ಒಟ್ಟು 35 ಕಡೆಗಳಲ್ಲಿ , 28 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ಮಾಡಿದ ಲೀಲೆ ಬಲು ಸುಖವೊ | ಆನೇನು ದು:ಖವನು ಬಡುವುದಿಲ್ಲವೋ ಜೀಯ |ಪ ತೋಟವನು ಮಾಡಿಸಿ ಅದರೊಳಗೆ ಒಂದು ಫಲ | ನಾಟಿಸಲು ಬೆಳೆದ ಫಲ ಪಕ್ವವಾಗೆ | ನೀಟಾದ ಫಲವೆಂದು ಅರಸು ಕೊಯ್ ತರಿಸಲು ತೋಟಿಗಾಗೇನು ದು:ಖ ಅರಸಿನಿಂಗೇನೈಯ1 ನಿನ್ನ ಸಂಕಲ್ಪನೆ ಸ್ಥಿರವಾಗಿ ಇದೆ ಇದೆ ಅನಂತ ವೇದಗಳು ಪೊಗಳೂತಿವಕೊ ಪನ್ನಗಶಯನನೆ ನೀನು ಮಾಡಿದ ಕ್ಲುಪ್ತ ಅನ್ಯಥಾವಾಗುವದೆ ಅನುಭವಾದಿಗಳಿಗೆ 2 ಸುಖ ದು:ಖವೆ ಎರಡು ನಿನ್ನ ವಶವಾಗಿದೆ ಸಖನಾಗಿ ಸುಖ ಉಣಿಸಲು ಹಿಗ್ಗುವೆ ದು:ಖ ತಂದಿತ್ತರೆ ಅಳಲಿ ಬಳಲುವದ್ಯಾಕೆ ಅಖಿಳ ನೀನಾವದಿತ್ತದೇ ಬಲು ಲೇಸು 3 ನೀನೆ ಕಲ್ಪಿಸಿದರೆ ಸೈರಿಸಲಾರದೆ ವೇಗ | ನಾನು ವ್ಯಧಿಕರಣ ಪೇಳಿದರಾಯಿತೆ | ಆನಂದಕೆ ಹ್ರಾಸ ಬರುವುದೆ ಶಾಶ್ವತ | ಏನಾದರೇನು ನೀನಾಡಿದಾಟವೆ ಸಮ್ಮತ | 4 ಸತ್ಪಾತ್ರರಾ ನೋಡಿ ದಾನವಿತ್ತರೆ ಅವಗೆ | ಉತ್ತಮಾ ಪದ ಉಂಟು ಪುಶಿಯಲ್ಲವೋ | ಸತ್ಪಾತ್ರ ನೀನೆಂದು ಪುತ್ರಾಖ್ಯ ಧನವಿತ್ತೆ | ಉತ್ತುಮಾ ಗತಿ ನೀಯೋ ವಿಜಯವಿಠ್ಠಲ ಕರುಣಿ 5
--------------
ವಿಜಯದಾಸ
ನೆನೆಯೋ ನೀ ಎನ್ನ ಮನವೇ| ಅನುಪಮ್ಯ ಶ್ರೀ ಮುಕುಂದನಾ| ಚಕೋರ ಸುನಕ್ಷತ್ರೇಶ ಗೋಪಾಲನಾ| ಶ್ರೀಲೊಲನಾ ನಂದಬಾಲನಾ ಪ ವರಭಕ್ತ ಧೃವಗ ಸ್ಥಿರಪದ ವಿತ್ತನಾ| ಧರಣಿಯ ಭಯಹರ ಪುರುಷೋತ್ತಮನಾ| ಉರಗ ತುಳಿದವನಾ| ಉರಗಶಯನುರಗಾ ಭರಣನ ಸಖನಾ| ಸುನಖನ ಅಬ್ಬ ಮುಖನಾ 1 ದುರಿತ ನಿವಾರಕನಾ| ಕರುಣಾದೀ ಅಹಲ್ಯಯ ನುದ್ಧರಿಸಿದನಾ ಸರಸಿಜ ಸಮಪದ ಸರಸಿಜನಾಭನಾ| ಸರಿಸಿಜ ಪಾಣಿಯ ಸರಸಿಜ ನೇತ್ರನಾ 2 ಸುಚರಿತ್ರನಾ ಮುನಿಸ್ತೋತ್ರನಾ| ಗುರುವರ ಮಹಿಪತಿ ನಂದನ ಜೀವನಾ| ಗಿರಿವರಧಾರನಾ ಕಂಸಾಸುರ ಮರ್ಧನಾ| ಶರಧಿ ನಿವಾಸನಾ| ಹರಿಶತ ಕಿರಣ ಹರಿಸುತ ಪ್ರೀಯನಾ| ಸ್ಮರಸೈಯ್ಯನಾ ಕೃಷ್ಣರೇಯನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರನ್ಯಾತಕೆ ನೀರೆ ನೀ ಕರೆತಾರೆ ಸುಗುಣ ಗಂಭೀರನ ಪ. ತೇಜಿಯನೇರಿ ಮೆರೆವನ ಅ.ಪ. ಕೋಮಲಾಂಗನ ಕಂತುದಹನನ ಸೋಮಾರ್ಕ ಶಿಖಿನೇತ್ರನ ವಾಮದೇವನ ವನಜಭವಸಂಭವ ಮುನಿಸ್ತೋಮ ವಿನುತ ಎನ್ನ ಪ್ರೇಮನ 1 ನೀಲಕಂಠನ ನಿಗಮಸಾರನ ಬಾಲಶಶಿಧರ ಭರ್ಗನ ಶೀಲಸದ್ಗುಣ ಫಾಲನೇತ್ರನ ಕಾಲಾಂತಕ ಎನ್ನ ಕಾಯ್ವನ 2 ಮಂಗಳಾತ್ಮನ ಮಲ್ಲರಿಪುದಲ್ಲಣ ದೇವೋತ್ತುಂಗ ಹೆಳವನಕಟ್ಟೆ ರಂಗಗತಿಸಖನಾದ ನೀಲಗಿರಿ ಲಿಂಗ ಮೂರುತಿಯ3
--------------
ಹೆಳವನಕಟ್ಟೆ ಗಿರಿಯಮ್ಮ
ಭಜನೆಯೊಂದೇ ಸಾಲದೇ ರಂಗಯ್ಯನ ಭಜನೆಯೊಂದೇ ಸಾಲದೇ ಪ ಅನುದಿನ ಸ್ಮರಿಸಲು ಭಜಕರ ದುರಿತವ ತರಿಯುವ ಪರಿಯ ಅ.ಪ. ಹಿಂದೆ ನೋಡಜಮಿಳ ತರಳ ಪ್ರಲ್ಹಾದರ ಚಂದದಿ ಮೆರೆದ ಗೋಪಾಲ ಬಾಲಕರ ವೃಂದಾವನದೊಳಿದ್ದ ಗೋಪಸೇವಕರ 1 ಕೋಮಲೆ ದ್ರೌಪದಿ ಸಭೆಯೊಳು ಸ್ಮರಿಸಲು ಭಾಮೆಗಕ್ಷಯವಿತ್ತ ಕ್ರೂರ ರಕ್ಷಕನ ಪ್ರೇಮದಿ ಅಹÀಲ್ಯೇ ಶಿಲೆಯೊಳು ಭಜಿಸಲು ಸ್ವಾಮಿ ತಾನೊಲಿದು ಮುಕ್ತಿಯ ಕೊಟ್ಟ ಹರಿಯ 2 ದಶರಥನಲಿ ಬಂದು ದಶಕಂಠನನು ಕೊಂದು ವಸುಮತಿಯನು ಪೊರೆದ ಶ್ರೀ ಹರಿಯ ಪಶÀುಪತಿ ಸಖನಾದ ಪನ್ನಗಶಯನನಅಸುರರ ತರಿದ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಭಜಿಸಬಾರದೆ ಹರಿಯ [ಮನವೇ] ಭಜಕರಕ್ಷಕ ದೊರೆಯ ಪ. ಗಜಪತಿ ವರದನ ತ್ರಿಜಗಜ್ಜನಕನ ಅಜಮಿಳ ವರದನ ವಿಜಯನ ಸಖನಾಅ.ಪ. ಕಾಮಕ್ರೋಧವ ಸುಟ್ಟು [ಶ್ರೀರಾಮನೋಳ್ ಮನನೆಟ್ಟು] ನೇಮಧರ್ಮದಿ ಬುದ್ಧಿಯನಿಟ್ಟು ತಾಮಸ ಬುದ್ಧಿಯ ಬಿಟ್ಟು 1 ಸತ್ಯಮಾರ್ಗವ ಬಿಡದೆ ದುಷ್ಕøತ್ಯದೊಳ್ ಮನಗೊಡದೆ ಸತ್ವಗುಣಭರಿತ ಜರಾಮೃತ್ಯುರಹಿತ ನಿತ್ಯತೃಪ್ತನನೀಂ 2 ನ್ಮಂದಿರದೊಳಗಾನಂದದಿ ನೆಲಸಿರುವಂದವ ಮರೆಯದಿನ್ನು 3 ಪರಮಾಚಾರ್ಯರುಗಳ ನಾಮಸ್ಮರಣೆಯ ಸೌಭಾಗ್ಯದಲಿ ವರಗುರುಗಳ ಘನ ಕರುಣಾಕಟಾಕ್ಷದಿ ಸಿರಿವರನ ನೆಲೆಯರಿವತನಕ 4 ವಾತಾತ್ಮಜ ಸಂಸೇವಿತೆಯ ಭೂಜಾತೆಯ ಜನಕಸುತೆಯ ಸೀತೆಯ ನಿಮಿಕುಲಪೂತೆಯ ತ್ರಿಜಗನ್ಮಾತೆಯ ಶುಭಗುಣಯುತೆಯ [ನಿಗೆ] 5 ತರುಣಿ ಕುಲಾಂಬುಧಿ ಸೋಮರಾಮ ತ್ರಿಭುವನ ಮೋಹನ ಶ್ಯಾಮ ವರದ ಶೇಷಾಚಲಧಾಮನ ಸತ್ಯವಿಕ್ರಮ ರಘುರಾಮನ ನೀ 6
--------------
ನಂಜನಗೂಡು ತಿರುಮಲಾಂಬಾ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮಾನವ ಸಿಂಗನಾದನು ಪ ರಂಗಮಾನವ ಸಿಂಗನಾಗಲು ಭಂಗಾರ ಗಿರಿಯ ಶೃಂಗಗಳಲ್ಲಾಡೆ ಹಿಂಗದೆ ಎಂಟು ಮಾತಂಗ ಸಪುತ ದ್ವೀ- ಪಂಗಳು ಕಂಪಿಸೆ ವಿಗಡದಿ ಅ.ಪ. ವನಜ ಭವನಂದನರಾನಂದದಿ ವನಧಿಯೊಳಿದ್ದ ವನಜನಾಭನ ವನಜಾಂಘ್ರಿ ದರುಶನಕ್ಕೋಸುಗದಿ ಘನ ವೈಕುಂಠ ಪಟ್ಟಣ ಸಾರೆ ವಿನಯರಲ್ಲದ ಜಯನು ವಿಜಯನವ- ರನು ತಡೆಯಲು ಮುನಿದೀರ್ವರಿಗೆ ದನುಜಾಂಗದಿಂದ ಜನಿಸಿರೋ ಎಂದು ಮುನಿಗಳು ಶಾಪವನ್ನು ಈಯೆ 1 ದಿಕ್ಕು ಎಂಟರೊಳು ಕಕ್ಕಸರೆನಿಸಿ ದಿಕ್ಕು ಪಾಲಕರ ಲೆಕ್ಕಿಸದಲೇವೆ ಸೊಕ್ಕಿ ತಿರುಗುವ ರಕ್ಕಸರಾಗಲು ಮುಕ್ಕಣ್ಣ ಬಲದಿಂದಕ್ಕೆ ಜದಿ ನಕ್ಕು ಪರಿಹಾಸ್ಯಕಿಕ್ಕಿ ಸರ್ವರನು ಮುಕ್ಕಿ ಮುಣಿಗಿ ಧರ್ಮಕೆ ವಿರೋಧಿಸಿ ಸಿಕ್ಕದಂತಲ್ಲಲ್ಲಿ ತುಕ್ಕುತಿರೆ 2 ಇತ್ತ ಶಾಪದಿಂದಲಿತ್ತಲೀರ್ವರಿಗಾ ಪೊತ್ತ ಸುರಾಂಗದಲಿತ್ತಲೋರ್ವವನಿಯು ಕಿತ್ತು ಒಯ್ಯಲು ಬೆಂಬುತ್ತಿ ಹರಿಯು ಕೊಲ್ಲೆ ಇತ್ತ ಹಿರಣ್ಯನುನ್ಮತ್ತದಿಂದ ಸುತ್ತುತಿರುವಾಗ ಪುತ್ರನು ಭಾಗವ ತ್ತೋತ್ತಮನಾಗಿ ಸರ್ವೋತ್ತಮ ಬ್ರಹ್ಮನ ಕರವ ಲೋ- ಕತ್ರಯವರಿವಂತೆ ಬಿತ್ತಿದನು3 ಸೊಲ್ಲು ಕೇಳುತಲಿ ಎಲ್ಲೆಲೊ ನಿನ್ನ ದೈ- ವೆಲ್ಲೊ ಮತ್ತಾವಲ್ಲೆಲ್ಲಿಹನೆನುತಲಿ ನಿಲ್ಲದರ್ಭಕನ್ನ ಕಲ್ಲು ಕೊಳ್ಳಿ ಮುಳ್ಳು ಕರವಾಳ ಬಿಲ್ಲು ನಾನಾ ಎಲ್ಲ ಬಾಧೆಯನ್ನು ನಿಲ್ಲದೆ ಬಡಿಸೆ ಎಳ್ಳನಿತಂಜದೆ ಎಲ್ಲೆಲ್ಲಿಪ್ಪನೆಂದು ಸೊಲ್ಲನು ಬೇಗದಿ ಸಲ್ಲಿಸೆನೆ 4 ಏನು ಕರುಣಾಳೊ ಏನು ದಯಾಬ್ಧಿಯೊ ಏನು ಭಕ್ತರಾಧೀನನೊ ಏನೇನು ನಾನಾ ಮಹಿಮನೊ ಏನೇನೊ ಏನೊ-ಈ- ತನ ಲೀಲೆ ಕಡೆಗಾಣರಾರೊ ದಾನವಾಭಾಸನ ಮಾನಹಾನಿ ಗೈಯೆ ಸ್ಥಾಣು ಮೊದಲಾದ ಸ್ಥಾನದಲ್ಲಿ ಸರ್ವ ದೀನರಿಗೆ ದತ್ತ ಪ್ರಾಣನಾಗ 5 ತುಟಿಯು ನಡುಗೆ ಕಟ ಕಟ ಪಲ್ಲು ಕಟನೆ ಕಡಿದು ನೇಟನೆ ಚಾಚುತ ಪುಟಪುಟ ನಾಸಪುಟದ ರಭಸ ಕಠಿನ ಹೂಂಕಾರ ಘಟುಕಾರ ನಿಟಿಲನಯನ ಸ್ಫುಟಿತ ಕಿಗ್ಗಿಡಿ ಮಿಟಿಯೆ ಹುಬ್ಬಿನ ನಿಟಿಲ ರೋಷದಿ ಮಿಟಿಯೆ ಚಂಚು ಪುಟದಂತೆ ರೋಮ ಚಟುಲ ವಿಕ್ರಮುದ್ಧಟ ದೈವ 6 ನಡುಕಂಭದಿಂದ ಒಡೆದು ಮೂಡಿದ ಕಡು ದೈವವು ಸಂಗಡಲೆ ಚೀರಲು ಬಡ ಜೀವಿಗಳು ನಡುಗಿ ಭಯವ ಪಡುತಲಿ ಬಾಯ ಬಿಡುತಿರೆ ಕಡೆಯೆಲ್ಲೊ ಹೆಸರಿಡಬಲ್ಲವರಾರೊ ತುಡುಗಿ ದುಷ್ಟನ ಪಡೆದ ವರವ ಪಿಡಿದು ಅವನ ಕೆಡಿಸಿ ಹೊಸ್ತಿಲೊ- ಳಡಗೆಡಹಿದನು ಪವಾಡದಲಿ 7 ವೈರಿಯ ಪಿಡಿದು ಊರುಗಳಲ್ಲಿಟ್ಟು ಘೋರ ನಖದಿಂದ ಕೊರೆದು ಉದರವ ದಾರುಣ ಕರುಳಹಾರ ಕೊರಳಲ್ಲಿ ಚಾರುವಾಗಿರಲು ಮಾರಮಣ ಸಾರಿಗೆ ಭಕ್ತಗೆ ಕಾರುಣ್ಯಮಾಡಿ ಶ್ರೀ ನಾರೀಶನಾನಂದದಿ ತೋರುತಿರೆ ಸುರ- ವರರ್ನೆರೆದು ಅಪಾರ ತುತಿಸಿ ಪೂ- ಧಾರೆ ವರುಷ ವಿಸ್ತಾರೆರೆಯೆ 8 ನೃಕೇಸರಿಯಾಗೆ ಭಕುತಗೆ ಬಂದ ದುಃಖವ ಕಳೆದು ಸುಖವನೀವುತ್ತ ಅಕಳಂಕದೇವ ಲಕುಮಿಪತಿ ತಾ- ರಕ ಮಂತ್ರಾಧೀಶ ಸುಕುಮಾರ ಅಖಿಳ ಲೋಕಪಾಲಕ ಪ್ರಹ್ಲಾದಗೆ ಸಖನಾಗಿ ಇಪ್ಪ ಸಕಲ ಕಾಲದಿ ಭಂಜನ ವಿಜಯವಿಠ್ಠಲ ಮುಕುತಿ ಈವ ಭಜಕರಿಗೆ9
--------------
ವಿಜಯದಾಸ
ರುದ್ರದೇವರು ಪರಿ ವೈರಾಗ್ಯವು ವೀರ ವೈಷ್ಣವ ಭಕ್ತಾಗ್ರಣಿಯೆ ಪ ಮಾರಹರನೆ ಮನ್ಮಥನ ವೈರಿಯೆ ಮನ- ಸಾರ ಶ್ರೀರಾಮ ನಾಮವ ಜಪಿಸುವದಿದು ಅ,ಪ ಮುತ್ತು ಮಾಣಿಕ್ಯದ ಕಿರೀಟವು ಧರಿಸದೆ ನೆತ್ತಿಲಿ ಕೆಂಜೆಡೆ ಸುತ್ತಿಹುದು ಹಸ್ತದಿ ಶಂಖು ಚಕ್ರಗದೆ ಪದುಮವು ಬಿಟ್ಟು ಉತ್ತಮ ಡಮರು ತ್ರಿಶೂಲ ಪಿಡಿವುದಿದು 1 ನೊಸಲಲಿ ಕಸ್ತೂರಿ ತಿಲಕವನಿಡದಲೆ ಭಸುಮವ ಲೇಪಿಸುವುದು ತರವೆ ಕುಸುಮಲೋಚನೆ ಪ್ರಿಯ ಸಖನಾಗಿರುತಿರೆ ಎಸೆವ ಕಪಾಲ ಪಿಡಿದು ಬೇಡುವದಿದು 2 ದುಂಡು ಮುತ್ತಿನ ಹಾರ ಪದಕಗಳಿರುತಿರೆ ರುಂಡಮಾಲೆಯ ಕೊರಳೊಳು ತರವೆ ತಂಡ ತಂಡ ಪರಮಾನ್ನ ಭಕ್ಷಗಳಿರೆ ಉಂಡು ತೇಗದೇ ವಿಷಪಾನ ಮಾಡುವದಿದು3 ಭರ್ಜರಿ ಪೀತಾಂಬರ ಉಡುವುದು ಬಿಟ್ಟು ಕರಿಯ ಚರ್ಮನುಡುವುದು ತರವೆ ಪರಿ ರತ್ನಾಭರಣಗಳಿರುತಿರೆ ಉರಗಗಳಿಂದಲಂಕೃತನಾಗಿರುವದು 4 ಭೃತ್ಯರು ಸೇವೆಗೆ ಬೇಕಾದವರಿರೆ ಮತ್ತೆ ಪಿಶಾಚ ಗಣಗಳೇತಕೆ ಹಸ್ತಿ ತುರಗ ಪಲ್ಲಕ್ಕಿ ಪುಷ್ಪಕವಿರೆ ಎತ್ತನೇರಿ ಚರಿಸುವುದುಚಿತವೆ ಶಂಭೊ 5 ಸಿರದಲಿ ಗಂಗೆಯು ಸ್ಥಿರವಾಗಿರುತಿರೆ ಪರ್ವತರಾಜಕುವರಿಯೇತಕೆ ಅರಮನೆ ವಾಸಕೆ ಯೋಗ್ಯವಾಗಿರುತಿರೆ ಗಿರಿ ಕೈಲಾಸ ಪರ್ವತದಿ ವಾಸಿಸುವದು 6 ಭಕ್ತರು ಭಕುತಿಲಿ ಪಾಡಿ ಕೊಂಡಾಡಲು ನೃತ್ಯವ ಮಾಡುತ ಹರುಷದಲಿ ಕರ್ತೃ ಶ್ರೀ ಕಮಲನಾಭ ವಿಠ್ಠಲನೆಂದು ಪತ್ನಿಗೆ ಉಪದೇಶ ಮಾಡುವದಿದು 7
--------------
ನಿಡಗುರುಕಿ ಜೀವೂಬಾಯಿ
