ಒಟ್ಟು 6439 ಕಡೆಗಳಲ್ಲಿ , 132 ದಾಸರು , 3726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ನ್ಯಾಯವೋ ಭಾವಜರಿಪುವಿನುತ ನಿಂದು ದಾವ ನ್ಯಾಯವೊ ಪ ಆವ ನ್ಯಾಯವೋ ದೇವ ದೇವ ಮಾವಕಂಸಜೀವಘಾತಕ ಅ.ಪ ಕಪ್ಪು ವರ್ಣನು ಭಕ್ತಜನರ ಲ್ಲಿರ್ಪೆ ಸದಾ ನೀನು ನಿ ನ್ನ ಪಾದದಿ ತಪ್ಪು ಎಲ್ಲನು ಒಪ್ಪಿಬಂದಿಹ್ಯ ಭಕ್ತಜನರ ತಪ್ಪು ಒಪ್ಪಿ ಕ್ಷಮಿಸಿ ದಯದಿ ದುರಿತ ನಿವೃತ್ತಿಗೈದು ಅಪ್ಪಿಕೊಂಡು ಸಲಹದಿರುವಿ 1 ತಂದೆ ತಾಯಿ ನೀನು ಎಂದು ನಂಬಿ ಬಂದು ಬಿದ್ದೆನು ನಿನ್ನ ಪಾದಕೆ ಮಂದಭಾಗ್ಯನು ನೊಂದು ಬೆಂದು ಸಂಸಾರವೆಂಬ ಸಿಂಧುವಿನೊಳು ತಾಪಬಡುತ ಬಂದು ಮೊರೆಯಬಿದ್ದ ಕಂದನ ಮಂದರಮಂದಿರ ಸಲಹದಿರುವಿ 2 ನಿನ್ನನರಿಯದ ಅಜಮಿಳನು ಬಿನುಗನೆನಿಸಿದ ಪಾಪಗೈದವ ಗಣನೆಯಿಲ್ಲದ ಕನಿಕರದಿಂದ ವನಿಗೊಲಿದು ಘನಪದವನಿತ್ತು ಪೊರೆದೆ ಚಿನುಮಯಾತ್ಮ ಸಿರಿಯರಾಮ 3
--------------
ರಾಮದಾಸರು
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಆವ ಭಯವಿಲ್ಲ ಪರಾವರೇಶನ ಸಕಲ ಪ ಭಾವಜ್ಞ ಜನರಿಗಿನ್ನು ಅ.ಪ. ದೇಶಕಾಲೋಚಿತ ಧರ್ಮ ಗಿರ್ಮಗಳು ಸ ನ್ಯಾಸ ಮೊದಲಾದಾಶ್ರಮೋಚಿತ ಸುಕರ್ಮಗಳು ಮಾಸೋಪವಾಸ ವ್ರತ ನೇಮ ಗೀಮಗಳು ಸದ್ ಪ್ರದೋಷನ ಧ್ಯಾಯಗೀಯ ಶ್ವಾಸ ಬಂಧನ ಉಪನ್ಯಾಸ ತೀರ್ಥಾಟನೆ ರ ಮೇಶನ ಗುಣಗಳಟ್ಟಹಾಸದಲಿ ನೆನೆವುತ ನಿ ರಾಶೆಯಿಂದಿಪ್ಪ ಹರಿದಾಸ ದಾಸರಿಗೆ 1 ಸ್ನಾನ ಜಪ ದೇವತಾರ್ಚನೆ ವೈಶ್ಯದೇವ ಬಲಿ ವಿಧಿ ನಿಷೇಧಗಳು ವಿ ಸಂಹನನ ವೈರಾಗ್ಯ ಶಕ್ತಿ ಶ್ರೀನಿವಾಸನ ಪರಮ ವಿಮಲ ಲೋಕೈಕ ಕ ಲ್ಯಾಣ ಗುಣ ರೂಪ ಕ್ರಿಯೆಗಳನು ಜಡ ಚೇತನದಿ ಧೇನಿಸುತ ಮನದಿ ಹಿಗ್ಗುತ ತುತಿಸಿ ನಲಿವ ಸುಮ ಹಾನು ಭಾವರಿಗೆ ಈರೇಳು ಲೋಕದೊಳು ಇನ್ನು2 ಮಲಿನರಾಗಿಹರು ನೋಳ್ಪರಿಗೆ ಪ್ರತಿ ದಿನದಲ್ಲಿ ಸುಲಭರಂತಿಹರು ದುರ್ಗಮರಾಗಿ ತೋರುವರು ಅಳುವರೊಮ್ಮೊಮ್ಮೆ ಪರವಶರಾಗಿ ಮೈ ಮರೆದು ನಲಿವರೊಮ್ಮೊಮ್ಮೆ ನಗುತಾ ಜಲಜಾಕ್ಷನಮಲ ಮಂಗಳ ಗುಣವ ಕೇಳಿ ಗಂ ಟಲ ಶಿರಗಳುಬ್ಬಿ ಚಪ್ಪಳೆಗಳಂ ಬಾರಿಸುತ ಮುಳುಗಿ ಸುಖ ವನಧಿಯೊಳು ತನು ಪುಳಕೋತ್ಪವದಿ ಇಳೆಯೊಳಗೆ ಸಂಚರಿಪ ಕಲುಷವರ್ಜಿತಂಗೆ 3 ನೋಡುವುದೆ ಹರಿಮೂರ್ತಿ ಕೇಳುವುದೆ ಹರಿಕೀರ್ತಿ ಆಡುವುದೆ ಹರಿವಾರ್ತೆ ಮಾಡುವುದೆ ಹರಿಪೂಜೆ ನೀಡುವುದೆ ಅವಧಾನ ಬೇಡುವುದೆ ಪುರುಷಾರ್ಥ ಕೂಡುವುದೆ ಸಾಯುಜ್ಯವು ದಾಡಿಯಿಂದಲಿ ದನುಜರಳಿದು ಧರಣಿಯನು ತಂದ ಕ್ರೋಢರೂಪನೆ ಲೋಕಕ್ಕೆಲ್ಲ ಆನಂದ ನಾಡಾಡ ದೈವದಂತಿವನಲ್ಲವೆಂದು ಕೊಂ ಡಾಡುತವನಿಯೊಳು ಸಂಚರಿಸುವ ವಿಪಶ್ಚಿತರಿಗೆ 4 ಕುಟಿಲರಹಿತನು ಧರ್ಮಾರ್ಥ ಮುಕುತಿ ಸಂ ಸುರನದಿ ಮುಖ್ಯ ತೀರ್ಥ ವೆಂ ಕಟ ಶೈಲ ಮೊದಲಾದ ಕ್ಷೇತ್ರದಲಿ ಸತ್ಕರ್ಮ ಹಟದಿಂದ ಮಾಳ್ಪರೆಲ್ಲಾ ವಟ ಪತ್ರಶಯನನೊಲುಮೆಯನೆ ಬಯಸುವ ಜಾಂಡ ಕಟಹದ್ಭಹಿವ್ರ್ಯಾಪ್ತನಾದ ಶ್ರೀ ಜಗನ್ನಾಥ ವಿಠಲನಾವ ದೇಶದಿ ಕಾಲದಲ್ಲಿ ಪಾ ಸಟೆಯಿಲ್ಲವೆನುತ ಲಾಲಿಸುತಿಪ್ಪರಿಗೆ5
--------------
ಜಗನ್ನಾಥದಾಸರು
ಆವ ಸುಕೃತವುಈ ನಾರಿಯರು ಈಪರಿ ಸುಖಿಸುವುದು ಪ. ಪಂಕಜನಾಭಗೆ ಶಂಖೋದಕವೆತ್ತಿಅಂಕದಲ್ಲಿಹೊ ಲಕುಮಿಯಅಂಕದಲ್ಲಿಹೊ ಲಕುಮಿಯ ನಲ್ಲಗೆಅಸಂಖ್ಯಸ್ತೋತ್ರವನೆ ಸ್ತುತಿ ಸೋರು 1 ದುರ್ಗಾದೇವಿಯ ರಮಣ ಭಾರ್ಗವಿರಾಮಗೆಶೀಘ್ರದಿ ಕೊಟ್ಟು ಕವಳವಶೀಘ್ರದಿ ಕೊಟ್ಟು ಕವಳವ ಗೋಗ್ರಾಸವಸ್ವರ್ಧುನಿ ಜನಕ ಕುಳಿತಾನೆ 2 ಹರಿವಾಣ ಇದ್ದಲ್ಲೆರಂಗಯ್ಯ ಬಂದು ಕುಳಿತಾನೆ 3 ವೀತದೋಷನ ಮುಂದೆ ಮಾತಿನಮಧುರೆಯರು ಜಾತಿ ಮಾಣಿಕದ ಸಮೆಜಾತಿ ಮಾಣಿಕದ ಸಮೆ ತಂದಿಟ್ಟುಜ್ಯೋತಿಗಳ ಹಚ್ಚಿ ಎಡಬಲ 4 ಮಂದಗಮನೆಯರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಎಲೆಯಲಿಇಂದಿರಾಪತಿಯ ಎಲೆಯಲಿ ಬಡಿಸೋರುಕುಂದದೆ ಕೊಟ್ಟ ಸೌಭಾಗ್ಯ5 ಬಂದ ಜನರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಜೊತೆಯಾಗಿಇಂದಿರಾಪತಿಯ ಜೊತೆಯಾಗಿ ಊಟಕ್ಕೆಬಂದು ಕುಳಿತವರು ಕಡೆಯಿಲ್ಲ 6 ಉಪ್ಪು ಉಪ್ಪಿನಕಾಯಿ ಹಪ್ಪಳ ಸಂಡಿಗೆಒಪ್ಪುವ ಬುತ್ತಿ ಕಲಸನ್ನಒಪ್ಪುವ ಬುತ್ತಿ ಕಲಸನ್ನ ಬಡಿಸೋರುಸುಪ್ಪಾಣಿ ಮುತ್ತು ಉದುರುತ7 ಹೊನ್ನಹರಿವಾಣದಿ ಅನ್ನಭಕ್ಷ್ಯವ ತುಂಬಿಚೆನ್ನರಾಮೇಶನ ಎಡೆಯೊಳುಚೆನ್ನರಾಮೇಶನ ಎಡೆಯೊಳು ಬಡಿಸೋರುರನ್ನ ಮುತ್ತುಗಳು ಉದುರುತ8
--------------
ಗಲಗಲಿಅವ್ವನವರು
ಆವದಾದರು ಏನು ಲಿಂಗವಾದರು ಆಯ್ತು | ಆವ ಕುಲವದು ಏನು ಜ್ಞಾನಿ ಕರ್ಮವು ಹೋಯ್ತು ಪ ಆವ ಅನ್ನವು ಏನು ಉಣಲ್ಹಸಿವು ಹೋಯಿತು | ಆವ ಮುದ್ರೆಯು ಏನು ಧ್ಯಾನಾನಂದವ ತೋರಿತು 1 ಆವ ವಸ್ತ್ರವು ಏನು ಶೀತ ಬಾಧೆ ನೀಗಿತು | ಆವ ಅಗ್ನಿ ಏನು ದಿವ್ಯ ಕಾಂತಿ ಬೆಳಗಿತು 2 ಪಾದ ಸೋಂಕಲಾಯಿತು | ಮುಂದೆ ಭವಕೆ ಬಾರದಂತೆ ಹೊಂದಿಕೊಂಡು ಹೋಯಿತು 3
--------------
ಭಾವತರಕರು
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ಪ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು 1 ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು 2 ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು ಪೇಳುವರ ಸಂಗತಿಯವಲ್ಲೆ | ನಿತ್ಯ | ನಿಂದಂಗಳದೊಳಗೆ ಯಿಪ್ಪ ಭಾಗ್ಯವ ಕೊಡು 3 ರಸ ರಸಾಯನ ವಲ್ಲೆ ಹಸನಾದ ಪಟ್ಟಿ ರಂ | ಜಿಸುವದುವಲ್ಲೆ ರಾಗಗಳುವಲ್ಲೆ | ವಸುದೇವ ಸುತ ನಿನ್ನ ಪೆಸರು ಎಣಿಸುವವರ | ಶಿಶುವಾಗಿ ಬದಕುವ ಕುಶಲ ಭಾಗ್ಯವ ಕೊಡು 4 ಪುಣ್ಯ ತೀರ್ಥಗಳು ನಿನ್ನ ಮನಸಿಗೆ ಬಂದ | ವನ್ನು ಮಾಡಿಸು ಬಿಡದೆ ಮನ್ನಿಸೆನ್ನ | ಚನ್ನ ಮೂರುತಿ ಚೆನ್ನ ವಿಜಯವಿಠ್ಠಲರೇಯ | ಎನ್ನ ವಂದನೆಯನ್ನು ಮುನ್ನು ನೀ ಕೈಕೊಂಡು5
--------------
ವಿಜಯದಾಸ
ಆವಬಂಧುಗಳೆಲೋ ಜೀವ ವಿಚಾರಿಸೋ ಕಾವ ಸಮರ್ಥದೇವ ಹರಿಯಲ್ಲದೆ ಪ ಮಾಯಮೋಹವ ನೀಗಿ ಕಾಯಶುದ್ಧಲಿ ಮನ ಪಾದ ದಿವ್ಯಭಕ್ತಿಲಿ ಭಜಿಸೊ ಅ.ಪ ಜನನಿ ಬಂದಹಳೆಂಬೆ ಜನನಿರ್ದಳಾಧ್ರುವಗೆ ಜನಕನ ತೊಡೆಯಿಂದ ಕನಿಕರಿಲ್ಲದೆ ಮಲ- ಜನನಿ ನೂಕಲು ಕಂದ ವನಕ್ಹೊರಟು ಪೋಗಲು ಜನನಿ ಸಲಹಿದಳೆನೋ ವನಜಾಕ್ಷನಲ್ಲದೆ 1 ಸತಿಹಿತದವಳೆನುವೆ ಸತಿಯಿರ್ದು ಸುಗ್ರೀವ ಖತಿಪಟ್ಟಾಗ್ರಜನಿಂ ವ್ಯಥೆಯಿಂದುಸುರ ಬಿಡಲು ಸತಿಬಂದು ಪತಿಯನ್ನು ಹಿತದಿ ಕರೆದೊಯ್ದಳೆ ಹಿತದ ಬಂಧುಗಳಿವರೇ ಕ್ಷಿತಿಪತಿಯಲ್ಲದೆ 2 ಸುತರ ಬಲವಿಹುದೆನುವೆ ಸುತರತಿ ಬಲಾನ್ವಿತರು ಜಿತಮಾರನಿಗಿರೆ ಉರಿಹಸ್ತ ವರವಿತ್ತು ಗತಿದೋರದಿರುತಿರೆ ಸುತರು ನೆರವಾದರೆ ಗತಿ ರಮಾಪತಿಯೆನೆ ಹಿತದಿಂ ಮೊರೆಕಾಯ್ದ 3 ಬಂಧುಗಳತಿಶಯದ ವೃಂದನೆರೆದು ಇರ ಲಂದು ಕರಿಮಕರಿಕೆಯಿಂದ ಬಂಧನ ಪಡಲ ವಂದು ಬೆಂಬಲಗೊಟ್ಟು ಬಂಧನವ ಬಿಡಿಸಿದುವೆ ತಂದೆಯಾ ಶ್ರಿ ಮುಕ್ಕುಂದನಲ್ಲದಲೆ 4 ಹರಿಯೆ ಪರದೈವವೋ ಹರಿಯೆ ಪರಲೋಕವು ಹರಿಯೇ ಸ್ಥಿರಸುಖವು ಹರಿಯೆ ವರ ಮುಕ್ತಿಯೋ ಹರಿಯೆಂದು ಅಜಮಿಳ ನರಕಯಾತನೆ ಗೆದ್ದ ಪಾದ 5
--------------
ರಾಮದಾಸರು
ಆವಭೂತ ಬಡಕೊಂಡಿತೆಲೊ ನಿನಗೆ ದೇವ ಕೇಶವನಂಘ್ರಿಧ್ಯಾಸವೆ ಮರೆದಿ ಪ ಸತಿಸುತರ ಮಮತೆಂಬ ವ್ಯಥೆ ಭೂತ ಬಡಿಯಿತೆ ಅತಿ ವಿಷಯಲಂಪಟದ ದುರ್ಮತಿಭೂತ ಹಿಡಿಯಿತೆ ಅತಿ ಸಿರಿಯಭೂತ ನಿನ್ನ ಮತಿಗೆಡಿಸಿತೇನೆಲೊ ರತಿಪತಿಪಿತನಂಘ್ರಿಸ್ತುತಿಯನೆ ಮರೆತಿ 1 ಸೂಳೆಯರ ಗಾಳ್ಯೆಂಬ ಹಾಳುಬವ್ವ ತಾಕಿತೇ ಕೀಳು ಸಂಸಾರದ ಮಹ ಗೋಳು ಭೂತ್ಹಿಡೀತೇ ಸಾಲಿಗರ ಭಯಭೂತ ನಾಲಿಗೆಯ ಸೆಳೆಯಿತೇ ನೀಲಶಾಮನ ಭಜನಫಲವೆ ಮರೆತೆಲ್ಲೊ 2 ಪೋದವಯ ಪೋಯಿತು ಆದದ್ದಾಗ್ಹೋಯಿತು ಪಾದದಾಸರಕೂಡಿ ಶೋಧಮಾಡಿನ್ನು ಭೂಧವ ಶ್ರೀರಾಮನ ಪಾದವನು ನಂಬಿ ಭವ ಬಾಧೆ ಗೆಲಿದಿನ್ನು ಮುಕ್ತಿ ಹಾದಿಯ ಕಾಣೊ 3
--------------
ರಾಮದಾಸರು
ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಸೆ ಎಂಬೋ ನದಿ ಆಸೆ ಎಂಬೋ ನದಿಆಸೆ ಎಂಬೋ ನದಿಯಿರೆ ಮಹಾ-ತೃಷೆಯ ಆರು ದಾಟಲಳವಲ್ಲ ಪ ಮನೋರಥ ನೀರು ಮನೋರಥ ನೀರುಮನೋರಥ ನೀರು ಇರೆ ಮಹಾತೃಷೆ ಅಲೆಗಳಯ್ಯ 1 ಸುಳಿ ಮೋಹವೆಂಬೋ ಸುಳಿಮೋಹವೆಂಬಾ ಸುಳಿಯಿರೆ ಮಹಾತೊರೆ ಹರಿಯಯ್ಯಾ 2 ಸತಿ ಎಂಬಾ ಮೊಸಳೆಸತಿ ಎಂಬ ಮೊಸಳೆಯಿರೆ ಸುತರೆಂಬರು ಏಡಿಗಳಯ್ಯ 3 ಬಂಧಗಳು ಗ್ರಹ ಬಂಧುಗಳು ಗ್ರಹಬಂಧಗಳು ಗ್ರಹ ಇರೆ ಬಡಿದಾಟ ನೀರು ಗುಳ್ಳೆಯಯ್ಯ4 ಗುರು ದಯವೇ ನಾವೆ ಗುರುದಯವೇ ನಾವೆಗುರುದಯವೆ ನಾವೆಯಿರೆ ಗುರು ಚಿದಾನಂದನ ಸೇರಬೇಕಯ್ಯ 5
--------------
ಚಿದಾನಂದ ಅವಧೂತರು
ಆಸೆನೀಗೋ ಹೇಸಿಮನವೆ ಕೇಶವನಂಘ್ರಿ ದಾಸನಾಗೊ ಪ ಸಕಲಭೋಗಭಾಗ್ಯ ಬರುವ ಅಖಿಲ ಸುಖದು:ಖಂಗಳೆಲ್ಲ ಭಕುತಿದಾರ್ಯಗರ್ಪಿಸಿ ಹರಿ ಭಕುತಿಯಿಂದಪಮೃತ್ಯು ಗೆಲಿಯೊ 1 ವಂದನೆ ಸ್ತುತಿ ಮಾನ ಮನ್ನಣೆ ಬಂದು ಕುಂದು ನಿಂದೆಯೆಲ್ಲ ಮಂದರಾದ್ರಿಯ ನಿಲಯಗೆಂದಾ ನಂದದಿಂ ಭವಬಂಧ ಗೆಲಿಯೊ 2 ಪೊಡವಿಸುಖಕೆ ಮೋಹಿಸದೆ ನೀ ಕೆಡುವಕಾಯಮೋಹ ತೊಡೆದು ಒಡೆಯ ಶ್ರೀರಾಮನಂಘ್ರಿ ಕಮಲ ಧೃಢದಿ ಭಜಿಸಿ ಮುಕ್ತಿ ಪಿಡಿಯೊ 3
--------------
ರಾಮದಾಸರು