ಒಟ್ಟು 58 ಕಡೆಗಳಲ್ಲಿ , 31 ದಾಸರು , 54 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೈಲಾಸನಾಥ ಮಹೇಶ ಈಶ ಶೈಲೇಶ ತನಯೇಶ ಬಾಲಾರ್ಕ ಸಮಭಾಸ ಪ ಶೂಲಾಕ್ಷ ಡಮರುಗಳಿಂದ ಶೋಭಿಪ ಹಸ್ತ ತಾಲಾಂಕನನುಜನೊಳ್ಸಮರಗೈದೀರ್ಪ ಫಾಲಾಕ್ಷದಿಂದಲಿ ಕಾಮನ ದಹಿಸಿರ್ಪ ಶೂಲಿಯ ಮಹಿಮೆಯನೇನು ಬಣ್ಣಿಸಲಿ 1 ವಿಷ್ಣುಭಕ್ತರೊಳಗತಿ ಪ್ರೇಮವಿರುವ ಕೃಷ್ಣ ದ್ವೈಪಾಯನರ ಸುತರಾಗಿ ಶೋಭಿಪ ಸನಕಾದಿಗಳ ಶಿಷ್ಯ ದುರ್ವಾಸರೆನಿಪ 2 ನಂಜುಂಡನೆನಿಸಿರ್ಪ ಪ್ರಖ್ಯಾತ ಮಹಾದೇವ ಕಂಜಜಾತನ ಸುತನೆನಿಸಿರ್ದ ದೇವ ರಾಜೇಶ ಹಯಮುಖ ಭಕ್ತಪುಂಗವ ನೀನು ಅಂಜಲಿ ಬಂಧದಿಂ ನಮಿಪೆ ನಿನ್ನಡಿಗೆ 3
--------------
ವಿಶ್ವೇಂದ್ರತೀರ್ಥ
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಘಂಟಾನಾದವ ಕೇಳೋ ಮುಕ್ತಘಂಟಾನಾದವ ಕೇಳೋಘಂಟಾನಾದವು ಘಣ ಘಣವೆನಲುಅಂಟಿ ಕೊಳ್ಳದೆ ಲೌಕಿಕ ಸುಖಕೆ ಪ ಈಷಣ ತ್ರಯಗಳು ಎಲ್ಲವು ಕೆಟ್ಟುಪಾಶವೆಂಟನು ಎಲ್ಲವ ಸುಟ್ಟುವಾಸನೆ ಹದಿನೆಂಟನು ಕಳಚಿಟ್ಟುಕ್ಲೇಷ ಪಂಚಕಗಳು ಹುಡಿಯಿಟ್ಟು 1 ಅರಿಗಳು ಅರುವರ ತಲೆಯನೆ ಹೊಯ್ದುಕರಣ ನಾಲ್ವರ ಕಾಲನೆ ಕೊಯ್ದುಹರಿವಾ ಹತ್ತರ ನೆತ್ತಿಗೆ ಹೊಯ್ದುಮೆರೆವಾವರಣ ಏಳನೆ ಮೇದು 2 ಘಂಟಾನಾದದ ಇಂಪನಾಲಿಸುಎಂಟು ಮೂರ್ತಿಗಳೊಡೆಯನಹೆಕಂಟಕಹರ ಚಿದಾನಂದ ಬ್ರಹ್ಮವುತಾನಾಗಿಯೇ ನೀ ನಿಜ ವಿರುವೆ3
--------------
ಚಿದಾನಂದ ಅವಧೂತರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ಸುಖಕರ ನೀರಜಾಕ್ಷರ ಭೃತ್ಯರಾಗುವ ಬನ್ನಿರಿ ಎತ್ತುವನು ಸಂಶಯವಿಡದೆ ಕೃತಕೃತ್ಯರಾಗುವವೆನ್ನಿರಿ ಪ. ಮೋದಮಯನ ಪ್ರಸಾದವನು ಕೊಂಡಾದರದಿ ಸೇವಿಪುದು ಪಾದಪದ್ಮಾಮೋದಯುತಾ ತುಳಸೀದಳಗಳನು ಮುಡಿವುದು ತೇದ ಗಂಧವ ಮಾಧವನಿಗಿರಿಸಾದನಂತರ ಕೊಳುವುದು ಭಾಗವತ ಕೇಳುತ 1 ಭೀಕರಿಪ ಮಹ ದುರಿತಗಣ ನಿರಾಕರಿಸುವನು ನಿಮಿಷದಿ ಕುಯುಕ್ತಿ ಶಕ್ತಿಯ ದೂಕುವನು ದುಷ್ಕೂಪದಿ ವಾಕುಗಳ ತಪ್ಪುಗಳನೆಣಿಸದೆ ಸಾಕುವನು ಸಂತಸದಲಿ ಒಡಗೂಡಿ ನಲಿವನು 2 ಶ್ರೀಶನನು ಭಜಿಸುವದಕೇನಾಯಾಸವಿರುವುದು ಹೇಳಿರಿ ವಾಸವಾಗಿಹ ಸಕಲ ಹೃದಯಾಕಾಶ ಪದ್ಮದಿ ಕೇಳಿರಿ ವಾಸುದೇವನ ವರ್ಣನಾಂಶವ ಲೇಶವಾದರು ತಾಳಿರಿ ಶೇಷ ಗಿರೀಶನ ದಾಸಕೂಟ ಸಮಾಶ್ರಯಣ ಸಂಗ್ರಹಿಸಿ ಬಾಳಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪರತತ್ವ ವಿಠಲನೇ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ತರಿದು | ಕರಪಿಡಿಯ ಬೇಕೋ ಅ.ಪ. ಕಾಲ ಕಾಲ ರೂಪಾತ್ಮಾ 1 ಗುರು ಕರುಣವಿಲ್ಲದಲೆ | ಹರಿಯೊಲಿಯನೆಂದೆಂಬಪರಮರಾಹಸ್ಯವನು | ಅರುಹಿ ಪ್ರೀತಿಯಲೀಕರುಣಿಸೋ ತವನಾಮ | ಸ್ಮರಣೆ ಸುಖ ಸಖ್ಯವನುಮರುತಾಂತರಾತ್ಮ ಹರಿ | ದುರಿತವನದಾವಾ 2 ಹರಿದಾಸ್ಯವತಿ ಕಷ್ಟ | ವಿರುವುದೆಂದರಿತಾಗ್ಯುಪರಿ ಪ್ರಶ್ನೆ ಭಕ್ತಿಯಲಿ | ಮೊರೆಯನಿಡುತಿರುವಾ |ತರಳೆ ಗಂಕಿತ ವಿತ್ತೆ | ವರ ಸ್ವಪ್ನ ಸೂಚ್ಯದಲಿಹರಿಯೆ ನಿನ್ನಾದೇಶ | ವಿರುವುದೆಂದರಿತು 3 ಪರಿ ಪರಿಯಗೈಯ್ಯುವಲಿಹರಿಯೆ ತವ ಸಂಸ್ಮರಣೆ | ಮರೆಯದಂತಿರಿಸೋ 4 ಜೀವೇಶ ಸನ್ನುತನೆ | ಜೀವರಂತರ್ಯಾಮಿಗೋವತ್ಸದನಿ ಗಾವು | ಧಾನಿಸೂವಂತೇ |ಕೈವಲ್ಯ ಪ್ರದ ಗುರೂ | ಗೋವಿಂದ ವಿಠ್ಠಲನೆಭಾವುಕಳ ಮಾಡಿವಳ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಪರರ ಮನೆಗೆ ಪೋಗಿ ತಿರುಗುವೆ ಯಾತಕೆ ಸುರತರುವಿರುವದ ಅರಿಯದೆ ಮನುಜ ಪ. ವರದಿಹ ಸುರಮುನಿ ಗುರುವರ ನಾರದ ಪೊರೆವ ಹರಿ ಎಂದ ಪುರಂದರದಾಸರ ಅ.ಪ. ವರ ದಿವಕರನೇಳದ ಮುನ್ನ ಸ್ಮರಿಸುತ ಹರಿಯ ನೀನೇಳೆಂದು ಕರುಣಸಾಗರ ಹರಿಚರಣಕೆ ನಿನ್ನಯ ಹರಣವ ಬಾಗುತೆ ಪೊರೆವ ನಿನ್ನ ಜೀವವೆಂದರುಹಿದ ಮರೆತು ನೀನನುದಿನ 1 ಅಂಗನೆ ದ್ರೌಪದಿ ಗಂಗ ಸ್ನಾನಕೆ ಪೋಗೆ ರಂಗನ ಚರಣವ ಸ್ಮರಿಸುವಂಥ ಶುಕರು ಹೆಂಗಳೆಯನು ಮಾನಂಗಳ್ವಸ್ತ್ರವ ಬೇಡೆ ಮಂಗಳೆ ಕೈಯಿಂದ ರಂಗನ ಕೊಡಿಸಿರೆಂದು ಮರೆತುನೀನನುದಿನ2 ತೋರಿದ ಜಗಕೆ ಕೃಷ್ಣನೆಂಬೋ ನಾರಿ ಸೊಲ್ಲ ಕೇಳಿ ಭೋರೆಂಬೊ ಸಭೆಗೆ ತಾ ಕೋರಿದಕ್ಷಯ ಶೀರೆ ಶ್ರೀ ಶ್ರೀನಿವಾಸನು ಮರೆತು ನೀನನುದಿನ3
--------------
ಸರಸ್ವತಿ ಬಾಯಿ
ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪೊರೆಯೊ ಶ್ರೀಶನೆ ಸರುವ ಲೋಕ ಪೊರೆವನೆ ಪ ಅರಿತು ಅರಿಯದಂತೆ ನಾನು ಗರುವದಿಂದ ಮೆರೆದನಯ್ಯ ಅ.ಪ ಅರುಣ ಉದಯದಲ್ಲಿ ಎದ್ದು ಹರಿಯೆ ನಿನ್ನ ಸ್ಮರಣೆ ಬಿಟ್ಟು ಗೊರಿಕೆ ಹೊಡಿದು ನಿದೆÀ್ರಮಾಡಿ ದುರಿತದಲ್ಲಿ ಪೊರಳುವವನ 1 ಕುತುಬ ಕಾಲದಲ್ಲಿ ಬಂದ ಅತಿಥಿಗಳನು ಜರೆದು ನೂಕಿ ಮಿತಿಯ ಮೀರಿ ಸವಿಯುತ ಪರ- ಗತಿಯ ದಾರಿ ಕಾಣದವನ 2 ದಾನಧರ್ಮ ಕೇಳಬಂದ ಮಾನವಂತ ಜನರ ಬಹಳ ಹೀನ ಮಾತಿನಿಂದ ಬೈದ ಜ್ಞಾನರಹಿತನಾದ ನರನ 3 ರೊಕ್ಕವಿರುವದೆಂದು ಬಹಳ ಸೊಕ್ಕಿನಿಂದ ಬಡವರನ್ನು ಲೆಕ್ಕಿಸದೆ ಮಾತನಾಡಿ ಧಿಕ್ಕರಿಸಿದ ಅಧಮ ನರನ 4 ಪಟ್ಟದರಸಿಯಿರಲು ಅವಳ ಬಿಟ್ಟು ಪರರ ಸತಿಯ ಬಯಸಿ ಅಟ್ಟಹಾಸದಿಂದ ನಗುತ ಕೆಟ್ಟು ಹೋದ ಭ್ರಷ್ಟ ನರನ 5 ಎಷ್ಟು ಮಾಡಲೇನು ಎಳ್ಳಿ ನಷ್ಟು ಸುಖವ ಕಾಣಲಿಲ್ಲ ಇಷ್ಟ ಮಿತ್ರ ನೀನೆಯೆಂದು ಗಟ್ಟಿಯಾಗಿ ತಿಳಿದುಕೊಂಡೆ 6 ಶ್ರಿಷ್ಟಿಗೊಡೆಯನು ರಂಗೇಶ- ವಿಠಲನೆಂಬ ಮತಿಯ ಎನಗೆ ಎಷ್ಟು ಮಾತ್ರ ಕೊಟ್ಟು ಸಲಹೊ ಕೆಟ್ಟ ಮೇಲೆ ಬುದ್ಧಿ ಬಂತು 7
--------------
ರಂಗೇಶವಿಠಲದಾಸರು