ಒಟ್ಟು 28 ಕಡೆಗಳಲ್ಲಿ , 17 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಪೆ ಯತಿವರೇಂದ್ರ ತವ ಪಾದದ್ವಂದ್ವಕ್ಕಾನಂದಾ ದಿನಾ ಬಂದ ಕಂದನಾ ಪಾಲಿಸೆಂದೆ ಪ ಸಿಲ್ಕಿರುವೆನಾ ಶರಣು ಬಂದೆನಾ 1 ಮೂಢ ಸೇವಕನಾ ಬಿಡಿಸೊ ವ್ಯಸನಾ 2 ಶ್ರೀಶನಾದ ಹನುಮೇಶವಿಠಲನ್ನಾ ದಾಸ ಉದಾಸೀನದಲ್ಲೆ ಎನ್ನಾ ಪೋಷಿಸೊ ನೀ ಮನದಾಸೆ ಪೂರೈಸಿನ್ನು ಕರುಣಾಜ್ಞಾನಪೂರ್ಣ 3
--------------
ಹನುಮೇಶವಿಠಲ
ವೆಂಕಟಾಚಲವಾಸ ಪಂಕಜಪ್ರಿಯಭಾಸ ಶಂಕರಾರ್ಚಿತ ಚರಣ ಪಂಕಜಾಸನ ಪಿತ ಪಂಕಜಲೋಚನ ಕಿಂಕರಜನ ಶರಣ ಪ ಪರಮಾತ್ಮ ನಿನ್ನ ಶ್ರೀಪದಸೇವಕನಾಗಿಪರರನನುಸರಿಸುವೆನೆ ಸಿರಿರಮಣನೆ ನಿನ್ನ ಕರುಣೆಯುಳ್ಳೆ ಪರಸಿರಿಯ ಬಯಸುವೆನೆ 1 ಧರಣಿಯನಾಳುವ ದೊರೆಯ ಕುಮಾರನು ತಿರಿಕೆಯ ಬೇಡುವನೆ ಸುರತರುವಿನ ತಂಪುನೆರಳೊಳು ಕುಳಿತು ತಾ ಗರಿಕೆಯನರಸುವನೆ 2 ಸಾರನಿಗಮ ವಿಚಾರವುಳ್ಳವ ನಿಸ್ಸಾರದಿ ಬೆರೆಯುವನೆ ವಾರಿಧಿಲಂಘಿಪಧೀರನುಕೊಳಚೆಯನೀರಿಗೆಜರಿಯುವನೆ 3 ಕ್ಷೀರಾಬ್ಧಿ ಮಥಿಸಿದ ಶೂರನಿನ್ನವನಿಗೆ ನೀರು ಮಜ್ಜಿಗೆ ಗಣನೆ ನಾರಸಿಂಹನ ಪದ ಸಾರಿದರವನು ಮದವಾರಣಕ್ಕಂಜುವನೆ 4 ಗರುಡಗಮನ ನಿನ್ನ ಶರಣಾದವನಿಗೆ ತರಳನ ಹಾವಳಿಯೆ ನರಕಾಂತಕ ನಿನ್ನ ಸ್ಮರಿಸುವ ನರನಿಗೆ ದುರಿತಂಗಳಟ್ಟುಳಿಯೆ 5 ಹೊಳೆಯೊಳು ನೆನೆಯದ ಬಲುಗಟ್ಟಿಕಲ್ಲು ತಾ ಮಳೆಯೊಳು ನೆನೆಯುವದೆ ಇಳೆಯೊಳು ಪುಲಿಗಿರಿನಿಲಯನ ದಾಸರ ಬಲುಹು ಕುಂದಕವಹುದೆ 6 ಇಷ್ಟದಿ ಮನೆಯೊಳು ಮೃಷ್ಟಾನ್ನವುಂಡವ ಪಿಷ್ಟವ ಬಯಸುವನೆ ಸೃಷ್ಟೀಶ ನಿನ್ನೊಳಗಿಟ್ಟು ದುರ್ದೈವದ ದೃಷ್ಟಿಯನರಸುವನೆ 7 ನಿಗಮಗೋಚರ ಕೇಳು ಜಗವ ತೂಗುವನಿಗೆ ಮಗುವತಿ ಘನವಹುದೆ ಜಗದಘಹರಣ ಎನ್ನಘವ ನೀಗಲು ನಿನ್ನ ಬಗೆಗೆ ದುರ್ಘಟವಹುದೆ 8 ಪರಮಾತ್ಮ ಪರಿಪೂರ್ಣ ಪರವಸ್ತು ನೀನೆಂದು ಮರೆಹೊಕ್ಕೆ ಕಾಯೊ ಎನ್ನ ವರಸುಗುಣಾಕರವರದವಿಠಲಪುಲಿಗಿರಿದೊರೆಸುಪ್ರಸನ್ನಾ 9
--------------
ವೆಂಕಟವರದಾರ್ಯರು
ವೆಂಕಟಾಚಲವಾಸ-ಪಂಕಜಪ್ರಿಯ ಭಾಸ ಶಂಕರಾರ್ಚಿತ ಚರಣ ಪಂಕಜಾಸನ ಪಿತ ಪಂಕಜಲೋಚನ-ಕಿಂಕರ ಜನ ಶರಣ ಪ ಪರಮಾತ್ಮ ನಿನ್ನ ಶ್ರೀಪದಸೇವಕನಾಗಿ ಪರರನುಸರಿಸುವನೆ ಪರ ಸಿರಿಯ ಬಯಸುವನೆ 1 ತಿರುಕೆಯಬೇಡುವನೆ ಸುರತರುವಿನತಂಪು ನೆರಳೊಳು ಕುಳಿತುತಾ ಗರಿಕೆಯನರಸುವನೆ 2 ನಿಗಮ ವಿಚಾರವುಳ್ಳವ ನಿಸ್ಸಾರದಿ ಬೆರೆಯುವನೆ ವಾರಿಧಿಲಂಘಿಪ ಧೀರನು ಕೊಳಚೆಯ ನೀರಿಗೆ ಜರಿಯುವನೆ 3 ಕ್ಷೀರಾಬ್ಧಿಮಥಿಸಿದ ಶೂರನಿನ್ನವನಿಗೆ ನೀರುಮಜ್ಜಿಗೆ ಗಣನೆ ನಾರಸಿಂಹನ ಪದ ಸಾರಿದವನು ಮದವಾರಣಕ್ಕಂಜುವನೆ 4 ಗರುಡಗಮನ ನಿನ್ನ ಶರಣನಾದವನಿಗೆ ತರಳನ ಹಾವಳಿಯೆ ನರಕಾಂತಕ ನಿನ್ನ ಸ್ಮರಿಸುವನರಗೆ ದುರಿತಂಗಳಟ್ಟುಳಿಯೆ 5 ಹೊಳೆಯೊಳು ನೆನೆಯದ ಬಲುಗಟ್ಟಿಕಲ್ಲುತಾಮಳೆ ಯೊಳುನೆನೆಯುವುದೆ ಬಲುಹುಕುಂದಕವಹುದೆ 6 ಇಷ್ಟದಿ ಮನೆಯೊಳು ಮೃಷ್ಟಾನ್ನವುಂಡವ ಪಿಷ್ಟವ ಬಯಸುವನೆ ಸೃಷ್ಟೀಶನಿನ್ನೊಳಗಿಟ್ಟು ದುರ್ದೈವದ ದೃಷ್ಟಿಯನರಸುವನೆ 7 ನಿಗೆಮಗುವತಿ ಘನವಹುದೆ ದುರ್ಘಟವಹುದೆ 8 ಮೊರೆಹೊಕ್ಕೆ ಕಾಯೊ ಯನ್ನ ವರಸುಗಣಾಕರ ವರದವಿಠಲ ಪುಲಿಗಿರಿ ದೊರೆ ಸುಪ್ರಸನ್ನಾ 9
--------------
ಸರಗೂರು ವೆಂಕಟವರದಾರ್ಯರು
ಶೇಷ-ರುದ್ರದೇವರು ಪಾದ ಭೂ- ಪಾದ ಪ. ಹರಿಗೆ ಹಾಸಿಗೆಯಾಗಿ ಹರುಷಪಡುವ ಪಾದ ಹರಿಯ ಮಂದಿರಲ್ಲಿ ಇರುವ ಪಾದ ಹರ ಪುರಂದರರಿಗೆ ಪೂಜ್ಯವಾಗಿಹ ಪಾದ ಪಾದ 1 ವಾರುಣಿ ದೇವಿಗೆ ವರನೆನಿಸಿದ ಪಾದ ಶ್ರೀ ರಾಮಗೆ ಕಿರಿಯನಾದ ಪಾದ ಘೋರ ಇಂದ್ರಾರಿಯ ಸಂಹರಿಸಿದ ಪಾದ ಪಾದ 2 ವಾಯುದೇವರು ಜೊತೆಗೆ ವಾದವಾಡಿದ ಪಾದ ನೋಯದೆ ಭೂಮಿಯನು ಪೊತ್ತಿಹ ಪಾದ ಶ್ರೀಯರಸನ ಪಾದಪದ್ಮ ಸೇವಿಪ ಪಾದ ಸುರರು ಪಾದ 3 ಸಪ್ತೆರಡು ಭುವನದಲಿ ಗುಪ್ತವಾಗಿಹ ಪಾದ ಚಿತ್ತದಭಿಮಾನಿಗೆ ಸೇವಕನಾದ ಪಾದ ಮತ್ತೆ ಮನ ಅಹಂಕಾರ ತತ್ವದೊಡೆಯನ ಪಾದ ಪಾದ 4 ಘೋರರೂಪವ ತೊರೆದು ಸೌಮ್ಯವಾಗಿಹ ಪಾದ ಸೇರಿದವರನು ಪೊರೆವ ಶ್ರೇಷ್ಠ ಪಾದ ಹಾರೈಸಿ ಗೋಪಾಲಕೃಷ್ಣವಿಠ್ಠಲನ ಪಾದ ಪಾದ 5
--------------
ಅಂಬಾಬಾಯಿ
ಶ್ರೀರಮಣನೆ ಎನ್ನುದ್ಧಾರ ಮಾಡುವ ಪೂರ್ಣ ಭಾರವೇ ನಿನಗಿಹದೊ ಹೇರನೊಪ್ಪಿಸಿದಂಥ ಹಳಬ ವರ್ತಕಗೆ ಸ- ರ್ಕಾರ ಸುಂಕಗಳುಂಟೆ ವಾರಿಜ ನಯನ ಪ. ಆವ ಕಾಲಕು ಲಕ್ಷ್ಮೀಭೂವರ ತವ ಪಾದ ಸೇವಕನಾಗಿಹೆನು ನಿನ್ನಲಿ ಮನೋ- ಭಾವವಿರಿಸಿಹೆನು ನನಗುಸುರಲೇನು ಜೀವನಕೆ ನೀನಿತ್ತ ಕರ್ತು- ತ್ವಾವಲಿಗಳಿಂದೇನ ಮಾಳ್ಪದ ನೀ ವಳಗೆ ನಿಂತಿದ್ದು ನಿನ್ನ ಕ- ಲಾವಿಶೇಷದಿ ನಡಸಿ ನಟಿಸುವಿ1 ದೇಹವ ಧರಿಸಿಹೆನು ಇದರ ಸ- ನ್ನಾಹವಾಗಿರುವುದನು ಸುಖದು:ಖಗಳನು ಚೋಹಗೊಳದನುಭವಿಸಿ ಸುಖ ಸಂ- ದೋಹಗೊಳಲ್ಯಾಡುತ್ತಿರೆ ಮುಂ- ದಾಹ ಬಾಧೆಯ ಬಿಡಿಸಹಮ್ಮಮ ಮೋಹ ಬಲೆಯನು ಕಡಿದು ಸಲಹುವ 2 ಜನನಿ ಜನಕ ಗೃಹ ವನಿತೆ ಒಡವೆ ಭೂಮಿ ಧನವಸ್ತ್ರ ಧಾನ್ಯಗಳು ನಾನಾ ವಿಧ ವಿನಯದಿ ಸಂಪದವು ಸ್ವರ್ಗಾದಿ ಸುಖವು ತನುಮನಗಳೊಡಗೂಡಿ ಮನ್ಮಥ ಜನಕ ನಿನಗೊಪ್ಪಿಸಿ ನಿರಂತರ ನೆನವೆ ನಿನ್ನ ಪದಾಬ್ಜಯುಗ್ಮವ ವನರುಹಾಂಬಕ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹನುಮಂತ ನೀ ಬಲು ಜಯವಂತನಯ್ಯ ಪ. ಅನುಮಾನವಿಲ್ಲವೊ ಆನಂದತೀರ್ಥಾರ್ಯ ಅ.ಪ. ರಾಮಸೇವಕನಾಗಿ ರಾವಣನ ಪುರವ ನಿ-ರ್ಧೂಮಮಾಡಿದ್ಯೊ ನಿಮಿಷದೊಳಗೆಭೂಮಿಪುತ್ರಿಗೆ ಮುದ್ರೆಯುಂಗುರವನಿತ್ತು ನೀಪ್ರೇಮಕುಶಲವ ರಾಮಪಾದÀಕÀರ್ಪಿಸಿದೆ 1 ಕೃಷ್ಣಾವತಾರದಲ್ಲಿ ಭೀಮನಾಗ್ಯವತರಿಸಿದುಷ್ಟ ದೈತ್ಯರನ್ನೆಲ್ಲ ಸಂಹರಿಸಿದೆದೃಷ್ಟಿಹೀನನಾದ ಧೃತರಾಷ್ಟ್ರವಂಶವನ್ನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಗರ್ಪಿಸಿದೆ 2 ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲುಮತಿಹೀನರಾಗೆ ಸಜ್ಜನರೆಲ್ಲಅತಿ ವೇಗದಲಿ ಮಧ್ವಯತಿಯಾಗಿ ಅವತರಿಸಿಗತಿಯ ತೋರಿಸಿದೆ ಹಯವದನ ನಿಜದಾಸ 3
--------------
ವಾದಿರಾಜ
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಗುರುರಾಯರ ನಂಬಿರೋ-ಮಾರುತಿಯೆಂಬ ಪಗುರುರಾಯರ ನಂಬಿ ಬಿಡದೆ ಯಾವಾಗಲು |ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ ಅ.ಪವನಧಿಯ ಮನೋವೇಗದಿಂದ ಲಂಘಿಸಿ ಮಹಿ-ತನುಜೆಯ ಶೋಕತಾಪವ ಕಳೆದು ||ವನವ ಬೇರೊಡನೆ ಕಿತ್ತೀಡಾಡಿ ಎದುರಾದದನುಜರ ಸದೆದು ಲಂಕೆಯ ತನ್ನ ಸಖಗಿತ್ತ 1ಕೌರವ ಬಕ ಹಿಡಿಂಬಕ ಕೀಚಕರೆಂಬ |ಕ್ರೊರಸಂತತಿಯೆಲ್ಲ ನುಗ್ಗಲೊತ್ತಿ ||ಘೋರಪಾತಕಿದುಶ್ಯಾಸನ ರಕುತವಹೀರಿ ಮುದದಿ ಮುರವೈರಿಯ ಭಜಿಸಿದ 2ಜೀವೇಶರೊಂದೆಂಬ ದುರ್ವಾದಿಗಳ ಕು-ಭಾವಶಾಸ್ರ್ತಗಳೆಲ್ಲ ತರಿದೋಡಿಸಿ ||ಕೋವಿದರಿಗೆ ಸದ್ಛಾಷ್ಯ ಸುಧೆಯನಿತ್ತುದೇವ ಪುರಂದರವಿಠಲ ಸೇವಕನಾದ 3
--------------
ಪುರಂದರದಾಸರು
ಗುರುವೆ ಭಾರತಿನಾಥ | ಶರಣು ಲಾಲಿಸೋ ಮಾತ |ಹರಿಪದಾರ್ಚನೆ ಕೊಟ್ಟು ಪೊರೆಯೋ ದಯೆಯಿಟ್ಟು ಪರಾಮ ಸೇವಕನಾಗಿವಾನರಕಟಕನೆರಹಿ |ನೀಂ ಮುದದಿ ಲವಣಾಬ್ಧಿ ದಾಟಿ ಪೋಗಿ ||ಭೂಮಿ ತನುಜೆಳಿಗೆ ವಾರ್ತೆಯನೆ ಪೇಳಿ | ರಾಗಟಿಯಸ್ವಾಮಿಗರ್ಪಿಸಿದ ಬಲವಂತ ಹನುಮಂತ 1ರಾಜಸೂಯವ ಮಾಡುವದಕೆ ಮಾಗಧನ ಕೊಂದೆ |ಮಾಜಿಸಿದೆ ಕುರುಪತಿಯ ಸಂತತಿಯನು ||ಸೋಜಿಗವು ನಿನ್ನ ಲೀಲೆಯು ಆಯುಜಾತ ಬಿ |ಡೌಜ ರಕ್ಷಕ ದ್ರೌಪದೀಶ ಬಲವಂತ 2ಬುಧಮಧ್ಯಗೇಹನಲಿ ಅವತರಿಸಿ ಕುಮತಗಳ |ಬೆದರಿಸಿತ್ರಿದಶಸಪ್ತ ಗ್ರಂಥ ಮಾಡಿ ||ಸುದಯದಿಂದುತ್ತಮರಿಗಿತ್ತು ಮತವನು ನಿಲಿಸಿ |ಬದರಿಯೋಳ್ ಪ್ರಾಣೇಶ ವಿಠಲನಲ್ಲಿರುವೆ 3
--------------
ಪ್ರಾಣೇಶದಾಸರು
ಜಯಭಾರತೀಶಜಯ ಜಯಭಾರತೀಶಜಯಜಯಭಾರತೀಶಜಯತುಜಯ ರಾಘವಾಂಘ್ರಿಪಾದಕಮಲಭೃಂಗನೆ ನಮಿಪೆಜಯಭಾರತೀಶಜಯತುಪಜಯಭಾರತೀಶಜಯಜಯ ಭೀಮ ಹನುಮನೆಭಯವ ಪರಿಹರಿಸಿ ಪೊರೆಯೈಜಯ ಮಧ್ವಮುನಿರಾಯಗುರುಮಧ್ವಮುನಿರಾಯಗುರುವೆ ಪಾಲಿಸು ಜಯ ಜಯ ಅ.ಪತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದುಸೀತೆಗುಂಗುರವನಿತ್ತುಮಾತೆಯಾಜೆÕಯ ಕೊಂಡುಘಾತಿಸಿದೆ ರಕ್ಕಸರದೂತ ರಾವಣನ ಕಂಡುಭೀತಿಯಿಲ್ಲದೆ ಜನಕ-ಜಾತೆಯಳ ಕಳುಹೆನಲುಆತ ಕೋಪದಿಂದಲಿ ತನ್ನದೂತರಿಂದಲಿ ವಾಲ-ವಗ್ನಿಯಲಿ ದಹಿಸಿರೆನೆಆ ಪುರವ ದಹಿಸಿ ಮೆರೆದೆ 1ದ್ವಾಪರದಿ ಶ್ರೀಕೃಷ್ಣನಂಘ್ರಿ ಸೇವಕನಾಗಿಪಾಪಿ ಜರೆಸುತನ ಸೀಳಿದ್ರೌಪದಿಯ ನುಡಿಕೇಳಿಪಾಪಿ ಕೀಚಕನನ್ನುಕೋಪದಿಂ ಕೊಂದ ಮಹಿಮಾಪಾಪಿ ದುರ್ಯೋಧನಾದಿಗಳ ಸಂಗಡ ಕಾದಿಸೋತು ಓಡಲು ದುರುಳನುನೀತಿ ಬಿಡದಲೆ ಗದೆಯಏಟಿನಿಂದವನ ತೊಡೆಘಾತಿಸುತಲವನನಳಿದೆ 2ಮಧ್ವಮತದವರನುದ್ಧರಿಸ ಬೇಕೆಂದೆನುತಮಧ್ಯಗೇಹರಲಿ ಜನಿಸಿಶುದ್ಧ ಶಾಸ್ತ್ರಗಳನುದ್ಧರಿಸುತ ಜಗದೊಳಗೆ ಪ್ರ-ಸಿದ್ಧನೆಂದೆನಿಸಿ ಮೆರೆದೆಮುದ್ದು ಕೃಷ್ಣನ ಪೂಜೆಶ್ರದ್ಧೆ ಬಿಡದಲೆ ಮಾಡಿಉದ್ಧರಿಸಿ ಸಜ್ಜನರನುಮುದ್ದು ಕಮಲನಾಭ-ವಿಠ್ಠಲಗರ್ಪಿತವೆಂದೆಮಧ್ವಮುನಿರಾಯ ಜಯತು 3
--------------
ನಿಡಗುರುಕಿ ಜೀವೂಬಾಯಿ
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು