ಒಟ್ಟು 39 ಕಡೆಗಳಲ್ಲಿ , 23 ದಾಸರು , 39 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾರೈ ಬೇಗ ಶ್ರೀರಾಮ ನಮೊ ಭಾನುಕುಲಾಂಬುಧಿ ಸೋಮ ನಮೊತೊರಿಸು ತವಪದಕಮಲ ನಮೊ ನೀರದಶ್ಯಾಮಲವದನ ನಮೊ ಪ ಅಜಹರಪ್ರಾರ್ಥಿತಮೋದ ನಮೊ ಅಯೋಧ್ಯನಗರವತಾರ ನಮೊಸುಜನಪಾಲ ಕುಜನಾರಿ ನಮೊ ಸನ್ಮುನಿಯಾಶ್ರಮ'ಹರ ನಮೊ1 ಸರಯೂತೀರ ಸಂಚಾರ ನಮೊ ಸತ್ಯಪರಾಕ್ರಮ ಸ್ವಾ'ು ನಮೊಪರಮಪುರುಷ ಪದ್ಮಾಕ್ಷ ನಮೊ ಪತಿತೋದ್ಧರ ಪರಮಾತ್ಮ ನಮೊ 2ಕ್ರೂರತಾಟಕಧ್ವಂಸ ನಮೊ ಮಾರೀಚಾದಿ 'ಚ್ಛೇದ ನಮೊಕಾರ್ಮುಕ'ದ್ಯಧುರೀಣ ನಮೊ ಕೌಶಿಕಮಖಸಂರಕ್ಷ ನಮೊ 3ಗೌತಮಸತಿಯಘಭಂಗ ನಮೊ ಕಾಂತಯಹಲ್ಯಾಸ್ತೌತ್ಯ ನಮೊ ಮಾತಾಪಿತಗುರುವೇ ನಮೊ ಮಮುದ್ಧರಿಸು ಮಹಾತ್ಮ ನಮೊ 4ಕ್ರೂರನು ಕುಟಿಲನು ಕುಮತಿ ನಮೊ ಕಲುಷಾರ್ಚಿತ ದುಷ್ಕರ್ಮಿ ನಮಸಾರರ'ತ ಸಂಸಾರಿ ನಮೊ ಸರ್ವ ದೋಷಪರಿಹಾರ ನಮೊ 5ಕೌಸಲೇಯಕನಕಾಂಬ್ರ ನಮೊ ದಾಶರಥೆ ದನುಜಾರಿ ನಮೊಶ್ರೀಶಚನ್ನಪುರಿಧಾಮ ನಮೊ ದಾಸವೈಷ್ಣವಕುಲಪ್ರೇಮ ನಮೊ 6ರಾಮರಾಮಜಯರಾಮ ನಮೊ ರಾಮತುಲಸಿದಳಧಾಮ ನಮೊರಾಮತುಲಸಿಗುರಸ್ವಾ'ು ನಮೊ ರಂಗಸ್ವಾ'ುದಾಸೇಶ ನಮೊ 7
--------------
ಮಳಿಗೆ ರಂಗಸ್ವಾಮಿದಾಸರು
ಭಕುತಸಂಸಾರಿ ಹರಿ ಶಕಟಸಂಹಾರಿ ಸಕಲಾಂತರ್ಯಾತ್ಮಕ ಗಿರಿಧಾರಿ ಪ. ಅಂತರ್ಬಹಿವ್ರ್ಯಾಪ್ತಾನಂತಾವತಾರಿ ಸಂತಜನರ ಮನೋಭ್ರಾಂತಿನಿವಾರಿ 1 ನಿಖಿಲ ಬ್ರಹ್ಮಾದಿ ಸುರನಿಕರಕೈವಾರಿ ಕಂಸಾರಿ 2 ಘನಕೃಪಾಸಾಗರ ಪ್ರಣತಾರ್ತಿಹಾರಿ ಅನಘ ಲಕ್ಷ್ಮೀನಾರಾಯಣ ನಿರ್ವಿಕಾರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳಂ ಜಯ ಮಂಗಳಂ ಪ ಇಂಗಡಲ ಕುವರಿಗೆ ಮಂಗಳಕಾಯೆಗೆ ಅ.ಪ. ನಿತ್ಯ ಪೂಜಿತದೇವಿಗೆರಾಜೀವ ನಯನೆಗೆ ಭಾಗ್ಯವೀವಳಿಗೆ 1 ಹಸಿರು ಸೀರೆಯನುಟ್ಟು ಹಳದಿ ಕುಪ್ಪುಸತೊಟ್ಟುಎಸೆವ ಚಿನ್ನಾಭರಣನಿಟ್ಟು ಮೆರೆವವಳಿಗೆ 2 ಪ್ರತ್ಯಕ್ಷಾಪ್ರತ್ಯಕ್ಷ ಶಕ್ತಿಯ ದೇವಿಗೆನಿತ್ಯ ಸಂಸಾರಿಗಗತ್ಯವಿರುವವಳಿಗೆ 3 ಕುಲಗೋತ್ರವೆಣಿಸದಲೊಲಿಯುವ ದೇವಿಗೆನೆಲೆಗೊಡದ ಚಂಚಲೆಮಾಲಕುಮಿದೇವಿಗೆ 4 ಮದನನ ಮಾತೆಗೆ ಪದುಮಲಯಳಿಗೆಗದುಗಿನ ವೀರನಾರಾಯಣನ ಸತಿಗೆ 5
--------------
ವೀರನಾರಾಯಣ
ಮನವೆ ಎಲೆ ಮನವೆ ನೀನು ಯೋಚಿಸಿ ಕೆಡುವುದು ಅನುಚಿತವಲ್ಲೆ ಪ ನೀ ಮನನಮಾಡಿದ ಸಂಸಾರಿರದು ಕಾನನದ ಬೆಳದಿಂಗಳು ಇದು ಪರಿ ತಿಳಿದು ಹೀನಯೋಚನೆ ಬಿಟ್ಟು ಧ್ಯಾನಕವಚ ತೊಟ್ಟು ಜ್ಞಾನವೆಂಬಾಯುಧಪಾಣಿಯಾಗೆಲೊ ಬೇಗ 1 ಈ ದೇಹವೆಂಬುವ ಕಾಂತಾರ್ಹೊಕ್ಕು ಉಪಾ ಯುದ್ಹುಲಿಗಳ ತರಿದ್ಹಾಕು ಮಹಮಾಯ ಕೋಣಗಳೆಂಟು ನೂಕು ದಾಯಾದ್ಯೈವರ ಕೊಂದು ಜೀವಘಾತಕರಾದ ಮೂವರಂ ಭಂಜಿಸಿ ದ್ವಯಮಾರ್ಗ ಗೆಲಿಯೆಲೊ 2 ಕಂಟಕ ಬದಿಗಿಟ್ಟು ಬಹ ಆರೊಂದು ನದಿಗಳ ದಾಂಟು ಭೋರ್ಗರೆವ ಸರ್ಪನ ಹೆಡೆ ಮೆಟ್ಟು ಮಾರಾರಿ ವಿನಮಿತ ಧೀರ ಶ್ರೀರಾಮಪಾದ ವಾರಿಜಕ್ಕೆರಗಿ ಗಂಭೀರ ಸುಖದಿ ಮೆರಿ 3
--------------
ರಾಮದಾಸರು
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಪ ಹರಣ ನೀಡಲು ಬಹುದುಬೇವ ಕಿಚ್ಚನು ಹಿಡಿದು ನುಂಗಬಹುದುಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ1 ಪರರ ಸೇರಲು ಬಹುದು ಪತಿತರಲ್ಲಿರಬಹುದುಕೊರಳ ಘಾತಕಂಗೆ ಶಿರ ಒಪ್ಪಿಸಬಹುದುತರುಣಿಯಳ ತೌರು ಮನೆಯಲಿ ಇರುವುದಕಿಂತತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು 2 ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದುಹೇವವನಿಕ್ಕಿ ಚೂರ್ಣವ ಮಾಡಲುಆವಾಗ ನೋಡಿದರು ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3 ಬಂದೊಂದು ತಿಂಗಳೊಳು ಬಹುಮಾನ ನಡತೆಗಳುಬಂದೆರಡು ತಿಂಗಳೊಳಗೆ ಹಿತವಾದವುಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವುಸಂದೇಹವೇಕೆ ಸಂಸಾರಿಗಳಿಗೆ4 ಈ ಪರಿಯಲುಂಬಂಥ ಅಳಿಯ ಭೋಜನಕಿಂತಗೋಪಾಳ ಲೇಸು ಅಭಿಮಾನಿಗಳಿಗೆಶ್ರೀಪತಿ ನೆಲೆಯಾದಿಕೇಶವನ ಚರಣ ಸ-ಮೀಪದಲಿ ವಾಸಿಪುದೆ ವಾಸಿ ಮನವೆ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಯಾರಿಗೆ ದೂರುವೆನು ಗಿರಿಯ ರಾಯ ಯಾರೆನ್ನ ಸಲಹುವರು ಪ ಸಾರಿದ ಭಕ್ತ ಸಂಸಾರಿ ನಿನ್ನಯ ಪಾದ ವಾರಿಜವನು ತೋರಿ ಕಾರುಣ್ಯವೆನಗೀಯೊ ಅ.ಪ ಕಷ್ಟ ಜನ್ಮದಿ ಬಂದೆನು ಧಾರುಣಿಯೊಳು ದುಷ್ಟರಿಂದಲೆ ನೊಂದೆನು ನಿಷ್ಟುರ ಬೇಡವೊ ನಿನ್ನ ನಂಬಿದ ಮೇಲೆ ಸೃಷ್ಟಿಪಾಲಕ ಎನ್ನ ಬಿಟ್ಟು ಕಳೆಯಬೇಡ 1 ಹಿಂದೆ ಮಾಡಿದ ಕರ್ಮವು ಈ ಭವದೊಳು ಮುಂದಾಗಿ ತೋರುತಿದೆ ಇಂದಿಲ್ಲ ಗತಿಯದರಿಂದ ನೊಂದೆನು ನಾನು ಮಂದರಧರ ಗೋವಿಂದ ನೀನಲ್ಲದೆ 2 ಹಗಲುಗತ್ತಲೆ ಸುತ್ತಿಯೆ ಕಂಗೆಡಿಸುತ್ತ ಹಗೆಯೊಳು ನಗಿಸುತಿದೆ ಉಗುರಿನಸಿಗಿಗೆ ಮಚ್ಚುಗಳೀಗ ನಾಟ್ಯವು ಸೊಗಸು ಹಾರಿಸಿ ಎದೆ ದಿಗಿಲುಗೊಳಿಸುತಿದೆ 3 ಬಾಡಿದ ಅರಳಿಯನು ಕಲ್ಲೀನ ಮೇಲೆ ಈಡಾಗಿ ನಟ್ಟಿದರೆ ಬೇಡಿಕೊಂಡರೆ ತಳಿರ್ಮೂಡಿ ಬರುವುದುಂಟೆ ರೂಢಿಗೊಡೆಯ ನೀನು ನೋಡದಿದ್ದರೆ ಮೇಲೆ 4 ಹಲವು ಪರಿಯ ಕಷ್ಟವ ನಿನ್ನಯ ಪದ ಜಲಜದ ಕರುಣದಲಿ ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲ ಒಲವಾಗೆನ್ನೊಳು (ವರಾಹತಿಮ್ಮಪ್ಪ)15
--------------
ವರಹತಿಮ್ಮಪ್ಪ
ಶೋಧಿಸದೆ ನಿಜ ಬೋಧಿಪೆನೆಂಬ ಈ ಹಾದಿಯೆಲ್ಲಿ ಕಲಿತಿರೆಲೊ ಎಲೋ ಆಧರವರಿಯದ ವಾದಿಮೂರ್ಖರಿಗೆ ಬೋಧ ಸಿದ್ಧಿಪುದೇನೆಲೋ ಎಲೋ ಪ ಋತುಯಿಲ್ಲದವಳಲ್ಲಿ ರತಿಕಲಹ ಬೆಳೆಸಲು ಸುತರ ಪಡೆವಳೇನೆಲೋ ಎಲೋ ಅತಿಮಂದಮತಿಗಳಿಗಹಿತವ ಬೋಧಿಸೆ ಸು ಗತಿಗೆ ಬಾಹರೇನೆಲೋ ಎಲೋ ಕತ್ತೆಗೆ ಮುತ್ತಿನ ಕಂಟಲಿ ಹೇರಲು ಅರ್ತೀತೆ ಬೆಲೆಯನು ಎಲೋ ಎಲೋ ಕೃತ್ರಿಮರಿಗಾತ್ಮದ ಸ್ಮøತಿಯ ಬೋಧಿಸೆ ದು ರ್ಗತಿಯು ತಪ್ಪೀತೇನೆಲೋ ಎಲೋ 1 ಕೋಣನ ಮುಂದೆ ವೇಣುಬಾರಿಸಲು ಅನಂದತಾಳೀತೇನೆಲೋ ಎಲೋ ಶ್ವಾನನ ಮುಂದೆ ಸುಗಾನ ಮಾಡಲದು ಧ್ಯಾನಕ್ಕೆ ತಂದೀತೇನೆಲೋ ಎಲೋ ಹೀನಸಂಸಾರಿಗೆ ದಾನಿಗಾಂಭೀರ್ಯದ ಖೂನ ತಿಳಿದೀತೇನೆಲೋ ಎಲೋ ಜ್ಞಾನಬೋಧಾಮೃತ ಅಜ್ಞಾನಿಗೆ ಉಸುರಲು ಹೀನಭವ ಬಿಟ್ಟೇತೇನೆಲೋ ಎಲೋ 2 ಆಸೆಗಾರಗೆ ಮಹ ಶಾಶ್ವತ ಪೇಳಲು ಲೇಸಾಗಿ ತೋರೀತೇನಲೋ ಎಲೋ ದಾಸರ ದೂಷಿಪ ನಾಶಮತಿಗೆ ಯಮ ಪಾಶವು ತೊಲಗೀತೇನೆಲೋ ಎಲೋ ಈಶನೊಲಿಮಿಲ್ಲದೆ ನಿಜಬೋಧಲಂಬಿಸಿ ಮುಕ್ತಿ ಅಸನ ಸಿಕ್ಕೀತೇನೆಲೋ ಎಲೋ ಹೇಸಿಜನರಿಗೆಲ್ಲ ಶ್ರೀಶ ಶ್ರೀರಾಮನ ದಾಸತ್ವ ದೊರಕಿತೇನೆಲೋ ಎಲೋ 3
--------------
ರಾಮದಾಸರು
ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಸಂಸಾರ ಚಿಂತೆ ನಮ್ಮ ಸ್ವಾಮಿ ಶ್ರೀ ಹರಿಗುಂಟು ಸಂಸಾರಿ ಕೃಷ್ಣ ಕರುಣಿಸುವ ಇದರಿಟ್ಟು ಧ್ರುವ ತುತ್ತಾಯತವ ಮಾಡಿ ಹೊತ್ತು ನಡೆಸುವ ಒಡಿಯ ಮತ್ತೆ ಚಿಂತಿಸಲ್ಯಾಕೆ ಹತ್ತು ಕಡೆಯ ಭಕ್ತವತ್ಸಲ ಸ್ವಾಮಿ ಚಿಂತ್ಯಾಕೆನ್ನೊಡಿಯ ಗ್ರಾಸ ಭಕ್ತರೊಡಿಯ 1 ಅನೆ ಮೊದಲಿರುವೆ ಕಡೆ ತಾಂ ನಡೆಸುತಿರಲಿಕ್ಕೆ ಜನಕೊಡ್ಡಿ ಕೈಯ ನಾ ದಣಿಯಲೇಕೆ ಅನುದಿನ ಹರಿವಾಕ್ಯ ಅನುಭವಿಸುತಿರಲಿಕ್ಕೆ ಅನುಮಾನವಿಡಿದು ನಾ ಹೆಣಗಲ್ಯಾಕೆ 2 ಭಾರ ವಹಿಸಿ ಕೊಂಡಿರಲು ಮಾರಪಿತ ಪರಿಪೂರ್ಣ ಸಾರಾಂಶ ವಿತ್ತು ವರಕೃಪೆಯ ಙÁ್ಞನ ಆರ್ಹಂಗವೆನಗ್ಯಾಕೆ ತೋರುತಿದೆ ನಿಧಾನ ತರಳ ಮಹಿಪತಿ ಹೊರೆವ ಗುರು ಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರಿದ ಭಕ್ತಸಂಸಾರಿ ಮಾಲಿಂಗ ಕ್ಷೀರ ಗ್ರಾಮದಿ ನಿಂತ ಧೀರ ಮಾಲಿಂಗ ಪ ಹರ ಹರ ಮಹಾದೇವ ಶಿವಮಾಲಿಂಗ ವರ ಶಂಭೊ ಗಿರಿವಾಸ ಶಂಕರ ಮಾಲಿಂಗ ಉರಗ ಭೂಷಣ ಗಂಗಾಧರನೆ ಮಾಲಿಂಗ ಪರದೈವ ಶಶಿಮೌಳಿ ಗರುವ ಮಾಲಿಂಗ 1 ಖಂಡಲಪತಿಯೆ ದೋರ್ದಂಡ ಮಾಲಿಂಗ ತಂಡದ ಸುರರೊಳ್ ನಂಜುಂಡ ಮಾಲಿಂಗ ರುಂಡಮಾಲೆಯ ಧರಿಸಿಕೊಂಡ ಮಾಲಿಂಗ ಕೆಂಡಾಕ್ಷತೇಜ ಮಾರ್ತಾಂಡ ಮಾಲಿಂಗ 2 ಮಾರಹರನೆ ಶ್ರುತಿಸಾರ ಮಾಲಿಂಗ ಧೀರ ಬಾಣನ ದ್ವಾರ ಸಾರಿ ಮಾಲಿಂಗ ಮೂರುಪುರ ವೀರ ಸಂಹಾರಿ ಮಾಲಿಂಗ ಘೋರ ಸಂಸಾರ ಭವದೂರ ಮಾಲಿಂಗ 3 ಬ್ರಹ್ಮಾದಿ ಸುರವಂದ್ಯ ಹರ್ಮಿ ಮಾಲಿಂಗ ನಿರ್ಮಲ ರೂಪಕ ಧರ್ಮಿ ಮಾಲಿಂಗ ಕರ್ಮಬಂಧದ ನರವರ್ಮಿ ಮಾಲಿಂಗ ಉರ್ವಿಯೊಳು ನೀ ಬಹಳ ಪೆರ್ಮಿ ಮಾಲಿಂಗ 4 ನೀಲಕಂಠನೆ ನಿಗಮಶೀಲ ಮಾಲಿಂಗ ಪಾಲ ಕರಶೂಲ ಕಪಾಲಿ ಮಾಲಿಂಗ ಕಾಲ ಕಲ್ಪಾಂತಕ ಜಾಲ ಮಾಲಿಂಗ ಲೋಲಾಸ್ಥಿಮಾಲ ಸುರಮೂಲ ಮಾಲಿಂಗ 5 ಪ್ರಣವ ರೂಪಕ ಪಾರ್ವತಿ ಮಾಲಿಂಗ ತ್ರಿಣಯ ಗಣಸೇವಪರ ಧಣುರೆ ಮಾಲಿಂಗ ಮಣಿ ಕರ್ಣಾಭರಣ ಮಾಲಿಂಗ ಅಣುಮಹಾರೂಪ ಗುಣನಿಧಿಯೆ ಮಾಲಿಂಗ 6 ಪಂಥ ಬೇಡೆನ್ನೊಳು ನಿಶ್ಚಿಂತ ಮಾಲಿಂಗ ಸಂತತ ಸಲಹೆನ್ನ ಕಾಂತ ಮಾಲಿಂಗ ಅಂತರಾತ್ಮಕನಾದ ಶಾಂತ ಮಾಲಿಂಗ ಚಿಂತಿತಾರ್ಥವ ತೋರುವಂಥ ಮಾಲಿಂಗ 7 ಬೇಡಿದ ವರಗಳ ನೀಡೊ ಮಾಲಿಂಗ ಮಾಡಿದ ಸೇವೆಯ ನೋಡೊ ಮಾಲಿಂಗ ಜೋಡಾಗಿ ನಿನ್ನೊಳು ಕೂಡೊ ಮಾಲಿಂಗ 8 ಭೂಮಿಗೆ ವರಾಹತಿಮ್ಮಪ್ಪನಂತೆ ಗ್ರಾಮ ಮಂದಿರದೊಳು ನೆಲಸಿಹನಂತೆ ಪ್ರೇಮದಿ ಅದನೆಲ್ಲ ಕಡಿದುಕೊಡುವಂತೆ ಈ ಮಹಾ ಮಾಲಿಂಗ ಸ್ವಾಮಿ ದಯವಂತೆ 9
--------------
ವರಹತಿಮ್ಮಪ್ಪ
ಸುರವೃಂದ ವಾರಿಧಿಶಯನ ಗೋವರ್ಧನೋದ್ಧರಣ ಚಾರುಚರಣ ಪ ವಾರಿಜದಳ ನಯನ ವಾರಿಧಿಶಯನ ಉರ್ವಿಭಾರಾಪಹರಣ ಸಾರಿದಜನ ಸಂಸಾರಿಸಿರಿಯಣ 1 ಭಂಜನ ಹರಣ ಪಾರ್ಥಿವ ಕುಲರಂಜನ ಚಾತುರ್ಯತರ ಜಾಣ ಚೇತನಾತ್ಮಕ ಸುಗುಣ ಜಾತ ರಹಿತ ಜನಜಾತ ಸಂಜೀವನ 2 ದೇವಕಿ ವರನಂದನ ದಿವಿಜನುತ ರಾವಣಾಸುರ ಬಂಜನ ಮಾವ ಕಂಸಾಂತಕ ಮಾವಧುನಾಯಕ ಸೇವಿತ ರಕ್ಷಕ ಶರ್ವಾಣೀವರ ಸಖ 3 ಭಂಜನ ನಾರದ ನುತ ವಾನರಪತಿ ಪರಿಪಾಲನ ದೀನಜನರ ಪೋಷ ಭಾನು ಕೋಟಿ ಪ್ರಕಾಶ ಮನಮೋಹನ ರೂಪ ಲೀಲಾರ ಮಾಲೋಲ 4 ಚಿಂತತ ಫಲದಾಯಕ ಭಕ್ತರ ಹೃದಯಾಂತರಂಗದ ನಾಯಕ ಕಂತು ಜನಕ ಲಕ್ಷ್ಮೀಕಾಂತ ಭೀಮನ ಕೋಣೆ ಸಂತತವಾಸ ತಕ್ಷಕಾಂತಕಾರೂಢ ಹರಿ 5
--------------
ಕವಿ ಪರಮದೇವದಾಸರು