ಒಟ್ಟು 20 ಕಡೆಗಳಲ್ಲಿ , 11 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು