ಒಟ್ಟು 10968 ಕಡೆಗಳಲ್ಲಿ , 138 ದಾಸರು , 6102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ದಯಾಕರನು ನೋಡೆ ಸದ್ಗುರುರಾಯಎಂಥಾ ದಯಾಕರನು ನೋಡೆ ಅಂತರಂಗದ ತಾಪವ ಹರಿಸಿ ಅಂತರಾತ್ಮನ ತೋರಿದ ಪ ಹಸಿವು ತೃಷೆ ಪರಿಹರಿಸಿ ನಾನಾಬಗೆವಿಷಯವೆಲ್ಲವ ತೊರೆಸಿಮುಸುಕ ನುಗಿದು ಮಾಯೆಯಪರಂಜ್ಯೋತಿಯ ಬೆಳಗಿಸಿದನು ನೋಡೆ 1 ಸಂಸಾರದ ಬಹು ದುಃಖವ ಹರಿಸಿಶಿಂಶುಮಾರ ಚಕ್ರವ ಹಂಸೋಹಂಸೋಹಮೆಂದೆನ್ನನೇರಿಸಿಸಂಶಯ ಹರಿಸಿದನೆ2 ನಿರುಪಮ ನೀನೆ ಎಂದು ನಿರ್ಗುಣಪರಮ ಪುರುಷನೆ ಬಂದುಗುರು ಚಿದಾನಂದ ಸಾಕ್ಷಾತ್ಕಾರ ನೀನೆಂದುಗುರು ನೀನೆ ನಿಜವೆಂದನೆ 3
--------------
ಚಿದಾನಂದ ಅವಧೂತರು
ಎಂದಾದರೊಂದು ದಿನ ನಿಂದು ನೋಡುವೆ ನಿನ್ನ ಸುಂದರ ಪದಾಂಬುಜವ ಇಂದಿರೇಶ ಪ ಬಂದ ಸುಖ ದು:ಖಗಳ ಒಂದಾಗಿ ತಿಳಿಯುತಲಿ ತಂದೆ ಗೋವಿಂದ ಸಲಹೆಂದು ನಂಬಿರುವಾಗ ಅ.ಪ ಮಾ ಮನೋಹರಾ ನಿನ್ನ ನಾಮ ಭಜನೆಯ ಗೈದು ಕಾಮಿತಾರ್ಥಂಗಳನು ನಾ ಮರೆಯುತೇ ನಾಮಾಳ್ಪ ಕರ್ಮಗಳ ನೇಮದಿಂದಲಿ ಗೈದು ರಾಮಾರ್ಪಣಾ ಎಂದು ಪ್ರೇಮದಿಂದರ್ಪಿಸಲು 1 ಬಂದ ಅಭ್ಯಾಗತರಿಗೊಂದು ಪಿಡಿ ಅನ್ನವನು ಎಂದೀಯಲೀವೆಯೋ ಅಂದು ಹರಿದಿವಸ ಎಂದೀಯಲಾರೆಯೋ ಅಂದೆನಗುಪೋಷ್ಯವನು ಸಂದೇಹವಿಲ್ಲದೀಯೆಂದು ನಂಬಿರುವಾಗ2 ದೊರೆಯದಿಹ ವಸ್ತುಗಳು ಹರಿಸಮರ್ಪಣವೆಂಬೆ ದೊರೆತ ವಸ್ತುಗಳೆಲ್ಲ ಹರಿಕರುಣವೆಂಬೆ ಗರುಡವಾಹನ ನಿನ್ನ ಶರಣು ಹೊಕ್ಕಿರುವಾಗ ಕೊರತೆ ಏನಿಲ್ಲ ಮಾಂಗಿರಿ ರಂಗವಿಠಲ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಎನ್ನ ಮೊರೆಯ ಕೇ¼ಬಾರದೆ ಹೇ ಶ್ರೀನಿವಾಸ ಪ ಎನ್ನ ಮೊರೆಯ ಕೇಳದಿರೆ ಎನ್ನನಿವರು ಬದುÀಕಿಸರು ಇನ್ನು ಮಾಡಲೇನು ಎಂದು ನಿನ್ನ ಪದಕೆ ಸಾರಿದೆನು ಅ.ಪ ಇಬ್ಬರ್ರಮಣ ನಿನ್ನ ಪಾದ ಉಬ್ಬಿಮನದಿ ಭಜಿಪ ಎನಗೆ ಮಬ್ಬುಗವಿದು ತಾವು ಎನ್ನ ಮೊಬ್ಬಿನೊಳಗೆ ಕೆಡವಿದರೊ 1 ಅನ್ಯವಾರ್ತೆಬಿಟ್ಟು ನಾನು ನಿನ್ನ ಗುಣವ ಕೇಳ್ವೆನೆನಲು ನಿನ್ನವಾರ್ತೆಬಿಡಿಸಿ ತಾವು ಅನ್ಯವಾರ್ತೆ ಕೇಳಿಸೋರು 2 ನಿನ್ನ ನಾಮಸ್ತೋತ್ರಗಳು ಮನ್ನದಿಂದ ಪಠಿಪೆನೆನಲು ಎನ್ನ ಮಾತುಸಾಗಗೊಡದೆ ತಮ್ಮ ಮಾತು ಸಾಗಿಸುವರು 3 ನಿನ್ನ ಪಾದಕಮಲಗಂಧವನ್ನು ಗ್ರಹಿಪೆನೆನಲು ಎನಗೆ ಚೆನ್ನಗಂಧ ಬಿಡಿಸಿ ತಾವು ಘನ್ನದುರ್ಗಂಧ ಕೊಡುವರೋ 4 ನಿನ್ನಭಜಕರಂಗಸಂಗವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ಪರರಾದವನ್ನು ತೇರ ಕೂಡಿಸೋರು 5 ನಿನ್ನ ಚಕ್ರ ಶಿಲಾಸ್ಪರ್ಶವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ನೀಚÀಜನಾರನ್ನು ಸ್ಪರ್ಶಮಾಡಿಸೋರು 6 ನಿನ್ನ ಮನಿಗೆ ಬರುವ ಎನ್ನ ಚೆÉನ್ನವಾಗಿ ಕರೆದು ತಾವು ಅನ್ಯಮನಿಗೆ ವೈದು ಬಹಳ ಬನ್ನಬಡಿಸುವರಯ್ಯಾ 7 ಅನ್ಯಮನಿಗೆ ಪೋಗದಲೆ ಎನ್ನ ಮನೆಯ ಒಳಗೆ ನಾನು ಅನ್ನವಸನ ದಿಂದ ಇರಲು ಅನ್ಯಸದನಕೆಳದು ವೈವ 8 ಕಠಿಣ ಜನರು ಅªರು ಬಹÀಳ ಸಟೆಯುಅಲ್ಲವೆನ್ನ ಮಾತು ಥಟನೆ ಗುರುಜಗನ್ನಾಥವಿಠಲರೇಯ ಲಾಲಿಸೀಗ 9
--------------
ಗುರುಜಗನ್ನಾಥದಾಸರು
ಎಷ್ಟೆಂದು ಪೇಳುವೆನು ನಮ್ಮುಡುಪಿಯ ಕೃಷ್ಣನÀ ಮಹಿಮೆಯನು ಅಷ್ಟೋತ್ತರ ಶತಯೀರೆಂಟು ಸಾವಿರ ಶ್ರೇಷ್ಠ ಮಹಿಷಿಯರ ಸೇವೆ ಕೈಗೊಂಬುದ ಪ. ದ್ವಾರಕೆಯೊಳಗೆ ನೆಲೆ ತೋರುತಲಿದ್ದು ಸ್ವಾರಿ ಹೊರಟ ಮೇಲೆ ಕಾರುಣ್ಯನಿಧಿ ಕಡಲೊಳು ಬಂದು ಕಮಲಾಸ- ನಾರೂಹನಾಗುವ ನರಯತಿಯನು ಕಂಡು ಘೋರತರ ಸಂಸಾರಕೂಪವ ಸೇರಿ ಬಳಲುವ ಸಕಲಸುಜನೋ- ದ್ಧಾರ ಮಾಡುವೆನೆಂದು ಮೂರ್ತಿಯ ತೋರುತಿಲ್ಲಿಹ ತ್ರಿಭುವನೇಶನ 1 ಪಾಪಿಷ್ಠ ಕಲಿಯಾಳುತ್ತಿರುವ ಕಾಲದಲಿ ಸ್ತ್ರೀ ರೂಪದಿಂದಲಿ ಪೂಜೆಯ ಕೊಳಲು ಸುಜ- ನಾಪವಾದದ ಭೀತಿಯ ತಾನೆನಸಿ ಮನದಲಿ ಕಾಪುರುಷನನು ಕಣ್ಣ ಕಟ್ಟಿ ಮಹಾಪರಾಧಿಗಳೊಳಗೆ ಸೇರಿಸಿ ಭೂಪತಿಗಳಲ್ಲಿರುವ ಯತಿವರ ರೂಪರೊಡನಾಡುವ ಪರಾತ್ಮನ 2 ಪಾಂಡುಕುಮಾರರು ಪರಿಯಾರು ಕ್ರಮದಿಂದ ಹೆಂಡತಿಯಾಳ್ದರೆಂದು ದೂಷಿಸುವರ ಕಂಡು ತಾ ಮನಕೆ ತಂದು ಕಾರುಣ್ಯ ಸಿಂಧು ಕುಂಡಲೀಂದ್ರ ಗಿರೀಂದ್ರ ನಿಜಪದ ಪುಂಡರೀಕ ಛಾಯಗಳ ಮತಿ- ವತ್ಸರ ದ್ವಯ ಖಂಡನೆ ಕೈಕೊಂಡು ಮೆರಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸಯ್ಯ ಕಸ್ತೂರಿರಂಗ ಕರುಣಿಸಯ್ಯ ಪ ದುಷ್ಟಸಂಸಾರ ಬಹುಕಷ್ಟವಯ್ಯ ಇದ ರಟ್ಟೊಳಿಗಳ ತಾಳಲಾರೆನಯ್ಯ ಆರೆನಿದರ ಕೋಟಿಲೆಗಳಾರೆನಯ್ಯ ಪಾದ ಸೇರಿಸೈಯ್ಯ 1 ಕಾಮಕ್ರೋಧ ಲೋಭಮೋಹ ಬಿಡಿಸಯ್ಯ ಮದಮಾತ್ಸರ್ಯವೆಂಬ ಕಾಟ ನೀನೊತ್ತಿಸಯ್ಯ ಪಾದ ಹೊಂದಿಸಯ್ಯ ಸರ್ವಬಂಧು [ನೀ] ಎನ್ನ ಜಿಹ್ವೆಯಲಿ ನೆಲೆಸಯ್ಯ 2 ಆಶ ಪಾಶಕ್ಲೇಶವೆಲ್ಲ ನಾಶ ಮಾಡಿಸಯ್ಯ ಶ್ರೀಶ ನಿನ್ನ ದಾಸರಲ್ಲಿ ಸೇರಿಸಯ್ಯ ವಾಸುಕಿಶಯನ ಭವದಿ ನೊಂದೆನಯ್ಯ ಸ ರ್ವೇಶಬಂಧು ಎನ್ನನುದ್ಧರಿಸಯ್ಯ 3 ಪುತ್ರಮಿತ್ರಬಂಧುವರ್ಗದಿ ಬಿದ್ದಿಹೆನಯ್ಯ ಅ ನಿತ್ಯಮೋಹದಲ್ಲಿ ಮುಳುಗಿ ಪೋದೆನಯ್ಯ ವ್ಯರ್ಥನಾಗಿ ಕಾಲವನ್ನು ಕಳೆದೆನಯ್ಯ ಎನ್ನ ಮರಣ ಕಾಲದಿ ನಿಮ್ಮ ಸ್ಮರಣೆ ಕರುಣಿಸಯ್ಯ 4 ಜನನ ಮರಣವೆಂಬೊ ಜಾಡ್ಯ ಕ್ರೂರವಯ್ಯ ಇದರ ವಿಧವನರಿತು ವೈದ್ಯ ಮಾಳ್ವರ ಕಾಣೆನಯ್ಯ ಬ್ರಹ್ಮಾದಿ ದೇವತೆಗಳೂ ಅರಿಯರಯ್ಯ ಧನ್ವಂತ್ರಿರೂಪ ಶ್ರೀನಿವಾಸ ರಕ್ಷಿಸಯ್ಯ 5 ದೇಹವೆಲ್ಲ ಗಳಿತವಾಗಿ ಪೋಯಿತಯ್ಯ ಇಂದ್ರೀಯ ಸ್ವಾಧೀನದಲ್ಲಿ ನಿಲ್ಲದಯ್ಯ ವಿಷಯದಲ್ಲಿ ಮನಸು ಬಹಳ ಹರಿವುದಯ್ಯ ಲಕ್ಷ್ಮೀಪತಿಯೆ ನಿಮ್ಮ ಭಕ್ತಿಯಿತ್ತು ಸಲಹಯ್ಯ 6 ದೀನನಾಗಿ ನಿನ್ನ ಚರಣ ಸೇರಿದೆನಯ್ಯ ಜ್ಞಾನವೈರಾಗ್ಯವಿತ್ತು ಪಾಲಿಸೆನ್ನಯ್ಯ ಮರಳಿ ಜನ್ಮ ಬಾರದಂತೆ ಮಾಡಬೇಕಯ್ಯಾ ಗರುಡಗ ಮನ ವೆಂಕಟರಮಣ ಭವಸಂಕಟ ಬಿಡಿಸಯ್ಯ 7
--------------
ಯದುಗಿರಿಯಮ್ಮ
ಕ್ಷಿತಿಪರನ ಸ್ಮರಿಸಿ ಜನರು ಕ್ಷಿತಿಪರನ ಸ್ಮರಿಸಿ ನಿಮಗಪವಿಜಯವೆಂದಿಗೆ ಇಲ್ಲ-ಸು ಪುತರಾದ ವರನೆ ಕೃಪವನಧಿ ಹರಿವೊಲಿವಾ ಪ ಬಲಿ ವಿಭೀಷಣ ರಂಧ್ರಗಣ ರಂತಿರೇವತ ಮಲಯಧ್ವಜ ರಾಮಭೋಜಾ ಯದು ಬಲಗಿರಿಕ ಗಾಂಧಾರ ಗಯಸೇತು ಈಶ್ವರ ಕುಲಿಶಧ್ವಜ ಸಗರ ವೀರಾ ಸುರಭ ಶಶಿಬಿಂದು ಮಾಂಧಾತ ಧ್ರುವ ಶಿವಪ್ರಿಯ ಛಲಭರತ ಆಷ್ಮಾಕ ವಾಲಿ ಲೋಹಿತನೃಗಸು ಕುಕ್ಷಿ ಯದು ಭೂಷಣ1 ಅಸಮಂಜ ಸಂಜನಾಭಾ ವಸುದತ್ತ ಸೌಗಂಧಿಮಣಿ ಮುಕ್ತಕೇಸರೆ ನಿಸಿದಮಣಿ ವಾಹನಾ ಮಹವೀರ್ಯ ಕ್ಷೇಮಕ ಹಸ್ತಿ ವಸು ಅರಿಹಹೇಮಗರ್ಭ 2 ಕುಕುಸ್ಥ ಇಕ್ಷ್ವಾಕು ಮರುತ ಮುನಿಚೈತ್ರರಥ ವಿಕುಕ್ಷಿ ಸುರಥ ಆರಾವಾಚಿ ಶೃತಿ ಕೀರ್ತನ ಹುಶದಿಪ್ತಕೇತ ಸುವುತವಿಭಾವ ಸು ಶಕುತಿ ಶಿಖಿ ಸಾರ್ವಭೌಮಾ ಸುಖಸೇನ ಭಗೀರಥ ಅಜಮಾನು ಸ್ವರ್ಭಾನು ರುಕ್ಮಾಂಗದ ವಿರಾಜ 3 ಪುರಮೀಢ ಸುಮೀಢ ಭದ್ರಾಶ್ವ ರಮಣಕಾ ಹರಿಧರ್ಮನೇತ್ರ ಸುನೇತ್ರಕೇತುಮಾಲ ಪುರೋರವ ಮಿತ್ರಮನ ಜಯಸೇನ ಶುಭವರ್ಮ ಧರಯತೀ ಪುಣ್ಯದ್ರವಿಣೌ ಕರವೀರ ಸಾವೀರ ಪೌಷ್ಯಕೇಸರಿ ಸಿಂಗ ಮರುರುಕ್ಷ ಪ್ರದೀಪ ದಿಲೀಪ ಅಷ್ಟಕಕಂಪ ಅರಣಿ ಭೂಮನ್ಯು ಪ್ರಥಮಾಹವೀರ್ಯ ಸುರದತ್ತ ಹರಿವೀರಮನ್ಯು ವಿಶ್ವಾ 4 ಸುಮತಿ ಸುಂಹರ ರಘು ಮುಚಕುಂದ ದಶರಥ ಸುಮನ ದುಷ್ಯಂತ ಸಂಯಾತಿ ಹಂಸಧ್ವಜ ದಮಯಂತ ನೀಲಾಂಗ ಧರ್ಮಾಂಗದ ಶಮಲ ವಿಮರ ರವಿಕಾಂತ ನಹುಷ ದ್ರುಮಿಳ ಪದ್ಮಾಶತಾಯುಧ ಮಯೂರಧ್ವಜ ಪ್ರಮಿಲ ಕೀರ್ತಿವಾನ ತೊಂಡವಾನ ವಿದಗರ್ಭ ಅಮಿತ ಪರಾಕ್ರಮ ನಭಾಗಂಬರೀಷ ಸೌಮಿತ್ರ ಕಾರ್ತವೀರ್ಯಾ 5 ಪರಮೇಷ್ಟಿ ಮಣಿನಾಭ ಚೋಳ ತ್ರಿಶಂಖ ಶಂಖಣ ಶಂಖ ಮಣಿಕೇತ ಪಾಂಚಜನ್ಯ ಧನಂಜಯ ಕಾಶಿ ಸುಕಾಂತಕುಶ ಕುಶನಾಭ ಮಣಿಸೇನ ಪಾಂಡವ ಜಂಬುನದಿ ದಿವ್ಯರಥ ವನ ಕಕ್ಷಸೇನ ಜಾಕ್ಷಿತ ಪರಿಕ್ಷಿತ ದೃಂಹ್ಯ ಅನು ಅನಾಯುಪದಾತೀ 6 ಹರಿಶ್ರವ ಉತ್ತಾನಪಾದ ಕುಂಡಲಗಜ ಯವನಾಶ್ವರಾಜ ನೀಲಧ್ವಜ ಸುರವೃತ್ತ ಕವೇರ ಆಯು ದೃಢಾಯು ವಿಶಾಲ ಪ್ರತಿ ಶ್ರವ ಚಿತ್ರವೀರ್ಯ ಸುಭಗಾ ಕವಿವಂಗ ಅಂಗ ಕೋಶಲ ಹೇಮಗರ್ಭ ಶುಚಿ ವಿಕುಂಠ ಸುರಭೀ ಸೂ ಹವಿ ಅಭಿರಾಜ ಸುಹಿಜಾ 7 ಶಿಂಧು ಶುಭವರ್ನ ಸಿರ್ಯಾತಿ ಯಯಾತಿ ಸತ್ಯ ಸಂಧ ರೋಹಣ ಸಾಹದೇವ ವಾಪೀ ನಂದನ ಸುಮನ್ಯು ಸ್ವರ್ಭಾನು ಪಿಪ್ಪಲರವಿ ಚಂದ್ರಹಾಸ ಅಶ್ವವಂತ ಶಬಲಾಶ್ವ ಅಣು ಚಂದ್ರವರ್ಣ ಚಪನ ಸತ್ಯ ಸಯಾತಿ ಬಲ ವೃಂದ ವಿಷ್ಣುವರ್ಧನ 8 ಸಂತತದಲಲ್ಲೆಣಿಸಿದರೆ ಪಾರಗಂಡವರಾರು ಚಿಂತನೆಗೆ ತೋರಿದುದು ಸಾರಿದೆನು ಚನ್ನಾಗಿ ಸಂತರು ಕೇಳಿ ಲಾಲಿಸೀ ಪಿಂತೆ ಬಲು ಜನನದಾ ದುರಿತೌಘ ಪೋಗುವದು ಸಂತೋಷವಾಗುವುದು ಪರಿಸಿದ ಜನಕೆ ನಿತ್ಯ ಕಂತುಪಿತ ವಿಜಯವಿಠ್ಠಲನ ಚರಣಾಂಬುಜವ ಸಂತತಿ ಸಹಿತ ಕಾಂಬರೂ 9
--------------
ವಿಜಯದಾಸ
ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ಗುರುವಿನ ಗುಣಂಗಳ ನೆನೆವೆ ಸಿದ್ಧೇಶ ನಾನುಗುರುವಿನ ಪಾದಂಗಳ ನೆನೆವೆ ಸಿದ್ಧೇಶ ಪ ಸುಖವು ಬಂದರೆ ಹಿಗ್ಗದವರು ಸಿದ್ಧೇಶ ನಾನಾದುಃಖವು ಬಂದರೆ ಬಗ್ಗದವರು ಸಿದ್ಧೇಶ ಅಖಿಳವೆಲ್ಲವ ಬ್ರಹ್ಮವೆಂದರು ಸಿದ್ಧೇಶ ಇವರುಮುಕುತ ಗಣಂಗಳು ಈಗ ಸಿದ್ಧೇಶ 1 ಮಾನ ಹಚ್ಚಿಕೊಳ್ಳದವರು ಸಿದ್ಧೇಶ ಅಭಿಮಾನಗಳು ನೀಗಿದವರು ಸಿದ್ಧೇಶತಾನೆ ಎಂದು ತಿಳಿದವರು ಸಿದ್ಧೇಶ ಅವರುಜ್ಞಾನ ಮುಕ್ತಗಣಂಗಳು ಸಿದ್ಧೇಶ 2 ಸಂಸಾರವಿದ್ದರೆ ಬಾಧಕವಿಲ್ಲದವರು ಸಿದ್ಧೇಶಸಿದ್ಧ ಚಿದಾನಂದರಿಹರು ಸಿದ್ಧೇಶ ಇವರುಶುದ್ಧ ಮುಕ್ತ ಗಣಂಗಳು ಸಿದ್ದೇಶ3
--------------
ಚಿದಾನಂದ ಅವಧೂತರು
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ತಿಳಿಯ ಬಲ್ಲೆನೆ ನಾನಿನ್ನ ವೆಂಕಟರಮಣ ಪ ತಿಳಿಯ ಬಲ್ಲೆನೆ ನಿನ್ನ ನಳಿನಭವಾದ್ಯರಿ ಗಳವಡಿಯದ ಪಾದ ಪಾದ ಭಜನೆ ಬೇಡಿದೆ ಕೃಪಾಸಿಂಧು ನಂಬಿದೆ ನಿನ್ನ ಸುಜನವಾರಿಧಿ ಶರದೇಂದು ಪಾಲಿಸು ಎನ್ನ ನಿಜವಾಗಿ ಪೇಳುವೆ ವೃಜಿ£ಮರ್ದನನೆಂದು 1 ಎಡಬಲದಲಿ ನಿನ್ನ ಮಡದೇರ ಒಡಗೂಡಿ ಒಡಲನಾಮಕವಾಗಿ ಒಡಲೊಳಿದ್ದನ್ನವ ವಡಬಾಗ್ನಿಯೊಳುನಿಂತು ಜಡÀಜಸಂಭವಸುರ ಗಡಣ ಕೆ ನೀಡುತ್ತಾ ಒಡೆಯನೆನಿಸಿ ಭವ ನಿತ್ಯ ಒಡೆಯ ಪುಷ್ಕÀರಣಿಕೂಲನಿಲಯ ಜಗ ದ್ವಡೆಯ ಎನ್ನನು ಪೊರೆ ತಡವ್ಯಾಕೊ ಸಿರಿಲೋಲ2 ಸಿದ್ಧರಾಮಶೆಟ್ಟಿ ಶುದ್ಧಸ್ವರೂಪನೆ ಮುದ್ದುಮೋಹನ ಮುಖಕೆ ತಿದ್ದಿತೀಡಿದನಾಮ ಶುದ್ಧ ಭಕ್ತರನ್ನೆಲ್ಲ ಮುದ್ದುಗೊಳಿಸುವಂಥ ಮುದ್ದಾದ ಮುಖದಲ್ಲಿ ಎದ್ದು ಕಾಣುವ ನಗೆ ಪೊದ್ದುಕೊಂಡಿಹ ನಾನಾ ಆಭರಣದಿಂದಲಿ ಎದ್ದು ಬರುವ ನಿನ್ನ ಪ್ರದ್ಯೊತನಿಭ ಮೂರ್ತಿ ವಾಸುದೇವ ಮದ್ಹøದಯಗತಬಿಂಬ ಸಿದ್ಧಗುರುಜಗನ್ನಾಥ ವಿಠಲರೇಯ 3
--------------
ಗುರುಜಗನ್ನಾಥದಾಸರು
ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಕೀಕುವರ ನವಘನಸುಂದರ ಭಾವಜ ಜನಕ ಮಾದೇವ ಕೃಪಾಕರ ಪಾವನ ಸುಕುಮಾರ ಹರೇ ಹರೇ ಪ ನಿರುಪಮ ಚರಿತ ವರಗುಣ ಭರಿತೇ ಮರಕತಮಣಿ ಮಾಲಾಹಾರ ಸಂಶೋಭಿತೇ ಸುರಗಂಗಾಸುತ ರಾಜಿತಮೌನಿಯುತೇ ವೈರಿಕುಲ ಭಂಜನ ಪಾಂಡವ ಮಿತ್ರೇ1 ಶ್ರೀವನಮಾಲಾಧರ ಮುರಳೀಕರ ದೇವಸುಧಾಕರ ಶ್ರೀ ಮಾಂಗಿರಿವರ ಭಾವಕಜನಪರಿವಾರ ಶುಭಂಕರೇ ರೇವತೀರಮಣಾ ನಂದಕರೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೇವಿ ಭಜನೆ ಓಂ ನಮೋ ಓಂ ನಮೋ ಓ ನಮೋ ದೇವಿ || ಓಂ ನಮೋ ಓಂ ನಮೋ ಭಕ್ತ ಸಂಜೀವಿ ಪ. ಶಂಭು ಮನೋಹರೆ | ಶಾಂಭವಿ ದೆÉೀವಿ || ಜಂಭಾರಿ ಸುರನರ | ವಂದಿತೆ ದೇವಿ ಅ.ಪ. ಮಧುಕೈಟಭಾಖ್ಯರ ವಧಿಸಿದ ದೇವಿ || ಮುದದೊಳೀ ಮಹಿಯ | ನುದ್ಧರಿಸಿದ ದೇವಿ 1 ಮಹಿಷಾಖ್ಯ ದಾನವ ಮರ್ದಿನಿ ದೇವಿ || ದಹಿಸಿದೆ ಧೂಮ್ರಾಕ್ಷ | ನನು ಮಹಾದೇವಿ 2 ಚಂಡಮುಂಡಾಖ್ಯರ | ಖಂಡಿಸಿ ಶಿರಗಳ || ಚೆಂಡಾಡಿದ ಶ್ರೀ ಚಾಮುಂಡಿ ದೇವಿ 3 ರುಧಿರಬೀಜಾಖ್ಯನ | ರುಧಿರವ ಹೀರಿ || ವಧಿಸಿದೆ ಅದ್ಭುತ | ಮಹಿಮೆಯದೋರಿ 4 ಶುಂಭ ನಿಶುಂಭ ನಿ | ಷೂದಿನಿ ದೇವಿ || ಕುಂಭಿನಿ ಭಾರವ | ಹರಿಸಿದ ದೇವಿ 5 ಅರುಣಾಸುರ ಸಂ | ಹಾರಿಣಿ ದೇವಿ || ಶರಣರಿಗೊಲಿದ ಶ್ರೀ | ಭ್ರಾಮರಿ ದೇವಿ6 ನಂದಿನಿ ನದಿಯೊಳು | ನೆಲೆಸಿದ ದೇವಿ || ಕಂದರಂತೆಮ್ಮನು | ಸಲಹುವ ದೇವಿ7 ನಂಬಿದ ಭಕ್ತರ | ವೃಂದವ ದೇವಿ || ಅಂಬಿಕೆ ಪಾಲಿಸು | ಜಗದಂಬ ದೇವಿ 8 ಜಟಾಧರೇಶನ | ರ್ಧಾಂಗಿನೀ ದೇವಿ || ಕಟಿಲೊಳು ಮೆರೆದ | ಭ್ರಮರಾಂಬ ದೇವಿ9
--------------
ವೆಂಕಟ್‍ರಾವ್
ದೇವಿ ಶ್ರೀಸರಸ್ವತಿಯೆ ಕಾಯೇ ಪ ಮಾವಿನುತ ಹರಿನಾಮ ಸಂತತದಿ | ನುಡಿಸೀ ಅ.ಪ. ಪತಿ ಮಾತೆ | ನಾಲಗೆಯಲೀ ನಿಂತುಕಾಲ ಕಾಲಕೆ ಹರಿಯ | ಲೀಲಾತಿಶಯವಾ |ಪೇಳಿಸುತ ಜಿಹ್ವಾಂಗ | ಸಾರ್ಥಕೆನಿಪುದು ಎಂದುಕೇಳುವೆನು ವರ ನಿನ್ನ | ಪಾಲಿಪುದು ಅದನ 1 ವಿದೈಗಳಿಗಭಿಮಾನಿ | ಬುದ್ಧಿ ಪೂರ್ವಕ ಬೇಡ್ವೆತಿದ್ದಿ ಎನ್ನಲಿ ಇಹ ಅ | ವಿದ್ಯೆಗಳನೆಲ್ಲಾ |ಮಧ್ವೇಶ ಹರಿಯೊಲಿವ | ಶುದ್ಧ ಸಾಧನವಿತ್ತುನಿದ್ರೆಯಿಂದೆಚ್ಚರಿಸಿ | ಬುದ್ಧಿ ಪ್ರದಳೆನಿಸೇ 2 ಅಜನ ಅರ್ಧಾಂಗಿನಿಯೆ | ಪ್ರಜ್ವರವ ಕಳೆವಂಥಸುಜನ ಸಂಗವನಿತ್ತು | ರಜ ದೂರನೆನಿಸು |ಅಜನ ಜನಕನು ಗುರು | ಗೋವಿಂದ ವಿಠಲ | ಪದಅಬ್ಜವನು ತೋರವ್ವ | ನಿಜ ಹೃದಾಬ್ಜದಲೀ3
--------------
ಗುರುಗೋವಿಂದವಿಠಲರು