ಒಟ್ಟು 39 ಕಡೆಗಳಲ್ಲಿ , 23 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಲಿನಲಿದರು ದ್ವಾರಕಾಪುರದಿ ನಳಿನನಾಭ ಶ್ರೀ ರುಕ್ಮಿಣಿ ಕಲ್ಯಾಣದಿ ಪ. ಜಲರುಹಲೋಚನೆ ಚೆಲುವೆ ಶ್ರೀ ರುಕ್ಮಿಣಿ ಸಲಲಿತಾಂಗನ ನೋಡಿ ವಲುವಿನಲಿ ಕುಳಿತಿರೆ ಅ.ಪ. ಅಂಬರದಲಿ ಭೇರಿ ವಾದ್ಯಗಳೆಸಗೆ ತುಂಬುರು ನಾರದರು ಗಾನವ ಪಾಡೆ ಸಂಭ್ರಮದೊಳು ಮಾಂಗಲ್ಯ ಬಂಧನ ಮಾಡೆ ಅಂಬುಜೋದ್ಭವ ರುಕ್ಮಿಣಿ ಕಂಠದೊಳು 1 ವಿಪ್ರರು ವೇದ ಮಂತ್ರವ ಪಠಿಸೆ ಸ್ವ ಪ್ರಕಾಶ ರುಕ್ಮಿಣಿ ಕರಪಿಡಿಯೆ ಕೃಷ್ಣಾ ಅಪ್ರಮೇಯನೆಂದು ಸ್ತುತಿ ಪಾಠಕರು ಪೊಗಳೆ ಕ್ಷಿಪ್ರದಿ ವಿಪ್ರರಿಗೆ ದಕ್ಷಿಣೆ ತಾಂಬೂಲವೀಯೆ 2 ದೇವಕಿ ವಸುದೇವನಿಗ್ಹರುಷವನಿತ್ತು ದೇವ ಶ್ರೀ ಶ್ರೀನಿವಾಸ ಭಕ್ತ ಜನಾಶ್ರಿತ ಕಾವ ಸಕಲ ಜೀವರ ಹೃದಯನಿವಾಸ ದೇವ ಯಶೋದೆ ನಂದ ಕಂದನ ನೋಡಿ 3
--------------
ಸರಸ್ವತಿ ಬಾಯಿ
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪ್ರತಿಪದೆಯ ದಿನ ರಂಭೆ :ಓಹೊ ಬಲ್ ಬಲ್ ಬಲ್ ಶ್ಯಾಣೆ ಜಾಣೆ ಪ. ಈ ದಿವಸದಿ ನಿನ್ನೆಯ ದಿನದವನನ್ನು ಆದರಿಸಲು ಕಾರ್ಯೋದಯವೇನೆ ಓಹೋ ಬಲ್ ಬಲ್ ಶಾಣೆ ಜಾಣೆ ಅ.ಪ. ಊರ್ವಶಿ : ಚಿತ್ತಜರೂಪೆ ಸರ್ವೋತ್ತಮ ಭಾಷೆಯ ನಿತ್ತಿಹ ಕಾರಣದಿ ಉತ್ತಮ ಶ್ರೀಪಾದ ಎತ್ತಲು ಬೇಕೆಂದು ಒತ್ತಾಯಗೈದ ಮೋದಿ 1 ಮತ್ತೊಂದು ಕಾರಣ ಉಂಟು ಶ್ರೀಹರಿಗಿವ ನಿತ್ಯವಾಹನ ಕಾಣೆಲೆ ಇತ್ತ ಪಯಣಗೈವೊಡತ್ತಬೇಕಾದರೆ ಭೃತ್ಯನಿವನು ಹೇ ಬಾಲೆ 2 ಆದಕಾರಣದಿಂದ ನಾದಿನಿ ಕೇಳೆ ಪ- ಕ್ಷಾದಿಯೊಳಿವನ ಮ್ಯಾಲೆ ಪಾದವ ನೀಡಿ ವಯೋದಯದಿಂದ ಶ್ರೀ ಮಾಧವ ಬರುವ ಕಾಣೆ 3 ಕೇರಿಕೇರಿಯ ಮನೆಯಾರತಿಗಳನೆಲ್ಲ ಶ್ರೀರಮಾಧವ ಕೊಳ್ಳುತ ಭೂರಿ ವಾದ್ಯಗಳ ಮಹಾರವದಿಂದಲಿ ಸಾರಿ ಬರುವನು ಸುತ್ತ 4 ಭಾವೆ ನೀ ಕೇಳೆ ನಾನಾ ವಿಧದಿಂದಲಿ ಸೇವಕರಿಗೆ ದಯದಿ ಪಾವನಗೈದು ಮಹಾವಿನೋದೇಕಾಂತ ಸೇವೆಯ ಗೊಂಡ ಕಾಣೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರದೋಷಕಾಲವಿದೀಗ ನೀ ಮರೆ- ಯದೇ ನೆನೆಯೊ ಶಿವನಾ ಶಂಕರನಾ ಪ ಸದಾ ಸಕಲ ಸುರರಿಂದ ಕೂಡಿ ತಕ ತಧಿಂ ಎನುತ ಕುಣಿಯುವ ಶಿವನೀಗಲೂ ಅ.ಪ ಸಕಲ ವಾದ್ಯಗಳೂ ಶಂಭೋ ಎಂಬ ಸುವಾದಗಳೂ ತುಂಬುರ ನಾರದರೂ ನುಡಿಸಿ ಹೇ- ರಂಬ ಜನಕ ವಿಶ್ವಂಭರ ಎಂದು ದಿ- ಗಂಬರನಾಗಿ ಚಿದಂಬರ ಕುಣಿಯುವ 1 ಭೂಷಣಗಳ ಮಾಡಿ ಭಿಕ್ಷವನೂ ಬೇಡಿ ತಾತನಾಗಿ ಮೆರೆದು ಹಿಮ ಶೈಲ- ಜಾತೆ ಸಹಿತ ಪ್ರಖ್ಯಾತನಾಗಿ ಭವ- ಭೀತಿ ಬಿಡಿಸಿ ದುಃಖೇತರ ಕೊಡುವನು 2 ಗಿರಿರಾಜಕುಮಾರಿ ಕೈಮುಗಿದು ತನಗರುಹು ತತ್ವವೆನಲು ಸುರರು ಭಲಾ ಎನಲು ಪರಮ ಗುಣಸಾಂದ್ರ | ಕೇಳು ದಿನ- ಪರಾತ್ಪರನು ಶ್ರೀ ಗುರುರಾಮವಿಠಲ ವರತಾರಕ ಮಂತ್ರವಿದೇ ಎಂದನು 3
--------------
ಗುರುರಾಮವಿಠಲ
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಂದ ಕೃಷ್ಣ ಛಂದದಿಂದ ಬಂದ ನೋಡೆ ಗೋಪ ವೃಂದದಿಂದ ನಂದಸುತ ಬಂದ ನೋಡೆ ಪ ಗೋವ ಮೇವನೀವ ದೇವ ಬಂದ ನೋಡೆ ದೇವತಾ ವಾದ್ಯಗಳಿಂದ ಬಂದ ನೋಡೆ 1 ಪಾಪ ಪೋಪ ಗೋಪ ರೂಪ ಬಂದ ನೋಡೆ ತಾಪ ಲೋಪ ಲೇಪ ಲೋಪ ಬಂದ ನೋಡೆ 2 ಭಾಸುರ ಸುಖ ಸೂಸುತ ಬಂದ ನೋಡೆ ವಾಸುದೇವವಿಟ್ಠಲ ತಾ ಬಂದ ನೋಡೆ 3
--------------
ವ್ಯಾಸತತ್ವಜ್ಞದಾಸರು
ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ
ಮನರಥದಿಂದಲಿ ಘನರಥಕೀಗಲೆ ಬೇಗನೆ ಬಾರೊ ಪ. ಶ್ರೀ ಶ್ರೀನಿವಾಸ ಶ್ರೀ ವೆಂಕಟೇಶ ದನುಜದಲ್ಲಣ ಬೇಗ ಬಾರೋ ಕೃಷ್ಣ ಅ.ಪ. ಮುತ್ತಿನ ತೋರಣ ಸುತ್ತು ಛತ್ತರಿಗೆಯು ಬೇಗನೆ ಬಾರೊ ಸಿರಿ ಸಹ ಬೇಗನೆ ಬಾರೊ ಉತ್ತಮ ಭಕ್ತರು ಎತ್ತಿ ಕೈ ಕರೆವರು ಬೇಗನೆ ಬಾರೊ ನಿತ್ಯ ಮಂಗಳ ನಿನ್ನ ಉತ್ತಮ ರೂಪವ ಚಿತ್ತದಿ ತೋರುತ ಸತ್ಯ ಸಂಕಲ್ಪನೆ 1 ಗಡಗಡ ನಡೆಯುವ ಘನರಥದಲಿ ನಿಂದು ಬೇಗನೆ ಬಾರೊ ಎಡಬಲದಲಿ ಶ್ರೀ ಭೂಮಿಯರೊಡಗೂಡಿ ಬೇಗನೆ ಬಾರೊ ಧಡಧಡ ನಡೆಯುತ ದೈತ್ಯದಲ್ಲಣನೆ ಬೇಗನೆ ಬಾರೊ ನುಡಿಸುವ ವಾದ್ಯಗಳ್ ಪಿಡಿದಿಹ ಚಾಮರ ಕಡೆಗಣ್ಣೊಳು ಭಕ್ತರನೀಕ್ಷಿಸುತಲಿ 2 ನಾರದ ತುಂಬುರ ನಾಟ್ಯವನಾಡ್ವರು ಬೇಗನೆ ಬಾರೊ ಬಾರಿ ಬಾರಿಗೆ ಭಕ್ತರು ನುತಿಗೈವರು ಬೇಗನೆ ಬಾರೊ ವಾರಿಜಾಸನ ವಂದ್ಯ ಶ್ರೀನಿವಾಸ ದೊರಿ ಬೇಗನೆ ಬಾರೊ ತೋರುತ ರೂಪವ ಬೀರುತ ಕರುಣವ ಮಾರಜನಕ ಅಪಾರ ಮಹಿಮನೆ 3 ವಂದಿಸಿ ಕರೆವರೊ ನಿಂದು ಭಕ್ತರೆಲ್ಲ ಬೇಗನೆ ಬಾರೊ ಇಂದಿರೆಯರಸನೆ ಮಂದರೋದ್ಧರ ಕೃಷ್ಣ ಬೇಗನೆ ಬಾರೊ ಇಂದು ಸ್ಥಿರವಾರ ಸ್ಥಿರವಾಗಿ ಸಲಹಲು ಬೇಗನೆ ಬಾರೊ ಹಿಂದೆ ಮುಂದೆ ಭಕ್ತ ಸಂದಣಿಯೊಳು ಗುರು ವೃಂದ ಬಿಂಬ ಮನ್ಮನ ಬಿಂಬನೆ ರಥಕೆ 4 ಅಪಾರ ಕರುಣದಿ ಭಕ್ತರ ಪೊರೆಯಲು ಬೇಗನೆ ಬಾರೊ ಶ್ರೀಪತಿ ಶೇಷಾಚಲನಿಲಯನೆ ಹರಿ ಬೇಗನೆ ಬಾರೊ ಗೋಪಾಲಕೃಷ್ಣವಿಠ್ಠಲನೆ ತ್ವರಿತದಿ ಬೇಗನೆ ಬಾರೊ ಭೂಪರೈವರ ಕಾಯ್ದ ಗೋಪಕುವರ ಕೃಷ್ಣ ಈ ಪರಿಯಿಂದಲಿ ಭಕ್ತರ ಪೊರೆಯಲು 5
--------------
ಅಂಬಾಬಾಯಿ
ರಾಘವೇಂದ್ರ ರಾಯರೆಂಬೋ ಮಹಾಯೋಗಿವರರ ನೋಡೈ ಪ ಭಾಗವತರು ಶಿರಬಾಗಿ ಕರೆಯಲತಿವೇಗದಿ ರಥದೊಳು ಸಾಗಿಬರುವ ಶ್ರೀ ಅ.ಪ. ಮಿನಗುವ ಘನವಾಹನಗಳ ರಥ ಶೃಂಗರವೋ ಕರದೊಳುಕನಕಛಡಿ ಕೊಡಿಗಳನುಪಮ ಭಾರವೊಅನಿಳ ನಿಗಮದಿ ನಿಪುಣ ಸುಜನರ ಪರವಾರವೋ ಪರಸ್ಪರಪಣದ ವೇದ ಘೋಷಣ ಸುಸ್ವರ ಗಂಭೀರವೋಘನ ಗುಣ ಗಣಮಣಿ ಮುನಿರಾಯನ ಮನದಣಿಯ ಪಾಡಿ ಕುಣಿಕುಣಿದಾಡಿ ಶಿರವಮಣಿಸುವರೋ ಗುಣವೆಣಿಸುವರೋ ದ-ಕ್ಷಿಣದಿಂ ತೆರಳಿ ವರುಣನ ಬೀದಿಯೊಳು 1 ಧರಣಿ ಸುರವರನಿಕರ ಕುಮುದೋದಯ ಚಂದ್ರನ ಮದ (ನ) ದು-ರ್ಧರ ದ್ವಿರದನ ತೆರಸಿ ಮೆರೆದ ಅಪ್ರತಿಮ ಮುನೀಂದ್ರನಸರಸ ಸುಧಾ ಪರಿಮಳ ಬೆರೆದ ಸುಗುಣಸಾಂದ್ರನ ಧರೆಯೊಳುಸಿರಿ ವಿಜಯೀಂದ್ರರ ಕುವರನೆನಿಪ ಸುಧೀಂದ್ರನಸರಸಿಜ ಸಂಭವ ಶರಣ್ಯ ಸುಂ-ದರ ನಿಜಾಂಘ್ರಿ ಭಜಕರ ಭಾಗ್ಯೋದಯಸುರರ ಸುರಭಿಗೆ ಸಮರೆಂದು ಸಾರಿ ಡಂಗುರ ಹೊಯಿಸುತ್ತ ಉತ್ತರ ಬೀದಿಯೊಳು 2 ವೆಗ್ಗಳ ವಾದ್ಯಗಳ ಸುವಾದ್ಯವೋ ಆರುತಿಯಬೆಳಗುವರು ಹಗಲ ದೀಪಗಳಗಾಧವೋಇಳೆಯೊಳು ಜನುಮ ಸಫಲವೆಂಬುವರ ವಿನೋದವೋ ಹಾಸ್ಯದಲಲಿನೆಯರಡಿ ಘಿಲಘಿಲಕೆಂಬುವ ನಟನ ಭೇದವೋಭಳಿರೆ ಭಳಿರೆ ಭಜಿಸುವರ ಭಕುತಿಬಲಿಗೊಲಿದ ಇಂದಿರೇಶನ ಕರದರಗಿಳಿಯೊ ನಳಿಯೊ ನಳಿನಾಂಘ್ರಿಯುಗದಿನಲಿಯುತ ಸುರರಾಜನ ಬೀದಿಯೊಳು 3
--------------
ಇಂದಿರೇಶರು
ಶೌರಿ ಬಾರೋ ಭಕ್ತರ ದೊರೆ ಬಾರೋ ಬಾಬಾ ಮನೆಗೆ ಪ ಚಾರುತರ ನವರತುನದ ಶೃಂ- ಗಾರ ರಥದೊಳು ಕುಳಿತು ಬೇಗನೇ ಭೇರಿ ವಾದ್ಯಗಳೆಲ್ಲ ಮೊಳಗಲು ನಾರಿ ರುಕ್ಮಿಣಿ ಭಾಮೆ ಸಹಿತಅ.ಪ ಸುರರು ಅಸರರು ಕೂಡಿ ಶರಧಿಯ ಮಥಿಸಲು ಭರದಿ ಪುಟ್ಟಲು ಸುಧೆಯು ಪರಮ ಹರುಷದಿಂದ ದೊರಕಿತಮೃತವೆಂದು ಅಸುರರೆಲ್ಲರು ಬರಲು ಬೆರಗಾಗಿ ಸುರರೆಲ್ಲ ಉಪಾಯವನರಿಯದೆ ಗಗನ ನೋಡುತಿರಲು ತ್ವರದಿ ಶ್ರೀಹರಿ ಅವರ ನೋಡುತ ಪರಿಪರಿಯ ಆಭರಣ ಪೀತಾಂ- ಬರಗಳಿಂದಲಂಕರಿಸಿ ಸುಂದರ ತರುಣಿ ರೂಪವ ಭರದಿತಾಳಿದೆ 1 ಹರಿಯ ಸ್ತ್ರೀರೂಪವ ಪರಶಿವ ಸ್ಮರಿಸುತ ಮರಳಿ ನೋಡಲಪೇಕ್ಷಿಸೆ ಪರಿ ಪ್ರಾರ್ಥಿಸೆ ಪರಮಾತ್ಮ ನುಡಿದನು ಇದುತರವಲ್ಲೆನುತ ಉರಗ ಭೂಷಣನ ಪ್ರಾರ್ಥನೆ ಸಲಿಸುವೆನೆಂದು ತರುಣಿಯಾದನು ಹರಿಯು ಪರಮಸೂಕ್ಷ್ಮದ ವಸನ ವಡ್ಡ್ಯಾ- ಣಗಳಲಂಕರಿಸುತ್ತ ವನದೊಳು ಚರಿಸುತಿರೆ ಹರ ಬೆರಗಾಗಿ ಹಿಂದೋ- ಡುತಲಿ ಬರೆ ಮರೆಯಾದ ದೇವನೆ 2 ಹಿಂದೆ ದೈತ್ಯನು ಬಹುಚಂದದಿ ತಪಗೈದು ಕಂದುಗೊರಳನ ಮೆಚ್ಚಿಸೇ ಬಂದನಾಗಲೇ ಶಂಭು ಇಂದುವರ ಬೇಡೆನಲು ವಂದಿಸಿ ಬೇಡಿದ ವರವ ತಾನು ಅಂದು ವರಗಳ ಕೊಟ್ಟು ಹಿಂದಿರುಗಲು ಶಿವನು ಹಿಂದೆ ಬೆನ್ನಟ್ಟಿದ ರಕ್ಕಸನೂ ಹಿಂದÀುರಗದಲೆ ಓಡುತಲೆ ಶ್ರೀ ತಂದೆ ಕಮಲನಾಭ ವಿಠ್ಠಲ ನೆಂದು ಮೊರೆಯಿಡೆ ಕೇಳಿ ತ್ವರದಲಿಬಂದು ರಕ್ಷಿಸಿ ಕಾಯ್ದ ಶ್ರೀಹರಿ 3
--------------
ನಿಡಗುರುಕಿ ಜೀವೂಬಾಯಿ
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಸಿರಿ ಚರಣದಲ- ಪಾರ ಭಕುತಿಯನೀಯೋ ತವ ಸೇವಕನೆನಿಸಿ ಕೀರುತಿಯನು ಪಡೆಯೋ ಭವಕ್ಲೇಶ ಕಳೆಯೊ ಪ ಸೂರಿ ಸುಬ್ಬಣಾಚಾರ್ಯಕರಸ- ರೋರು ಹಗಲಲಿ ಪೂಜೆಗೊಳುತಲಿ ಚಾರುತರ ಶ್ರೀ ಜಯಮಂಗಳಿಯ ತೀರದೊಳಿರುವ ವೀರ ಮಾರುತಿ ಅ.ಪ. ಪ್ರತಿ ವರುಷ ಮಾಘಸಿತ | ನವಮಿ ದಿನದೊಳು ನೀ- ನತಿವಿಭವದೊಳು ನಗುತ | ಭಕುತರಿಷ್ಟವ ಸಲಿಸೆ ರಥದೊಳಗೆ ಕುಳ್ಳಿರುತ | ವಿಧ ವಿಧ ವಾದ್ಯಗಳ ತತಿಯನಾಲೈಸುತ | ಅತಿ ಮೋದಬಡುತ ಪರಿ ಸಂ- ಸ್ತುತಿಸೆ ಹಿಗ್ಗುತಲವರ ಸ್ವಮನೋ- ರಥಗಳ ನೀ ಸಲಿಸುವೆನೆನುತಲಿ ಅತುಳ ವಿಕ್ರಮದಭಯ ಹಸ್ತದಿ ಕೃತಿರಮಣ ಸಿರಿವರ ಹರಿಯನನು ಮತವ ಪಡೆಯುತ ರಥವ ನಡೆಸಿ ಚತುರ ದಿಕ್ಕಲಿ ಬಿಜಯ ಮಾಡುತ ಸತತ ಹರುಷವಗರೆವ ದೇವ 1 ರಕ್ಕಸಕುಲ ತಮ ಭಾನು | ತಾಮಸರ ಧ್ಯಾನಕೆ ಸಿಕ್ಕುವನಲ್ಲ ನೀನು | ಸುಜನರ ಹೃದಯದೊಳು ಅರ್ಕನೊಲು ಪೊಳೆವನು | ಹರಿಸಿರಿಗಾಳುಳಿದು ಬಕ್ಕ ದಿವಿಜರಿಗಿನ್ನು | ಗುರುಬಲ್ಲೆ ನಾನು ಚಿಕ್ಕ ರೂಪವಗೊಂಡು ಲಂಕೆಯ ಪೊಕ್ಕು ರಾಮನ ಸತಿಯ ಕಂಡು ತುಕ್ಕಿ ವನವನು ಸೂರೆ ಮಾಡಿ ಉಕ್ಕಿನ ಧ್ವಜಸ್ತಂಭದಿಂದ ಸೊಕ್ಕಿ ಬಂದ ದನುಜವ್ರಾತವ ಕುಕ್ಕಿ ಕೆಡಹಿ ಪುರವನುರಹಿ ಅಕ್ಕರದ ಮಣಿಸಹಿತ ಬಂದು ಪಕ್ಕಿದೇರನಿಗೆರಗಿ ನಿಂದೆ 2 ತುತಿಸ ಬಲ್ಲೆನೆ ನಾನು | ನಿನ್ನಯ ಸುಗುಣಗಳ ತತಿಗಳೆಲ್ಲವನು | ತ್ರಿಪುರ ಸುಂದರಿ ಪಾ- ರ್ವತಿ ಪತಿಯ ಪಡೆದವನು | ರಂಗೇಶವಿಠಲಗೆ ಅತಿಪ್ರೀತಿಸುತ ನೀನು | ನಿಷ್ಕಾಮಯುತನು ಪತಿತರನುದ್ಧರಿಸಲು ನೀ ಸಿರಿ ಪತಿಯ ಮತದೊಳು ಹನುಮ ಭೀಮ ಯತಿಯ ರೂಪವ ತಾಳಿ ಹರುಷದಿ ಕ್ಷಿತಿಯ ಭಾರವ ಹರಸಿ ಸಲಹಿದೆ ಅತುಳ ಮಹಿಮ ನಿನ್ನಪರಿಮಿತ ಶ ಕುತಿಗೆ ನಮೊ ನಮೊ ವಾಯುತನಯನೆ ಸತತ ಮುದದೊಳು ನಿನ್ನ ಸ್ಮರಿಸುವ ಮತಿಯ ಪಾಲಿಸು ಪತಿತ ಪಾವನ 3
--------------
ರಂಗೇಶವಿಠಲದಾಸರು
158ಭಳಿಭಳಿರೆ ಎನ್ನ ಸುಖವೆಂಬುದೇ ಸುಖವುಹಲಕಾಲಕಿದೆ ಇರಲಿ ಕಾವೇರಿ ರಂಗ ಪತಂದೆ ನೀನೇ ಕೃಷ್ಣ ತಾಯಿ ಇಂದಿರೆದೇವಿಮಂದಹಾಸನನೆನಗೆ ಹಿರಿಯಣ್ಣನು ||ಇಂದುಶ್ರೀ ಸರಸ್ವತೀದೇವಿ ಅತ್ತಿಗೆಯುಎಂದೆಂದಿಗೂ ವಾಯುದೇವರೇ ಗುರುವು 1ಗುರುಪತ್ನಿ ಶ್ರೀಭಾರತಿಯು ನೋಡೆ ಮೇಲಾಗಿಗರುಡಾಹಿ ರುದ್ರರಣ್ಣನ ಮಕ್ಕಳು ||ಸುರರುಸನಕದಿಗಳು ಪರಮಬಾಂಧವರೆನಗೆಸ್ಥಿರವಾದ ವೈಕುಂಠವೆನಗೆ ಮಂದಿರವು 2ನಿನ್ನ ಪಾದಾಂಬುಜವ ಭಜಿಸುವುದೆ ಸೌಭಾಗ್ಯನಿನ್ನ ನಿರ್ಮಾಲ್ಯಗಳೆ ಭೋಗದ್ರವ್ಯ ||ನಿನ್ನ ಕಥೆ ಕೇಳುವುದೆ ಮಂಗಳಸುವಾದ್ಯಗಳುನಿನ್ನಂಥ ಅರಸೆನಗೆ ಪುರಂದರವಿಠಲ 3
--------------
ಪುರಂದರದಾಸರು
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು