ಒಟ್ಟು 33 ಕಡೆಗಳಲ್ಲಿ , 18 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮ ಕರುಣ ರಮೆಯ ರಮಣ ಉರಗಭೂಷಣಾ ಪ ದುರಿತಹರಣ ಶರಣಾವರಣ | ವರದ ಕಂಕಣಾ ಅ.ಪ ಶ್ರುತಿಗಳೆಲ್ಲ ನುಡಿವುದಲ್ಲ | ಪಿತನೆಂಬ ಸೊಲ್ಲ ಪತಿತರ ನೀ ಪೊರೆದೆಯೆಲ್ಲ | ಹಿತವೇಕೆನ್ನೊಳಿಲ್ಲಾ 1 ಅಸ್ತಿಪಂಜರವೆಂಬೀ ಮಂದಿರ | ವಸ್ತಿರಾಂಬರ ವ್ಯಸ್ತ ಪಂಚಭೂತದಾಕಾರಾ ಗ್ರಸ್ತ ನಶ್ವರಾ 2 ಜನನ ಮರಣ ದುರಿತಗಡಣ | ಮನುಜ ಭವಿ ಶರಣ ಮನಕೆ ಶೋಕಾನೇಕ ಕಾರಣ | ದನುಜ ವಿದಾರಣಾ 3 ಧರೆಯೊಳುದಿಪ ಸೆರೆಯ ಬಿಡಿಸೋ | ವರವ ಕರುಣಿಸೋ ಹರಿಯೆ ರಾಮ ವಿಠಲ ಪಾಲಿಸೋ | ನಿರುತ ನಿರುಕಿಸೋ4 ಕಾವರನ್ಯರಿಲ್ಲವೆನ್ನ | ಶ್ರೀವನಿತಾರನ್ನ ಮಾವಿನಕೆರೆಯರಸ ಮುನ್ನ | ನೋವ ಬಿಡಿಸೆನ್ನ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಯ ನರಕೇಸರಿ ಸತತಂ ಪರಿಪೂರ್ಣ ಗುಣಾಕರ ಪ ವಿನುತ ಸಂಜೀವ ದೇವ ಲೀಲಾ ಖೇಲನ ಸ್ತಂಭ ವಿದಾರಣ 1 ರಾಕ್ಷಸ ಗರ್ಭ ನಿರ್ಭೇದನ ನಿಪುಣ ಸಿಂಹನಾದ ಶ್ರೀದ ದಕ್ಷೀ ವಿಪಕ್ಷಸು ಶಿಕ್ಷಣ ದಕ್ಷನೆ 2 ಶೂರ ಹಿರಣ್ಯಕ ಹೃದಯ ದಳನಸಂಹಾರ ವೀರ ಸಾರ ಪೊರ ಹರೆ 3 ಕಾಲ ಲೋಲ ಭಂಜನ ರಂಜನ 4 ಶ್ರೀ ಲಕ್ಷ್ಮೀ ಕುಚ ಕುಂಕುಮ ಪಂಕಿಲ ದೇಹ ದೇವ ನೀಲ ನಿಭಾಕೃತಿ ಧೇನುನಗರ ಪತೇ 5
--------------
ಬೇಟೆರಾಯ ದೀಕ್ಷಿತರು
ಬ್ಯಾಗ ಬಾರೋ ಗುರುರಾಘವೇಂದ್ರರಾಯಾ ಬಾಗಿ ನಮಿಪೆ ಮಹರಾಯಾ ಪ ಯೋಗಿ ಮಧ್ವಮತದಾಗಮದಿಂದಲಿ ಭಾಗವತರು ಶಿರಬಾಗಿ ಪಾಡುವರೋ ಅ.ಪ ಕುಂದಣಮಣಿಮಯ ಸ್ಯಂದನದೊಳತಿ ಸುಂದರ ಶುಭತರ ರೂಪ - ದಿಂದಲಿ ರಾಜಿಪಾಮಂದಭೋಧ ನಿಜ ನಂದದಾಯಕ ಯತಿಕುಲ ದೀಪ ಛಂದದಿ ಭಕುತ(ರ) ಕುಂದನಿಚಯಕೆ ನಿಜ ಚಂದಿರ ಸಮ ಭೂಪಾ - ಪಾದ ದ್ವಂದ್ವವು ನಿಜರಿಗೆ ನಂದ ನೀಡುವ ಪ್ರತಾಪಾ ವಂದಿಸಿ ಗುಣಗಳ ವೃಂದ ಪೊಗಳುವ ಮಂದ - ಜನರು ಬಲು - ಸುಂದರ ಶುಭಗುಣ ದಿಂದ ಶೋಭಿಪÀ ಜನ - ಸಂದಣಿಯೊಳು ನಿನ್ನ ಸುಂದರ ಮೂರುತಿ - ಛಂದದಿ ನೋಳ್ಪರೊ 1 ಕನಕ ಮಣಿಮಯ ಘನಸುಕೊಡೆಗಳು ಮಿನುಗುವ ಚಾಮರ ಚೋದ್ಯವೋ ಅನುಗ - ಕರಗತ ಮಣಿಮಯ ಛಡಿಗಳ ಅನುಪಮ ಭಾರವೋ ಮುನಿಜನ ಶಿರಮಣಿಸಿ ಗುಣ ಗಣ ಎಣಿಸುವ ಗಂಭೀರವೋ ತನು - ಮನ - ಮನಿ - ಧನ ವನುತೆರ ನಿನಗನು - ಮಾನಮಾಡದೆ ನೀಡುವಗಾಧವೋ ಘನ ಸಂತೋಷದಿ - ಮನದೊಳು ನಲಿಯುತ ಕುಣಿದಾಡುತ - ದಣಿಯದೆ ಕರಚಪ್ಪಳಿ | ಕ್ಷಣ ಕ್ಷಣದಲಿ ತ್ಮಮ - ತನು ಮರೆದೀಪರಿ ಜನರೊಳು ನಮ್ಮ ಜನುಮ ಸಫಲವೆಂಬುವರೋ 2 ಪಟುತರ ಭಟರಾರ್ಭಟಿಸುವ ಮಹ ಚಟ - ಚಟ - ಚಾಟ ಶಬ್ಧವೋ ಕುಟಿಲ ವಿಮತ ಘನ ಪಟಲ ವಿದಾರಣ ಚಟುಲ ಸ್ವಮತ ಸಿದ್ಧಾಂತವೋ ಕುಟಿಲಾಳಕಿಯರ ಕುಣಿಯುವ ಪದದಿ ಸಂ - ಘಟಿತ ಗೆಜ್ಜೆಗಳ ಶಬ್ಧವೋ ಪಟು ಗುರುಜಗನ್ನಾಥವಿಠಲರ ದಾಸರ ಧಿಟ ಪದ ಸಂಗೀತವೋ ಧಿಟಗುರುರಾಯನೆ - ಭಟರುಗಳ ಮಹÀಸು - ಕಟಕದಿ ಮೋದೋ - ತ್ಕಟದಲಿ ಇಷ್ಟವ ಥಟನೆ ಬೀರುತ ಬಲು ಪುಟಿದಾಡುತ ಹರಿ ಭಟ ಜಲಜೋತ್ಕಟ ದಿವಾಕರ 3
--------------
ಗುರುಜಗನ್ನಾಥದಾಸರು
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲಮಂಗಳಾರತಿ ಎತ್ತಿರೆಲ್ಲಸಂಗಾತೀತ ಚಿದಾನಂದಾವಧೂತಾಂಗ ಶ್ರೀಬಗಳಾಮುಖಿ ದೇವಿಗೆ ಪ ಕರದೊಳು ಚೂಡೆ ಕಂಕಣವಿಟ್ಟುಕೊರಳೊಳು ಸರಿಗೆಯ ಧರಿಸಿಶಿರದಿ ರತ್ನದ ಕಿರೀಟವಿಟ್ಟು ಸರ್ವಾಭರಣವಧರಿಸಿ ದುರುಳರ ದುಷ್ಟರ ಛೇಧಿಸಿ ಭ-ಕ್ತರ ಪಾಲಿಪ ಬಗಳಾಮುಖಿಗೆ 1 ನಿತ್ಯ ನಿರ್ಗುಣ ನಿರಾಮಯಗೆ ನಿಂದಕವಿದಾರಣೆಗೆಭಕ್ತ ವತ್ಸಲೆ ಭುವನೇಶ್ವರಿ ಮಾತೆಗೆಭಕ್ತಾಧಾರೆಗೆ ಪ್ರತ್ಯಗಾತ್ಮೆಗೆ ಪರಬ್ರಹ್ಮ ರೂಪಿಣಿಭಕ್ತ ಪ್ರಾಣಿಗೆ ಬಗಳಾಮುಖಿಗೆ 2 ಅದ್ವಯ ಆಗಮಗೋಚರಗೆ ಅಚಲಾನಂದಳಿಗೆ ಶುದ್ಧಸಂವಿಜ್ಯೋತಿರ್ಮಯಳಿಗೆಸರ್ವಸಾಕ್ಷಿಗೆ ಸದ್ಗುರು ಚಿದಾನಂದಾವಧೂತಗೆ ಸಿದ್ಧಪರ್ವತವಾಸಿ ಬಗಳಾಮುಖಿಗೆ 3
--------------
ಚಿದಾನಂದ ಅವಧೂತರು
ಮಾನವ ಶಿಂಗಾರ್ಯರ ಸುತನಮೋ ನಮೋ ಪ ಮಂಗಳಕರ ಕುಲಿಶಾಂಗ ಮತಾಂಬುಧಿ ತಿಂಗಳಸುಗುಣಿತ ನಮೊ ನಮೊ ಅ.ಪ ತುಂಗಮಹಿಮ ದ್ವಿಜ ಪುಂಗವ ವಿಜಿತಾ ನಂಗ ಶರ ದಯಾಪಾಂಗ ನಮೋ || ಡಿಂಗರೀಕ ಜನಪಾಲ ನಮೊ ಭವ ಭಂಗ ವಿದಾರಣ ನಮೊ ನಮೊ 1 ಜಾತರೂಪ ಶಯ್ಯಾತ್ಮಜ್ಯಾತೆ ಹರಿ | ದೂತ ಪ್ರಹ್ಲಾದರನುಜ ನಮೊ || ಪೂತುರೆ ಘನ ಸತ್ವಾತಿಶಯದ ಪ್ರ ಖ್ಯಾತ ದಿನಪ ಪ್ರಸೂತ ನಮೊ 2 ಪಾತಕಾದ್ರಿಜೀಮೂತ ಭ್ರಾತ ಪಣಿ ಪುರಂದರ ಪೋತನಮೊ ಪೂತಗಾತ್ರ ಶುಭದಾತ್ರ ಭರಿಕ್ಷ ಣ್ಮಾತಿರಿಷ್ಯಶ್ವ ಸುಪ್ರೀತ ನಮೊ 3 ಮೌನಿವರ್ಯ ವರದೇಂದ್ರ ಪಾದಾಂಬುಜ ರೇಣು ವಿಭೂಷಿತ ಪಾಲಯಮಾಂ ಧೇನು ನಿಧೆ ದೇವಾಂಶಜ ಪರಮತ ಪಾವಕ ಪಾಲಯಮಾಂ 4 ಮಾನವಿ ಕ್ಷೇತ್ರನಿಕೇತನ ಸನ್ನುತ ಮಾನಿತ ಗುರುವರ ಪಾಲಯ ಮಾಂ ಧೇನುಪಲ ವಿಜಯರಾರ್ಯ ಕೃಪಾನ್ವಿತ ಧೀನೋದ್ಧರಣ ಫಾಲಯಮಾಂ ಮಾನದಿ ಕ್ಷೇತನಿಕೇತನ ಸನ್ನುತ ಮಾನಿತ ಗುರುವರ ಪಾಲಯಮಾಂ ಜ್ಞಾನನಿಧೆ ದೇವಾಂಶಜ ಪರಮತ ಪಾವಕ ಪಾಲಯ ಮಾಂ 5 ಶೌರಿಕಥಾಮೃತ ಸಾರಗ್ರಂಥ ಕೃತ ಸೂರಿ ಕುಲೋತ್ತುಮ ಜಯ ಜಯಭೋ ಧಾರುಣಿ ಸುರಪರಿವಾರ ನಮಿತ ಪದ ಚಾರುಸ್ತಂಭಾಲಯ ಜಯ ಜಯ ಭೀ 6 ಮಂದವೃಂದ ಮಂದಾರ ಭೂಜನತ ಬಂಧೋ ಭಯಾಪಹ ಜಯ ಜಯ ಭೋ ನಂದಜ ಶಾಮಸುಂದರಾಂಘ್ರಿ ಅರ ವಿಂದ ಮರಂದುಣಿ ಜಯ ಜಯ ಭೋ 7
--------------
ಶಾಮಸುಂದರ ವಿಠಲ
ಮಾಮನಿಶಂಹೃದಾ ಪ ಮಾಂಡವ್ಯಸೇವ್ಯಪದ 1 ಪುಂಡರೀಕ ಶ್ರಿತ ಪಾಂಡುತನಯ ಭೋ 2 ವಂದಿತ ಪದಯುಗ 3 ಸದ್ಧರ್ಮಶೀಲಹರಿ 4 ವ್ಯಾಘ್ರನಾಮ ದೈತ್ಯಾಗ್ರನಿಗ್ರಹಣೋತ್ರಸೇನ ತನಯಾಗ್ರವಿದಾರಣ5 ವನಮಾಲನರಹರೆ 6 ಸುಕುಮಾರ ಶರೀರ 7 ಸನಂದವಂದಿತ 8 ಖಂಡಪರಶು ಕೊದಂಡವೇತಂಡ ಹಸ್ತಭುಜದಂಡರಘೂದ್ವಹ 9 ಲಂಬಮಾನಚರಣಾಂಬುಜಕೇಶವ 10 ಪಾರಿಜಾತವರದಾರ್ಯವಿಠಲ ಶ್ರೀ 11
--------------
ಸರಗೂರು ವೆಂಕಟವರದಾರ್ಯರು
ಮಾಮವ ಮಮ ಕುಲಸ್ವಾಮಿ ಗುಹ ನತಜನ ದುರಿತಾಪಹ ಪ. ಭೀಮವೀರ್ಯ ನಿಸ್ಸೀಮಪರಾಕ್ರಮ ಧೀಮತಾಂವರ ನಿರಾಮಯ ಜಯ ಜಯಅ.ಪ. ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನ ಪಾವನ್ನ ಮೀನಕೇತನಸಮಾನ ಸಹಜ ಲಾವಣ್ಯ ಗಾನಲೋಲ ಕರುಣಾನಿಧಿ ಸುಮನಸ- ಸೇನಾನಾಥ ಭಾವನಿಸುತ ಸುಹಿತ1 ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯ ನಿಟಿಲಾಕ್ಷತನಯ ನಿಗಮಜ್ಞ ಬಾಹುಲೇಯ ಕುಟಿಲ ಹೃದಯ ಖಲಪಟಲವಿದಾರಣ ತಟಿತ್ಸಹಸ್ರೋತ್ಕಟರುಚಿರ ಮಕುಟ2 ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶ ದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸ ಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ 3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ 4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ 7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ 9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ 11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಉಗ್ರಕುಠಾರ ನೃಪಾಗ್ರಣಿವಿಪಿ£ ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ13
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ರಾಘವೇಂದ್ರರು (4) ಈತನೆ ಶ್ರೀ ಪ್ರಲ್ಹಾದನು ಆಹ್ಲಾದಕರನು ಪ ಈತನೆ ಪ್ರಲ್ಹಾದ ಜಗನ್ಮಾತಾಲಕುಮಿಪತಿಯ ಗುಣವಭೂತಳದಲ್ಲಿ ತೋರಿ ಬಹು ನಿರ್ಭಿತಿಯಿಂದ ಮೆರೆದ ಗುರು ಅ.ಪ. ದುಷ್ಟ ಹಿರಣ್ಯಕ ಬಹುವಿಧದಲ್ಲಿ ನಿಷ್ಕರುಣಿಯಾಗೆಕಷ್ಟ ಬಡಿಸೆ ಸುತಗೆ ಜವದಲಿಸೃಷ್ಟಿಗೊಡೆಯ ಸ್ತಂಭದಿಂದ ದೃಷ್ಟನಾಗಿ ಅಸುರನಂದನಶ್ರೇಷ್ಠ ನಖದಿಂ ಬಗೆಯ ನಿಷ್ಠೆಯಿಂದ ನಮಿಸಿದ ಗುರು 1 ಶೂರ ಬಾಲ್ಹೀಕನೆನಿಸಿದ ಬ್ರಹ್ಮಣಮುನಿ ಪಾದಾರವಿಂದ ದಯದಿ ಭಜಿಸಿದಘೋರ ಮಾಯಾವಾದಿಗಳನು ವಿದಾರಣ ಮಾಡಿ ಸುಧಾಸಾರಪಾನ ಮಾಡಿ ವಿಭುದಚಾರು ಚಂದ್ರಿಕಾ ರಚಿಸಿದ ಗುರು 2 ಸಿಂಧುಶಯನ ಶ್ರೀ ರಮಾಪತಿ ವಿಠ್ಠಲನ ಭಕುತಿಯಿಂದ ಭಜಿಪ ರಾಘವೇಂದ್ರಯತಿಎಂದೆನಿಸುತ ಮಂತ್ರನಿಲಯ ಮಂದಿರವನು ಮಾಡಿ ಭಕುತವೃಂದದ ಪುರುಷಾರ್ಥಗಳನು ತಂದು ಕೊಡುವ ಕಲ್ಪದ್ರುಮನು 3
--------------
ರಮಾಪತಿವಿಠಲರು
ಶ್ರೀವಾಸಾನತಮಾಕಲಯಾಚ್ಯುತ ಶ್ರೀವಾಸುಕಿಶಯಮಾಮನಿಶಂಹೃದಾ ಪ ಪುಂಡರೀಕ ನಯನಾಂಡಜವಾಹನ ಕುಂಡಲಶಯ ಮಾಂಡವ್ಯಸೇವ್ಯಪದ 1 ಪುಂಡರೀಕ ಸುಮಂಡಿತಾಂಗಪದ ಪುಂಡರೀಕಶ್ರಿತ ಪಾಂಡುತನಯ ಭೋ 2 ನಂದಗೋಪವರ ನಂದಸುಮನೋ ನಂದನಮುನಿಜನ ವಂದಿತಪದಯುಗ 3 ಧರ್ಮತನಯ ಸಹಧರ್ಮಚಾರಿಣಿ ವರ್ಮಪಾಲ ಸದ್ಧರ್ಮ ಶ್ರೀಲಹರಿ 4 ವ್ಯಾಘ್ರನಾಮ ದೈತ್ಯಾಗ್ರನಿಗ್ರಹ- ಣೋಗ್ರಸೇನ ತನಯಾಗ್ರವಿದಾರಣ 5 ಬಾಲಭಕ್ತ ಪರಿಪಾಲ ಹೇಮಮಯ ಚೇಲ ವಿಧೃತ ವನಮಾಲ ನರಹರೆ 6 ಮಾರಜನಕ ಸುರವಾರವಂದ್ಯ ಮಂ ದಾರ ಹಾರ ಸುಕುಮಾರಶರೀರ 7 ಮಂದರಧರ ಪೂರ್ಣೇಂದು ವದನ ಗೋ ವಿಂದ ಮುಕುಂದ ಸನಂದವಂದಿತ 8 ಖಂಡಪರಶು ಕೋದಂಡ ವೇ ತಂಡ ಹಸ್ತಭುಜದಂಡ ರಘೂದ್ವಹ 9 ಅಂಬರೀಷ ವರದಂಬುಜಾಸನಾ ಲಂಬಮಾನ ಚರಣಾಂಬುಜ ಕೇಶವ 10 ಸಾರವಸ್ತು ಪರಿಪೂರ ವ್ಯಾಘ್ರನಗ ಪಾರಿಜಾತ ವರದಾರ್ಯವಿಠಲ ಶ್ರೀ 11
--------------
ವೆಂಕಟವರದಾರ್ಯರು
ಸಾರಥಿ ವಿಶ್ವಾಧೀಶ್ವರ ವಿಜಯ ಪಾಲಿಸು ಸತತಂ ವಿಜಯಧ್ವಜ ವೆಂಕಟಗಿರಿ ನಾಯಕಿ ಅಜಿತ ಸಕಲಸುರವೈರಿ ವಿದಾರಣ ಪ. ವೀರಾಗ್ರಣಿ ರಘುವೀರ ವಿದಾರಿತ ಘೋರದಿತಿಜ ಪರಿವಾರ ಶೌರಿ ಕಾರಣ ಧಾರಣ ವದನ ಖರಾರಿ ಕೃಪಾಕರ್ರ(?) 1 ಲಕ್ಷ್ಮಣ ಪೂರ್ವಜ ಋಕ್ಷವಿನುತ ಕಮ ಲಾಕ್ಷ ಶೂರ್ಪನಖ ಶಿಕ್ಷಾ ದಕ್ಷಿಣ ದುರಿತಾರಣ್ಯ ರಮಾಸ್ಪದವಕ್ಷಸ್ಥಳ ವಿಭವೈಕನಿಭೆ ಜಯ ದ್ವಿದಶಾಕ್ಷ ವಿಘಾತನ 2 ರಾಮಾಭಿದ ರಮಣೀಯ ಗುಣಾರ್ಣವ ಕಾಮಿತ ಫಲದಾವನಭೂಮಾ ಭವಾಮಯಹರ ಭಜಕಾಶ್ರಯಧಾಮಾ ಮಾರುತಿಕೃತ ಕಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿ ಪರಮಾನಂದಾ ಗೋವಿಂದಾ ಪ ಪಾಲನ ಅಸುರ ವಿದಾರಣ | ವರಯದು ಕುಲನಿಧಿ ಚಂದ್ರಾ 1 ಅಜಮಿಳ ತಾರಣ ಅಹಲ್ಯೋದ್ಧಾರಣ | ಅಜಭವನನುತ ಶ್ರೀ ಮುಕುಂದಾ 2 ಮಹಿಪತಿ ನಂದನ ಅಹಿತ ಸಂಹಾರಣ | ಸ್ವಹಿತದಾಯಕ ಗೋಪೀ ಕಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು