ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಆ ವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ಪ ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆಶರಣನನು ಪಾಲಿಸುತೆ ಕಾಯ್ದೆಯಂತೆಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದುಕರುಣದಿಂದಲಿ ಕಾಯ್ದೆಯಂತೆ ಹರಿಯೆ 1 ಧರೆಗಧಿಕನಾಥನಾ ತೊಡೆಯನೇರಲು ಕಂಡುಜರೆಯಲಾ ಧ್ರುವನ ನೀ ಕಾಯ್ದೆಯಂತೆದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ 2 ಮಾಧವ ಗೋ-ವಿಂದ ರಕ್ಷಿಸು ಬಾಡದಾದಿಕೇಶವರಾಯ 3
--------------
ಕನಕದಾಸ
ಆ ಹರಿ ನಾನೆಂಬ ಕುಮತವ ಸುಡು ಸುಡು ದೇಹಿಯುಣವುಣದವನ ನೋಡುತಲಿಹ ಪ. ನೀರೊಳು ಬಹುಕಾಲ ಪೊಕ್ಕು ಮುಳುಗಿದವ ಭಾರದ ಗಿರಿಯನುದ್ಧರಿಸಿರುವ ಈರೇಳು ಲೋಕದ ಹೊರೆಯನೆಲ್ಲವ ಹೊತ್ತು ಹಾರುವ ಹಕ್ಕಿಯ ಹೆಗಲನೇರಿ ಬಹ 1 ಜಲಚರ ಸ್ಥಲಚರ ಯಾಚಕನೆನಿಸಿ ಮ- ತ್ತಲಸದೆ ಮಾತೃವಧೆಯ ಮಾಡಿದ ಛಲದಿಂದಸುರರ ಕೊಂದು ಸಿಂಧುವ ದಾಟಿ ಬಲುಗಳ್ಳನೆನಿಸಿ ಮಾವನ ಸೀಳ್ದವ 2 ಸತಿಯರ ವ್ರತವ ಕೆಡಿಸಿ ಕುಮಾರ್ಗವ ತೋರಿ ಕ್ಷಿತಿಯೊಳು ಯುಗದ ರಾಯರ ಕೊಲ್ಲುವ ಶ್ರುತಿನಿಷಿದ್ಧಪಥದಿ ನಡೆದು ಪಾಪಕಂಜದೆ ಯತಿಶ್ರುತಿತತಿಗಳೆಲ್ಲರ ಹೊಂದಿದ 3 ಸಾವಿರ ಫಣದ ಫಣಿಯೊಳ್ಕಟ್ಟುವಡೆದಾಗ ಹಾವಿನ ಮೈಮೇಲೆ ಒರಗಿದವ ಜೀವರೆಲ್ಲರ ಕೊಂದು ಧರೆಯನೆಲ್ಲವ ನುಂಗಿ ಸ್ಥಾವರದೊಂದೆಲೆಯನೆ ಪೊಂದಿಹ 4 ಉರಿವ ಕಿಚ್ಚ ನುಂಗಿ ಜ್ವಲಿಸುವಗ್ನಿಯೊಳು ಸ್ಥಿರವಾದ ಪ್ರಬಲದೈತ್ಯರ ವೈರವ ಸಿರಿ ಹಯವದನನ್ನ ದಾಸರ ದಾಸನು ಚರಣಸೇವಕನೆಂಬ ಮತವೆ ಲೇಸು 5
--------------
ವಾದಿರಾಜ
ಆಟವನಾಡುವ ಬಾರೋ ಶ್ರೀ ಕೃಷ್ಣ ಪ ನೋಟಕೆ ಜನಗಳ ಕೂಟವು ಕಾದಿದೆ ಅ.ಪ ದೊರೆಯು ನೀನಂತೆ ದೊರೆಯು ವಾಸಿಸಲು ಅರಮನೆ ಎಂದಿದನರಿಯಬೇಕಂತೆ ಪರಿಪರಿಯಲಿ ನಿನ್ನ ಸೇವೆಯು ಮಾಡಲು ಪರಿಚಾರಕ ನಾನಿರಬೇಕಂತೆ 1 ತಂದೆಯು ನೀನಂತೆ ತಾಯಿ ರುಕ್ಮಿಣಿಯಂತೆ ಮಂದಿಗಳೆಲ್ಲರು ಮಕ್ಕಳು ನಿನಗಂತೆ ಮುಂದೆ ಎಮಗೆ ನಿನ್ನ ದಿವ್ಯ ರಾಜ್ಯದಲಿ ಒಂದೊಂದು ಭಾಗವ ಬರೆದಿಡಬೇಕಂತೆ 2 ಬಿಂಬವು ನೀನಂತೆ ಕನ್ನಡಿಯೊಳು ಪ್ರತಿ ಯೋಗಿ ಪ್ರಸನ್ನ ಬಿಂಬದಿ ಬಿಂಬವ ನೋಡುವೆನಂತೆ 3
--------------
ವಿದ್ಯಾಪ್ರಸನ್ನತೀರ್ಥರು
ಆಡಿದ ನಾಟಕವ ಕಿರಾತ ಮದನಗೂಢ ಚಿದಾನಂದನನರಿಯದ ನರ ಮೃಗವ ಪ ಸ್ತ್ರೀಯ ದೇಹವು ಎಂಬ ಅಡವಿಯೊಳಗೆಸ್ತ್ರೀಯ ಹುಬ್ಬೆಂಬ ಸಿಂಗಾಡಿ ತೆಗೆದುಮುಂಗುರುಳುಗಳು ಎಂಬ ಸಿಂಜನಿಯನೆ ಬಿಗಿದುಸ್ತ್ರೀ ದೃಷ್ಟಿಯೆಂದೆಂಬ ಸಿಳೀ ಮುಖವನೆ ಪಿಡಿದು 1 ಸಿರಿತುಳುಕುವ ಅವಯವದ ಸಿಡಿಬಲೆಯನೊಡ್ಡಿಪರಿಯ ತಿಳಿಯದೆ ಬರುವ ಪುರುಷ ಮೃಗವಕರುಣವಿಲ್ಲದೆ ಮಹಾ ಕೋಪದಿಂದಲಿಎರಡು ಗಿರಿಯ ಸಂದಿಯಲಿರಿದು ಇರಿದು ಕೆಡುತಿಹ 2 ಇಂತು ಬೇಟೆಯನಾಡಿ ಎಲ್ಲ ಲೋಕವ ಕೆಡಹಿಚಿಂತೆ ಮಾಡುವ ಚಿದಾನಂದ ಭಕ್ತರ ಮುಂದೆ ಸುಳಿಯಲಿಕಂಜಿಮರೆಯದೆ ಶಿವನ ಗುರುತ ಅಂತಹುದುಇವರನೀಗ ಮುಟ್ಟಬಾರದು ಎಂದು 3
--------------
ಚಿದಾನಂದ ಅವಧೂತರು
ಆಡಿನ ಮರಿಯೆತ್ತಂಬುಧಿಯೊಳಾಡುವ ಕರಿಯೆತ್ತ ಮಾನವ ಮಾಡದಿರಚ್ಚುತ ನಾನೆಂಬ ಮನವಪ. ಯಾಡಮೂಢನೊಬ್ಬ ಎಲ್ಲಾ ಜಗದೊಳು ಗೂಢನಾಗಿ ನೋಡುತಿಹ ಸುಖಿಯೊಬ್ಬ ಗಡ ನಾಡರಿಯೆ ದುಃಖಿಯೊಬ್ಬ ಸುಖದಲ್ಲಿ ಲೋ- ಲಾಡುತಿಹ ನಿರನಿಷ್ಟನೊಬ್ಬ ಗಡ1 ಕಡಲ ಕಡೆದು ಸುಧೆಯ ನೋಡಿ ತ- ನ್ನೊಡಲ ಧಣಿಯಉಂಡವನೊಬ್ಬ ಹೆ- ಣ್ಣುಡಿಗೆಯನ್ನುಟ್ಟು ಅಸುರರ ಬಾಯ ಹೊಡೆದು ಬಡಿಸಿದವನೊಬ್ಬ ಗಡ 2 ಆಡುತಲಬ್ಧಿಯೊಳಡಗಿದದ್ರಿಯ ಕೋಡುಗಲ್ಲನೆತ್ತಿ ಹೂಡಲು ಬಲ್ಲೆಯ ಓಡುತಲೊಬ್ಬನೊರಗಿದ್ದನ ಕಣ್ಣೊಳೊಡದು ಮೂಡಿದÀಗ್ನಿಯಿಂದ ಸುಡುವೆಯ3 ಮಂದ ನೀನೊಬ್ಬನೆ ಮಾಡುವೆಯ ಲೆಕ್ಕವಿಲ್ಲದೆ ಮಕ್ಕಳ ಕೂಡಿದನ ಬಹಳ ಕೋಟಿಧನಂಗಳ ಕೂಡಿರ್ದಗೆ ಕೊಟ್ಟು ನೋಡಿ ಸುಖಿಪೆಯ 4 ದೃಢವಾಗಿ ನಿನ್ನುಂಗುಟ ನಖದಿಂ ದೊಡಲನಾದರು ಒಡೆಯಲಾಪೆಯ ಮೃಡಪ್ರಿಯ ಹಯವದನನಂತೆ ಮೂಢಜಾತಿಯಾಗಿ ವೇದ ಓದುವೆಯ 5
--------------
ವಾದಿರಾಜ
ಆಡುತ್ತಾ ಬಾರಮ್ಮಾ ನಲಿದಾಡತ್ತಾ ಬಾರಂಮಾ ಆಡುತ್ತವರಗಳಾ ನೀಡುತ್ತಾ ಕರುಣಾದಿ ನೋಡುತ್ತಾ ದಯದಿಂದಾ ಲಕ್ಷ್ಮಿ ಆಡುತ್ತಾಬಾರಮ್ಮಾ ಪ. ಬೇಸರವು ಬೇಡಮ್ಮಾ ದಾಸರ ದಾಸಿಯು ನಾನಿಂವÀು ವಾಸನಪೂರಿತೆ ವನರೂಹ ನೇತ್ರೆ ಸಾಸಿರನಾಮದ ವಾಸುದೇವನ ಸತಿ ಆಡುತ್ತಾಬಾರಮ್ಮಾ ನಲಿದಾಡುತ್ತಾ ಬಾರಮ್ಮಾ 1 ಕರದಾರವೊಯೆಂದು ತಾಯೆಯಂನಾ ಮೊರೆಯಲಾಲಿಸೆ ನೀ ಬಂದು ದುರಿತಗಳಾನೆಲ್ಲಾ ಪರಿಹರಿಸುವ ನಿಂಮ ಅನುದಿನ ಆಡÀುತ್ತಾ ಬಾರಮ್ಮಾ2 ಧರಣಿಯೊಳುನ್ನತವಾದ ಹೆಳವನಾಕಟ್ಟೆ ಗಿರಿಯೊಳು ನೆಲಸಿದ ಪರಮ ಪವಿತ್ರಳ ಕರುಣಾ ಸಿಂಧುವೆ ವರವನು ಕೊಡುತ್ತಾ ಬೇಗಾದಿಂದಲಿ ಆಡುತ್ತಾ ಬಾರಮ್ಮಾ3
--------------
ಹೆಳವನಕಟ್ಟೆ ಗಿರಿಯಮ್ಮ
ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1 ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2 ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3 ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................4
--------------
ಕನಕದಾಸ
ಆತ್ಮ ನಿವೇದನೆ ಅನಾಥ ಬಂಧೋ ಆದಿ ಪುರುಷ ಪ. ಅನಾಥ ಬಂಧೋ ಗುಣ ಗಣ ಸಿಂಧೋ ಮನಸಿಜ ಜನಕನೆ ಮರೆಯದಿರೆಂದೂ ಅ.