ಒಟ್ಟು 42 ಕಡೆಗಳಲ್ಲಿ , 14 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೀವನ ಶಟವಿ ಹೇಳುವೆ ಕೇಳುಜೀವನವೆಂಬುವ ಮಾತೇ ಶಟವಿದೇವ ಚಿದಾನಂದ ನೀನಿಹೆಶಟವಿ ಎಲೆ ಜೀವನ ಶಟವಿ ಪ ಒಗೆತನ ಶಟವಿ ಎಲೆ ಜೀವನ ಶಟವಿ 1 ಆರ ಸಂಗಡ ಜಗಳವು ಶಟವಿಆರನಾದರು ಅಣಕಿಪೆ ಶಟವಿಊರು ನನ್ನದೆಂಬ ಶಟವಿ ಎಲೆ ಜೀವನ ಶಟವಿ 2 ನನ್ನದು ನನ್ನದು ಎಂಬೆ ಶಟವಿನಿನ್ನ ತಂದೆಯು ಹೋದನೆ ಶಟವಿನನ್ನದೆನೆ ನಾಚಿಕೆ ಬಾರದು ಶಟವಿ ಜೀವನ ಶಟವಿ3 ಗುರು ಹಿರಿಯರ ನೀ ನಿಂದಿಪೆ ಶಟವಿಗುಣ ನಿನಗೇನೇನಿಲ್ಲವೊ ಶಟವಿಬರಿದೇ ಬಯಲಿಗೆ ಹಂಬಲಿಪೆ ಶಟವಿ ಎಲೆ ಜೀವನ ಶಟವಿ4 ಶರೀರವು ಸ್ಥಿರವಲ್ಲವು ಶಟವಿತೆರಳುವೆ ನೀನು ಬೆಳಗಿಗೆ ಶಟವಿತರಳನ ಆರ ಕೈಯಲಿಟ್ಟೆ ಶಟವಿ ಎಲೆ ಜೀವನ ಶಟವಿ 5 ನಿನ್ನ ಸಂಸಾರ ಸುಳ್ಳಿದು ಶಟವಿನೀರಲಿ ಅಕ್ಷರ ಬರದಂತೆ ಶಟವಿನಿನ್ನನು ಏನಂತ ಕಂಡಿಹೆ ಶಟವಿ ಎಲೆ ಜೀವನ ಶಟವಿ 6 ನಿನಗೆ ಅನಂತ ಜನ್ಮವು ಶಟವಿನೀನು ಹೆಣ್ಣು ಗಂಡಲ್ಲ ಶಟವಿನಿನಗೆ ಹೇಳಲು ಹೆಸರಿಲ್ಲ ಶಟವಿ ಎಲೆ ಜೀವನ ಶಟವಿ 7 ಪಾಪದ ವಿದ್ಯದ ಮೂಲದಿ ಶಟವಿರೂಪಿಗೆ ಬಂದಿಹೆ ನೀನೀಗ ಶಟವಿ ಆ ಪರಿಚಂದ್ರನು ಹೊಳೆದಂತೆ ಶಟವಿ ಎಲೆ ಜೀವನ ಶಟವಿ 8 ಭೂಪ ಚಿದಾನಂದನ ಹೊಂದೆಲೋ ಶಟವಿರೂಪು ವಿರೂಪು ಆಗುವಿ ಶಟವಿದೀಪದೊಳು ನಿಜದೀಪ ನೀ ಶಟವಿ ಎಲೆ ಜೀವನ ಶಟವಿ 9
--------------
ಚಿದಾನಂದ ಅವಧೂತರು
ಧುಮ್ಮಸಾಲೆನ್ನಿರ್ಯೋ ಶ್ರೀ ಗುರುವಿನ ಬಳಗವೆ ಧುಮ್ಮಸಾಲೆನ್ನಿ ಸದ್ಗುರುವಿನ ಬಳಗವೆ ಧ್ರುವ ಗುರುವಿನ ಬಳಗವೆಂದು ಗುರುತುವಿಟ್ಟು ನೋಡಿರ್ಯೋ ಅರುಹಿನೊಳು ಮುಣಗಿ ಪರಮಸುಖ ಸೂರ್ಯಾಡಿರ್ಯೋ ಗರ್ವಿನಾಹರಿಗೆ ಬಿಟ್ಟು ಹರಿದುಹೋಗ ಬ್ಯಾಡಿರ್ಯೋ ಪರ್ವಣಿದೆ ಗುರುಕರುಣ ಪಡೆದು ಪೂರ್ಣಕೂಡಿರ್ಯೋ 1 ಧುಮ್ಮಸಾಲೆನ್ನಿರ್ಯೋ ಬೆರದು ಬ್ರಹ್ಮ ಸುಖವ ಸಮ್ಯಙÁ್ಞನದಿಂದ ದೂರಮಾಡಿ ಭವದು:ಖವ ನಿಮ್ಮ ನಿಮ್ಮೊಳು ನೋಡಿ ಘನ ಕೌತುಕವ ಹ್ಯಮ್ಮಿಯೊಳಗಾಗಿ ನೀವು ಹೋಗಬ್ಯಾಡಿ ಹೋಕುವ 2 ಕಣ್ಣದ್ಯರದು ನೋಡಿರ್ಯೊ ಚಿನ್ನುಮಯ ರೂಪವ ಭಿನ್ನವೆಲ್ಲದ್ಯದೆ ತನ್ನೊಳು ಸಮೀಪವ ಪುಣ್ಯ ಹಾನಿ ಮಾಡಿಕೊಂಡು ಹಿಡಯಬ್ಯಾಡಿ ಕೋಪವ ಕಣ್ಣ ದ್ಯರಸಿಕುಡುವ ಹಚ್ಚಿ ಗುರು ತಾನ ದೀಪವ 3 ನಮ್ಮ ನಿಮ್ಮ ದ್ಯಾವರೆಂದು ಹೊಯಿದಾಡಬ್ಯಾಡಿರ್ಯೋ ಬೊಮ್ಮನ ಪಡದ ಪರಬ್ರಹ್ಮನೊಬ್ಬ ನೋಡಿರ್ಯೋ ಇಮ್ಮನಕ ಹೋಗದೆ ಒಮ್ಮನವ ಮಾಡಿರ್ಯೋ ಸುಮ್ಮನೆ ಸುವಿದ್ಯದೊಳು ಬೆರದು ನಿಜಗೂಡಿರ್ಯೋ 4 ಸುಗ್ಗಿಯೋ ಸುಗ್ಗಿಯೋ ಸುಙÁ್ಞನದ ಲಗ್ಗಿಯೋ ಭಾಗ್ಯವಿದೆ ನೋಡಿ ಭಕ್ತಿ ಙÁ್ಞನ ವೈರಾಗ್ಯಯೋ ಬಗ್ಗಿ ನಡವ ಸಾಧುಸಂತ ಜನರಿಗಿದು ಯೋಗ್ಯಯೋ ಹಿಗ್ಗಿ ಹರುಷಪಡುವ ಮಹಿಪತಿಯ ನಿಜ ಸ್ರಾಘ್ಯಯೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಂಥವ್ಯಾಕೋ ಗುಣವಂತ ಸಖಿಯೊಳಿನ್ನು ಪುಷ್ಪಾವ- ಸಂತ ಆಡಿದೊರೆಯೆ ಶ್ರೀಮಂತ ದೇವನೂರಲಿ ನಿಂತ ಲಕ್ಷ್ಮೀಯ ಕಾಂತ ಪ ರೂಢಿಯೊಳಗೆ ನೀನಾಡಿ ಪೆಣ್ಣಲ್ಲವೆಂದು ನೋಡಿ ಸವಿಮಾತನಾಡಿ ಗಾಡಿಕಾರೆಯರ ಒಡ- ಗೂಡಿ ಬಲ್ಮೊಲೆಗೆ ಕೈಯನೀಡಿ ಸುರತದೊಳು ಕೂಡಿ ಮೋಹವ ಮಾಡಿ ||1|| ಎಲ್ಲರಂತೆ ನಾ ತರುಣಿಯಲ್ಲ ಬಣ್ಣನೆ ಮಾತು ಒಲ್ಲ ಅವಳು ಮೊದಲೆ ಅಲ್ಲಿ ಇಲ್ಲದೆ ಪೂವಿಲ್ಲ ಇನ್ನಷ್ಟು ದಯವಿಲ್ಲ ಶ್ರೀ ವಲ್ಲಭ ನಿನಗೀ ನಿತ್ತವಲ್ಲ 2 ಜಾರವಿದ್ಯದಿ ನೇಮಗಾರ ಯೆನ್ನಯ ಮಾತ ಮೀರದೆ ಕೃಪೆ ಬಂದು ಸರಸಗುಣ ವಿ- ಚಾರವರಿತು ವೈಯಾರ ಪೊರೆದೆಯೇ ದೇವ- ನೂರ ವಿಹಾರ ಲಕ್ಷ್ಮೀಮನೋಹರ ಮೋಹನಾಕಾರ3
--------------
ಕವಿ ಲಕ್ಷ್ಮೀಶ
