪಂಕದೊಳಗದ್ದಿರುವ ವಸ್ತ್ರಕೆ ಕಲುಷ ಹಾರಿಸಿ ಕಿಂಕರ ಮನಶಂಕೆ ಬಿಡಿಸಿದ 3 ಹರಿಗರ್ಪಿಸಿದ ನಾನಾ ಪರಿಯ ಶಾಖವ ಭುಂಜಿಸೆ ನರರು ತಾವರಿಯದೆ ಜರಿಯುತ್ತಿರೆ ಹರುಷದಿಂದಲಿ ಹಸಿಯ ವಸ್ತುಗ- ಳಿರವ ತೋರಿಸಿ ಮರುಳ ನೀಗಿಸಿ ಶರಣು ಶರಣೆನಲವರ ಪಾಲಿಸಿ ಮೆರೆದ ಬಹು ಗಂಭೀರ ಗುರುವರ 4 ಘೋರಾರಣ್ಯದಿ ದಿವ್ಯ ಕಾಸಾರ ನಿರ್ಮಿಸಿ ನಾರಸಿಂಹನ ನೆಲಸಿ ಊರು ಮಂದಿಯು ನೋಡುತಿರಲಾ- ವಾರಿ ಮಧ್ಯದಿ ಬಂದ ಗಂಗೆಗೆ ಸೀರೆ ಕುಪ್ಪಸ ಬಾಗಿನಂಗಳ ಧಾರೆಯೆರೆದಪಾರ ಮಹಿಮರ 5 ಫಣಿ ಬಂಧ ನಿವಾರಿಸಿ ಭಾಷಿಸಿ ಫಣಿಪನ್ನ ತೋಷಿಸಿ ಕಾಶಿ ಗಯಾ ಶ್ರೀ ಮುಷ್ಣದ್ವಾರಕ ಶೇಷಗಿರಿ ಮೊದಲಾದ ಪುಣ್ಯ ಪ್ರ- ದೇಶಗಳ ಸಂಚರಿಸಿ ಭಕ್ತರ ದೋಷರಾಶಿಯ ನಾಶಗೈಸಿದ 6 ಕಸ್ತೂರಿತಿಲಕ ಶ್ರೀಗಂಧ ಲೇಪನದಿಂದ ನಿತ್ಯ ಮಹೋತ್ಸವಗೊಳುತ ಮುತ್ತಿನಂಗಿಯ ಮೇಲ್ಕುಲಾವಿಯು ರತ್ನ ಕೆತ್ತಿದ ಕರ್ಣಕುಂಡಲ ಬಿತ್ತರದಿ ಧರಿಸುತ್ತ ರಥವನು ಹತ್ತಿ ಬರುತಿಹ ಸ್ತುತ್ಯ ಬಿರುದಿನ 7 ಆರ ಬೃಂದಾವನ ಸೇವೆಯ ಮಾಡಲು ಕ್ರೂರ ಭೂತಗಳೆಲ್ಲ ದೂರವು ಆರ ಬೃಂದಾವನದ ಮೃತ್ತಿಕೆ ನೀರು ಕುಡಿಯಲು ಘೋರಕ್ಷಯ ಅಪ- ಸ್ಮಾರ ಗುಲ್ಮಾದಿಗಳ ಉಪಟಳ ಹಾರಿ ಪೋಪುದು ಆ ಮುನೀಶ್ವರ 8 ಪರವಾದಿಗಳ ಬೆನ್ನುಮುರಿವ ವಜ್ರದ ಡಾಣೆ ಶರಣ ರಕ್ಷಾ ಮಣಿಯೆ ದುರಿತ ತಿಮಿರಕೆ ಮೆರೆವ ದಿನಮಣಿ ಎನಿಸಿ ಪೂರ್ವ ಕವಾಟ ನಾಮಕ ಪುರದ ನರಕೇಸರಿ ಕ್ಷೇತ್ರದಿ ಸ್ಥಿರದಿ ಶ್ರೀ ಕಾಂತನನು ಭಜಿಸುವ 9
--------------
ಲಕ್ಷ್ಮೀನಾರಯಣರಾಯರು
ಶ್ರೀ ಶ್ರೀ ರಾಘವೇಂದ್ರತೀರ್ಥರು ಆನೆಂತು ತುತಿಪೆ ನಿನ್ನ - ಮಂಚಾಲಿ ರನ್ನ ಪ ಆನೆಂತು ತುತಿಪೆ ನಾ - ಮಾನಮೇಯದಿನಿಪುಣಗಾನ ವಿಶಾರದ - ಶ್ರೀನಿವಾಸನ ದೂತ ಅ.ಪ. ಕೃತಯುಗದಲಿ ನೀನು | ದಿತಿಜ ವಂಶದಿ ಬಂದುವಿತತ ವಿಶ್ವಾಧಾರ | ಕೃತಿಪತಿಯ ತುತಿಸಿ ಮುಕುತಿ ಪಥಕೆ ಸತ್ತರ ತಮ ಪಂಚಭೇದಮತಿಯೆ ಸಾರ್ಥಕವೆಂದು | ಹಿತದಿಂದ ಸಾಧಿಸೆಮತಿಭ್ರಾಂತನಾದಂಥ | ದಿತಿಜ ಗುರುವು ತಾನುಖತಿಯಿಂದ ನೋಡುತ್ತಲೀ || ಬಾಲಕರೆಲ್ಲಹತಭಾಗ್ಯರೆನ್ನುತ್ತಲೀ | ನೃಪಗೆ ಪೇಳೆಖತಿ ನಿನ್ನೋಳ್ ತೋರುತ್ತಲೀ | ದಂಡಿಸೆ ನಿನ್ನಪಿತಗೆ ಬುದ್ಧಿಯ ಪೇಳ್ದ | ಅತುಳ ಪರಾಕ್ರಮೀ 1 ಕಡು ವೇಗದಲಿ ಬಂದ | ಶಂಡ ಮರ್ಕನ ಕಳುಹಿಒಡ ಹುಟ್ಟಿದವನನ | ದಾಡೆದಂತಗಳಿಂದಬಿಡದೆ ಶೀಳಿದ ಹರಿಯ | ದೃಢದಿ ಪೂಜಿಪೆ ನೀನುಬಿಡು ಬಿಡು ಈ ಮತಿ | ಮೃಡನೆ ನಮ್ಮಯ ದೇವಪುಡುಕಿ ಆ ಹರಿಯನ್ನೆ | ಖಡುಗದಿಂದಲಿ ಅವನಕಡಿದು ಹಾಕುವೆನೆನ್ನುತ್ತ || ಕರೆದು ನಿನ್ನಕಡು ಭಾಗ್ಯ ಕೋ ಎನ್ನುತ್ತ | ಪೇಳಲು ನೀನುಮಿಡುಕದೆ ಬೇಡೆನ್ನುತ್ತ | ಬುದ್ದಿಯ ಮಾತದೃಢದಿ ಪಿತಗೆ ಪೇಳ್ದೆ | ಬಿಡೆನು ಹರಿಯ ಎನ್ನುತ್ತ 2 ಸಹೋದರಿ | ವರಲಕ್ಷ್ಮಿ ಮಾತೆಯಸ್ಮರಿಸಿ ಜೀವಿಸೆ ಅವನೂ || ರಕ್ಕಸ ನೋಡಿಭರದಿ ಖಡ್ಗವ ಸೆಳೆದೂ | ತೋರೊ ಕಂಬದಿಹರಿಯ ಎಂದು ಒದೆದೂ | ನಿಲ್ಲಲು ಪಿತಗೆನರಹರಿ ರೂಪವ ತೋರ್ದೆ | ಕ್ರೂರನ ಜರಿದೂ 3 ದಿಟ್ಟ ತರಳನ ಸಲಹೆ | ಗಟ್ಟಿ ಕಂಬದಿ ಬರೆಛಟ ಛಟ ಶಬ್ದಾ | ಜಾಂಡ ಕಟಹ ಬಿಚ್ಚೆಕಠಿಣ ಖಳನ ಪಿಡಿದು | ಜಠರವ ಭೇದಿಸಿಹಠದಿ ಕರುಳಿನ ಮಾಲೆ | ಕಂಠದಿ ಧರಿಸುತ್ತತೃಟಿಯು ಬಿಡದೆ ತನ್ನ | ಹಠದಿ ಭಜಿಪನಿನ್ನಸ್ಫುಟದಿ ಕರದೋಳತ್ತಿದ || ಮುದ್ದಿಸಿ ಬಲುದಿಟ ಭಟ ಎನೆ ಎನಿಸೀದ | ಮಗನ ಮಾತುದಿಟವ ಜಗಕೆ ತೋರಿದ | ವೆಂಕಟನ್ನಪಟುತರ ವ್ಯಾಪ್ತಿಯ | ಮಹಿಮೆ ಸ್ಫುಟದಿ ತೋರ್ದ 4 ದಶಶಿರ | ದೂತ ಹನುಮನ್ನವ್ಯಥೆಯ ಪಡಿಸೆ ಪೋಗಲೂ || ಖತಿಯಲಿ ಲಂಕೆಹುತವಹನಿಗೆ ಈಯಲೂ | ವಾತನ ನೀಪ್ರೀತಿಯಲ್ಲಾಶ್ರಯಿಸಲೂ | ಲಂಕೆಯ ಪುರನೀತಿಯಿಂದಲಿ ಆಳ್ದ | ಖ್ಯಾತ ದೂತನೆನಿಸಲೂ 5 ಪಾದ ಭಜಿಸಿದಿ 6 ಶೇಷಾವೇಶದಿ ಪುಟ್ಟಿ | ವ್ಯಾಸ ತೀರ್ಥರಾಗಿಮೀಸಲಾದ ಮತ | ದಾಶಯಗಳನೆಲ್ಲಸೂಸಿ ಪೇಳುತ್ತಲಿ | ಶೇಷಾಚಲದಿ ಶ್ರೀನಿವಾಸನ ದ್ವಾದಶ | ವರ್ಷ ಸೇವಿಸಿ ನೃಪತೀಶನ ಕುಹುಯೋಗ | ಲೇಸಾಗಿ ಕಳೆಯುತಆಶುಗತಿಯ ತತ್ವ ಮತವ || ಸ್ಥಾಪಿಸಿ ಬಲುಮೀಸಲು ತರ್ಕತಾಂಡವ | ನ್ಯಾಯಾಮೃತಭೂಸುರರ್ಗಿತ್ತು ನಾಯಕರ | ಪುರಂದರದಾಸರಾಯರ ಮಾಡ್ದ | ದಾಸ ಪಂಥೋದ್ಧಾರ 7 ವಿಹಂಗ ವಾಹನ ಶ್ರೇಷ್ಠನೂ || ಎಂದೆನಿಸುತ್ತತುಂಗ ತೀರದಲಿ ನೀನೂ | ರಾಮರ ಪಾದಭೃಂಗನೆಂದೆನಿಸಿ ಇನ್ನೂ | ವ್ಯಾಖ್ಯಾನದಿಶೃಂಗರಿಸಿದೆ ನಿನ್ನ | ಬಿಂಬ ಮೂರುತಿಯನ್ನೂ 8 ಮಾಸ ಭವ ವನಧಿಯತರಣೋಪಾಯವ ತೋರುತ್ತ | ಪವನಾಂತಸ್ಥಗುರುಗೋವಿಂದ ವಿಠಲನೆಂಬಾತ | ಗುಣ ಪೂರ್ಣಸರ್ವೋತ್ತಮನೆನ್ನುತ್ತ | ಕೀರ್ತಿಪೆ ನೀನು ನಿರುತ9
--------------
ಗುರುಗೋವಿಂದವಿಠಲರು
ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1 ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2 ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3 ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4 ದೇಶದೇಶದಿ ಬರುವ ಭೂಸುರೋತ್ತಮರ ಅಭಿ ಲಾಷೆಗಳನೆಲ್ಲ ಪೂರೈಸಿ ಪೊರೆವ ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ ಕೇಸರಿಯ ನೊಲಿಸಿದ ಯತೀಶರಿವರೆಂದು 5
--------------
ಕಾರ್ಪರ ನರಹರಿದಾಸರು
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಕಳವು ಕಲಿಸಿದೆಯಮ್ಮಗೋಪಿಕಮಲನಾಭಗೆ |ಉಳಿಸಿಕೊಂಡೆಯ ನಿಮ್ಮ ಮನೆಯ ಪಾಲು ಬೆಣ್ಣೆಯ ಪಆರೂ ಏಳದ ಮುನ್ನ ಎಬ್ಬಿಸಿ ಶೃಂಗಾರ ಮಾಡಿ |ಗೀರುಗಂಧವಹಚ್ಚಿಹಾರವ ಹಾಕಿ ||ಕೇರಿಕೇರಿ ಪಾಲು-ಬೆಣ್ಣೆ ಸೂರೆ ಮಾಡಿ ಬಾರೆನ್ನುತ |ವಾರಿಜನಾಭನ ಕಳುಹಿದೆ ವನಜನಯನನ 1ಚಿತ್ತಜನಯ್ಯನ ಕೈಗೆ ಚಿನ್ನದ ಚೆಂಡನೆ ಕೊಟ್ಟು |ಅರ್ತಿಯಿಂದ ಸಿಂಗರಿಸಿ ಆಡಿ ಬಾರೆಂದು ||ಕತ್ತಲೆ ಬೀದಿಯ ಸುತ್ತೆ ಕಸ್ತುರಿ ತಿಲಕವನಿಟ್ಟು |ನಿತ್ಯಾನಂದಗೆ ನಿಲುವುಗನ್ನಡಿಯ ತೋರಿ 2ಸಣ್ಣಮಲ್ಲಿಗೆ ಮುಡಿಸಿ ಬಣ್ಣದ ವಲ್ಲಿಯ ಹೊದಿಸಿ |ಹೆಣ್ಣುಗಳ ಒಲಿಸುವಂತೆ ಹೇಳಿ ಬುದ್ಧಿಯ ||ಹುಣ್ಣಿವೆ ವಿೂಸಲ ಹಾಲು ಉಣ್ಣು ಉಣ್ಣು ಮೆಲ್ಲೆನುತ್ತ |ಚಿಣ್ಣನ ಕಳುಹಿದೆಯಮ್ಮ ಉಣ್ಣಲಿಕ್ಕದೆ 3ವಾರಿಜಾಕ್ಷ ಮಾಡಿದಂಥ ದೂರು ಹೇಳಿದರೆ ನಿಮಗೆ |ದೂರುಬಡಕರೆಂದುಗೋಪಿಬಯ್ವೆ ನಮ್ಮನು ||ಊರು ಮಾಡಿದ ಕೊಳಗ, ತಾಯಿ ಮಾಡಿದ ಹೊಟ್ಟೆ |ವಾರಿಜನಾಭನ ಕರೆದು ಬುದ್ಧಿಯ ಹೇಳೆ 4ಹೊಟ್ಟೆಬಾಕನಿವ ಬೆಟ್ಟದೊಡೆಯಗೆ ಪ್ರಿಯ |ಇಟ್ಟುಕೊಂಡೀರೇಳುಭುವನಉದರದಲ್ಲಿಯೆ ||ಎಷ್ಟು ಹೇಳಿದರೂ ಕೇಳ ಏನು ಮಾಡಲಮ್ಮ ನಾನು |ಕಟ್ಟು ಮಾಡಿಸಲುಬೇಕು ಪುರಂದರವಿಠಲಗೆ 5
--------------
ಪುರಂದರದಾಸರು
ಗರುಡಗಮನಬಂದನೋ-ನೋಡಿರೊ ಬೇಗಗರುಡಗಮನಬಂದನೋಪಗರುಡಗಮನಬಂದ ಧರಣಿಯಿಂದೊಪ್ಪುತಕರೆದು ಬಾರೆನ್ನುತ ವರಗಳ ಬೀರುತ ಅ.ಪಎನ್ನ ರಕ್ಷಿಪ ದೊರೆ ಇಲ್ಲಿಗೆ ತಾ ಬಂದಚಿನ್ನದೊಲ್ ಪೊಳೆವವಿಹಂಗರಥದಲಿ ||ಘನ್ನ ಮಹಿಮ ಬಂದsಚ್ಛಿನ್ನ ಮೂರುತಿ ಬಂದಸಣ್ಣ ಕೃಷ್ಣನು ಬಂದ ಬೆಣ್ಣೆಗಳ್ಳನು ಬಂದ 1ಪಕ್ಷಿವಾಹನ ಬಂದ ಲಕ್ಷ್ಮೀಪತಿಯು ಬಂದಕುಕ್ಷಿಯೊಳೀರೇಳು ಜಗವನಿಟ್ಟವ ಬಂದ ||ಸೂಕ್ಷ್ಮ-ಸ್ಥೂಲದೊಳಗಿರುವನು ತಾ ಬಂದಸಾಕ್ಷೀ ಭೂತನಾದ ಸರ್ವೇಶ್ವರ ಬಂದ 2ತಂದೆಪುರಂದರವಿಠಲರಾಯ ಬಂದಬಂದುನಿಂದುನಲಿದಾಡುತಿಹ ||ಅಂದು ಸಾಂದೀಪನ ನಂದನನ ತಂದಿತ್ತಸಿಂಧುಶಯನ ಆನಂದ ಮೂರುತಿ ಬಂದ3
--------------
ಪುರಂದರದಾಸರು
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು