ಒಟ್ಟು 342 ಕಡೆಗಳಲ್ಲಿ , 64 ದಾಸರು , 305 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭುವನವನಾ ಯಂಧ್ಯಾಗಿದ್ದರೆಕರ|ಸುವದು ನಿರಂತರ ಲೋಕದಲೀ ||ಅವಿದಿತ ನಾನು ಅದನ್ನ ಆಪನಿತು |ವಿವರಿಸುವೆನು ಕಲಿಗಳು ಕೇಳೀ ಪರವಿಮೂಡವ ಮುಂಚೇಳುತ ಶ್ರೀಮಾ |ಧವನ ಸ್ಮರಿಸುತಿರಲದೆ ಭವನಾ ||ಯುವತಿಯರಾ ವ್ಯಾಳ್ಯದಲಿ ಮೊಸರು ಮಥ |ನವ ಮಾಡುತಿಹರು ಅದೆ ಭವನಾ 1ಶಂಖ ಚಕ್ರ ಮೊದಲಾಯುಧ ಧರಿಸದೆ |ಮಂಕುಗಳಿರುತಿಹರದೇ ವನಾ ||ಸಂಕಟ ಚೌತೀ ಶಿವನಿಸಿ ಭೂತ ಶ |ಶಾಂಕನ ಪೂಜಿಪರದೇ ವನಾ 2ಅಂಗನಿಯರು ತಿಲಕಾಯುಧ ಕುಂಕುಮ |ಶ್ರಿಂಗರವಾಗಿ ಹರದೆ ಭವನಾ ||ಅಂಗಣದಲಿ ವೃಂದಾವನ ಗೋವ್ಗಳು |ರಂಗವಲಿಕ್ಕುವರದೆ ಭವನಾ 3ಸರುವರು ಸರ್ವದ ದುಷ್ಟ ಶಬ್ದ ಉ |ಚ್ಚರಿಸುತಲಿಪ್ಪರು ಅದೇ ವನಾ ||ಹರಿಗತಿ ಪ್ರಿಯಕರ ತುಲಸಿಲ್ಲದ ಮಂ |ದಿರವೆ ನಿಶ್ಚಯವಾಗಿ ವನಾ 4ರಾಮಾರ್ಪಿತದನ್ನವ ಹೋಮಿಸಿದ |ಧೂಮ ವ್ಯಾಪಿಸಿಹದದೆ ಭವನಾ ||ಭಾಮಿನಿಯರು ಕೆಲಸವ ಮಾಡುತಖಳ|ಭೀಮನ ಸ್ಮರಿಸುವರದೆ ಭವನಾ 5ದೇವಪೂಜೆ ನೈವೇದ್ಯವು ವೈಶ್ವ |ದೇವ ಯಂಬದಿಲ್ಲದೇ ವನಾ ||ಆವ ಕಾಲಕೂ ವೇದ ವೇದ್ಯ ಭೂ |ದೇವರು ಬರದಿಹದದೇ ವನಾ6ವೇದ ಪುರಾಣದ ಘೋಷವು ಸರ್ವದ |ಭೂ ದಿವಿಜರ ಸಂದಣೆ ಭವನಾ ||ವಾದಿಗಳ ಹಳಿದು ಮಧ್ವರಾಯರಾ |ರಾಧನೆ ಮಾಡುವರದೆ ಭವನಾ 7ಹಿಕ್ಕದೆ ತಲಿ ಕಚ್ಚಿಲ್ಲದೆ ತಿರುಗುತ |ಮಕ್ಕಳನಳಿಸುವರದೇ ವನಾ ||ಸೊಕ್ಕಿಲಿ ಗಂಡತ್ತಿಗಳಿಗೆ ಬೈತಿಹ |ರಕ್ಕಸಿ ಹೆಂಗಸಿಹದೇ ವನಾ 8ತಂಬೂರಿ ತಾಳಂಗಳ ಸುಸ್ವರ |ತುಂಬಹದೆಂದೆಂದು ಭವನಾ ||ಉಂಬುವಾಗಪ್ರತಿಪ್ರತಿ ತುತ್ತಿಗೆ | ಪೀತಾಂಬರನ ಸ್ಮರಿಪರದೆ ಭವನಾ 9ರೌಚ ದಂತ ಧಾವನ ಮೊದಲಾದ ಸ |ದಾಚಾರಿಲ್ಲಲ್ಲದೇ ವನಾ ||ಯಾಚಕರಿಗೆ ತುತ್ತನ್ನವಿಲ್ಲ ಮ |ತ್ತ್ಯೋಚನಿ ಯಾತಕೆ ಅದೇ ವನಾ 10ಹರಿದಿನದಲಿ ಸರ್ವರು ನಿರ್ಜಲ ಜಾ |ಗರವನು ಮಾಡುವರದೇ ಭವನಾ ||ಮರುದಿನ ಭೋಜನ ಸೂರ್ಯೋದಯ ಕಂ |ತರಿಸದೆ ಮಾಡುವರದೆ ಭವನಾ 11ಉದಯಾಗಿ ತಾಸಾದರನ್ನನರ|ಸುದತಿಯರೇಳದ ಮನೇ ವನಾ ||ಪದುಮನಾಭ ನಾಮೋಚ್ಚಾರಣೆ ಯಂ |ಬದು ಎಂದೆಂದಿಲ್ಲದೇ ವನಾ 12ಪ್ರತಿದಿನ ಧರ್ಮಕೆ ಪ್ರತಿಕೂಲಾಗದ |ಸತಿಸುತರಿದ್ದರೆ ಅದೆ ಭವನಾ ||ವೃತಗಳು ಸದ್ದಾನಗಳು ತಿಳಿದನವ |ಕತ ಮಾಡುತಿಹ್ಯರದೆ ಭವನಾ 13ರೊಕ್ಕವಿದ್ದು ಸದ್ವ್ಯಯವಾಗದ ಯಳಿ |ಮಕ್ಕಳಿಲ್ಲದಿಹ ಸದನೇ ವನಾ ||ಮುಕ್ಕುಂದನ ದಾಸರ ನಿಂದಿಸುತಿಹ್ಯ |ಚಿಕ್ಕ ಮತಿಗಳೀಹದೇ ವನಾ 14ಮಾರುತ ಮತವನುಸರಿಸುತಲೀ ವ್ಯವ |ಹಾರ ಮಾಡುವದೆ ಭವನಾ ||ಮಾರುತಿ ಸುತ ಪ್ರಾಣೇಶ ವಿಠ್ಠಲನ ಪ |ದಾರಾಧನೆ ಮಾಡುವರದೆ ಭವನಾ 15
--------------
ಪ್ರಾಣೇಶದಾಸರು
ಮರುಳಾಟವೇಕೊ - ಮನುಜಾ |ಮರುಳಾಟವೇಕೊ? ಪ.ಊಧ್ರ್ವ ಪುಂಢ್ರವಿಲ್ಲದ ಮುಖವ ತಿದ್ದಿ ನೋಡಲೇಕೊ |ಶುದ್ದ ಸಾತ್ತ್ವಿಕವಿಲ್ಲದನ ಬುಧ್ಧಿ ಏತಕೊ ||ಕದ್ದು ಹೊಟ್ಟೆಹೊರಕೊಂಬುವಗೆ ಶುದ್ಧ ಶೀಲವೇಕೊ |ಮಧ್ವಶಾಸ್ತ್ರ ಓದದವನವಿದ್ಯೆಏತಕೊ - ಮನುಜಾ1ಮೃತ್ತಿಕೆ ಶೌಚವಿಲ್ಲದವಗೆ ಮತ್ತೆ ಸ್ನಾನ - ಜಪವೇಕೊ |ಹಸ್ತಕಟ್ಟಲರಿಯದವಗೆ ಅಗ್ನಿಹೋತ್ರವೇತಕೊ ||ತೊತ್ತು ಹೋಗುವವಗೆ ಪರತತ್ತ್ವವಿಚಾರವೇಕೋ |ಕರ್ತೃ ಕೃಷ್ಣನ ನೆನೆಯದವನ ಉತ್ತಮತನವೇಕೊ 2ಹಸಿವೆ ತೃಷೆಯ ತಾಳದವನ ಹುಸಿಯ ವೈರಾಗ್ಯವೇಕೊ |ವಿಷಯ ಮೆಚ್ಚಿದವಗೆ ಪರದ ಕುಶಲವೇತಕೊ ||ಹುಸಿಜಪಗಳ ಮಾಡುವವಗೆ ಮುಸುಕಿನ ಡಂಬಕವೇಕೊ |ಕುಸುಮನಾಭಗರ್ಪಿಸದ ಅಶನವೇತಕೊ - ಮನುಜಾ 3ಸೂಳೆಗಾರನಿಗೆ ತುಳಸಿ ಮಾಲೆಯ ಶೃಂಗಾರವೇಕೊ ||ಶ್ರೀಲೋಲನ ನೆನೆಯದವನ ಬಾಳುವೆಯೇತಕೊ |ಮೂಲಮಂತ್ರವರಿಯದವಗೆ ಮೇಲೆ ದೇವತಾರ್ಚನೆ ಏಕೊ |ಸಾಲಗ್ರಾಮದಭಿಷೇಕವಿಲ್ಲದ ತೀರ್ಥವೇತಕೊ ಮನುಜಾ 4ಕಂಡ ನಾರಿಯೀಕ್ಷಿಸುವ ಲಂಡಗೆ ಪುರಾಣವೇತಕೋ |ಭಂಡ ಮಾತನಾಡುವನ ಪಾಂಡಿತ್ಯವೇತಕೊ |ಪುಂಡರೀಕವರದ ಶ್ರೀ ಪುರಂದರವಿಠಲನ |ಕಂಡು ಭಜಿಸಲರಿಯದವನವಿತಂಡಬುಧ್ಧಿಯೇತಕೋ5
--------------
ಪುರಂದರದಾಸರು
ಮರೆಯಬೇಡ ಮನವೆ ನೀನು |ಹರಿಯ ಚರಣವ ಪ.ಯಾಗ - ಯಜÕ ಮಾಡಲೇಕೆಯೋಗಿ - ಯತಿಯು ಆಗಲೇಕೆ |ನಾಗಶಯನ ನಾರದವಂದ್ಯನಕೂಗಿ ಭಜನೆಮಾಡುಮನುಜ1ಸತಿಯು ಸುತರು ಹಿತರು ಎಂದುಮತಿಯು ಕೆಟ್ಟು ತಿರುಗಲೇಕೆ |ಗತಿಯು ತಪ್ಪಿ ಹೋಗುವಾಗಸತಿಸುತರು ಬಾಹೊರೇನೊ ? 2ಹರಿಯ ಸ್ಮರಣೆ ಮಾತ್ರದಿಂದದುರಿತ ಘೋರವೆಲ್ಲ ನಾಶಪರಮಪುರುಷ ಪುರಂದರವಿಠಲಪರದಪದವಿಕೊಡುವನೊ3
--------------
ಪುರಂದರದಾಸರು
ಮುಖ್ಯ ಪ್ರಾಣನೆ ನಮ್ಮ ಮೂಲ ಗುರುವು |ರಕ್ಕಸಾಂತಕ ಶ್ರೀ ಭಾರತಿಯ ರಮಣನೆಂಬ ಪಅಂಜನಾ ಸುತನಾಗಿ ದಶರಥ ಸುತನಂಘ್ರಿ |ಕಂಜಭಜಿಸಿ ರಾವಣಾದಿ ಖಳರಾ ||ಅಂಜಿಸಿ ಕಪಿಗಳು ಚೇತನ ಕೆಡಲಾಗ |ಸಂಜೀವನವ ತಂದು ಪ್ರಾಣವನುಳುಹಿದ 1ಹರಿಗೆ ದ್ವೇಷಿಗಳಾದ ಮಗಧಾದಿ ಕ್ಷಿತಿಪರ |ತರಿದು ದ್ರೌಪದಿಯಳಕರವಪಿಡಿದು ||ದುರುಳಕೌರವರನ್ನು ಅಳಿದು ದ್ವಾಪರ ಕೊಟ್ಟಾ |ಗರಳಭೋಜನ ಮಾಡಿ ವೃಕೋದರನೆನಿಸಿದಾ2ವಿಷಯಂಗಳ ತೊರೆದು ಕಾಷಾಯಾಂಬರ ಧರಿಸಿ |ವಸುಧೆಯೊಳಗೆ ದುರ್ಮತವ ಸೋಲಿಸಿ ||ಅಸಮ ಶ್ರೀ ಪ್ರಾಣೇಶ ವಿಠ್ಠಲ ಪರದೈವವೆಂದು |ಹಸನಾಗಿ ತಿಳಿಸಿದ ಶ್ರೀ ಮಧ್ವಮುನಿಯೆಂಬ 3
--------------
ಪ್ರಾಣೇಶದಾಸರು
ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು
ರಾಜ ರಾಜ ಮಹಾರಾಜ ಶ್ರೀಧವಾಗೋವಿಂದರಾಜ ಅಚರಾಚರ ಸಬೀಜಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಯುಗದಿಮತ್ಸ್ಯಕೂರ್ಮ- |ನಾದಿವರಾಹನರಸಿಂಹ- |ನಾದಿಹಿರಣ್ಯಕಶ್ಯಪನ |ಛೇದ ಮಾಡಿ ರಕ್ತ ಕುಡಿದಿ1ದ್ವಿತೀಯಯುಗದಿ ವಾಮನದ್ವಿತೀಯಉದರದಲಿ ಬಂದು | ಮಥಿಸಿ ಬಲಿಯ ಕ್ರೋಧದಿಂದ |ಸುತಳಕ್ಕೊತ್ತಿ ಬಿಟ್ಟೆಯಾ2ಪರಶುರಾಮ ರೇಣುಕಿಯ |ವರಸುಪುತ್ರನಾಗಿಜನಿಸಿ | ವೀರಸದಿಂದ ಕ್ಷತ್ರಿ (ಯರ)ನಿರಸ ಮಾಡಿ ಬಿಟ್ಟಿ3ರಾಮಚಂದ್ರ ದಾಶರಥಿಯ |ಶ್ಯಾಮನೀಲಮೇಘವರ್ಣ |ಸ್ತೋಮರಾವಣನ ಉದ್ದಾಮನವರ ವಂಶ ತರಿದಿ4ದ್ವಿತೀಯದ್ವಾಪರದಲ್ಲಿ | ಮಥಿಸಿ ಕಂಸ ಪೂತನೆಯ |ಕಾತರ ಮಾಡಿ ಕೌರವನು |ಪಥಕೆ ಹೊಂದಿಸಿ ಬಿಟ್ಟ ಕೃಷ್ಣ5ಕಲಿಯುಗ ಬರಲು ಬೌದ್ಧನಾಗಿ |ಛಲ ದ್ವೇಷಖಲಜನರ ಕಲಹ ಹೆಚ್ಚಲಾಗುತಿರೆ |ಕಲ್ಕಿ ಹಯಗ್ರೀವನಾದಾ6ಮೂರು ತಾಪದಿಂದ ಬೆಂದ |ಘೋರದುರಿತಭವದಮೂಲ ಬೇರ ಕಿತ್ತಿ ಬಿಸುಟಿದ ಶ್ರೀಶಪಾಲ ಶಂಕರೇಶ7
