ಒಟ್ಟು 643 ಕಡೆಗಳಲ್ಲಿ , 75 ದಾಸರು , 379 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಭನವೆ ಹರಿ ಶೋಭನವುವೈಭವಾಮಲ ಪಾವನ ಮೂರುತಿಗೆಶೋಭನವೆ ಶೋಭನವು ಪ. ಕುಂಡಲಿ ನಗರದ ರುಕ್ಮಿಣಿ ಸ್ವಯಂವರಗಂಡಕಿ ಕ್ಷೋಣಿಯ ತೀರದಲಿ ಚಂದ್ರಮಂಡಲ ಕ್ಷೋಣಿಜಾತೆ ಪ್ರಭೆದುಂದುಭಿ ಪಾರಿಜಾತ ಎಸೆಯೆ 1 ಕನ್ನಡಿ ಕಲಶವು ಕನಕದುಪ್ಪರಿಗೆ ಸು-ವರ್ಣ ಮಾಣಿಕದ ಗಗನದಲೆಸೆಯೆರನ್ನದ ಕಿಟಕಿ ಉಜ್ವ[ಲ]ಪನ್ನಗಾಸ್ಯಲಿ ಸು-ವರ್ಣ ಮಾಣಿಕದ ತೋರಣವೆ 2 ಪಚ್ಚದ ಪರಿಮಳ ತಳಿರುತೋರಣ ಕಟ್ಟಿನಿ[ಚ್ಚ]ಕಲ್ಯಾಣ ನೀಲವರ್ಣಉ[ಚ್ಚ]ಹವಾಯಿತು ಇರುಳಿನ ಚರಿತ್ರಾಅಚ್ಚುತನೆ ಗಮ್ಮನೆ ಬಾಹುದು 3 ಭೀಷ್ಮಕ ರುಕ್ಮಿಣಿ ಶಿಶುಪಾಲ[ಗೀವೆ]ನೆಂದುಸೇಸೆಯ ತಳೆದು ಧಾರೆನೆರೆಯೆಆ ಸಮಯದಲಿ ದ್ವಾರ[ಕೆ]ಕೃಷ್ಣಗೆಲೇಸಾದ ಓಲೆಯ ಬರೆದಳಾಕೆ 4 ಬರೆದೋಲೆಯ ಕಾಣಿಸಿ ತೆಗೆದೋದಿಪುರೋಹಿತ ಗಗ್ರ್ಯಾಚಾರ್ಯರುನಿರೂಪ ಕೊಡು ನಮಗೆ ನಿಗಮಗೋ- ಚರನು ಗರುಡವಾಹನ ಗಮ್ಮನೆಬಾಹೋನು 5 ಗವರಿಯ ನೋನುವ ಮದುವೆಯ ಸಡಗರಭುವನೇಶ ತಾ ತಡೆದನ್ಯಾಕೆಂದುತಾ ಚಿಂತಿಸಿದಳು ತಾವರೆಗಂಗಳೆಹವಣಿಸಿದಳು ವಿಲಕ್ಷಣಗಾಗಿ6 ಚಂದದಿ ರುಕ್ಮಿಣಿ ಮುತ್ತೈದೆರಿಗೆಲ್ಲಸಂಭ್ರಮದಿಂದ ಬಾಗಿಣ[ಬೀರೆ ಐ]ತಂದು ತಾಳಿಯ ಮಂಗಳಸೂತ್ರ ಮು-ಕುಂದ ಕಟ್ಟಿ ಕಲ್ಯಾಣವಾದ 7 ಅಂಬಿಕೆಗುಡಿಯಲಿ ಚಂದದಿಂದ ಪೂಜೆಯ ಮಾಡಿರಂಗ[ನ] ಕೂಡಿದ ಸಂಭ್ರಮದಿಂದಮಂದಾರಮಾಲೆಯ ಚಂದದಿಂದಲಿ ತಂದುರಂಗನ ಕೊರಳೊಳು ಹಾಕಿದಳು8 ಹಿಂದಿಂದ ಬಹ ರುಕುಮನ ಕಂಡುಭಂಗಿಸಿ ಕರೆದು ಭಂಗವ ಮಾಡಿಹಿಂದಿಂದ ಕರೆದು ಮುಂದಕೆ ಕಟ್ಟಿ ಮು-ಕುಂದ ಹಯವದನ ದ್ವಾರಕೆ ಪೊಕ್ಕ9
--------------
ವಾದಿರಾಜ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ರಾಘವೇಂದ್ರರು ಇಂಥಾ ಗುರುಗಳ ಕಾಣಿನಾ | ಭೂತಳದೊಳು ಇಂಥಾ ಯತಿಗಳ ಕಾಣಿನಾ ಪ ಕಾಣಿ \ ಮಂತ್ರ ಮಂದಿರದಲ್ಲಿ ನಿಂತು ಭಜಕರಿಗೆ | ಚಿಂತೆ ಕಳೆವ ಕರುಣಿ ಅ.ಪ ದೇವಸ್ವಭಾವನೀತನು | ಸತತ ಪವನ ದೇವನಾವೇಶಯುಕ್ತನು || ಆವ ಸಂಶಯವ್ಯಾಕೆ | ದೇವಾಧಿದೇವ ನರಮೃಗ ದೇವನೀತನ ಭಕ್ತಿಗೆ | ಧಾವಿಸಿ ಬಂದ ಸ್ತಂಭದಿ ಭಾವ ಭಕ್ತಿಯಲಿ | ಸೇವಿಪರಿಗೆ ಭವ ನೋವು ಕಳೆದು ಸುರ | ಗೋವಿನ ತೆರ ವರ ವೀವನು ಕರುಣದಿ | ಕಾಮನು ಪರಮ ಪಾವನ ಚರಿತನು | ಕೋವಿದರೊಡೆಯನು 1 ವರಹಜ ತಟದಲ್ಲಿರುವ ಭಕ್ತರು ಕೂಗಿ ಕರೆದಲ್ಲಿಗೋಡಿ ಬರುವ | ಮರುತ ಶಾಸ್ತ್ರದ ಮರ್ಮ ಭರಿತವಾದಂಥ ದಿವ್ಯ ಪರಿಮಳ ಗ್ರಂಥವ ವಿರಚಿಸಿ ಬುಧರಿಗೆ ಗರೆದನು ಕರುಣದಿ ಪೊರೆದನು ಪರಮತ ಮುರಿದನು ಜಗದೋಳ್ ಮೆರೆದನು ಹೊಸ ಹೊಸ ಪರಿ ಸುಮಹೋತ್ಸವ ಹರುಷದಿ ಪ್ರತಿದಿನ ಗುರು ಸುಯಮೀಂದ್ರರ | ಕರದಿಂಗೊಂಬರು 2 ಮಂದಹಾಸನ ಶ್ರೀ ಶಾಮಸುಂದರ ರಂಘ್ರಿ ಸೇವಕ | ಕೇಸರಿ ಎನಿಸಿ ಗಂಧವಾಹನ ಮತ | ಸಿಂಧುವಿಗೆ ಶಶಿ ಯಂದದಿ ರಾಜಿಸಿ ವೃಂದಾವನವನು ಒಂದೆ ಮನದಲಿ ವಂದಿಸಿ ನಮಿಸುವ ವಂದ್ಯಾಂಧಕರಿಗೆ | ಕಂದರಕ್ಷಿಗಳ ಕುಂದದಿ ಕೊಡುವ | ಕರ್ಮಂದಿ ಕುಲಾಗ್ರಣಿ 3
--------------
ಶಾಮಸುಂದರ ವಿಠಲ
ಶ್ರೀ ವಿದ್ಯಾಧೀಶರು ದಯಮಾಡೋ ಗುರುವೇ ವಿದ್ಯಾಧೀಶ ಪ ಅವಿದ್ಯಾ ನಿನ್ನ ಹೊರತು ನನಗನ್ಯ ಗತಿಯಿಲ್ಲ ಧನ್ಯನಿನ್ನಯ ಕುಲ ಮುನ್ನ ಉದ್ಧರಿಸಯ್ಯಾ 1 ತಾಪ ನಿನಗೆ ಇಲ್ಲಾಪೋತಗೆಲ್ಲರು ಬೋಧಾ ಯೋತಿ ಸಿಕ್ಕುವುದುಂಟೆ 2 ಹಾಕಿದ ಬೀಜವಾ ಬೀಕಲ ಮಾಡೋರೆತೋಕನಲ್ಲೆ ಕೃಪ ಯಾಕೆ ಮಾಡವಲ್ಲಿ3 ಅನವದ್ಯ ಕುಲದಿ ಪುಟ್ಟಿವಿದ್ಯಾರಹಿತನಾಗಿ ಹದ್ದಿನಂದದಿ ನಾನು4 ನಿಂದಿಸುವರೊ ನಿನ್ನ ವಂದಿತ ಕುಲವನ್ನುಮುಂದೆ ಮಾರ್ಗವ ಪೇಳಿಂದಿರೇಶನ ಪ್ರೀಯಾ 5
--------------
ಇಂದಿರೇಶರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀ ವೆಂಕಟೇಶ ಎನ್ನ ಸಲಹಲ್ಯಾಕೆ ಬಳಲುವೆ ಪ ದುರಿತ ಪರಿಹರಿಸೊ ಬಂದು ತಾಪವನ್ನು ಬಿಡಿಸೊ ಮಂದ ಬುದ್ದಿಯನ್ನೆ ಕೆಡಿಸೊ ಮದನನಯ್ಯ ಮಮತೆ - ಇಂದು ಎನ್ನ ಮಾತ ಲಾಲಿಸೊ ತಂದೆ ಕುಂದು ಎಣಿಸದೆನ್ನ ಪಾಲಿಸೊ 1 ನಕ್ರನ ಬಾಧೆಯೊಳಗೆ ಸಿಳುಕಿ ಗಜವು ನರಳುತಿರಲು ತ್ರಿ- ವಿಕ್ರಮನೆ ಸಲಹೊಯೆಂದು ಕರೆಯಲಾಗ ನಕ್ರನ ಚಕ್ರದಿಂದ ಹೊಡೆದು ಕೆಡಹಿದೆ ಆ ಗಜಕೆ ಬಂದ ವಕ್ರವನ್ನು ಬಿಡಿಸಿ ಸಲಹಿದೆ ಎನ್ನ ಮನದ ವಕ್ರವನ್ನು ಬಿಡಿಸಲಾಗದೆ 2 ತರಳ ಧ್ರುವನು ತನ್ನ ಪಿತನ ತೊಡೆಯ ಮ್ಯಾಲೆ ಬಂದು ಕುಳ್ಳಿರೆ ತರವೆ ನಿನಗೆ ಎಂದು ಸುರುಚಿ ತವಕದಿಂದ ಎಳೆಯಲವನ ಸ್ಥಿರಪದವಿಯಿತ್ತೆ ಕರುಣದಿ ನಾನು ನಿನ್ನ ಸ್ಮರಣೆಗೈವೆದಿವ್ಯನಾಮವ 3 ಆರು ಸಲಹುವರು ಎನ್ನ ಪಾರುಗಾಣಿಸುವರ ಕಾಣೆ ಸೇರಿದೆನೊ ಶೇಷಶಯನ ಶ್ರೀನಿವಾಸ ಎನ್ನನು ಸೇರಿತಲ್ಲವೆ ಬೇರೆ ವಿಚಾರವಿಲ್ಲದೆ ನಿನ್ನ ನಂಬಿದೆ 4 ದುಷ್ಟ ದನುಜರನ್ನು ಮುರಿದು ಧಾರುಣಿಯೊಳು ಇರುವೆ ಎನ್ನ ಕಷ್ಟವ ಬಿಡಿಸಿ ಕಾಯೊ ಕಮಲನಾಭ ಹೆಳವನ ಕಟ್ಟೆವಾಸ ವೆಂಕಟೇಶನೆ ಸಕಲ ಭಾರ ಸುಜನಪಾಲನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಶ್ರೀ ವೇಣುಗೋಪಾಲ ಶುಕಮುನಿಯ ಬಿಂಬ ಪ ಧ್ಯಾನ ಪಾಲಿಸು ನಿನ್ನದೀನಭವದಿ ನೆಲಸಿ ಅ.ಪ. ಜ್ಞಾನ ಮನ ದಶ ಕರಣ ಪ್ರಾಣ ಪಂಚಕರಲ್ಲಿ ಭಾನುತೇಜನೆ ನೆಲಿಸಿ ತಿಳಿಸದಲೆ ನಾನಾ ಬಗೆಯಲಿ ದಣಿಸಿ ನೀನಾಟ ಆಡುತಿಹೆ ಮರವೆ ಬಿಡಿಸಿ ಪೊರೆಯೊ 1 ಕೋಟಿ ಸೂಂiÀರ್iರ ಕಾಂತಿ ಧಿಕ್ಕರಿಪ ಚಿನ್ಮಯನೆ ಮಾಟ ಮಾಡದೆ ನಿನ್ನ ಲೀಲೆ ತೋರೊ ನಾಸಿಕ ಶ್ರವಣ ತನುಮನದಿ ಸಾಯುಜ್ಯ ಬೇಟೆಯಲಿ ಇದ್ದೆನ್ನ ಕಣ್ಣು ಕಟ್ಟುವುದ್ಯಾಕೆ 2 ಶತಕೋಟಿ ಬ್ರಹ್ಮಾಂಡ ಗತ ಜೀವಗಣಕಮೃತ ಸತತ ಪಾಲಿಪ ಕರುಣ ನಿನದಲ್ಲವೇನೊ ಹಿತಮಾಡು ಜಯೇಶವಿಠಲನೆ ಮದ್ಭಿಂಬ ಪ್ರತಿಬಿಂಬ ಭಾವದಲಿ ಬೆಳೆಸೆನ್ನ ಉದ್ಧರಿಸೊ 3
--------------
ಜಯೇಶವಿಠಲ
ಶ್ರೀ ಸರಸ್ವತೀದೇವಿ ವಾಣಿಯೆ ವೀಣಾಪಾಣಿಯೆ ಪಾಲಿಸು ಸದಾ ಸ್ಥಾಣು ಜನನಿ ಚತುರಾನನ ರಾಣಿ ಶ್ರೀ ಪ ಕೃತಿ | ಸುತೆ ಸರಸ್ವತಿ ದೇವಿ ಹಿತದಿಂದಲೆನ್ನನು | ಸುತನೆಂದು ಭಾವಿಸೆ 1 ಬುದ್ಧ್ಯಾಭಿಮಾನಿ ಸದ್ವಿದ್ಯಾ ಪ್ರದಾಯಿನಿ ಶುದ್ಧ ಸುಮತಿ ಕೊಟ್ಟು | ಉದ್ಧರಿಸನುದಿನ 2 ಶಾರದೆ ದಯವ್ಯಾಕೆ | ಬಾರದೆ ಎನ್ನೊಳು ನಾರದ ಸೇವಿತೆ | ಸೇರಿದೆ ತ್ವತ್ಪಾದ 3 ಪವನಾಂತರ್ಗತ ಮಾಧವನ ಸನ್ಮಹಿಮೆಯ ಕವನದಿಂದಲಿ ಸುಸ್ತವನ ಮಾಡಿಸೆ 4 ಸಾಮಗಾನವಿಲೋಲ | ಶಾಮಸುಂದರನ ಸೊಸೆ ಪ್ರೇಮದಿ ಮನ್ಮುಖ ಧಾಮದಿ ವಾನಿಸೆ5
--------------
ಶಾಮಸುಂದರ ವಿಠಲ
ಶ್ರೀನಿವಾಸ ಕರುಣದಿ ಕಾಯೊ ಶ್ರೀನಿಧೆ ದಯದಿ ಬಾನು ಪ್ರಕಾಶ ಶ್ರೀಹರಿಯೆ ಪ. ಈ ನರಜನ್ಮದಲಿ ಬಂದು ಬೇನೆ ಬಿಟ್ಟು ಸಂಸಾರದಿ ಕಾನನದಿ ಕಣ್ಣು ಮುಚ್ಚಿ ನೀನೆ ಎನ್ನ ಬಳಲಿಸುವರೆ ಅ.ಪ. ಎಷ್ಟು ವಿಧದಿ ಕರೆದರೂ ನಿನಗೆ | ಈಗಿನ್ನು ದಯ ಪುಟ್ಟದ್ಹೋಹಿತಲ್ಲೊ ದೇವನೆ ಬೆಟ್ಟದೊಡೆಯ ನಿನ್ನ ನಂಬಿ ಕಷ್ಟ ಬಿಡಿಸು ಎಂದು ಬಾಯಿ ಬಿಟ್ಟು ಕೂಗಿದರೂ ಕರುಣ ಪುಟ್ಟಲಿಲ್ಲೊ ಸೃಷ್ಟಿಗೊಡೆಯ 1 ಯಾಕೆ ಎನ್ನ ಈ ಪರಿಯಿಂದ | ಜರೆದು ತೊರೆಯುತ್ತ ನೂಕುವುದು ನ್ಯಾಯವೇ ಶ್ರೀಶ ವಾಕುಲಾಲಿಸೆನ್ನನೀಗ ಸಾಕಿದರೆ ನಿನ್ನ ಭಕ್ತರೊಡನೆ ಬೇಕೆಂದು ನಿನ್ನ ಪದ ಸ್ಮರಣೆಯ ಏಕಮನದಿ ಧ್ಯಾನಿಸುವೆನೊ 2 ನಡೆನುಡಿಗಳ ತಪ್ಪನೆಣಿಸಿದರೆ | ಶ್ರೀನಿಧಿಯೆ ಎನ್ನ ಪೊಡವಿಯೊಳಗೆ ಪೊರೆವರಿನ್ಯಾರೊ ಬಿಡು ಬಿಡು ಈ ಬಿಂಕವೆಲ್ಲ ಕೊಡು ನಿನ್ನ ಪದ ಸರ್ವಕಾಲ ದೃಢ ಭಕ್ತಿ ವೈರಾಗ್ಯ ಎನಗೆ ಕೊಡು ಗೋಪಾಲಕೃಷ್ಣವಿಠ್ಠಲ 3
--------------
ಅಂಬಾಬಾಯಿ
ಶ್ರೀನಿವಾಸ ತೀರ್ಥರು ಶ್ರೀನಿವಾಸ ತೀರ್ಥನೆ ಜ್ಞಾನವಿತ್ತು ಪಾಲಿಸೋ ಪ ವ್ಯಾಸ ಶಾಸ್ತ್ರ ನಿನ್ನಿಂದವಿಸ್ತಾರಾಯ್ತು ಭೂಮಿಲಿ ಭಾಷಿಪರೊಜನರು ಲೇಸು ಟಿಪ್ಪಣಿಯೆಂದು 1 ಅಂತಿಮಾ ಶ್ರಮವ್ಯಾಕೆ ಯಥಾರ್ಥ ಸ್ವರೂಪನೆತೀರ್ಥಪದ ನಿನ್ನಯ ಸಾರ್ಥಕಾಗಿ ಹೋಯಿತೋ 2 ಪಾದ ದ್ವಂದ್ವ ಸ್ಮರಿಸುವೆತಂದೆಶ್ರೀನರಹರಿಯಪೊಂದೊ ಬಗೆ ಪ್ರೇರಿಸೊ 3
--------------
ತಂದೆ ಶ್ರೀನರಹರಿ
ಶ್ರೀಹರಿ ಸಂಕೀರ್ತನೆ ಪತಿತ ಪಾವನ ಗೋವಿಂದ ನಮ್ಮ ಪದುಮದಳಾಕ್ಷ ಸದಾನಂದ ಪ ಸತಿಪತಿ ನುತ ಸಾರ್ವಭೌಮ ಸು ವೃತಾ ಚರಣ ಘನ ರಾಜಿತ ಸುಂದರ ಅ.ಪ ಧೀರನಮೋ ಸುವಿಚಾರ ನಮೋ ಯದುವೀರ ನಮೋ ರಜದೂರ ನಮೊ ಮಾರನಮೋ ಗಂಭೀರ ನಮೊ ಭವಹಾರ ನಮೋ ದಧಿ ಚೋರ ನಮೊ 1 ಜನನ ಮರಣ ಜರ ರಹಿತ ನಮೋ ಪಾವನ ಪದ ಪಂಕೇರುಹ ನಯನ ನಮೋ ಮನ ವಚನಕೆ ಸಿಗದ ನಿಮಿಷ ಪತಿ ನಿನ್ನನೆ ಬೇಡುವೆ ಪೊರೆಯೆನುತ ಕರಮುಗಿದು 2 ಶೌರಿ ಶುಭ ನಾಮ ಭಕ್ತ ಜನ ಹಿತಕಾರಿ ಸುತ್ರಾಮ ಅನುಜ ನಿ ಸ್ಸೀಮ ಮಹಿಮ ಶಿರಿಧಾಮ ಅನಘ ನಮೊ 3 ಅನ್ಯನೆ ನಾ ನಿನ್ನಗೆ ದೇವ ಸಾಮಾನ್ಯನೆ ಅಭಿಮನ್ಯುನ ಮಾವಾ ಇನ್ನೆನೆನ್ನದೆ ನಿನ್ನಿಂ ಲಭಿಸಿದ ನುಣ್ಣುವ ಯನ್ನನು ಮನ್ನಿಸದಿರುವರೆ 4 ಹಿರಿಯರ ದಯವಿರುವುದು ಸರೆ ನೀ ಪೊರೆವಿ ಬಿಡದೆ ಯಂಬೋದು ಖರೆ ಸ್ವರಸ್ವರ ಘಸಿದಾಲ್ಪರಿದ ಮೇಲೆ ಸುಧೆ ಗರಿವರ ತೆರ ಚರಿಪುದು ಧರವೆ 5 ದಾಸರ ಪೊರೆಯಲು ದಾಶರಥೇ ಅಮಿತ ಮತೆ ಶ್ರೀಶಾನಿಮಿತ್ಯ ಬಂಧುಯೆನಿಸಿ ಉದಾಸಿಸೆ ಆಗಮ ರಾಶಿಗೆ ಶೋಭವೆ 6 ಘಾಸಿಗೊಳಿಸುವರೆ ಸೈಸೈಸೈ ನೀ ನೀಶನಾದದಕೆ ಫಲವೇನೈ ಪೋಷಕ ನೀನೆಂದಾಸಿಸಿದವರನು ನೀ ಸಲಹದೆ ಬರೆ ಸೋಸಿಲಿ ಮೆರೆವರೆ 7 ಧೃವನ ಪೊರೆದ ಬಲುವೇನಾಯ್ತೈ ಉದ್ಧವಗೆ ವಲಿದ ದಯ ಏಲ್ಹೊಯತೈ ಬವರದೊಳಗೆ ಪಾಂಡವರ ಕಾಯ್ದ ಮತಿ ಸವಿಯುತೆ ಪವನಪಸವಿದ ಸತತ ಸುಖ 8 ಘನ್ನ ಕರುಣಿ ನೀ ನಹುದೇನೊ ಆಪನ್ನ ರಾಪ್ತ ನೀ ನಿಜವೇನೋ ಸೊನ್ನೊಡಲಾಂಡಗ ನೀನಾದರೆ ಗತ ಮನ್ಯುನಾಗಿ ಜವ ನಿನ್ನನೆ ತೋರಿಸು 9 ತಂದಿನ ಪಾಲಿಸಿ ಮಗನನ್ನು ಬೇಕೆಂದು ಕೊಂದ ಕೃಷ್ಣನೆ ನೀನು ತಂದು ತೋರೊತವ ಸುಂದರ ಪದಯುಗ10 ಕಂದುಗೊರಳನುತ ಪೊರೆಯೆಂದು ಬಲು ವಂದಿಸಿದರು ತ್ವರ ನೀ ಬಂದು ಕಂದನ ಕರದ್ಯಾಕೆಂದು ಕೇಳ್ದದಕೆ ನೊಂದು ಬಿಡಿ ನುಡಿ ಗಳೆಂದೆನು ಕ್ಷಮಿಸೈ 11 ಬಲು ಮಂದಿನ ಸಲಹಿದಿ ನೀನು ಅವರೊಳಗೆ ಓರ್ವನಾನಲ್ಲೇನೊ ನೆಲೆಗಾಣದೆ ತವ ಜಲಜ ಪಾದ ಹಂಬಲಿಸುವರರ್ಥವ ಸಲಿಸದೆ ಬಿಡುವರೆ 12 ಬೇಡಿಕೊಂಬುವದೊಂದೆ ಬಲ್ಲೆ ಅದುಕೂಡಾ ತಿಳಿದು ನೋಡಲು ಸುಳ್ಳೆ ಬೇಡಿ ಬೇಡಿಸುವಿ ಮಾಡಿ ಮಾಡಿಸುವಿ ರೂಢಿಪತಿ ನೀನಾಡಿದ ನಾಡುವೆ 13 ನಾಗಶಯನ ನೀ ಬದುಕಿರಲು ಎನಗಾಗ ಬೇಕೆ ಕಲಬಾಧೆಗಳು ಸಾಗರಾಂಬರಪ ಸುತನಿಗೆ ಪುರ ಜನ ಬಾಗದೆ ಅಣಕಿಸಿಧಾಂಗಲ್ಲವೆ ಇದು 14 ಕರೆದರೆ ಬರುವೆನು ನಿನ್ನಡಿಗೆ ಧಿ ಕ್ಕರಿಸಲು ಮರುಗುವೆ ಮನದಾಗೆ ನಿರ್ವಿಣ್ಯನು ಪರತಂತ್ರನು ನಾನಿ ನ್ನೆರಳಲ್ಲವೆ ಮದ್ಗುರುವರ ವರದಾ 15 ಕಲ್ಲಿನ ರೂಪದಿ ಪೂಜಿಯನು ಗೊಳ್ಳುವ ಬಗೆ ನಾನೊಲ್ಲೆ ನಿನ್ನ ಶಿರಿ ನಲ್ಲೆ ಸಹಿತ ಬಂದು ನಿಲ್ಲೊ ಅರ್ಚಿಸುವೆ 16 ಕಣ್ಣಲಿ ತವದರ್ಶನ ಅಮೃತ ಭವ ತ್ರಾತಾ ಘನ ಕರುಣಿ ಬಾರೆನೆ ಬರುವೆನು ಎಂದೆನ್ನುವ ಬುಧ ನುಡಿ ನನ್ನಿಯೆನ್ನುವೆನು 17 ಭಿಡೆಯ ಬಾರದೆ ಬಲು ಘನ್ನಾ ನಾನುಡಿಯು ವಡ್ಡಿ ಬೇಡಿದರನ್ನ ಕೊಡಗೈಯವನಿಗೆ ಲೋಭವು ಎಲ್ಲಂದಡರಿತು ನುಡಿ ನುಡಿ ಕಡಲಜಳೊಡೆಯನೆ18 ನ್ಯಾಯಕೆ ಅಧಿಪ ನೀನೆ ಜೀಯಾ ಅನ್ಯಾಯಕೆ ಪೇಳುವರಾರೈಯ್ಯ ಮಾಯವೆಂಬೊ ಘನ ಘಾಯವುಎನ್ನನು ನೋಯಿಸುತಿದೆ ಜವಮಾಯಿ ಸುಭೀಷಿಜನೆ 19 ವರುಣಗೆ ವಾರಿಯು ನೀನಯ್ಯ ದಿನ ಕರನಿಗೆ ಮಿತ್ರನು ನೀನಯ್ಯ ಸುರಪಗೆ ಇಂದ್ರನು ಉರಗಕೆ ಶೇಷನು ಸರ್ವವು ನೀನೆಂದರಿತೆನು ಕರುಣಿಸು 20 ಹನುಮಗೆ ಪ್ರಾಣ ಮೂರೊಂದು ಆನನನಿಗೆ ವೇಧನು ನೀನಂದು ಮನಸಿಗೆ ನೀ ಮನ ಜೀವಕೆ ಜೀವನ ಎನುತ ಅರಿದು ನಮೊ ಎನ್ನುವೆ ಕರಮುಗಿದು 21 ಮೂಗಣ್ಣಗೆ ರುದ್ರನು ನೀನೆಧರೆ ಆಗಸ ಸಾಗರ ಧಾರಕನೆ ಶ್ರೀ ಗುರು ರಘುಪತಿ ರಾಗ ಪಾತ್ರ ಭವ ನೀಗದೆ ಬಿಡುವರೆ 22 ಪದುಮನಾಭ ನಿನ್ನನು ಕುರಿತು ನಾ ನೊದರುವ ನುಡಿಗಳು ಚಿತ್ರವತು ವಿಧಿಪತ್ರವನಾಂತು ನಿನ್ನ ಪಾದ ವದಗಿಸದಲೆ ಬರೆ ಪದವೆನಿಸಿದವೆ 23 ಸ್ತವನಕೆ ವಲಿಯದೆ ಇರೆ ನಮನ ಗೈಯುವೆ ಇಕೊ ನೋಡೆ ದಾಸ್ಯತನಾ ಅವನಿಪ ಸರ್ವಕೆ ವಲಿಯದೆ ಇರೆ ಬೈಯುವೆ ಬಡಿಯುವೆ ಸಿಕ್ಕರೆ ಸೆರೆ ಪಿಡಿಯುವೆ 24 ಚೋರನೆ ನೀ ನಡಗಿದೆಯಾಕೆ ಸ್ಮøತಿ ದೂರನೆ ಎನ್ನನು ಮರಿವದೇಕೆ ಆರು ನಿನಗೆ ವೈಯಾರವು ಈ ಪರಿ ಕಾರುಣ್ಯದಿ ಕಲಿಸಿದರೋ ಕರಿವರದಾ 25 ಮರೆದಿಯ ನೀ ಕನಿಕರ ಬಡುವ ಸ್ಥಿತಿ ನೀ ಜರದರೆ ನಮಗಿನ್ನೇನು ಗತಿ ಪರಿಪರಿ ವರಲು ವರಲಿ ದಯಮಾಡದೆ ಇರವದು ನಿನ್ನಗೆ ಮರಿಯಾದಿಯೆ ಹರಿ 26 ರೂಪ ತೋರಲೆನ್ನುವಿಯಾ ಆಹದೆ ಪೇಳಲೊ ಹೇ ವಿಗತಾಗಭಯ ಪಾಪಬಾರದೆ ಈ ಪರಿಯನ್ನನು ನೀ ಪಿಡಿಸೆ ಗತತಾಪ ಶ್ರೀಪ ಹರಿ 27 ಸುರತನು ಸಾಕದೆ ಬಿಟ್ಟವಗೆ ತನ್ನ ಸತಿಯಳ ಖತಿಯೊಳಗಿಟ್ಟವಗೆ ಕ್ಷಿತಿಯರು ಏನೆನ್ನುವರು ಮನದೊಳಗೆ ಪತಿ ಯೋಚಿಸಿ ಹಿತಗೈಯನ್ನೊಳು 28 ಶಿರಿಗೋವಿಂದ ವಿಠಲ ಪಾಹಿ ಗುರುವರ ರಘುಪತಿನುತ ಪದ ಪಾಹಿ ಬರೆ ಮಾತಲ್ಲವೊ ತ್ವರ ತವ ಪಾದ ಸಿರಿ ಸುರರಾಣೆ 29
--------------
ಅಸ್ಕಿಹಾಳ ಗೋವಿಂದ
ಸಖ್ಯವ್ಯಾಕೆ ಮುಖ್ಯ ಸ್ವಹಿತ ಹೇಳದನಕ |ಮಕ್ಕಳು ಯಾಕೆ ಪಿತೃಗಳ ಆಜ್ಞೆಯ ನಡೆಸದನಕ ಪ ದಾತನ್ಯಾಕೆ ಬಯಕೆ ಪೂರ್ಣ ಮಾಡದನಕ | ಬರಿ |ಮಾತು ಯಾಕೆ ಸ್ಥಿತಿಯ ಲೇಶ ಇಲ್ಲದನಕ 1 ಸಂತನ್ಯಾಕೆ ಶಾಂತಿ ನೆರಳು ಹಿಡಿಯದನಕ | ತನು |ಕಂಥೆಯಾಕೆ ಶಿವಪದಕ್ಕೆರಗೋ ತನಕ 2 ನೇಮವ್ಯಾಕೆ ಹೃದಯ ಶುದ್ಧವಾಗದ ತನಕ | ಶಿವನ |ನಾಮವ್ಯಾಕೆ ನಾಮರೂಪ ಅಳಿಯದ ತನಕ 3 ತುಂಬಿ ತುಳುಕದ ತನಕ 4 ಜಾಣನ್ಯಾಕೆ ಸಮಯ ಉಚಿತ ಅರಿಯದ ತನಕ | ಬರಿಗಾನವ್ಯಾಕೆ ಸ್ವರದ ಲಯವ ಧರಿಸದ ತನಕ 5 ಧರ್ಮವ್ಯಾಕೆ ಸಮಯ ಕಾಲಕ ಒದಗದ ತನಕ | ಸ- |ತ್ಕರ್ಮವ್ಯಾಕೆ ದಂಭತನವು ದಹಿಸದನಕ 6 ಧನ ವಿದ್ದ್ಯಾತಕೆ ಶರಣರಡಿಗೆ ತರದನ್ನಕ | ಈಮನ ವಿದ್ದ್ಯಾಕೆ ತನ್ನ ಉಗಮ ಸೇರದನ್ನಕ7 ಶಿಷ್ಯನ್ಯಾತಕೆ ಗುರುಗಳ ಹೃದಯ ತಿಳಿಯದನ್ನಕ | ಸರಸಭಾಷ್ಯವ್ಯಾತಕೆ ಶ್ರುತಿಯ ಗರ್ಭ ಉಸುರದನ್ನಕ 8 ಜ್ಞಾನವ್ಯಾಕೆ ಜ್ಞೇಯಗುರಿತವರಿಯದನಕ | ಬರಿ |ಧ್ಯಾನವ್ಯಾಕೆ ಚಿತ್ತವೃತ್ತಿ ಮರೆಯ ದನಕ 9 ಆರಾಮವ್ಯಾಕೆ ದುಃಖಸೀಮಿ ದಾಂಟದನಕ | ಶಿ- |ವರಾಮನ್ಯಾಕೆ ಪೂರ್ಣ ಸುಖದೊಳಾಡದ ತನಕ 10
--------------
ಶಿವರಾಮರು
ಸಂಜೀವ ಬಾ ಈಗ ನಿನ್ನ ಲಾಹ ಭಾವವ ತೋರಿ ನೀಡೆನಗೆ ಭೋಗ ಪ. ಜಾನಕಿವರ ರಾಮ ರಾಜೇಂದ್ರನಡಿಯ ಸೇ- ವಾನು ಸಂಧಾನದಿ ಪಯೋನಿಧಿಯ ದಾಟಿ ದು- ರ್ಮಾನಿ ದಶಕಂಧರನ ಧಿಕ್ಕರಿಸಿ ವನಸಹಿತ ದಾನವರನೆಲ್ಲ ನುಗ್ಗಿಸಿ ಮುದ್ರಿಕೆಯ ಮಾನನಿಧಿಗಿತ್ತು ವಂದಿಸಿದೆ ಮಣಿವರವ ಶ್ರೀನಿವಾಸನ ಪಾದಕರ್ಪಿಸುತ ನಲಿದೆ 1 ಕಟ್ಟಾಜ್ಞೆಯಿಂದ ಕಂಗೆಟ್ಟ ನೃಪವರನು ದಯಾ- ದೃಷ್ಟಿಯಿಂದಲಿ ನೋಡಿ ದುಷ್ಟ ಬಾರ್ಹದ್ರಥನ ಮೆಟ್ಟಿ ಕಿಮ್ಮೀರ ಬಕ ಧಾರ್ತರಾಷ್ಟ್ರಾದಿಗಳ ಕುಟ್ಟಿ ಗದೆಯಿಂದ ಪುಡಿಗೈದೆ ಕ್ರೋಧವಶ ರಟ್ಟುಳಿಯ ನಡುಗಿಸುತ ಹ್ಯೊದೆ ವಾ- ಶಿಷ್ಟ ಕೃಷ್ಣಾನಂದನನೆ ತಾತ್ಸರವ್ಯಾಕೆ ಬರಿದೆ2 ಭಾಗೀರಥೀ ಜನಕ ಭಕ್ತಜನ ಭಯಮೋಕ ನಾಗಗಿರಿನಾಥನನು ನೆಲೆದೋರು ಗತಶೋಕ ಶ್ರೀಗುರುವರಾನಂದತೀರ್ಥಾರ್ಯನೀ ಪರಿಯ ನಿಖಿಳ ಪುರುಷಾರ್ಥ ನಿನ್ನಡಿಗೆ ಬಾಗಿ ಬೇಡುವೆನಯ್ಯ ಭಾರತಕೃತಾರ್ಥ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸತಿ ಸುತರು ನಾವಿವರೊಳೇಕೆ ಮರುಳಾದೆವಿಂತು ಗುರುವೆಪ್ರಾಕು ಜನ್ಮದ ವಾಸನೆಗಳೆಂಬ ಪಗೆಗಳಿಲ್ಯಾಕೆ ನೂಕಿದರೆಮ್ಮನೂ ಸ್ವಾಮಿ 1ಎಂತು ಬಂತೀ ರಕ್ತ ಮಾಂಸಾಸ್ತಿ ಚರ್ಮಗಳಿವೆಂತು ವಿಣ್ಮೂತ್ರಂಗಳೂ ದೇವಾಎಂತು ರಾಗದ್ವೇಷ ಮದಮತ್ಸರಂಗಳಲ್ಲೆಂತು ನರಕ ಸ್ವರ್ಗವೂ ಪರಮಾಎಂತು ಬಂತೀ ಭೋಗ ರೋಗ ವಾಸನೆಗಳಿಲ್ಲೆಂತು ವ್ಯಾಮೋಹಂಗಳು ಗುರುವೆಎಂತು ಚಿಂತೆಗಳಿದರೊಳಭಿಮಾನ ಕಷ್ಟಂಗಳೆಂತೆಂದು ನಾವರಿಯೆವೂ ಸ್ವಾಮಿ 2ಎಂತು ರಾಗ ದ್ವೇಷ ಪೋಗಿ ಸಾಧನೆಗಳೆಮಗೆಂತಹುದು ಚಿತ್ತ ಶುದ್ಧಿ ಪರಮಾಎಂತು ವೇದಾಂತ ತಿಳವದು ಬೊಮ್ಮ ನಿತ್ಯ ತೃಪ್ತೀ ಗುರುವೆಅಂತು ಕರುಣಿಸಿ ಸಕಲಚಿಂತೆಗಳ ಪರಿಹರಿಸನಂತ ಗೋಪಾಲಾರ್ಯನೆ ಸ್ವಾಮಿ3
--------------
ಗೋಪಾಲಾರ್ಯರು
ಸತ್ಕವೀಂದ್ರ ಬಾಬೇಂದ್ರೆ ಸುಗುಣಸಾಂದ್ರ ಪ. ನಮ್ಮ ಮಾನವಿ ಸ್ಥಳದಿ ಅಚ್ಚಗನ್ನಡ ನುಡಿಯ ಸಮ್ಮಿಲನ ಸಾಗಿಸಲು ನಿಶ್ಚಯಿಸಿದೆ ನಿಮ್ಮ ಬರುವಿಗೆ ಬಯಕೆ ಇಮ್ಮಡಿಸಿದೆಮಗೆ ಸಮ್ಮತಿಸಿ ಬಾರಯ್ಯ ಸತ್ಕವೀಂದ್ರ ಶ್ರೀ ಬೇಂದ್ರೆ ಸುಗುಣೇಂದ್ರ 1 ಅಚ್ಚಗನ್ನಡ ತಾಯಿಗಚ್ಭದ ಮನೆಂದು ಹೆಚ್ಚಾಗಿ ನಿಮ್ಮನ್ನು ಮೆಚ್ಚುವೆವೋ ಮುಚ್ಚುಮರಿಯಾಕೆ ಈ ಉತ್ಸವಕೆ ಬರದಿರೆ ವಾಗ್ದೇವಿ ಸತ್ಕವೀಂದ್ರ 2 ದಾತರಾದವರಾರ್ತರಾತುರದಿ ತ್ವರದಿಂದ ಪ್ರೀತಿಯಲಿ ಪೂರ್ತಿಸಲು ಒಪ್ಪಿರೆಂಬಾ ನೀತಿ ಮಾತನು ನೀ ತಿಳಿಯದಾತನೆ ಹಾತೊರೆಯುತಿದೆ ಮನವು ಸತ್ಕವೀಂದ್ರ 3 ಕನ್ನಡದ ನುಡಿ ಸುಧೆಯ ಕನ್ನಡಿಗರಿಗೆ ಬೀರಿ ಕನ್ನಡ ನಾಡೆಂಬ ಪಾಲ್ಗಡಲಕೆ ಜೇನ್ನೊಡಲನೆಂದೆನಿಸಿ ಕನ್ನಡಿಗರಿಂ ಮನ್ನಣೆಯ ಪಡೆದಂಥ ಸತ್ಕವೀಂದ್ರ 4 ಉಸಿರಲೆನ್ನಯ ಮತಿಗೆ ವಶವಲ್ಲವೈನಿನ್ನ ರಸವತ್ಕವಿತಾ ಪ್ರತಿಭಾಚಾರ್ತುರ್ಯವಾ ಹೊಸಗನ್ನಡ ನುಡಿ ರಸದ ಮಾಧುರ್ಯಮಂ ರಸಿಕರಿಗೆ ನೀ ನೀಡು ಸತ್ಕವೀಂದ್ರಾ 5 ಕನ್ನಡ ನುಡಿ ಸಾರಿ ಕನ್ನಡಕುಪಕಾರಿ ಕನ್ನಡದ ಜಯಭೇರಿ ಹೊಡೆದ ನಗಾರಿ ಕನ್ನಡದ ಹೊಸ ಸಿರಿಯು ಕನ್ನಡ ರಸಝರಿಯು ನಿನ್ನಿಂದ ಲಭಿಸಿತೈಸತ್ಕವೀಂದ್ರಾ6 ನಿನ್ನಿಂದ ಕನ್ನಡದ ಮ್ಲಾನತೆಯು ದೂರಾಯಿತು ನಿನ್ನಿಂದ ನಮಕವನ ಕವಲೊಡೆದು ಸರ್ವತ್ರ ಉನ್ನತೆಯ ನೈದಿತೈ ಸತ್ಕವೀಂದ್ರಾ 7 ವೃತ್ತಪತ್ರಿಕೆಗಳಲಿ ಮತ್ತೆ ಸಮ್ಮೇಳನದಿ ನಿತ್ಯ ಓದುವ ಮನೆ ಶಾಲೆಯಲ್ಲಿ ಚಿತ್ತಪೂರ್ವಕ ನಿನ್ನ ಉತ್ತಮೋತ್ತಮ ಕವನ ಮತ್ತೆ ಪೇಳುವರು ಸತ್ಕವೀಂದ್ರಾ8 ನುಡಿಯಣ್ಣನೊಲುಮೆಯೋ | ನುಡಿಯೊಡೆಯನನುಗ್ರಹವೋ ಪಡೆದ ಮಾತೆಯ ಜೀತನೋಪಿ ಫಲವೋ ಕಡು ಸರಳ ಬಿಡಿವೃತ್ತ ಸಡಗರದಿ ರಚಿಸುತ್ತ ಪೊಡೆವಿಯೊಳು ಪಸರಿಸಿದ ಸತ್ಕವೀಂದ್ರಾ 9 ಪ್ರೇಮದಿಂದಲಿ ನಿನ್ನ ಪ್ರೇಮಿತಾರ್ಥವಗರೆದು ಶಾಮಸುಂದರವಿಠಲ ಸಲಹೋ ಎಂದು ನಾ ಮುದದಿ ಪ್ರಾರ್ಥಿಸುವೆ ನೀಮಾಡ್ವ ಉಪಕಾರ 10
--------------
ಶಾಮಸುಂದರ ವಿಠಲ