ನಾರಾಯಣ ಕೃಷ್ಣನಂದ ಮುಕುಂದಾ ಪ
ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ
ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1
ನಿನ್ನ ಸಹಪಾರಿ ಸುಧಾಮನಾನಲ್ಲಾ
ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2
ಅಗರು ಚಂದನ ಪರಿಮಳದ್ರವ್ಯಗಳನೆ
ತಂದು ಅರ್ಪಿಸಲು ಕುಬುಜೆಯಲ್ಲಾ
ಆದರದಿ ಪಾಲ ನೀಡೆ ವಿದುರನಲ್ಲಾ
ಅನಂತ ಗುಣಪೂರ್ಣನೇ ಶ್ರೀ ಹರಿ3
ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ
ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು
ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4
ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ
ಪ್ರಹ್ಲಾದಗೋಲಿದು ಕಂಬದಲಿ ನಿಂತೇ
ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ
ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5
ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ
ಪರಮ ದಯಾಳುವೆಂದೆನಿಸಿಕೊಂಡೇ
ಪರಮ ಪುರುಷನು ನೀನು ಪಾಮರನು ನಾನಹುದೊ
ದಾರಿ ಕಾಣದೆ ಇರುವೆ ದಯೆತೋರು ಮುರಾರಿ6
ಭಕ್ತವತ್ಸಲ ನೀನೆ ಭಯನಿವಾರಣ ನೀನೇ
ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ
ಶ್ರೀ ವೇಂಕಟವಿಠಲಾ 7