ಒಟ್ಟು 32 ಕಡೆಗಳಲ್ಲಿ , 16 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಾತಿಗೆ ಮೆಚ್ಚುವನಾವಾವಾ ಪರಾಕು ಎಲೊ ಎಚ್ಚರಿಕೆ ಪ ಎಂತಾಗುವದೆಂದು ನುಡಿಯದಿರಿ ಕಂತುವಿನ ಪಿತ ನಿನಗೆ ನಮೊ ನಮೊ ಬಿನ್ನೈಪೆ ಸಂತು ಧ್ರುವರಾಯನು ಸಂತತ ಇದಕೆ ಸಾಕ್ಷಿ 1 ಒಂದೆ ರೂಪದಲಿ ಪೂಜೆಯಗೊಂಬೆ ಎನಗೆ ಮ ತ್ತೊಂದು ರೂಪಕೆ ಶಕ್ತಿ ಇಲ್ಲೆನ್ನದಿರು ಸಂದೇಹ ಎನಗಿಲ್ಲ ಎಲ್ಲಿದ್ದರು ದೇವ ನಂದನಂದನ ಇದಕೆ ರಾಯ ಬ್ರಾಹ್ಮಣ ಸಾಕ್ಷಿ 2 ಬದಿಯಲಿದ್ದರೆ ಇಷ್ಟೆ ಮುಂದೆ ಬರುವ ಆಪತ್ತು ಒದಗಿ ಕಳೆವೋಪಾಯ ಕಡಿಮೆನ್ನದಿರೊ ಮುದದಿಂದ ನಿನ್ನಂಘ್ರಿಗೆರಗುವೆನು ಗತಿಪ್ರದಾ ಕದನದೊಳು ಬದುಕಿ ನರಧ್ವಜನೆ ಸಾಕ್ಷಿ3 ಆಪತ್ತು ಕಳೆವೆ ಬೇಡಿದ ಭೋಜನ ಕೊಡುವೆ ಈ ಪರಾಕ್ರಮ ನಿನಗಲ್ಲೆನ್ನದಿರು ಶ್ರೀಪತಿ ನಿನ್ನ ಲೀಲೆಗೆ ಬೆರಗಾಗುವೆನೊ ತಾಪಸರ ಮಧ್ಯದಲಿ ದುರ್ವಾಸಮುನಿ ಸಾಕ್ಷಿ 4 ನಾನಾ ಭಕ್ತರು ಇನಿತು ಸಾಕ್ಷಿಯಾಗಿರಲಿಕ್ಕೆ ಏನು ಸೋಜಿಗವೆಂಬೊ ಸೋಗು ಯಾಕೆ ಸಿರಿ ವಿಜಯವಿಠ್ಠಲರೇಯಾ ನಾನು ಬೇಡುವದೇನು ಸರ್ವಪ್ರೇರಕೆ ಪ್ರೀಯಾ5
--------------
ವಿಜಯದಾಸ
ಪನ್ನಗಾಚಲವಾಸ-ಪ್ರಪÀನ್ನರ ಪಾಲಕ ಶ್ರೀಶಾ-ಸರ್ವೇಶಾ ಕನಕ ರತುನಮಯ ಮುಕುಟಾಧಾರ ಘನ ನವಮಣಿಮಯ ಕುಂಡಲಧರ ಇನಕೋಟಿಪ್ರಭಕೌಸ್ತುಭಹಾರ ಮನಸಿಜಧನುಸಮ ಭ್ರೂಸಮಾಕಾರ ಘನ ಚಂಪಕಗೆಣೆ ನಾಸ ಗಂಭೀರ ವನಜದಳಾಯತೇಕ್ಷಣಾಕಾರ ವನರುಹಾ ಘನ ಸ್ಮಿತ ಸುಗಂಭೀರ ಮುನಿಮಾನಸಮಂದಿರ ಸುವಿಹಾರ ಅಪ್ರಾಕೃತ ಶರೀರ ತನುಮನ ವಚನದಿ ಅನವರತದಿ ಕಿನ್ನರ ಸುರಮುನಿಗಣ ತನುಸದನದಿ ಹೃದ್ವನಜದಿ ಘನಪದ ವನರುಹ ಧೇನಿಸಿ ದೃಢಸ್ನೇಹದಿಂದಿರುವ ಕರ್ಮ ಒಪ್ಪಿಸುವ ಘನಮೋದದಿಂದಲಿರುವಾ ನುತಿಸುವಾ ಬೇಡುವಾ ಜನುಮ ಸ್ಥಿತಿ ಮೃತಿಗೆ ಬೆದರದಿರುವಾ ನಿನ್ನವರೊಳು ತನ್ನಿರವ ತೋರಿಸುಹ ಘನ್ನಪಾತಕವ ಕಳೆದುನ್ನತ ಸಾಧನವನ್ನೆ ಕೊಟ್ಟು ನನ್ನಿಯಿಂದಲೆ ಪೊರೆವಾ ತನ್ನಧಾಮದಿ ಕಾಪಿಡುವಾ 1 ಉತ್ತಮ ಮೌಕ್ತಿಕ ಸರಿಗೆ ನ್ಯಾವಳ ಒತ್ತೊತ್ತಾಗಿಹ ತ್ರಿವಳಿಯ ಮಾಲಾ ರತುನ ಪದಕದಾ ಸರದ ವಿಹಾರ ಅತಿಮನೋಹರ ಹೃದಯ ವಿಶಾಲ ಸಲೆಸಿರಿವತ್ಸ ವಕ್ಷದಿ ಲೋಲ ಸುತ್ತಿದ ಭಾಪುರಿ ಭುಜದ ವಿಸ್ತಾರ ಸಿತಾನಿಸಿತ ಉಪವೀತದಿ ಲೊಲ ದಾತಾಪಿತ ತವನಾಭಿಯ ಕಮಲ ಉತ್ತಮಕಮಲ ಕಲ್ಹಾರದ ಮಾಲ ಹಸ್ತಾಭರಣದಿ ಮೆರೆಯುತ ಪೊತ್ತಿಹ ಚಕ್ರಾಧ್ಯಾಯುಧನೆತ್ತಿ ದುರುಳೊನ್ಮತ್ತರ ಸದೆದು ತ್ವದ್ಭಕ್ತರ ಮನೋರಥ ಪೂರ್ತಿಗೈವ ಪುರುಷೋತ್ತಮ ಭವಭಯಹಾರೀ ನಿತ್ಯನೂತನವಿಹಾರೀ-ಪ್ರಣವಸ್ತನೆ ನೀ ಕಂಸಾರೀ ಪೃಥಕ್ ಪೃಥಕ್ ತದಾಕಾರೀ-ನರಹರೀ-ಶ್ರೀಹರೀ ಹೃತ್ಪುಷ್ಕರದಳ ವಿಹಾರೀ ಭಕ್ತವತ್ಸಲ ಅವ್ಯಕ್ತನೆ ಜಗದುತ್ಪತ್ತಿ ಸ್ಥಿತಿಲಯ ಕರ್ತ ವ್ಯಾಪ್ತ ನಿರ್ಲಿಪ್ತ ಸತ್ಯಸು- ಹೃತ್ತಮ ನೀನೆ ಮುರಾರೀ ಉತ್ತಮ ಸಮರಹಿತ ಶೌರೀ 2 ಪಕ್ಷಿಧ್ವಜ ಸುಖಭರಿತ ವಿಹಾರ ಕುಕ್ಷಿಯೊಳು ಅಬ್ಜಾಂಡಕೋಟಿಗಾಧಾರ ತ್ರಕ್ಷಾದ್ಯಮರನುತ ಗುಣಾಧಾರ ಸಾಕ್ಷಿಮೂರುತಿ ಸರ್ವಕಾಲಾಧಾರ ವಕ್ಷದೊಳು ಶ್ರೀವತ್ಸ ಗಂಭೀರಾ ಮು- ಮುಕ್ಷುಗಳೊಡೆಯನೆ ವೈಕುಂಠಾಗಾರ ಅಕ್ಷರಕ್ಷರರವಿಲಕ್ಷಣಧೀರ ರಕ್ಷಕ ಭಕುತಜನರುದ್ಧಾರ ದಕ್ಷಿಣಾಕ್ಷಿಕಂಠ ಹೃದಯವಿಹಾರ ರಕ್ಷಕ ತ್ರಿಜಗದಾಧ್ಯಕ್ಷ ಕರುಣಕಟಾಕ್ಷದಿ ಈ ಜಗ ವೃಕ್ಷದೊಳು ನಿರಪೇಕ್ಷನಾಗಿ ಫÀಲಭಕ್ಷಿಪ ಜೀವರ ಲಕ್ಷಕೋಟಿ ನೀ ಸಾಕ್ಷಿಯಾಗಿಹೆ ನೀ ರಕ್ಷ ಕಮಲಾಕ್ಷ ಪಕ್ಷಿವಾಹನನೆ ನಿನ್ನ ಪರೋಕ್ಷಾಪೇಕ್ಷಿಗಳಿಗೆ ನಿನ್ನ ಕ- ಟಾಕ್ಷವೀಕ್ಷಣದಿಂದ ಪ್ರತ್ಯಕ್ಷ ರಿಪುಶಿಕ್ಷ ಅಧ್ಯಕ್ಷ ಸಾಕ್ಷಿಯಾಗಿಹೆ ನೀ ರಕ್ಷಾ ಮೋಕ್ಷ ಜೀವರಿಗಪರೋಕ್ಷವನಿತ್ತು ನಿ- ಷ್ಪಕ್ಷನಾಗಿ ಜಗರಕ್ಷಿಸುತ್ತ ಸುರಪ ದಕ್ಷ ಚತು- ರಾಕ್ಷರಸ್ಥ-ನರಹರ್ಯಕ್ಷ ಶರಣಜನರ ಕಲ್ಪವೃಕ್ಷ3 ಪಟುತರಾಂಗ ಸುಕಟಿಯ ವಿಸ್ತಾರ ತೊಟ್ಟಿಹÀರತುನದ ಪಟ್ಟವಿಹಾರ ಉಟ್ಟಿಹ ಪಟ್ಟೆ ಪೀತಾಂಬರ ಧಾರಾ ಬಟ್ಟ ಜಾನುದ್ವಯ ಜಂಘಾಶೂರ ಇಟ್ಟಿಹ ಸಾಲಿಗ್ರಾಮದ ಹಾರ ದಟ್ಟವಾಗಿಹ ಕಾಲಂದಿಗೆಯ ವಿಹಾರ ಇಟ್ಟಿಹ ಬೆರಳಲಿ ರತ್ನದುಂಗುರ ಶ್ರೇಷ್ಟಪದದಿ ಧ್ವಜಚಿಹ್ನಾಕಾರ ದಿಟ್ಟಿ ನಖಾಗ್ರದಿ ತಟಿತ ಪ್ರಭಾಕರ ಪಟುತರ ಕರಪಾದ ಚಟುಲರೂಪ ಮನ- ತಟದಿ ಇಟ್ಟು ಲವತೃಟಿಯು ಬಿಡದೆ ಸುರ- ನಿತ್ಯ ಕರಪುಟದಿ ನಮಿಸಿ ಉತ್ಕಟದಿ ಗುಣಗಳ ಪಠಣದಿಂದಿರೆ ಮುದದಿ ಪಟುತರ ಭಕುತಿಯ ಭರದೀ ನಟಿಸುತ ತನು ಮರೆದಾತುರದಿ ಉ- ತ್ಕಟದಲಿ ನುತಿಸುತ ಭರದೀ ನಟಿಸುವಾ ಸ್ಮರಿಸುವಾ ಭಕುತಜನರ ಕಂಟಕವಾ ಆ ಧಿಟರು ನೀತ ಭಟರಂದು ನಿಜ ಜಠರಾಲಯದಿ ಇಂ- ಬಿಟ್ಟು ಭಕುತರ ಕಟಕಪೊರೆದು ಭವಾಬ್ಧಿಯ ಕಂಟಕ ಜಗಶಿಕ್ಷಾ 4 ಸ್ವಗತಭೇದವಿವರ್ಜಿತಶೂನ್ಯ ನಿಗಮಾತೀತ ದೇವವರೇಣ್ಯ ಬಗೆಬಗೆ ಸ್ವರ ಶಬ್ದವಾಚ್ಯವರೇಣ್ಯ ಅಗಣಿತಗುಣಗಣಪೂರ್ಣ ಸಂಪೂರ್ಣ ಯೋಗಿಗಳ್ ಪೊಗಳುವ ಸವಿತೃವರೇಣ್ಯ ಬಗೆಗಾಣರೊ ಸಾಕಲ್ಯದಿ ನಿನ್ನ ತ್ರಿಗುಣ ವಿರಹಿತನಾಗಿಹನ್ನ ನಗಜಾಧವ ಪಿಕನುತಪಾವನ್ನ ದುರ್ಗಾ ಶ್ರೀ ಭೂದೇವಿಯರಮಣ ಯುಗ ಯುಗದೊಳು ಜಗಕಾರ್ಯದಿ ಧರ್ಮ ಪ್ರಘಟ- ನೆಗೋಸುಗ ಸ್ವಗತರೂಪ ತಾ ನೆರಹಿ ಕ್ರೂರ ಪಾ- ಪೌಘರ ಮಡುಹಿ ಜಗದೇಕ ವೀರ ಮಿಗೆ ಜನಿಸಿದೆ ಜಗದೀಶಾ ಸುಗುಣ ಸಾಕಾರ ಸರ್ವೋತ್ತಮ ಶ್ರೀಶಾ ಜಗಜ್ಜಾಲ ಲೀಲಾವಿಲಾಸ ಜಗವೆಲ್ಲಾ ಈಶಾವಾಸ್ಯ ಸೃಜಿಸಿ ನೆಲೆಸೀ ಸ್ವಪ್ರಯೋಜನ ರಹಿತನೆನಿಸೀ ಖಗವರೂಥÀ ಶ್ರೀ ವೇಂಕಟೇಶ ಪನ್ನಗಗಿರಿಯೊಳು ನೆಲೆಸಿ ಜೀವರ ಯೋಗ್ಯಸಾಧನೆ ಇತ್ತು ಮನೋಭೀ-ಷ್ಟವನ್ನೆ ಸಲಿಸಿ ಉರಗಾದ್ರಿವಾಸವಿಠಲನೆನಿಸೀ 5
--------------
ಉರಗಾದ್ರಿವಾಸವಿಠಲದಾಸರು
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಬಿಟ್ಟೆನಯ್ಯ ಬಿಟ್ಟೆನಯ್ಯ ಪ್ರಪಂಚವಮುಟ್ಟಿದೆನು ಬ್ರಹ್ಮವನು ಮುಕ್ತನಾದೆನುಹುಚ್ಚು ಮೂಳಿ ಹೆಂಡತಿಯ ಪ ಮೆಚ್ಚಿ ನಲಿವ ಮಗನು ಸೊಸೆಯುಉಜ್ಜಿ ಬದುಕನೆಲ್ಲ ನಾನು ಉಡುಗಿ ಕಳೆದೆನು 1 ನೆಂಟರಿಷ್ಟರೆಲ್ಲರನ್ನು ದೂರಮಾಡಿ ಕುಳಿತೆ ನಾನುಹೆಂಟೆಯಂತೆ ಕಂಡೆನಯ್ಯ ಹೇರು ಹೇಮವ 2 ಅಷ್ಟದೇವರನ್ನು ನಾನು ಅಡವಿಗೆಂದು ಅಟ್ಟಿಬಿಟ್ಟೆಕಷ್ಟಪಡಿಪ ಪುರೋಹಿತನ ಕಡೆಗೆ ತಳ್ಳಿದೆ 3 ವಾರವಾರ ನೇಮವನ್ನು ಒಲೆಯನೀಗ ಹೊಗಿಸಿದೆದಾರಿ ಹಚ್ಚಿಸಿದೆನು ಕುಲವ ಶೀಲವ್ರತಗಳ 4 ಮತಗಳೆಂಬ ವಾದವನ್ನು ಮಣ್ಣುಪಾಲು ಮಾಡಿದೆನುಸತತ ಚಿದಾನಂದ ಬ್ರಹ್ಮ ಸಾಕ್ಷಿಯಾದನು 5
--------------
ಚಿದಾನಂದ ಅವಧೂತರು
ಬ್ರಹ್ಮ ರೂಪವೇ ಈತಬ್ರಹ್ಮ ಸ್ಥಿತಿಯಿಂತುಸಮ್ಮತ ವೇದಾಂತವು ಮುಕ್ತ ಪ ಪರಿ ದೇಹ ಭಾವವ ಬಿಟ್ಟಯೋಗಿಗೆಇರ್ಪುದೇ ತನು ಭ್ರಾಂತಿ ಮುಕ್ತ 1 ಪರಿ ಸಾಕ್ಷಿಯಾಗಿ ನೋಡುವ ಜ್ಞಾನಿಗೆತನು ಭ್ರಾಂತಿ ತಾನಿಹುದೇ ಮುಕ್ತಾ 2 ಹೊಲೆಯತನ ಶುದ್ಧತನ ಎಲ್ಲಿಹುದೋ ಎಲೆ ಮುಕ್ತಾಹೊಲೆಯತನ ಶುದ್ಧತನ ಸಿದ್ಧನಿಗದೇತಕೋತಿಳಿದು ಬಾಳನು ಬಾಳ್ವ ಚಿದಾನಂದನಾದವವಗೆಬಲು ದೇಹ ಭ್ರಾಂತಿಯಹುದೋ ಮುಕ್ತಾ 3
--------------
ಚಿದಾನಂದ ಅವಧೂತರು
ಮಂಗಳನಾದ ಕೇಳುವತನಕ ಮನಸು ನಿಲ್ಲುವುದೇಸಂಗಹರನು ಆಗದತನಕ ಸಾಕ್ಷಿಯಾಗುವುದೇ ಪ ಭಾಮಿನಿಯನ್ನು ತ್ಯೆಜಿಸದತನಕ ಭಕ್ತನಾಗಲಹುದೇಕಾಮವನ್ನು ಕಡಿಯದತನಕ ಕರುಣಿಯಾಗಲಹುದೆ 1 ಪರ ತಾನಾಗುವುದೇನೀನು ನಾನೆಂಬುದ ನೀಗದತನಕ ನಿಜವದು ತಾನಹುದೇ 2 ಹಮ್ಮು ಕೋಶ ಕಳೆಯುವತನಕ ಹಂಸನಾಗಬಹುದೇಬ್ರಹ್ಮ ಚಿದಾನಂದನಾಗದತನಕ ಭ್ರಮೆ ತಾ ತೊಲಗುವುದೇ 3
--------------
ಚಿದಾನಂದ ಅವಧೂತರು
ಲಾಲಿ ಗೌರೀಪ್ರಿಯನೆ ಲಾಲಿ ನಾಲ್ಮೊಗನೆ ಲಾಲಿ ಲಕ್ಷ್ಮೀರಮಣ ಲಾಲಿ ಪರಿಪೂರ್ಣ ಪ ಕಪಟದಾನವಶಿಕ್ಷ ಕರುಣಾ ಕಟಾಕ್ಷ ತಪನಾಗ್ನಿ ಶಿಖಿನೇತ್ರ ಧನನಾಥ ಮಿತ್ರ ಸುಪವಿತ್ರ ಚಾರಿತ್ರ ಸುಜನನುತಿ ಪಾತ್ರ1 ವನಜ ಸಂಭವ ಸೃಷ್ಟಿ ಕರ್ತವಾಣೀಶ ಕನಕ ಗರ್ಭಾಪ್ರತಿಮ ಮಹಿಮ ಜೀವೇಶ ಗಮನ ಸುವಿಲಾಸ ಸನಕಾದಿ ಮುನಿವಿನುತ ಸರ್ವಲೋಕೇಶ2 ಪಕ್ಷಿವಾಹನ ಜಗದ್ರಕ್ಷ ಸಿರಿವರನೆ ಸಾಕ್ಷಿಯಾಗಿಹ ಗುರುರಾಮ ವಿಠ್ಠಲನೆ 3
--------------
ಗುರುರಾಮವಿಠಲ
ಶುಭ ಮಂಗಳಂಮಂಗಳಂ ಆರೂಢ ಮಹಾತ್ಮಗೆ ಪ ಕರ್ಮ ವಿಧ್ವಂಸಗೆಬಲು ಅವಿದ್ಯಾಬ್ರಾಂತಿ ವಿನಾಶಗೆಲಲಿತ ನಿಜ ಮುಕ್ತಗೆ ಲಕ್ಷ್ಯ ಅಲಕ್ಷ್ಯಗೆಥಳಥಳಿಪ ತೇಜೋಮಯಾತ್ಮನಿಗೆ 1 ಮಾಯೆ ನಿರ್ಮೂಲಗೆ ಮಲತ್ರಯ ವಜ್ರ್ಯಗೆಕಾಯ ಭ್ರಾಂತಿಯನು ತೊಲಗಿಪಗೆಸಾಯಸವಳಿದಗೆ ಸಾಕ್ಷಿಯಾಗಿಹಗೆಮಾಯಾ ರಹಿತಗೆ ಶಿವಶರಣಗೆ2 ಸಿಂಧು ಆನಂದಗೆ ಶಿವನಾದವನಿಗೆಎಂದೆಂದಿಗು ಇಹ ಏಕನಿಗೆಬಿಂದು ಕಳಾತೀತಗೆ ಬೋಧದಖಂಡಗೆಸುಂದರ ಚಿದಾನಂದ ಸೂಕ್ಷ್ಮಾತ್ಮನಿಗೆ3
--------------
ಚಿದಾನಂದ ಅವಧೂತರು
ಶ್ರೀರಾಮ ಶ್ರೀರಾಮ ಶ್ರೀರಾಮ ಶ್ರೀರಾಮ ಸರಸಿಜಾಸನ ಪುರಹರನನ್ನು ಮೊದಲು ನೀ ಶರೀರದಿ ಪಡೆದೆ ಸರ್ವೇಶ | ಕೇಶವ ಪರಮಪುರುಷನೆ ಕೈಪಿಡಿಯೊ1 ಅರಿವಿಗಾಶ್ರಯನೀನೆ ಸರ್ವಶಬ್ದವಾಚ್ಯ ದುರಿತವಿದೂರ ಪರಮಾತ್ಮ | ನಾರಾಯಣ ಕರುಣವಾರಿಧಿಯೆ ಕೈಪಿಡಿಯೊ 2 ಮಾಧವ ರಾಯನೀ ಒಲಿದು ಕೈಪಿಡಿಯೊ 3 ಸೂರ್ಯ ನೀವೊಲಿದೆಲ್ಲರ ಸಲಹುವೆ | ಎನ್ನಯ್ಯ ಗೋವಿಂದ ನೀನೆ ಕೈಪಿಡಿಯೊ 4 ಆಪತ್ಭಾಂಧವನೇ ಕೈಪಿಡಿಯೊ 5 ಕಲುಷ ಪನ್ನಗಶಯನ ಕೈಪಿಡಿಯೊ 6 ಶಕ್ರಗೋಸುಗ ನೀನೆ ಶುಕ್ರ ಶಿಷ್ಯನ ಬೇಡಿ ವಿಕ್ರಮದಿಂ ಭೂಯಳದೆ | ಅದ್ಭುತತ್ರಿ ವಿಕ್ರಮ ಮೂರುತಿಯೆ ಕೈಪಿಡಿಯೊ 7 ಆಮಹಾವಟುರೂಪದಿಂದಲದಿತಿಯೊಳು ವಾಮನ ಮೂರ್ತಿಯೆ ಕೈಪಿಡಿಯೊ 8 ತ್ವರಿತದಿ ಎನ್ನ ಕೈಪಿಡಿಯೊ 9 ಹೃಷಿಕೇಶ ನಿನ್ನ ಕಾಣರೊ | ಪಾಮರರು ಋಷಿಗಣವಂದ್ಯ ಕೈಪಿಡಿಯೊ 10 ಶೋಭನಚರಿತಾಮರವಿನುತ | ನೆ ಪದ್ಮ ನಾಭನೆ ಒಲಿದು ಕೈಪಿಡಿಯೊ 11 ನೀ ದಯದಲಿ ಯಶೋದಾದೇವಿಯಿಂದಲಿ ಬೋಧರೂಪನೆ ಕಟ್ಟಿಸಿಕೊಂಡೆ | ಸ್ವಾಮಿ ದಾಮೋದರ ಎನಗೊಲಿದು ಕೈಪಿಡಿಯೊ 12 ಹರನಲ್ಲಿ ನಿಂತು ಸಂಹರಿಸುವೆ ಜಗವನ್ನು ಪರಮ ನಿಷ್ಕರುಣದಲಿ | ನೀ ಸಂ ಕರ್ಷಣ ಮೂರುತಿಯೆ ಕೈಪಿಡಿಯೊ 13 ಭಾಸುರಗಾತ್ರ ದೇವಾಸುರ ಮನುಜರೆಂ- ಬೀಸಮುದಾಯದೊಳಗಿರ್ಪೆ | ಸರ್ವಾತ್ಮ ವಾಸುದೇವಾಖ್ಯ ಕೈಪಿಡಿಯೊ 14 ಸೂರಿ ಜನಾಶ್ರಯ ವಿದ್ವದ್ಭೀರೀಡ್ಯಾ ಸುಗುಣಾಢ್ಯ | ನೀನೆ ಶ್ರೀ ಪ್ರದ್ಯುಮ್ನ ಒಲಿದು ಕೈಪಿಡಿಯೊ 15 ಮುನಿಜನವಂದಿತ ಅನಿಮಿಷಸನ್ನುತ ಖಗವಾಹ | ಗತ ಮೋಹ ಅನಿರುದ್ಧ ಎನ್ನ ಕೈಪಿಡಿಯೊ 16 ಸರಸಿಜಭವ ಮೊದಲು ತೃಣಪರಿಯಂತವು ಪುರುಷೋತ್ತಮ ನೀನೆ ಕೈಪಿಡಿಯೊ 17 ಮೋಕ್ಷದಾಯಕ ಸರ್ವಾಧ್ಯಕ್ಷ ಜೀವರಿಗೆಲ್ಲ ಸಾಕ್ಷಿಯಾಗಿರುವೆಯೊ ಹೊರ ಒಳಗೆ | ಸ್ವಾಮಿ ಅ- ಧೋಕ್ಷಜ ನೀನೆ ಕೈಪಿಡಿಯೊ 18 ಪರಮಸತ್ಪುರುಷನಾಗಿಹ ಪ್ರಹ್ಲಾದನ ನರಸಿಂಹ ಮೂರುತಿಯೆ ಕೈಪಿಡಿಯೊ19 ಇಚ್ಛಾಮಾತ್ರದಿ ಸೃಷ್ಟಿ ಸ್ಥಿತಿಲಯಗೈಯ್ಯುವೆ ನಿಚ್ಛಲನಾಗಿ ಜಗವನ್ನು | ನುಂಗುವೆ ಅಚ್ಯುತ ಎನ್ನ ಕೈಪಿಡಿಯೊ 20 ನಿರ್ದಯನಾಗಿ ಕೊಲ್ಲುವೆ | ನೀನೆ ಜ- ನಾರ್ಧನಸ್ವಾಮಿ ಕೈಪಿಡಿಯೊ 21 ವಿಧಿ ಚಂದ್ರಶೇಖರ ಮುಖ್ಯ ಸಂದೋಹ ನಿನ್ನ ಪೊಗಳುವರು | ಅಯ್ಯ ಉ- ಪೇಂದ್ರ ಮೂರುತಿಯೆ ಕೈಪಿಡಿಯೊ 22 ಕರುಣಸಾಗರ ನೀನೆ ಶರಣ ಜನೋದ್ಧಾರ ಸಿರಿದೇವಿಯರಸ ಸರ್ವೇಶ | ಸರ್ವಗ ಸ್ವಾಮಿ ಹರಿಯೆ ನೀ ಒಲಿದು ಕೈಪಿಡಿಯೊ 23 ಕಷ್ಟ ಎಂಬುವ ಬಲು ಉಷ್ಣ ಜಲದಿ ಬಿದ್ದು ವಿಷ್ಣುವೆ ನಾನು ಮೊರೆಯಿಡುವೆ | ಕಾದುಕೊ ಕೃಷ್ಣ ನೀ ಒಲಿದು ಕೈಪಿಡಿಯೊ 24 ವರಬಿಂಬಮೂರ್ತಿ ನೀನಯ್ಯಾ | ಸ್ವಾಮಿ ಶ್ರೀ ಗುರುರಾಮವಿಠ್ಠಲಾನತಪಾಲ 25
--------------
ಗುರುರಾಮವಿಠಲ
ಸ್ಮರಿಸಿ ಸುಖಿಸೆಲೊ ಮಾನವಾ ಪ ಸ್ವಾನುಭಾವದಿಂದ ಸುಖವಬಡಿಪ ಗೋಪಾಲದಾಸ ರಾಜರಡಿಗಳನುದಿನಾ ಅ.ಪ. ಅಪಾರ ಜನುಮದ ದಾಸ್ಯಹರಿಸಿ ಸುಖಸಾರ ಸುರಿಪರನುದಿನಾ 1 ಸತ್ಯವಾದ ವಚನ ಸತ್ವಜೀವರಿಷ್ಟಗರೆವ ಚಿತ್ತದೊಳಗನುದಿನಾ 2 ಸರ್ವ ವಿಧದಿ ತೋಷಬಡಿಪ ತಂದೆವರದಗೋಪಾಲವಿಠಲನೇ ಸಾಕ್ಷಿಯಾಗಿಪ್ಪನನುದಿನಾ 3
--------------
ತಂದೆವರದಗೋಪಾಲವಿಠಲರು
ಹರಿಯೆ ಯನ್ನ ಧೊರೆಯೆ ನಿನ್ನಮರೆಯ ಹೊಕ್ಕೆನೊ ಸಿರಿಯರಮಣ ಪ ಸಕಲ ಲೋಕಗಳನುನೀನೇ ಸೃಜಿಸುವಾತನು ಸುಖದಿ ಪ್ರಾಣಿಗಳನು ನೀನೆ ಸಲಹುವಾತಾನು ಪ್ರಕಟವಾದ ಜಗವ ನೀನೆ-ಪ್ರಳಯಗೈವನು ನಿಖಿಲ ಜೀವಸಾಕ್ಷಿಯಾಗಿ ನಿತ್ಯನೀನೆನಿಯಮಿಸುವನು 1 ಸ್ಥೂಲಸೂಕ್ಷ್ಮರೂಪನೀನೆ ಮೂಲಪುರುಷನು ಲೀಲೆಯನ್ನು ಪ್ರಕಟಗೈವ ಕಾಲರುಪನು ನೀಲ ಲೋಹಿತಾದಿ ವಿಬುಧಜಾಲ ವಂದ್ಯನು ಪಾಲಿತಾಖಿಲಾಂಡ ರಮಾಲೋಲ ಸುಗುಣಜಾಲ ಶ್ರೀ 2 ಪರಮ ಪುರುಷ ಪಂಕಜಾಕ್ಷ-ಪತಿತ ಪಾವನ ಶರಧಿಶಯನ ಸಕಲಲೋಕ ಸಂವಿಭಾವನ ವಿಶ್ವ ಮೋಹನ ದುರಿತ ಗಜಮೃಗಾಧಿರಾಜವರದ ವಿಠಲ ವಿಹಗಯಾನ 3
--------------
ಸರಗೂರು ವೆಂಕಟವರದಾರ್ಯರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು
ಮಾಯೆಯನ್ನು ಗೆದ್ದೆನೆಂದು ಮುರುಕಿ ಮುರುಕಿ ಕಿರುಚುವಮೂರ್ಖನವನಮಂದಮತಿಯನೇನ ಹೇಳಲಿರಾಯರಾದ ಮೂರು ಮಂದಿ ಮೊರೆಯ ಹೊಕ್ಕಿಹರು ಬಗಳಮಾಯೆಯನ್ನು ಗೆದ್ದೆನೆನಲು ಲಜ್ಜೆಯಿಲ್ಲವೆಪಮೋಡದಾ ಮಿಂಚಿನಂತೆ ಮೋಹಕವೆ ಬೆಳಗುತಿರಲುಗೂಢವಿಹ ಮುನಿಯು ತಪಿಸಿ ಮುಳುಗಿಹೋದರುರೂಢಿಯಲ್ಲ ಮೋಹನದಿ ಮುಳುಗಿ ತೇಲಲು ಆ-ರೂಢ ಆರಕ್ಷಕರುದಯದಲಾದರು1ತಾನದಾರು ತಾನದೆಲ್ಲಿ ತನ್ನ ಸ್ಥಳವು ಎತ್ತಲುತಾನು ನಾನು ಎಂಬುದಕ್ಕೆಠಾವುಇಲ್ಲವುತಾನು ಗೆದ್ದೆ ಗೆದ್ದೆನೆಂದು ಹೇಳಿಯಾಡೆಏನು ರೂಪು ನಾಮಕ್ರಿಯೆ ಜೀವ ಶಿವರು ಮಾಯೆಯು2ತಾನೆ ಸಾಕ್ಷಿಯಾಗಿ ಪ್ರಪಂಚ ನಾಶವಾಗಿಏನೇನುವಾಸನೆಹುಟ್ಟದಾಗಿಯುತಾನು ಜಗವು ಸರ್ವವಾಗಿ ಸರ್ವಜಗವುತಾನೆಯಾಗಿ ತಾನೆ ಚಿದಾನಂದ ಬಗಳೆ ತಾನಾದರಲ್ಲದೆ3
--------------
ಚಿದಾನಂದ ಅವಧೂತರು
ಮುಳಿದು ಮಾಳ್ವುದೇನು ಜನರುಜ್ಞಾನಿಪುರುಷನತನು ಗುಣಂಗಳೆಂಬುವನ ಮುಟ್ಟದಿದ್ದ ಬಳಿಕಪಸುಖವುಬರೆ ಹಿಗ್ಗಲಿಲ್ಲ ದುಃಖದಿಂದ ಕುಗ್ಗಲಿಲ್ಲನಿಖಿಳಪ್ರಪಂಚದಲ್ಲಿ ವಾಸನಿಲ್ಲವೋಸಕಲ ವಿಷಯ ಸಂಗವಿಲ್ಲ ಶಠದಭಾವವೆಂಬುದಿಲ್ಲಪ್ರಕಟ ಪರಮಾತ್ಮನಾಗಿ ಮುಕುತಿ ಪತಿಯು ಆದ ಬಳಿಕ1ನಿಂದೆ ಸ್ತುತಿಗೆ ಮರುಗಲಿಲ್ಲ ಬಂದುದನ್ನು ಕಳೆಯಲಿಲ್ಲಕುಂದುಗಳಿಗೆ ನೊಂದು ಮನಸು ಮಿಡುಕಲಿಲ್ಲವೋಹಿಂದಣದನೆನೆಯಲಿಲ್ಲ ಬೆಂದ ಒಡಲಿನಾಸೆಯಿಲ್ಲಸುಂದರಾತ್ಮತಾನೆಯಾಗಿ ಬಿಂದು ಸಾಕ್ಷಿಯಾದ ಬಳಿಕ2ಅರಿವುಮರೆವು ಎಂಬುದಿಲ್ಲ ಪರರ ಜರೆದು ನುಡಿಯಲಿಲ್ಲಇರುಳು ಹಗಲು ಎಂಬುವಾವು ತೋರಲಿಲ್ಲವೊಮರಣ ಭಯದ ಚಿಂತೆಯಿಲ್ಲ ದುರುಳತನದ ಚರ್ಚೆಯಿಲ್ಲಶರಣ ಸರ್ವಕಾಲ ಕರಣ ದೂರನಾದ ಬಳಿಕ3ಮೋಹದಲ್ಲಿ ಸಿಲುಕಲಿಲ್ಲ ತಾಮಸದಲ್ಲಿ ತೊಡಗಲಿಲ್ಲಕಾಮ ಬಾಧೆ ಎಂಬುವಾವು ಕಾಡಲಿಲ್ಲವೋನೇಮನಿತ್ಯಮೊಳೆಯಲಿಲ್ಲ ಕಾಮಿತಕ್ಕೆ ಕೂಡಲಿಲ್ಲಪ್ರೇಮಾನಂದನಾಗಿನಿತ್ಯವ್ಯೋಮಾತೀತನಾದ ಬಳಿಕ4ತನ್ನವರು ಎನ್ನಲಿಲ್ಲ ತನ್ನ ತಾನು ಹೊಗಳಲಿಲ್ಲಮನ್ನಣೆ ಎಂಬುದದಕೆ ಹಿಗ್ಗಲಿಲ್ಲವೋಭಿನ್ನ ಭಾವವೆಂಬುದಿಲ್ಲ ನನ್ನ ನಿನ್ನದೆಂಬುದಿಲ್ಲಚೆನ್ನ ಚಿದಾನಂದ ಚೇತನಾತ್ಮತಾನಾದ ಬಳಿಕ5
--------------
ಚಿದಾನಂದ ಅವಧೂತರು
ಸಂಸಾರ ಕನಸಣ್ಣ ಸಕಲರಿಗೆ ಹೇಳುವೆನಣ್ಣಸಂಸಾರ ಸತ್ಯವೆಂಬುವನ ಬಾಯಲ್ಲಿ ಹೊರೆ ಮಣ್ಣಣ್ಣಪಹೆಂಡತಿಯು ಕನಸಣ್ಣ ಗಂಡನೂ ಕನಸಣ್ಣಗಂಡು ಮಗ ಸೊಸೆ ಸಹೋದರರು ಬಂಧುಗಳು ಕನಸಣ್ಣ1ದನಕರು ಕನಸಣ್ಣ ದವಲತ್ತು ಕನಸಣ್ಣಮನೆ ಮದುವೆ ಮಂಟಪ ಮಹಾಲಕ್ಷ್ಮೀ ಕನಸಣ್ಣ2ವೈಯ್ಯಾರ ಕನಸಣ್ಣ ವಸ್ತುಗಳು ಕನಸಣ್ಣಮೈಯಲ್ಲಿಹ ಬಲವದು ಮತ್ತೆ ಮುರಿ ಮೀಸೆ ಕನಸಣ್ಣ3ನಾನಿಹುದು ಕನಸಣ್ಣ ನೀನಿಹುದು ಕನಸಣ್ಣಶಾಣೆತನ ಮಾನಾಪಮಾನಗಳು ಸೈನ್ಯ ಕನಸಣ್ಣ4ಸಂಸಾರ ಮಾಡಿದರಣ್ಣ ಸಾಕ್ಷಿಯಾಗಿರಬೇಕಣ್ಣಹಂಸ ಚಿದಾನಂದ ಸದ್ಗುರು ಹೊಂದಲು ಸರಿವುದು ಜನನವಣ್ಣ 5
--------------
ಚಿದಾನಂದ ಅವಧೂತರು