ಒಟ್ಟು 25 ಕಡೆಗಳಲ್ಲಿ , 11 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಭಜಿಸೊ ಮನವೆ ಪೂರ್ಣ ಅಜಸುರೊಂದಿತ ಚರಣ ಸುಜನ ಹೃದಯ ಪ್ರಾಣ ಗಜಭಯ ನಿವಾರಣ 1 ಹಿಡಿಯ ಬ್ಯಾಡನುಮಾನ ಜಡಿಯೊ ನಿಜಧ್ಯಾನ ಅಮೃತ ಪೂರ್ಣ 2 ಸಾಧಿಸಬೇಕೊಂದೇ ಮನ ಬುಧಜನರ ಜೀವನ ಸದಮಲಾನಂದ ಸದ್ಗತಿ ಸುಖಸಾಧನ 3 ಪಾವನಗೈಸುವದಾ ಭಾವಿಸೊ ಗುರುಪಾದ ಬೋಧ ಸೇವಿಸು ನಿಜ ಸುಸ್ವಾದ 4 ತ್ಯಜಿಸಿ ತನುಮನ ದ್ವಂದ್ವ ಭಜಿಸೊ ಭಾವಾರ್ಥದಿಂದ ಪೂಜಿಸೊ ಮಹಿಪತಿ ಆನಂದ ನಿಜಗುರು ಪಾದಾರವಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಹಾನುಭಾವರೇ ಪ ಸದಮಲಾನಂದ ಪಡಿರೋ ನಮ್ಮವರೇ ಮೊದಲು ವಂದನೆ ಹರಿಗೆ ಅರ್ಪಿಸಿ ಅ.ಪ ಪದುಮನಾಭನ ಸದಮಲಂಘ್ರಿಯ ಅಧಿಕ ನಿಖಿಳದೇವರೊಳಗೆಂದು ಕದಲಗೊಡದಂತೆ ಮನವ ನಿಲ್ಲಿಸಿ ವದನದಿಂ ವಿಧವಿಧದಿ ಪೊಗಳುತ 1 ಆದಿ ಅಂತ್ಯಿಲ್ಲದಾದಿವಸ್ತು ಸಾಧುಸಜ್ಜನಪ್ರೇಮಪೂರ್ಣೇಂದು ವೇದ ವೇದಾಗಮ್ಯ ಮಹ ಪಾದ ಮೇಲೆಂದು 2 ನಿಗಮ ಆಗಮಗಳಿಗೆ ನಿಲುಕದ ಸುಗುಣಸಂತರ ಕರುಣಮಂದಿರ ಬಗೆದು ಭಕುತರ ಭಾವ ನೀಡಲು ರಘು ಶ್ರೀರಾಮಗೆ ಸಾಟಿಯಿಲ್ಲೆಂದು 3
--------------
ರಾಮದಾಸರು
ಶ್ರೀಹರಿಶರಣರು ನಮ್ಮವರು ಭವ ಶರಧಿಯ ಜಿಗಿದರು ನಮ್ಮವರು ಪ ಪರಮನ ಚರಣದಿ ಅರಿವಿಟ್ಟುರತರ ದುರಿತದಿಂದುಳಿದರು ನಮ್ಮವರು ಅ.ಪ ನಿತ್ಯತೃಪ್ತರು ನಮ್ಮವರು ಜಗ ಮಿಥ್ಯೆಂದರಿತರು ನಮ್ಮವರು ನಿತ್ಯ ಸರ್ವೋತ್ತಮ ಹರಿಯೆಂಬ ವೃತ್ತಿ ಬಲಿಸಿದರು ನಮ್ಮವರು 1 ಸತ್ತು ಚಿತ್ತರು ನಮ್ಮವರು ಮಹ ನಿತ್ಯ ಮುಕ್ತರು ನಮ್ಮವರು ಮುಕ್ತಿದಾಯಕನಂ ಗುರ್ತಿಟ್ಟರಿಯುವ ಸತ್ವ ಕಾಲಗಳು ನಮ್ಮವರು 2 ನಿರ್ಮಲಾತ್ಮಕರು ನಮ್ಮವರು ನಿಜ ಧರ್ಮ ನಿರತರೈ ನಮ್ಮವರು ಬೊಮ್ಮನಯ್ಯನ ಮರ್ಮ ತಿಳಿದು ದು ಷ್ಕರ್ಮವ ಗೆಲಿದರು