ಒಟ್ಟು 48 ಕಡೆಗಳಲ್ಲಿ , 23 ದಾಸರು , 37 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಸುಖಕರಾ ಗುರುಬೋಧಸಾರಾ ಮರಣಾ ಜರಾ ದುರಿತಾದಿ ದೂರಾ ಪ ಜೀವಭಾವವಾ ಸಟೆಯಾಗಿ ಗೈವ ದೇವಭಾವನಾ ಬಗೆಸಿನಿಲಿಸುವಾ ಸಾವಿನಂಜಿಕೆ ದೂರಾಗಿ ಮಾಳ್ಪ ಜೀವಂತಮುಕುತಿ ಕರದೀಯುವಾ 1 ದೃಶ್ಯವೆಂದು ತೋರ್ಪ ವಿಶ್ವತ್ಯಾಗ ಮಾಡಿ ದೃಶ್ಯವಸ್ತುವಿಂದ ಬೇರೆನಿಸುವಾ ಶಾಶ್ವತಾದ ಆ ಪದ ತೋರಿ ಮನದ ಕಶ್ಮಲವನು ಕಳೆವ ಭವತಾರಕಾ 2 ಭೇದಭಾವವಾ ಛೇದಿಸುತ ಮನದಿ ಬೋಧನಾರಾಯಣನ ಕೃಪೆ ಪೊಂದಿದಾ ಬೋಧರೂಪ ಗುರುವು ಪೇಳಿರ್ದ ಬೋಧ ಸಾಧು ಶಂಕರಾರ್ಯ ತಾನೆನ್ನುವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಭಂಗಿ ಹತ್ತಿದೆ ಜ್ಞಾನ ಭಂಗಿ ಹತ್ತಿದೆನುಂಗಿ ಕಾಮ ಕ್ರೋಧಗಳನ್ನುಅಂಗ ಮೆರೆವ ಮರವೆನಿಕ್ಕಿ ಪ ನಿತ್ಯತೃಪ್ತನು ನಿರಾಕಾರ ನಿರ್ಲಿಪ್ತನುಪ್ರತ್ಯಗಾತ್ಮ ಅತ್ಯಾಧಿಕಸತ್ಯಸಂಧನು ತಾನೆ ಎಂಬ 1 ವಿಶ್ವ ನಾಟಕ ಮಹಾವಿಶ್ವದಾಧಾರವಿಶ್ವದೊಳ ಹೊರಗೆಲ್ಲವಿಶ್ವತೃಪ್ತ ತಾನೆ ಎಂಬ2 ಏನ ಕೇಳುವಿರೋ ನೀವೇನ ಹೇಳುವಿರೋಜ್ಞಾನ ಮೂರುತಿ ಚಿದಾನಂದತಾನೆ ತಾನೆ ಎಂಬ3
--------------
ಚಿದಾನಂದ ಅವಧೂತರು
ರಕ್ಷಿಸಿ ಪೊರೆಯೊ ದೇವನೆ ಪಕ್ಷಿವಾಹನನೆ ಸೂಕ್ಷ್ಮ ಸ್ಥೂಲದಿ ವ್ಯಾಪ್ತನೆ ಪ ಲಕ್ಷ್ಮಿರಮಣ ಪುರುಷೋತ್ತಮ ಪುರುಷನೆ ಕುಕ್ಷಿಯೊಳಗೆ ಜಗ ರಕ್ಷಿಸಿ ಪೊರೆವನೆ ಅಕ್ಷರೇಢ್ಯ ಕಮಲೇಕ್ಷಣ ಮಾಧವ ರಕ್ಷ ಶಿಕ್ಷಕ ಜಗದ್ರಕ್ಷಕ ಹರಿಯೆ ಅ.ಪ ವಿಶ್ವರೂಪನೆ ಶ್ರೀಹರಿ ವಿಶ್ವವ್ಯಾಪಕನೆ ವಿಶ್ವತೋ ಮುಖನೆ ಶ್ರೀಶನೆ ವಿಶ್ವನಾಟಕನೆ ದೇವನೆ ವಿಶ್ವೋದ್ಧಾರಕನೆ ವಿಶ್ವಮಯನೆ ಶ್ರೀ ವಿಶ್ವನೆ ವಿಶ್ವರೂಪ ತಾಯಿಗೆ ಬಾಯೊಳು ತೋದರ್À ವಿಶ್ವರೂಪ ಮೈದುನನಿಗೆ ತೋರಿದ ವಿಶ್ವರೂಪ ಸಭೆಯೊಳು ಭಕ್ತರಿಗೆ ತೋರ್ದ ವಿಶ್ವ ಮೂರುತಿಯೆ 1 ಹಿಂದಿನ ಕರ್ಮಫಲದಲಿ ಬಂದು ಈ ಭವದಿ ಕಂದಿ ಕುಂದಿದೆನೋ ವ್ಯಥೆಯಲಿ ಬಂಧ ಮೋಚಕನೆನುತಲಿ ಬಂದೆರಗುತಲಿ ತಂದೆ ನೀ ಪೊರೆಯಬೇಕೆನುತಲಿ ಮಂದರೋದ್ಧರ ಗೋವಿಂದ ನಿನ್ನಯ ಪಾದ ದ್ವಂದ್ವಕೆ ನಮಿಸುವೆ ಬಂಧನ ಬಿಡಿಸೆಂದು ಇಂದು ಮುಂದು ಎಂದೆಂದಿಗೂ ನೀ ಗತಿ ಇಂದಿರೆ ರಮಣ2 ಶ್ರಮವ ಪರಿಹರಿಸೊ ಶ್ರೀಶನೇ ಶ್ರೀನಿಕೇತನನೆ ಕಮಲ ಸಂಭವನ ತಾತನೆ ಕಮಲ ಲೋಚನನೆ ಕಮಲ ಪೊಕ್ಕಳಲಿ ಪಡೆದನೆ ಕಮಲ ಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ವಿಠ್ಠಲನೆಂದು ಕಮಲಪುಷ್ಪ ಮಾಲಾಲಂಕೃತ ಶೋಭಿತ ಕಮಲದಳಾಕ್ಷನೆ ಕಮನೀಯರೂಪ 3
--------------
ನಿಡಗುರುಕಿ ಜೀವೂಬಾಯಿ
ರಂಗ ಕರುಣಿಸೊ ಚರಣಾ ಶ್ರೀ ಪ ರಂಗಗರುಡತುರಂಗಸಿರಿಮನ ತುಂಗಭವಗಜ ಸಿಂಗರಿಪುಕುಲ ಭಂಗ ಮಹಿಮತರಂಗ ದೇವೋತ್ತುಂಗನಿಜನಿಸ್ಸಂಗ ನರಹರಿ ಅ.ಪ ದೇವಸಕಲ ಸೃಷ್ಠಿಯಗೈವ ಸುಸ್ವಭಾವ ದೇವ ತ್ರಿಭುವನ ಜೀವಭಕ್ತರ ಕಾವಶೃತಿತತಿ ಭಾವ ದೋಷಾಭಾವನಿಜಸುಖ ವೀವ ಬ್ರಾಹ್ಮಿಯ ಮಾವ ತರಿತರಿ ನೋವ ಪರಿಮರ 1 ಛೇಧಖಳಜನ ಖೇದ ಸಜ್ಜನ ಮೋದನಿರ್ಗತ ಭೇದ ಸಿರಿನುತ ಪಾದವ್ಯಾಹೃತಿ ನಾದಸಿರಿಜಗ ಭೇದ ಸುಖಮಯ ಸಾಧು ಶಿರಶ್ರೀ2 ಶ್ರೀಶ ನಿಜದಾಸ ಜನರ ಮನ ಉಲ್ಲಾಸಾ ಶ್ರೀಶ ತರಿತರಿ ಪಾಶ ಕೊಡುಕೊಡು ಲೇಸ ನಿಖಿಳರ ಭಾಸ ಸಿರಿಮನೆ ವಾಸ ವಿಶ್ವನು ಪೋಷ ಬ್ರಹ್ಮಸುಕೋಶ ನಿರ್ಗತ ನಾಶ 3 ಸತ್ಯ ನಿತ್ಯಾನಿತ್ಯ ಜಗರೂಪ ಸ್ವತಂತ್ರ ಕಳತ್ರ ಪರಮಪ ವಿತ್ರ ಚಿನ್ಮಯ ಭೃತ್ಯವತ್ಸಲ ನಿತ್ಯನೂತನ ಸತ್ಯವತಿಸುತ ಚಿತ್ತಮಂದಿರ 4 ವಿಶ್ವತೈಜಸ ಪ್ರಾಜ್ಞತುರಿಯ ಶರಣು ಅಶ್ವತ್ಥ ವಿಶ್ವವಿಶ್ವಗ ವಿಷ್ಣುಜಗ ಬಲ ವಿಶ್ವಪ್ರೇರಕ ಜಿಷ್ಣುಸಾರಥಿ ಕೃಷ್ಣವರಸ್ಥಿತ “ಕೃಷ್ಣವಿಠಲ” ಶಿಷ್ಟದೋಷಸಹಿಷ್ಣುವಂದಿಪೆ 5
--------------
ಕೃಷ್ಣವಿಠಲದಾಸರು
ರಾಧಾಕೃಷ್ಣ ಮುರಾರಿ ಜಯ ಜಯ ವೇದ ವೇದ್ಯನೆ ವಿಷ್ಣು ಜಯ ಜಯ ಮೋದತೀರ್ಥ ಸುವಂದ್ಯ ಜಯ ಜಯ ಮಾಧವಾ ಮಧುಸೂದನಾ ಪ ಶ್ರೀಧರಾ ಪ್ರದ್ಯುಮ್ನ ಜಯ ಜಯ ಮತ್ಸ್ಯ ಜಯ ಜಯ ಕೂರ್ಮ ಜಯ ಜಯ ಭೂಧವ ದಾ-ಮೋದರಾ 1 ನಾರಸಿಂಹ ಉ-ಪೇಂದ್ರ ಜಯ ಜಯ ಚಾರುವಾಮನ ಪೋರ ಜಯ ಜಯ ಶ್ರೀ ತ್ರಿವಿಕ್ರಮ ವೀರ ಜಯ ಜಯ ಭಾರ್ಗವಾ-ದ್ವೀಜ ಪೋಷಕಾ 2 ರಾಮ ಲೋಕೋ-ದ್ಧಾರ ಜಯ ಜಯ ಬುದ್ಧ ಜಯ ಜಯ ಶ್ರೀಮನೋಹರ ಕಲ್ಕಿ ಕಲಿವೈರಿ 3 ಈಶ ರಸ ಅನಿ-ರುದ್ಧ ಜಯ ಜಯ ದೋಶಹರ ಸಂ-ಕಷ್ರ್ಣ ಜಯ ಜಯ ಶ್ರೀಶಹರಿ ಹೃಷಿಕೇಶ ಜಯ ಜಯ ಕೇಶವಾ ನಾರಾಯಣಾ 4 ಬಾದರಾಯಣ-ದತ್ತ ಜಯ ಜಯ ವೇಧ ಅಚ್ಚುತ-ಕಪಿಲ ಜಯ ಜಯ ಮಧ್ವಗುರು ಮಹಿ-ದಾಸ ಜಯ ಜಯ ಅಧೋಕ್ಷಜ 5 ಶ್ರೀ ಜನಾರ್ಧನ-ಋಷಭಜಯ ಜಯ ನೈಜತೇಜಾ ನಂತ ಜಯ ಜಯ ವಾಜಿವದನ ಇಂ-ಇಂದ್ರ ಜಯ ಜಯ ರಾಜ ಭಕುತರ ಭೋಜ ಸುರರಾಜ 6 ಅಜ ಧನ್ವಂತ್ರಿ ಜಯ ಜಯ ಪೃಶ್ನಿ ಗರ್ಭ ಮುಕುಂದ ಜಯ ಜಯ ಚೆನ್ನ ಬೋಧಕ ಹಂಸ ಜಯ ಜಯ ಶಿಂಶುಮಾರ ಸುಮೋಹಿನಿ 7 ಪಾಂಡುರಂಗ ವಿ-ಠೋಬ ಜಯ ಜಯ ತೊಂಡವತ್ಸಲ-ವರದ ಜಯ ಜಯ ಗಂಡುಗಲಿ ತಿ-ಮ್ಮಪ್ಪ ಜಯ ಜಯ ರಂಗನಾಥ ಪ-ರಾದ್ಯನಂತನೆ 8 ವಿಶ್ವತೈಜಸ-ಪ್ರಾಜ್ಞ ಜಯ ಜಯ ಶಶ್ವದೇಕನೆ-ತುರಿಯ ಜಯ ಜಯ ಶ್ರೀಶ “ಶ್ರೀ ಕೃಷ್ಣ-ವಿಠಲ” ಜಯ ಜಯ ಗೋವಿಂದಾ ಪುರು-ಷೋತ್ತಮಾ 9
--------------
ಕೃಷ್ಣವಿಠಲದಾಸರು
ವಾಸುದೇವ ಸಾಮಾನ್ಯ ನೀನಲ್ಲವೊ ಪ ನವನೀತ ಇಷ್ಟು ತಿನ್ನುವಿ ಭೂತಗಳಿರುವುವೇನೊ ಉದರದೊಳು 1 ಕುದಿಯುವ ಪಾಲನು ಮುದದಿಂದ ಕುಡಿಯುವೆ ಉದಕದ ರಾಶಿ ಜಿಹ್ವೆಯೊಳಿಹುದೇನೊ 2 ರಾತ್ರಿ ವೇಳೆಯಲಿ ನೀ ಸುತ್ತುವಿ ಮನೆ ಮನೆ ನೇತ್ರದೊಳ್ ಸೂರ್ಯಚಂದ್ರರು ಇಹರೇನೊ 3 ಶಿಕ್ಷೆಮಾಡಲು ಬೆನ್ನು ಪಾಶ್ರ್ವದಲ್ಲಿಹ ನಮ್ಮ ಈಕ್ಷಿಸುವುದಕೆ ವಿಶ್ವತ ಚಕ್ಷುವೇನೊ 4 ನಿನ್ನ ಚರಿತೆ ಎಮಗೆ ಚೆನ್ನಾಗಿ ತಿಳಿಸಿ ಪ್ರ ಸನ್ನನಾಗದಿರೆ ಮನ್ನಿಸೆವೋ ನಿನ್ನ 5
--------------
ವಿದ್ಯಾಪ್ರಸನ್ನತೀರ್ಥರು
ವಿಶ್ವಾತ್ಮ ಪರಿಪೂರ್ಣ ವಿಶ್ವವ್ಯಾಪಕ ನೀನೆ ವಿಶ್ವವಂದಿತ ವಿಶ್ವನಾಥ ನೀನೆ ಧ್ರುವ ವಿಶ್ವಾತ್ಮದಲ್ಯಾಡುವ ವಿಶ್ವಸ್ವರೂಪವು ನೀನೆ ವಿಶ್ವ ನಿರ್ಮಿತ ವಿಶ್ವಪಾಲ ನೀನೆ ವಿಶ್ವಲಿಹ ವಿಶ್ವೇಶ್ವರ ನೀನೆ 1 ವಿಶ್ವತೋ ಚಕ್ಚು ನೀ ವಿಶ್ವತೋ ಮುಖ ನೀನೆ ವಿಶ್ವತೋ ಬಹು ಸಾಕ್ಷಾತ್ ನೀನೆ ವಿಶ್ವಾಂತ್ರ ಸೂತ್ರನೆ ವಿಶ್ವಂಭರನು ನೀನೆ ವಿಶ್ವರಹಿತ ವಿರಾಜಿತನು ನೀನೆ 2 ವಿಶ್ವಾಂತರಾತ್ಮ ಭಾಸ್ಕರ ಕೋಟಿತೇಜನೆ ವಿಶ್ವಾನಂದ ಘನಮಹಿಮ ನೀನೆ ವಿಶ್ವಾತ್ಮ ಹಂಸ ಮಹಿಪತಿ ಗುರುನಾಥನೆ ವಿಶ್ವಾಸಲೋಲ ವಿಶ್ವೇಶ ನೀನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ನರಸಿಂಹ ಮಂತ್ರ ಜಯ ಜಯ ಜಯ ನರಸಿಂಹ ಜಯ ಜಯ ಮಹಾಲಕ್ಷ್ಮೀರಮಣ ಜಯ ನಿರಾಮಯ ಸರ್ವೋತ್ಕøಷ್ಟ ಆಹ ಜಯ ಕಮಲಜ ಮೃಡಾದ್ಯಮರವಂದ್ಯನೆ ನಮೋ ಭಯಬಂಧಹರ ಭಕ್ತ ಜನರ ರಕ್ಷಕ ಸ್ವಾಮಿ ಪ ಅರದೂರ ಗುಣಪರಿಪೂರ್ಣ ಉಗ್ರವೀರನೆ ಮಹಾವಿಷ್ಣು ಉರುಕಾಂತಿ ಸರ್ವತೋಮುಖನೆ ಆಹ ನರಸಿಂಹ ಭಯಕರಾಶ್ರಿತಜನರ ರಕ್ಷಕ ಶರಣಾದೆ ನಿನಗೆ ನಾ ಮೃತ್ಯುಮಾರಕ ನಮೋ 1 ಸೃಷ್ಟಾ ಪಾತಾ ಅತ್ತ ತ್ರಾತಾ ದುಷ್ಟ ದೈತ್ಯರಿಗತಿ ಕ್ರೂರ ಶ್ರೇಷ್ಠ ಅಸಮಬಲರೂಪ ಆಹ ಇಷ್ಟಭಕ್ತನ ಕಾಯೆ ಕಂಬದಿಂದಲಿ ಬಂದು ತ್ಕøಷ್ಟ ಪ್ರಜ್ವಲಿಪ ನಖದಿ ಸೀಳ್ದೆ ಭ್ರಷ್ಟನ 2 ವಿಶ್ವಸ್ಥ ಬಹಿರಂತವ್ರ್ಯಾಪ್ತ ವಿಶ್ವ ವಿಷ್ಣು ವಷಟ್ಕಾರ ಸರ್ವಜ್ಞ ನಿರ್ದೋಷ ಸುಗುಣಿ ಆಹ ಅಮಿತ ಸಕಾಂತಿಯಿಂ ಜ್ವಲಿಸುವೆ ವಿಶ್ವತೋಮುಖ ಸರ್ವಸಾಕ್ಷಿಸ್ವತಂತ್ರ 3 ನರನಲ್ಲ ನರರೂಪಧಾರಿ ನೀ ಮೃಗವಲ್ಲವು ಸಿಂಹವದ್ರೂವ ನರಮೃಗಗಳಲಿ ನೀ ಸಮನು ಆಹ ಧರೆ ದಿವಿ ಪಾತಾಳ ಜಂತು ಸರ್ವಾಂತಸ್ಥ ಉರು ಜ್ಞಾನ ಬಲರೂಪ ಅನಂತ ನೀ ಏಕ 4 ನ ಎಂದರೆ ಸರ್ವವಂದ್ಯ ರ ಎಂದರೆ ಸುಖ ಜ್ಞಾನ ಸಿಂ ಎಂದರೆ ಗುಣಸಾರ ಆಹ ಇಂದಿರಾಪತಿ ಮಹದೈಶ್ವರ ರೂಪನು ಹ ಎಂದರೆ ನೀನು ಪೂರ್ಣ ನಿರ್ದೋಷ 5 ಭೂತಾದಿ ದುಷ್ಟ ಗ್ರಹಗಳ ಖದ್ರೂಜಾದಿ ಸರ್ವ ವಿಷವ ನೀ ದಯದಿ ಪರಿಹರಿಪೆ ಆಹ ಭಕ್ತ ಜನರಿಗೆ ನೀ ಶುಭವಿತ್ತು ಅಕಾಲ ಮೃತ್ಯುವ ತರಿವ ರಕ್ಷಕ ನಮೋ ಎಂಬೆ 6 ದ್ವಾತ್ರಿಂಶ ಚತುರ್ವಿಂಶಾಕ್ಷರದ ಮಂತ್ರ ಗಾಯತ್ರಿ ಪ್ರತಿಪಾದ್ಯ ವೃತತಿಜಾಸನ ಮಂತ್ರ ಋಷಿಯು ಆಹ ಅಧಿಕಾರಿಗಳು ಇದನು ಶ್ರವಣ ಪಠಣ ಮಾಡೆ ಭೀತಿ ಮೋಹವÀ ಬಿಡಿಸಿ ನಿಖಿಳೇಷ್ಟವೀವೆ 7 ಜಯ ಜಯ ನರಸಿಂಹಸ್ವಾಮಿ ಜಯ ಜಯ ಸರ್ವಜ್ಞ ಭೂಮನ್ ಜಯ ಮಹಾ ತೇಜೋಬಲವೀರ್ಯ ಆಹ ಜಯ ಪುರುಷೋತ್ತಮ ವೇಧಾದಿ ಸುರರಿಂದ ಇಜ್ಯಪೂಜ್ಯನು ದೃಢಭಕ್ತಿಯಿಂ ಮುದದಿ 8 ನಾರ ಉರು ಗುಣಸಿಂಧು ನರಸಿಂಹ ಸುಪ್ರೀತನಾಗೊ ಚಿರಜ್ಞಾನ ಭಕ್ತಿಯ ಸತತ ಆಹ ಪರಮರಿಲ್ಲದ ಬಲಿ ನಿನ್ನಲಿ ಧ್ಯಾನ ತೀವ್ರ ಪ್ರೇರಿಸು ಎನಗೆ ಅನಂತ ಅನುತ್ತಮ 9 ಪ್ರೋದ್ಯಾರ್ಕನಿಭ ದೀಪ್ತವಾದ ವರ್ತುಲ ಉರು ನೇತ್ರತ್ರಯವು ಹಸ್ತದ್ವಯವು ಜಾನುವರೆಗೂ ಆಹ ಸುದರ್ಶನಿ ಶಂಖಿ ಮಹಾಲಕ್ಷಿಯುತ ಕೋಟಿ ಆದಿತ್ಯಾಧಿಕತೇಜ ಉತ್ಕøಷ್ಟ ಶಕ್ತ 10 ಕಮಠ ಕ್ರೋಡ ನೃಹರಿ ಮಾಣವ ಪರಶ್ವಿ ಸುಧನ್ವಿ ಬುದ್ಧ ಕಲ್ಕಿ ಶರಣ ಆಹ ವನರುಹನ ತಾತ ಪ್ರಸನ್ನ ಶ್ರೀನಿವಾಸ ಅನಿಷ್ಟಹ ಇಷ್ಟದ ಎನಗೆ ದಯವಾಗೊ 11
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವಿನಾಯಕ ಪಿನಾಕಿ ಸುತ ಜಗ ದೇಕನಾಥನ ನಾಭಿಮಂದಿರ ಲೇಖಕಾಗ್ರಣಿ ವಿಷ್ಣುಕೀರ್ತನ ಮಾನಿ ಸಾಧಕನೆ ಪರಾಕು ನುಡಿಯುವೆ ನೂಕಿ ವಿಘ್ನವ ಸಾಕು ನಮ್ಮನು ನೋಕನೀಯನ ಭಜಿಸಲನುವಾಗೆಂದು ಬೇಡುವೆನು 1 ಕಾಣೆ ನಿನಗೆಣೆ ಮೂರುಲೋಕದಿ ಮಾನ್ಯನಾಗಿಹೆ ಸರ್ವರಿಂದಲು ಶ್ರೀನಿಧಿಯ ದಯದಿಂದ ಪ್ರಾಣಾವೇಶಸಂಯುತನೆ ಧ್ಯಾನ ಮಾಡುವೆ ವಿಶ್ವತೈಜಸ ನನ್ನು ಮಹದಾಕಾಶಮಾನಿಯೆ ಆನತಾಮರಧೇನು ಸಿದ್ಧಿವಿನಾಯಕನೆ ನಮಿಪೆ 2 ದೈತ್ಯಗಣಗಳಿಗಿತ್ತು ವರವು ನ್ಮತ್ತರನು ಮಾಡುತಲಿ ಶ್ರೀಪುರು ಷೋತ್ತಮನ ಸೇವಿಸುವೆ ವಿದ್ಯಾಧೀಶ ಸುಖಭೋಕ್ತ ಮಾತರಿಶ್ವನ ದಾಸರಿಗೆ ಹರಿ ಭಕ್ತಿ ವಿಷಯ ವಿರಕ್ತಿ ನೀಡುವೆ ಶಕ್ತಿ ನೀ ನಾಲ್ಕೆರಡು ಕಲ್ಪದಿ ಸಾಧಿಸಿರೆ ಪದವಿ 3 ವಕ್ರ ತುಂಡನೆ ನೀಗಿಸೆನ್ನಯ ವಕ್ರಬುದ್ಧಿ ವಿವೇಕನೀಡುತ ದಕ್ಕಿಸೈ ಶಾಸ್ತ್ರಾರ್ಥ ಚಯನವ ಚಾರುವಟು ಗಣಪ ರಕ್ತಗಂಧಪ್ರೀಯ ಸೋಮನ ಸೊಕ್ಕು ಮುರಿದೆಯೊ ಭೂಪ ಭಕ್ತಿಯ ಉಕ್ಕಿ ಸೈ ಹರಿಯಲ್ಲಿ ತವಕದಿ ಮಂಗಳಪ್ರದನೆ 4 ರಂಗ ಮಂದಿರ ದಕ್ಷಿಣಸ್ಥವಿ ಹಂಗಗಮನನ ರಾಣಿ ರುಕ್ಮಿಣಿ ಯಂಗದಲಿ ಪುಟ್ಟುತಲಿ ದಿತಿಜಾಂತಕನೆನಿಸಿಕೊಂಡು ಗಂಗೆಪಿತನನು ಸೇವಿಸಿದೆ ಮಾ ತಂಗಮುಖ ಮಹಕಾಯ ನಾರೀ ಸಂಗವರ್ಜಿತ ಬೀರು ಕರುಣಾಪಾಂಗ ದೃಷ್ಟಿಯನು 5 ಮೊದಲು ಪೊಜೆಯ ನಿನಗೆ ವಿಹಿತವು ವಿಧಿ ಭವಾದ್ಯರ ಪೊರೆವ ವಿಶ್ವನು ಮುದದಿ ನೀಡಿಹ ವರವ ಸಿದ್ಧಿಯ ಕೊಡುವೆ ಭಕ್ತರಿಗೆ ಮದದಿ ಬಿಡುವರಿಗೆಲ್ಲ ಖೇದವೆ ಒದಗಿ ಬರ್ಪುದು ಬಾಗಿ ಭಜಿಸುವೆ ಸದಯನಾಗುತ ವಿಷ್ಣು ಭಕ್ತರ ಸಂಗ ನೀಡೆನಗೆ 6 ವ್ಯಾಪ್ತ ದರ್ಶಿಯೆ ವಂದಿಸುವೆ ಪರ ಮಾಪ್ತ ಹರಿ ಭಕ್ತರಿಗೆ ನೀನಿಹೆ ಸೂಕ್ತ ಸಾಧನೆ ಗೈಸು ಖೇಶನೆ ಸೋಮಪಾನಾರ್ಹ ಆರ್ತನಿಹೆ ಬಹುಮೂಢ ಖರೆವೇ ದೋಕ್ತಮರ್ಮವ ಭಾಸಗೈಸಿ ಕೃ ತಾರ್ಥನೆನಿಸೈ ಮೃದ್ಭವ ವಿರೂಪಾಕ್ಷ ತತ್ವೇಶ 7 ಬರೆದೆ ಭಾರತ ವೇದವ್ಯಾಸರ ಕರುಣದಿಂದಲಿ ಭಕ್ತಿಯೋಗಿಯೆ ಶರಣು ಶೇಷಶತಸ್ಥರಿಗೆ ಗುರುವಿರ್ಪೆ ಹೇರಂಭ ದುರಳ ಗಣಗಳ ಕಾಟತಪ್ಪಿಸಿ ಹರಿಗೆ ಸಮ್ಮತವಿಲ್ಲ ದೆಡೆಯಲಿ ಮರುಳುಗೊಲ್ಲದ ಮನವು ನನಗಿರಲೆಂದು ಹರಸೆಂಬೆ 8 ಜಯಜಯತು ವಿಶ್ವಂಭರ ಪ್ರೀಯ ಜಯಜಯವು ಮೈನಾಕಿತನಯಗೆ ಜಯಜಯವು ಶ್ರೀಕೃಷ್ಣವಿಠ್ಠಲನ ದಾಸವರ್ಯನಿಗೆ ಜಯಜಯವು ಸದ್ವಿದ್ಯೆಕೋಶಗೆ ಮೀನಾಂಕ ಭ್ರಾತೃವೆ ಜಯಜಯವು ವಿಘ್ನೇಶ ಮಂಗಳಮೂರ್ತಿ ಗಣಪನಿಗೆ 9
--------------
ಕೃಷ್ಣವಿಠಲದಾಸರು
ಶ್ರೀಹರಿ ಸ್ತೋತ್ರ ಪಾಲಿಸೆನ್ನನು ಶ್ರೀ ಹರಿಯೆ ಸಿರಿದೇವಿ ಧೊರೆಯೇ | ಸರಸಿಜಾಸನ ಪಿತನೇ|| ಪ ಪಾರ್ಥಸೂತ ಪನ್ನಗಗಿರಿ ನಿಲಯ ಪವಮಾನ ವಂದ್ಯ | ಶ್ರೀ ಭೂರಮಣನೇ ಸೃಷ್ಟಿಗೊಡೆಯನೆ | ಕ್ಲೇಶ ಕಳೆಯುವ ಕೈಟಭಾರಿ ಕರುಣ ಶರಧಿಯೆ ಅ.ಪ ಬ್ರಹ್ಮಾದಿ ಮನುಜಾಂತ ಶ್ರವಣ ಮನನ ಧ್ಯಾನ ದಿಂದಲೇ ಕಾಂಬೋರು ನಿನ್ನ ರೂಪ ಯೋಗ್ಯತಾನುಸಾರ | ನಿಯಮ ಭಂದ ಮೋಕ್ಷ ಕರ್ತನೆ | ಶಾಂತಿ ಕೈತಿ ಜಯಾ ರಮಣನೀನೇ ಮೋಕ್ಷದಾಯಕ ಮಾಯಾಪತಿಯೇ ಸರ್ವ ಆಶ್ರಯ ಲಕ್ಷ್ಮೀ ರಮಣನೇ ಸಮರು ಅಧಿಕರು ಇಲ್ಲದಂಥಾ | ಸಾರ್ವಭೌಮನೇ ಆದಿಮೂಲನೆ ಅಪ್ರಮೇಯನೆ ಅನಿರುದ್ಧ ಮಾರುತಿ | ಎನ್ನ ಅಪವಳಿಗಳನೆ ತಂದು ಚÉನ್ನವಾಗಿ ನಿನ್ನ ತೋರಿಸಿದ 1 ಸದೋಷಿ ನಾನಹುದೋ ಸಂಕರ್ಷಣ ಮದ್ದೋಷ ಪರಿಹರಿಸೋ ನಿಗಮ ವೇದ್ಯನೆ ನಿನ್ನಧೀನವು ಎಲ್ಲಾ | ವಿಶ್ವ ತೇಜಸ ಪ್ರಾಜ್ಞರೂಪನೇ ಮೂರು ಸ್ಥಿತಿಯಲ್ಲಿ ಮುಖ್ಯ ಪ್ರವರ್ತಕ | ಅಂಡ ಪಿಂಡ ಬ್ರಹ್ಮಾಂಡದಲ್ಲಿ ಒಳ ಹೊರಗೆ ವ್ಯಾಪ್ತನೆ ವಿಶ್ವತೋಮುಖ ವಿಧಿಭವ ನುತ ವಿಚಿತ್ರ ಮಹಿಮ ವಿಭೂತಿರೂಪನೇ ವಾಸುದೇವನೇ ವಾರಿಜಾಸನ ವಂದ್ಯ ವರಾಹನೆ ಇರುವ ತಾ¥ಟಿÀ ಹರಿದು 2 ನಿರ್ಗುಣ ಗುಣ ಭರಿತಾ ನಿನ್ನ ಪರೋಕ್ಷ ಬೇಡುವೆ ಬಹುವಿಧದಿ ಭವದ ಕ್ಲೇಶಗಳ ಬಿಡಿಸೋ ಭಕ್ತವತ್ಸಲ | ಪತಿ ಸನ್ನುತ | ಪರಮ ಹಂಸೋಪಸ್ಯ ತುರ್ಯನೆ ಆತ್ಮ ಅಂತರಾತ್ಮ | ಪರಮ ಆತ್ಮ ಜ್ಞಾನಾತ್ಮ ನೀನೆ | ಕೂರ್ಮ ಕ್ರೋಢ ನರಹರಿ ಮಾಣವಕ | ಮೋದ ಕೊಡುವ ಮುದ್ದು ಬುದ್ಧನೆ | ಕಠಿಣ ಖಳರ ಕಡಿವ ಕಲ್ಕಿಯೆ ಅನಂತ ಗುಣ ಕ್ರಿಯಾ ರೂಪದಲಿ ನೀ ಸ್ವಗತ ಭೇದ ವಿವರ್ಜಿತಾತ್ಮನೇ | ನಿರಂಜನ ನಾರಾಯಣನೇ | ಪತಿ ಪ್ರಭಂಜನ ಪ್ರಿಯ ರಾಗರಹಿತ ರಾಘವೇಂದ್ರ ಸಂಸೇವ್ಯ ನರಹರಿಯೆ | ಅಜನ ತಾತ ಪ್ರಸನ್ನ ಶ್ರೀನಿವಾಸ ಲಕ್ಷ್ಮೀ ಈಶ ಹರಿಯೆ | ಪ್ರಣತಾರ್ತಿಹರ ಪ್ರಮೋದಿ ನೀನೇ 3
--------------
ಪ್ರಸನ್ನ ಶ್ರೀನಿವಾಸದಾಸರು
ಸಾಕೇತಪುರ ವಾಸಿ ಕಪಟವೇಷ | ಶ್ರೀಕಮಲನಾಭನ ನಖದಲಿ ಕಾಶೀ ಪ ವಿಶ್ವತೋಮುಖ ಬ್ರಹ್ಮ ವಿಶ್ವತೋಚಕ್ಷು | ವಿಶ್ವ ವಿಶ್ವಬಾಹು ವಿಶ್ವರೂಪ ರೂಪ || ವಿಶ್ವ ಬ್ರಹ್ಮಾಂಡ ಆಧಾರ ಕಾರಣ | ವಿಶ್ವೇಶ್ವರ ಪ್ರಾಣ ಮಂತ್ರ ರಾಮ ರಾಮ 1 ಪರಿಯಂತ ರೋಮಕೂಪ | ಅಗಣಿತ ಕಮಲಜ | ಹಸ್ತಿ ಚರ್ಮಾಂಬರರು ಇದ್ದು ನೆಲೆಗಾಣರು | ನಾಸ್ತಿ ವಿಷ್ಣು ಪರದೈವ ಇಹಪರದಲಿ2 ಕಷ್ಟವಿಲ್ಲದೆ ಮಕ್ಕಳಾಟಕೆ ತ್ವರದಿಂದ | ಸೃಷ್ಟಿಸುವ ಕಣ್ಣು ಎವೆ ಹಾಕುವ || ಅಷ್ಟರೊಳನೇಕ ಬ್ರಹ್ಮಾಂಡ ನಾಟಕ | ವಿಷ್ಣು ಕರ್ಮಾಣಿ ಪಶ್ಯತೆ ಪಶ್ಯತೆ 3 ನಿತ್ಯ ತೃಪ್ತಿ ನಿರಾಹಾರಿ ನಿತ್ಯಾನಂದ | ಮೃತ್ಯು ಹಾ ಕಾಲಪ್ರಮಾಣ ಪರುಷಾ || ಶರಧಿ | ಸತ್ಯ ಸಂಕಲ್ಪ ನಿಷ್ಠನಾಹಂತೆ 4 ಅಜನಯ್ಯ ಅದ್ಭುತ ಮಹಿಮ ಪುರುಷೋತ್ತಮ | ಭುಜಧರನಯ್ಯಯಾ | ಅಮಿತಕಾಯಾ | ವಿಜಯಸಾರಥಿ ವಿಚಕ್ಷಣ ದೀಪ್ತ ಮೂರುತಿ | ಭುಜಗಂಗಿರಿ ವಿಜಯವಿಠ್ಠಲ ವೆಂಕಟೇಶಾ 5
--------------
ವಿಜಯದಾಸ
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಗತವು ಸ್ವಾಗತವು | ಯತಿವರ್ಯರೇಯೋಗೀಶ ಶ್ರೀಕೃಷ್ಣ | ಮೂತ್ರ್ಯುಪಾಸಕರೇ ಪ ವಿಶ್ವಭಿಧರಂತಸ್ಥ | ವಿಶ್ವರೂಪಿಯ ಹರಿಯವಿಶ್ವಸರ್ಜನ ಸ್ಥಿತೀ | ವಿಶ್ವಸಂಹರವಾ |ವಿಶ್ವತೊಮುಖವಾಗಿ | ಗುಣ ಕ್ರಿಯವ ಕೊಂಡಾಡೆವಿಶ್ವೇಶ ತೀರ್ಥರೆಂದುರು | ಕೀರ್ತಿಯುಕ್ತರೇ 1 ಬೋಧ | ಸಿದ್ಧ ಪಡಿಸಿದರೇ 2 ಶರಣ ಜನರಭಿಲಾಷೆ | ನಿರುತ ಪಾಲಿಸಿ ಪೊರೆವಸರಳ ಹೃದಯರೆ ನಿಮ್ಮ | ಚರಣದ್ವಂದ್ವಗಳಾ |ವರ ರಜವ ಶಿರದಲ್ಲಿ | ಧರಿಸುತ್ತ ಧನ್ಯನೆಹೆಮರಳಿ ಮಮಕುಲವೆಲ್ಲ | ಉದ್ಧಾರವಾಯ್ತು 3 ಕಾಲ | ಸೀಮೆ ಮೀರಿದ ಸಮಯನೇಮ ಮೀರದೆ ವೈಶ್ವ | ಹೋಮಾದಿ ಶೇಷಾ |ಪ್ರೇಮದಿಂ ವಿದ್ಯಾರ್ಥಿ | ಸ್ತೋಮ ಕುಣಿಸುತ ನಿತ್ಯಸಾಮ ಸನ್ನುತನ ನಿ | ಷ್ಕಾಮ ಭಜಿಸುವರೇ 4 ಕಾಣ್ವೋಪ ನಿಷದರ್ಥ | ಕನ್ನಡ ಸುಪದ್ಯದಲಿಇನ್ನು ರಚಿಸಿರ್ಪುದಕೆ | ಮುನ್ನುಡಿಯನಿತ್ತೂ |ಅನ್ನಂತ ಗುಣ ಗುರೂ | ಗೋವಿಂದ ವಿಠ್ಠಲನನನ್ನೆಯಿಂ ಭಜಿಸೆ ಪ್ರ | ಸನ್ನ ಮಾರ್ಗದರೇ 5
--------------
ಗುರುಗೋವಿಂದವಿಠಲರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