ಒಟ್ಟು 20 ಕಡೆಗಳಲ್ಲಿ , 16 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈಭವ ನೋಡಿರೈ ಪ ಗುರುವರೇಣ್ಯ ಸತ್ಯ ಪ್ರಮೋದ ತೀರ್ಥರು ಸಂಭ್ರಮದಲಿ ಮೆರೆದು ಬರುವ ವೈಭವ ನೋಡಿರೈ 1 ಪರಮಹಂಸ ಪರಿವ್ರಾಜಕಾದಿ ಸ ದ್ಬಿರುದುಗಳಿಂದಲಿ ಕರೆಸಿಕೊಳ್ಳುವ 2 ಅಂದಣದಲಿ ನಲುವಿಂದ ಪರಾಶರ ಕಂದನ ನಿರಿಶ್ಯಾನಂದ ಬಡುವ 3 ಸುಂದರ ರಾಜಮಹೇಂದ್ರ ಪುರದಿ ಜನ ಸಂದಹಿಯೋಳ್ಬುಧ ವೃಂದ ಬರುವ 4 ಮೋದತೀರ್ಥ ಸುಮತೋದಧಿ ಚಂದ್ರ ಪ್ರ ಮೋದ ತೀರ್ಥರಿವರೆಂದು ನುಡಿವ 5 ಮೇದಿನಿ ಸುರಕೃತ ವೇದ ಘೋಷಣ ಸು- ನಾದ ಭರಿತ ಬಹುವಾದ್ಯ ನಿನದ 6 ಪರವಶದಲಿ ತನುಮರೆದು ಕುಣಿವ7 ಕಂಡೆನು ಪರಮತ ಖಂಡನದಿ ಸುಧೆಯ ಮಂಡನೋತ್ಸವದಿ ಕಂಡುಬರುವ 8 ಚಲುವ ಗುರು ಚರಣ ಜಲಜಕೆ ನಮಿಸುತ ಲಲನೆಯರಾರುತಿ ಬೆಳಗುತಿರುವ 9 ನೇಮದಿ ಎಡಬಲ ಭೂಮಿಸುರರು ಕೈ ಚಾಮರ ಬೀಸುತ ಸಾಮ ಪಠಣ10 ಭಯವ ಪುಟ್ಟಿಸಿ ಹೃದಯದಿ ಮಾಯ್ಗಳ ಜಯ ಘೋಷದಿ ನಿರ್ಭಯದಿ ಬರುವ 11 ಕಾಣೆನು ಸತ್ಯಜ್ಞಾನ ತೀರ್ಥರ ಸ- ಮಾನ ಗುರುಗಳೆಂದಾನಮಿಸುವ 12 ಪಾವನತರ ಗೋದಾವರಿ ಸ್ನಾನದಿ ಶ್ರೀವರನಂಘ್ರಿಯ ಶೇವಿಸುವರ 13 ವಿದ್ವಜ್ಜನನುತ ಮಧ್ವಮುನಿಯ ಮತ ವೃದ್ಧಿಕಾರಿಣಿ ಪ್ರಸಿದ್ಧ ಸಭೆಯ 14 ಸಿರಿ ಕಾರ್ಪರ ನರಸಿಂಹನೆ ಪರನೆಂದರುಹುತ ಮೆರೆವ ಸಭೆಯ 15
--------------
ಕಾರ್ಪರ ನರಹರಿದಾಸರು
ಶ್ರೀ ಮದ್ಭಾಗವತ ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ. ಚಿಟ್ಟೆಸ್ವರ - ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ || ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1 ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2 ಚಿಟ್ಟೆಸ್ವರ - ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ || ರಾಗ ಮೋಹನ : ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3 ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ || ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4 ಚಿಟ್ಟೆಸ್ವರ - ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ || ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ || ಭಾರ ಕಳೆದ ಗುರು ಗೋವಿಂದ ವಿಠಲ 6 ಚಿಟ್ಟೆಸ್ವರ ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ || ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ | ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ | ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ
--------------
ಗುರುಗೋವಿಂದವಿಠಲರು
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು
ಯದುವೀರ ಒದಗೆನ್ನ ನಾಲಿಗೆಗೆಉದಯಾದಿ ಅಸ್ತಾಂತ ಆವಾವಾಗೆ ಪ.ನಿನ್ನ ನಾಮದ ಸ್ಮರಣೆಯೆ ಶುಭಕರ್ಮವುಉನ್ನತ ಸಂಕೀರ್ತನೆ ಶತಕ್ರತುವುಪುಣ್ಯಗಂಗಾಸ್ನಾನದ ಫಲಕಧಿಕವುಘನ್ನ ಜಪದ ಬೀಜವೆÉ ನಾಮವು 1ಬಂಗಾರದಿಳೆಯಳೆದೊಲಿದೀವ ದಾನದಿಹಿಂಗದೆ ಉಭಯಸ್ಯ ಗೋಶತದಿಶೃಂಗಾರ ಕೋಟಿ ಕನ್ಯಾದಾನಕಧಿಕವುಮಂಗಳಮಹಿಮ ಮುಕುಂದನ ನಾಮವು 2ಧರ್ಮಾರ್ಥ ಕಾಮಮೋಕ್ಷಗಳ ಮೂಲವಿದೆಂದುನಿರ್ಮಲಶ್ರುತಿಸಾರುತಾವೆಂದುಮರ್ಮವರಿತು ನಾಮ ನಂಬಿದೆ ಶೇಷಾದ್ರಿಯಹಮ್ರ್ಯನಿಲಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು