ಒಟ್ಟು 44 ಕಡೆಗಳಲ್ಲಿ , 20 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಪತಟಗನ ಹೃದಯ | ಸಂಪುಟದಲಿಹ ಸದಯಶಂಫಲಿಯ ಪುರವಾಸಿ | ಭಕುತ ಜನ ತೋಷೀ ಪ ಬೋಧ ತೀರ್ಥರ ಸದನಮಾಧವನೆ ಹಯವದನ | ಸುಗುಣ ಗಣಪೂರ್ಣಾ ||ಹೇ ದಯಾಂಬುಧೆ ಚೆನ್ನ | ಯಾದವೇಶನೆ ಎನ್ನಕಾದು ಕೊಳ್ಳೆಲೊ ಘನ್ನ | ಶೀಲ ಸಂಪನ್ನಾ 1 ಕೃಷ್ಣ ಪದ ಸರಸಿಜವ | ನಿಷ್ಠೆಯಲಿ ಭಜಿಸಿದವಜಿಷ್ಣು ಸಖನಿಗೆ ಪ್ರೀತ | ಮಧ್ವಮುನಿ ಭ್ರಾತಾ ||ವಿಷ್ಣು ತೀರ್ಥರ ಹಸ್ತ | ಇಷ್ಟ ಪೂಜೆ ಸಮಸ್ತಅಷ್ಟ ವಿಭವದಿ ಗೊಂಡ | ಶ್ರೀಲಕುಮಿ ಗಂಡಾ2 ಕಾಲ ||ವಸುಮತಿಯ ಶ್ರೀಲೋಲ | ಕಿಸಲಯಾವಳಿ ಮಾಲವಸುದೇವ ಮುದ ಬಾಲ | ಪರಿಪಾಹಿ ಕೋಲಾ 3 ನಿಜಭೃತ್ಯ ಭಾಷಿತವ | ನಿಜವ ಮಾಡಲು ದೇವನಿಜ ವ್ಯಾಪ್ತಿ ಸ್ತಂಭದಲಿ | ನಿಜದಿ ತೋರುತಲಿಸುಜನ ಜನರುದ್ದರಣ | ಕುಜನರಸು ವಿಹರಣಅಜ ಜನಕ ವಿಶ್ವೇಶ | ಕರುಣಿಸೆಲೊ ಶ್ರೀಶಾ 4 ನಿಟಿಲ ನೇತ್ರನ ಬಿಂಬ | ಪಟವು ವಡವೆಗಳೆಂಬಕಟು ಸವಿಯನುಂಬುವನು | ಸಕಲ ಕ್ರಿಯಗಳನೂಧಿಟ್ಟ ಗುರು ಗೋವಿಂದ | ವಿಠಲ ನಿನ್ನಾನಂದದಿಟವೆಂಬ ವರ ಮತಿಯ | ಪಾಲಿಸೆಲೊ ಜೀಯ 5
--------------
ಗುರುಗೋವಿಂದವಿಠಲರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾದ | ಲೇಸಾಗಿ ಭಜಿಸಲುಕೇಶವ ನೊಲುಮೆಗೆ ಅವಕಾಶವೊ ಪ ಆಸದಾಶಿವ ವಂದ್ಯ ಶ್ರೀಶನ ಪದ ಪದುಮಸೂಸಿ ಸೇವಿಸುವಂಥ ದೈಶಿಕರೊಡೆಯರ ಅ.ಪ. ಯತಿವರ ಬ್ರಹ್ಮಣ್ಯ ವರದಿಂದುದ್ಭವ ವಸುಮತಿಯ ಸ್ಪರ್ಶದ ಮುನ್ನ ಕನಕಪಾತ್ರ ಧೃತನೆ |ಮತಿವಂತನೆನಿಸುತಬ್ಬೂರೊಳು ನೆಲೆಸುತ್ತಯತಿಯಾಗಿ ಮೆರೆದೆ ಬ್ರಹ್ಮಣ್ಯರ ಕರಜನೆ 1 ಶ್ರೀಪಾದರಾಯರಲ್ಲೋದಿ ಸುಧಾದಿಯಆ ಪಂಪಾ ಕ್ಷೇತ್ರವ ಪ್ರಾಪಿಸಿ ನೆಲಿಸೀ |ತಾಪಸೀಗಳು ವಿಜಯೀಂದ್ರ ವಾದಿರಾಜಗಾಪಾರ ಮಹಿಮನ ತತ್ವಗಳೊರೆದಂಥ 2 ವಿದ್ಯಾನಗರಿಯ ಭವ್ಯ ಗದ್ದುಗೆಯನೆ ಯೇರ್ದತಿದ್ದೀದ ಪೃಥುವೀಪ ಕುಹುಯೋಗವಾ |ಮಧ್ವ ಸಮಯ ವರ ದುಗ್ದಾಭ್ಧಿ ಪೂರ್ಣೇಂದುಅದ್ವೈತ ತಮಸೂರ್ಯ ವರ ಚಂದ್ರಿಕಾಚಾರ್ಯ 3 ಮಾಯಾ ಸಮಯ ಮದಕರಿಗೆ ಕಂಠೀರವನ್ಯಾಯಾಮೃತವು ತರ್ಕ ತಾಂಡವ ರಚಿಸೀ |ಮಾಯಾ ಮತಂಗಳ ಛೇದಿಸಿ ಬಹುವಿಧರಾಯ ಕೃಷ್ಣನೆ ಪರಾತ್ಪರನೆಂದು ಪೇಳಿದ 4 ಮಾಸ ಫಾಲ್ಗುಣ ವದ್ಯಎರಡೆರಡನೆ ದಿನವು ಶನಿವಾರದೋಳ್ ವರ ಗುರು ಗೋವಿಂದ ವಿಠಲ ಧ್ಯಾನಾನಂದ ಪರನಾಗಿ ತನು ಕಳೆದ ನವ ವೃಂದಾವನದೊಳು 5
--------------
ಗುರುಗೋವಿಂದವಿಠಲರು
ಪಾರು ಮಾಡೋ ಕೃಷ್ಣಾ | ಪಾರು ಮಾಡೋ ಪ ಭವ ಅ.ಪ. ನಿಗಮ ಗೋಚರ ತವಬಗೆ ಬಗೆ ಮಹಿಮಗಳವಗತ ಮಾಡುತ 1 ರಸವೆನಿಪುದು ಭೂ | ವಸುಮತಿ ಪಂಚಕೆರಸವಹುದದರಿಂದ | ರಸವೆನಿಪಾಪಾ |ರಸವಾಚ್ಯ ವರುಣ ನಾ | ರಸವೆನಿಸುವ ಸೋಮಔಷಧಿ ದೇವನಿಂದ | ರಸವೆನಿಸುವ ರುದ್ರ 2 ಈಶಗಿಂದಧಿಕ ವಾ | ಗೀಶನ ಭಾರ್ಯೆಯುಈ ಸರಸ್ವತಿಯಿಂದ | ಆಸಾಮನಾಮಾ |ಆ ಸಾಮುಖ್ಯನಿಲಗು | ಈಶ ಉದ್ಗೀಥನೆಹೇ ಸರ್ವೋತ್ತಮೋತ್ತಮ | ಭಾವಿಸಿ ಮನದಲಿ 3 ಪರ | ರಸತಮ ವೆನಿಪಳುಸುಸಮ ಪರಮ ಪರರ್ಥ | ರಸತಮ ಪದ ಪಡೆದ 4 ಭವ 5
--------------
ಗುರುಗೋವಿಂದವಿಠಲರು
ಪ್ರಸನ್ನ ಶ್ರೀ ಕಲ್ಕಿ ಅಮಿತ ವಿಕ್ರಮ ಕಲ್ಕಿ ಅನಘ ಲಕ್ಷ್ಮೀರಮಣ ಶರಣು ಮಾಂ ಪಾಹಿ ಕೃಷ್ಣ ನರಹರಿ ಕಪಿಲ ತಿಲಕ ವೇಂಕಟರಮಣ ಪ್ರಾಣ ಹೃದ್‍ವನಜಸ್ಥ ರಕ್ಷಮಾಂ ಸತತ ಪ ಶ್ರೀ ದುರ್ಗಾಭೂರಮಣ ವಿಷ್ಣು ರುದ್ರ ಬ್ರಹ್ಮ ಮಾಯಾ ಜಯಾ ಕೃತಿ ಕೂರ್ಮ 1 ಧನ್ವಂತರಿ ಶರಣು ಅಜಿತ ಸ್ತ್ರೀರೂಪನೇ ಘನಭೂಮಿಧರ ನಾರಸಿಂಹ ವಾಮನ ತ್ರಿಪದ ರೇಣುಕಾತ್ಮಜರಾಮ ವೇಣುಗೋಪಾಲ ನಮೋ ಬುದ್ಧ ಸುಜನಪ್ರಿಯ ಕಲ್ಕಿ 2 ವೃಷಭ ತಾಪಸ ಯಜ್ಞ ದತ್ತ ವಡವಾವಕ್ತರ ಕೃಷ್ಣ ಹರಿನಾರಾಯಣ ವೇದವ್ಯಾಸ ಶಿಂಶುಮಾರ ಸುಗುಣಾರ್ಣವನೆ ಶ್ರೀಶ ಸರ್ವಾಶ್ರಯ ಅನಂತ ಸುಖರೂಪ 3 ಭೂಲೋಕದಲಿ ಮಣಿಮಂತಾದಿ ಅಸುರರು ಶೀಲ ಹರಿಭಕ್ತರನ ಕಂಡು ಸಹಿಸದಲೆ ಬಾಲ ಶಶಿಶೇಖರನ ಸ್ತುತಿಸಿ ವರಗಳ ಪಡೆದು ಇಳೆಯಲಿ ಜನಿಸಿದರು ತತ್ವಜ್ಞಾನಿಗಳ ವೋಲ್ 4 ಸೂತ್ರ ವಿರುದ್ಧ ಭಾಷ್ಯಗಳ್ ಮಾಡಿ ವೇದೋಪನಿಷದ್‍ಗಳಿಗೆ ಅಪ ಅರ್ಥ ಪೇಳಿ ಸಾಧುಗಳ ಮನಕೆಡಿಸೆ ಮಧ್ವಾಖ್ಯ ಸೂರ್ಯನು ಉದಿಸಿ ಸಜ್ಜನರ ಹೃತ್ತಿಮಿರ ಕಳೆಯೆ 5 ಶ್ರೀಪತಿ ವಿಷಯಕ ಜ್ಞಾನ ಮರೆ ಮಾಡುವ ಇಪ್ಪತ್ತು ಮೇಲೊಂದು ಅಪದ್ದ ದುರ್ಭಾಷ್ಯ ಅಪವಿತ್ರ ಅಚರಣೆ ದುಸ್ತರ್ಕ ದುರ್ವಾದ ಈ ಪರಿಸ್ಥಿತಿಯ ನೆಟ್ಟಗೆ ಮಾಡಿದಾ ಮಾಧ್ವ 6 ಇಪ್ಪತ್ತಿ(ತ್ತು) ಎರಡನೇ ಭಾಷ್ಯಾ ಸಿದ್ಧಾಂತವ ಉಪನಿಷದ್ ದಶಕಕೆ ಸರಿಯಾದ ಭಾಷ್ಯಗಳ ಸಪ್ತ ತ್ರಿಂಶತ್ ಒಟ್ಟುಗ್ರಂಥ ಸುರಧೇನುವ ಅಪವರ್ಗಾನಂದ ಒದಗಿಸಿದ ಯೋಗ್ಯರಿಗೆ 7 ಸದ್ಧರ್ಮ ಆಚರಣೆ ಯೋಗ್ಯ ಉಪಾಸನಾ ಭಕ್ತಿ ಸವೈರಾಗ್ಯ ಜ್ಞಾನ ಉನ್ನಾಹ ಅಧಿಕಾರಿಗಳು ಈ ಪರಿಯಲಿ ಸುಖಿಸಲು ಕ್ಷಿತಿಯ ಜನರಿಗೆ ಲಭಿಸಿತು ಕ್ಷೇಮ 8 ಕಾಲವು ಜರುಗಿತು ದೈತ್ಯರು ನೋಡಿದರು ಮೆಲ್ಲಮೆಲ್ಲನೆ ಪುನಃ ವಿಷಮ ಮಾಡಿದರು ಶೀಲರ ಹಿಂಸಿಸಿ ಸದ್ಧರ್ಮ ಕೆಡಿಸಿದರು ಖಳರು ಕ್ರೌರ್ಯವ ವರ್ಧಿಸಿದರು ದಿನ ದಿನದಿ 9 ಮಹಾಭಯಂಕರ ದೈತ್ಯ ಸಮೂಹವ ಸಂಹನನ ಮಾಡಿದಳು ಮಹಾದುರ್ಗಾದೇವಿ ಬ್ರಾಹ್ಮಣಕುಲದಲಿ ಪ್ರಾದುರ್ಭವಿಸಿದ ದೇವಿ ಮಹಾದುರ್ಗಾ ಜಗದಾಂಬಾ ಶರಣು ಮಾಂಪಾಹಿ 10 ಮಾಸ ಋತು ವರುಷಗಳು ಕಾಲ ಪ್ರವಹಿಸಿತು ಜನಗಳು ಕಲಿಯುಗದ ಕಡೇ ಭಾಗ ಬರಲಾಗ ಹೀನ ಕರ್ಮಂಗಳಲಿ ಆಸಕ್ತರಾದರು 11 ಪುರಾಣಂಗಳಲಿ ಕಲಿಯಗದ ಸ್ಥಿತಿಗತಿಯು ವಿವರಿಸಿದಂತೆಯೇ ನೆನೆಯಲೂ ಭೀತಿ - ಕರ ಪಾಪಕರ್ಮದಲಿ ಜನರು ರತರಾಗಿರಲು ನರಪರ ಕ್ರೂರತನ ದಿನ ದಿನ ಹೆಚ್ಚಿತು 12 ಜ್ಞಾನಾದಿ ಸಂಪತ್ತು ಕಳಕೊಂಡ ಜನರು ವಿಷ್ಣು ದ್ವೇಷಿಗಳಾಗಿ ಬಹು ಬಹು ನೀಚ- ತನದಲಿ ಇರುತಿರಲು ದೇವತಾವೃಂದವು ನಿನ್ನ ಬೇಡಿದರು ಪುನಃ ಧರ್ಮಸ್ಥಾಪಿಸಲು 13 ಯದಾಯದಾಹಿ ಸದ್ಧರ್ಮಕ್ಕೆ ಹಾನಿಯು ಅಧರ್ಮಕ್ಕೆ ವೃದ್ಧಿಯು ಆಗುವದೋ ಆಗಾಗ ಸಾಧುಗಳ ರಕ್ಷಣೆಗೆ ಪಾಪಿಗಳ ಹನನಕ್ಕೆ ಸದ್ಧರ್ಮ ಸ್ಥಾಪನೆಗೆ ಅವತಾರ ಮಾಳ್ಪಿ 14 ಭೂಮಿಯಲಿ ಸುಪವಿತ್ರ ಶಂಭಳ ಗ್ರಾಮದಲಿ ಬ್ರಾಹ್ಮಣ ಮಹಾತ್ಮ ವಿಷ್ಣು ಯಶಸ್ ಭವನದಲಿ ಅಮಿತ ಪೌರುಷಜ್ಞಾನ ಆನಂದಮಯ ನೀನು ವಿಮಲ ಕಲ್ಕ್ಯವತಾರ ಮಾಡಿದಿ ಮಹೋಜ 15 ಕ ಎಂದರಾನಂದ ಕಲ್ಕೆಂದರೆ ಜ್ಞಾನ ಆನಂದ ರೂಪ ಶೂಲಿ ವಜ್ರಿಗಳಿಗೆ ಸುಖಜ್ಞಾನ ಬಲ ಕೊಡುವ ಠಲಕನಮೋ ಪಾಪಹರ ಸೌಭಾಗ್ಯದಾತ 16 ಲೋಕವಿಲಕ್ಷಣ ಸುಪ್ರಭಾಶ್ವ ಏರಿ ನಿಖಿಳ ದುರ್ಮತಿ ಭೂಪಾಲ ಚೋರರನ್ನ ಅಖಿಳ ಪಾಪಿಗಳ ಅಧರ್ಮ ಆಚರಿಸುವರ ಶ್ರೀಕಾಂತದ್ವೇಷಿಗಳ ಕತ್ತರಿಸಿ ಕೊಂದಿ 17 ಸತ್ಯವ್ರತ ಸುರವೃಂದ ವಸುಮತಿ ಪ್ರಹ್ಲಾದ ಶತಮಖ ಪ್ರಜೆಗಳು ವಿಭೀಷಣ ಸುಗ್ರೀವ ಪಾರ್ಥಸುಧಾಮ ರಕ್ಷಕನೇ ಸುರಬೋಧಕನೇ ಸತ್ಯಧರ್ಮರ ಕಾಯ್ವ ಕರುಣಾಳು ಕಲ್ಕಿ 18 ಜ್ಞಾನಸುಖ ಭೂಮದಿ ಗುಣಪೂರ್ಣ ನಿರ್ದೋಷ ವಿಷ್ಣು ಪರಮಾತ್ಮ ಹರಿ ಉದ್ದಾಮ ಬ್ರಹ್ಮ ಪೂರ್ಣಪ್ರಜ್ಞಾರ ಹೃಸ್ಥ ವನಜಭವಪಿತ ಕಲ್ಕಿ ಪ್ರಸನ್ನ ಶ್ರೀನಿವಾಸ ಶರಣು ಮಾಂಪಾಹಿ 19 -ಇತಿ ಕಲ್ಕ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬಂದು ಸಂಸಾರದಿ ನೊಂದು ತಾಪತ್ರಯದಿ ಬೆಂದು ಕಂದಿ ಕುಂದಿದೆ ದೇವಾ ಪ ಪರಮ ಕರುಣಿಯೆ ನಿನ್ನ ಶರಣು ಪೊಕ್ಕಾ ಜನರ ಪರಿಪಾಲಿಪನೆಂಬ ಬಿರಿದೊ ಅರಿದೂ ನೀನೆ ಮೆರೆಯದಲೆ ಸಲಹÀಬೇಕೆನ್ನ ನಿನ್ನ ಚರಣನೀರಜಯುಗ್ಮವನ್ನಾ ತೋರಿ ಹರುಷವನೆ ನೀಡೆಲೋ ಮುನ್ನಾ ಘನ್ನ ಪರಮಭಕುತಿ ವಿರಕುತಿ ನೀನೆ ಎನಗಿತ್ತೆನ್ನ ಹರುಷದಲಿ ಪಾಲಿಸೈಯ್ಯಾ ಜೀಯಾ 1 ಮಾನುಷಾಧಮ ನಾನು ಹೀನಮತಿಯಲಿ ನಿನ್ನ ಧ್ಯಾನವನು ಮಾಡದಲೆ ಬರಿದೆ ಜರಿದೆ ಇಂಥ ಹೀನಭವದೊಳಗೆ ಬಾಯಿದೆರದೆ ದಿವ್ಯ ಜ್ಞಾನಿಜನರನ್ನು ನಾ ಜರಿದೆ ಙÁ್ಞನ ಹೀನನಾಗಿ ಕಾಲಕಳೆದೆ ಇನ್ನು ಶ್ರೀನಿವಾಸನೆ ನಿನ್ನ ಧ್ಯಾನ ಮಾಡುವೆನೋವಿ - ಜ್ಞಾನವನೆ ಪಾಲಿಸಯ್ಯಾ ಜೀಯಾ 2 ಈಸುವತ್ಸರ ನಿನ್ನುಪಾಸನವ ಮಾಡದಲೆ ರಾಸಭಾನಂತೆ ಬದುಕಿದೆ ದೇವಾ ಈಗ ವಾಸವಾಗೆಲೋ ಮನದಿ ಸ್ವಾಮೀ ನಾನು ಈಸಲಾರೆನು ಭವದಿ ಪ್ರೇಮೀ ಎನ್ನ ಆಸೆ ಪೂರ್ತಿಸೊ ಅಂತರ್ಯಾಮಿ ಇನ್ನು ಎಸುವಿಧದಲಿ ಸರ್ವೇಶ ಪೇಳಲಿ ಮುನ್ನೆ ಈಶ ಭವಶ್ರಮ ಕಳಿಯೋ ಈಗಾ ವೇಗಾ 3 ಆವ ಕರ್ಮದಲಿಂದ ಈ ವಸುಮತಿಯಲ್ಲಿ ಈ ವಿಧಾದಿಂದ ಬಂದೆ ನಿಂದೆ ನಿನ್ನ ಸೇವಕಾನಲ್ಲವೆ ತಂದೆ ಎನ್ನ ಆವಾಗ ನೋಡುವಿಯೊ ಮುಂದೆ ಈಗ ಕಾವವನಾರು ನಾ ಎಂದೆ ವೇಗ ದೇವ ನಿನ್ನಯ ಪಾದಸೇವೆ ಸುಖವನು ಇತ್ತು ಆವ(ಅವ)ರಂತೆ ಪೊರೆಯೊ ಎನ್ನಾ ಚೆನ್ನಾ 4 ಉರಗಾದ್ರಿ ನಿಲಯನೆ ವರಭೋಗಿಶಯನನೆ ಪರಮಪುರುಷನು ಎಂದು ಮೊರೆಯಾ ಇಡುವೆ ನಿನ್ನ ಪರಿಪರಿಯ ಜನರನ್ನು ಪೊರೆವೆ ಎನ್ನ ತಿರಸ್ಕಾರ ಮಾಡುವುದು ಥsÀರವೇ ನಿನ್ನ ಮರಿಯಾದೆಯಲ್ಲಮರತರುವೇ ಕೃಪಾ ಕರನೇ ಸರ್ವರಿಗು ಸರಿಯಾಗಿ ಇರುತಿರುವಿ ಗುರುಜಗನ್ನಾಥ ವಿಠಲಾ ವತ್ಸಲಾ 5
--------------
ಗುರುಜಗನ್ನಾಥದಾಸರು
ಭಜನೆಯೊಂದೇ ಸಾಲದೇ ರಂಗಯ್ಯನ ಭಜನೆಯೊಂದೇ ಸಾಲದೇ ಪ ಅನುದಿನ ಸ್ಮರಿಸಲು ಭಜಕರ ದುರಿತವ ತರಿಯುವ ಪರಿಯ ಅ.ಪ. ಹಿಂದೆ ನೋಡಜಮಿಳ ತರಳ ಪ್ರಲ್ಹಾದರ ಚಂದದಿ ಮೆರೆದ ಗೋಪಾಲ ಬಾಲಕರ ವೃಂದಾವನದೊಳಿದ್ದ ಗೋಪಸೇವಕರ 1 ಕೋಮಲೆ ದ್ರೌಪದಿ ಸಭೆಯೊಳು ಸ್ಮರಿಸಲು ಭಾಮೆಗಕ್ಷಯವಿತ್ತ ಕ್ರೂರ ರಕ್ಷಕನ ಪ್ರೇಮದಿ ಅಹÀಲ್ಯೇ ಶಿಲೆಯೊಳು ಭಜಿಸಲು ಸ್ವಾಮಿ ತಾನೊಲಿದು ಮುಕ್ತಿಯ ಕೊಟ್ಟ ಹರಿಯ 2 ದಶರಥನಲಿ ಬಂದು ದಶಕಂಠನನು ಕೊಂದು ವಸುಮತಿಯನು ಪೊರೆದ ಶ್ರೀ ಹರಿಯ ಪಶÀುಪತಿ ಸಖನಾದ ಪನ್ನಗಶಯನನಅಸುರರ ತರಿದ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ರಕ್ಷಿಸೋ | ಬೇಗನೆ ಬಂದು ರಕ್ಷಿಸೊ | ಪ ಕುಕ್ಷಿನಂಬಿದೆ ಕಲ್ಪಭೂಜ | ಆಹಾ ಪೇಕಿಸದೆನ್ನನು ಈಕ್ಷಿಸಿ ಕರುಣದಿ ಅ.ಪ ಕೇಶವ ಖಳಕುಲ ನಿಧನ | ನರ ಕೇಸರಿ ಶ್ರೀಹಯವದನ | ಗುರು ಪಾದ ನಳಿನ | ಸಮೀ ರಾಶನ ಪರ್ಯಂಕಶಯನ | ಆಹಾ ದಾಶರಥಿಯೆ ಭವದಾಶೆ ಬಿಡಿಸಿ ತವ | ದಾಸ ಜನರ ಸಹವಾಸದೋಳಿಟ್ಟನ್ನ 1 ಪಶುಪಾಲ ಮಿಸುನೀಯ ವಸನ | ಧ್ರುವ ಪಶುಪತಿ ಸುತ ಗುಣಪೂರ್ಣ | ದುಷ್ಟ ಶಿಶುಪಾಲ ಮದವಿಭಂಜನ | ಪಾಹಿ | ನಿರಂಜನ | ಆಹಾ | ವಸುಗರ್ಭನ ಪೆತ್ತ ಕುಸುಮದಳೇಕ್ಷಣ | ವಸುಮತಿಯೊಳು ಎನ್ನ ಪಿಸುಣನೆಂದೆನಿಸದೆ 2 ನಾಶರಹಿತ ವನಮಾಲ | ಧರ ಶ್ರೀಶಾಮಸುಂದರವಿಠಲ | ಗುಡಾ ಕೇಶ ವರದ ಸುಶೀಲ | ಪಾಕ | ಶಾಸನಾನುಜ ಗಾನಲೋಲ | ಆಹಾ | ಪೂಶರಪಿತ ಸ್ವಪ್ರಕಾಶ ಪರಮ | ವಿ ಲಾಸವ್ಯಾಸ ಮಹಿದಾಸ ಲೋಕೇಶನೆ 3
--------------
ಶಾಮಸುಂದರ ವಿಠಲ
ರಾಮನ ನೆನ ಮನವೇ-ಹೃದಯಾ-ರಾಮನನೆನೆ ಮನವೇ ಪ ಸದ್ಗುಣ ಧಾಮನಾ ಸೀತಾ ಅ.ಪ. ದಶರಥ ನಂದನನಾ-ಧರಣಿಯೊಳಸುರರ ಕೊಂದವನ ಪಶುಪತಿ ಚಾಪವ ಖಂಡಿಸಿಮುದದಿಂ ವಸುಮತಿ ಸುತೆಯಂ ಒಲಿದೊಡಗೂಡಿದ-ರಾಮನ 1 ತಂದೆಯ ಮಾತಿನಲಿ-ವನಕೈತಂದು ಸರಾಗದಲಿ ಬಂದ ವಿರಾಧನ ಕೊಂದು ನಿಶಾಚರಿ ಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ-ಕಬಂಧನ ಮಾತನು ಸರಿಸುತಲಿ ವಾತನಮಗನೊಳು ಪ್ರೀತಿಯಿಟ್ಟು ಪುರುಹೂತನ ಸುತನಂ ಘಾತಿಸಿ ದಾತನ-ರಾಮನ 3 ತರಣಿ ತನಯನಿಂದ-ಕಪಿಗಳ ಕರೆಸಿ ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ-ರಾಮನ4 ಗುರುತು ಕೊಂಡು ಅರಿಪುರವನು ಸುಟ್ಟುರುಹಿದ ವಾನರ- ವರನಿಗೆ ಸೃಷ್ಠಿಪಪದವಿತ್ತಾತನ-ರಾಮನ 5 ಶರನಿಧಿಯನು ಕಟ್ಟಿ-ಶತ್ರುನಿಕರವನು ಹುಡಿಗುಟ್ಟಿ ಶರಣನ ಲಂಕೆಗೆ ಧೊರೆಯನು ಮಾಡಿ ಸಿರಿಯನಯೋಧ್ಯಗೆ ಕರೆತಂದಾತನ-ರಾಮನ 6 ಸರಣಿಯ ಲಾಲಿಸುತ ಶರಣಾಭರಣ ಪುಲಿಗಿರಿಯೊಳು ನೆಲೆಸಿದವರದವಿಠ್ಠಲ ಧೊರೆ ಪರಮೋದಾರನ-ರಾಮನ 7
--------------
ಸರಗೂರು ವೆಂಕಟವರದಾರ್ಯರು
ವಂದೇ ಮುಕುಂದ ನಮೊ | ನಂದ ಮೂರುತಿ ಪರಮಾನಂದ ನರಸಿಂಹಾ ಪ ಬಿಸಿಜಪೀಠನ ವರವ ಪಡೆದು ಮಹಾರಾಜೇಂದ್ರ | ವಸುಮತಿಗೆ ತಾನೆ ಸ್ವಾಮಿ ಎಂದು || ಹಸುಳೆಯನು ಬಾಧಿಸಲು ಮೊರೆಯಿಡಲಾಕ್ಷಣ | ಮಿಸಣಿಪ ಕಂಭದಿ ಬಂದ ಭಳಿರೆ ನರಸಿಂಹಾ 1 ರೋಷವನೆ ತಾಳಿ ನಿಟ್ಟುಸುರಗೈಸಿಕೊಳುತಾ | ಸೂಸಿ ಕಿಡಿಗಳನುದುರೆ ಕುಪ್ಪಳಿಸುತ ಕಮ || ಲಾಸನಾದ್ಯರ ಪಾಲಿಸಿದ ನರಸಿಂಹಾ 2 ಅಜವಾಣಿ ನೆಲೆಯಲ್ಲಿ ವಾಸವಾಗಿದ್ದ ನರ | ಗಜಪಗೀಯ ಮೊಗನೆ ಆನಂದ ಮಗನೇ || ಭಜಿಸುವನು ಗತಿ ಕೊಡುವ ಜನಮೇಜಯ ನೃಪವರದ | ವಿಜಯವಿಠ್ಠಲ ವರದಾತೀರ ನರಸಿಂಹ 3
--------------
ವಿಜಯದಾಸ
ಶ್ರೀ ಮದ್ಭಾಗವತ ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ. ಚಿಟ್ಟೆಸ್ವರ - ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ || ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1 ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2 ಚಿಟ್ಟೆಸ್ವರ - ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ || ರಾಗ ಮೋಹನ : ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3 ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ || ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4 ಚಿಟ್ಟೆಸ್ವರ - ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ || ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ || ಭಾರ ಕಳೆದ ಗುರು ಗೋವಿಂದ ವಿಠಲ 6 ಚಿಟ್ಟೆಸ್ವರ ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ || ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ | ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ | ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ
--------------
ಗುರುಗೋವಿಂದವಿಠಲರು
ಶ್ರೀ ವಿಷ್ಣು ತೀರ್ಥರು (ಮಾದನೂರು) ಶ್ರೀ ವಿಷ್ಣು ತೀರ್ಥರೆ ನಮೋ ಪ ತಾಮರಸ ಭ್ರಮರರೆಂದನಿಸೂವಲೌಕಿಕ ಸುವೈದಿಕ ಸುಶಬ್ದ ಜಾತವಸಾರ್ವಭೌಮ ಹರಿಗನ್ವಯಿಪರಂ ಭಜಿಸುತ್ತ ಇಷ್ಟಾರ್ಥವಂ ಪಡೆಯಿರೊ ಅ.ಪ. ಸವಣೂರು ಸನಿಯ ಸಿದ್ಧಾಪುರದ ಸೀಮೆಯಲಿಅವಸಿತರು ಬಾಲ ಆಚಾರ್ಯ ಭಾಗೀರ್ಥಿ ಎಂಬುವರು ಸದ್ಧರ್ಮರತರೆನಿಸಿ ಜಯತೀರ್ಥರಂ ಸೇವಿಸಲು ಬಹು ಭಕುತಿಲಿ |ಅವರನುಗ್ರಹ ಜಾತ ವರಶಿಶುವಿಗವರ ನಾಮವನಿಟ್ಟು |ಕಾಲದೊಳಗುಪನಯ ನವಂ ಮಾಡಿ ಸರ್ವ ವೇದ ವೇಂದಾಗ ಪಾರಂಗತರು ಐಜಿ ಆಚಾರ್ಯರಲಿ ಬಿಡಲು 1 ಕುಶಲತೆಯು ಮತ್ತೆ ಸೌಶೀಲ್ಯ ಗುಣನಿಧಿ ಎನಿಪಶಿಷ್ಯನಿಗೆ ಸಚ್ಛಾಸ್ತ್ರ ಪಾರಂಗತನು ಎನಿಸಿಒಸೆದು ದ್ವಿತಿಯಾಶ್ರಮಕೆ ಚೋದಿಸಿ ಕಳುಹಲವ ಗೃಹಧರ್ಮ ಸ್ವೀಕರಿಸುತ |ಎಸೆವ ಕೀರ್ತಿಲಿ ಮೆರೆದು ಶಿಷ್ಯರಿಗೆ ಶಾಸ್ತ್ರ ಬೋ-ಧಿಸುತಲಿರಲು ಸತ್ಸಂತಾನವಂತರಾಗುತಎಸೆವ ಹಂಸತೂಲಿಕ ತಲ್ಪದೊಳು ಪವಡಿಸಿರೆ ಅಪರಾಹ್ನ ರೋಗಾರ್ತರು 2 ಪತಿ ಪುರಂದರ ಸುದಾಸಾರ್ಯ ನುಡಿದುದನುಅಂತೆ ಮಂಚ ಬಾರದು ಮಡದಿ ಬಾರಳು ಎಂಬಪಿಂತಿನ್ವಚನವ ಕೇಳಿ ಚಿಂತಿಸುತ್ತಿರೆ ತಮಗೆ ಜಾತಿ ಸ್ಮøತಿ ಒದಗುತಿರಲು 3 ಘನವಾದ ಐಶ್ವರ್ಯ ಸತಿಸುತರು ಬಂಧುಗಳತೃಣಕೆ ಸಮ ತಿಳಿಯುತ್ತ ಜಯ ಗುರೂ ಹೃದ್ಗತವಅನು ಸರಿಸೆ ಅಜ್ಞಾತ ಬಗೆಯಲಿರುತಿಹನೆಂದು ವೈರಾಗ್ಯವನೆ ಪೊಂದುತ ||ಮನೆಯಿಂದ ಹೊರ ಹೊರಟು ಅನತಿ ದೂರವಸಾಗೆಘನ ಸರ್ಪ ರೂಪದಿಂ ತೋರಿ ಕೊಳೆ ಜಯತೀರ್ಥ ಮುನಿವರ್ಯ ಹೃದ್ಗತವ ತಿಳಿದು ವಸುಮತಿ ವ್ಯರ್ಥ ಸಂಚರಣೆ ಸಂತ್ಯಜಿಸುತ 4 ಶೃತಿ ಸ್ಮøತಿಗೆ ಸಮ್ಮತವು ದಶಮತಿಯ ಸಮಯವೆನುತತಿ ಹಿತದಿ ಪ್ರವಚನೆಗೆ ಪ್ರೇರಿಸಿಹ ಗುರುಮತವ ಸತ್ಕರಿಸಿ ಕಾರುಣ್ಯ ಕೊಂಡಾಡಿ ಸಾಧಿಸಲು ತೃತಿಯಾಶ್ರಮವನು ||ಹಿತದಿ ಕೈಕೊಂಡು ಮಲವ ತಾನಪಹರಿಪಸರಿತೃತಟದಲಿ ಇರುವ ಮನುವಳ್ಳಿ ಪಳ್ಳಿಯಲಿ ನೆಲಿಸುತಲಿ ವಿಹಿತ ಕರ್ಮಾಚರಿಸಿ ಸಿರಿಮತ್ಸು ಮಧ್ವ ವಿಜಯವ ಪಠಿಸುತಿಹರು 5 ಸಂಚಿತ ಸಿರಿ ವಿಷ್ಣುತೀರ್ಥರೆಂಬಂಕಿತದಿ ಮೆರೆಯುತಿಹರು 6 ಭಾಗವತ ಸಾರದುದ್ಧಾರವನುಮುಂತಾದ ಮುಕುತಿ ಸತ್ಪಂಥಗಳ ಬೋಧಿಪಗ್ರಂಥಗಳ ರಚಿಸಿ ಸುಜನೋದ್ಧಾರವನೆ ಗೈದು ಶೋಭಿಸುವರವನಿಯಲ್ಲಿ 7 ಲಕ್ಷುಮಿಯು ನರೆಯಣರನುಗ್ರಹವನೇ ಪಡೆದುದಕ್ಷಿಣದಿ ಬದರಿಕಾಶ್ರಮವೆನುತಿರೆ ಮೆರೆವತ್ರಕ್ಷ್ಯ ಮೋದೇಶ್ವರ ಪುರದಲಿ ನೆಲಿಸಿ ನೂರೆಂಟು ಸಲ ಸುಧೆ ಪ್ರವಚಿಸುತಲಿ ||ಕುಕ್ಷಿಯೊಳಗುಳ್ಳ ಸು ಕ್ಷೇತ್ರಗಳ ಸಂಚರಿಸಿ ಲಕ್ಷಿಸುತ || ಯೋಗ್ಯ ಜನಕುಪದೇಶ ಚರಿಸಲುಸ್ವಕ್ಷೇತ್ರಕೇ ಮರಳಿ ಕುಶಸರಿತು ತೀರದಲಿ ಪರ್ಣ ಶಾಲೆಯಲಿ ವಸಿಸಿ 8 ಕಾಲ ತಾ ತಿಳೀಯುತ್ತ ಶಿಷ್ಯಜನಕರಿವಿತ್ತು ಶಾಲಿವಾನ ಸಹಸ್ರ ಷಟ್ಯತೊತ್ತರವಷ್ಟಸಪ್ತತಿಯು ಮಾಘಾಸಿತ ಪಕ್ಷ ತ್ರಯೋದಶಿ ಸುಮೂಹೂರ್ತದಿ ||ಸುರರು ಭೂಸುರರೆಲ್ಲ ಜಯಘೋಷ ಗೈಯ್ಯುತಿರೆವರ ಮಹಾತ್ಮರು ಆಗ ಹೊಗಲು ವೃಂದಾವನವಪರಿಜನರು ಮುಳುಗಿದರು ದುಃಖ ಆನಂದ ಸಾಗರದಲದನೇನೆಂಬನು 9 ಅವತಾರಮಾರಭ್ಯ ಐದು ದಶ ವರ್ಷಗಳುಅವನಿಜನ ದೃಗ್ವಿಷಯರೀ ಮಹಾತ್ಮರು ತಾವುಅವಧೂತ ವೇಷದಿಂ ಭವನ ಪಾವನವೆನಿಸಿ ಪಿಂತೆ ಶುಕಮುನಿಯಂದದಿ ||ಪವನ ಮತ ಶರನಿಧಿಗೆ ಶಶಿಯು ಇಪ್ಪತ್ತೆಂಟುಪವಿತರ ಸುಲಕ್ಷಣ ಸುತನುವಿಂದುರೆ ಮೆರೆದುಅವನಿಸುರ ಶಿಕ್ಷಣ ಸದುಪದೇಶನುಷ್ಠಾನದಿಂ ಗೈದ ಕೀರ್ತಿಯುತರು 10 ಇವರ ನಾಮಸ್ಮರಣೆ ಕಲಿಮಲದ ಅಪಹರಣೆಇವರ ಸೇವೆಯ ಫಲವು ಸರ್ವಾಮಯ ಹರವುಇವರುನುಗ್ರಹವಿರಲು ವಾದಿನಿಗ್ರಹವಹುದು ಇದಕೆ ಸಂಶಯ ಸಲ್ಲದು ||ಇವರಿಹರು ಸುರತರುವಿನಂದದಲಿ ಶರಣರಿಗೆಇವರೆ ಚಿಂತಾಮಣಿಯು ಸರ್ವ ಭಯ ಹರಿಸುವರು ಇವರ ಗುಣಕೊಂಡಾಡಿ ಇವರೊಲಿಮೆ ಅರ್ಜಿಸಲು ಸರ್ವಕಾಮವು ಲಭ್ಯವು 11 ಸರ್ವಕ್ಷೇತ್ರಾಧಿಕದಿ ಭೂವರಹ ನಿಲ್ಲಿರುವಸರ್ವಭಯ ನಾಶನಕೆ ನರಹರಿಯು ಅರಿರೂಪಸರ್ವಭಕ್ತರ ಭೀಷ್ಟ ವರ್ಷಣಕೆ ಗೋಪಾಲಕೃಷ್ಣರೂಪದಿ ಇರುವನು ||ಇವರ ವೃಂದಾವನದೊಳೀ ಪರೀ ಹರಿರೂಪಪವನ ರೂಪಗಳಿಹವು ಶಿರದೊಳಗೆ ಜಯ ಮುನಿಯುಸರ್ವಋಷಿ ದೇವತೆಗಳಿಹರು ವೃಕ್ಷರೂಪದಿ ಈ ಪವಿತರ ಕ್ಷೇತ್ರದಿ 12 ಭಾಗವತ ನಿಷ್ಠಾತರೆ ||ನಮೊ ನಮೋ ಭಕ್ತಜನ ಕಾಮಧುಕ್ ಭವ್ಯಾತ್ಮನಮೋ ಶ್ರೀ ಮದಾನಂದ ಮುನಿಚರಣ ಮಧುಪರೆನಮೊ ಗುರೂ ಗೋವಿಂದ ವಿಠಲ ಪಾದಾಶ್ರಿತರೆ ನಮೊ ವಿಷ್ಣುತೀರ್ಥ ಪಾಹಿ ||
--------------
ಗುರುಗೋವಿಂದವಿಠಲರು
ಸಮಾಜ ಚಿಂತನೆ :ನೀತಿಬೋಧನೆ ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1 ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2 ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3
--------------
ಕನಕದಾಸ
ಸಾರ ಪ ಧರೆಯನಾಳಿದ ತ್ರಿಶಂಕು ದೊರೆಯು ತಾನೆಲ್ಲಿಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳೆಲ್ಲಿಶರಧಿ ಮಧ್ಯದೊಳಿದ್ದ ರಾವಣಾಸುರನೆಲ್ಲಿಸಿರಿಯುಳ್ಳ ಕೌರವರು ಪಾಂಡವರು ತಾವೆಲ್ಲಿಧರೆಗಿಳಿದು ಪೋದಾತ ವಾಲಿಯು ತಾನೆಲ್ಲಿಸುರರೊಡನೆ ಹೋರಿದಾ ಬಲಿಯು ತಾನೆಲ್ಲಿ 1 ದಶರಥ ಮೊದಲು ಷೋಡಶ ರಾಯರುಗಳೆಲ್ಲಿಅಸಹಾಯ ಶೂರ ವೀರ ವಿಕ್ರಮರೆಲ್ಲಿಅಸಮಬಲ ವಸುಮತಿಯ ಹಿರಣ್ಯಾಕ್ಷನೆಲ್ಲಿವಸುಧೆಯೊಳಗಿದ್ದ ಹದಿನಾರು ಸಾವಿರರೆಲ್ಲಿಕುಸುಮ ಬಾಣನ ಪಡೆದ ದೇವ ತಾನೆಲ್ಲಿಸುಶರೀರ ಎನಿಸಿದ ಅಭಿಮನ್ಯು ತಾನೆಲ್ಲಿ 2 ಈ ಪರಿಯೆ ಈ ಧರೆಯನಾಳಿ ಹೋದವರೆಷ್ಟುಈ ಪರಿಯೆ ಸ್ವರ್ಗಕ್ಕೆ ಇಂದ್ರಾದಿಗಳು ಎಷ್ಟುಈ ಪರಿಯೆ ಹರಬ್ರಹ್ಮರಾದವರು ತಾವೆಷ್ಟುಈ ಪರಿಯೆ ಯುಗಪ್ರಳಯವಾಗಿ ಹೋದವು ಎಷ್ಟುಈ ಪರಿಯೆ ಜಲ ಪ್ರಳಯವಾಗಿ ಹೋದವು ಎಷ್ಟುಶ್ರೀಪತಿ ಕೇಶವನಲಿಡು ಭಕುತಿ - ಕೊಡುವ ಮುಕುತಿ 3
--------------
ಕನಕದಾಸ