ಒಟ್ಟು 4461 ಕಡೆಗಳಲ್ಲಿ , 126 ದಾಸರು , 3134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ರಮಣಾ ಪಬಂದನೋಡು ಆನಂದದಿಂದ ಗೋ'ಂದಗೋಕುಲಾನಂದ ಮುಕುಂದಾ ಅ.ಪಶ್ರೀ ಕೇಶವ ನಾರಾಯಣಮಾಧವಶ್ರೀಧರ ಗಿರಿಧರ ಗೋವರ್ಧನಧರಶ್ರೀ ದಾಮೋದರ ಪದ್ಮನಾಭಮುಚಕುಂದವರದ ಮುರಹರ ಶ್ರೀಕೃಷ್ಣ 1ಸರ್ವೋತ್ತಮ ಸರ್ವಜ್ಞ ಶಿಖಾಮಣಿಸರ್ವಪ್ರೇರಕ ಸರ್ವವ್ಯಾಪಕಸರ್ವಾಧಾರಕ ಸರ್ವ ನಿಯಾಮಕಸರ್ವತಂತ್ರ ಸ್ವತಂತ್ರ ಸಮರ್ಥಾ 2ಗೋಪಾಲಾಚ್ಯುತ ಗೋಪ ಕಿಶೋರಾಗೋಪಿ ಜನಮನ ಚಂದ್ರ ಚಕೋರಾಆಪದ್ಬಾಂಧವ ಭೂಪತಿ'ಠ್ಠಲಕೈಪಿಡಿದೆಮ್ಮನು ಕಾಪಾಡಲು ಬಾ 3ಪಾದ ಮ'ಮೆ
--------------
ಭೂಪತಿ ವಿಠಲರು
ಇಂದಿರೆ ಅರಸ ಚಂದ್ರಮಂಡಲಮಂದಿರಾಖಿಳವಂದ್ಯ ಹಯಮುಖಎಂದೆಂದೆನ್ನ ಮನದಿಂದಗಲದಿರುಮಂದರಾದ್ರಿಧರ ಪ. ತುಂಗಮಹಿಮ ತುರಂಗವದನ ಶು-ಭಾಂಗ ರಿಪುಕುಲಭಂಗ ಸುಜನರಸಂಗ ಎನ್ನಂತರಂಗ ಮಲಿನವಹಿಂಗಿಸುವುದೆಂತೊಮಂಗಳಾಬ್ಧಿತರಂಗದುಬ್ಬಿಗೆತಿಂಗಳೆನಿಸುವ ಅಂಗಜನ ತಂದೆರಂಗ ನಿನ್ನ ಪಾದಕೆಂಗಮಲದಲ್ಲಿಭೃಂಗನಪ್ಪುದೆಂತೊ 1 ವಾರಿಜಾಕ್ಷ ಮುರಾರಿ ಮದವೆಂಬೋಮಾರಿ ಮುಸುಕಿತು ಸಾರಿ ಮತ್ಸರಮಾರನೊಡಗೂಡಿ ದಾರಿ ತಪ್ಪಿಸಿಗಾರುಮಾಡಿತೆನ್ನ ನಾ-ನಾರೆ ಕ್ರೋಧಮಹೋರಗನ ವಿಷ-ಧಾರೆಗೆ ಭಯಕಾರಿ ಹರಿ ನಿನ್ನಚಾರುಚರಣವ ಸಾರಿದೆನಿಂದುತೋರಿ ಸಲಹಬೇಕು 2 ಧsÀನ್ಯ ಸುರರಜೀವನ್ನ ಕರುಣಸಂ-ಪನ್ನ ನಿತ್ಯಪ್ರಸನ್ನ ಚಿನುಮಯಪನ್ನಗಾರಿವಾಹನ್ನ ಶಶಿಸಮ-ವರ್ನ ಹಯವದನನಿನ್ನ ಪಾದಪಾವನ್ನಸುರತರು-ವಿನ್ನ ನೆಳಲೊಳಿಟ್ಟೆನ್ನ ಸಲಹಬೇ-ಕನ್ಯಥಾ ಗತಿಶೂನ್ಯ ನಾನೆಲೊಪೂರ್ಣಪುರುಷರನ್ನ 3
--------------
ವಾದಿರಾಜ
ಇಂದಿರೆ ಇಂದೀವರಾಕ್ಷಿ- ಸುಂದರಿ ಅರ- ವಿಂದ ಮಂದಿರೆ ಪೂರ್ಣೆ | ಪ ಇಂದುವದನೆ ಅಮರೇಂದ್ರ ವಂದಿತೆ | ಸಿಂಧುಸುತೆ ಆನಂದ ಫಲದೆ ಅಪ ರಾರರಮಣನ ಸೋಲಿಪ ನಖದಕಾಂತಿ | ಚಾರು ಚರಣತಳ ವಾರಿಜಾಂಕುಶ ಧ್ವಜ | ವಾರಣ ಕನಕ ಮಂಗಳರೇಖೆವೊಪ್ಪೆ | ನೂ- ಪುರ ಕಡಗ ಪೆಂಡ್ಯೆ ಪರಡೆ ಜಾನು ಜಂಘೆ | ಕಟಿ ನಾಭಿ ಉದರ ತ್ರಿವಳಿ | ಧಾರ ಶೋಭನವಾದ ಹೊನ್ನುಡಿ | ಧಾರ ಕಿಂಕಿಣಿ ತೋರಮುತ್ತಿನ- ಹಾರ ಉರವಿಸ್ತಾರ ಗುಣವಂತೆ 1 ಕಂಬು - ಗ್ರೀವ ಸರಿಗೆ ದಿವ್ಯಚಂದನ ಲೇಪಿಸಿ | ಕಂಚುಕ ಹಸ್ತಕಡಗ ಮುದ್ರೆ ಪ್ರವಳಮಣಿಯು ಕೇಯೂರ ದಂಡೆಯ ಸರ | ಬೇವಿನೆಸಳಂತೆ ಪುಬ್ಬು ಢಾಳಿಪ | ತಾವರೆಯ ಫಣೆಯೂ ಸಂಪಿಗೆ | ನಾಸಿಕ ವೇಣಿ | ಹಾವಿನಂದದಿ ಒಪ್ಪುತಿರೆ ದೇವಿ 2 ವಾಲೆಮೂಗುತಿ ಹೊನ್ನಹೂವು ತೂಗುವ ತುಂಬು | ಕದಪು ಮುಂಗೂದಲು | ಮೇಲೆ ರ್ಯಾಕಟೆ ಚೌರಿ ಮುಡಿದ ಕುಸುಮವು | ಸಾಲು ಮುತ್ತಿನ ಜಾಳಿಗೆ ಗೊಂಡ್ಯ ಶಿರದಲ್ಲಿ | ಪಾಲ ಸಾಗರ ಶಾಯಿ ವಿಜಯವಿ- ಠ್ಠಲರೇಯನ ಉತ್ಸಾಹದಲಿ | ತೋಳಿನಲ್ಲಿ ಬಿಗಿದಪ್ಪಿ ಪವಳಿಪ | ಶ್ರೀ ಲಕುಮಿ ತ್ರೈಲೋಕ್ಯ ಮಾತೆ 3
--------------
ವಿಜಯದಾಸ
ಇಂದಿರೆ ಪಾಲಿಸು ಎನ್ನ ಪ ಇಂದಿರೆ ನಿನ್ನನು ವಂದಿಸಿ ತುತಿಸುವೆ ವಂದಿಪ ಜನಕಾನಂದ ನೀಡುವ ದೇವೀ ಅ.ಪ ಮಂದಜಾಸನ ಮುಖ ಸುರರಾ ಕರುಣ ದಿಂದಲಿ ಪಾಲಿಪೆ ಅವರ ಸದರ ಸದಾ ಪೊಂದಿದ ಜನಕೆ ಅಧಾರಾ ಆಹ - ಳೆಂದು ನಿನ್ನಯ ಪಾದದ್ವಂದ್ವಜಲಜ ಮನೋ - ನಿತ್ಯ ವಂದಿಪೆ ಹರಿರಾಣೀ 1 ಸ್ಮರಣೆ ಮಾಳ್ಪರ ಪಾಪಹÀರಣ ಪರಿ - ಹರಿಸಿ ಮಾಡುವಿ ಪೂರ ಕರುಣಾ ಆಹಾ ಸರಿಯಿಲ್ಲ ನಿನಿಗಿನ್ನು ಹರಿಗೆ ಸಮಾಸಮೆ ತ್ವರಿತಾದಿ ಎನ್ನನು ಮರೆಯದೆ ಪೊರೆಯೆಂದೆ2 ಮಾತೆ ದಾರಿದ್ರ್ಯವ ಕಳೆದು ನಿನ್ನ ದೂತ ನಾನೆಂದು ನೀನೊಲಿದು ಮಾತು ಲಾಲಿಸಿ ಭಾಗ್ಯಗರಿದು ಎನಗೆ ನೀತವಾಗಿ ಸುಖ ಸುರಿದು ಆಹಾ ದಾತಗುರುಜಗನ್ನಾಥವಿಠಲ ನೀ - ಕೇತನ ಸುಖ ಎನಗೆ ಈ ತೆರ ನೀಡಮ್ಮಾ3
--------------
ಗುರುಜಗನ್ನಾಥದಾಸರು
ಇಂದಿರೇಶ ದಯದಿಂದಲಿ ತ್ವರಿತದಿ ಬಂದು ಒದಗಿ ಸಲಹೊ ಸುಧೆಯಾನಂದ ಉಣಿಸಿದ ಪ. ಇನ್ನು ನಿರೀಕ್ಷಿಸಲೆನಗೆ ಸಾಧ್ಯವಿಲ್ಲ ಅನ್ಯ ಸಾಧನವಿಲ್ಲ ಮುನ್ನಿನ ಮಾರ್ಗದ ರೀತಿಯ ನೋಡಲು ಮನ್ನಿಪ ಜನರಿಲ್ಲ ಧನ್ಯ ವಿಬುಧ ಗಣ ಮಾನ್ಯ ಮುಕುಂದನೆ ಮಾಧವ 1 ದಾರು ನೀನಲ್ಲದೆ ಮಾರಮಣನೆ ನಿನ್ನ ಸೇರಿದ ಬಳಿಕೀ ಧಾರುಣಿ ಒಳಗೆ ನಿವಾರಣೆಯದೇನೊ ಮೂರು ದೊರೆಗಳಲಿ ವಾರಿಜನಾಭ ನೀ ಪ್ರೇರಕನಾಗಿರೆ ಘೋರವಾವರಿಸುವುದೆ 2 ತಪ್ಪುಗಳೆಲ್ಲವ ಒಪ್ಪಿಕೊಳ್ಳೊಯೆನ್ನಪ್ಪ ನೀ ಕರುಣದಲಿ ಒಪ್ಪಿಸಿ ಪಡದನು ತಪ್ಪದೆ ಮನದೊಳಗಿಪ್ಪ ವ್ಯಸನ ಬಿಡಿಸೊ ಸರ್ಪ ಗಿರೀಂದ್ರನೊಳೊಪ್ಪುವ ಸತ್ಯ ಸಂ- ಕಲ್ಪ ಭಜಕ ನಿಜ ಕಲ್ಪತರುವೆನಿಪ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಂದಿರೇಶನೆ ಸುಂದರಾಂಗನೆ ಮಂದಹಾಸದಿಂದ ಬೇಗ ಬಂದು ರಕ್ಷಿಸೈ 1 ಮರೆಯಬೇಡವೊ ಸಿರಿಯ ಅರಸನೆ ಪೊರೆಯದಂತೆ ಮರೆಯಬಹುದೆ ಸಿರಿಯನಾಥನೆ 2 ರಂಗ ರಮಣನೆ ಭುಜಂಗಶಯನನೆ ಮಂಗಳಾಂಗ ನಿನ್ನ ಕರುಣಾಪಾಂಗ ಬೇಡುವೆ 3 ಮಾರಜನಕನೆ ಉದಾರಚರಿತನೆ ಭಾರವೇನೊ ದೀನಜನರುದ್ಧಾರ ಮಾಡುವುದು 4 ನಾಮಗಿರೀಶನೆ ನಿಸ್ಸೀಮ ಮಹಿಮನೆ ಪ್ರೇಮವಿಟ್ಟು ಪಾಲಿಸೆನ್ನ ಸ್ವಾಮಿ ನರಹರೆ 5
--------------
ವಿದ್ಯಾರತ್ನಾಕರತೀರ್ಥರು
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಇಂದು ಆರತಿ ತಂದು ಬೆಳಗಿರೆ ಇಂದಿರಾವರಗೆ ಮಂದರಧರಗಿಂದು ಪ ಸಿಂಧು ಶಯನಗೆ ಕುಂದರದನೆ ಅ.ಪ ವಾಹನ ವಂದಿತ ದಶ ಕಂಧರಾಂತಗೆ ಕುಂದರದನೆ ವಂದಿಸುವರ ಬಂಧ ಬಿಡಿಶ್ಯಾ ನಂದಗರಿವಗೆ ಮಂದಗಮನೆ 1 ಅಂಗನೆಯರು ಶೃಂಗಾರದಲಿ ಸಂಗೀತ ಪ್ರಿಯಗೆ ಭೃಂಗಾಲಕಿ ಗಂಗಾಪಿತ ಮಂಗಳಾಂಗ ವಿ- ಹರಿಗ ವಾಹನಗೇ ತಿಂಗಳಮುಖಿ 2 ನಾರಿಯಳ ನುದ್ಧಾರ ಮಾಡಿದ ಚಾರು ಚರಣಗೆ ನಾರಿ ಮಣಿಯೆ ಸೇರಿದವರ ಪೊರೆವ ಕಾರ್ಪರ ನಾರಶಿಂಹಗೆ ಭೂರಿಮಹಿಮಗಿಂದು 3
--------------
ಕಾರ್ಪರ ನರಹರಿದಾಸರು
ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ ಧ್ರುವ ಬಯಲಿಗೆ ನಿರ್ಬಯಲಾಗೇದ ಗುಹ್ಯಗೂಢಕೆ ಮೀರ್ಯದ ಸೋಹ್ಯಸೊನ್ನಿದತ್ತಲದೆ ಕೈಯೊಳು ಸಿಲುಕದ 1 ಧ್ಯಾನಮೋನಕ ದೂರ ಏನೆಂದ್ಹೇಳಲಿ ವಿಚಾರ ಅನಂತಗುಣ ಅಪಾರ ‌ಘನ ಪರಾತ್ಪರ 2 ಕಣ್ಣಿನೊಳದೆ ಖೂನ ಧನ್ಯಗೈಸುವ ನಿಧಾನ ಚಿಣ್ಣ ಮಹಿಪತಿಗೆ ಪ್ರಾಣ ಆನಂದ ಘನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದುವದನೆ ಪಾರ್ವತಿಯೆ ನಾ ಇಲ್ಲಿಗೆ ಬಂದೆನು ಬಾಗಿಲು ತೆಗೆಯೆ ಜಾಣೆ ಬಂದೆನು ಬಾಗಿಲು ತೆಗೆಯೆ 1 ಬಂದವರ್ಯಾರೀ ವ್ಯಾಳ್ಯದಿ ಬಾಗಿಲು ಬಂದು ತೆಗೆಯೊರ್ಯಾರಿಲ್ಲ ಈಗ ಬಂದು ತೆಗೆಯೊರ್ಯಾರಿಲ್ಲ 2 ಅಂಗನಾಮಣಿ ಕೇಳೆ ಗಂಗಾಧರೆನಿಸಿದ ಚಂದ್ರಶೇಖರ ನಾ ಬಂದೀನೆ ಜಾಣೆ ಚಂದ್ರಶೇಖರ ನಾ ಬಂದೀನೆ 3 ಸಿಂಧುರಾಜನ ಸತಿಸುತರನ್ಹೊತ್ತಿಲ್ಲಿಗೆ ಬಂದ ಕಾರಣವೇನು ನೀನು ಅವ ರಿಂದ ಕಾರಣ ಮತ್ತೇನು 4 ಪಶುಪತಿ ನಾ ಬಂದೆ ಕುಶಲದಿ ಬಾಗಿಲು ತೆಗೆಯೆ ಜಾಣೆ ಕುಶಲದಿ ಬಾಗಿಲು ತೆಗೆಯೆ 5 ಪಶುಗಳಿಗೆಲ್ಲ ಪತಿಯಾದರೆ ನಿನ ಕೊಂಬು ಹಸನಾಗಿ ತೋರಿಸೊ ಎನಗೆ ಕೊಂಬು ಹಸನಾಗಿ ತೋರಿಸೊ ಎನಗೆ 6 ಸರ್ವಶರೀರದಲ್ಲೆತ್ತಿಕೊಂಡಿರುವಂಥ ಶ್ರೇಷ್ಠ ಶಿವನು ನಾ ಬಂದೀನೆ ಜಾಣೆ ಶ್ರೇಷ್ಠ ಶಿವನು ನಾ ಬಂದೀನೆ 7 ಸರ್ವ ಸೇರಿರುವಂಥ ಹುತ್ತ ನೀನಾದರೆ ಇತ್ತ ಬರುವೋದುಚಿತಲ್ಲ ಪೋಗೊ ಇತ್ತ ಬರುವೋದುಚಿತಲ್ಲ 8 ಕಾಂತೆ ಪಾರ್ವತಿ ನೀಲಕಂಠ ನಾ ಬಂದೀನಿ ಸಂತೋಷದಿ ಬಾಗಿಲು ತೆಗೆಯೆ ಸಂತೋಷದಿ ಬಾಗಿಲು ತೆಗೆಯೆ 9 ಕಂಠದೊಳಗೆ ಕಪ್ಪಿದ್ದರೆ ನೀ ನವಿ- ಲಂತೆ ಕುಣಿದು ತೋರಿಸೆನಗೆ ನವಿ- ಲಂತೆ ಕುಣಿದು ತೋರಿಸೆನಗೆ 10 ಫಾಲಾಕ್ಷ ನಾ ರುಂಡಮಾಲೆ ಧರಿಸಿದಂಥ ಶೂಲಿಯು ನಾನು ಬಂದೀನೆ ತ್ರಿ- ಶೂಲಿಯು ನಾ ಬಂದೀನೆ11 ಮೂರು ಶೂಲೆಗಳ್ಯಾವ್ಯಾವ ಕಡೆಯಲುಂಟು ಭಾಳ ಬಲ್ಲವರಲ್ಲೆ ಪೋಗಯ್ಯ ನೀ ಭಾಳ ಬಲ್ಲವರಲ್ಲೆ ಪೋಗಯ್ಯ 12 ಸ್ಥಾಣು ನಾ ಬಂದೀನಿ ಜಾಣೆ ನೀ ಬಾಗಿಲು ತೆಗೆಯೆ ಒಳ್ಳೆ ಜಾಣೆ ನೀ ಬಾಗಿಲು ತೆಗೆಯೆ 13 ಸ್ಥಾಣು ನೀನಾದರೆ ವೇಣುಮದ್ದಲೆ ಮಾಡೊ ಜಾಣರ ಮನೆಗೆ ನೀ ಪೋಗಯ್ಯ ಒಳ್ಳೆ ಜಾಣರ ಮನೆಗೆ ನೀ ಪೋಗಯ್ಯ 14 ಗಜ ಚ- ರ್ಮಾಂಬರಧಾರನು ನಾನೇ ಚ- ರ್ಮಾಂಬರಧಾರನು ನಾನೇ 15 ವೈರಿ ಭಸ್ಮಾಂಗವ ಧರಿಸಿz À ಸಾಮಜ ವಸನವ ನೋಡಿ ಇರ- ಲಾರೆನು ನಿನ್ನೊಡಗೂಡಿ 16 ಭೂತಗಣಂಗಳ ನಾಥನಾಗಿರುವೊ ಪ್ರ- ಖ್ಯಾತನು ನಾನು ಬಂದೀನೆ ಸದ್ಯೋ- ಜಾತನು ನಾನು ಬಂದೀನೆ 17 ಭೂತಗಣವ ಕೂಡಿ ಯಾತಕೆ ಬರುವುದು ಭೀತಿ ಬಡುವೆ ಮುಂಚೆ ಸಾಗೋ ನಾ ಭೀತಿ ಬಡುವೆ ಮುಂಚೆ ಸಾಗೋ18 ಮಾತಿಗೆ ಮಾತನಾಡುವೋರೆ ಪಾರ್ವತಿ ಕೇಳೆ ಮೂಕನಂತಿರುವೆನೆ ನಾನು ಇನ್ನು ಮೂಕನಂತಿರುವೆನೆ ನಾನು 19 ಮೂಕನಂತಿರುವುದ್ವಿವೇಕ ಭೀಮೇಶಕೃಷ್ಣ- ನ್ನ ಕಾರುಣಕೆ ಪಾತ್ರಳೇನೋ ನಿನಗೆ ನಾ ಕೈಯ ಮುಗಿವೆ ಬಾ ನೀನು 20
--------------
ಹರಪನಹಳ್ಳಿಭೀಮವ್ವ
ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಉದಯಾಸ್ತಮಾನವಿಲ್ಲದೆ ಸದೋದಿತ ಭಾಸುತಿದೆ ಧ್ರುವ ವಸ್ತುವಿದೆ ನಿತ್ಯವಾದ ಅತ್ತ್ಯೋತ್ತಮಾನಂದಬೋಧ ಎತ್ತ ನೋಡಿದರತ್ತ ಹತ್ತಿಲೆ ಸೂಸುತಲ್ಯದೆ 1 ಸತ್ಯಸದಾನಂದೋಬ್ರಹ್ಮ ನಿತ್ಯತೃಪ್ತ ನಿರುಪಮ ಅತ್ತಿತ್ತಲಾಗದೆ ಪೂರ್ಣಮತ್ತವಾಗ್ಯೆನ್ನೊಳಗದೆ 2 ಗುಪಿತ ನಿಜ ಸಕಲಾಗಮ ಪೂರಿತ ಶುಕಾದಿಗಳೂ ಸೇವಿತ 3 ಸರ್ವಸಾಕ್ಷಿ ಸರ್ವಾಧಾರ ಸರ್ವರೊಳು ಸರ್ವೇಶ್ವರ ಸರ್ವಮಿದÀಂ ಖಲುಬ್ರಹ್ಮವೆಂದು ಶ್ರುತಿ ಸಾರುತಿದೆ 4 ಇಹಪರ ಪರಿಪೂರ್ಣ ಮಹಾಗುರು ನಿರಂಜನ ಮಹಿಪತಿ ಬಾಹ್ಯಾಂತ್ರದೊಳು ಸಹಕಾರ ಸಾಕ್ಷಾತ್ಮವಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಸಾಧುಜನ ಹೃದಯ ಸದ್ಗುರು ದಯ ನಿಶ್ಚಯ ಧ್ರುವ ಸಾರಿಚಲ್ಲೆದ ಪೂರ್ಣ ಹರಿಯ ಸುಖ ನಿಧಾನ ಸುರಮುನಿಗಳ ಪ್ರಾಣ ಶರಣಜನರಾಭರಣ 1 ಬಣ್ಣಬಣ್ಣಭಾಸುವ ಪುಣ್ಯಶ್ಲೋಕರಾಜೀವ ಸಣ್ಣ ದೊಡ್ಡದಲ್ಲೀವ್ಹ ಕಣ್ಣಿಗೆ ಕಾಣಿಸುವ 2 ಗುಹ್ಯಕೆ ಗುಹ್ಯವಾದ ಮಹಾಮಹಿಮೆಯ ಬೋಧ ಮಹಿಪತಿ ಸದ್ಗೈಸಿದ ಮಹಾಗುರು ಸುಪ್ರಸಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು