ಒಟ್ಟು 63 ಕಡೆಗಳಲ್ಲಿ , 24 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಕ್ಷು ಶ್ರ್ಯವನೆ ಶೇಷಾ - ಪಾಲಯ ಪ ಕ | ಟಾಕ್ಷದಿ ನಾಗನೆಅ.ಪ. ಅಕ್ಷಾರಿಪದಪಾಂಸು ಧರನೇ | ವಾಯುಪುಚ್ಛಾಶ್ರಯಿಸಿ ಜಗಧಾರನೇ ||ಪಕ್ಷಿ ವಾಹಗೆ ಶಯ್ಯ | ಪಕ್ಷೀಯ ಸಮ ಪೂರ್ವತ್ರ್ಯಕ್ಷನೆ ಸೋಮರ್ಕ | ಅಕ್ಷಿ ಅನಲ ಕಾಯೊ 1 ತಾಮಸ್ಸಾಹಂ ತತ್ವ ಮಾನಿಯೇ || ಕಾಯೊಭೂಮಿ ಧರನೆ ಬಹು ಮಾನಿಯೇ |ಆಮಹ ಪಂಚರಾ | ತ್ರಗಮಗಳ್ ಮಾನಿಕಾಮಿತ ಪಾಲಿಸೊ | ಸ್ವಾಮಿ ನಿಮಗೆ ನಮೊ 2 ವಾಸವ ವಂದಿತ ವಾತಾಶನಾ | ನಿನ್ನಆಸನ ಮಾಡಿಹ ರಮೇಶನಾ ||ಹಾಸಿಗೆ ಎನಿಸುತ್ತ | ಲೇಸು ಸೇವಿಸಿ ಹರಿಸಾಸಿರ ನಾಮನ | ದಾಸನೆಂದೆನಿಸಿದೆ 3 ಮುಕ್ತಿಗೆ ಯೋಗ್ಯರ ಮಾರ್ಗದಾ | ಹರಿಭಕ್ತಿಯ ಪಾಲಿಸೊ ದೀರ್ಘದಾ ||ಸಕ್ತಿಯಾಗಲಿ ಮನ | ಸೂಕ್ತಮೇಯನಲ್ಲಿಉಕ್ತಿ ಇದೊಂದನ | ಇತ್ತು ಪಾಲಿಸು ಶೇಷ 4 ಕಾಳೀಯ ಮಡುವಿಗೆ ಹಾರ್ದನ | ಮತ್ತೆಕಾಳೀಯ ನೆಡೆಯಲಿ ಕುಣಿದನಾ ||ಕಾಳಿರಮಣ ಗುರು | ಗೋವಿಂದ ವಿಠಲನಭಾಳ ತುತಿಪ ಮನ | ಪಾಲಿಸೊ ಶೇಷ ಗುರು 5
--------------
ಗುರುಗೋವಿಂದವಿಠಲರು
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ. ದಯಾಸಾಗರೆ ದಾರಿದ್ರ್ಯದುಃಖ ಭವ- ಭಯನಾಶಿನಿ ಮಣಿಮಯಕೃತಭೂಷಿಣಿಅ.ಪ. ಗಜವದನನ ಮಾತೆ ಸುಜನ- ವ್ರಜಸತ್ಫಲದಾತೆ ಕುಜನಭಂಜನಿ ನಿರಂಜನಿ ಶೈಲಾ- ತ್ಮಜೆ ಮಹೋಜೆ ನೀರಜದಳಲೋಚನಿ1 ಇಂದ್ರಾದ್ಯಮರನುತೆ ಪೂರ್ಣಾ ನಂದೆ ನಂದಜಾತೆ ಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ- ಗೇಂದ್ರವಾಹಿನಿ ಮದಾಂಧರಿಪು ಮಥನಿ2 ಅಂಗಜಶತರೂಪೆ ಸದಯಾ- ಪಾಂಗೆ ಸುಪ್ರತಾಪೆ ಗಂಗಾಧರವಾಮಾಂಗಶೋಭೆ ಸಾ- ರಂಗನೇತ್ರೆ ಶ್ರೀರಂಗಸಹೋದರಿ3 ದಾಸಜನರ ಪೋಷೆ ರವಿಸಂ- ವಾಸುದೇವನ ಸ್ಮರಣಾಸಕ್ತಿಯ ಕೊಡು ಭಾಸುರಜ್ಞಾನಪ್ರಕಾಶವಿಲಾಸಿನಿ4 ಸೌಖ್ಯವು ಭಕ್ತರ್ಗೆ ಸಲಿಸಲು ಸೌಖ್ಯವು ನೀ ಭರ್ಗೆ ಲಕ್ಕುಮಿನಾರಾಯಣನ ಭಗಿನಿ ನಿ- ರ್ದುಃಖಪ್ರದಕಟಿಲಾಖ್ಯಪುರೇಶ್ವರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ತಿಳಿಯೊ ಮನವೆ ಯುಕ್ತಿಯ ಕಳಿಯೋ ನೀ ವಿಷಯಾಸಕ್ತಿಯ ಬಲಿಯೊ ಭಕ್ತಿಯ ಧ್ರುವ ಪಥ ಹೊಂದು ಈಗ ಹಣ್ಣು ಶರೀರಾಗದಾಗ ನಿನ್ನೊಳು ತಿಳಿ ಬ್ಯಾಗ 1 ಬಲವು ದೇಹಲಿದ್ದಾಗ ಬಲಿಯೊ ಭಾವ ಭಕ್ತಿಲೀಗ ನೆಲೆ ನಿಭಗೊಂಬುವ್ಹಾಂಗೆ ಸಲೆ ಮರೆಹೊಗು ಹೀಂಗ 2 ಬಂದ ಕೈಯಲಿ ಬ್ಯಾಗ ಹೊಂದು ಸದ್ಗುರು ಪಾದೀಗ ಎಂದೆಂದಗಲದ್ಹಾಂಗ ಸಂಧಿಸು ಘನ ಹೀಂಗ 3 ಸೋಹ್ಯದೋರುವ ಕೈಯ ಧ್ಯಾಯಿಸೊ ನೀ ಶ್ರೀಹರಿಯ ನ್ಯಾಯ ನಿನಗೆ ನಿಶ್ಚಯ ಇಹಪರಾಶ್ರಯ 4 ಗುರುಪಾದ ಕಂಡಾಕ್ಷಣ ಎರಗೊ ಮಹಿಪತಿ ಪೂರ್ಣ ಹರಿಯೊ ಅಹಂಭಾವಗುಣ ಬೆರಿಯೊ ನಿರ್ಗುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯಮಾಡೈ ಶ್ರೀ ಹರಿಯನಗಿಂದು ದಯಮಾಡೈ ಶ್ರೀಹರಿಯನಗಿಂದು ಪ ನಿಗಮಾಗಮ ಪೌರಾಣದ ಕತೆಯಾ ಬಗೆಯಲಿಯದ ಪಾಮರ ಪಾಥರಿಗೆ 1 ವಿಷಯಾ ಸಕ್ತಿಲಿ ನೆನೆಯದೆ ಹಿತವಾ ಪರಿ ದಿನಗಳಿದೀಗ 2 ಗುರುಮಹಿಪತಿ ಪ್ರಭು ಬಂದೆನು ಶರಣಾ ಬಿರುದವು ದೀನರ ಹೊರೆವುದು ನಿನಗೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ನಮಿಪೇ ನಮಿಪೇ ನಮಿಪೇ ಶ್ರೀ ಗುರುದೇವಾ ಜ್ಞಾನಬೋಧಾ ನೀಡಿ ಮನದಾ ದೀನತನ ಬಿಡಿಸಿ ನೀನೆ ಆ ಪರಮಾತ್ಮನೆನುವಾ ಸ್ವಾನುಭವ ಹಿಡಿಸಿ ಹೀನವಿಷಯಾಸಕ್ತಿಯಾ ನೀಗಿಸಿ ಎನಗಾಗಿ ಜಗದಸುಖದ ಮರುಳು ಬಿಡಿಸಿ ಸೊಗಸ ತೋರಿಸಿದಿ ಅಘವನಳಿದು ಸೊಗಸಿನೊಳಗೆ ಖಗೆಯ ನಿಲಸಿದಿ ನೀ ಬಗೆಯ ರೋಗವೆಲ್ಲವ ನೀಗಿಸಿ ಎನಗಾಗಿ
--------------
ಶಂಕರಭಟ್ಟ ಅಗ್ನಿಹೋತ್ರಿ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ಪ್ರಸನ್ನವಿಠಲ ಪಾಲಿಸಿವನ ಪ ಅಸತ್ಯದಲಿ ಮನವಿಡದೆ ಆಸಕ್ತಿ ನಿನ್ನಲ್ಲಿ ಕೊಟ್ಟು ಅ.ಪ. ದೃಢÀ ನಿನ್ನ ಭಕ್ತರಲಿ ಕೊಡುಭಕ್ತಿ ವಿರಕ್ತಿ ದೃಢ ಜ್ಞಾನ ನಿನ್ನಲ್ಲಿ ಬಿಡದೆ ನಿತ್ಯ ಮಡದಿ ಮಕ್ಕಳ ಕೂಡಿ ನಿನ್ನ ಸೇವೆ ಸಲ್ಲಿಸಲಯ್ಯ ಕಡಲಸುತೆ ಶ್ರೀ ರಮಣ ಬೆಂಬಲನು ನೀನಾಗು 1 ಸಜ್ಜನರ ಪದಧೂಳಿ ಆಗಿರಲಿ ಎಂದೆಂದು ದುರ್ಜನರ ಸಹವಾಸ ಕೊಡಬೇಡವಯ್ಯ ಬೊಜ್ಜೆಯಲಿ ಮೂರ್ಜಗವ ಪೊತ್ತ ಮಹಾತ್ಮ ಇವನ ಹೆಚ್ಚಾಗಿ ಪೊರಿ ಬಿಡದೆ ಅಚ್ಚ ಮಾರ್ಗದಿ ಇಟ್ಟು 2 ನಿನ್ನ ನಾಮಾಮೃತ ಸತತ ಸುಖ ಸವಿಯಲಿ ಸ್ವಾಮಿ ಬನ್ನ ಬಡಿಸಲಿ ಬೇಡ ತರಳನಿವನು ಉನ್ನತೋನ್ನತ ಮಹಿಮ ಜಯೇಶವಿಠಲ ಮನ್ನಿಧಿ ನೀನೆಂದು ಪ್ರಾರ್ಥಿಸುವೆ ಕೈಪಿಡಿದು 3
--------------
ಜಯೇಶವಿಠಲ
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಾರೆಲೋ ಬೇಗನೆ ಭಾರತೀಪತಿ ಪ್ರಿಯ ಸಾರುತ ಬೇಗ ಶ್ರೀ ನಾರಾಯಣ ಪ. ನಾರದಾದಿ ವಂದ್ಯ ಪಾರುಗಾಣಿಸೆ ಭವ ಗಾರು ಮಾಡದೆ ಶ್ರೀಶ ಸರ್ವೇಶ ಅ.ಪ. ಸುಮನಸರೊಡೆಯನೆ ನೀನಾಗಮಿಸಲು ಸಕಲವು ಸುಗಮವಹುದೆ ಕಮಲೆಯ ಪ್ರೀಯನೆ ನಿನ್ನಾಗಮನವನೆ ಬಯಸುವೆ 1 ಭಕ್ತರ ಕಾಯುವ ಯುಕ್ತಿ ನಿನಗೆ ಸರಿ ಭಕ್ತವತ್ಸಲನೆಂಬೊ ಬಿರುದಿನ ದೇವ ಶಕ್ತಿ ಸ್ವರೂಪನೆ ಅಶಕ್ತರ ಪೊರೆವಾ ಸಕ್ತಿಯ ತೋರಿಸೆ ಭಕ್ತರಿದ್ದೆಡೆಗೆ 2 ಎನ್ನಪರಾಧ ಎಣಿಸಲೆನ್ನಳವೆ ಪನ್ನಗಾದ್ರಿನಿವಾಸ ಕೃಪೆತೋರೊ ಸನ್ನುತಚರಿತ ನಿನ್ನ ಪೊರತು ಎನ ಗನ್ಯರ ಕಾಣೆನಾ ಶ್ರೀ ಶ್ರೀನಿವಾಸ ದೊರೆ 3
--------------
ಸರಸ್ವತಿ ಬಾಯಿ
ಬೇಗನೆ ಬಾರೊ ಶ್ರೀ ಹರಿಯನೆ ತೊರೋ ಶ್ರೀ ಗುರುವೇ ದಯದಿ ಪ. ಬೇಗನೆ ಬಾರೊ ಯೊಗಿಗಳೊಡೆಯ ನಾಗಶಯನ ಪ್ರೀತ ತ್ವರಿತದಿ ಅ.ಪ. ಭಕ್ತರೆಲ್ಲರು ನಿಮ್ಮ ದಾರಿಯನೆ ನೋಡುತಾ- ಸಕ್ತಿಯಿಂದಿರುತಿಹರೊ ಮೋದ ಗುರುವೆ ನಿಮ್ಮ ಶಕ್ತಿಗೆ ಎದುರ್ಯಾರೊ ಧರೆಯೊಳು 1 ಕಾಣದೆ ಕಂಗಳು ಕಾತರಗೊಳ್ಳುತ ತ್ರಾಣಗೆಡುತಲಿಹವೊ ಪ್ರಾಣವ ರಕ್ಷಿಪ ಪ್ರಾಣಪತಿಯ ಪ್ರಿಯ ಕಾಣೆ ನಾನನ್ಯರನಾ ಜಗದೊಳು 2 ಪರಮಪ್ರಿಯರು ಎಂದು ಪರಮ ಬಿರುದು ಪೊಂದಿ ಪರಮಾತ್ಮನನು ಕಂಡು ಪರಮಾತ್ಮ ತತ್ವ ಪರಮಯೊಗ್ಯರಿಗರುಹಿ ದುರಿತ ತ್ವರಿತದಿ 3 ಕಮಲಾಕ್ಷನನು ಹೃತ್ಕಮಲದಲಿ ಕಾಂಬ ಕಮಲಾಪ್ತ ಅತಿ ಪ್ರೀತ ಕಮಲಸಂಭವಪಿತ ಕಮಲಾಕ್ಷ ಹರಿಯ ಹೃ ತ್ಕಮಲದಲಿ ತೋರೋ ಗುರುವರ 4 ಗೋಪಾಲಕೃಷ್ಣವಿಠ್ಠಲನ ಸೌಂದರ್ಯದ ರೂಪವೆನಗೆ ತೋರೊ ತಾಪವ ಹರಿಸುತ ಕಾಪಾಡಬೇಕೆಂದು ನಾ ಪ್ರಾರ್ಥಿಸುವೆ ಗುರುವೆ ತ್ವರಿತದಿ 5
--------------
ಅಂಬಾಬಾಯಿ
ಭವ ಕೂಪನಿ ಪತಿತಂ ಪ ಘೊರ ದುರಿತಹರ ಚಾರುಚರಣಯುಗಲಂ ಪ್ರಣ ಮಾಮಿ ತ್ರಿಕಾಲಂ ಅ,ಪ ಕಾರ್ಪರ ಋಷಿಕೃತ ಘೋರ ತಪ:ಪ್ರೀತ ಅ- ತ್ರಾವಿರ್ಭೂತ ಕಾರ್ಪರ ಗ್ರಾಮೇತೀರ ಗತಾಶ್ವತ್ಥ ಪೇಣ ಸಮಸ್ತ ಆರಾಧಕ ನಿಜಭಕ್ತ ಜ- ನಾಭಿಷ್ಟ ವರ್ಷಣ ಸರ್ವೇಷ್ಟ ನಾರಾಯಣ ಮುನಿ ಪೂಜಿತ ಸುರವ್ರಾತ ಸಂಸ್ತುತ ಶುಭಚರಿತ 1 ಸಾಕ್ಷಾಚ್ಛ್ರೀರ ಪಿವೀಕ್ಷ್ಯಾದ್ಭುತರೂಪಂ ತವ ಪ್ರಕಟಿತ ಕೋಪಂತ್ರ್ಯಕ್ಷಾದ್ಯಮರೈ:ಪ್ರೇಷಿತಾಪಿ ಸ್ವ¥ತಾ ಶಂಕೆ- ತೇವ ತಸ್ಥಾ ರಕ್ಷಿತÀವಾನಭಿ ವೀಕ್ಷ್ಯ ಪ್ರಹ್ಲಾದಂ ಕೃತ್ವಾಪ್ರ ಸಾದಂ ಲಕ್ಷ್ಮೀಧವಖಲ ಶಿಕ್ಷಣ ತವಚರಿತಂ ಜ್ಞಾಪಯಮೇ ಸತತಂ 2 ಭಕ್ತಿಂದೇಹಿ ಪ್ರಶಸ್ತಾಂತ್ವಯಿ ಕೃಪಯಾ ಚಿಂತಿತ ದುರ್ವಿಷಯಾ ಸಕ್ತಿಂಜಹಿ ಸದ್ಭಕ್ತ ಚಿತ್ತನಿಲಯ ಕಾಯಾಧವ ಪ್ರಿಯ ಶೃತಿಪುಟಸಂಭೃತಯಾ ಮುಕ್ತಾ ಮುಕ್ತ ಸಮಸ್ತ ಜಗತ್ಕಾಯಾ ಸುರಗಣ ಸಂಶೇವ್ಯಾ3 ಸುಜನಾರ್ತಿಹರಣಾ ವೃಕ್ಷಾದವತೀರ್ಣ ಮದೃತ್ತಿಮಿರ ಪ್ರದ್ಯೋತನಕಿರಣ ಸನ್ನಿಭಶುಭ ಚರಣ ಷಡ್ಗುಣಸಂಪನ್ನ 4 ಮಂಗಳ ಕೃಷ್ಣ ತರಂಗಿಣೆ ಕೂಲಸ್ಥ ಅಶ್ವತ್ಥೋದ್ಭೂತ ತುಂಗವದನ ಬಹು ಶಾಲಿಗ್ರಾಮಗತ ಷೋಡಶ ಬಾಹುಯುತ ಮಾತಂಗ ಸಂಗೀತಪ್ರಿಯ ಮಂಗಳತರಚರಿತ ಶತಿತತಿ ವಿಖ್ಯಾತ 5
--------------
ಕಾರ್ಪರ ನರಹರಿದಾಸರು
ಮನೆಯ ನಿರ್ಮಲಗೈದು ಮೋದಬಡಿಸುವುದು ವನಜನಾಭನ ಭಕ್ತಿಯಂಬವಳ ಬಿರಿದು ಪ. ಬಾಯಿಮೊದಲಾದೈದು ಬಾಗಿಲುಗಳಲ್ಲಿ ವಾಯುವಂದ್ಯನ ಚರಿತ ವರ್ಣನಾದಿಗಳಾ ಛಾಯಗೊಂಬುವ ತೆರದಿ ಚಿತ್ರಕೃತ್ಯವನೂ ನಿತ್ಯ ನಲಿವುದನು 1 ಬುದ್ಧಿ ದೀಪವನು ಬಹು ಶುದ್ಧಕನು ತಾ ತದ್ದಾರಿ ಮನವ ಮೇಲುದ್ಧರಿಸಿಕೊಳುತಾ ಸಿದ್ಧಗಮ್ಯನ ಪದಕೆ ಸರಿಯಾಗಿಸುತಾ ಬದ್ಧ ಬೊಗಳುತಾ ಜನರ ಬಾಯಿ ಮುಚ್ಚಿಸುತಾ 2 ದೋಷ ದುಷ್ಕøತ ಕೆಸರ ಲೇಶವಿಡಗೊಡಳು ಆಶೆಯೆಂಬುವ ಬಲೆಯ ಕೊೈಸಿ ಬಿಸುಟುವಳು ಈಶ ಮಾನಿತ್ವಕವಕಾಶವೇನಿಡಳು ಕೇಶವನ ಕರತಂದು ಕಾವಲಿರಿಸುವಳು 3 ಇವಳಾಶ್ರಯವ ಪೊಂದಲ್ಯಾರಭಯವಿಲ್ಲ ನವರೂಪಳನ್ನುಸರಿಸಿ ನಲಿವ ಸಿರಿನಲ್ಲ ತವಕದಿಂದಲಿ ತಾನೆ ಓಡಿ ಬಂದೆಲ್ಲಾ ಯುವತಿಯರ ಕೂಡಿ ತಾ ಪಾಡುವರೆ ಬಲ್ಲಾ 4 ಕಂಜನಾಭನ ಕರುಣ ಪಂಜರದೊಳಿರಿಸಿ ಸಂಜೀವನೌಷಧವ ಸುಲಭದೋಳ್ ಕುಡಿಸಿ ಅಂಜಿಕೆಯ ಬಿಡಿಸಿ ರಿಪು ಪುಂಜವನ ಕಡಿಸಿ ಮಂಜುಳಾತ್ಮಕ ಮಾಧವನ ಮುಂದೆ ಕರಿಸಿ 5 ದಾನ ವ್ರತಾದಿಗಳನೇನ ಮಾಡಿದರು ಶ್ರೀನಿವಾಸನ ಕರುಣ ಸಾಧ್ಯವಾಗಿರದು ನೀನೆ ರಕ್ಷಕನೆಂಬ ಧ್ಯಾನದಲಿ ಮೆರದು ಜ್ಞಾನ ಭಕ್ತಿಗಳಿಂದ ನಲಿವುದೇ ಬಿರುದು 6 ಯುಕ್ತಿಯಿಂದಲಿ ನೋಡಲೆಲ್ಲ ಶಾಸ್ತ್ರದಲಿ ಭಕ್ತಿಯೋಗವ ಪೇಳ್ವವೇಕಮತ್ಯದಲಿ ಭುಕ್ತಿ ಮುಕ್ತಿಯ ಶೇಷ ಭೂಧರೇಶನಲಾ ಸಕ್ತಿಯಿರೆ ಸಕಲಾರ್ಥವೀವನುತ್ಸವದಿ 7
--------------
ತುಪಾಕಿ ವೆಂಕಟರಮಣಾಚಾರ್ಯ