ಒಟ್ಟು 11370 ಕಡೆಗಳಲ್ಲಿ , 137 ದಾಸರು , 5713 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನ ಖಗಕುಲರನ್ನ ಮನೋರಮಣ ಮನೋರಮಣ ಕಾಂತ ಶ್ರೀರಾಮನ ಅಗಲದಿರು ಕಾಣೆ ಮರಿಯಾನೆ ಶೋಭಾನೆ 1 ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ- ಕೃತ್ಯಕೆಲ್ಲಕ್ಕನುಸರಿಸಿ ಅನುಸರಿಸಿ ನಡೆ ನೀ ಮಗಳೆ ಹಿತವಾಗಿ ಬಾಳು ಪತಿಯೊಳು ಶೋಭಾನೆ 2 ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆ ಗಂಡನುಣ್ಣದ ಮೊದಲು ನೀ ಮೊದಲು ನೀನುಣ್ಣದಿರು ಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3 ಮುಗುಳು ನಗೆಯ ಬೀರು ಜಗಳವ ಮಾಡದಿರು ಜಗದೊಳು ಕೀರ್ತಿಯುತಳಾಗು ಯುತಳಾಗು ಬಂಧುಗಳಲಿ ನೀ ಹಗೆಯ ಮಾಡದಿರು ಕೃಪೆದೋರು ಶೋಭಾನೆ 4 ಪಾದ ಹೊದ್ದಿ ಸೇವೆಯ ಮಾಡು ಸುದ್ಧ ಭಾವದೊಳು ನಡೆ ಮಗಳೆ ನಡೆ ಮಗಳೆ ನಿತ್ಯಸುಮಂಗಲೆ ಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5 ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರು ಪ್ರತ್ಯೊಬ್ಬಳೆ ಸ್ಥಳದಿ ನಿಲದಿರು ನಿಲದಿರು ನೀರಜಗಂಧಿ ಸತ್ಯ ವಚನವನೆ ಸವಿಮಾಡು ಶೋಭಾನೆ 6 ಮೈದುನರನ್ನು ತನ್ನ ಮಕ್ಕಳೆಂಬಂತೆ ನೋಡು ಸಾಧುಭಾವದದಲಿ ನಡೆ ಮಗಳೆ ನಡೆ ಮಗಳೆ ಪಂಕ್ತಿಯಲಿ ಭೇದ ಮಾಡದಿರು ಕೃಪೆದೋರು ಶೋಭಾನೆ 7 ಕಂಡರೆ ಶಿಷ್ಟರ ದಂಡ ನಮಸ್ಕರಿಸು ಹಿಂಡು ದಾಸಿಯರ ದಣಿಸದಿರು ದಣಿಸದಿರು ಉತ್ತಮಳೆಂದು ಭೂ- ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ8 ಚಂಡಿತನವ ನಿನ್ನ ಗಂಡನೊಳ್ಮಾಡದಿರು ಗಂಡಸರ ಮುಂದೆ ಸುಳಿಯದಿರು ಸುಳಿಯದಿರು ಸಂತತ ಸೌಖ್ಯ- ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9 ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆ ಸುರತ ಸಮಯದಿ ವೇಶ್ಯಾ ತರುಣಿಯಳ ತರುಣಿಯಳ ತೆರದಿ ರಾಮನ ಸತಿಯಂ- ತೆ ಮಾಡವ್ವ ಸುಖಂ ಜೀವಾ ಶೋಭಾನೆ 10 ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವು ಕುಕ್ಷಿ ಈರೇಳು ಜಗವನ್ನು ಜಗವನ್ನು ನಮ್ಮನ್ನು ಸರ್ವರ ರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ತುಪಾಕಿ ವೆಂಕಟರಮಣಾಚಾರ್ಯ
ಮಗುಟ ವಿಶ್ವದೊಳೊಬ್ಬನೆ ಪ್ರಗಟ ಭಾಸ್ಕರ ಗುರು ದಯನೋಟ ರಸಕಾಯ ಸವಿದುಂಬೂಟ ಧ್ರುವ ಭಾಸ್ಕರ ಗುರು ನಿಜದಯ ಲೇಸುದೋರುವ ವಿಜಯ ಭಾಸ್ಕರ ಗುರು ಅಭಯ ಹಸನಾದ ಪುಣ್ಯೋದಯ 1 ಭಾಸ್ಕರ ಕರುಣಾಕಟಾಕ್ಷ ಭಾಸುದು ಘನಪ್ರತ್ಯಕ್ಷ ಭಾಸ್ಕರ ಗುರು ನಿಜ ಭಿಕ್ಷ ಹಸನಾಗಿ ಮಾಡುವಾ ಸಂರಕ್ಷ 2 ಭಾಸ್ಕರ ಗುರು ನಿಜಬೋಧ ಭಾಸುವ ಘನಸರ್ವದಾ ಭಾಸ್ಕರ ಗುರು ಪ್ರಸಾದ ಸ್ವಸುಖದೋರುವ ಸಂವಿಸ್ವಾದ(?) 3 ಭಾಸ್ಕರ ಗುರು ಉಪದೇಶ ಭಾಸಲು ಬಲು ಸಂತೋಷ ಭಾಸ್ಕರ ಗುರುವರೇಶ ಈಶನಹುದೊ ಸರ್ವೇಶ 4 ಭಾಸ್ಕರ ಗುರುಕೃಪೆ ಙÁ್ಞನ ಲೇಸಾಗಿ ತೋರುವದುನ್ಮನ ಭಾಸ್ಕರ ಗುರುದಯ ಕರುಣ ದಾಸ ಮಹಿಪತಿಗಾಭರಣ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಂಜುಳನಾದವು ರಂಜಿಸಿತು ಕಂಜನಯನಕೃಷ್ಣ ಕೊಳಲನು ಊದಲು ಪ ಅಂಜಲಿಯಲಿ ಪುಷ್ಪಹಾರವ ಪಿಡಿಯುತ ಸಂಜೆಯ ತಿಂಗಳು ಬೆಳಗಿರಲು ಅ.ಪ ಕೈಯಲಿ ವೀಣೆಯ ನುಡಿಪ ಕನ್ನೆಯರು ಮೈಯಿನ ಗಂಧವ ಚೆಲ್ಲುತಲಿರಲು ಸುಯ್ಯಿ ಸುಯ್ ಸುಯ್ ಎಂದು ಚಲಿಸಲು ಎಲರು ಗೋಪಿ ವೃಂದವು ನಲಿಯಲು1 ಸರಿಗಮಪದನಿ ಸ್ವರಗಳ ರವದಲಿ ಸರಸ ಸಾಹಿತ್ಯವು ಉರುಳುತಲಿರಲು ಮುರಳಿಯ ಇಂಚರ ಸರಿಸಮ ತೂಗಲು ವರದ ಮಾಂಗಿರಿರಂಗ ನಸುನಗೆ ಬೀರಲು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂಜುಳಾ ಪಾಶಾಂಕುಶದ ರಂಜಿತವರ ಬಾಹುದಂಡಮಂಜುಳಹಾರ ಕೇಯೂರಾದಿಭೂಷಮೌಂಜಿ ಕೃಷ್ಣಾಜಿನಧರನಿತ್ಯತೋಷಕಂಜ ಬಾಂಧವ ಶತರೂಪಿಸಂಕಾಶಕುಂಜರವದನಾ ಹಸೆಗೇಳು 1 ಪಾದ ಪಯೋಜರಾವಣಾಸುರಗರ್ವಹರ ಗಾನಲೋಲಪಾವನತರಸುರಕಾರ್ಯಾನುಕೂಲಗ್ರಾವತನೂಜೆಯ ಪ್ರೇಮದ ಬಾಲಶ್ರೀ ವಿಘ್ನರಾಜ ಹಸೆಗೇಳು 2 ಸೂರ್ಯ ಸು-ತ್ರಾಮಾಚ್ಯುತ ಚಂದ್ರ ವಂದ್ಯಹೇಮಾದ್ರಿಸನ್ನಿಭ ಕೋಮಲಗಾತ್ರರಾಮಣೀಯಕ ಕಾಂಚನಯಜ್ಞ ಸೂತ್ರಸೋಮಶೇಖರನ ಸಮ್ಮೋಹದ ಪುತ್ರಶ್ರೀಮದ್ಗಣೇಶ ಹಸೆಗೇಳು 3 ಕಾಮಕರ್ಮಾತೀತ ಸನ್ಮುನಿಜಾಲ ಮಾನಸರಾಜಹಂಸಬಾಲಾರ್ಕಶತರೂಪಿಕಾಂತಿ ಶರೀರಸ್ಥೂಲಕಂಧರ ದುಃಖದುರಿತವಿದೂರಫಾಲಲೋಚನ ಚಂದ್ರಗರ್ವಾಪಹಾರಬಾಲವಟುರೂಪ ಹಸೇಗೇಳು4 ಸಂತತ ಬಹುವಿಧಲೀಲಾಸಂತತ ಮುದಿತಾದ್ರಿಬಾಲಾಅಂತರಹಿತ ಶುಭಗುಣಗಣಸಾಂದ್ರದಂತದೀಧಿತಿನಿರ್ಜಿತಶರಶ್ಚಂದ್ರಕಾಂತವಿಗ್ರಹವಿಪದದ್ರಿಮಹೇಂದ್ರಚಿಂತಿತಾರ್ಥಪ್ರದನೇ ಹಸೆಗೇಳು 5
--------------
ಕೆಳದಿ ವೆಂಕಣ್ಣ ಕವಿ
ಮಂಡೆ ತುರಿಸುವಭಂಡನಂತೆ ಉದ್ದಂಡನಾಗದಿರು ಪ. ಬಂಟ ಬಾಳನೆ ಕ-ಳಾಸವ ಕೊಂಡು ಸೂಳೆಉಣಳೆ ಈಸತಿ ಸಂತರ್ಗಾಗಿ ಕುಣಿಯದೆಕೇಶವ ಹೃಷಿಕೇಶ ಎನ್ನುಭಾಸುರ ಹರಿಮೂರ್ತಿಯ ನೆನೆಸಾಸಯೆಂದೆನಿಸಿಕೊಳ್ಳದೆಏಸುಬಂದರೈಸರೊಳಿರು 1 ಆಶೆಯೆಂಬ ಪಾಶವ ಬಿಡು ಈಸಂಸಾರವಾರಾಶಿಯನೆನೀಸಲಾರದೆ ಕಾಸಿಗಾಗಿವೇಷವ ತೋರಿ ಘಾಸಿಯಾಗದೆದಾಸರೊಳಾಡುವ ಸರ್ವೇಶ ನಿ-ರಾಶೆನಲ್ಲದೆ ಲೇಸ ಕೊಡನುರೋಷಬೇಡ ಸಂತೋಷದಲಿರುಆಸರು ಬೇಸರಿಗಂಜಬೇಡ 2 ಕ್ಲೇಶ ಉಂಬೆಭಾಸಕೆ ನೀನೊಳಗಾಗದೆಶೇಷಶಾಯಿ ಹಯವದನನ ನೆನೆ3
--------------
ವಾದಿರಾಜ
ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮಣಿ ಗರಿಗಾಮಿನಿ ಸುಖವಾಣಿ ಪ ಮರುಗು ನಾಗ ಸುರಗೆ ಜಾಜಿ ಸರಸ ಸೂಮಾಲೆ ಧರಿಸಿ ವರಶೃಂಗಾರಳಾಗುತಲಿ 1 ಅಗರು ಗಂಧ ಚಂದನವನು ಗಜ ಜೌವ್ವನವನು ಮಿಗೆ ಶ್ರೀ ಲೇಪಳಾಗುತಲಿ 2 ಶಾಮಸುಂದರನಂಘ್ರಿ ಕಮಲ ಭಾಮಿನಿನೀನು ಮನದಿ ಸ್ಮರಿಸೆ ಕೋಮಲಾಂಗಿ ಶಶಿವದನೆ 3
--------------
ಶಾಮಸುಂದರ ವಿಠಲ
ಮಣಿಹಾರಮಂ ತೊರೆದು ದನುಜೇಶನಾಕರುಳ - ನಣಿಯ ರದಿ ಧರಿಸಿರ್ಪನÀನಘನಿವಗೆ ವರರತ್ನಹಾರಮಂ ಹರಿಸದಿಂದಳವಡಿಪೆ ನರಹರಿಯ ಕಂಧರಂ ಮೆರೆಯಲರರೆ ಜಪಸರವನಾಂತೆಸೆವ ಸುಪವಿತ್ರಗಿಂದಿಡುವೆ ವಿಪುಲ ಮುಕ್ತಾಸರವನುಪಮೆಮೀರೆ ಕಮನೀಯಗಾತ್ರಂಗೆ ರಮಣೀಯ ಶ್ಯಾಮಲಗೆ ಕಮಲಮಾಲೆಯನಲಂಕರಿಪೆನಿಂದು ಧುರಧೀರನಂ ವೀರ ಶೌರ್ಯನಿಧಿಯ ಸುರಾಳಿ ಸಮ್ಮೋದಕರನ ಶರಣಾಗತರಕ್ಷನ ನಮಿತಬಲನ ವರಶೇಷಗಿರೀಶನಂ ನಮಿಪೆನಿನ್ನು
--------------
ನಂಜನಗೂಡು ತಿರುಮಲಾಂಬಾ
ಮಣ್ಣಿನ ಮಹಿಮೆ ಮನುಜ ನೀನರಿಯೆಷಣ್ಮಹಿಷಿಯುತ ಸರ್ವೋತ್ತಮನ ಲೀಲೆ ಪ ಮಣ್ಣಲಿ ದೊರಕಿದಳು ಮಾತಾಯಿ ಸೀತಾಮಣ್ಣಳೆದ ವಾಮನ ಮಹಬಲಿಯ ಬೇಡಿಮಣ್ಣು ಪಾವನವಾಯ್ತು ರಾಮಪದ ಸ್ಪರ್ಶದಿಮಣ್ಣುಂಡ ಬಾಯಲಿ ಬ್ರಹ್ಮಾಂಡ ತೋರಿದ ಕೃಷ್ಣ 1 ಮಣ್ಣಿಗೇ ನಡೆಯಿತು ಮಹಾಭಾರತ ಯುದ್ಧಮಣ್ಣಿಗೇ ಮಡಿದರ ಸಂಖ್ಯೆಗೆಣೆಯಿಲ್ಲಮಣ್ಣಲಿ ಬಿತ್ತೆ ಬೀಜ ಮಹಾವೃಕ್ಷವಾಗುವುದುಅಣ್ಣ ನಮ್ಮಾದಿಕೇಶವನು ಅನುಗ್ರಹದಿಂ 2
--------------
ಕನಕದಾಸ
ಮತವೆ ಒಳ್ಳೆಯದು ಭಾಗವತವು - ನಮ್ಮಯತಿ ರಾಮಾನುಜಯೆಂಬ ಬೇರೆ ಮನಸಿನ ಮತವೆ ಒಳ್ಳೆಯದು ಪ ಹರಿದಾಸ ಸರ್ವೇಶತೆಗೆ ನಿಮ್ಮ ವೇಷತೊರೆಯಿರಿ ನಿಮ್ಮ ದೋಷವರ ತೀರ್ಥ ಪ್ರಸಾದವೇಪರಗತಿ ಎಂಬ ದಾಸ1 ಕಣಿಯೇ ಶಿಕ್ಷಾ ರ-ಮಣಿಯೇ ಮೋಕ್ಷದರಗಿಣಿಯೇ ನಿಮ್ಮ ಶ್ರೀಮಣಿ ತಿರುಮಂತ್ರವೇ ಗತಿ ಎಂಬ ದಾಸ2 ಹರಿದಾರಿ ತಿರುಕಾವಳೂರಿನಪರಮ ಪದವಿಯೆಂಬ ಪಟ್ಟಣಸೇರಿ ನಮ್ಮ ನೆಲೆಯಾದಿಕೇಶವಸಿರಿ ರಂಗ ಪರರುಪಕಾರಿ 3
--------------
ಕನಕದಾಸ
ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮತ್ತೆದೊರಕುವುದೇ ಮುಕುತಿ ಪ ಅರಿಯದವನೇ ಕುಮತಿ ಅ.ಪ ಸಾಸಿರನಾಮನು ಸಾಸಿರ ನೇತ್ರನು ಸಾಸಿರ ಗಾತ್ರನು ಸುಂದರನು ದಾಸರ ಪೊರೆಯಲು ನಿಂದವನು 1 ಆದರೂ ಕಾಣದ ಮಹಿಮನವ ಆದರಿಸಿ ಅಪಾರವ ತೋರುವ ಮಹದೇವ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂತ್ರಾಲಯನಿವಾಸ ಉತ್ತಮ ಹಂಸ | ಸಂತಾಪ ಪರಿಹರಿಸ ಕೊಡು ಎನಗೆ ಲೇಸÀ ಪ ಯತಿಗಳ ಶಿರೋರನ್ನ ಯೋಗಸಂಪನ್ನ | ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ || ನುತಿಸುವೆ ಭಕ್ತಿಯಲಿ ಬಿಡದೆ | ಮುಕುತಿಯಲಿ ಸತತಾನಂದದಲಿಪ್ಪ 1 ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ | ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ || ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತÀರುವೆ 2 ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ | ಶಮೆದಮೆಯಲ್ಲಿ ಉಳ್ಳ ಮಹಿಮೆಯಾ || ನಮಗೆ ಪೇಳುವೆ ವೇದಬಲ್ಲ ವಿನೋದ | ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ 3 ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ | ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ || ಪೋಷಿಸುವೆ ಅವರ ಅಟ್ಟುವ ಮಹದುರ | ದೋಷವ ಕಳೆವಂಥ ವಿಮಲ ಶಾಂತ4 ವರಹಜ ತೀರದಲ್ಲಿದ್ದ ಸುಪ್ರಸಿದ್ದ | ಮರುತ ಮತಾಂಬುಧಿ ಸೋಮ ನಿಸ್ಸೀಮ || ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ | ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ 5
--------------
ವಿಜಯದಾಸ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