ಬನ್ನ ಬಡಿಸುವುದು:ಖನೀಗುವಂತೆ ಸಿರಿ ಮನ್ನಣೆಯ ಪಡಿಯ ಕಂಡ್ಯಾಮನವೆ ಪ ಘನ್ನವಿದ್ಯದಮಬ್ಬಿಲಿನ್ನ ಖಳಜಗದ ಜೀ ವನ್ನ ಮಲಗಿದೆರೊಳಗ ಮುನ್ನ ಮಾಡಿದ ಸುಕೃತ ಪುಣ್ಯ ತಂಗಾಳಿ ಸಂಪನ್ನ ಗುರು ಕರುಣೋದಯ ದುನ್ನತೆಯ ಬೆಳಗು ಕಂಡು ಸನ್ನುತುದಯರಾಗಸ್ತವನ್ನು ಪಡುತಜ್ಞಾನ ಚನ್ನ ನದಿಯೊಳುಮಿಂದು ತನ್ನ ಸಂಚಿತದ ತ್ರೈಯ ಘ್ರ್ಯನ್ನೆರದು ಮೆರುವುತಿಹ ನಿನ್ನ ಸಿರಿಕರ ನೋಡು ಇನ್ನು ನಾಚಿಕೆ ಬಾರದೇ 1 ಬಂದು ನರದೇಹದಲಿ ನಿಂದಾಗ್ರ ಜನ್ಮದಲಿ ಹೊಂದುಪಥವನೆ ಬಿಟ್ಟು ಛಂದ ಹೊಲಬದಿ ಕೆಟ್ಟು ಮಂದಮತ ತನವೆರಿಸಿ ಮಂದಿಯೊಳಗಲ್ಲೆನಿಸಿ ಪರಿ ಪರಿಯ ಬಯಸೀ ಬೆಂದ ವಡಲನೆ ಹೊರೆದಿ ಕುಂದದಾಟಕೆ ಬೆರೆದಿ ತಂದಾಯುಷವ ಹೊತ್ತು ಇರದಯೇರಿತು ಬೆರೆತು ಮುಂದ ನಿನ್ನಯ ಗತಿಯ ಯಂದು ಘಳಿಸುವೆ ಸ್ಥಿತಿಯಾ ಇಂದಿರೇಶನ ವಲುಮೆಯಾ 2 ಮರಹು ಮುಸುಕವ ತೆಗೆದು ಅರಹುನಯನವ ತೆರೆದು ಪರಮ ಭಾವನೆ ಬಲಿದು ವರ ಭಕುತಿಗಳ ಜಡಿದು ತರಣೋಪಾಯವ ಕೂಡು ಹರಿಯ ಸೇವೆಯ ಮಾಡು ನೆರೆ ಸಾಧು ಸಂಗ ಬೇಡು ಸುರಸ ಬೋಧವ ಕೇಳು ಸರಕುಮಾತನೆ ಕೀಳು ಧರಿಯೊಳಗ ಸಾರ್ಥಕಲಿ ಪರಿಬಾಳುತಲಿರಲಿ ಗುರು ಮಹಿಪತಿಸ್ವಾಮಿ ಹೊರೆವದಯದಲಿ ನೇಮಿ ಶರಣ ಜನರಂತರ್ಯಾಮೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಯ್ಯ ಬಾ ಬಾ ಬುಧಜನಗೇಯಾ | ಹೇ ಗುರರಾಯಾಸಾರಿ ಬರುವ ಭಕುತರೊಡೆಯ | ಕಾಯಯ್ಯ ಜೀಯಾ ಪ ವಾರಿಜನಾಭನ ವಾರಿಧಿಮಥನನವೈರದಿ ಭಜಿಸಿದ ಪುರಟ ಕಶ್ಯಪನ |ವರ ಉದರೋದ್ಭವ ಹರಿ ಪ್ರಿಯ ಭಕುತನೆಶರಣರ ಪೊರೆಯಲು ತ್ವರ್ಯದಿ ಬಾರೋ ಅ.ಪ. ದಿತಿಸುತ ದೊರೆಯೇ | ಬಾಹ್ಲೀಕ ದೊರೆಯೇ |ಚತುರ ಚಂದ್ರಿಕೆ ಗುರು ಮಂತ್ರಾಲಯ ಗುರುವೇ | ದೊರೆಬಲು ಮೊರೆಯೇ |ವ್ಯಥೆಯಾಕೆನ್ನುತ | ಹಸ್ತವ ಚಾಚುತಹುತ ವಹ ನೊಳು ಬಲಾ | ಜತನಾಗಿರಿಸಿಹ ರತುನವ ಹಾರವ | ಪ್ರೀತಿಲಿ ಕೊಡುತಅತಿಶಯ ತೋರಿದ | ಯತಿ ರಾಘವೇಂದ್ರ 1 ಸುಧೀಂದ್ರರ ಕರಜ ಮಂತ್ರಾಲಯ ನಿಲಯ | ಬಲು ಮಂತ್ರಗಳೊಡೆಯಾ |ಬಧಿರ ಮೂಕರ ಅಂಧರ ಹೊರೆಯಾ | ಪರಿಹರಿಸುವ ದೊರೆಯಾ |ಮಧ್ವಾಂತರ್ಗತ ಮಧು ಕೈಟ ಭಾರಿಯಸಿದ್ಧಾಂತದ ಸವಿ ಹೃದ್ಗತ ಮಾಡಿದ |ವಿದ್ವನ್ಮಣಿಗಳ ಸದ್ವøಂದದ ಖಣಿಸದ್ವಿದ್ಯದ ಸವಿ ಮೋದದಿ ಉಣಿಸಲು 2 ಮನ್ರೋವಿನ ಮನ ತಿಳಿಯುತಲಿನ್ನೂ | ಮುನಿವರ ತಾನೂ |ಸಾನುರಾಗದಿ ತನುವ ತೋರಿದನೂ | ಘನ ಕರುಣಿಯು ತಾನೂ |ಜ್ಞಾನಿಗಮ್ಯ ಗುರುಗೋವಿಂದ ವಿಠಲನಧ್ಯಾನಿಸೆ ಪೊಗುತಲಿ ವೃಂದಾವನವ |ಆನತ ಜನ ಮನದಿಷ್ಟವ ಸಲಿಸುತಮೌನಿವರೇಣ್ಯನೆ ತುಂಗೆಯ ತೀರಗ 3
--------------
ಗುರುಗೋವಿಂದವಿಠಲರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ಬೆಳಗಾಯಿ ತೇಳಿರಯ್ಯಾ ಪ ಕರ ಪುಷ್ಕರದ ನೆಲೆಯ ಲೊಗದು | ಬಲಿದ ವೈರಾಗ್ಯ ವೈರಾಗ್ಯ ಮುಂಬೆಳಗ ಸುಖ ತಂಗಾಳಿ | ರವಿ ಉದಯಿಸಿದ 1 ನ್ಮತ್ತದುರ್ವಾದಿ ನಕ್ಷತ್ರದೆಡೆಗೆ | ಭವ ದ್ವಿಜ ರಿಂದ ಸುತ್ತುಗಟ್ಟಿ ಭಜಿಸುತಿದೆ 2 ನೆರೆಭಾವ ಭಕುತಿ ರಥ ಚಕ್ರನೆರೆಯೆ | ದುರಿತೌಘ ಮಂಜು ಮುಸುಕು ದೆರಿಯೇ | ಸಂಚಿತ ಮೊದಲ | ಹಂಸನು ಮೆರಿಯೆ 3 ಸಾಲ ಸ-ಚ್ಚಾಸ್ತ್ರಾ ದೇಳಿಗೆಗೆವಿದ್ವಜ್ಜ | ನಾಳಿ ಝೇಂಕರಿಸುತಲಿ ಮ್ಯಾಲನಲಿಯಿ | ಮೂಲ ರಘು ಪತಿಯ ದೇವಾಲಯದ ವಾದ್ಯಗಳು | ಘೇಳೆನಿಪ ನಿಜ ವೇದ ಘೋಷ ಕೇಳ ಬರುತಿದೆ ಜನಕೆ4 ಘನ ಪುಣ್ಯ ಪೂರ್ವಾದ್ರಿ ಕೊನಿಗೆ ಅರುಣಾಂಬರದಿ | ವಿನುತ ಜ್ಞಾನದ ಕಿರಣವನೆ ಪಸರಿಸಿ | ಜನದ ವಿದ್ಯದ ನಿದ್ರೆಯನೇ - ಜಾರಿಸಿ ಹೋದ | ಮಹಿಪತಿ ನಂದನ ನುಭಿವದಿ ಕೀರ್ತಿ ಪಾಡಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳುದಿಂಗಳ ಪ್ರಭೆ ಬಲು ಕಾಂತಿಯಿರಲುಬಲವನು ದುರ್ಗುಣಕೆ ಹತ್ತಬಹುದೇಬೆಳಗುತ್ತ ಜ್ಞಾನದ ಚಂದ್ರನು ಹೊಳೆದಿರೆಬಳಿಕ ಜನನ ಮರಣ ಮುತ್ತಬಹುದೆ ಪ ಬಹು ಬೆಳಕು ಬೆಳಗಲು ಮನದ ಮರ್ಕಟವದುಮರವ ನೇರದೆ ಕೆಳಗೆ ನಿಲ ಬಲ್ಲುದೆಬಹು ಕಾಮವೆಂಬ ಕಾಗೆ ಕಣ್ಣುಡುಗಲುಗೂಡಿನಿಂದಾ ಹೊರಗೆ ಬರಬಲ್ಲದೆ1 ಚೆಲ್ಲಿರೆ ಕಾಂತಿಯು ಕಳ್ಳರಾರ್ವರ ತಲೆಚೆಂಡಾಡದೆ ತಾನು ಸುಮ್ಮನಿಹುದೆಫುಲ್ಲ ತಿಂಗಳ ಬೆಳಕು ಎಲ್ಲೆಡಗೆ ಹರಡಿರೆಪಂಚ ವಂಚಕರು ಓಡದಿಹರೆ2 ಒಲಿದರೆ ತೇಜವು ಅವಿದ್ಯದ ಕತ್ತಲೆಯುತಾನೋಡದೆ ಅಲ್ಲಿ ನಿಲಬಲ್ಲುದೆಬಲು ಕಳೆ ಚಿದಾನಂದಗುರು ತಾನು ಬೆಳಗುತಿರೆಬಹಳ ಜನ್ಮದ ಪಾಪ ಹರಿಯದಿಹುದೇ3
--------------
ಚಿದಾನಂದ ಅವಧೂತರು
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಮಾತ್ರೆ ತಾಳ ಇವು ಯಾತಕ್ಕೋ ಹರಿ ಖಾತ್ರಿ ತಾಳ ಶುದ್ಧಿರಬೇಕೊ ಪ ಧಾತ್ರಿ ಈರೇಳಕ್ಕೆ ಸೂತ್ರಧಾರ ಕೃಪಾ ಪಾತ್ರನಾಗ್ವ ತಾಳ ತಿಳೀಬೇಕೊ ಅ.ಪ ಕೃತಿ ಇವುಯಾತಕ್ಕೋ ಹರಿ ಪೂರ್ಣಮಹಿಮಸ್ಮøತಿ ಅರೀಬೇಕೊ ವರ್ಣಾಶ್ರಮ ಧರ್ಮ ಬಣ್ಣಿಪಗೂಡಾರ್ಥ ಕರ್ಣಕ್ಕೆ ಬಲು ತಾಳಿರಬೇಕೊ 1 ರಾಗಭೇದಗಳ ಬಲವ್ಯಾಕೋ ಹರಿ ಭೋಗಭಾಗ್ಯದಾಸೆ ನೀಗಿ ಸುಮನರನು ಬಾಗಿ ಒಲಿಸುವ ತಾಳಿರಬೇಕೊ 2 ಸಾಸಿರವಿದ್ಯದ ತಾಳ್ಯಕೋ ಹರಿ ಧ್ಯಾಸದ ಮಹ ತಾಳಿರಬೇಕೊ ಶ್ರೀಶ ಶ್ರೀರಾಮನದಾಸರ ಪ್ರೇಮನು ಮೇಷ ತನಗೆ ತಾಳಿದ್ದರೆ ಸಾಕೊ 3
--------------
ರಾಮದಾಸರು
ಮೂರ್ತಿ ಶ್ರೀಗಣರಾಯಗೆ ಪ ಶರ್ವಾಣಿಸುತ ಚತುರ್ದಶ ವಿದ್ಯದಾಗರ | ಸರ್ವಗುಣಾಂಬುಧಿ ಗಜಮುಖಗೆ | ಊರ್ವಿಯೊಳಗೆ ತನ್ನ ಚರಣವ ನೆನೆವರ | ನಿರ್ವಿಘ್ನದಲಿ ಕಾವ ದಯಾನಿಧಿಗೆ 1 ರನ್ನ ಮುಕುಟ ದಿವ್ಯ ಕುಂಡಲಧಾರಿಗೆ | ಪನ್ನಗ ಭೂಷಣ ಚತುರ್ಭುಜಗೆ | ಸನ್ನುತ ಪರಶಾಂಕುಶವನು ಪಿಡಿದಗೆ | ಮೂಷಕ ವಾಹನಗೆ 2 ಸಮಚರಣಾಂಬುಜ ಸುರವರವಂದ್ಯಗೆ | ಕಮಲಸಕನ ತೇಜ ಗೆದ್ದವಗೆ | ವಿಮಲ ಮತಿಯ ನೀವ ಸಿದ್ದಿಧೀರೇಶಗೆ | ನಮೋಎಂಬೆ ಮಹೀಪತಿ ಸುತಪ್ರಿಯಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೊರೆಯ ಹೊಕ್ಕೆನು ನಿನ್ನಾ | ಚರಣ ಕಮಲಕ ಸಿರಿಪತಿ ಭವರೋಗ ವೈದ್ಯ ನೆಂಬದು ಕೇಳಿ ಪ ಅನ್ಯವಾರ್ತೆಯ ಕೇಳಿ ಕಿವಿಬಧಿರಾಗದೆ ನಿನ್ನ ಕಥಾಶ್ರವಣದ ರಸದೀ ಇನ್ನು ಕೇಳುವ ಪರಿಮಾಡೋ ಅವಿದ್ಯದಾ ಕಣ್ಣಿನ ಪರಿಗೆ ಜ್ಞಾನಾಂಜನವಿಡೋದೇವಾ 1 ವಿಷಯನಂಜಲಿ ತಾಪವೆಡಗೋಂಡದೇಹಕೆ ಅಸಮಸತ್ಸಂಗ ಕಷಾಯಕೊಟ್ಟು ಹುಸಿ ನುಡಿ ಪರನಿಂದೆಯಾಡಿದ ರೋಗದಿ ಹಸಗೆಟ್ಟ ನಾಲಿಗೆ ನಾಮಾಮೃತವ ನೀಡೋ 2 ನಾಸಿಕ ಕೊರಡಾಯಿತಿಭೋಗ ದ್ರವ್ಯದಿ ವಾಸನೆ ಕೊಡು ತುಳಸಿಯಾರ್ಪಿತವಾ ಧ್ಯಾಸತೈಲದಿ ಮನಸಿನ ಕರ್ಮವಾತವಾ ದೋಷಬಿಡಿಸಿ ಕಾಯೋ ಗುರು ಮಹಿಪತಿ ಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಲೇಸು ಲೇಸಾಯಿತು ನೋಡಿ ಭಾಸ್ಕರನ ಕೂಡಿ ಧ್ರುವ ಲೇಸು ಲೇಸಾಯಿತು ನೋಡಿ ಸ್ವಸುಖಗೂಡಿ ಆಶೆ ಪೂರಿಸಿದ ನೋಡಿ ಭಾಸಿ ನೀಡಿ 1 ಶಿರದಲಿ ಅಭಯನಿಟ್ಟ ಹರುಷವ ಕೊಟ್ಟ ಹರಿದು ಭವಜೀವ ಸುಟ್ಟ ಸ್ಮರಣಿಯೊಳಿಟ್ಟ 2 ಮಾಯದ ಮೊನೆ ಮುರಿದ ಭಯ ಹರಿದ ಸಾಯೋಜ್ಯಪದ ತೋರಿದ ದಯ ಬೀರಿದ 3 ಸದ್ವಾಕ್ಯವೆ ಬೋಧಿಸಿದ ಸದ್ಗುಣದ ಸದ್ಭಾವ ಭಕ್ತಿ ತೋರಿದ ಸದ್ಗೈಸಿದ 4 ಅನುಭವ ಸುಖದೋರಿದ ಸ್ವಾನುಭವದ ಮನವಿಗ್ಯೆನುಕೂಲಾದ ತಾನೆ ತಾನಾದ 5 ಸವಿಸುಖವನುಣಿಸಿದ ಸುವಿದ್ಯದ ರವಿ ಕೋಟಿ ಪ್ರಭೆಯ ತೋರಿದ ಅವಿನಾಶದ 6 ತರಳ ಮಹಿಪತಿ ಪ್ರಾಣ ಗುರುನಿಧಾನ ಹರುಷಗೈಸಿದ ಜೀವನ ಪರಮಪಾವನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು