ಒಟ್ಟು 22 ಕಡೆಗಳಲ್ಲಿ , 14 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಂಡತಿ ನೋಡಣ್ಣ ಈಕಿನ ನ್ನ್ಹೆಂಡತಿ ನೋಡಣ್ಣ ಪ ಮಂಡೆಮುಸುಕು ತೆಗೆದ್ಹಿಂಡುಜನರ ಮುಂದೆ ಬಂಡುಮಾಡಿ ಎನ್ನ ಬೈಲಿಗೆ ತರುವಳು ಅ.ಪ ಕಂಡದ್ದು ಬೇಡುವಳು ತರದಿರೆ ಗಂಡನಲ್ಲೆಂಬುವಳು ತಿಂಡಿಗಾಗಿ ಎನ್ನ ಕಂಡವರ ಕಾಲ್ಹಿಡಿಸಿ ಮಿಂಡೆ ಭಂಡ 1 ಮಾತುಮಾತಿಗಿವಳು ಎನ್ನನು ಕೋತ್ಯಂತೆ ಕುಣಿಸುವಳು ಸೋತೆನೆಂದ್ಹೇಳುತ ಪಾತಕದ್ಹಾಕೆನ್ನ ನೀತಿಗೆಡಿಸುವಳು ಭೀತಿಲ್ಲದ 2 ಒಯ್ಯಾರ ಮಾಡುವಳು ಬೈದರೆ ಬಾಯಿ ತೆರೆದಳುವಳು ಬಾಯಿ ಮುಚ್ಚೆಂದರೆ ಕೈಬಿಟ್ಟೋಡ್ವಳು ದಾಯಾದಿಗಳು ಮುಂದೆ ಹೊಯ್ಮಾಲಿ 3 ತೊಡರು ಬಿಡಳು ಒಡಲಿನ ಕೆಡಕುಗುಣವ ಕಡಿಯಳು ಅಡಿಗಡಿಗೆನ್ನನು ದುಡುಕು ನುಡಿದು ಮನ ಮಿಡುಕಿಸುವಳು ಬಾಯ್ಬಡಕಿ ಬಿಡಿಕಿ 4 ಒದಗಿಸಿ ನಾಂ ತರಲು ಅದರೊಳು ಕದಿದರ್ಧ ತಿನ್ನುವಳು ಪದುಮನಾಭ ನಮ್ಮ ಸದಯ ಶ್ರೀರಾಮನ ಪಾದ ಕೃಪೆಯ ಪಡೆಯದಧಮ 5
--------------
ರಾಮದಾಸರು
ಆದದ್ದೆಲ್ಲ ಒಳತೇ ಆಯಿತು ನಮ್ಮ |ಶ್ರೀಧರನ ಸೇವೆಯ ಮಾಡಲು | ----- ಪಸಾಧನ ಸಂಪತ್ತಾಯಿತು ---------- ಅ.ಪದಂಡಿಗೆ ಬೆತ್ತ ಹಿಡಿಯುವುದಕ್ಕೆ |ಮಂಡೆತಗ್ಗಿಸಿ ನಾಚುತಲಿದ್ದೆ ||ಹೆಂಡತಿ ಸಂತತಿ ಸಾವಿರವಾಗಲಿ |ದಂಡಿಗೆ ಬೆತ್ತ ಹಿಡಿಸಿದಳಯ್ಯ 1ಗೋಪಾಳ ಬುಟ್ಟಿ ಹಿಡಿಯುವುದಕ್ಕೆ |ಭೂಪತಿಯಂತೆ ನಾಚುತಲಿದ್ದೆ ||ಆ ಪತ್ನಿಯು ತಾ ಪ್ರೀತಿಯಿಂದಲಿ |ಗೋಪಾಳ ಬುಟ್ಟಿಯ ಹಿಡಿಸಿದಳಯ್ಯ 2ತುಳಸಿಮಾಲೆಯ ಹಾಕುವುದಕ್ಕೆ |ಅಲಸಿಕೊಂಡು ನಡೆಯುತಲಿದ್ದೆ ||ಜಲಜಾಕ್ಷಿಯು ಶ್ರೀ ಪುರಂದರವಿಠಲ |ತುಳಸಿ | ಮಾಲೆಯ ಹಾಕಿಸಿದಳು 3
--------------
ಪುರಂದರದಾಸರು
ಇವ ಬಲು ಕಳ್ಳ ನಮ್ಮಮಾಧವಬಲು ಸುಳ್ಳನವನವÀ ಗುಣಗಳ ಹಿಡಿಸಿದನ್ಹಳ್ಳ ಪ.ನಿತ್ಯತೃಪ್ತನೆಂಬೊ ಸ್ತುತ್ಯಾರ್ಥ ನಿನ್ನ ಬಿಟ್ಟುಎತ್ತ ಹೋದವಯ್ಯ ನಮಗ್ಹೇಳೊ ಯದುಪತಿಎತ್ತ ಹೋದವಯ್ಯ ನಮಗ್ಹೇಳೊ ಯದುಪತಿತುತ್ತನ್ನ ನಿನಗೆ ಫನವೇನೊ ಯದುಪತಿ 1ಮುನ್ನಶಬರಿ ಎಂಜಲಪನ್ನಿಪಾವನ್ನೊ ನಿನಗೆಅನಸ್ತಾವೆಂಬೊ ಶೃತಿಗಳು ಯದುಪತಿಅನಸ್ತಾವೆಂಬೊ ಶೃತಿಗಳು ಹೊಗಳುತ ನಿನ್ನಲ್ಲೆಹ್ಯಾಂಗ ಇರಬೇಕೊ ಯದುಪತಿ 2ಪಟ್ಟದ ರಾಣಿ ಲಕುಮಿ ಎಷ್ಟು ಗುಣವಂತಳಲ್ಲೊಅಷ್ಟು ಭಾವದಲೆ ಚಲುವಳೊ ಯದುಪತಿಅಷ್ಟು ಭಾವದಲೆ ಚಲುವಳೊಕುಬ್ಜಿಯಂಥಸೊಟ್ಟ ಹೆಣ್ಣಿಗ್ಯಾಕೆ ಮನಸೋತೆÀ್ಯೂ ಯದುಪತಿ 3ಎಷ್ಟು ಸೃಷ್ಟಿಯ ಮಾಡಿಪುಟ್ಟ ಲವಕುಶರ ಪಡೆದಿಸೃಷ್ಟಿ ಮಾಡಿದ್ದು ಮರೆತೆನೊ ಯದುಪತಿಸೃಷ್ಟಿ ಮಾಡಿದ್ದು ಮರೆತೆನೊ ನಾಭಿಯಲ್ಲಿಪುಟ್ಟಿದ ಬೊಮ್ಮನಗುತಾನೊ ಯದುಪತಿ 4ರುದ್ರನ ಭಜನೆ ಮಾಡಿ ಪ್ರದ್ಯುಮ್ನನ ಪಡೆದಿವಿದ್ವಜ್ಜನರೆಲ್ಲ ನಗುತಾರೊ ಯದುಪತಿವಿದ್ವಜ್ಜನರೆಲ್ಲ ನಗುತಾರೊ ಶ್ರೀಧ ಶ್ರೀಧವಿದ್ಯವನೆÀಲ್ಲ ಮರೆತೇನೋ ಯದುಪತಿ 5ಸ್ವರಮಣನೀನೆಂಬೊ ಸ್ವರ ಗೈವ ಶೃತಿಗಳುಹರಿದಾವೇನೊ ಜಲದೊಳುಹರಿದಾವೇನೊ ಜಲದೊಳು ಗೊಲ್ಲತಿಯರ ಬೆರೆದಕಾರಣವ ನಮಗೆ ಹೇಳೊ ಯದುಪತಿ 6ಧೀರ ಗಂಭೀರನೆಂದು ಸಾರುವ ಶೃತಿಗಳುಹಾರಿದವೇನೊ ಮುಗಿಲಿಗೆಹಾರಿದವೇನೊ ಮುಗಿಲಿಗೆ ರಮಿಯರಸುಪೋರತನವೆಂದು ನಗತಾರೊ ಯದುಪತಿ 7
--------------
ಗಲಗಲಿಅವ್ವನವರು
ನೋಡುನೋಡುದಯಮಾಡು ಮಾಡಿನ್ನಪ.ನೋಡುವೈರಾಗ್ಯಭಾಗ್ಯವಿಹೀನನಕಾಡುತಿದೆ ಮನ ಕರುಣಾಸಂಪನ್ನ ಅ.ಪ.ಸ್ನಾನ ಸಂಧ್ಯಾವಂದನೆ ಸಚೇಲದಿಧ್ಯಾನ ಮೌನವ ಹಿಡಿಸಿಜ್ಞಾನ ಭಕ್ತಿ ವಿರಕ್ತಿ ಮಾತಿನನಾಣ್ನುಡಿಯಂತೆ ನುಡಿಸಿದಾನ ಧರ್ಮ ಕೈವಲ್ಯದಾರ್ಯೆಂದು ನಿದಾನ ತುಷ್ಟಿಯ ಬಡಿಸಿತಾನರೆಕ್ಷಣ ಸ್ವಸ್ಥವಿರದೆಲ್ಲಹಾನಿ ಮಾಡಿತೆನ್ನ ಚಿತ್ತವ ಕೆಡಿಸಿ 1ಸಾಲಂಕೃತ ಬಾಲನೊಯ್ದಡವಿಯಲಿ ಕೊಲ್ವಆಲಯದ ಕಳ್ಳನಂತೆಬಾಲೆಯನ್ನಾಳದೆ ಷಂಡಘನಕೂಪದೊಳು ನೂಕಿಸುವಂತೆಪೇಳಲೇನು ದುರ್ಬಲರನು ಅರಸ ತಾಶೂಲಕಿಕ್ಕಿಸುವಂತೆಮೇಲೆ ಮೇಲೆ ದುರ್ವಿಷಯಾಟವಿಯೊಳುಕಾಲಕಟ್ಟ್ಯೆನ್ನ ಕೆಡಹುತಿದೆ2ಕನ್ನಿಕೆಗೆ ವರನೊಪ್ಪಿದರೆ ತೆತ್ತಿಗನ್ನ ಪ್ರತಿಕೂಲವೇನುಪುಣ್ಯಶ್ಲೋಕನ ಅಭಯವಿರಲು ಸುಖಿಗನ್ಯ ತೊಡರ್ಯಾಕಿನ್ನಮನ್ನೆಯನ ಪಾದವಿಡಿದಿಹ ಮಡದಿಗೆಅನ್ಯರಾತಂಕವೇನು ಪ್ರಸನ್ನವೆಂಕಟಸ್ವಾಮಿ ನೀ ಒಲಿದರೆಕುನ್ನಿ ಮನ ಕಾಡಿ ಮಾಡುವದೇನು 3
--------------
ಪ್ರಸನ್ನವೆಂಕಟದಾಸರು
ಮುದ್ದು ಪಾಂಡವರನ್ನ ಗೆದ್ದು ಕೈಚಪ್ಪರಿಸಿಗತ್ತಿಲೆಕಾಳಿ ರುಕ್ಮಿಣಿ ಹೊಯಿಸಿದಳು ಪ.ಅಚ್ಯುತಪಾಂಡವರಿಗೆ ಹುಚ್ಚು ಹಿಡಿಸಿದನೆಂದುಉತ್ಸಾಹದಿಂದಭೇರಿಹೊಯ್ಸಿದಳು1ಮಡದಿ ದ್ರೌಪತಿ ಭದ್ರಾ ಅಡಗಿದರು ಅಂಜಿ ನಮಗೆಎಂದು ಬೆಡಗಿನಡಂಕಿರುಕ್ಮಿಣಿ ಹೊಯ್ಸಿದಳು2ಕಾಂತೆ ದ್ರೌಪತಿ ಭದ್ರಾ ಭ್ರಾಂತರಾದರೆಂದುಕಾಂತೆಯರು ಕೈ ಹೊಯ್ದು ನಿಂತಾರೆಲ್ಲ 3ಪುಟ್ಟಸುಭದ್ರೆಯು ಧಿಟ್ಟ ದ್ರೌಪತಾದೇವಿಬಿಟ್ಟಟ್ಟೆರುಆಣಿಎಂದು ಘಟ್ಟನುಡಿದು4ಧಿಟ್ಟೆರಿಬ್ಬರಗರವು ಕುಟ್ಟಿ ಚೂರ್ಣವ ಮಾಡಿಬಿಟ್ಟರು ಆಣಿಯ ಎಂದು ಸ್ಪಷ್ಟ ನುಡಿದರು 5ತಪ್ಪು ಸತ್ಯಭಾಮೆ ತಪ್ಪು ತಪ್ಪುರುಕ್ಮಿಣಿ ದೇವಿತಪ್ಪುತಪ್ಪು ತಪ್ಪು ಎಂದು ಕೈಯ ಒಪ್ಪಾಗಿ ಮುಗಿದರು 6ತಂದೆ ರಾಮೇಶನ ಮುಂದೆ ರುಕ್ಮಿಣಿದೇವಿವಂದಿಸಿ ದೇವಿಯರೆಲ್ಲ ನುಡಿದರು 7
--------------
ಗಲಗಲಿಅವ್ವನವರು
ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು