ಒಟ್ಟು 568 ಕಡೆಗಳಲ್ಲಿ , 74 ದಾಸರು , 465 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಪ ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಣಿ ಮುಕ್ತಿ ತೀರದಲಿ1 ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು 2 ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ3 ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ | ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ | ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು | ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು 4 ಸುಗಂಧ ಪರ್ವತವಾಸ ಪುರುಷೋತ್ತಮ | ನಿಗಮಾದಿಗಳಿಗೆ ಅತಿದೂರತರನೋ | ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ | ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ 5
--------------
ವಿಜಯದಾಸ
ಮಾರುತೀ ನಮ್ಮಗುರು ಮೂರುತೀ ಪ ಮಾರುತಿ ಕರುಣಿಸು ಜ್ಞಾನಾ ಎನ್ನ ಸೇರಿದ ಸತತ ಅಜ್ಞಾನಾ ಆಹ ದೂರ ಓಡಿಸಿ ಹರಿ ಆರಾಧನೆ ಇತ್ತು ಪಥ ಸರ್ವಾಧಾರ ಉದಾರನೆ ಅ.ಪ. ದ್ವಿತೀಯ ಯುಗದಲ್ಲವತರಿಸಿ ಸೀತಾ ಅತಿ ವೇಗದಿಂದ ಉತ್ತರಿಸಿ ರವಿ ಸುತಗೊಲಿದವನುದ್ಧರಿಸಿ ಆಹಾ ಕ್ಷಿತಿಜದೇವಿಯಳನು ಸ್ತುತಿಸಿ ಮುದ್ರಿಕೆಯಿತ್ತು ದಿವಿಜರ ಸದೆದ ಭಾರತಿಯ ರಮಣನೆ 1 ಕುರುಕುಲದಲ್ಲಿ ಉದ್ಭವಿಸಿ ಬಲು ಗರಳ ಪದಾರ್ಥವ ಸಲಿಸಿ ಚೆಲ್ವ ತರಣಿ ರೂಪವನೆ ಸಿಂಗರಿಸಿ ನೀಚ ತರ ಕೀಚಕನ ಸಂಹರಿಸಿ ಆಹ ಜರೆಯ ಸುತನ ಸೀಳಿ ಧರಣಿಪಾಲಕರನ್ನು ಸೆರೆಯ ಬಿಡಿಸಿ ಕಾಯ್ದ ಪರಮ ಸಮರ್ಥನೆ 2 ಭೂತಳದೊಳಗೆ ಯತಿಯ ರೂಪ ನೀ ತಾಳಿದೆಯೋ ಶುಭಕಾಯ ಮಾಯಿ ವ್ರಾತ ಗೆಲಿದೆ ಮಧ್ವರಾಯಾ ಕಾಯ ಜಾತ ಜನಕಗತಿ ಪ್ರೀಯಾ ಆಹಾ ಭೂತನಾಥನೆ ಪರಮಾತುಮನೆಂಬ ಪಾತಕರರಿ ಜಗನ್ನಾಥವಿಠಲನ ದೂತ 3
--------------
ಜಗನ್ನಾಥದಾಸರು
ಮಾರ್ಗದರ್ಶಕೆ ದೇವಿ ಮಾರ್ಗ ತೋರಮ್ಮ |ಸರ್ವ ಪೂರ್ವದಿ ಕವ್ಯ ಬಾಲನೆಂಬನ ಮಗಳೇ ಪ ಹರಿದೀಕ್ಷೆ ಹರಿತತ್ವ ನಿರ್ಣಯಾದಿಗಳಿರುವನರರು ಕಲಿಯುಗದಲ್ಲಿ ದುರ್ಲಭರು ಎಂದು |ಪರಿಪರಿಯ ಚಿತ್ರಿಸುತ ಸದ್ಬೋಧ ಮಾಡಿರುವೆಹರಿ ಪದಾಬ್ಜದಿ ಭಕುತಿ ಎಷ್ಟಿಹುದೊ ನಿನ್ನಲ್ಲಿ 1 ಶೇಷಾಚಲಕೆ ಬಂದು ಆ ಸುತೀರ್ಥವು ಕಪಿಲಲೇಸಾಗಿ ಮಜ್ಜನವಗೈದು ತಪವಾ |ಸಾಸಿರೊರ್ಷವು ದಿವ್ಯ ಏಕ ಚಿತ್ತದಿ ಗೈದುಭಾಸುರ ಸ್ತೋತ್ರದಿ ಹರಿಯ ತೋಷಿಸಿದೇ 2 ತಂದೆ ತಾಯಿಯು ನೀನು ಬಂಧು ಬಳಗವು ನೀನುಎಂದೆಂದಿU5ಭ್ರಾತ ವಲ್ಲಭನು ನೀನೇ |ಇಂದಿರೇಶನ ಹೊರತು ಮಂದಿ ಬೇರಿಲ್ಲೆನಗೆಎಂದು ನೀತುತಿಸಿ ಹರಿ ಸಂದರ್ಶನವ ಪಡೆದೇ 3 ದ್ವಾಪರದಲಾ ಕವ್ಯ 5À್ನಜಿತು ನೃಪನಾಗೆರೂಪಲಾವಣ್ಯಾತಿಶಯಗಳಿ5 |ಭೂಪ ಕುವರಿಯು ಆಗಿ ನೀಲಾಖ್ಯೆ ಎನಿಸುತ್ತಶ್ರೀ ಪತಿಯ ಕೈ ಪಿಡಿಯೆ ಮನವ ನೀ ಮಾಡ್ಡೇ 4 ದೈತ್ಯ ಸಪ್ತಕರೇವೆ ಗೂಳಿಗಳು ತಾವಾಗಿಸತ್ಯ ಹರಿ ದ್ವೇಷವನೆ ಸಾಧಿಸುವೆವೆಂದೂನಿತ್ಯ ಪುಷ್ಟಾಂಗದಲಿ ಬೆಳೆಯುತ್ತ ನೃಪನಲ್ಲಿಕೃತ್ಯ ಸ್ವಯಂವರ ಕೇಳಿ ಹರ್ಷಿತರು ಆಗೀ 5 ವಿಪರೀತ ಮತಿಯುಳ್ಳ ಅಪರಿಮಿತ ಬಲತೋರ್ವಸಪುತ ಗೂಳಿಗಳನ್ನೆ ಆರು ಬಂಧಿಪರೋ |ನೃಪನೆಂದ ಸುತೆ ನೀಲೆ ಕನ್ಯೆ ಕೊಡುವೆನು ಅವಗೆನೃಪ ನಿಂತು ಪಣತೊಟ್ಟ ಕೌತುಕವ ಕೇಳೀ 6 ಆರು ಬಂದವರೆಲ್ಲ ಹೋರಿಗಳ ಪಿಡಿಯಲ್ಕೆವೀರ್ಯ ಸಾಲದೆ ಮರಳಿ ಹೋಗುತಿರಲೂ |ಮಾರ ಪಿತ ಶಿರಿ ಕೃಷ್ಣ ಹೋರಿ ನಾಸಿಕಗಳಿಗೆದಾರಗಳ ಬಿಗಿಯುತ್ತೆ ಬಂಧವನ ಗೈದಾ 7 ದೇವಿ ಸುಂದರಿ ನೀಲೆ ದಿವ್ಯ ಹಾರವ ಪಿಡಿದು ದೇವ ದೇವೇಶ ಶಿರಿ ಕೃಷ್ಣ ಕಂಠದಲೀಹಾವ ಭಾವದಿ ಬಂದು ಅರ್ಪಿಸಲು ತಕ್ಷಣದಿದೇವ ವಾದ್ಯವು ಮೊರೆಯೆ ಪೂವ ಮಳೆ ಬಿತ್ತು8 ಕೃಷ್ಣ ಮಡದಿಯರಾರು ಮಂದಿಯೊಳು ನೀಲಾಖ್ಯೆಲಗ್ನದುತ್ಸವ ಕೇಳ್ದ ಭಕುತ ಜನರಾ |ಭಗ್ನ ಗೈಸುತ ಪಾಪ ಮಗ್ನವಾಹುದು ಮನವುಕೃಷ್ಣ ಗುರು ಗೋವಿಂದ ವಿಠಲ ಪದದಲ್ಲೀ 9
--------------
ಗುರುಗೋವಿಂದವಿಠಲರು
ಮುದದಿ ಹರಿಯ ಧ್ಯಾನ ಮಾಡಿ ಸಾಧಿಸೊ ಸದಯ ಹೃದಯರಾದ ಸಂಗದೊಳಗೆ ನೀನು ಬೆರೆದು ಪ --ಕರ್ತನಾದ ದೇವ ಸದ್ಪಿಲಾಸನಾ ನಿಖರವಾಗಿ ಹೃದಯದಲ್ಲಿ ನಿಲ್ಲಿಸುವೆನಾ ಪ್ರಕಟಮಾಡಿ ಸ್ತುತಿಸುತಿರುವ ಬಿಡದೆ ಅನುದಿನ ಭಕುತಿಯಿಂದ ಕ--------ಭಕ್ತ ಜನರಕೂಡಿ 1 ಯೋಗಿಜನರ ಹೃದಯದೊಳು ನಿಖರವಾಗಿಇರುವ ಭೋಗಿಶಯನನಾಗಿ ಇರುವ ಪುಣ್ಯ ಪುರುಷನಾ ಸಾಗರಾನಸುತಿಯರಾಳ್ವ ಸಾರ್ವಭೌಮನ ಬೇಗ ಭಜಿಸಿ ಗತಿಯು ಕಾಣ್ವ ಭಾಗವತರ ಸಂಗದಲ್ಲಿ 2 ದುಷ್ಟ ಜನರ ಸಂಗವೆಂಬುದು ದೂರಮಾಡೋ ನೀ ಶಿಷ್ಟ ಜನರ ಪಾದ----------ಯಾಗೋ ನೀ ಇಷ್ಟದಿಂದ ವಿಷ್ಣು ಚಿಂತನೆ ಹಿತದಿ ಮನದಿ ನೀ ನಿಷ್ಠೆಯುಳ್ಳವನು ಆಗಿ ಕೃಷ್ಣ ಹೊನ್ನ ವಿಠ್ಠಲರಾಯನಾ 3
--------------
ಹೆನ್ನೆರಂಗದಾಸರು
ಮುದ್ದು ಮೋಹನ ಗುರುಗಳಂಘ್ರಿ | ಶ್ರದ್ಧಾ ಭಕುತೀಲಿಬುದ್ಧಿ ಪೂರ್ವಕ ಭಜಿಪ ಜನರ | ನ್ನುದ್ಧರೀಸುವಾ ಪ ಕರ್ಮ ನಿಷ್ಠಾತೃಸುಮ್ಮನಸ ವಿಜಯಗುರವ | ನಮ್ಮಿತುತಿಸುವ 1 ತೀರ್ಥಕ್ಷೇತ್ರ ಚರಿಸೂತ | ಮೂರ್ತಿದರ್ಶನಾಸಾರ್ಥಕವ ಮಾಡಿಕೊಂಡ | ತೀರ್ಥಪಾವನಾ |ಕಾರ್ತಸ್ವರೇತ್ಯಾದಿವಿತ್ತ | ಪಾರ್ಥಿವಸಮಾಶಾಸ್ತ್ರ ಪ್ರಾಕೃತಾದಿ ತಿಳಿಪ | ಹರಿ ಸರ್ವೋತ್ತಮ 2 ಶ್ರೀ ವರರಿಂದುಪದಿಷ್ಟ | ವಿಠಲ ಪ್ರತಿಷ್ಟಓ ವಿಸಾಧೀಸಲು ಹರಿಯೊಳ್ | ಪ್ರಾಯೋಪವಿಷ್ಟ |ಭಾವಿ ಬ್ರಹ್ಮನಲ್ಲಿ ಗುರು ಗೋವಿಂದ ವಿಠಲನಭಾವ ಅಷ್ಟ ಕುಸುಮದಿ | ಸೇವಿಸೀದನ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುನಿಯು ನೀನಾದದ್ದು ಮನದೊಳು ನಾಬಲ್ಲೆಮುನಿ ಜನ ಮನ ಮಂದಿರಾ - ಸುರೇಂದ್ರಾ ಪ ಅನುಮಾನ ತೀರ್ಥರ ಮಾನ ಮೇಯದ ಸಾರಘನವಾಗಿ ತಿಳಿಸಿದುದಾರಾ - ಸುರೇಂದ್ರಾ ಅ.ಪ. ಗಜ ವೈರಿ ಮಧ್ಯದಭುಜಗ ವೇಣಿಯರ ಕೂಡೀ - ಸುರೇಂದ್ರಾ ||ಅಜನೀನೇ ಎನ್ನುತ | ಭುಜಿಸೆ ಅನ್ನವ ನೀಡಿಯಜನಾದಿಗಳ ಮಾಡಲೂ - ಸುರೇಂದ್ರಾ ||ಗಜ ವರದನು ಬಂದು | ಭುಜಿಸಲು ಅನ್ನವತ್ಯಜಿಸಿ ಬಂದೆಯೊ ಸುರಪುರವಾ - ಸುರೇಂದ್ರಾ 1 ವ್ರಜ || ಸುರರನೆಲ್ಲರ ಕಾಯ್ದಹರಿಯ ಮೊಗವ ನೋಡೆ ನಾಚುತಲೀ - ಸುರೇಂದ್ರಾ 2 ವಾಸುಕಿ | ಅಂದ ನೇಣನ ಮಾಡಿಮಂಥಿಸಿ ಶರಧಿಯನ್ನಾ - ಸುರೇಂದ್ರಾ ||ಅಂದು ನೀನಮೃತವ ನುಂಡ ಕಾರಣದಿಂದಇಂದಿಲ್ಲಿ ಸುರರಿಗುಣಿಸೆ ಬಂದ್ಯೋ - ಸುರೇಂದ್ರಾ 3 ಮಧ್ವ ಶಾಸ್ತ್ರವೆಂಬ | ದುಗ್ದಾಬ್ದಿಯನೆ ನೀನುಶ್ರದ್ಧೆಯಿಂದಲಿ ಮಥಿಸೇ - ಸುರೇಂದ್ರಾ ||ಉದುಭವಿಸಿದ ನ್ಯಾಯ | ಸುಧೆ ಎಂಬ ಅಮೃತವವಿದ್ವಜ್ಜನಕೆ ಉಣಿಸೇ - ಸುರೇಂದ್ರಾ ||ತ್ರಿದಶ ಲೋಕವ ತ್ಯಜಿಸಿ | ಉದಿಸಿದೆ ಧರೆಯೊಳುಸಾಧು ವೇಷವನ್ನೆ ಧರಿಸೀ - ಸುರೇಂದ್ರಾ 4 ನಾಕಪತಿಯೆ ನಿನ್ನಾ | ನೇಕ ಚರಿತೆಯಲ್ಲಿನಾಕೇಳಿ ಪೊಗಳಲಳವೇ - ಸುರೇಂದ್ರಾ ||ಲೋಕಾ ಲೋಕದೊಳು | ಟೀಕಾರ್ಯರೆಂಬವಾಕು ಕೇಳೀ ಬಲ್ಲೆನೋ - ಸುರೇಂದ್ರಾ ||ನಾಕಜ ಪಿತ ಗುರು ಗೋವಿಂದ ವಿಠಲನನೇಕ ಬಗೆಯಿಂದ ಸ್ತುತಿಸಿದೆಯೋ - ಸುರೇಂದ್ರಾ 5
--------------
ಗುರುಗೋವಿಂದವಿಠಲರು
ಮೂರ್ತಿ ನೀ ಕರುಣಿಸೊ ಪ್ರಭುವೇ ಪ ಎಲ್ಲೆಲ್ಲಿ ನೋಡಲಲ್ಲಿಲ್ಲಿ ನಿಮ್ಮಯ ಕೀರ್ತಿಯನು ಮೊರೆಹೊಕ್ಕ ಸುಜನರ ಪೊರೆವರೆಂಬ ಬಿರುದು ಕೇಳಿ ತ್ವರಿತದಿಂದಲಿ ಬಂದೆನೋ ಭರದೀ ಹಾರೈಸು ಕರುಣಾ ಶರಧೀ 1 ಇಷ್ಟಾರ್ಥಗಳನಿತ್ತು ಸಲಹಿದೆ ತುಪ್ಪರಾಗುತಲವರ ಕಷ್ಟಗಳನೇ ಕಳೆದೆ ಉದ್ಧರಿಸಿದೆ ಅಷ್ಟ ಸೌಭಾಗ್ಯವ ಕೊಟ್ಟು ರಕ್ಷಿಸಿದೇ - ಕೈಬಿಡದೇ 2 ಅಡಿಗಳಿಗೆರಗುತಲಿ ನುಡಿ ನುಡಿಗೆ ತುತಿಸಲಿ ಬಿಡದೆ ನಿನ್ನನು ಕೊಂಡಾಡುತಲಿ ತಡಮಾಡದೆ ಯಡರುಗಳ ಪರಿಹರಿಸಿದೆ ನಿಮ್ಮ ಮಹಿಮೆಗೆ ಸರಿಗಾಣೆ ಭೂಮಂಡಲದೊಳಗೇ ಪ್ರಭವೇ 3
--------------
ರಾಧಾಬಾಯಿ
ಮೊಚ್ಚೆ ಮೊಚ್ಚೆಲಿ ಹೊಡೆಯಿರಿ ಇವನ | ನೆಚ್ಚಿದೆತನುವಿದನೆಂಬುವನ || ಹುಚ್ಚ ನಾಯಿಯೋಲ್‍ಎಚ್ಚರವಿಲ್ಲದೆ | ಅರ್ಚಕ ಜನರನು ಬೊಗಳುವನ ಪ ಪರ ಉಪಕಾರಿಲ್ಲದ | ಮಾನುಷನಾಗಿಬಾಳುವನ || ತಾ ಅಜ್ಞಾನ ಮಾರ್ಗದಿ ನಡೆದು |ಜ್ಞಾನವ ಪರರಿಗೆ ಹೇಳುವನ 1 ಸತಿಸುತರತಿಶಯ ಹಿತವರು ಎನುತಲಿ | ಸತತವು ಅವರೊಳುಮರಗುವನ | ಮಿತಿಯಿಲ್ಲದೆ ಧನಧಾನ್ಯವ ಬೇಡುತ |ಕ್ಷಿತಿಯ ಮೇಲೆ ತಿರುಗುವನ2 ಕರುಣವ ಪಡೆಯದೆ ಭವತಾರಕನ | ನರ ತನುಗಳನುಸ್ತುತಿಸುವನ | ಪರಿಪರಿ ಸಂಸಾರದ ವಿಷಯದಲಿ |ನಿರುತದಿ ಮನವನು ಮಥಿಸುವನ 3
--------------
ಭಾವತರಕರು
ಯಂತ್ರೋದ್ಧಾರಕನೆ | ಪಾಲಿಸೊ ಯಂತ್ರೋದ್ಧಾರಕನೆ ಪ. ಸಂತತ ತವ ಪದಕ್ರಾಂತಳಾಗಿರುತಿರೆ ಇಂತು ನಿರ್ದಯವೇಕೊ ಸಂತಸದಲಿ ಪೊರೆ ಅ.ಪ. ಯತಿಗಳಿಂದ ಸಂಸ್ಥಿತನೆನಿಸುತ ಅ- ಪ್ರತಿಮ ಮಹಿಮ ಈ ಕ್ಷಿತಿಯೊಳು ನೆಲಸಿಹ 1 ತುಂಗ್ರಭದ್ರ ತೀರ ಮಂಗಳ ಮಹಿಮನೆ ಕಂಗೊಳಿಸೆನ್ನಂತರಂಗದಲಿ ನೆಲಸುತ 2 ಮಂತ್ರಿವರ್ಯ ಮಾಹಂತ ಹರಿಪ್ರಿಯ ಎಂತು ವ್ಯಾಸರಿಲ್ಲಿ ಯಂತ್ರದಿ ಬಿಗಿದರೊ 3 ಹನುಮ ಭೀಮ ಶ್ರೀ ಮುನಿ ಮಧ್ವಾರ್ಯನೆ ಸನುಮತದಲಿ ಎನ್ನ ಮನದಿಚ್ಛೆ ಸಲಿಸೊ 4 ಬೆಟ್ಟದೊಡೆಯ ಬಹು ನಿಷ್ಠೆಯೊಳ್ ಸ್ತುತಿಸುವೆ ಇಷ್ಟ್ಯಾಕೆ ತಡೆ ಹಂಪೆ ಪಟ್ಟಣವಾಸಿಯೆ 5 ಕಾಮಿತ ಫಲದನೆ ಕಾಮಿನಿಗುಂಗುರ ನೇಮದಿಂದಿತ್ತೆಯೊ ರಾಮನ ದೂತನೆ 6 ಎಷ್ಟು ಮಾನವೊ ಬೆಟ್ಟೆಲಿ ಜಪಮಣಿ ದೃಷ್ಟಿಸೊ ಗೋಪಾಲಕೃಷ್ಣವಿಠ್ಠಲ ದಾಸ 7
--------------
ಅಂಬಾಬಾಯಿ
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಪ ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾಅ.ಪ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ 1 ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ2 ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು3
--------------
ವಿಜಯದಾಸ
ಯಾಕೆ ನೀನು ಹೀಗೆ ಮಾಡುವಿ ವೀರ ಹನುಮ ಯಾಕೆ ನೀನು ಹೀಗೆ ಮಾಡುವಿ ಪ. ಯಾಕೆ ನೀನು ಹೀಗೆ ಮಾಡುವಿ ಜೋಕೆಯಿಂದ ಸಲಹೊ ಎಂಬ ವಾಕು ಕೇಳದೇನೋ ನಿನಗೆ ಬಿಂಕ ಅ.ಪ. ಸತ್ಯವಂತನೆಂಬ ವಾಕು ಎತ್ತ ಪೋಯಿತೀಗ ಬಿರುದು ಒತ್ತಿ ಒತ್ತಿ ಕೇಳಿದರೂ ಉತ್ತರವÀ ಕಾಣೆನಲ್ಲೊ 1 ಒಡೆಯ ರಾಮಭಂಟನೆನಿಸಿ ಒಡವೆ ವಸ್ತು ಇಟ್ಟುಕೊಂಡು ಬಡಿವಾರದಲಿ ನಿಂತರೀಗ ಬಡವರೆಮ್ಮ ಗತಿಯದೇನೊ 2 ವೀರ ಉಡುಪು ಧರಿಸಿಕೊಂಡು ವೀರ ಭೀಮನೆನಿಸಿಕೊಂಡು ಮೋರೆ ಎತ್ತಿ ನೋಡದಿರಲು ದಾರಿಯಾವುದೆಮಗೆ ಪೇಳು 3 ಮುನಿಯ ರೂಪ ತಾಳಿ ಮತ್ತೆ ಮೌನಧರಿಸಿ ನಿಂತರೀಗ ಮಾನತನದಿ ತುತಿಸುವೆಮಗೆ ಏನು ಮುಂದೆ ಗತಿಯು ಇನ್ನು 4 ಬೇಡಲಿಲ್ಲೊ ನಿನ್ನ ಒಡವೆ ಬೇಡಲಿಲ್ಲೊ ನಿನ್ನ ಭಾಗ್ಯ ಆಡೊ ಒಂದು ಮಾತು ಎನಲು ಮಾಡಿರುವೆ ಮನವ ಕಲ್ಲು 5 ಏನು ಸೇವೆ ಮಾಡಲೀಗ ಏನು ನಿನ್ನ ಸ್ತುತಿಸಲೀಗ ಏನು ಧ್ಯಾನ ಮಾಡಲೀಗ ಏನು ತಿಳಿಯದಲ್ಲೊ ಎನಗೆ 6 ಶುದ್ಧವಾದ ನಿನ್ನ ಒಂದು ಮುದ್ದು ಮಾತು ಕೇಳೆನೆಂದು ಒದ್ದಾಡುವೆನೊ ಮನದಿ ಬಹಳ ಇದ್ದಿಯಾಕೊ ಸುಮ್ಮನಿನ್ನು 7 ಮನದಿ ಎನಗೆ ದೃಢವು ಇಲ್ಲ ಹನುಮ ನಿನಗೆ ದಯವು ಇಲ್ಲ ಮುನಿಸು ಮಾಡೆ ನೀನು ಸಲ್ಲ ಘನವೆ ನಿನಗೆ ಪೇಳೊ ಸೊಲ್ಲ 8 ನಿನ್ನ ಹೊರತು ಪೊರೆವರಿಲ್ಲ ಮನ್ನಿಸಿನ್ನು ಕಾಳಿನಲ್ಲ ನಿನ್ನ ಕೀರ್ತಿ ಜಗದಿ ಬಹಳ ಉನ್ನತದಲಿ ಮೆರೆಸೊ ಮಲ್ಲ 9 ಅನ್ನಕೊಡಿಸಿ ಇಟ್ಟುಕೊಂಡು ಮನ್ನಿಸುವೆನೆಂಬೋ ಇಂಥ ಭಿನ್ನನಾದ ನುಡಿಗೆ ನಾನು ಇನ್ನು ಒಪ್ಪಲಾರೆ ಕಂಡ್ಯ 10 ಕದರುಮಂಡಲಿಗಿ ಹನುಮ ಹೆದರಲಾರೆ ನಿನಗೆ ಇನ್ನು ಒದಗಿ ಪಾಲಿಸೆಂದು ಬೇಡೆ ಹೃದಯ ಕರಗದಲ್ಲೊ ನಿನಗೆ 11 ನಿರುತ ನಿನ್ನ ದಾಸಳೆನಿಸಿ ಚರಿಸುವಂಥ ಎನಗೆ ಒಲಿದು ಅರುಹದಿರಲು ಒಂದು ವಾಕು ಬಿರುದು ಉಳಿವುದೇನೊ ಇನ್ನು 12 ಇಷ್ಟ ಸಲಿಸದಿರೆ ಗೋಪಾಲ ಕೃಷ್ಣವಿಠ್ಠಲಗ್ಹೇಳಿ ನಾನು ಕಟ್ಟಿ ಹಾಕಿಸುವೆನೊ ಎನ್ನ ಮೂರ್ತಿ 13 ಗುರುಗಳಾಜ್ಞೆಯಿಂದ ನಾನು ಹರುಷದಿಂದ ಬಳಿಗೆ ಬರಲು ಗರುವದಿಂದ ನಿನ್ನ ನೇತ್ರ ತೆರದು ನೋಡದಿರುವರೇನೊ 14 ತಂದೆ ನೀನೆ ಸಲಹೊ ಎಂದು ಬಂದು ನಿನ್ನ ಅಡಿಗೆ ಎರಗೆ ಒಂದು ಮಾತನಾಡದಂಥ ಕುಂದು ಏನು ಪೇಳೊ ಇನ್ನು15 ಬೇಡ ಬೇಡ ಛಲವು ಇನ್ನು ಪಾಡಿಪೊಗಳುವಂತೆ ದಯವ ಮಾಡು ಎನ್ನ ಮೊರೆಯ ಕೇಳಿ 16
--------------
ಅಂಬಾಬಾಯಿ
ಯಾಕೆ ಮನದಲಿ ಶೋಕಿಸುತ್ತಿರುವೆ ಜಗ ದೇಕನಾಥನು ಸಾಕುತಿರುವನು ನೀ ತಿಳಿಯದಿರುವೆ ಪ ಲೋಕನಾಥನ ವಿವೇಕದಿ ಸ್ತುತಿಸದೆ ವ್ಯಾಕುಲದಿಂ ಮನ ಕಳವಳಗೊಳುತಲಿ ಅ.ಪ ಸೃಷ್ಟಿಕರ್ತನು ರಕ್ಷಿಸುತ್ತಿರುವ ದುರಿತಂಗಳ ರಾಸಿಯ ಬೆಟ್ಟಗಳ ತರಿದೊಟ್ಟು ತಿರುವ ಅದು ತಿಳಿಯದು ನೀ ಬಲು ಕಷ್ಟಗಳ ಪಡುತಿರ್ಪ ವಿಷಯಗಳ ನೋಡುತ ನಗುತಿರುವ ಇಷ್ಟು ಈತನ ಪ್ರಭಾವವು ತಿಳಿಯದೆ ಲಕ್ಷ್ಮಿರಮಣ ರಕ್ಷಿಸೆನ್ನುತ ಸ್ಮರಿಸದೆ 1 ನಾನು ನನ್ನದು ಎಂಬ ಅಭಿಮಾನ ಅದು ಪೋಗುವ ತನಕ ಜ್ಞಾನ ಮಾರ್ಗಕೆ ಇಲ್ಲ ಸಾಧನ- ವೆಂದರಿಯುತ ಮನದಲಿ ಧ್ಯಾನಿಸುತ್ತಿರು ಶ್ರೀನಿಧಿ ಗುಣಗಳನು ಹೀಗಿರುವುದೆ ಪ್ರಧಾನ ಧ್ಯಾನ ಗಾನ ಮೌನಾದಿ ವ್ರತಗಳನು ಶ್ರೀನಿಧಿಗರ್ಪಿಸಿ ಮನ ಹರುಷಿಸದಲೆ2 ತಂದೆ ಶ್ರೀ ವೆಂಕಟೇಶ ವಿಠ್ಠಲನು ಹರಿಭಕುತರ ಮೊರೆಯನು ಛಂದದಿಂದಲಿ ಕೇಳಿ ಪೋಷಿಪನು ಮುಕುಂದನಲಿ ಭಕುತಿ ಎಂದೆಂದಿಗೂ ತಪ್ಪದೆ ಉದ್ಧರಿಸುವನು ನಿಜವೆಂದರಿ ಇದನು ಮುಂದೆ ಕಮಲನಾಭ ವಿಠ್ಠಲ ಭಕುತರ ಸಂದಣಿ ಪೊರೆದು ಸಂತೈಸುತಲಿರೆ ವೃಥ 3
--------------
ನಿಡಗುರುಕಿ ಜೀವೂಬಾಯಿ