ಪ. ಅನುಚಿತ ಕರ್ಮದ ಬಲೆಯಲಿ ಸಿಕ್ಕಿ ದಿನಗಳ ಕಳೆದನು ಮನೆಯಲ್ಲಿ ತನುವಿನ ಸ್ಥಿತಿಯನು ಪೇಳಲೇನು ಶ್ರೀ- ವನಜ ಭವಾರ್ಚಿತ ಒದಗುವಿ ಸಮಯದಿ 1 ವಿಧಿ ನಿಮಯಗಳನುಸರಿಸದೆ ಕ- ಣ್ಣಿದಿರಲಿ ಕಾಂಬುದ ಗ್ರಹಿಸದೆ ಮಧುಮಥನನೆ ತ್ವತ್ಪರ ಪದ್ಮವ ನಂ- ಬಿದೆ ಕರುಣೋದಧಿ ಕಾಯೊ ಬೇಗದಲಿ 2 ಸರ್ವಭಾರವು ನಿನ್ನ ಮೇಲಿಹುದು ಮ ತ್ತೋರ್ವಗುಂಟೆ ನಿನ್ನಯ ಬಿರುದು ಮರ್ವನೀಯದೆ ಮನದಲ್ಲಿರು ವೆಂಕಟ ಪರ್ವತೇಂದ್ರ ಪೂರ್ಣಾನಂದಪ್ರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆತ್ಮನಿವೇದನೆ ಅಗಲದಿರೆಲೋ ನೀನೆನ್ನ ಬಿಟ್ಟು ಅಗಲದಿರೆಲೋ ನಿಗಮಾತೀತ ನಿರ್ಜರೇಶ ಪ ಹಗಲು ಇರುಳು ನಿನ್ನ ಬಿಟ್ಟು ಅಗಲಿ ಇರಲಾರೆ ನಾನು ಸುಗುಣ ಸಂತರಾತ್ಮನೆನ್ನ ಬಗೆಗೊಂಡು ರಕ್ಷಿಸಭವ 1 ಮುಟ್ಟಿಭಜಿಪೆ ನಿನ್ನ ಚರಣ ಕೆಟ್ಟಗುಣಗಳೆಣಿಸದೆನ್ನ ನಿಷ್ಠೆಯೊಳಗೆ ನಿಂತು ಸಲಹೋ ಕಷ್ಟಹರಣ ಕರುಣಾಶರಧಿ 2 ಶ್ರೀಶರಾಮ ನಿನ್ನ ಚರಣ ದಾಸ ನಾನು ಮನ್ನಿಸೆನ್ನ ಧ್ಯಾನದಲ್ಲಿ ನೀ ವಾಸನಾಗಿ ಪೋಷಿಸನುಮೇಷ ಬಿಡದೆ 3
--------------
ರಾಮದಾಸರು
ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಆತ್ಮನಿವೇದನೆ ಆದಿಮೂರುತಿ ಪರಂಜ್ಯೋತಿಪಿತನೇ ದಾಶರಥಿ ಪ. ಕೊಡು ಭಕ್ತಿಶಕ್ತಿ ಸಂಪದಸಿರಿಯ ಕಡು ಬಾಲಕರೊಳು ಕೆಡುಕು ಮಾಡದೆ ನಡು ಕಡೆಗಳಿಲ್ಲದ ಜಗದೊಡೆಯ ಜನಾರ್ದನ 1 ಶತಕೋಟಿ ಬ್ರಹ್ಮಾಂಡಘಟವ ನಿರುತದಿ ಧರಿಸಿರುವ ಪ್ರಥಮಪುರುಷ ನಿನ್ನ ಪದವ ಕ್ಷಿತಿಯೊಳೀಕ್ಷಿಪಗೆ ಚೋದಿಗವೆನೆ ರತಿ- ಪತಿಪಿತನೆ ಬಂದು ನಡೆಸೆನ್ನ ಮುಂದು 2 ಕುಕ್ಷಿಯೊಳೀರೇಳು ಜಗವ ಧರಿಸಿರುವ ಕ್ಷಯ ಗುಣದಿಂದ ಮೆರೆವ ಲಕ್ಷ್ಮೀನಾರಾಯಣ ಲಕ್ಷ ಅವಗುಣಗಳ ಈಕ್ಷಿಸದೆನ್ನನು ರಕ್ಷಿಸಬೇಕೆಂದು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಆತ್ಮನಿವೇದನೆ ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಪ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ 1 ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ 2 ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | ಹಬ್ಬಿದ ಪಾಪದ ಸರವಿಗೆ ಉರುಲು ಬಿದ್ದು | ಸುಬ್ಬ್ಬಿದ ಸುಕೃತವ ಕಳಕೊಂಡೆನಯ್ಯಾ 3 ಪೂರ್ವದಲಿ ಉಂಡ ದು:ಖಗಳೆಲ್ಲ ಮರೆದು | ಸರ್ವದಾ ಗರ್ವದಲಿ ಸಜ್ಜನರ ಕೆಡನುಡಿದು | ಉರ್ವಿಯೊಳು ಬಲು ಬಲವಂತನೆನಸೀ | ಸರ್ವದಾ ಸರ್ವ ನರಕಂಗಳಲಿ ಬಿದ್ದು ಹೊರಳಿದೆನು4 ಇನ್ನಾದರೂ ದುರ್ಬುದ್ಧಿಯನ್ನು ಬಿಡಿಸಿ | ಕರವ ಬಿಡದೆ | ಪತಿ ವಿಜಯವಿಠ್ಠಲರೇಯಾ | ಎನ್ನ ಭಾವವು ನಿನ್ನದಲ್ಲವೇನಯ್ಯಾ5
--------------
ವಿಜಯದಾಸ
ಆತ್ಮನಿವೇದನೆ ಇಂತು ಮರುಳಾದೆನು ಬಲು ಭ್ರಾಂತಿಗೊಳಗಾದೆನು ಲಕ್ಷ್ಮೀಕಾಂತಾ ಸರ್ವಾಂತರ್ಯಾಮಿ ಪ. ಕಾಮಪಾಶಕೆ ಶಿಲ್ಕಿದೆನು ಬಾಯಾರಿ ಬಳಲಿದೆನು ಹೀನ ಮತವೆನ್ನದೆ ಆಶಕೆ ಗುರಿಯಾದೆ 1 ನಾನು ನನ್ನದು ಎಂದೆ ಧರ್ಮಾಂಧಳಾದೆ ಮೆರೆದೆ ಗುರುಹಿರಿಯರಿಗೆ ಎರಗದೆ ಹರಿನಿನ್ನ ಮರೆದೆ 2 ಹಿಂದೇ ಸುಜನ್ಮಗಳು ಬಂದು ಪೋದವು ಮುಂದಿನ ಗತಿಯು ಎನಗೆ ತಿಳಿಯದು ಬಂಧನದೊಳು ಸಿಗಿಬಿದ್ದೆನು ಬಂದೆನ್ನ ಕಾಯೊ ಕಾಳಿಮರ್ಧನಕೃಷ್ಣಾ 3
--------------
ಕಳಸದ ಸುಂದರಮ್ಮ
ಆತ್ಮನಿವೇದನೆ ಏನಿದು ಎನ್ನಯ ಬಾಳು-ನರಹರೀ ಪ ಶ್ರೀನಿಧಿಯನು ಮನಮನೆಯೊಳು ನಿಲಿಸದಾ ಅ.ಪ. ಕಳೆಯಿತು ಆಯು-ಕಳೆಯಿತು ಕಾಯೊ ಬೆಳೆಯಿತು ಆಶೆ-ಉಳಿಯಿತು ಸಾಧನ 1 ಹೊಟ್ಟೆಗೆ ಹಾಕೇ-ಪುಟ್ಟಿದು ದಾಯ್ತೇ ಪೊಟ್ಟೆಯ ತುಂಬವೆ-ದುಷ್ಟ ಮೃಗಂಗಳು2 ಇಲ್ಲವು ತಾ ಹರಿ-ಎಲ್ಲವೂ ನೀನೇನೆ ಇಲ್ಲವು ಯಾಕೇ-ಎಲ್ಲ ಕಾಲದಿ ಸುಖ 3 ಪುಟ್ಟವುದೇ ಜಗ-ಪುಟ್ಟಿಸ ನಿಲ್ಲದೇ ಭ್ರಷ್ಠರ ಮತವಿದು-ಅಷ್ಟಕರ್ತನ ಬಿಡೆ 4 ಮಾನವಾ ತನುವಾ-ಬಾಹೋದೆ ದುರ್ಲಭ ಮಾನದ ಶ್ರೀ ಕೃಷ್ಣ ವಿಠಲನ ತೋರದಿಹ5
--------------
ಕೃಷ್ಣವಿಠಲದಾಸರು