--------------
ಜಕ್ಕಪ್ಪಯ್ಯನವರು
ರಾಜರ ನೋಡಿರೈ ಇನತತಿತೇಜರ ಪಾಡಿರೈ ಪಪೂಜಕÀರಾ ಸುರಸನ್ನುತರ ಅ.ಪವರಪಾಷ್ರ್ಣಿದ್ವಯ ಪರದಲಿ ಶೋಭಿಪಜಾನುಗಳೋ ಶಶಿಬಿಂಬಗಳೋ 1ಕಟಿತಟವೋಕೇಸರಿನಡುವೋತುಂಬಿದ ಕರುಣನ ಗುಂಭಸುನಾಭೀ -ತಾವರೆಯೋ ಗಂಗಾಸುಳಿಯೋ 2ಸುಂದರಕುಕ್ಷಿಸುಚಂದನ ಚರ್ಚಿತದಂಡಗಳೋಕರಿಶುಂಡಗಳೋ3ಯತಿಕುಲವರ್ಯನ ಸ್ಮಿತಯುತವಕ್ತ್ರಕ್ಷಿತಿಸುರ ವಂದ್ಯನ ಅತಿ ಸುಂದರ -ನಯನಗಳೋ ನೈದಲಿಯುಗಳೋ 4ಘಣೆಯೋ ಅಕ್ಷತಮಣಿಯೋ 5ಮಂದಿರವೆನಿಸುವ ವೃಂದಾವನಶುಭವೃಂದಾರಕಘನವೃಂದದಿ ರಾಜಿಪದಾತಾಜಗದೊಳು ಖ್ಯಾತಾನೀತಾ ಭಾವಿ ವಿಧಾತಾ 6ಶಿಷ್ಟರ ಸುಮನೋಭೀಷ್ಟದ ಗುರುಜಗ -ನ್ನಾಥವಿಠಲ ದೂತಾ 7
--------------
ಗುರುಜಗನ್ನಾಥದಾಸರು
ಲಟಪಟ ನಾ ಸಟೆಯಾಡುವೆನಲ್ಲ |ವಿಠಲನ ನಾಮ ಮರೆತು ಪೋದೆನಲ್ಲ ಪ.ಶೇಷಗಿರಿಯ ಮೇಲೆ ಸವುತೆಯ ಬಿತ್ತಿ |ದೇವಗಿರಿಯ ಮೇಲೆ ಅವತಾರವಿಕ್ಕಿ ||ಹಾಳೂರಿಗೊಬ್ಬ ಕುಂಬಾರ ಸತ್ತ |ಗೋಕರ್ಣದೊಳಗೊಬ್ಬ ಪರದೇಶಿ ಅತ್ತ 1ನಾ ಸಮಯದಿ ಮೂರು ರಾಯರ ಕಂಡೆಕುಪ್ಪುಸ ತೊಟ್ಟ ಕೋಳಿಯ ಕಂಡೆ ||ಬೆಳ್ಳಕ್ಕಿ ಬೆರಣಿಯ ಮಾಳ್ಪುದ ಕಂಡೆ |ನರಸೂಳೆಗೆಯ್ವುದ ಕಣ್ಣಾರೆ ಕಂಡೆ 2ನುಸಿಯೊಂದು ರೊಟ್ಟಿಯ ಸುಡುವುದ ಕಂಡೆಆಡೊಂದು ಮದ್ದಳೆ ಬಡಿವುದ ಕಂಡೆ ||ಕಪ್ಪೆ ತತ್ಥೈಯೆಂದು ಕುಣಿವುದ ಕಂಡೆ |ಪುರಂದರವಿಠಲನ ಕಣ್ಣಾರೆ ಕಂಡೆ * 3
--------------
ಪುರಂದರದಾಸರು
ಶಿವಭಕ್ತನಾಗೋ ಪ್ರಾಣೀ | ಅವನಿಯಲ್ಲಿ ಪರದಲ್ಲಿ ||ವಿವಿಧ ಭೋಗಗಳ ಕಾಂಬೀ | ಶಿವಭಕ್ತನಾಗೊ ಪ್ರಾಣೀ ಪಲಿಂಗಾಧಾರಣ ಮಾಡಿ ಜಂಗಮರಧಿಕಾರಾ ಸಾರೀ |ಹಿಂಗಿಕೊ ಭವಜನ್ನ್ಯ ದುಃಖ ||ಸಂಗಾವಾಗಿ ರುದ್ರಾಕ್ಷಿಯಂಗಾಳರ್ಚಿಸೂತಾ | ನಿಃಸಂಗನಾಗೊ ದುರ್ವಿಷಯದೀ 1ಸುವಿವೇಕಿ ಮನಸಿಲಿಂದಾ ಶಿವಶಬ್ದವ ಶೋಧಿಸಿ |ಕವಿಗಳ ಮುಖದಿಂದ ತಿಳಿಯೋ ||ನವತ್ರಿಪತ್ರಯುಕ್ತ ಬಿಲ್ವಾ ಸಮರ್ಪಣೆ ಮಾಡೊ |ಸವೆಯಾದಂಥ ಪದವೈದೂವಿ2ಭಜಿಸೋ ವೀಭೂತಿಯನ್ನು ದ್ವಿಜಸ್ತೋಮಾಕೆರಗಾದೀರೊ |ಪ್ರಜಗಳಿಗೆ ತೋರದಿರು ಭಾವಾ ||ಅಜಪ್ರಾಣೇಶ ವಿಠ್ಠಲಾನು ಅಜಿನಾಂಬರ ಸಮನೆನಬ್ಯಾಡಾ |ವಿಜಯವಂತನಾಗುವೀ ಜಗದೀ 3
--------------
ಪ್ರಾಣೇಶದಾಸರು
ಶ್ರೀ ತತ್ತ್ವವಾದ ಮತವ ಪಶ್ರೀ ತತ್ತ್ವವಾದ ಮತವಾರ್ದಿಶುಭಚಂದ್ರಮನ |ಭೂತಲದೊಳಪ್ರತಿಮನೆನಿಪ ಶ್ರೀಯತಿವರನ |ಪ್ರೀತಿಯಿಂ ಭಜಿಸೆ ಇಷ್ಟಾರ್ಥಗಳಸಲಿಸುವವಾತಜಾತನ ಸ್ಮರಿಸಿರೈ ಅ.ಪಶ್ರೀಮಾರುತನು ತ್ರೇತೆಯಲಿ ಹನುಮನೆಂದೆನಿಸಿ |ತಾ ಮುದದಿ ಅಂಜನಾದೇವಿ ಗರ್ಭದಿ ಜನಿಸಿ |ರಾಮಪಾದಾಂಬುರುಹ ಭಜಿಸಿ ಸದ್ಬಕ್ತಿಯಲಿಸ್ವಾಮಿಯಾಜೆÕಯನೆ ಕೊಂಡು |ನೇಮದಿಂ ಸಾಗರವ ದಾಟಿ ಲಂಕೆಯ ಪೊಕ್ಕು |ಪ್ರೇಮದಿಂದೊಯ್ದ ಮುದ್ರೆಯ ಜಾನಕಿಗೆ ಕೊಟ್ಟು |ಆ ಮಹದ್ವನದ ದನುಜರನೆಲ್ಲವಳಿದ - ನಿಸ್ಸೀಮ -ಹನುಮನ ಭಜಿಸಿರೈ 1ದ್ವಾಪರದಿ ಮಾರುತನು ಕುಂತಿದಾರಕನೆನಿಸಿ |ದ್ವಾಪರನ ಯುಕ್ತಯಿಂದುತ್ಕøಷ್ಟರಾಗಿದ್ದ |ಪಾಪಿಗಳನಳಿದು ಕೀಚಕ - ಜರಾಸಂಧಾದಿಭೂಪಾಲಕರನು ತರಿದು ||ದ್ರೌಪದಿಗೆ ಸೌಗಂಧಿ ಕುಸುಮವನು ತರಪೋಗ -ಲಾಪಥದೊಳಸುರಮಣಿಮಂತಕದನವ ಮಾಡೆ|ಕೋಪದಿಂದವನ ಮರ್ದಿಸಿದನತಿಬಲವಂತನಾ ಪುರುಷನಂ ಭಜಿಸಿರೈ 2ಕಲಿಯುಗವು ಪ್ರಾಪ್ತವಾಗಲು ಮಧ್ವನಾಮದಿಂದಿಳೆಯೊಳವತರಿಸಿ ಸೋಹಂ ಎಂಬ ಶಂಕರನಹುಲುಮತಂಗಳಜರಿದುಮಾಯಿಗಳಗೆಲಿದು ಮೋಹನ ಶಾಸ್ತ್ರಬಲೆಯನರಿದುಮತಿತ ದರುಶನವೈದ ನುಂಗಿ ಜೀರ್ಣಿಸಿಕೊಂಡುಪ್ರಲಯ ಭೈರವನೆಂಬ ಬಿರುದ ಅವನಿಯ ಮೇಲೆನೆಲೆಗೊಳಿಸಿ ವಿಷ್ಣು ಪರದೈವವೆಂದರುಹಿದಾಅಲವಭೋದರ ಭಜಿಸಿರೈ 3ಪ್ರತಿವಾದಿಗಿದಿರಾಗಿ ತಲೆಯೆತ್ತದಂತೆ ಸಂ-ತತ ಧರೆಯೊಳದ್ವೈತವಂಕುರಿಸದಂತೆ ದು-ರ್ಮತದ ಮೋಹನಶಾಸ್ತ್ರ ಪಲ್ಲವಿಸದಂತೆ ಮಾಯಿಗಳಮತಗಳ ಮತ ಹೆಚ್ಚದಂತೆ ||ಕ್ಷಿತಿಯೊಳಗೆ ಶ್ರೀತತ್ತ್ವವಾದ ನೆಲಸಿಪ್ಪಂತೆ |ಶ್ರುತಿಶಾಸ್ತ್ರವದ್ವೈತವಂ ಬಿಟ್ಟು ಸೆಳೆವಂತೆಪ್ರತಿಪಾದಿಸುವ ಖಳರ ದುರ್ಭಾಷ್ಯಗಳ ಜರಿದಯತಿರಾಯರು ಭಜಿಸಿರೈ 4ಪರಮವೈಷ್ಣವರ ಮಿಂಚಿಡುವ ರತ್ನದ ಸಾಣೆ |ಪರವಾದಿಗಳ ಬೆನ್ನ ಮುರಿವ ವಜ್ರದ ಸಾಣೆ |ಗುರುಮಧ್ವಮುನಿಯ ಬಲುವಿದ್ಯ ಸಾಮಥ್ರ್ಯಕ್ಕೆಸರಿಗಾಣೆ ಲೋಕದೊಳಗೆ ||ಧರೆಯೊಳಗೆ ಶ್ರೀತತ್ತ್ವವಾಗಿ ನೆಲಸಿಹ ವೀಣೆ |ಚರಿಸದಂತಿಳೆಯಲದ್ವೈತಕಿಕ್ಕಿದ ಆಣೆ |ವರಮೂರ್ತಿ ಚೈತನ್ಯ ವಂದ್ಯ ಸುತ್ರಾಮನೇ |ಪೂರ್ಣಪ್ರಜÕರ ಭಜಿಸಿರೈ 5ಅಕಳಂಕ ಚರಿತನೆ ಮುಮುಕ್ಷ ಮಸ್ತಕದಮಣಿ|ನಿಖಿಳಪೌರಾಣಶ್ರುತಿ ಶಾಸ್ತ್ರದಾಗಮದಖಣಿ|ಸಕಲವಾದಿಗಳ ಜಿಹ್ವೆಯಲಿ ಮೆಟ್ಟಿದಆಣಿಭಾಗವತಚಿಂತಾಮಣಿ ||ಯುಕುತಿ ಪರಿಪೂರ್ಣಯತ್ಯಾಶ್ರಮಕೆಕಟ್ಟಾಣಿ|ಪ್ರಕಟ ಕವಿಜನಕಮಲವ್ಯೂಹಕೆಗಗನಮಣಿ|ಸಕಲ ಜಗವಂದ್ಯ ಚೈತನ್ಯ ಚಿಂತಾಮಣಿಮುಖ್ಯಪ್ರಾಣರ ಭಜಿಸಿರೈ 6ಮುಂದೆ ಅಜನಾಗಿ ಪವಮಾನ ಕೃತಯುಗದಲ್ಲಿ |ಒಂದು ನಿಮಿಷದಲಿ ಸೃಜಿಸುವನು ಸಚರಾಚರವ |ಸಂದೇಹವಿಲ್ಲ ತಪ್ಪದು ವೇದವಾಕ್ಯವಿದುಹಿಂದೆ ಶ್ರೀಹರಿಸೇವೆಯ ||ಒಂದು ಬಯಸದಲೆ ನಿಚ್ಚಟದ ಭಕ್ತಿಯಲಿ ತಾ -ನಂದು ಮಾಡಿದಸುಕೃತ- ಫಲದಿಂದ ಬ್ರಹ್ಮತ್ವ |ಬಂದು ಯುಗ -ಯುಗದೊಳವರಿತರಿಸಿ ದೃಷ್ಟವತೋರ್ಪನಂದ ಮುನಿಪರ ಭಜಿಸಿರೈ 7
--------------
ಪುರಂದರದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಶ್ರೀಕೃಷ್ಣಲೀಲಾ ಕೀರ್ತನೆಗಳು38iÀುಶೋದೆ ಮಜ್ಜಿಗೆ ಮಾಡುತಂ ಮುದದಿಂ-ದಶೋಕನಮಲ ಸುಲೀಲೆಯನು ||ವಿಶೇಷ ಭಕ್ತಿಂಧಾಡುವಳಾ ಕಥಾ-ರಸ ಯಥಾಮತಿ ರಚಿಸುವೆನು ಪಹತ್ತವತಾರದಿ ಮತ್ತರ ಶಿಕ್ಷಿಸಿಉತ್ತಮರನು ಸಂತೈಸಿದನು ||ಭೃತ್ಯಭವಾರ್ಣವಬತ್ತಿಸುವಿವನನುಎತ್ತುವೆನತಿ ಧನ್ಯಳು ನಾನು 1ನದಿಜನಕನ ಕೊಡದುದ ಕದೊಳೆರೆವೆನುಮದನಪಿತನ ಸಿಂಗರಿಸುವೆನು ||ವದನತೆರದೆನ್ನ ಬೆದರಿಸಿದನ ಬಲುಹದದಿಂದಿರು ಎಂದಾಡುವೆನು 2ಅಣು ಮಹತ್ತೇ ಕಾಲಕೆ ತಿಳಿಯದೆದಣಿದೆನು ಪಾದಗಳನುಕಟ್ಟಿ||ಜನನಿಗೆ ಸಿಕ್ಕದನೆಂಬರ ತೋರಿಸಿಧನಪಜರ ಪೊರೆದ ಮರಕುಟ್ಟಿ 3ಅಗಣಿತರೂಪಿವನಂಗದಿ ಕಂಡಳುಜಗದಂಬೆಂಬರು ಸಜ್ಜನರು ||ಮಗುವೆಂದನುದಿನ ಮುದ್ದಿಸಿ ಕೊಂಕಳೊ-ಳಗಿಡುವೆ ಯನಗೇನೆಂಬುವರೊ 4ಮೀನಾಂಬರೆ ಈ ಪರಿಯಿಂದಲಿ ಶ್ರೀಪ್ರಾಣೇಶ ವಿಠಲನ ಪಾಡುವಳು ||ಈ ನುಡಿಯಾದರದಿಂ ಕೇಳಲುಭವಕಾಣರು ಪರದಲಿ ಸುಖ ಬಹಳ 5
--------------
ಪ್ರಾಣೇಶದಾಸರು
ಶ್ರೀತುಳಸಿ162ಶ್ರೀ ತುಳಸಿ ಮಹಿಮೆಯನು ಪೊಗಳಲಳವಲ್ಲ ಶ್ರೀನಾಥ ನಾರಾಯಣನ ಅರ್ಚನೆಗೆ ಸರ್ವದಾಪ್ರೀತಿಕರಳಾಗಿ ರಾಜಿಪಳು ಕಲಿಯುಗದಲ್ಲಿ ನೋಂತವರಭಾಗ್ಯವೆಂತೊ ಪ .ಶ್ರೀಮದಾರ್ಜಿತ ಕ್ಷೀರವಾರಿಧಿಯ ಮಥಿಸುತಿರೆಆ ಮಹಾವಿಷ್ಣುವಿನ ನೇತ್ರದಿಂದಲಿ ಹೊರಟಪ್ರೇಮಜಲದುದ್ಭವಿಸಿ ನಳನಳಿಸಿ ದಿವ್ಯ ಆಮೋದ ಪೂರ್ಣಳಾಗಿಭೂಮಿ ಪಾವನವ ಮಾಡುತಲಿ ಭೂನಿರ್ಜರರಧಾಮಧಾಮಗಳಲ್ಲಿ ವೃಂದಾವನದಿ ನೆಲಸಿಕಾಮಿತ ಫಲವನೀವ ಕಲ್ಯಾಣಿ ಕೃಷ್ಣನಿಗೆ ನೇಮದಿಂ ಪ್ರಿಯಳಾದ 1ಈ ಮನುಜ ದೇಹದಲಿದಾವಪ್ರಾಣಿಯು ಪಿತೃಸ್ತೋಮವನ್ನುದ್ಧರಿಪೆನೆಂದರೆ ಸುಲಭ ಸಾಧ್ಯಕೋಮಲ ದಳವನೊಂದು ತಂದು ಮಾಧವನಚರಣತಾಮರಸಕರ್ಪಿಸುವದುತಾ ಮುನ್ನ ಮಾಡಿದಘ ಪಂಚಕಗಳೋಡಿದವುಸಾಮಾನ್ಯವಲ್ಲ ತುಳಸಿಯ ವನವಸೋಂಕಿಬಂದಾ ಮರುತದಿಂದ ದೇಶ ಗ್ರಾಮಗಳು ಪಾವನವುಧೀಮಂತ ಮಾನ್ಯಳಾದ 2ತುಳಸಿ ನೆಳಲಲ್ಲಿ ಅಂಕುರಗಳೆದ್ದಲ್ಲಿ ಪಿತೃಗಳಿಗನ್ನವಿತ್ತರಕ್ಷಯಫಲವು ಊಧ್ರ್ವಪುಂಡ್ರತಳದ ಮೃತ್ತಿಕೆಯಲಿಟ್ಟರೆ ಕೋಟಿ ತೀರ್ಥಗಳ ಮುಳುಗೆದ್ದಫಲ ಸಿದ್ಧವುನಿಲಯದಲಿ ಪತ್ರಮೃತ್ತಿಕೆಕಾಷ್ಠವಿರಲಲ್ಲಿಕಲಿಮುಟ್ಟಲಂಜಿ ತೊಲಗುವನು ಮಣಿಸರಗಳನುಗಳದೊಳಾಂತರಾಕಲುಷಸಂಹರವು ಸಹ ಸಲೆವಿಷ್ಣುಪದವಿಯನೀವ 3ಶತಸಾಸಿರಪರಾಧವಿರಲಿನ್ನು ಮೃತ್ತಿಕೆಲಿಪಿತ ಕಾಯದನಿಗೆ ಬಹುಜನ ನೋಡೆ ವಿಘ್ನಗಳಗತಿಯುಡುಗಿ ದುಷ್ಟಗ್ರಹಗಳೆಲ್ಲನುಕೂಲಗತಿಯಾದ ಫಲವೀವವುಪ್ರತಿದಿನದಿ ನಾಭಿಕಕರ್ಣದಲಿ ಶಿರದಲ್ಲಿ ಶ್ರೀಪತಿಯ ನಿರ್ಮಾಲ್ಯದಳ ಧರಿಸಿ ಹರಿಪಾದ ತೀರಥವೊಮ್ಮೆ ಸೇವಿಸಿದವರ ಮುಕ್ತಿ ಕರತಳವು ಪತಿತಪಾವನಿಎನಿಸುವಾ 4ದರುಶನದಿ ಸ್ಪರುಶನದಿ ಧ್ಯಾನದಿಂ ಕೀರ್ತನೆಯುನಿರುತ ಪ್ರಣಾಮಗಳು ಸ್ತೋತ್ರದಾರೋಪಣಿಂಪರಮಜಲ ಶೇಚನಾರ್ಚನ ನಿಷ್ಠೆಯಿಂದ ನವ ಪರೀಕ್ಷೆಯನುಮಾಡಲುಹರಿಚರಣ ಕಮಲರತಿ ದೊರಕಿ ಯುಗ ಕೋಟಿ ಸಾಸಿರಕಾಲತಿರುಗಿ ಬಂದರೆ ಸತತ ಮಾಂಗಲ್ಯಹರಿಯ ಮನೆಯಲ್ಲಿ ನಿಜ ಹರುಷವನ್ನುಂಬುವರು ಮುರಾರಿವರದಂತೆ ಪದವ 5ಒಂದೊಂದುದಳಕೋಟಿ ಸ್ವರ್ಣಭಾರಕೆ ಮಿಗಿಲುಎಂದು ವಿಶ್ವಾಸದಲಿ ತಂದು ಸಾಸಿರನಾಮದಿಂದ ಗೋವಿಂದಗರ್ಪಿಸಿದರಿಲ್ಲಿಹ ಭವದಂದುಗವು ಮಾನಿಸರ್ಗೆಸುಂದರ ತುಲಸಿ ಮೂಲವನ್ನು ತೊಡಕಿರ್ದಕಳೆಯಂದೆಗೆದು ಶಾಖೋಪಶಾಖದಿಂ ವೃದ್ಧಿಸಾನಂದವಿತ್ತರಾ ನೂರೊಂದು ಕುಲ ನರಕವನು ಹೊಂದಲೀಸರುಪುಣ್ಯದಾ 6ಶ್ರೀ ವಿಷ್ಣುವಲ್ಲಭೆಯ ಮೂಲದಲಿ ತೀರ್ಥಗಳುಬಾವನ್ನಗಂಧಿಯಳ ಮಧ್ಯದಲಿ ಸುರನಿಕರಪಾವನಿಯಳಾ ಹರಿಯ ಕೊನೆಯಲಿಶ್ರುತಿಸಮೂಹಲಾವಣ್ಯ ಗುಣರಾಸಿಯುಭಾವಶುದ್ಧಿಯಲಿ ಉದಯದಿ ಸ್ಮರಿಸಿ ನಿರುತದಿನಾವ ಕಾರ್ಯಕೆ ಗೆಲುವು ಇಹಪರದ ಸೌಖ್ಯವಿತ್ತಾವ ಕಾಲಕ್ಕೆಹೊರೆವಪ್ರಸನ್ನವೆಂಕಟ ದೇವನಂಗ ದೊಳೊಪ್ಪುವಾ7
--------------
ಪ್ರಸನ್ನವೆಂಕಟದಾಸರು
ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
--------------
ಪ್ರಸನ್ನವೆಂಕಟದಾಸರು
ಸಲ್ಲದು ಪುನರ್ಜನ್ಮ ಸಲ್ಲದು ಯೋಗಿಗೆಪರದವಲ್ಲಭತಾನಾಗಿನಿತ್ಯಸುಖಿಸುವಾತಾಂಗೆಪಬೀಜವದು ಹೋಗಿ ಅನ್ಯ ತೇಜದೊಳು ಬಿದ್ದ ಬಳಿಕಬೀಜವೆಂದು ಬಿತ್ತಲದು ಫಲಿತವಾಗುವುದೋಸಾಜಕರ್ಮಿಗಳು ಗುರುಕೃಪೆಯ ಪಡೆಯಲುಮುಕುತಿ ತಾನಲ್ಲದೆ ಪುನರ್ಜನ್ಮವೆಲ್ಲಿಯದೋ1ಕಾಷ್ಠವದು ಹೋಗಿ ಅಗ್ನಿ ಕುಂಡದಲಿ ಸುಟ್ಟ ಬಳಿಕಕಾಷ್ಠವೆಂದು ಕರೆಯಲದು ಕಾಷ್ಠವಹುದೇಶ್ರೇಷ್ಠವಾದ ಬ್ರಹ್ಮದೊಳು ವೇಷ್ಠಿತಾನಾದ ಬಳಿಕನಷ್ಟಮಾತಲ್ಲದೇ ಪುನರ್ಜನ್ಮವೆಲ್ಲಿಹುದು2ಕೀಟವದು ಹೋಗಿ ಭೃಮರದಾಟದೊಳು ಬಿದ್ದು ತನ್ನಕೀಟತನವಳಿದ ಮೇಲೆ ಕೀಟವಾಗುವುದೇಪಾಡಿ ಚಿದಾನಂದನೊಳು ಕೂಟವು ತಾನಾದ ಮೇಲೆಮುಕುತಿ ತಾನಲ್ಲದೆ ಪುನರ್ಜನ್ಮವೆಲ್ಲಿಯದು3
--------------
ಚಿದಾನಂದ ಅವಧೂತರು