ಒಟ್ಟು 75 ಕಡೆಗಳಲ್ಲಿ , 25 ದಾಸರು , 70 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣದಿ ಎನ್ನ ಪೊರಿಯೇ ತೊರಮ್ಮ ಶಿರಿಯೇ ಪ ಚರಣಯುಗಕೆ ನಾ ಶರಣು ಮಾಡಿದೆ ದೇವೀ ಅ.ಪ ವಾರಿಜಾಂಬಕೆ ಅಂಭ್ರಣೀ ಶ್ರೀ ಹರಿಯ ರಾಣಿ ಮಾರಾರಿ ಮುಖಸುರ ಸಂತ್ರಾಣಿ ವಾರವಾರಕೆ ನಿನ್ನ ಸಾರಿಭಜಿಪೆ ಎನ್ನ ದೂರ ನೋಡದೆ ಪೊರಿಭಾರ ನಿನ್ನದು ತಾಯಿ 1 ಸೃಷ್ಟಿ ಸ್ಥಿತಿಲಯ ಕಾರಿಣೀ ಸುಗುಣಸನ್ಮಣಿ ಕಷ್ಟ ದಾರಿದ್ರ್ಯ ದುಃಖ ಹಾರಿಣೀ ದುಷ್ಟರ ಸಂಗದಿ ಕೆಟ್ಟಿಹ ಎನ್ನನು ಥಟ್ಟನೆ ಕರುಣಾದೃಷ್ಟಿಲಿ ನೋಡಿ 2 ಜಾತರೂಪಳೆ ಶುಭಗಾತ್ರಿ ತ್ರಿಜಗಕೆ ಧಾತ್ರೀ ಸೀತೆ ಸತ್ರಾಜಿತನ ಪುತ್ರಿ ದಾತ ಗುರುಜಗನ್ನಾಥವಿಠಲನ ನೀತ ಸತಿಯೆ ಎನ್ನಮಾತೆ ವಿಖ್ಯಾತೇ 3
--------------
ಗುರುಜಗನ್ನಾಥದಾಸರು
ಕಾಯ ಬೇಕಿವಳಾ ಪ ಪದುಮನಾಭನೆ ನಿನ್ನ ಸೇವೆ ಕಾತುರಳಾ ಅ.ಪ. ಸುಕೃತ ರಾಶಿಗೇ ಫಲರೂಪದಾಸದೀಕ್ಷೆಯ ವಹಿಸೆ ಆಶಿಸುತ್ತಿಹಳೊ |ಕೇಶವನೆ ಹೃದಯಾಬ್ಜವಾಸ ತವ ಸೇವೆಯನುಲೇಸಾಗಿ ಕೊಟ್ಟು ಮನದಾಶೆ ಪೂರೈಸೋ 1 ನಯವಿನಯ ಗುಣಯುಕ್ತೆ ಕನ್ಯೆ ಬಹು ಭಕ್ತಿಯುತೆವಯಸು ಕಾರಣವಲ್ಲ ಪ್ರಿಯ ನಿನ್ನ ಭಜಿಸೆ |ದಯತೋರಿ ಈ ಶಿಶುವ ಹಯಮೊಗನೆ ಉದ್ಧರಿಸೊವಯನಗಮ್ಯನೆ ಹರಿಯೆ ಭಿನ್ನಯಿಪೆ ನಿನಗೇ 2 ಮರುತ ಮತದಲಿ ದೀಕ್ಷೆ ಹರಿಗುರೂ ಸದ್ಭಕ್ತಿನೆರೆ ಬಂಧು ಜನ ಪ್ರೇಮ ಮರಳಿ ಆಧಮರಲಿಕರುಣೆಯನು ಮಾಳ್ಪಂಥ ವರಮತಿಯ ಕರುಣಿಪುದುಗರುಡವಾಹನದೇವ ಸರ್ವಾಂತರಾತ್ಮ 3 ಘೋರಭವ ಶರನಿಧಿಗೆ ತಾರಕವು ತವನಾಮವಾರವಾರಕೆ ನುಡಿಸು ಮರುತಾಂತರಾತ್ಮತಾರತಮ್ಯ ಜ್ಞಾನ ಸಾರವನೆ ತಿಳಿಸುತ್ತತೋರೋ ತವರೂಪವನೆ ಹೃದ್ಗುಹದಿ ಹರಿಯೇ 4 ಕಾಲ ಸರ್ವಗುಣಪೂರ್ಣಸರ್ವಜ್ಞ ಹರಿ ಎನ್ನ ಭಿನ್ನಪವ ಸಲಿಸೆಂದುಸರ್ವಗುರು ಗೋವಿಂದ ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಚಿಂತಿಸುತಿರು ಮನವೇ ಸಿರಿಕಾಂತನಂಘ್ರಿಯ ಚಿಂತಿಸು ಮನವೆ ನಿರಂತರ ಶ್ರೀಮದ ನಂತಗಿರಿಯಲಿ ನಿಂತು ಭಜಕರ ಚಿಂತಿತಪ್ರದ ನಂತಶಯನನ ಅ.ಪ ಶಾಂತ್ಯಾದಿ ಗುಣಭರಿತ ಮಹಂತ ಮುನಿ ಮಾ ರ್ಕಾಂಡೇಯಗೊಲಿದು ಸತತ ಪರ್ವತದಿ ಲಕ್ಷ್ಮೀ ಕಾಂತನೆಸುರ ಸಹಿತ ಸನ್ನಿಹಿತನೆನುತ ಕಂತುಹರನುತ ನಂತ ಮಹಿಮನ ಸಂತಸದಿ ಸಂತುತಿಸುತಲಿ ತ- ದಿನಕರಾನಂತ ದೇವನ 1 ನಾರ ಶಿಂಹನದರ್ಶನ ಕೊಳ್ಳುತಿರೆ ಮುನಿ ಬಲ ದ್ವಾರದಿಂದಲಿ ಪ್ರತಿದಿನ ವಿರುತಿರೆ ಪ್ರಥಮ ದ್ವಾದಶಿಯೊಳು ಸಾಧನ ತಕ್ಷಣ ಪ್ರಸನ್ನ ಸೂರ್ಯಸುತನ ಉದಯದಲಿ ಭಾಗೀರಥಿಯು ಪು ಷ್ಕರಣಿಯೊಳು ಬರೆ ಪಾರಿಜಾತದ ಭೂರುಹಂಗಳ ಚಾರುರೂಪವ ತೋರಿದಾತನ 2 ನೀರಜಾಸನ ವಂದಿತ ಬಂಗಾರಮಕುಟ ಕೇಯೂರ ಕಂಕಣ ಭೂಷಿತ ಚಕ್ರಾದಿ ಚಿನ್ಹಿತ ಚಾರುಶಿಲೆಯೊಳು ಸನ್ನಿಹಿತ ಭಜಕರನು ಪೊರೆಯುತ ವಾರವಾರಕೆ ಭಕುತಜನ ಪರಿವಾರದಿಂ ಸೇವೆಯನು ಕೊಳ್ಳುತ ಧಾರುಣಿಯೊಳು ಮೆರೆವ ಕಾರ್ಪರ ನಾರಶಿಂಹಾತ್ಮಕ ಸ್ವರೂಪನ3
--------------
ಕಾರ್ಪರ ನರಹರಿದಾಸರು
ಚಿಂತೆ ಮಾಡುವುದ್ಯಾಕೆ ಮನವೆ ನೀನು ಕರ್ಮ ಎಂದಿಗಾದರೂ ಬಿಡದು ಪ ಮಗÀನಾರು ನೀನಾರು ಪೇಳೊ ಸಿದ್ಧ ನಿಗಮಾರ್ಥಗಳಿಂದ ಸಜ್ಜನರ ಕೇಳೊ ತಗಿದು ಕಳಿ ಶೋಕದ ಗೋಳು ನಿತ್ಯ ನಗಧರನ ಭಕ್ತಿಯಲಿ ಸುಖದಲ್ಲಿ ಬಾಳೋ 1 ಸಾಹನಶಕ್ತಿಯನ್ನು ಮಾಡೊ ಬರಿದೆ ಸ್ನೇಹ ಮಾಡಿದರಿಂದ ಜ್ಞಾನಕ್ಕೆ ಕೇಡು ತಾಹಾದು ಸ್ಥಿರವೆಂದು ನೋಡೊ ನೀನೂ ಮಾಹಪದವಿಗೆ ಬಂದೆ ಸುದೃಢವೆ ಬೇಡು2 ವಿರಕ್ತಿ ತೊಡು ತೊಡು ಬಿಡದೆ ಎಂದು ಸಾರಿದೆ ಪೇಳಿ ಧರ್ಮದಲಿನ್ನು ನುಡಿದೆ ವಾರವಾರಕೆ ಹೀಗೆ ಕೆಡದೇ ಶ್ರಿಂ ಗಾರ ಶ್ರೀ ವಿಜಯವಿಠ್ಠಲಲೆನ್ನು ದು:ಖಬಡದೆ 3
--------------
ವಿಜಯದಾಸ
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾಂಬುವತಿ ಪ್ರಿಯ ವಿಠಲ | ಅಂಬುಜದಳಾಕ್ಷ ಪ ನಂಬಿ ಬಂದಿಹನ ಮನ | ದಂಬಲವ ಸಲಿಸೋ ಅ.ಪ. ಲೌಕಿಕಾನೇಕದಲಿ | ಸಿಲ್ಕಿ ನೊಂದವನಾಗಿಏಕಾಮೇವಾದ್ವಿತೀಯ | ನೀನೇವೆಯಂಬಾವಾಕು ನುಡಿವಾ ಇವಗೆ | ಪ್ರಾಕ್ಕು ಕರ್ಮವ ಕಳೆದುತೋಕನ್ನ ಸಲಹೆಂದು | ಪ್ರಾರ್ಥಿಸುವೆ ಹರಿಯೇ 1 ನೀಚೋಚ್ಛ ಸುಜ್ಞಾನ | ದಾಸ್ಯಕಿದುವೇ ಮೂಲವಾಚಿಸೋ ಇವನಲ್ಲಿ | ಕೀಚಕಾರಿಪ್ರಿಯಾವಾಚಾಮಗೋಚರನೆ | ಖೇಚರೋತ್ತಮಸವ್ಯಸಾಚಿ ಸಖನೇ ಇವನ | ಕಾಪಾಡೊ ಹರಿಯೇ 2 ಸಂಗೀತ ಲೋಲ ಹರಿ | ಮಂಗಳಾಂಗನೆ ಸಾಧುಸಂಗವನು ಇವಗಿತ್ತು | ಕಾಪಾಡೊ ಹರಿಯೇಇಂಗಿತಜ್ಞನೆ ವಿಷಯ | ನಿಸ್ಸಂಗನೆಂದೆನಿಸಿಸಂಗೀತದಲಿ ತವ ಪ್ರ | ಸಂಗವಿತ್ತು ಕಾಯೋ 3 ಮೂರೆರಡು ಭೇದಗಳ | ತಾರತಮ್ಯ ಜ್ಞಾನವಾರವಾರಕೆ ತಿಳಿಸಿ | ಕಾಪಾಡೊ ಇವನಾಸೂರಿಜನ ಸಂಪ್ರೀಯ | ಸೂರಿಸಂಗವನಿತ್ತುಪಾರುಗೈ ಭವದ ಕೂ | ಪಾರ ಹರಿಯೇ 4 ಗರುಡವಾಹನ ಕೃಷ್ಣ | ಗರುವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಹರಿಯೇ |ನಿರವಧಿಕ ಗುಣ ಪೂರ್ಣ | ಸರ್ವೇಷ್ಟ ಪ್ರದನಾಗಿಪೊರೆಯ ಬೇಕಿವನ | ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಧಿವಾಮನ ವಿಠಲ ಉದ್ಧರಿಸೊ ಇವನ ಪ ಅಧಿ ಭೂತ ಅಧ್ಯಾತ್ಮ ಅಧಿದೈವಗತ ದೇವವಿಧಿ ಜನಕ ವಿಶ್ವಾತ್ಮ ಮಧು ಮಥನ ಹರಿಯೆ ಅ.ಪ. ವಿದ್ಯಾಯುಗಳನಿತ್ತು ಮಧ್ವಮತ ದೀಕ್ಷೆಯಲಿಶ್ರದ್ಧೆ ಬುದ್ಧಿಯ ನೀಯೊ ಮಧ್ವಾಂತರಾತ್ಮಾ |ಕೃದ್ಧಖಳರ್ಹಾವಳಿಯ ಒದ್ದು ಪೋಷಿಸುತಿಪನಶುದ್ಧಗೈವುದು ಮನವ ಸಿದ್ಧಜನ ವಂದ್ಯಾ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳವಾರ ವಾರಕೆ ತಿಳಿಸಿ ಪೊರೆಯಬೇಕೋ |ಸಾರತಮ ನಿನ್ಹೊರತು ಆರು ಕಾಯುವರಯ್ಯಪೋರಗಿಹ ದುರಿತಾಳಿ ಪಾರುಮಾಡೈದೇವ 2 ಕಾರಣಿಕ ಕರುಣಾಬ್ಧಿ ತಾರೇಶ ಶ್ರೀ ಹರಿಯೆನೀರ ಜಾಸನವಂದ್ಯ ನೀರಜಾಕ್ಷಾ |ತಾರಕನು ಕುಭವ ಕೂಪಾರ ದಾಟಿಸಲುಧೀರ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ದಾಸವರ್ಯ ಪೋಷಿಸೆನ್ನನು ಪ್ರಾರ್ಥಿಸುವೆ ಶೇಷ ದಾಸವರ್ಯ ಪೋಷಿಸೆನ್ನನು ಪ ತರಿದು ಇಂದಿ- ರೇಶನಂಘ್ರಿಧ್ಯಾನವ ಪ್ರತಿವಾಸರದಲಿ ಒದಗುವಂತೆಅ.ಪ ದೇಶ ದೇಶಗಳಲಿ ಭಜಿಪ ದಾಸ ಜನರ ಮನದ ಅಭಿ- ಲಾಷೆಗಳನು ಸಲಿಸುತಲಿ ಸುರೇಶನಂತೆ ಮೆರೆದ ಶೇಷ 1 ಭಜಿಸೆ ಜಗದಿ ಪ್ರಾಜ್ಞ- ಸುಜ್ಞಾನವಿತ್ತು 2 ಮಾತ್ರದಿ ಭೂತ ಪ್ರೇತಗ- ದುರಿತ ಘನಕೆ ಮರುತರೆನಿಪ 3 ಪದದಿಂದೆ ತ್ರಿಪಥ ಗಾಮಿನಿಯಳ ತೋರಿ ಸ್ವಜನ ಕಾಮಿತವ ಪೂರೈಸಿದಂಥ4 ಶೇರಿದ ಪರಿವಾರಕೆ ಸುರ ಭೂರುಹವೆಂದೆನಿಸುವಂಥಾ ನೊಲಿಸಿದಂಥ 5
--------------
ಕಾರ್ಪರ ನರಹರಿದಾಸರು
ದುರ್ಗೆ ಪಾಲಿಸೆ ಕರುಣದಿ | ಮಹಾ ಲಕುಮಿ ದುರ್ಗೆ ಪಾಲಿಸೆ ಕರುಣದಿ ಪ. ಅಪವರ್ಗ ಪದವಿ ಇತ್ತು ದುರ್ಗಮವಾಗಿಹ ದುಃಖವ ಬಿಡಿಸಿ ಭಾರ್ಗವಿರಮಣನ ಮಾರ್ಗವ ತೋರೆ ಭೋರ್ಗರೆಯುತ ಖಳರ ನಿಗ್ರಹಿಸುವಳೆ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ರಮಣನ ಜಾಯೆ ನಾರಸಿಂಹನ ಅರಸಿಯೆ ಸಾರಿದೆ ನಿನ ಪದ ತೋರಿಸೆ ಹರಿಪದ ಕಾರುಣ್ಯಾತ್ಮಳೆ ಕರುಣವ ಬೀರೆ ವಾರವಾರಕೆ ನಿನ್ನ ಆರಾಧಿಸುವಂಥ ಚಾರುಮತಿಯ ನೀಡೆ ನಾರಿರನ್ನಳೆ 1 ಪದ್ಮಾವತಿಯೆ ಪದ್ಮಿನಿ | ಪದ್ಮಾಕ್ಷಿದೇವಿ ಪದ್ಮಸಂಭವೆ ಕಾಮಿನಿ ಪದ್ಮನಾಭ ಶ್ರೀ ಶ್ರೀನಿವಾಸನ ಪದ್ಮಪಾದವ ಹೃತ್ಪದ್ಮದಿ ತೋರೆ ಪದ್ಮಸರೋವರ ತೀರವಾಸಿ ಕರ ಪದ್ಮಯುತಳೆ ಮುಖಪದ್ಮವ ತೋರೆ2 ರೂಪತ್ರಯಳೆ ಕಾಮಿನಿ | ಕಾಮಪೂರಿಣೀ ತಾಪಹರಿಸೆ ಭಾಮಿನಿ ಪಾಪಗಳÉಲ್ಲವ ನೀ ಪರಿಹರಿಸುತ ಗೋಪಾಲಕೃಷ್ಣವಿಠ್ಠಲನನು ತೋರುತ ನೀ ಪರಿ ನುಡಿವೆನೆ ನೀ ಪಾಲಿಸುವುದು ಆಪವರ್ಗದಲಿ 3
--------------
ಅಂಬಾಬಾಯಿ
ದ್ವಾರಕೆಯ ಅರಸಗೆ ಪ. ಸುರೂಪಿಸೀರೆಯನುಟ್ಟು ಥೋರ ಮುತ್ತನೆ ಕಟ್ಟಿ ತೇರಿನಾರುತಿಯ ಮುರಾರಿಯ ಮುಂದೆತ್ತುವರು1 ರಂಜಿಸೊಸೀರೆಯನುಟ್ಟು ಪಂಜರ ದ್ವಾಲೆನಿಟ್ಟು ನೀರಾಂಜನ ಎತ್ತಿದರು 2 ತಾಕೀತೆಂದು ಕೆಲರು ಓಕುಳಿ ನಿವಾಳಿಸುವರು ಲೋಕನಾಯಕಗೆ 3 ಕೃಷ್ಣರಾಯನ ಮುಖಕೆ ದೃಷ್ಟಿ ನೆಟ್ಟೀತೆಂದು ಕೆಲರು ಬಟ್ಟು ಮುತ್ತು ನಿವಾಳಿಸಿ ಇಟ್ಟು ಕಸ್ತೂರಿ ಕಪ್ಪು 4 ಕದಳಿ ಸಾಲು ಜಗಲಿ ತೋರಣ ವಿಶಾಲ ಬೀದಿಯೊಳು 5 ನಿವಾಳಿಸಿ ನಿವಾಳಿಸಿ ನಾಲ್ಕು ಕಡೆಗೆ ಒಗೆದು6 ಶ್ರೀಲೋಲ ರಾಮೇಶನ ಭಕ್ತರು ವಾಲೈಸುವರು ಹೀಗೆ7
--------------
ಗಲಗಲಿಅವ್ವನವರು
ಧೀಂಧೀಂಧೀಂಧಿಂ ಧೀರು | ಮಜರೆ ಸಂಭ್ರಮದ | ಅಂದು ಶ್ರೀಕೃಷ್ಣ ರುಕ್ಮಿಣಿಯ ಪಾಣಿ | ಗ್ರಹಣ | ದಿಂದ ದ್ವಾರಕೆಯ ಹುಗುವ ಸಮಯದಲಿ ಪ ಚಪಳ ವಾಜಿಗಳು | ಬೆರೆಬೆರೆದು ಕುಣಿವಾಟಾದಿಂದಾ ಇಡಿಯೇ | ತೆರೆಹಿಲ್ಲ | ಸಿಂಧು ಗುರಿ ಪತಾಕೆಗಳ ಹೊಳೆವ | ರೂಪಿಯೇ | ಮೆರೆವ ತಮ್ಮಟ ಭೇರಿನಾದ ಕಹಳೆಗಳಿಂದ | ಹರಿಪದದಿ ಪ್ರತಿ ಶಬ್ದವು ನುಡಿಯೇ 1 ಭಟ್ಟರು ಗಾಯಕವಂದಿ ಬಿರುದು ಕೊಂಡಾಡು ತಲಿಹ | ನಟನೆ ದಿವ್ಯಾಂಗ-ನೆಯರಾ ಮುಂದ | ಘಟನೇ ಪುಟುವೆರಸೀ ಸ್ವಸ್ತಿ ವಚನಾದಿಂದ ನಟನುಗ್ರಶೇನ ತಾಯಿ | ತಂದಿ ದಂಪತಿಗಳ ಕುಟಿಲೀರ್ವ ಸಾಂಬ ಕೃತ ವವರ್ಮನಾ | ರ್ಭಟೆಯ ಬಲರಾಮ ನೋಡನೀ ವೃಂದ 2 ಹೃದಯ ಮಧ್ಯದ ಪದಕದಂತೆ ಬರಿತಿಹ ನಡುವೆ ವಧು ಇದಿರು ಗೊಂಬುವ ಸಂಭ್ರಮದ ಪಟ್ಟಣದಲಾರು ತುದಿ ಮೊದಲ ಬಣ್ಣಿಸುವಾ ಸಿರಿಯಾ | ವದಗಿ ಮುಂದಕ ಹೋಗಿ ಮಂಗಳಾರುತಿಗಳನು ಸುದತಿಯರು ತಂದೆ ತ್ತಲು ತ್ವರಿಯು | ಮುದದಿಂದ ಗೃಹ ಪ್ರವೇಶವ ಮಾಡಿದನು ಸರ್ವಾ | ವಿದಿತ ಮಹಿಪತಿ ನಂದನಾ ಧೂರೆಯು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿತ್ಯ ಮಾರುತನ ರಾಣಿ | ಭಾರ ನಿನ್ನದೇ ವಾಣೀ ಪ ಅನುದಿನ | ಅಕಟನಿಲ್ಲದೆ | ಸಕಲ ಠಾವಿನಲ್ಲಿ ಅರ್ಭಕನಾಗಿ ತಿರುಗಿ ಪಾ | ಪಕೆ ಎರಗಿದೆ ಯಾತಕೆ ಬಾರದವನಾದೆ 1 ಆರನ್ನ ಕಾಣದೆ ನಿನ್ನನು ನಾ | ಸಾರಿದೆ ಮಾಣದೆ | ವಾರ ವಾರಕೆನ್ನ ಉದ್ಧಾರವ ಮಾಳ್ಪುದು | ಕಾರುಣ್ಯದಿಂದಲಿ ಶೃಂಗಾರವಾರಿಧಿ ವೇಗ 2 ನಿತ್ಯ | ಕೃತಿಯನಂದನೆ | ಸತತ ವಿಜಯವಿಠ್ಠಲನ ಪದಾಬ್ಜದಿ | ರತಿ ಆಗುವಂತೆ ಸುಮತಿಯನು ಕರುಣಿಸೇ 3
--------------
ವಿಜಯದಾಸ
ನಿನ್ನ ನಂಬಿದ ನರಗೆ ಅನ್ಯರಾಶ್ರಯವೇಕೋಚನ್ನ ಗುರು ವಿಜಯರಾಯ ||ಬನ್ನ ಬಡುವೆನೊ ಜೀಯ ಘನ್ನ ಭವದೊಳು ಶಿಲ್ಕಿಇನ್ನು ಕಡೆಗ್ಹಾಕೋ ಬ್ಯಾಗ ಈಗ ಪ ಸುರನದಿ ನರನ ಸುತ್ತ ಪರಿಯಲು ನೀರಿಗಾರ್ತನಾಗುವುದುಚಿತವೆ ||ಮತ್ತೆ ಸುರಧೇನುವಿನ ಹತ್ತಿಲಿರುವ ಯಿನ್ನುಹಸ್ತು ಬಳಲುವುದುಚಿತವೆ ||ನಿತ್ಯ ಸುಖದಾರಿ ವಿಚಿತ್ರ ನೀ ತೋರೆ ನಾಹಸ್ತ ನರಗೊಡ್ಡುವುದು ಯತ್ನ ಉಚಿತವೆ ಗುರುವೆ 1 ಕ್ಷೀರವಾರಿಧಿ ಸೇರಿ ನೀರ ಮಜ್ಜಿಗೆಗಾಗಿಚೀರಿ ವರಲುವುದುಚಿತವೆ ||ನೂರಾರು ವಸನದ ಹೇರು ಮನೆಯೊಳಗಿರಲುಕೋರಿ ವುಡುವುದು ವುಚಿತವೆ ||*ವಾರವಾರಕೆ ಹರಿಯ ತೋರುವರನ ಬಿಟ್ಟುಕ್ರೂರ ವನ ಸೇವಿಸುವ ದಾರಿಗುಚಿತವೊ ಗುರುವೆ 2 ಸಾಕಿ ಸಲಹೆಂದು ಅತಿ ವ್ಯಾಕುಲದಿ ಬಂದವನನೂಕಿ ಬಿಡುವುದುಚಿತವೆ ||ಬೇಕಾದ ವರವು ನೀ ಲೋಕರಿಗೆ ಕೊಡುವೆನ್ನಕಾಕುಗೊಳಿಸವುದುಚಿತವೆ ||ಏಕ ಬುದ್ಧಿಯಿನಿತ್ತು ಜೋಕೆ ಮಾಡೆ ಮನ-ನೇಕ ಮಾಡುವದುಚಿತವೆ ||ಶ್ರೀಕಾಂತ ವೇಣುಗೋಪಾಲ ವಿಠಲ ನಿನ್ನವಾಕು ಮನ್ನಿಸಲು ನಾ ಕೆಡುವದುಚಿತವೆ ಗುರುವೆ 3
--------------
ವೇಣುಗೋಪಾಲದಾಸರು
ನೀರೆ ದ್ವಾರಕೆಯ ಸೊಬಗು ಬ್ರಹ್ಮರಾಯ ಬಟ್ಟಾನು ಬೆರಗು ನೀರೆಪ. ಚದುರೆ ಬಾಜಾರದಿ ಕುದುರೆ ಸಾಲುಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟು ಅಂಬಾರಿಸದರಿನ ಆನೆ ಸೊಬಗೆಷ್ಟು1 ಹಿಂಡು ಗೆಳತಿಯರೆಲ್ಲ ತಂಡ ತಂಡ ನೆರೆದುದುಂಡು ಮಲ್ಲಿಗೆಯ ತುರುಬಿನದುಂಡು ಮಲ್ಲಿಗೆ ತುರುಬಿನ ಕುವರಿಯರು ಚಂಡನಾಡುವÀರು ಕಡೆಯಿಲ್ಲ 2 ನೀಲಮಾಣಿಕ ಬಿಗಿದ ಮೇಲಾದ ಮನೆಗಳುಮ್ಯಾಲೆ ಕನ್ನಡಿಯ ನಿಲ್ಲಿಸ್ಯಾವಮ್ಯಾಲೆ ಕನ್ನಡಿಯ ನಿಲ್ಲಿಸಿದ ಮನೆಯೊಳುಸಾಲು ದೀವಟಿಗೆ ಸೊಬಗೆಷ್ಟು 3 ಬಟ್ಟ ಮುತ್ತಿನ ತೋರಣ ಕಟ್ಟಿದ ಮನೆಯೊಳುಅಟ್ಟಳ ಮ್ಯಾಲೆ ಧ್ವಜಗಳುಅಟ್ಟಳ ಮ್ಯಾಲೆ ಧ್ವಜಗಳು ಗಗನಕ್ಕೆಮುಟ್ಟಿವೆಂಬಂತೆ ನಿಲ್ಲಿಸ್ಯಾವೆ4 ದೊರೆಗಳ ಮನೆಯಿಂದ ಬರೆದ ಚಿತ್ರದÀ ಬೊಂಬೆಗಳುಕರೆದಾವ ಕೈ ಬೀಸುತೆಕೈ ಬೀಸಿ ನಮ್ಮ ಎದುರಿಗೆಬರತಾವೆಂಬಂತೆ ನಿಲ್ಲಿಸ್ಯಾವ 5 ಏಳಂತಸ್ತಿನ ಮಾಳಿಗೆ ಮ್ಯಾಲಿನ ಗೊಂಬೆಗಳು ಬಾಳೆ ಎಲೆಯಂತೆ ಬಳಕುತ ಬಾಳೆ ಎಲೆಯಂತೆ ಬಳಕುತಕಿವಿಮಾತು ಹೇಳ್ಯಾವೆಂಬಂತೆ ನಿಲ್ಲಿಸ್ಯಾವೆ6 ಮದನ ಜನಕನು ಸುಳಿಯೋನೆಒಮ್ಮೊಮ್ಮೆ ಮುದದಿ ಭಕ್ತರನ ಸಲುಹಲಿ 7
--------------
ಗಲಗಲಿಅವ್ವನವರು