ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನಸ ಕಂಡೆ ನಿನ್ನಿನಿರುಳೊಳು ಕೇಳುಕನಸಿನ ಸೊಗಸನು ತರಳೆಚಿನುಮಯಾತ್ಮಕ ಚಿದಾನಂದ ಅವಧೂತದಿನಕರ ಪ್ರಭಾತೀತ ಗುರುನಾಥ ಬಂದಿಹ ಪ ಕಾಶ ಕೌಪೀನವನುಟ್ಟು ಚೆಲ್ವಬಾಸುರ ಕುಂಡಲವಿಟ್ಟುಕೇಶದ ಜಡೆಗಳು ಥಳಥಳಿಸಲು ಸರ್ವಭೂಷಿತನಾಗಿ ತನ್ನೆದುರಿಗೆ ನಿಂತಿಹ 1 ನೆಟ್ಟನೆ ನಡುಮನೆಯೊಳು ತಾನುನೆಟ್ಟನೆ ಬಂದು ಕುಳಿತಿಹನುಶಿಷ್ಟ ಮೂರುತಿ ತನ್ನ ಕಾಯಬೇಕು ಎಂದುಮುಟ್ಟಿ ಪಾದವ ನಾನು ಶರಣು ಮಾಡಲಿದ್ದೆ2 ಸುಂದರ ಕಳೆಯುಳ್ಳ ಸ್ವಾಮಿತಾನು ಸಿಂಧು ಕೃಪಾಕರನಾಮಿ ಎಂದಡಿಗಡಿಗೆ ಸಾಷ್ಟಾಂಗವೆರಗಿನಿಂದು ಪೂಜಿಸಿ ಕಣ್ತುಂಬ ನೋಡಿನಲಿವ 3 ನಾನಾ ಪೂಜೆಯನೆಲ್ಲವ ಮಾಡಿ ಗುರುಧ್ಯಾನದಿನಾನೋಲಾಡಿ ಮಾನವನಾಗಿನಾನು ನಿಂದಿರಲೆನ್ನ ಕಿವಿಯೊಳುನಾನು ನೀಗಿತ್ತೆಂದು ಉಪದೇಶ ನೀಡುವ4 ಈಪರಿ ಕನಸನು ಕಂಡು ಎಲ್ಲತಾಪವು ಪರಿಹಾರಗೊಂಡುಭೂಪ ಚಿದಾನಂದ ಅವಧೂತ ತಾನಾದರೂಪಾಗಿ ಬೆಳಗಿರೆ ಬೆಳಗಿರೆ ಬೆಳ್ಳನೆ ಬೆಳಕಿತ್ತು5
--------------
ಚಿದಾನಂದ ಅವಧೂತರು
ಕುಂಡಲಿಶಯನನ ಕೋದಂಡಧರನಾ ಮಂಡಲಾಧಿಪ ತ್ರಿ------- ಬಲವಂತನ ಪ ಪುಂಡರೀಕ ವರದನ ಪುರಾಣ ಪುರುಷನ ಪಂಡರಪುರ ನಿಲಯ ಭಕ್ತರ ಚಲನ 1 ದಂಡಿ ದಾನವರನ ಛೇದನ ಮಾಡಿದನ -------ಕರುಣಿಸಿ ಕಾಯ್ದನ 2 ಪುಂಡರಾವಣನ ಶಿರಗಳ ತರಿದನ ಅಂಡಸೇರಿ ಶರಣಂದನ ಕಾಯ್ದನ 3 ಮಾನವ ದಯಮಾಡಿ ಕಾಯ್ದನ ಕವಿಜನ ರಕ್ಷಕ ಘನ ಶ್ರೀಕೃಷ್ಣನ 4 ಭುವಿನಾಯಕನ ಪೂರ್ಣ ಪ್ರಭಾಕರನ ರಾಜೀವ ನೇತ್ರನ 5 ಲವಕುಶ ಜನಕನ ರಘುಕುಲ ಶ್ರೇಷ್ಠನ -------------------- 6 ಭವಸುರ ವಂದ್ಯನ ಪರಮಾನಂದನ ಕಲೆಯುಕ್ತ ಶಿರಸೂರನ 7 -----ನಾಭನ ಪಾಂಡವ ಪಕ್ಷನ ಮುದನೂರ ವಾಸನ ಮುನಿಜನವಂದ್ಯನ 8 ಯದುಕುಲ ಭೂಷಣನ ------- ವೇದಾಂತ ವೇದ್ಯನ ವಿಶ್ವರೂಪನ 9 ಹೆನ್ನಪುರನಿಲವಾಸ 'ಹೆನ್ನೆವಿಠ್ಠಲನ’ ನಿನ್ನ ------ ಶ್ರೀತ ಜನಪೋಷಕನ 10
--------------
ಹೆನ್ನೆರಂಗದಾಸರು
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ದಯಕಿಂತ ಗುಣವಿಲ್ಲ ನರಗೆ ದಯಕೆ ನಿರ್ಬಂಧವಿಲ್ಲಣ್ಣ ಜಗದಿ ಪ ಹೃದಯ ಮಂದಿರದಲಿ ನೆಲೆಸಿಹ ದಯೆಯು ಮೃದು ಮಳೆಹನಿ ತೆರದಲಿ ಸುರಿಯುವುದು ಅ.ಪ ಬಾರಿಯ ಸ್ಥಾನಕೆ ಈ ದಯೆ ಗುಣವು ಭಾರಿಯ ಶಕುತಿಯ ನೀಡುವುದು ಚಾರು ಕಿರೀಟವ ಮೀರಿದ ಕಾಂತಿಯ ಬೀರುವುದೀ ದಯೆ ನರಪತಿಗೆ 1 ರಾಜನ ದಂಡವ ನೋಡುತ ನೋಡುತ ಈ ಜಗವೆಲ್ಲವು ನಡುಗುವುದು ರಾಜನ ಕಾರ್ಯಗಳೆಲ್ಲಕೆ ದೈವಿಕ ತೇಜವ ಕೊಡುವುದು ದಯೆ ಗುಣವು 2 ನಶ್ವರವೆಲ್ಲವು ಪ್ರಾಕೃತವು ಈಶ್ವರ ಧರ್ಮವೆ ಈ ದಯೆಯು ಶಾಶ್ವತ ಧರ್ಮಗಳೆಲ್ಲವು ದಯದಿ ಮಿಶ್ರಿತವಾದರೆ ಸುಖಮಯವು 3 ಪರಮ ಪುರುಷ ದಯೆ ತೋರದಿರೆ ವರಗತಿ ಪಡೆಯಲು ನರಗಳವೆ ಕರುಣೆ ಪ್ರಸನ್ನನ ಮೊರೆ ಹೋಗದೆ ನೀ ಅರಿಯಲು ಸಾಧ್ಯವೆ ಕರುಣೆಯ ಬೆಲೆಯ 4
--------------
ವಿದ್ಯಾಪ್ರಸನ್ನತೀರ್ಥರು
ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ನಿತ್ಯ ಶುಭಮಂಗಳಂ ಪ ಬಂದು ಜಮದಗ್ನಿಗಳಿಗೊಲಿದು ಬಂದು ನಿಮ್ಮಯ ಸೇವೆ ಮಾಡಿದ ಭಕ್ತರಿಗೆ ಆ ನಂದ ಪದವಿಯನೀವ ಇಂದಿರೇಶನಿಗೆ 1 ಅಂದು ಗೌತಮಸತಿಯ ಇಂದ್ರನು ಮೋಹಿಸಿ ಬಂಧನಕ್ಕೊಳಗಾಗೆ ಬಂದು ನಿಮ್ಮ ಪಾದಸೇವೆಯ ಮಾಡೆ ಪಾಪವೆಲ್ಲವ ಕಳೆದು ಅಮರಪದವೀವ ನಿತ್ಯಪರಮಪುರಷನಿಗೆ2 ಇಂದ್ರಗಿರಿ ಮಹೇಂದ್ರತೀರ್ಥವೆಂದೆನುತ ಆ ನಂದದಿಂದಲೆ ಪ್ರವಾಸ ಮಾಡೀ ಬಂದು ಸ್ನಾನ ಪಾನ ಸೇವೆ ಮಾಡಿದವರ ಜಾರದೋಷದ ಕಳೆವ ಶ್ರೀನಿವಾಸನಿಗೆ 3
--------------
ಯದುಗಿರಿಯಮ್ಮ
ನಿನ್ನಂಥ ಕರುಣಿಗಳಿನ್ನುಂಟೆ ಭುವಿಯಲ್ಲಿ _ ಧನ್ವಂತರೇ ಪ ಚೆನ್ನ ಪ್ರಸನ್ನ ನೀನಾಗುತ ಇವಗಿನ್ನುಘನ್ನ ರೋಗವ ಕಳೆದುನ್ನುತ ಸುಖವೀಯೋ ಅ.ಪ. ಉಪಟಳ - ಕತ್ತರಿಸು ಶೀಘ್ರದೀಹಸ್ತ ಕಲಶಾಮೃತ - ಸ್ರವಿಸಿ ವೇಗದಿ ಅಪಮೃತ್ಯುವ ಹರಿಸಯ್ಯ - ಭಕ್ತಳ ಭರ್ತುವಿನ1 ಆರ್ತರುದ್ಧಾರಿಯೆ - ಭಕ್ತರ ಪರಿಪಾಲಕರ್ತ ಸಂಹರ್ತ - ಮೂರ್ಜಗಕೆಲ್ಲ ನೀನೇನಿತ್ಯಾನಿತ್ಯದ - ಜಗಕೆಲ್ಲ ಸ್ವಾಮಿಯೆಭೃತ್ಯಳ ಮಾಂಗಲ್ಯ - ಘಟ್ಟಿಯೆಂದೆನಿಸೋ 2 ಪ್ರಾಣ ಗುರು ಜಯ - ವಿಠಲ ದಾಸಿಯಪ್ರಾಣನಾಥನ ಪ್ರಾಣ - ಉಳಿಸುವುದೆನುತಪ್ರಾಣ - ಪ್ರಾಣನೆ ಎನ್ನ - ಬಿನ್ನಪವ ಜಗತ್ರಾಣ ಗುರು ಗೋವಿಂದ ವಿಠಲ - ಸಲ್ಲಿಸೋ 3
--------------
ಗುರುಗೋವಿಂದವಿಠಲರು
ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
ಪರಿ | ಪೋಷಿಸು ನೀ ಎನ್ನ | ಕರುಣಾರಸ ಪೂರ್ಣಾ ಪ ಶ್ರೀಶ ನೀನಲ್ಲದೆ | ಪೋಷಿಸುವರ ಕಾಣೇ | ಹುಸಿಯಲ್ಲ ಯನ್ನಾಣೆ ಅ.ಪ. ಗೋಪಿ ಜನರ ಪ್ರೀಯ | ಸುಮ್ಮನಿ ಜನ ಗೇಯಾಹೇ ಪರಮ ಪುರುಷ ತವ | ರೂಪ ಕಾಂಬುದೆಂದೂ | ಬಿನ್ನಪ ಸಲಿಸಿಂದೂ ||ಕಾಪಥ ಐಸದೆ | ಸುಪಧವ ನೀ ತೋರೋ | ಭಕುತ ಪೋಷ ಬಾರೋ |ದ್ರೌಪತಿಗಕ್ಷಯ | ವಸನವ ನೀನಿತ್ತು | ಕಳೆದೆಯೋ ಆಪತ್ತು 1 ಕಡಲ ಶಯನನೇ | ಮಡದಿ ಮಕ್ಕಳನ್ನ | ನಿನ್ನಡ್ಡಿಗ್ಹಾಕಿದೆನಿನ್ನಒಡಲಿಗಾಗಿ ದೈನ್ಯ | ಪಡಲಾರೆನೊ ಹರಿಯೇ | ಕೇಳೆನ್ನ ದೊರೆಯೇ ||ಮಡುವಿಲಿ ಮಕರಿಯ | ಬಿಡದೆ ಕಾಯ್ದ ಹರಿಯೇ | ಕರಿರಾಜನ ಪೊರೆಯೇಒಡಮೂಡಿ ಕಂಬದಿ | ದೃಡ ಭಕುತ ಜಂಗುಳಿಯ | ಪರಿಹರಿಸಿದೆ ಜೀಯ 2 ಪಾದ | ಲೀಲೆ ಬಹು ವಿನೋದ |ಪಾಪಿಯು ನಾ ನಿಜ | ಪಾವನ ನೀ ಕೇಳೋ | ನಾ ನಿನಗಡಿಯಾಳೋ ||ಗೋಪ ಗೋಪಿಯರ ಸ | ಲ್ಲಾಪಕೊಲಿದ ದೇವ |ಹೇ ಮಹಾನುಭಾವತಾಪ ಮೂರುಗಳ ಗುರು | ಗೋವಿಂದ ವಿಠಲ | ಪರಿಹರಿಪುದು ನಲ್ಲ 3
--------------
ಗುರುಗೋವಿಂದವಿಠಲರು
ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಭಜ ಭಜ ಮಾನಸ ಗರುಡತುರಂಗಂ ಅಜ ಸುರಸೇವಿತ ಪಾಂಡುರಂಗಂ ಪ ಗಜರಾಜಾನತ ಮೋಹನರಂಗಂ ವಿಜಯಧ್ವಜ ಶ್ರೀಪಾವನರಂಗಂ ಅ.ಪ ಗಿರಿಧರ ಮುರಹರ ಭೂವರ ರಂಗಂ ನರಕೇಸರಿ ಮುಖರಾಜಿತ ರಂಗಂ ವರಶುದ್ಧಾಚ್ಚುತ ಸುರುಚಿರ ರಂಗಂ ಪರಶಿವ ದಾನವ ವಿನಮಿತ ರಂಗಂ 1 ಸನಕ ಸನಂದನ ಮುನಿನುತ ರಂಗಂ ಹನುಮ ವಿಭೀಷಣ ಸನ್ನುತ ರಂಗಂ ಘನಮಣಿ ಮೌಕ್ತಿಕ ಶೋಭಿತ ರಂಗಂ ಜನಕ ಧರಾವಿವ ಪೂಜಿತ ರಂಗಂ 2 ಮಂಗಳದಾಯಕ ಶುಭಕರ ರಂಗಂ ಸಂಗರ ಧೀರ ಸುಧಾಕರ ರಂಗಂ ಗಂಗಾಜನಕ ಕೃಪಾಂಬುಧಿ ರಂಗಂ ಅಂಗಜ ಜನಕ ಶ್ರೀ ಮಾಂಗಿರಿ ರಂಗಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನ ದೂರುವರೆ ಪೇಳಮ್ಮಯ್ಯ ಪೋಕಬುದ್ಧಿಯ ಗೊಲ್ಲತಿ ಪೋಕ ಲೋಕಲೋಕದಿ ನೋಡೆ ನಾಕಾಣೆನೆಲ್ಲೆಲ್ಲೂ ಪ ಅಮ್ಮಯ್ಯ ನೀನಿಡುವೊ ಪಾಲ್ಬೆಣ್ಣೆಯ ಕಣ್ಣಿಂದ ನೋಡುವೆನೆ ಅಣ್ಣ ರಾಮರ ಕೇಳೆ ಎನ್ನಾಣೆ ಹುಸಿಯಲ್ಲ ಎನ್ನ ಪಣೆಯ ಲಿಖಿತ ಮುನ್ನ ಮಾಡಲಿ ಏನೆ 1 ದುಷ್ಟಹೆಂಗಳೇರಾಡುವೊ ಮಾತೊಂದು ನೀ ಗೊತ್ತು ಹಿಡಿಯ ಬ್ಯಾಡಮ್ಮ ಚಟ್ಟಿಗೆ ಬೆಣ್ಣೆಯ ಮೆಲುವೋದುಂಟಾದರೆ ಪುಟ್ಟಕೂಸಿನ ಹೊಟ್ಟೆಗೆ ದೃಷ್ಟಿತಾಗದು ಏನೆ 2 ಚೆಂಡನಾಡುವಾಗ ಇವರು ಎನ್ನ ಮುಂಗೈಯ ಪಿಡಿದುಕೊಂಡು ಗಂಡರಂಜಿಕೆಯಿಲ್ಲ ಗಾಡಿಕಾರ್ತಿಯರೆಲ್ಲ ಬಂಡು ಮಾತುಗಳಾಡಿ ಬಂದು ದೂರಿದರೇನೆ 3 ಸಣ್ಣ ಮಕ್ಕಳೊಡನೆ ಅಂಗಳದಿ ನಾ- ಚಿಣ್ಣಿಯನಾಡುವಾಗ ಬೆಣ್ಣೆಕೊಡುತೇವೆಂದು ಬಣ್ಣ ಬಣ್ಣದಿ ಎನ್ನ ಕಣ್ಣು ಸನ್ನೆಯ ಮಾಡಿ ಕರೆದರ್ಯಾತಕೆ ಕೇಳೆ 4 ಗೋಲಿ ಗುಂಡುಗಳಾಡುತ ನಿಂತಿರಲೆನ್ನ ಲೀಲೆಯಿಂದಲಿ ನೋಡುತ ಭೀಮೇಶಕೃಷ್ಣ ಬಾರೆಂದೆನ್ನ ಬಿಗಿದಪ್ಪಿ ಬಾಯ ತಂಬುಲಗಳ ಬೇಡಿ ಮಾತಾಡೋರು 5
--------------
ಹರಪನಹಳ್ಳಿಭೀಮವ್ವ
ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಪ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಹಳೆಯ ಬೊಮ್ಮನ ಬಳಿಯವಿಡಿದು | ಪಳಿಯ ಚಲುವ ತಿಳಿಯಗೊಡದೆ 1 ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | ಕ್ಕರದಿಂದ ತಾ | ವರ್ಕರಾಗಿ ನಿಂದೂ ತೆಕ್ರ್ಕೊರಂಗಯೆಂದು | ಜಿರ್ಕೊಳವಿಲಿಂದಲಿಕ್ಕಿದರು | ಸೊಕ್ಕಿದಾ ನೆಡಸಿ ಹೊಕ್ಕು ಎರಗಿದಂ | ತೊಕ್ಕಟರಾಗಿ ದೇವಕ್ಕಿ ತನುಜನ ಸಿಕ್ಕಿಸಿಕೊಂಡರು | ಅಕ್ಕಟಾಬ್ಜಗಬ್ಧಿ ಉಕ್ಕಿದಂತೆ ಮನ | ಉಕ್ಕುತಲಿ 2 ನಾರಿಯರಿಂದ ಉತ್ತರವ ಲಾಲಿಸಿ | ತುಂಬಿ ಅ | ಪಾರನಾರಿ ಪರಿವಾರದವರ ಶರೀರವ ಮೇಲೆ | ವಿ | ಸ್ತಾರವಾಗಿ ಕಾರಿ ವಾರಿದನು ನೀರೆರದಂತಾಗೆ | ಆರೊಂದು ಬುದ್ಧಿಗೆ ಮೀರಿತಿದೊ ಎಂದು | ವಾರುಣಿಪತಿ ಪಂಕೇರುಹಾಭವ ಕಂ || ದರವ ಬಾಗಿಸಿ ಸಾರಿದರು 3 ಮೃಗ ಧ್ವನಿದೆಗೆದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು ಪೊಗಳ ಬಗೆಯಿಂದ | ಮಣಿ ತಾರೆಗಳು ಚಂದ್ರ ನಗುತ ತಮ್ಮ ಪಥಗಳು ನಿಲಿಸಿ | ಮಂಗಳಕರವ ಮುಗಿದು ಸೋಜಿಗ ಜಗದೊಳಗಿದು ಮಿಗಿಲೆನುತಲಿ 4 ದುಂದುಭಿ ಮೊರಿಯೆ ಧಂ ಧಂ ಧಳಾ ಎಂದು | ವೃಂದಾರಕ ವೃಂದ ಚಂದದಿ ಪೂಮಳೆಯಂದುಗರಿಯಲು | ಚಂದಣಗಂದಿಯ ಒಂದಾಗಿ ನಿಂದರು ವಂದಿಸುತ | ಮಂದಹಾಸನಖ ದುಂದುಭಿ ಓಕಳಿಂದಲೆರಾರೈಪಾ ಸಿಂಧು ಮೆರೆದ ನಾರಂದವರದ ವಿಜಯವಿಠ್ಠಲ | ಪುರಂದರದಾಸರ ಮುಂದಾಡಿz ||5
--------------
ವಿಜಯದಾಸ