ಒಟ್ಟು 6252 ಕಡೆಗಳಲ್ಲಿ , 125 ದಾಸರು , 4339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯುದೇವರ ಪ್ರಾರ್ಥನೆ ಪ್ರಾಣಪತೇ ಪರಿಪಾಲಯ ಮಾಂಪ್ರಾಣಪತೇ ಪರಿಪಾಲಯ ಮಾಂ ಕಮಲಾಲಯ ಕರುಣೈಕಾಲಯ ಭೂಮನ್ಯೆ ಪ. ಋಜುಗಣನಾಯಕ ಭುಜಗಭೂಷಣ ದ್ವಿಜರಾಜಾಹಿಪರಾಜಾ 1 ಭಾರತೀಶ ಕರುಣಾರಸ ಭೂಷಣ ವಾರಿಜಾಸನ ಸಮಾಂಶಾ 2 ಕಪಿವರ ನೃಪವರ ಯತಿವರ ರೂಪ ದುರಿತ ಸುರೂಪ 3 ರಾಮಕೃಷ್ಣ ವ್ಯಾಸಾಮಲ ಮಂಗಲ ನಾಮಕ ಶ್ರೀಪತಿ ದೂತ 4 ವೆಂಕಟೇಶ ಚರಣಾಂಬುಜ ಮಧುಪ ವಿ- ಶಂಕ ಶಂಕರಾತಂಕ ನಿವಾರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯುದೇವರು ಎರಡೂ ಕೈ ಮುಗಿದೂ ಬೇಡುವನ್ಯಾರೇ ಪೇಳಮ್ಮಯ್ಯ ಪ ಸುರನರರ ಖಳರ ಪರಿಪರಿ ಕರ್ಮವ ಹರಿಗೊಪ್ಪಿಸುವಮರುತ ಕಾಣಮ್ಮ ಅ.ಪ. ಕರವ ಬಲಕೆತ್ತೆ ನಿಂತಹನ್ಯಾರೇ ಪೇಳಮ್ಮಯ್ಯಾಭರದಿಂದ ಚರಣಗಳೂರಿದನ್ಯಾರೇ ಪೇಳಮ್ಮಯ್ಯಾದುರುಳ ಜನರ ಮೆಟ್ಟಿ ಶರಣರಿಗಭಯವಕರೆದು ಕೊಡುವ ಬಹು ಕರುಣಿ ಕಾಣಮ್ಮ 1 ಬಿಂಕಾದಿ ಮುಖವಾ ತಿರುಹಿದನ್ಯಾರೇ ಪೇಳಕ್ಕಯ್ಯಟೊಂಕಾದಿ ಎಡಗೈಯಿಟ್ಟಿಹನ್ಯಾರೇ ಪೇಳಕ್ಕಯ್ಯಕಿಂಕರರಡಿ ಬರೆ ಅಂಕದೊಳೆತ್ತುವಡೊಂಕನಾದ ನಿಷ್ಕಳಂಕ ಕಾಣಮ್ಮ 2 ಚೆಲುವ ಸರ್ವಾಂಗಲಕ್ಷಣನ್ಯಾರೇ ಪೇಳಮ್ಮಯ್ಯಹಲವೂ ಫಲಗಳನೂ ನೀಡುವನ್ಯಾರೇ ಪೇಳಮ್ಮಯ್ಯಸುಲಭಗೋಪತಿವಿಠಲನ ಪ್ರಿಯಕದರುಂಡಲಗಿ ಪುರಿ ಧೊರೆ ಇವನಮ್ಮ 3
--------------
ಗೋಪತಿವಿಠಲರು
ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಾರಿಜಗಣ ನಿಲಯೇ ಕಮನೀಯೆ ತಾಯೇ ಕಾಯೇ ನರಹರಿ ಜಾಯೇ ಪ ಸಾರಸಭವಮುಖ ಸುರ ಮಹನೀಯೆ ಚಾರುವದನೆ ಜಾಂಬೂನದ ಛಾಯೆ ಅ.ಪ ನಿನ್ನ ಕಟಾಕ್ಷ ಮಹಾಸುರಧೇನು ನಿನ್ನ ಮನವು ಚಿಂತಾಮಣಿಯು ನಿನ್ನಯ ಕರಗಳು ಸುರತರುವೆನಗೆ ಇಂದಿರೆ 1 ಹೃನ್ಮಂದಿರದಲಿ ಜ್ಞಾನವನು ಮನ್ಮಂದಿರದಲಿ ಭಾಗ್ಯವನು ಅಮ್ಮ ಬೆಳಸೆ ಕಮಲೆ ಸುವಿಮಲೆ ಇಂದಿರೆ 2 ಈಶನಂಘ್ರಿಯಲಿ ಭಕ್ತಿಯನು ಹರಿ ದಾಸದಾಸ್ಯದಲಿ ಶಕ್ತಿಯನು ಮೋಸಕೆ ಸಿಗದ ವಿರಕ್ತಿಯನು ಕರುಣದಲಿ ನೀಡೆ ಪ್ರಸನ್ನೆ3
--------------
ವಿದ್ಯಾಪ್ರಸನ್ನತೀರ್ಥರು
ವಾರಿಜನ ಹೃದಯೇಶ್ವರಿ ಸರ್ವವಿದ್ಯಕಾಧಾರಿ ಪ ವಾಣಿವಿರಂಚಿ ರಾಣಿ ಪಂಕಜ ಪಾಣಿ ಕಾಳಾಹಿವೇಣಿ ನಿನ್ನಯ ವೀಣೆಯಿಂದಲಿ ವೇಣುಗಾನವ ಮಾಣದೆ ಪಾಡುತ ಕುಣಿಕುಣಿಯುತ ಬಾರೆ 1 ಮಂದಯಾನೆ ಪೂರ್ಣೆಂದುವದನೆ ಕುಂದುರಹಿತೆ ಬಂದು ರಕ್ಷಿಸೆ ಮಂದಮತಿಯನಿಂದು ಬೇಗನೆ ಕಂದ ನಾನೆಂದ ನೀ ಛಂದದಿ ಅರಿಯುತ 2 ಸಾರಸಾಕ್ಷಿ ಮಯೂರವಾಹನೆ ಶಾರದಾಂಬೆ ಕಲಕೀರವಾಣಿಯೆ ಸಾರಿ ಬೇಡುವೆ ತೋರು ಕರುಣದಿ ಧೀರನಾ ಗಂಭೀರನಾ ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ವಾರಿಜನಯನಗೆ ಜಯ ಮಂಗಳ ಶುಭ ಮಂಗಳಾ ಪ ನೀರಧಿಶಯನಗೆ ಜಯ ಮಂಗಳ ಶುಭ ಮಂಗಳಂ ಅ.ಪ ಭವ ಭಯ ಹರನಿಗೆ ಪವನಜನಮಿತಗೆ ಭುವನಸುಂದರನಿಗೆ ಜಯಮಂಗಳಂ ಕುವಲಯಶ್ಯಾಮಗೆ ನವಮಣಿಮಾಲಗೆ ದಿವಿಜಸಂಸೇವ್ಯಗೆ ಶುಭಮಂಗಳಂ1 ಕರುಣಾಜಲಧಿಗೆ ಶರಣರ ಪೊರೆವಗೆ ನರಹರಿರೂಪಗೆ ಜಯ ಮಂಗಳಂ ಪುರುಷೋತ್ತಮನಿಗೆ ದುರಿತಸಂಹಾರಗೆ ಶುಭ ಮಂಗಳಂ 2 ಗಂಗೆಯ ಜನಕಗೆ ಮಂಗಳರೂಪಗೆ ಸಂಗರಧೀರಗೆ ಶುಭಮಂಗಳಂ ತುಂಗವಿಕ್ರಮನಿಗೆ ಇಂಗಿತವರಿವಗೆ ಮಾಂಗಿರಿಯರಸಗೆ ಜಯ ಮಂಗಳಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾರಿಜಾಸನ ವಂದ್ಯ ಚರಣಾ ಲಕ್ಷ್ಮೀ- ನಾರಾಯಣ ಎನ್ನೊಳಿರಿಸು ಸತ್ಕರುಣಾ ಪ. ಶ್ರೀರಮಣಿಯ ಕೂಡಿ ನೀನು ದಯ ದೋರಲನ್ಯರಿಗೆಂದರಂಜೆ ನಾನು ದಾರಿದ್ರ್ಯ ಭಯ ದೋಷಗಳನು ದೂರ ಹಾರಿಸಿ ಪೊರೆವ ಸಕಲ ಸುರಧೇನು1 ನಿನ್ನಂಥ ದಾತರಿನ್ನಿಲ್ಲ ಪರ- ಮೋನ್ನತ ಪದವ ಧ್ರುವನಿಗಿತ್ತಿಯಲ್ಲ ಮುನ್ನ ಕುಚೇಲನ ಸೊಲ್ಲ ಕೇಳಿ ಅನ್ಯರಿಗೊಲಿಯದ ಸಿರಿಯಿತ್ತಿಯಲ್ಲ 2 ಇಂದಿರಾವರ ವೆಂಕಟೇಶ ನೀ ಬಂದುದರಿಂದಾದುದೆನಗೆ ಸಂತೋಷ ಹೊಂದಿದೆ ನಿನ್ನನು ಶ್ರೀಶ ಪೂ- ರ್ಣೇಂದು ವದನ ಕರುಣಾರಸ ಭೂಷಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾರುಣೀ - ಮಜ್ಜನನಿಯೆ - ವಾರುಣೀ ಪ ಸೂರಿ ಪರಿ ಪಾಹಿ ಅ.ಪ. ಪರಿ | ಕಾರ್ಯವ ಮಾಡಿಸು 1 ಪತಿಗೆ ಶತಾವರ ಗುಣಿಯೇ | ಹರಿಸತಿಯರಾರು ಮಂದಿಗೆಣೆಯೆ | ಉಕ್ತಸತಿಯರಿಗೆರಡೂನ ಗುಣಿಯೆ | ಕೇಳುಸ್ತುತಿ ಪಂಚರಾತ್ರ ಮಾನಿಯೆ | ಆಹವಿತತ ಮಹಿಮ ಹರಿ | ಅತಿಶಯ ಗುಣಗಳಸತತದಿ ತುತಿಸುವ | ಮತಿಯನೆ ಕೊಡು ತಾಯೆ 2 ಪರಿ ಪರಿ ಪರಿ ವಿಧದಿಂದ 3
--------------
ಗುರುಗೋವಿಂದವಿಠಲರು
ವಾಲೆ ಬಂದಿಹುದೇ ತಂಗೀಯನ ವ್ವಾಲೆ ಬಂದಿಹುದೆ ಪ. ವಾಲೆ ಬರೆದ ಭಕ್ತ ಪಾಲ ಶೀಲ ಕರುಣಾಲ ವಾಲೆ ಅ.ಪ. ಅಂಬುರುಹೋದ್ಭವ ಅಖಿಲ ಸುರಾ ರಂಬರದಲಿ ಸ್ತುತಿಸೆ ಶಂಬರಾಸುರ ಸಂಹರನೈಯ್ಯನ ಹಡಗು ಅಂದು ಮಾರುತನಿಲ್ಲದೆ ಗೋಪಿ ಚಂದನಸಹಿತನಿಲ್ಲೇ ಮಧ್ಯದಿಂದಲೀ ಅಂದದಿ ಮುನಿಗಳ ನಿಂದು ಸ್ತುತಿಸುತಾ ನಂದದಿಂದಾನಂದಕಂದನ ಮುಂದೆ ಕರೆಯೆ ಮುನಿ ದಂದುಗ ಹರಿಸುತ ಬಂದೆನೆಂದು ಇಂಥಾ 1 ಬಂದೆನೆಂದು ತೋರನೆ ಹರಿ ನಿಂದಿರುವನೆ ಬದಿಲಿ ಇಂದುಧರನ ಆಣೆ ಎನ್ನ ಮಂದಿರದಲಿ ತೋರುತ ಬಂದ ಭಕ್ತರ ಸೇವಿಸೆಂದು ಬರೆದಿಹ ಬಂಧು ನಾನೆಂದು ತಿಳಿ ಎಂದು ಹೇಳುವತೆರ ಬರಹವ ಇಂದಿರೇಶ ತಾ ಬಂದು ನಿಂದು ಕೈ ಪಿಡಿದ ವಾಲೆ 2 ಶ್ರೀ ಶ್ರೀನಿವಾಸನ ತೋರುವೆ ವಾಸವಾಗುತ ಮನದಿ ಕ್ಲೇಶವ ಕಳೆ ಮನದಾಸೆ ಬಿಟ್ಟರೇನು ಶ್ರೀಶನಾಜ್ಞೆಯೆಂದು ಎನ್ನ ಶುಭ ಪತ್ರವ ದಾಸಳಾದ ಎನ್ನ ಮನದಾಸೆ ಪೂರೈಸುವ ವಾಲೆ ವಾಸುದೇವನ 3
--------------
ಸರಸ್ವತಿ ಬಾಯಿ
ವಾಸವನುತಾಬ್ಜ ಪಾದಾ | ಪ್ರಮ | ಥೇಶ ಭಕ್ತ ವರದಾ ಪ ಮೀಸಲಹುದು ಶೇಷ ಪದಾ | ಈಶ ಎನ್ನ ಪೊರೆಯೊ ಸದಾ ಅ.ಪ. ದುರಿತ ಸಾರಥಿ ಅಜ | ಮೇರುವೆ ಧ್ವಜ | ಧಾರುಣಿ ಧರ ಥೋರಾ ಧನು |ಶ್ರೀ ಹರಿ ಶರ | ಮೂರೂರುಗಳ್ | ದಾರಿತ ಹರ 1 ವ್ಯೋಮಕೇಶ | ಪ್ರಮಥ ಪೋಷ | ಭೀಮ ನಾ5 | ಮಶಣವಾಸಸ್ವಾಮಿ ತೀರ್ಥ ವಾಸ ದಾಸ | ಕಾಮಿತಾರ್ಥ ಸಲಿಸೊ ಈಶ ||ಭೂಮಿಜೆ ಪತಿನಾಮಮೃತ ಪ್ರೇಮದಸವಿ ನೆ5ುವು ತವಭೌಮನ ಹರ | ಭುಮ5 ಹರಿ | ನಾಮ ಸ್ಕøತಿ ನೇಮವಕೊಡು || ಮೋದ | ಕರುಣಿಸೂವುದು ಭಕ್ತವರದ |ನರಮೃಗ ಹರಿ | ಚರಣಾಬ್ಜವ | ನಿರಂತರ | ಸ್ಮರಿಸುತ್ತಿಹಗೌರೀವರ | ಚರಣಂಗಳಿ | ಗೆರಗುವೆನು | ಪಾಲಿಸು ಹರ 3
--------------
ಗುರುಗೋವಿಂದವಿಠಲರು
ವಾಸುಕೀಶಯನ ವಿಠಲ ನೀನಿವಳ ಕಾಪಾಡಬೇಕೋ ಹರಿಯೇ ಪ ಭಾಸುರಾಂಗನೆ ದೇವ ಸರ್ವೇಶ ಸರ್ವವಿಧದಲಿ ಕಾಯೊ ಹರಿಯೇ ಅ.ಪ. ಜಗದೀಶ ಜಗಜನ್ಮಾದಿಕಾರಣನೆ ಶ್ರೀಹರಿಯೆಹಗರಣಗಳಾ ಕಳೆದು ಮಿಗೆ ಭಕುತಿ ಸುಜ್ಞಾನವಿತ್ತು |ಬಗೆಬಗೆಯ ಮಹಿಮೆಗಳ ನೀತೋರಿ ನಿನವ್ಯಾಪ್ತಿಮಿಗಿಲಾಗಿ ತಿಳಿಸುತ್ತ ಸಲಹ ಬೇಕಿವಳಾ 1 ಮಧ್ವಮತ ದೀಕ್ಷೆಯನು ಉದ್ಧರಿಸಿ ಇವಳಲ್ಲಿಸದ್ಧರ್ಮ ಪದ್ಧತಿಯ ಶ್ರದ್ಧೆಗಳ ನಿತ್ತೂ |ಮಧ್ವೇಶ ಶ್ರೀಹರಿಯೆ | ಸರ್ವೋತ್ತುಮನೆಂಬಶುದ್ದ ಬುದ್ಧಿಯನಿತ್ತು ಸಲಹ ಬೇಕಿವಳಾ 2 ಚಾರು ಮೂರುತಿಯ |ಬಾರಿಬಾರಿಗೆ ಹೃದಯ ವಾರಿಜದಿ ಕಾಂಬಂಥಚಾರು ಮಾರ್ಗವ ತೋರಿ ಕಾಪಾಡೊ ಹರಿಯೇ 3 ಲೌಕೀಕ ಮಾರ್ಗಗಳು ವೈದೀಕ ವಾಗ್ವಪರಿನೀ ಕರುಣಿಸಿ ಕಾಯೊ ಕಮಲಾಯ ತಾಕ್ಷ |ನೀ ಕಾಯದಿರಲಿನ್ನು ಕಾಯ್ವರ್ಯಾರಿಹರಯ್ಯಮಾಕಾಂತ ಸಲಹಯ್ಯ ಗೋಕುಲಾನಂದ 4 ಕಂದರ್ಪ ಜನಕ ಮನ ಮಂದಿರದಿ ನೀತೋರಿನಂದವನೇ ನೀನಿತ್ತು ಇಂದಿರೇಶನೆ ಕಾಯೊತಂದೆ ಎನ ಬಿನ್ನಪವ ಛಂದದಲಿ ಮನ್ನೀಪುದುನಂದ ನಂದನ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವ ಪ ವಾಸುದೇವ ಅ.ಪ ವಾಸುದೇವ 1 ವಾಸುದೇವ 2 ಮುರಹರ ಶರಣು ಹೊಕ್ಕೆನೊ ಕಾಯೊ ಶ್ರೀಕೃಷ್ಣ ವಾಸುದೇವಶರಣೆಂಬ ಜನರಿಗೆ ಕರುಣಿಪ ಶ್ರೀಕೃಷ್ಣ ವಾಸುದೇವ3 ವಾಸುದೇವ 4 ಶೇಷಶಯನ ನೀ ಪೋಷಿಸೊ ಶ್ರೀಕೃಷ್ಣ ವಾಸುದೇವಭಾಸುರಾಂಗನೆ ಭಕ್ತವತ್ಸಲ ಶ್ರೀಕೃಷ್ಣ ವಾಸುದೇವ5
--------------
ವ್ಯಾಸರಾಯರು
ವಾಸುದೇವ | ಸಂಕಟ ಹರಣ ಶಂಖ ಚಕ್ರಧಾರಿ ಹರಿ | ವೆಂಕಟಾಚಲಾಧೀಶಾ ಪ ಪಾಹಿ ಪರಮ ಹಂಸವಿನುತ | ಪಾಹಿ ಪರಮ ವೇದಚರಿತ ಪಾಹಿ ಕಮಲಜಾತ ನಮಿತ | ಪಾಹಿಮಾಂ ಹರೇ ಪಾಹಿ ಪರಮ ಕರುಣದಿಂ ಪಾಹಿ ಮಾಂಗಿರಿವಾಸ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್