ಒಟ್ಟು 209 ಕಡೆಗಳಲ್ಲಿ , 71 ದಾಸರು , 197 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆನಂದಕರಮಾದ ಇಂದಿರಾರ್ಯ ತವ ಧ್ಯಾನಾನಂದೆನಗೆ ದಯಪಾಲಿಸು ಪ ನೊಂದೆ ಭವದೊಳು ಬಿದ್ದು ಮಂದನಾಗಿ ತಿಳಿಯದೆ ಅಂದಮಾದ ತವ ಮಹಿಮೆಯ ದೇವ ಅ.ಪ ಕಾಣುವ ಜಗವೆಲ್ಲ ಏನೆಂಬ ನಿಜತವನು ನಾನರಿಯದೊರಲುತಿಹೆನು ನಾನಿಲ್ಲದಮೊದಲು ಏನಿತ್ತು ಎಂಬುದನು ನಾನೆಂತು ತಿಳಿಯುವೆನು ನಾನು ಯಾರೆಂಬ ನಿಜ ಖೂನವರಿಯದೆ ಬಲು ಹೀನತೆಗೆ ಬಂದಿದ್ದೆನು ನೀನೆ ಸ್ವತಂತ್ರಖಿಲ ದೀನಗರಿವಿಕೆ ನೀಡಿ ಜ್ಞಾನದಿಂ ಪೊರೆ ದಯದಿ ಜವದಿ 1 ಎಲ್ಲಿರ್ದೆಮೊದಲು ನಾನೆಲ್ಲಿಂದ ಬಂದೆ ಮ ತ್ತೆಲ್ಲಿಗೆ ಪೋಗುವೆನು ಎಲ್ಲಿರುವೆ ಈಗ ನಾನೆಲ್ಲಿಂದ ನುಡಿಯುವೆನು ಎಲ್ಲಿಗೆ ಕೊಡುವೆನು ಎಲ್ಲನಿಂದಿದರೊಳಗೆ ಇಲ್ಲದ್ದು ಕಲ್ಪಿಸಿ ಎಲ್ಲಿಂದ ಕಾಂಬುವೆನು ಎಲ್ಲಿಟ್ಟಿರುವಿದರ ಸಲ್ಲಲಿತ ಸೂತ್ರವನು ಪುಲ್ಲನಾಭ ದಯಪಾಲಿಸು ತಿಳಿಸು 2 ಆರೊಂದುಗೇಣಿನಾಪಾರ ಸೂತ್ರದಗೊಂಬೆ ಆರಿಂದಲಾಗಿಹ್ಯದು ಸೋರುತಿಹ್ಯ ಒಂಬತ್ತು ದ್ವಾರಹಚ್ಚಲು ಇದರ ಕಾರಣವೇನಿಹ್ಯದು ತೋರುವುವು ಇದರೊಳಗೆ ಮೂರುವಿಧಮಾಗಿ ಆರಸಾಕ್ಷದಕ್ಕಿಹ್ಯದು ತೋರದೇನೇನಿದರ ತಾರತಮ್ಯಜ್ಞಾನ ಸುವಿ ಚಾರ ಎನಗೊಲಿದು ತಿಳುಹು ಸಲಹು 3 ಕಾಲು ಕಯ್ಯಿಗಳಾಡಿ ಬೀಳುವೇಳುವ ಮೂಲ ಕೀಲಿಯೆಲ್ಲಿರುತಿಹ್ಯದು ಜ್ಯಾಲದಂದದಿ ಹರಕು ಚೀಲದೊಳು ತುಂಬಿರುವ ಗಾಳ್ಯೆಂತುನಿಂತಿಹ್ಯದು ಕಾಲಮಹಿಮ ನೀ ಗೈದ ಮೇಲುಯಂತ್ರದಿ ಇಂದ್ರ ಜಾಲವೇ ತುಂಬಿಹ್ಯದು ಕಾಲಚಕ್ರನ ಮಹ ದಾಳಿಯನು ಗೆಲಿಸಿ ತವ ಲೀಲೆಯೊಳೆನ್ನಾಡಿಸು ಪಾಲಿಸು 4 ಬಂಧರೂಪಕಮಾದ ದಂದುಗದ ಭವವು ದಾ ರಿಂದಲುತ್ಪತ್ತಿ ಯಾಯ್ತು ಸತಿ ಸುತರು ಬಂಧಬಳಗ ಎ ಲ್ಲಿಂದ ಬಂದಿವಗೆ ಜೊತೆಗೂಡಿತು ಒಂದಕ್ಕೊಂದರ ಸಂಬಂಧವೇ ಇಲ್ಲಿವಗೆ ಬಂಧ ಮತ್ತೆಲ್ಲೊದಗಿತು ನಿಂದುನೋಡಲು ಸಕಲ ತಂದೆ ಶ್ರೀರಾಮ ನಿನ್ನಿಂದ ಕಂಡು ನಿನ್ನೊಳೈಕ್ಯ ಮಾಯ ಖರೆಯ 5
--------------
ರಾಮದಾಸರು
ಆರೇ ಸುಳಿದವನಿಂದು|ನೀರೇ ತಂದುವನ ತೋರೇ ಪ ನೀಲಮೇಘದ ಕಾಂತಿಮೈಯ್ಯಾ|ನೋಡೇಮದನಯ್ಯಾ| ಕಾಲಲುಂದಿಗೆ ಹೆಜ್ಜೆಘಿಲು ಘಲುಕೆನುವಾ| ಮೇಲು ಪಿತಾಂಬರ ಝಳ ಝಳಿಸುವ ನವನಾರೇ 1 ಮೆರೆವ ವಡ್ಯಾಣ ಘಂಟೆಸಿರಿಯಾ|ಕವಿಹೊಗಳಲರಿಯಾ| ಬೆರಳುಂಗುರ ಕಡಗ ಕೇಯೂರಾ| ಕೌಸ್ತುಭ ಮಾಲೆಯ ಹೊರವನಾರೇ 2 ಕಡೆಗಣ್ಣನೋಟ ಪದುಮದೆಲಿಯೋ|ಮೋಹನದಾಬಲೆಯಾ| ಕುಂಡಲ ಹೊಳೆವ ಕಪೋಲಾ| ಇಡಿದನೇ ನಗೆಯ ಸುನಾಶಿಕ ಸರಳವನಾರೇ 3 ಮೃಗದ ಪಣಿಯಾಲುಂಗುರ ಗುರುಳೋ|ಕಾವನಸರಳೋ| ಝಗಝಗಿಸುವ ರನ್ನ ಮುಕುಟದ ಚೆಲುವಾ| ಬಗೆ ಬಗೆ ಸೊಬಗಿನ ನವರಸಗರೆವನಾರೇ 4 ತರುಣೀ ಮುನ್ನಿನಸುಕೃತಬಂದು|ವದಗಿ ತಾ ಇಂದು| ಗುರು ಮಹಿಪತಿ ಪ್ರಭು ಚರಣವದೋರಿ|ಮರುಳೆನ್ನಾ ಮಾಡಿದ ದೀನೋದ್ಧಾರಿವನಾರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಇಂದಿರೇಶ ಭವಬಂಧನ ಬಿಡಿಸೊ ನಿನ್ನಾನಂದದೊಳಿರಿಸೊ ಪ ಸಿಂಧುಶಯನ ಗೋವಿಂದ ಮುರಾರೆ ಅಚಿಂತ್ಯಾದ್ಭುತ ಶೌರೆ ಅ.ಪ. ತಾಳಲಾರೆನೊ ಈ ತಾಪತ್ರಯ ಹರಿಸೊ ನಿನ್ನವನೆನಿಸೊ ಕಾಲಕರ್ಮ ಕೋಟಲೆ ತಪ್ಪದಲ್ಲ ನೀ ಕೇಳೆನ್ನ ಸೊಲ್ಲ ವಾಕು ಪಾಲಿಸಿ ಎನ್ನನು ಪಾರುಗಾಣಿಸೊ ಫಣಿರಾಜಶಯ್ಯ 1 ಪರಿಪರಿಯಿಂದಲಿ ಜನ್ಮ ಧರಿಸಿ ಕರೆದುತಂದೆ ಈ ಜನ್ಮದಿ ನಿಂದೆ ಅರಿಯದವರಂತಿರುವರೆ ಕಾಯುವ ಕರುಣಿ ನೀನು ದೀನಜನ ಸುರಧೇನು 2 ಅಂಬರ ಮಣಿಯಂತೆ ಬಿಂಬ ಮೊಳಗ್ಹೊಳೆದು ದುರಂತ ಕರ್ಮಂಗಳ ಕಳೆದು ಹಂಬಲಿಸುವ ಭಕುತರ ಬೆಂಬಲಿಗನೆನಿಸಿ ಸಂತತ ನಿನ್ನ ಸುಖಸಿರಿಯ ಸುರಿಸೊ 3 ಬಿಂಬವು ಒಲಿದರೆ ಪ್ರತಿಬಿಂಬ ಫಲಸುವದುಂಟು ಈ ಮಾತು ನಿಘಂಟು ಬಾಂಬೊಳೆ ಹರಿಸಿದ ಹರಿ ಮಾನಿಧಿವಿಠಲ ನೀನಲ್ಲದಿನ್ಯಾರೋ ದೇವರ ದೇವಾ 4
--------------
ಮಹಾನಿಥಿವಿಠಲ
ಇಂದುಶೇಖರಾ ಮನ್ನಿಸೋ ದಯದಿಂದ ಶಂಕರಾ ಪಪಂಚವಕ್ತ್ರನೆ ಪಾಲಿಪುದು ತ್ರಿಪಂಚನೇತ್ರನೆಪಂಚಭೂತ ತನು'ದೆನಗೆ ಪಗೆಯಾಗಿದೆ ನೋಡಯ್ಯಾವಂಚಕನು ನೀನೆಂದೆನ್ನ ವಾರೆನೋಡಬೇಡಯ್ಯಾಸಂಚರಿಪ ಮನಕೆ ಮನುವ ತೋರಿ ನೋಡಬೇಡಯ್ಯಾಪಂಚಶಿರದ ನಾಮಾಧೀಶ ಪರಮ ಕೃಪೆಮಾಡಯ್ಯಾ 1ವ್ಯಾಳಭೂಷಣನೆ ಬಿನ್ನಪವನ್ನು ಕೇಳು ಈಶನೆಏಳು 'ಷಯ ವ್ಯಸನಾದಿಗಳಿಂದೇಳಿಗೆಯ ಘನವಾದಾಳಿವರಿದಾ ಕರಣಾತಡಿಗೆ ಧೈರ್ಯ ಕಲಿತನವಾತಾಳಲಾರೆನಯ್ಯಾ ಎನ್ನ ತನು'ನವಗುಣವಾಫಾಲನೇತ್ರ ಬಿಡಿಸೊ ನಿನ್ನ ನೆನ'ಗಿತ್ತಭಯವಾ 2ಕಾಮನಾಶನೆ ಕರುಣಿಸಯ್ಯಾ ವ್ಯೋಮಕೇಶನೆಹೇಮ ಭೂ'ು ಹೆಣ್ಣಿಗಾಗಿ ಹೇಳಲೇನ ನೊಂದೆನೈತಾಮಸಗುಣಂಗಳಿಂದ ತಾಪಹೆಚ್ಚಿ ಬೆಂದೆನೈಕಾ'ುನಿಯರೆಡೆಯೊಳೆನ್ನ ಕಾಡಬೇಡವೆಂದೆನೈನಾಮರೂಪಕ್ರಿಯಾರ'ತ ನೀನೆ ಗತಿಯೆಂದೆನೈ 3
--------------
ತಿಮ್ಮಪ್ಪದಾಸರು
ಇನ್ನಾದರೂ ದಯಬಾರದೇ ದಾಸನಮೇಲೆ ಇನ್ನಾದರೂ ದಯಬಾರದೇ ಪ ಪನ್ನಗ ಶಯನನೇ ಚೆನ್ನಕೇಶವನೇ ನಿಂನ್ನನು ನಂಬಿದ ಶರಣನಮೇಲೇ ಅ.ಪ ಹಲವು ಯೋನಿಗಳಲ್ಲಿ ನೆರೆ ಪುಟ್ಟಿ ಬಂದೇ ಹಲವು ಯಾತನೆಗಳ ಸಹಿಸುತ್ತ ಬಂದೇ ಹಲವು ರೀತಿಗಳಿಂದ ದುಃಖವ ತಿಂದೇ ಸಲೆ ನಂಬಿ ಹರಿಗೀಗ ಶರಣೆಂದು ಬಂದೇ 1 ಸೇರಿ ಬಗೆಯುತಲಿವೆ ಪಂಚ ವ್ಯಾಘ್ರಗಳೂ ಗಾರು ಮಾಡುತಲಿದೆ ಅಹಂ ಎಂಬ ಸಿಂಹವು ಶೆರಿಯ ಭಜಿಸುತ್ತ ಬಲೆದಾಟಿ ಬಂದೇ 2 ಬಂಧು ಬÁಂಧವರೆಂಬ ಕ್ರೂರವರ್ಗಗಳೆನ್ನ ತಿಂದು ಸುಲಿಯುತಲಿವೆ ವಂಚಿಸಿ ಹರಿಯೇ ಅಂದದಿ ದೂರ್ವಾ ಪಟ್ಟಣದಿ ನಿತ್ತಿರುವಂಥ ಸಿಂಧು ಶಾಯಿಯೇ ರಂಗ ಸಲಹೆನ್ನ ತಂದೇ 3
--------------
ಕರ್ಕಿ ಕೇಶವದಾಸ
ಇನ್ನುಪೇಕ್ಷೆಯ ಮಾಡೆ ಎನ್ನ ಕಾಯುವರಿಲ್ಲ ಮನ್ನಿಸಿ ಸಲಹೊ ದಯದಿ ಪ ಆಪನ್ನ ಪರಿಪಾಲ ಶ್ರೀನಿವಾಸ ಅಖಿಳಾಮರೇಶ | ಶ್ರೀಶಾ ಅ.ಪ ಕ್ರೂರತರ ಸಂಸಾರ ದಾವಾಗ್ನಿ ಮೇರೆಯಿಲ್ಲದೆ ಸುಟ್ಟು ಘೋರ ದುಃಖ ಬಿಡಿಸುತಿಹುದೊ ವಾರಿಜಾಕ್ಷ ನಿನ್ನ ನಾಮಾಮೃತವೆಂಬ ಮಳೆಗರೆದು ಹರಸಿ ಪೊರೆಯಯ್ಯ | ಜೀಯ 1 ಸತಿಸುತರ ಹಿತಕಾಗಿ ಅತಿ ನೀಚವೃತ್ತಿಲಿ ನಡೆದು ಪತಿತ ನಾನಾದೆನಯ್ಯ ಪತಿತಪಾವನ ನಿನ್ನ ಕಥೆಗಳನು ನುಡಿಸಿ ಸ- ದ್ಗತಿಯ ಪಾಲಿಸಯ್ಯ | ಪ್ರೀಯ 2 ಆರು ಮಂದಿಗಳೆಂಬ ವೈರಿಗಳೆನ್ನನು ಸೇರಿ ಗಾರು ಮಾಡುತಲಿಹರೊ ಕಂಸಾರಿ ಸೇರಿದೆ ಪರಿಹರಿಸೊ ಕಷ್ಟ | ನಿನ್ನಿಷ್ಟ 3 ಪಶುಪತಿ ಘುಡುಘುಡಿಸಿ ವ್ಯಸನದಿಂ ಕೊಲ್ಲುತಿಹುದೋÀ ಶ್ವಸನ ಅಂತರ್ಯಾಮಿ ನಿಶಾಚರ ವೈರಿ ವಶಮಾಡಿ ಎನ್ನ ಪೊರೆಯೊ | ಕಾಯೊ 4 ಅತಿತ್ತ ಪೋಗದಲೆ ಹಿತವಾದ ಚಿಂತೆಯೊಳು ರತನಾಗಿ ಖತಿಗೊಳ್ಳುತಿಹೆನೊ ಸ್ಮøತಿಯಿತ್ತು ಪಾಲಿಸೊ | ಸಲಿಸೊ 5 ಒಂದು ಕ್ಷಣವಾದರು ಕುಂದು ಮಾಳ್ಪಾಲೋಚನೆ ಯಿಂದ ಮನ ಹಿಂದಾಗದೊ ಆನಂದ ಮುನಿವಂದ್ಯ ದ್ವಂದ್ವತಪ ಪಾದದಿ ಮನ ಹೊಂದುವಂದದಿ ಮಾಡೊ | ಎನ್ನ ಕೂಡೊ 6 ಐಹಿಕ ಸುಖ ಬಯಸಿ ಲೋಕದ ವಿಹಿತಗಳೆಲ್ಲ ಮರೆದೆ ತಲ್ಪ ವಿಜಯರಾಮಚಂದ್ರವಿಠಲ ಪಾಹಿ ಸತತಯೆನ್ನ | ಮುನ್ನ 7
--------------
ವಿಜಯ ರಾಮಚಂದ್ರವಿಠಲ
ಇವನ ಪಾಲಿಸಿದರೆ ನಿನಗೆ ಪುಣ್ಯ ಪ ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು | ಘಟ್ಟಿಯಾಗಿ ಭಕುತನ್ನ ಕಾಪಾಡು1 ಸಾಧನ ಪ್ರಾಣಿಗಳಿರಲಿ ಬೇಕು | ವಾಕು 2 ತ್ರಿಜಗದೊಳಗೆ ನಿ£ಗ್ಯಾರೆಣೆಯೆ | ವಿಜಯವಿಠ್ಠಲ ಕೇಳೆನ್ನ ದೊರೆಯೆ 3
--------------
ವಿಜಯದಾಸ
ಉಮಾ ಹಿಮಗಿರಿ ಸಮಸ್ತ ಸಮಾನ ಸುಗುಣವಂದ್ಯೆ ಪ ಕಮಲಾಕ್ಷನÀ ಭಗಿನಿಯೆನ್ನಮಲನ ಮಾಡಿ ವಿಮ¯ ಮನಸು ಶಮದಮಗಳ ನೀಡಮ್ಮ ಅ.ಪ. ತ್ರಿಪುರ ಸುಂದರಿ ನಿನ್ನ ಅಪಾರ ರೂಪಕೆ ತ್ರಿಪುರಾರಿ ಮರುಳಾದನಮ್ಮ ಶಫರಾಕ್ಷಿ ಕೇಳೆನ್ನ ಬಿನ್ನಪವನು ಮನ ಚಪಲಾಕೆರಗದಂತೆ ಕೃಪೆ ಮಾಡಬೇಕಮ್ಮ 1 ಜಪವ ನಾನರಿಯೆನು ತಪವ ನಾನರಿಯೆನು ಎ ನ್ನಪರ ಬುದ್ಧಿಯ ಬಿಡಿಸಮ್ಮ ಕೃಪಣ ವತ್ಸಲೆ ಎನ್ನ ಕುಪಥಾವ ತಪ್ಪಿಸಿ ಅಪವರ್ಗ ಸೇರುವ ಸುಪಥವ ತೋರಮ್ಮ 2 ಅಪ್ಪ ರಂಗೇಶವಿಠಲ ಒಪ್ಪುವ ರೀತಿಲಿ ತಪ್ಪದೆ ಮತಿ ಪ್ರೇರಿಸಮ್ಮ ತಪ್ಪು ಒಪ್ಪುಗಳೆಲ್ಲ ಸರ್ಪಶಯನಗೆಅರ್ಪಿಸಿ ಎನ್ನ ನಿರ್ಲಿಪ್ತನ ಮಾಡಿಸಮ್ಮ 3
--------------
ರಂಗೇಶವಿಠಲದಾಸರು
ಎಂಜಲೆನ್ನಲಿಬಹುದೆ ಮನುಜರಿದನ ಅಘವನ ಧ-ನಂಜಯ ಸುವೈಕುಂಠದಾಸರ ವದನದ ಕಣವ ಪ. ವದನವೆಂಬಾಕಾಶದಲಿ ಭಕುತಿ ಜೀಮೂತಪದಮನಾಭನ ನಾಮಾಮೃತದÀ ಕಡಲಮುದದಿಂದ ತಕ್ಕೊಂಡು ಎನ್ನಂಗ ದೇಹದಲಿಹದನರಿತು ಸುರಿದು ಮುಕ್ತಿಫಲವ ಬೆಳೆಸಿದುದನು 1 ಹೃದಯಕಾರಾಗೃಹದಿ ಶ್ರೀಹರಿಯನಾವಾಗಹುದುಗಿ ಅಗಲಿಸದ ಕಾರಣದೊಳುಂಗುಟದಿಉದಿಸಿ ಗಂಗೆಯು ಪೋಪೆಡೆಯು ಅಳಿದರೆ ಇವರವದನದಲಿ ಪೊರಟೆನ್ನ ಮ್ಯಾಲೆ ಹರಿದುದನು 2 ಪರಸನ್ನ ಹಯವದನ ಚರಣ ಸರಸಿಜಮಧು-ಕರ ಸುವೈಕುಂಠ ದಾಸೋತ್ತಮನ್ನವರ ವದನದಲಿ ವೇದಶಾಸ್ತ್ರಾಗಮದ ತಾ-ತ್ಪರಿಯ ಬಿಂದುಗಳೆನ್ನ ಮ್ಯಾಲೆ ಹರಿದುದನು 3
--------------
ವಾದಿರಾಜ
ಎಂಜಲೆನ್ನಲಿಬಹುದೆ ಮನುಜರಿದನ ಅಘವನಧ- ನಂಜಯ ಸುವೈಕುಂಠದಾಸರ ವದನದ ಕಣವ ಪ. ವದನವೆಂಬಾಕಾಶದಲಿ ಭಕುತಿ ಜೀಮೂತ ಪದುಮನಾಭನ ನಾಮಾಮೃತದ ಕಡಲ ಮುದದಿಂದ ತಕ್ಕೊಂಡು ಎನ್ನಂಗ ದೇಹದಲಿ ಹದನರಿತು ಸುರಿದು ಮುಕ್ತಿಫಲವ ಬೆಳೆಸಿದುದನು 1 ಹೃದಯ ಕಾರಾಗೃಹದಿ ಶ್ರೀಹರಿಯನಾವಾಗ ಹುದುಗಿ ಅಗಲಿಸಿದ ಕಾರಣದೊಳಂಗುಟದಿ ಉದಿಸಿ ಗಂಗೆಯು ಪೋಪೆಡೆಯು ಅಳಿದಿರೆ ಇವರ ವದನದಲಿ ಪೊರಟೆನ್ನಮ್ಯಾಲೆ ಹರಿದುದನು 2 ಪರಸನ್ನ ಹಯವದನ ಚರಣಸರಸಿಜಮಧು- ಕರ ಸುವೈಕುಂಠದಾಸೋತ್ತಮನ್ನ ವರವದನದಲಿ ವೇದಶಾಸ್ತ್ರಾಗಮದ ತಾ- ತ್ಪರಿಯ ಬಿಂದುಗಳೆನ್ನ ಮ್ಯಾಲೆ ಹರಿದುದನು 3
--------------
ವಾದಿರಾಜ
ಎಂದಿಗೀಪದ ಕರುಣಮಾಡುವೆಯೋ ನಿಮ್ಮ ಧ್ಯಾನಾ ನಂದ ಅಮೃತಪಾರ ನವಿನುಡಿಯ ಪ ಎಂದಿಗೀಪದ ಕರುಣಮಾಡಿ ಕರವ ಪಿಡಿದು ಮಂದಮತಿಯ ತರಿದು ಪೊರೆಯುವೆ ಸಿಂಧುಶಯನ ತಂದೆ ಶ್ರೀಹರಿ ಅ.ಪ ವಿಷಮಸಂಸಾರ ಮೋಹವನು ಬಿಡಿಸಿ ನಿಮ್ಮ ಭಜನ ಅಸಮ ಸುಖದೆನ್ನ ಮನವ ನಿಲ್ಲಿಸಿ ವ್ಯಸನ ಏಳರ ಕಾಟ ತಪ್ಪಿಸಿ ಬಿಡದೆ ಎನ್ನ ರಸನೆಮೇಲ್ನಿಮ್ಮ ನಾಮ ಸ್ಥಾಪಿಸಿ ವಸುಧೆ ಜನರ ಸುದ್ದಿ ಮರೆಸಿ ನಶಿಪ ಲೌಕಿಕದಾಸೆ ಕೆಡಿಸಿ ಕುಶಲಮತಿಯಿತ್ತು ಪಾಲಿಸುವ ಮಹ ಅಸಮಶುಭದಿನ ಕುಸುಮನಾಭ 1 ಹತ್ತು ಇಂದ್ರಿಯ ಮೂರು ಬಾಧೆ ತೊಲಗಿಸಿಬಿಡದೆ ಎನ್ನ ನೇತ್ರದೊಳು ತವಮೂರ್ತಿ ನಿಲ್ಲಿಸಿ ಸುತ್ತಿ ಕೊಲುವ ಮಾಯ ಮುಸುಕು ಹಾರಿಸಿ ನಿತ್ಯದೆನ್ನ ಚಿತ್ತದೊಳು ನಿಜಜ್ಞಾನ ಸ್ಥಿರಪಡಿಸಿ ಸತ್ಯ ಸನ್ಮಾನ್ಯಕ್ತನೆನಿಸಿ ನಿತ್ಯ ನಿರ್ಮಲ ನಿಮ್ಮ ಭಕ್ತರ ಉತ್ತಮ ಸಂದರುಶನವಿತ್ತು ತವ ಭೃತ್ಯನೆನಿಸೆನ್ನ ಸಲಹುವಂಥ 2 ಕ್ಲೇಶ ಪಂಚಕದುರುಲು ಪರಿಹರಿಸಿ ಅನುಮೇಷ ನಿಮ್ಮ ದಾಸಜನರಾವಾಸದೆನ್ನಿರಿಸಿ ಮೋಸಮರವೆಯ ಜಾಲ ಛೇದಿಸಿ ನಿಶಿದಿವದಿ ನಿಮ್ಮ ಧ್ಯಾನದೊಳೆನ್ನ ಮನವಐಕ್ಯೆನಿಸಿ ಮೋಸ ಪಾಶಗಳೆಲ್ಲನಾಶಿಸಿ ದೋಷರಾಶಿಯಿಂ ಮುಕ್ತನೆನಿಸಿ ಶ್ರೀಶ ಶ್ರೀರಾಮ ನಿಮ್ಮ ಚರಣ ದಾಸನೆನಿಸಿ ಪೋಷಿಸುವಂಥ 3
--------------
ರಾಮದಾಸರು
ಎಂದಿಗೆ ನೀ ಯೆನ್ನ ಮುಂದಕೆ ಬರುವೆಯೊ ಸುಂದರ ಮೂರುತಿಯೆ ನಂದದಿ ಭಕುತರ ವೃಂದಗಳೆಲ್ಲವ ಸಂದೇಹವಿಲ್ಲದೆ ಮುಂದಕೆ ಕರದೊಯ್ವೆ ಪ ಪಂಕಜಾಕ್ಷನೆ ನೀನು ಕಿಂಕರ ಜನರಾ- ತಂಕಗಳೆಲ್ಲವ ಶಂಕಿಸದೆ ವೆಂಕಟನಾಮಕ ಸಂಕಟಪರಿºರವಿವ- ಳಾಂಕರನÀರವ ನಿಶ್ಶಂಕೆಯಿಂದಲಿಯಿತ್ತು 1 ಆರುವೈರಿಗಳೆನ್ನ ಗಾರುಮಾಡುವರಯ್ಯಾ ಆರು ಕಾವರು ಇಲ್ಲಾ ಮಾರಜನಕನೆ ಪಾರುಗಾಣಿಸದೆ ನೀ ದೂರಗೈಸಲು ಯನ್ನ- ನಾರು ರಕ್ಷಿಪರೊ ದೋಷವಿದೂರನೆ ಪೇಳೋ 2 ಯರಬೆರಡೆನಾಗಿತ್ತು ಪೊರಿಯೋ ದೇವರ ದೇವ ಕರುಣಾಬ್ಧಿ ನೀನೆಂದು ವರವೋದು ಶ್ರುತಿಯು ಶರಣಾಗತನನ್ನು ಪೊರೆಯದೆ ಬಿಡುವಂದು ಸರಿಯೇನೋ ಕರುಣಾಳು ಸಿರಿವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ಮನೆಯೆಂದು ನೆನೆದು ಬಾರೊ ತಂದೆ ಪ. ಮಕ್ಕಳ ಕೊಡುವೆ ಕಂಡ ಸುಜನರ್ಗೆ ಮಗ ನಾನುಅಕ್ಕರಿಂದ ಬೇಡುವವರ ರಕ್ಷಿಸಿಕೊಂಡು ತಂದೆಅಕ್ಷಿಹೀನರಿಗೆ ಪೊಸಚಕ್ಷುವನೀವೆ ಎನಗಿರ್ದಅಕ್ಷಿದೋಷವ ಕಳೆದು ರಕ್ಷಿಸಿಕೊಡು ತಂದೆ 1 ಪೋದ ಗಂಟ ತರಿಸಿಕೊಡುವುದು ನಿನ್ನ ಬಿರುದು ನಿನ್ನಬೋಧನೆಂಬ ಧನದ ಗಂಟು ನಾನು ನನ್ನ ರಕ್ಷಿಸಿಕೊಈ ಧರೆಯ ಕುಂಟರ ಬಲುಬಂಟರ ಮಾಡಿ ನಡೆಸಿದೆಮೋದನಿಧಿ ನಿನ್ನ ಭಕ್ತನ ಕುಂಟುತನವ ಬಿಡಿಸೊ 2 ಸಿರಿಹಯವದನ ತಿಮ್ಮ ನೀ ನಿಧರ್Àನರ್ಗೆ ಧನವಿತ್ತುಕರುಣಿ ಎನ್ನ ಧೈರ್ಯಧÀನವನು ಕೊಡೆಯದೇಕೆಧರೆಯೊಳೆನ್ನಾಜ್ಞೆಯನು ನಿಲಿಸಿಕೊಳಬೇಕಾದರೆಧುರದಿ ಅನನ್ಯಾಶ್ಚಿಂತಯೆಂತೋ ಎಂದ ಮಾತ ಸಲಿಸೋ 3
--------------
ವಾದಿರಾಜ