ಶರಧಿ ಗಂ ಭೀರ ದಯಾಸಾರ ವಾರಿಜಾಕ್ಷ ಮುರಹರ ಸಖನಾಗಿಹ ಚಾರುಮಹಿಮ ನಿಟಿಲಾಂಬಕ ಪರಶಿವ ಪ ಸಿಂಧು ಮಥನದೊಳಗೆ ಕೈಲಾಸ ದಿಂದ ಬಂದನಿಳೆಗೆ ನಂದಿವಾಹನ ಗರಳವನೆಲ್ಲ ಭುಂಜಿಸಿ ಮಾರ 1 ವ್ಯೋಮಕೇಶ ದೇವಾ ಸುಜನರ ಸ್ತೋಮವನು ಕಾವಾ ಕಾಮಿತಾರ್ಥ ವರಗಳನಿತ್ತು ಸಲಹುವ ಸೋಮಶೇಖರ ಕರ್ಪೂರಧಲಾಂಗಾ 2 ಸುರನರೋರಗ ಪಾಲಾ ಸಜ್ಜನ ಪೊರೆವ ಪುಣ್ಯಶೀಲಾ ಗುರುವಿಮಲಾನಂದ ಭರಿತ ಕುಶಸ್ಥಳ ಪುರನಿವಾಸ ಶ್ರೀ ಮಹಾಂಗಿರೀಶ ಮಹಾರುದ್ರ 3
--------------
ಭಟಕಳ ಅಪ್ಪಯ್ಯ
ಶುಭ ಜಯತು ಶುಕಪ್ರೀಯಾಕಾಯಯ್ಯ ಕವಿಗೇಯ ಮಹರಾಯಾ ಪ ಜಗದೀಶ ಸಖನಾಗಿ ಶಸ್ತ್ರಾಸ್ತ್ರವನೆ ಕೈಗೊಂಡುಜಯಶೀಲನೆಂದೆನಿಸಿ ಜಗದೊಳಗೆ ಮೆರೆದೆ ಜಯ ಭೀಮರಾಯನು ಈ ಮೇದಿನೀ ಸ್ಥಳಕ್ಕೆ ಬರಲು ಅಸಮ ಪಶು ಎಂದೆನಿಸಿ ಸೇವಿಸಿದಿ ನಿತ್ಯಾ ಸತ್ಯಾ 1 ಮಣಿ ಸರ್ವಜ್ಞರಾಯರು ವಿರಚಿಸಿದ ಗ್ರಂಥಗಳನಿರೇ ಸಜ್ಜನರಿಗೆ ಸುಜ್ಞಾನವನು ತೋರಿ ಸುಜ್ಞಾನಿಗಳವಾಗ್ಬಾಣದಿಂದರಿದ್ಯೋ ತರಿದ್ಯೊ 2 ಶಿರಿದೇವಿ ವರಬಲದಿ ಆಗಮಾದ್ರಿಯ ಮಥಿಸಿಸತ್ಸುಖಾ ತೆಗೆದು ಸಾಧುಗಳಿಗಿತ್ತೇಮಳಾಪುರಿನಿಲಯ ಪವನೇಶತಂದೆವರದಗೋಪಾಲವಿಠ್ಠಲನ ದೂತಾ ಖ್ಯಾತಾ ದಾತಾ 3
--------------
ತಂದೆವರದಗೋಪಾಲವಿಠಲರು
ಶ್ರೀ ಭಾರತೀದೇವಿ ಎಂತು ನೀವಶವಾದಿಯೇ ಭಾರತಿದೇವಿ ಎಂತು ನೀ ಮರುಳಾದಿಯೆ ಪ ಕಂತು ಹರನ ತಾಯಿ ದಂತಿಗಮನೆ ದಮಯಂತಿ ಕಾಂತಸುತೆ ಅ.ಪ ಧರೆಯೊಳು ಪುಟ್ಟುತಲಿ | ಆಕಾಶಕ್ಕೆ ಭರದಿಂದ ಜಿಗಿಯುತಲಿ ಸರಸಿಜ ಸಖನಾದ | ತರಣಿಯ ಫಲವೆಂದು ಅರಿತು ಭಕ್ಷಿಸಲ್ಹೋದ | ತರು ಚರ ರೂಪಿಗೆ 1 ಪುಂಡರೀಕಾಕ್ಷ ಕೇಳಿ | ದ್ವಾಪರದಿ ಪ್ರಚಂಡಗೆ ಒಲಿಯುತಲಿ ಭಂಡ ಬಕನ ಶಿರದಿಂಡು ಗೆಡಹಿ ಅವನ ಭಂಡಿ ಓದನವನ್ನು ಉಂಡ ಪುಂಡಗೆ ಮಾತೆ 2 ಶ್ರೀ ಶಾಮಸುಂದರನೇ ತ್ರೈಲೋಕ್ಯಕ್ಕೆ ಈಶನೆಂಬುದು ತಾನು ಲೇಸಾಗಿ ಪೇಳಲು | ಲೇಶವಾದರು ನಿನ್ನ ಆಶೆ ಇಲ್ಲದೆ ಸನ್ಯಾಸಿ ಆದವನಿಗೆ 3
--------------
ಶಾಮಸುಂದರ ವಿಠಲ
ಶ್ರೀನಾಥ ವಿಠಲ ಹರಿ | ನೀನೆ ಪೊರೆ ಇವನಾ ಪ ಮಾನನಿಧಿ ಮಧ್ವಾಖ್ಯ | ವಂದಿತ ಸಂಚರಣಾ ಅ.ಪ. ಯೋನಿ ಆನೇಕದಲಿ | ಜನುಮಗಳ ತಾಪೊತ್ತುಮೌನಿ ಜನ ಸಂಯೋಗ | ಸತ್ಸಂಗಗಳ ಪಡೆದೂಧ್ಯಾನ ಸಾಧನಕಾಗಿ | ಮೌನಿರಾಯರ ಸೇವೆಸಾನುರಾಗದಿ ಗೈಯ್ಯೆ | ಶ್ರೀನಾಥ ಒಲಿದೇ 1 ದಾಸ ಸತ್ಪಂಥಾನು | ವಾಸಿಪೆನು ಎಂದೆನುತವಿೂೀಸಲದ ಸನ್ಮನದಿ | ಪ್ರಾರ್ಥಿಸುತ್ತಿಹಗೇಲೇಸು ತೈಜಸನಾಜ್ಞೆ | ಪೋಷಿಸುತ ವಿಠಲನ ಸಸೂಸಿ ಸೇವಿಸಿ ಇತ್ತೆ | ಅಂಕಿತವನಿವಗೇ 2 ಮಾರಾರಿ ಸದ್ವಿನುತ | ತಾರತಮ್ಯವ ತಿಳಿಸಿಮಾರೆರಡು ಭೇಧಗಳ | ಅರಹುತಲಿ ಇವಗೇಪಾರಗಾಣಿಸು ಭವವ | ನೀರೋಜೋದ್ಭವನಯ್ಯಕಾರುಣಿಕ ಶ್ರೀಹರಿಯೆ | ಕಾರುಣ್ಯ ಮೂರ್ತೇ 3 ಸಖನಾಗಿ ಇವನಲ್ಲಿ | ಸುಖ ಕವನ ಪೇಳಿಸುತ ಪ್ರಕಟ ಗೈ ತವರೂಪ | ನಿಕಟ ಹೃದ್ಗುಹದೀವಿಖನಸಾಂಡದ ಓಡೆಯ | ಸಕಲ ಪ್ರೇರಕ ನಿನ್ನಅಕುಟಿಲದೆ ಮನದಿಂದ | ಪ್ರಾರ್ಥಿಸುವೆ ಹರಿಯೇ 4 ಸಿರಿ ಭೂಮಿ ರಮಣನೇಅರಹಲೇನಿಹುದಿನ್ನು | ಸರ್ವಜ್ಞ ಮಾರ್ತೇಕರುಣ ದೃಷ್ಟಿಲಿ ನೋಡಿ | ಪರಿಹರಿಸೊ ದುಷ್ಕರ್ಮಹರಿಯೆ ಗುರು ಗೋವಿಂದ | ವಿಠಲ ಮಾರುತಿಯೆ 5
--------------
ಗುರುಗೋವಿಂದವಿಠಲರು
ಸಂಜೀವ ದೀಪ್ತಿಪೂರ್ಣ ಪ. ದೇವ ದೇವರದೇವ ನೀನಹುದೊದೇವಕಿಯೊಳವತರಿಸಿ ಗೋಕುಲವನ್ನುಪಾವನ ಮಾಡಿ ಮಡುಹಿಮಾವನ ಮಧುರಾವನಿಯ ಉಗ್ರಸೇನನಿಗಿತ್ತು ದೈ -ತ್ಯಾವಳಿಯ ಸವರಿಜೀವಸಖನಾಗಿ ಪಾಂಡವರೊಳ್ಪಾರ್ಥಸೇವೆ ಕೈಕೊಂಡು ತರಿದು ಕೌರವರ ದ್ವಾ-ರಾವತಿಯಿಂದ ಹಯಮೇಧಕ್ಕೆ ಬಂದದೇವ ನೀನಹುದೊ 1 ಧರ್ಮಾರ್ಜುನರೆಜ್ಞತುರಗರಕ್ಷಕ ಕೃತ-ವರ್ಮಾದ್ಯರುಗೂಡಿ ನಡೆದು ನಿಲ್ಲುತ್ತಮರ್ಮವರಿದು ಮುರಿದು ಹಂಸಧ್ವಜನಧರ್ಮವನು ತಡೆದುಕರ್ಮವಶದಿಂದ ಬಭ್ರುವಾಹನ ಕೈಯ್ಯಾದುರ್ಮರಣವಾದ ವಿಜಯ ಕರ್ಣಾತ್ಮಜಗೆಪೆರ್ಮೆಯಿಂದಸುವಿತ್ತು ಪೊರೆದ ನಿತ್ಯನಿರ್ಮಲಾತ್ಮನಹುದೊ2 ಪಿಂತೆಬಾಹರ್ಜುನರ ಕಂಡು ತಾಮ್ರಧ್ವ -ಜಂ ತಡೆಯೆ ಬಡದ್ವಿಜನಾಗಿ ಶಿಖಿಕೇತು-ವಂ ತಾನು ಬೇಡಿ ವೀರವರ್ಮನ ಗೆಲಿದುಕುಂತಳೇಂದ್ರಗೊಲಿದುದÀಂತಿಪುರಕ್ಕವರನು ತಂದು ಹಯಮೇಧವಂತು ಮಾಡಿಸಿ ಮೈದುನರ ಕಾಯ್ದಹೊಂತಕಾರಿ ಹಯವದನನೆ ಶ್ರೀ ಲಕ್ಷೀ -ಕಾಂತ ನೀನಹುದೊ 3
--------------
ವಾದಿರಾಜ
ಸಿರಿ ಪಾರ್ಥಸಖನಾ ಗುಣಕೀರ್ತನೆ ಮಾಡಲು ಪ ಯಂಟೆಂಟೆರಡುನಾಲ್ಕು ಸಾವಿರ ನುಡಿಯಲಿ ಯಂಟೆಂಟೆರಡು ರೂಪದಲಿ ಯಂಟೆಂಟೆರಡು ಮೂರೈದು ವ್ಯಂಜನದಿ ಯಂಟೆಂಟು ಮತ್ತೆಂಟು ಸ್ವರವ ತಿಳಿ 1 ಕಮಲ ಕರ್ಣಿಕೆಯಲ್ಲಿ ಯಂಟೆಂಟೆರಡರ ನಾಲ್ಕು ಸ್ತಂಭರಥ ಮಂಟಪದೊಳಗಿನ ವೆಂಕಟನ ನೋಡು2 ಯಂಟೆಂಟು ಕರಗಳಲಿ ಯಂಟಾಯುಧ ಪಿಡಿದು ಯಂಟು ದಿಕ್ಕಿನಲಿ ತಿರುಗುತಲಿ ಯಂಟು ವಿಧದಿ ಪ್ರೇರಣೆ ಮಾಡುವ ನಮ್ಮಾ ನೆಂಟ ತಂದೆಗುರುಗೋಪಾಲವಿಠಲನು 3
--------------
ಗುರುತಂದೆವರದಗೋಪಾಲವಿಠಲರು
ಕರುಣಿಸೋ ರಂಗಾ ಕರುಣಿಸೋ ಪಇರುಳು ಹಗಲು ನಿನ್ನ ಸ್ಮರಣೆ ಮರೆಯದಂತೆ ಅ.ಪರುಕುಮಾಂಗದನಂತೆ ವ್ರತವನಾನರಿಯೆನುಶುಕಮುನಿಯಂತೆ ಸ್ತುತಿಸಲರಿಯೆ ||ಬಕವೈರಿಯಂತೆ ಧ್ಯಾನವ ಮಾಡಲರಿಯೆ ದೇವಕಿಯಂತೆ ಮುದ್ದಿಸಲರಿಯೆನು ರಂಗಾ 1ಗರುಡನಂತೆ ಪೊತ್ತು ತಿರುಗಲರಿಯೆ ನಾನುಕರಿರಾಜನಂತೆ ಕರೆಯಲರಿಯೆ ||ಮರಕಪಿಯಂತೆ ಸೇವೆಯ ಮಾಡಲರಿಯೆನುಸಿರಿಯಂತೆ ನಿನ್ನ ಮೆಚ್ಚಿಸಲರಿಯೆ ರಂಗಾ 2ಬಲಿಯಂತೆ ದಾನವ ಕೊಡಲರಿಯೆನು ಭಕ್ತಿಛಲವನರಿಯೆ ಪ್ರಹ್ಲಾದನಂತೆ ||ಒಲಿಸಲರಿಯೆ ಅರ್ಜುನನಂತೆ ಸಖನಾಗಿಸಲಹೋ ದೇವರದೇವಪುರಂದರವಿಠಲ3
--------------
ಪುರಂದರದಾಸರು