ಒಟ್ಟು 646 ಕಡೆಗಳಲ್ಲಿ , 76 ದಾಸರು , 563 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಗುರು ರಾಘವೇಂದ್ರ ಸದ್ಗುಣಸಾಂದ್ರ ಪ ಬಾರೋ ಸದ್ಗುರುವರ ಸಾರಿದ ಸುಜನರ ಘೋರ ದುರಿತವ ತರಿದು ಕರುಣದಿ ಸಾರ ಸೌಖ್ಯವಗರಿದು ಪೊರಿಯಲು ಅ.ಪ ಸೂರಿಜನಾಲಂಕೃತ ಸುರಪುರದಿ ವಿಠ್ಠ ಲಾರ್ಯರಿಂದಲಿ ಪೂಜಿತ ಯದುಗಿರಿಯ ಕ್ಷೇತ್ರಾಗಾರನೆಂದೆನಿಸಿ ನಿರುತ ಭಜಕರನು ಪೊರೆಯುತ ಸೇವೆಯನುಕೊಳ್ಳುತ ತುರಗವನೇರಿ ಮೆರೆಯುತ1 ಭಕ್ತ್ಯಾದಿ ಫಲವೀವಂಥ ಗುರುವರನೆ ನಿಮ್ಮಯ ಸ್ತೋತ್ರ ಪಠಣವ ಮಾಡುತ್ತ ಅನವರತ ಭಜ- ನಾಸಕ್ತ ಜನರ ಕಾಮಿತ ನಾ ಕೊಡುವೆನೆನುತ ಮತ್ತೆ ಎಡಬಲದಲ್ಲಿ ದ್ವಿಜಕೃತ ಛತ್ರಚಾಮರ ವ್ಯಜನ ಸೇವಾ ನೃತ್ಯಗಾಯನ ವೈಭವದಿ ವರ ಹಸ್ತಿವಾಹನ ವೇರಿ ಮೆರೆಯುತ 2 ಇಳಿಸುರರೊಳು ಪ್ರಖ್ಯಾತ ಲಿಂಗೇರಿ ಭೀಮಾ ಹೊಳಿಯ ಸ್ಥಾನಕೆ ಬಂದಂಥ ಯದುಗಿರಿಯ ದ್ವಿಜವರ ಗೊಲಿದರ್ಚನಿಯ ಗೊಂಬಂಥ ಶರ್ವಾದಿವಿನುತ ಚಲುವ ಪ್ರಾಣನಾಥನ ಜಲಜಯುಗ ಸನ್ನಿಧಿ ಯೊಳನುದಿನ ಪೊಳೆವ ವೃಂದಾವನದಿ ಭಕುತರಿ ಗೊಲಿದು ಪೊರೆಯಲು ಕುಳಿತ ಯತಿವರ 3 ನಂದತೀರ್ಥರ ಸುಮತ ಸಿಂಧುವಿಗೆ ಪೂರ್ಣ ಚಂದ್ರರೆಂದೆನಿಸಿ ದಂಥಾ ಕರ್ಮಂದಿವರ್ಯನೆ ದುರಿತ ಘನಮಾರುತ ವಂದೆ ಮನದಲಿ ಬಂದು ನಿಮ್ಮಡಿ ದ್ವಂದ್ವವನು ಶೇವಿಸುವ ಶರಣರ ವೃಂದವನು ಪಾಲಿಸಲು ಸುಂದರಸ್ಯಂದನ- ವೇರುತಲಿ ವಿಭವದಿ 4 ನೀರಜಾಸನ ವರಬಲದಿ ಸಮರಾರೆನುತ ಬಂ- ಗಾರ ಕಶ್ಯಪ ಪೂರ್ವದಿ ಪ್ರಹ್ಲಾದ ರಾಜಕು ಮಾರ ನಿನ್ನೊಳು ವೈರದಿ ಹರಿಯನ್ನು ಜವದಿ ಚಾರು ಕೃಷ್ಣಾ ತೀರಕಾರ್ಪರ ನಾರಸಿಂಹನ ಸ್ತಂಭದಿಂದಲಿ ತೋರಿಸಿದ ಗುರು ಸಾರ್ವಭೌಮನೆ 5
--------------
ಕಾರ್ಪರ ನರಹರಿದಾಸರು
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಬೃಂದಾವನದಿ ನೋಡುವ ಬಾರೆ ಗೋ-ಪ ವಿಂದನಾಡುವ ಸಂದಣಿ ಸಾಲದೆ ಸಖಿ ಅ.ಪ. ಮುನಿಗಳು ತರು ಪಕ್ಷಿ ಮೃಗಂಗಳಾಗಿರೆಸನಕಾದಿಗಳು ಗೋವುಗಳಾಗಿರೆಅನಿಮಿಷರೆಲ್ಲರು ಗೋಪಾಲರಾಗಿರೆದನುಜಾಂತಕನು ಮನುಜನಂತಾಗಿರೆ 1 ತಳಿತ ತೋರಣದಿಂ ತಂಪಿನ ನೆಳಲಿಂಮಳೆಯಾಗಿ ಸುರಿವಾ ಮಕರಂದ ಜಲದಿಂಫಲ ಪುಂಜಗಳಿಂ ಶುಕಚಾಟುಗಳಿಂನಳಿನನಾಭನನುಪಚರಿಪ ವೃಕ್ಷಗಳುಳ್ಳ 2 ತಳಿತ ತರುಗಳೆಲ್ಲ ತಂತಮ್ಮ ಜಾತಿಯಉಲುಹನುಳಿದು ಕಣ್ಣುಮುಚ್ಚಿ ತೆರೆಯುತ್ತನಳಿನನಾಭನ ವೇಣುಗೀತೆಯ ರಸದಲ್ಲಿಮುಳುಗಿ ಮುನಿಗಳಂತಿಪ್ಪ ಪÀಕ್ಷಿಗಳುಳ್ಳ 3 ಚಿತ್ತಜನೈಯನ ವೇಣುನಾದವಎತ್ತಿದ ಕಿವಿಯಿಂದ ಸವಿಯುತಲಿಮತ್ತಾದ ಸುಖಜಲ ಕಡಲಾಗಿ ಹರಿಯಲುಚಿತ್ತರದಂತಿಪ್ಪ ತುರುವಿಂಡುಗಳುಳ್ಳ 4 ನಖ ತಿಂಗಳ ಬೆಳಕಿಗೆತುಂಗ ಚಂದ್ರಕಾಂತ ಶಿಲೆ ಒಸರಿಹಿಂಗದೆ ಹರಿದು ಕಾಳಿಂದಿಯ ಕೂಡಲುಗಂಗೆ ಯಮುನೆಯರ ಸಂಗಮದಂತಿಪ್ಪ 5 ಚಕೋರ ಚಕ್ರವಾಕಇರುಳು ಹಗಲು ಎಂದು ಹೋಗುತಲಿರುತಿಪ್ಪ6 ಹರಿಯ ಕೊಳಲ ಸ್ವರದತಿ ಮೋಹನಕೆತರುಮೊಗ್ಗೆಗಳಿಂ ಪುಳುಕಿತವಾಗೆಗಿರಿಯು ಝರಿಯಾ ನೆವದಿಂ ಕರಗಲುತೊರೆಯು ಸುಳಿಯ ನೆವದಿಂದ ತಾ ನಿಲ್ಲುವ7 ಕುಂಡಲ ತಾಳಮೇಳದ ರಭಸಕ್ಕೆನಲಿನಲಿದಾಡುವ ನವಿಲ ಹಿಂಡುಗಳುಳ್ಳ 8 ನಳನಳಿಸುವ ವನಮಾಲೆ ಇಂದ್ರಚಾಪಪೊಳೆವ ಪೊಂಬಟ್ಟೆ ಮಿಂಚು ವೇಣುಗಾನಎಳೆಯ ಗರ್ಜನೆ ಶ್ಯಾಮಮೇಘ ಕೃಷ್ಣಮಳೆಯ ಮೇಘವೆಂದು ಚಾತಕ ನಲಿಯುತ9
--------------
ವ್ಯಾಸರಾಯರು
ಬೆಳೆಬೆಳೆದು ಮನದಾಸೆಗಳ ಕಳೆದೆನಯ್ಯ ಸುಳಿದಿರ್ಪುದೊಂದಾಸೆ ಅದ ಪೇಳ್ವೆನಯ್ಯ ಪ ತೊಳತೊಳಲಿ ಬಳಬಳಲಿ ಬೆಂಡಾದೆನಯ್ಯ ಕೊಳಕೊಳದಿ ಮುಳುಮುಳುಗಿ ತಳಮಳಿಪೆನು ಅ.ಪ ಅದು ನಿನ್ನ ಬಳಿಸಾರ್ದು ನಿಲ್ವಪರಿಯಾಸೆ ಅದು ನಿನ್ನ ಪಾದಗಳ ನೋಡಿ ನಲಿವಾಸೆ ಅದು ನಿನ್ನ ನಾಮಗಳ ಪಾಡಿನುಡಿವಾಸೆ ಅದು ನಿನ್ನ ನಸುನಗೆಯ ಬೇಡಿಕೊಂಬಾಸೆ 1 ಅದು ನಿನ್ನ ಅಡಿಗಳಿಗೆ ಮುಡಿಯಿಡು[ವಾಸೆ] ಅದು ನಿನ್ನ ಕೊರಳಿಗೆ ಮಾಲೆಯಿಡು[ವಾಸೆ] ಅದು ನಿನ್ನ ಬೆಡಗುಗಳ ನುಡಿನುಡಿಯೊಳೆಸೆವಾಸೆ ಅದು ಮಾಂಗಿರಿಯ ರಂಗ ನಿನ್ನ ಕೃಪೆಯಾಸೆ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಗ ಬಾರೊ ಕರುಣಾವಾರಿಧೆ ಕೃಪೆ ದೋರೊ ನಿನ್ನನು ಸೇರಿದೆ ಪ. ಜನಕನ ವಲಿಸಿದ ಜಾನಕಿ ವರದ ಕನಕ ವಿಭೂಷಣ ಕಲ್ಮಷಹರ ಬೇಗ 1 ಭಂಜನ ದೈವತರಂಜನ ನಿರಂಜನ 2 ಅರಿಗಣ ಕರ್ಷಣ ಅದ್ಭುತ ದರ್ಶನ ಪರಮ ಪುರುಷ ಶೇಷಗಿರಿಯ ಭೀಮರ್ಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಗನೆ ಕರೆತಾರೇ ಸಖಿಯೇ [ಬೆಗನೆಕರೆತಾರೆ] ಪ ನಾಗಶಯನನವ ಕೂಗದೆ ಬಾರನೆ ಅ.ಪ ಪೂತನಿ ಶಿಶುಗಳ ಫಾತಿಸುತಿಹಳೆಂಬ ಮಾತನವಗೆ ಪೇಳೆ ಭೀತಿಯತೋರಿ ಆತುರದಿಂದವ ಐತರುವನೆ ಸಖಿ ಪ್ರೀತಿಯೊಳೀವೆನೀ ರತುನದ ಹಾರವ 1 ಕರಿ ಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಮೊರೆಯಿಡುವುದ ಹೇಳೆ ಭರದಲಿ ಬರುವ ಉರಗನ ಗರಳದಿ ಕರುತುರು ನೋಯುವ ಪರಿಯ ಬಿತ್ತರಿಸಿ | ಮುರಳೀಧರಗೆ 2 ಸಂಗಡ ಬರದಿರೆ ಭಂಗಿಸುವರು ಗೋ ಪಾಂಗನೆಯರು ಎಂದು ರಂಗಗೆ ಹೇಳೇ ಇಂಗಿತಜ್ಞನು ನಮ್ಮ ಮಾಂಗಿರಿಯರಸನು ಸಂಗಡ ಬರುವನು ಸಂದೇಹವಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡ ಬೇಡ ಹೋಗೆಂದು ಕಾಡದಿರು ಕೃಪೆಯೊಂದ ಬೇಡದಿರಲಾರೆ ಮಾಂಗಿರಿಯರಂಗ ಪ ಬೇಡುವನ ಕೈ ಕೀಳು ನೀಡುವನ ಕೈ ಮೇಲು ಬೇಡಿದಲ್ಲದೆ ಕೃಪೆಯ ಮಾಡನೈರಂಗಾ ಅ.ಪ ಗಾನಕೆ ನಲಿಯುವೆಯೋ ಧ್ಯಾನಕೆ ಒಲಿಯುವೆಯೋ ಜ್ಞಾನಕೆ ಸಿಗುವೆಯೋ ನಾನರಿಯೆನು ಗಾನದರಿವೆನಗಿಲ್ಲ ಧ್ಯಾನಮಾಡುವನಲ್ಲ ಜ್ಞಾನಾನುಭವವಿಲ್ಲ ಆಧಾರವಿಲ್ಲ 1 ನೀನೆನ್ನ ಕಡೆಗಣಿಸಿ ಹೀನ ಹೋಗೆಂದೆನಲು ನಾನಳುವೆನನವರತ ಶ್ವಾನದಂತೆ ಸೂನು ಬಾ ಬಾರೆಂದು ಸಾನುರಾಗದಿ ರಮಾದೇವಿ ಸಂತೈಪಳು 2 ಎನ್ನಮ್ಮ ಕೃಪೆಯಿಂದ ನಿನ್ನ ಕಾಲ್ವಿಡಿಯೆಂದು ಎನ್ನ ಕಳುಹುತ ನಿನಗೆ ಎನ್ನ ತೋರ್ದು ಎನ್ನನತಿಕೃಪೆಯಿಂದ ಮನ್ನಿಸೆನ್ನುವಳಾಗ ನಿನ್ನ ಕೃಪೆ ಯೆನಗುಂಟು ಮಾಂಗಿರೀಶಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿಕೆಗೆ ಮಿತಿಯಿಲ್ಲ ಬೇಡಿಕೆಗೆ ಕೊನೆಯಿಲ್ಲ ಬೇಡಿ ಬದುಕುವುದೊಂದು ರೋಗವಯ್ಯ ಪ ರೂಢಿಗೊಡೆಯನ ದಿವ್ಯನಾಮಗಳ ಕೊಂಡಾಡಿ ಹಾಡುವವಗೆ ರೋಗಭಯವಿಲ್ಲವಯ್ಯಾ ಅ.ಪ ಬೇಡುವವ ಮನೆಮನೆಗೆ ಓಡೋಡಿ ನಿಲಬೇಕು ನಾಡಿಗರ ನೋಡಿ ಕೈ ನೀಡಬೇಕು ನೋಡಿದರೆ ಕಟ್ಟಾಳು ಬೇಡುವೆ ಹೋಗತ್ತ ದುಡಿ ಗೇಡಿ ಎಂದಾಗ ಗೋಳಾಡಲೇಕಯ್ಯ 1 ಕಂಡ ಕಂಡವರಿಗೆಲ್ಲ ಕೈಮುಗಿದು ಮಂಡೆಯ ಬಾಗಿ ಭಂಡನೆಂದೆನಿಸುವುದು ಮಾನಭಂಗ ಪುಂಡರೀಕಾಕ್ಷ ಗೋವಿಂದ ನಾಮವ ಹಾಡಿ ಕೊಂಡಾಡಲೊದಗುವನು ಮಾಂಗಿರಿಯರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡುವೆ ಇದನಾ ಜೀಯ್ಯಾ ವೆಂಕಟಾರಾಯ ಮಾಡು ಕರುಣವ ಫಲದಾಯ ಪ ಯತಿರತುನತಿ ದಶಮತಿ ಮತದಲಿ ಸ ನ್ನತಿ ಹಿತ ಭಕುತಿಲಿ ಪ್ರತಿದಿನ ಸ ಪಥ ಚತುರತೆ ತತುವೇಷ ತತಿಸಮ್ಮತ ಹಿತವಾಗಿಪ್ಪ ಸುಖಮತಿಯನೀಯೋ 1 ಬಲಬಲ ಬಲರಿಪು ವೊಲಿದೊಲಿದು ಗಿರಿಯಲಿ ಬಲುವೊಲಿಮೆಲಿ ವೊಲಿಸಬಾರದೇ ಕಳವಳಿಸಲು ಬಲಗುಂದಿ ನಲವು ನಿ ಶ್ಚಲವಾಗಿ ಬಲವಾಗಿ ಗಿರಿಯೆಳದೆಲೊ ಸಲಹಿದಿ 2 ತ್ರಿಜಗವೀರ ಧ್ವಜ ಸುಜನರ ನಿಜಪದ ರಜರಜವಾದರು ಭಜಿಸುವ ಸರ್ವದ ವ್ರಜಗಳ ಸಂಗ ದ್ವಿಜನರವಿ ಈ ಮತದಿ ಸಿರಿ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಬೇಡುವೆನೋ ಗೋವಿಂದಾ ಬೇಡಬೇಡವೀ ಬಂಧ ಪ ಪಾಡಿಪಾಡಲಾನಂದಾ ನೋಡಿ ನೋಡಲತ್ಯಾನಂದ ಅ.ಪ ಕಡವರವೀಯಬೇಡ ಪೊಡವಿಯ ಸುಖಬೇಡ ಕಡುಲೋಭ ಮೋಹಬೇಡ ದೃಢ ಭಕ್ತಿಯನು ಮಾತ್ರ 1 ನರಕದ ಬಾಧೆಯು ಪರಿಹರಿಸಲು ಬೇಡ ನಿರುತ ನಿಮ್ಮಯ ನಾಮ ಸ್ಮರಣೆ ಸುಖವು ಮಾತ್ರ 2 ಜನನ ಮರಣಗಳ ಕೊನೆಗಾಣಿಸಲಿ ಬೇಡ ಅನಿತು ಜನುಮದಿ ನಿನ್ನ ನೆನೆವ ಬುದ್ಧಿಯು ಮಾತ್ರ 3 ಮಾಂಗಿರಿಯರಸನೆ ತುಂಗ ಕೃಪಾಂಗನೆ ಹಿಂಗದೆ ನೀನೆನ್ನಂತರಂಗದೊಳಿರುವುದ ಮಾತ್ರ4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೈಯದವನಿಗಿಂತಲೂ ಬೈಯುವವನೇ ಮೇಲು ಹೊಯ್ಯದವಗಿಂತಲೂ ಹೊಯ್ಯುವವನೆ ಮೇಲು ಪ ಬಾಯೆನಲು ಬರಲೊಲ್ಲೆ ಮಾಯಾಕಾರ ನಿನ್ನಅ.ಪ ಒಬ್ಬ ಧರಣಿಯನೊಯ್ದ ಒಬ್ಬ ಖಡ್ಗವ ಹಿಡಿದ ಒಬ್ಬ ಧರಣಿಯನೆ ಕದ್ದ ಒಬ್ಬ ಬೈದಾ ಉಬ್ಬಿ ನೀ ಸಂತಸದಿ ಅಬ್ಬರಿಸಿ ಪರಿದೈದೆ ಒಬ್ಬೊಬ್ಬರಿಗೂ ದಿವ್ಯ ದರ್ಶನವನು 1 ಜಾರನೆಂದರು ಕೆಲರು ಚೋರನೆಂದರು ಕೆಲರು ಪೋರನಿವನೆಂದರು ನಾರಿಯರು ಪಲರು ಆರೇನ ಬೈದರೂ ದೂರಿ ನಿಂದಿಸಿದರೂ ಸ್ಮರಿಸಿದಾ ನಿಮಿಷಾರ್ಧ ಹರಿ ನಿನ್ನ ಭಕ್ತರ 2 ಇರಬಹುದು ಹಸಿವು ಬಾಯಾರಿಕೆಗಳಿಂದ ಅರಿವು ನಿದ್ರಾ ನೀರಡಿಕೆಗಳ ತೊರೆದು ಅರಸುವಾ ಸಮಯದಲಿ ಬರುವೆ ನೀನದರಿಂದ 3 ಇಳೆಯನೇ ತೆತ್ತವನ ತುಳಿದು ಕೈಸೆರೆ [ಮಾಡ್ದೆ] ಹಳಿದು ನಿಂದಿಸಿದವನ ಬಳಿಗೆ ಹೋದೆ ಮುಳಿಸಿನಿಂದೊದ್ದವನ ಕಾಲುಗಳ ನೀತೊಳೆದೆ ಹಳಿವು ಬೈಗಳು ನಿನಗೆ ಹಿತವು ಮಾಂಗಿರಿಯ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಭಕ್ತಿ ಭಾವಗಳು ಸ್ವಲ್ಪಮಾತ್ರವಿಲ್ಲವಾಯಿತು ಪ ಗುರುಗಳಿವರು ಹಿರಿಯರಿವರು ಶರಣರೆಂದು ತಾರತಮ್ಯದಿ ರವನರಿತು ಅರಿಯದಂತೆ ಸಿರಿಯ ಮದದಲಿ ಶುನಕ ನಂಕೆನೋಡಿ ಮರಳುತಿಹರು ಏನನೆಂಬೆ ನೆಲವ ನೋಡದೆ 1 ನಿಟ್ಟಿಸದೆ ಸಾದುಗಳನು ಪ್ರಾಯ ಮದದ ಹಮ್ಮಿನಿಂದ ಭ್ರಷ್ಟ ಜನರು ಪುಣ್ಯ ಪಾಪಗಳನು ತಿಳಿಯದೆ ಅಷ್ಟದಿಕ್ಕು ತಮ್ಮದೆಂದು ಸರ್ವಗಿರಿಯನೇರಿ ತಾವೆ ಶ್ರೇಷ್ಠರೆಂದು ತಮ್ಮ ತಾವೆ ಕೊಂದು ಕೊಂಬರೋ 2 ನೂತನದಾಭರಣ ವಸ್ತ್ರ ಜಾತಿಯನ್ನು ಉಟ್ಟು ಕೊಟ್ಟು ಪ್ರೀತಿಯಿಂದ ತಮ್ಮ ತಾವೆ ನೋಡಿ ಹಿಗ್ಗುತಾ ಧಾತು ತಪ್ಪಿ ನಡೆವ ಜನರ ವಾತಸುತನ ಕೋಣೆಲಕ್ಷ್ಮೀ ನಾಥ ಬಲ್ಲ ನಮಗೆ ಅವರ ಮಾತಿನ್ನೇತಕೋ 3
--------------
ಕವಿ ಪರಮದೇವದಾಸರು
ಭಯ ನಿವಾರಿಸೋ ಜಯ ಶ್ರೀ ಹರಿಯೆ ಭಯ ನಿವಾರಿಸಯ್ಯ ದಯದಿ ಭಯ ನಿವಾರನೆನ್ನ ಪ ಮರವೆಯೆಂಬುವ ಇರುಳಿನಲ್ಲಿ ದುರಿತಯೆಂಬುವ ಗಿರಿಯಲ್ಲಿ ಪರನಿಂದೆಂಬುವ ಶರಧಿಯಲ್ಲಿ ಕರುಣವಿಲ್ಲದ ಕಾಯದುರ್ಗದರಣ್ಯಕಂಜಿ ಕೊರುಗುತಿರುವೆ ಹರಿಯೆ ನಿಮ್ಮ ಸ್ಮರಣವೆಂಬ ನಿರುತ ಧೈರ್ಯ ಕರುಣಿಸಭವ 1 ವ್ಯಸನವೆಂಬ ಮುಸುಕಿನಿಂದ ಪಿಸುಣತೆಂಬುವ ದಸಕಿನಿಂದ ಪುಸಿಯುಯೆಂಬುವ ಮಿಸುನಿಯಿಂದ ವಿಷಯದಾಸೆ ತಸ್ಕರಗಂಜಿ ದೆಸೆಗೆ ಬಾಯ ಬಿಡುವೆನಯ್ಯ ಅಸಮಮಹಿಮನ್ವ ಚಶ್ರವಣೆಂಬೆಸೆವ ಧೈರ್ಯ ಕರುಣಿಸಭವ 2 ಆರು ಹುಲಿಗಳ ಘೋರಿಸುವ ಮೂರು ಮರಿಗಳ ಹಾರುತಿರುವ ಮೂರೇಳು ನಾಯ್ಗಳ ಘೋರತಾಪ ಸೈರಿಸದೆ ಸಾರಸಾಕ್ಷ ಮರೆಯ ಹೊಕ್ಕೆ ಶ್ರೀರಾಮ ನಿಮ್ಮ ಚರಣ ಭಕ್ತೆಂ ಬ್ವೀರತನವ ಕರುಣಿಸಭವ 3
--------------
ರಾಮದಾಸರು
ಭವ ಶಿತಿಕಂಠ ನಿನ್ನಪದ ತಾಮರಸಯುಗ್ಮಗಳಿಗಾನಮಿಸುವೆ ಪ ಕಾಮಹರ ಕೈಲಾಸ ಹೇಮಗಿರಿಯಾವಾಸ ರಾಮನಾಮನ ಭಜಿಪ ಉಮೆಯರಸ ಶಂಭೋ ಅ ಮೃತ್ಯುಂಜಯ ಮೃಗಾಂಕ ಕೃತ್ತಿವಾಸ ಕೃಪಾಳೊ ವಿತ್ತÀ್ತಪತಿ ಸಖ ವಿನಾಯಕರ ಜನಕ ಭೃತ್ಯವರ್ಗಕೆ ಬಾಹಪಮೃತ್ಯು ಕಳೆದು ಸಂ ಪತ್ತು ಪಾಲಿಸುವುದು ನಿವೃತ್ತಿ ಸಂಗಮಪ 1 ಗೋಪತಿ ಧ್ವಜ ಘೋರ ಪಾಪ ಸಂಹರಣ ಹರಿ ತೋಪಲೋಪಮ ಕಂಠ ಚಾಪಪಾಣೀ ಶ್ರೀ ಪತಿಯ ಶ್ರೀನಾಭಿ ಕೂಪಸಂಭವತನಯ ನೀ ಪಾಲಿಸೆಮ್ಮನು ವಿರೂಪಾಕ್ಷ ಗುರುವೆ 2 ಭಸಿತ ಭೂಷಿತಡಮರು ತಿಸುಳಗೈಯನೆ ಶಂಭೋ ಕಿಸಲಯೋಪಮ ನವಿರ ಶಶಿಭೂಷಣ ಅಸುರಾರಿ ಶ್ರೀ ಜಗನ್ನಾಥ ವಿಠಲನ ಪದ ಬಿಸಜ ಧ್ಯಾನವನೀಯೊ ಹಸನಾಗಿ ಕಾಯೊ 3
--------------
ಜಗನ್ನಾಥದಾಸರು