ನಮ್ಮವರು 3 ದೋಷದೂರರು ನಮ್ಮವರು ನಿ ರಾಸೆ ತಾರರು ನಮ್ಮವರು ಹೇಸಿದೈವಗಳ ಆಶಿಸಿ ಬೇಡದ ಕೇಶವನ ದಾಸರು ನಮ್ಮವರು 4 ಭಜನಾನಂದರು ನಮ್ಮವರು ಸ್ಥಿರ ನಿಜ ಪದವರಿದರು ನಮ್ಮವರು ಕುಜನ ಕುಹಕಿಗಳ ಗಜಿಬಿಜಿಗಳುಕದೆ ಸುಜನರೆನಿಸಿದರು ನಮ್ಮವರು 5 ಭೂರಿ ಶೀಲರು ನಮ್ಮವರು ದುಷ್ಟ ಕೇರಿಯ ಮೆಟ್ಟರು ನಮ್ಮವರು ಸಾರಸಾಕ್ಷನ ಸವಿಸಾರವರಿದು ಪಾದ ಸೇರಿಕೊಂಡಿರುವರು ನಮ್ಮವರು 6 ಸದಮಲಾನಂದರು ನಮ್ಮವರು ದು ರ್ಮದವ ನೂಕಿದರು ನಮ್ಮವರು ಅಧಮತನದಲಿಂದೊದರುವ ಹೊಲೆಯರ ಎದೆಯ ತುಳಿವರೈ ನಮ್ಮವರು 7 ಮೋಸಕೆ ಸಿಲ್ಕರು ನಮ್ಮವರು ಯಮ ಪಾಶವ ಗೆಲಿದರು ನಮ್ಮವರು ಈಶನ ತಿಳಿದರು ನಮ್ಮವರು 8 ಸುಗಣ ಸಂತರು ನಮ್ಮವರು ಮಹ ಭಗವದ್ಭಕ್ತರು ನಮ್ಮವರು ರಘು ಶ್ರೀರಾಮ ಜಗಸರ್ವೋತ್ತಮೆಂದು ಪೊಗಳುತ ನಲಿವರು ನಮ್ಮವರು 9
--------------
ರಾಮದಾಸರು
ಸಾಧಿಸದೆ ಹೊಳೆಯ ಹೃದಯದೊಳಿಹ್ಯ ಗೆಳಿಯ ಧ್ರುವ ಸಾಧಿಸಬೇಕೊಂದು ಪಾಲ ಭೇದಿಸಿ ನೋಡುವದ್ಹತ್ತುಪಾಲ ಎದುರಿಡುವಂತೆ ಗೋಪಾಲ ಬುಧಜನ ಪ್ರತಿಪಾಲ 1 ಸಾಧನವೆಂಬುದೆ ಸುಪಥ ಬೋಧವೆ ಸದ್ಗುರುಮಾರ್ಗ ಸ್ವಹಿತ ಸದಮಲಾನಂದಭರಿತ ಇದೇ ಶಾಶ್ವತ 2 ಸಾಧಿಸಿ ಸದ್ಗುರು ಕೃಪೆಯಿಂದ ಭೇದಿಸು ಮಹಿಪತಿ ನಿನಗಿಂದು ಚೆಂದ ಹೃದಯದೊಳ್ಹಾನ ಮುಕುಂದಬದಿಯಲಿ ಗೋವಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧು ಸಮಾಗಮ ಸಾಧನಕುತ್ತಮೋತ್ತಮ ಸಾಧಿಸಿದವ ಸಕಲಕ ನಿಸ್ಸೀಮ ಧ್ರುವ ಸಾಧು ಸುದರುಶನ ಸದಮಲಾನಂದ ಪೂರ್ಣ ಸದಾ ಸದ್ಗೈಸುವ ಸುಖಸಾಧನ 1 ಸಾಧು ಸಂಭಾಷಣ ಸುಧಾರಸ ಪ್ರಾಶನ ಸದೋದಿತ ಸಹಿತ ಭೂಷಣ2 ಸದಾ ಸಕಾಲದಲಿ ಮಹಿಪತಿಗಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧು ಸಹವಾಸ ಸದಮಲಾನಂದ ಸಂತೋಷ ಧ್ರುವ ಇದ್ದರಿರಬೇಕು ನೋಡಿ ಅಧ್ಯಕ್ಷರಾಶ್ರಯ ನಿಜಗೂಡಿ ಸಿದ್ಧಿ ಬಾಹುದು ಎದುರಿಡಿ ಇದ್ದದ್ದೆ ಕೈಗೂಡಿ 1 ಒಡಲು ಹೊಕ್ಕರವನೆ ಕೂಡಿ ಪಡೆದು ಸ್ವಸುಖ ಸೂರ್ಯಾಡಿ ದೃಢಭಾವನೆ ಮಾಡಿ 2 ಸಾಧಿಸಿ ಮಹಿಪತಿ ನಿಜ ಭೇದಿಸಿ ನೋಡನುಭವದ ಬೀಜ ಆದಿ ಅನಾದಿ ಸಹಜಬೋಧದ ನಿಜಗುಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಧ್ವರಾಯರ ನೆನೆದು ಶುದ್ಧರಾಗಿರೊ |ಹೊದ್ದಿ ವೈಷ್ಣವ ಮತಭವಾಬ್ಧಿದಾಟಿರೋಪಉದಯದಲಿ ಏಳುವಾಗ ನದಿಯ ಸ್ನಾನ ಮಾಡುವಾಗಒದಗಿನಿತ್ಯಕರ್ಮಗಳನು ನಡೆಸುವಾಗ ||ಹೃದಯದಲಿ ಬೀಜಾಕ್ಷರ ಮಂತ್ರಗಳನು ಜಪಿಸುವಾಗಸದಮಲಾನಂದ ಹನುಮನನ್ನು ನೆನೆಯಿರೊ 1ಕಾಮವಿಲ್ಲದ ಹರಿಯ ಪೂಜೆ ವೈಶ್ವದೇವ ಮಾಡುವಾಗಪ್ರೇಮದಿಂದ ವೈಷ್ಣವರು ಅರ್ಚಿಸುವಾಗ ||ಆ ಮಹಾ ಭಕ್ಷ್ಯಭೋಜ್ಯ ಆರೋಗಣೆ ಮಾಡುವಾಗನೇಮದಿಂದ ಕೌರವಾಂತಕ ಭೀಮಸೇನನ ನೆನೆಯಿರೊ 2ಕರಗಳನ್ನು ತೊಳೆದು ತೀರ್ಥ ತುಳಸೀದಳವ ಮೆಲ್ಲುವಾಗಪರಿಪರಿಯ ಪುಷ್ಪವೀಳ್ಯ ಅರ್ಪಿಸುವಾಗಸರುವಾಂತರ್ಯಾಮಿ ಗುರುಮಧ್ವರಂತರಾತ್ಮಕಪುರಂದರವಿಠಲಗೆ ಸಮರ್ಪಣೆ ಮಾಡಿರೊ3
--------------
ಪುರಂದರದಾಸರು
ಮಹಾಪುರುಷನೆತ್ತ ತಾನೆತ್ತಮಹಾಪುರುಷರ ಶ್ರೇಷ್ಠವೇನೆಂದು ಅರಿಯನುಪಕುದುರೆ ತಾನಹೆನೆಂದು ಕತ್ತೆ ಬೀದಿಯೊಳು ನಿಂತುಕುದುರೆ ಕುಣಿತವನು ಕುಣಿದ ತೆರದಿವಿಧವಿಧದ ಓದುವೋದಿ ಮಹಾಪುರುಷನಹೆನೆಂದರೆಸದಮಲಾನಂದರ ಸರಿತಾನು ಬಹನೇ1ಹುಲಿಯು ತಾನಹೆನೆಂದು ಹುರುಡಿರಿಗೆ ನರಿ ಮೈಯ್ಯಬಲವಂತದಿ ಸುಟ್ಟುಕೊಂಡ ತೆರದಿಹಲವು ಶಾಸ್ತ್ರವನೋದಿ ಮಹಾಪುರುಷನಹೆನೆಂದರೆಬಲು ಮಹಾತ್ಮರ ಸರಿತಾನು ಬಹನೇ2ಮಹಾಪುರುಷನೆಂಬಾತ ಮಹಾಸಮಾಧಿಯಲಿ ಮುಳುಗಿಮಹಾ ಚಿದಾನಂದಗುರುತಾನಾಗಿ ಇಹನುಮಹಾಪುರುಷತಾನೆಂದು ಕಾಪುರುಷ ಪೇಳಿದಡೆಮಹಾಪುರುಷ ಸರಿತಾನು ಬಹನೇ3
--------------
ಚಿದಾನಂದ ಅವಧೂತರು