ಒಟ್ಟು 1167 ಕಡೆಗಳಲ್ಲಿ , 95 ದಾಸರು , 950 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರ್ಗಣ ಪರಿಹರಿಸಿ ದುರ್ಗದೊಳಿಡು ಎನ್ನಾ ಪ ಪಾಪಕ್ಕೆ ಎರಗುತಾ ತಾಪಸರನ್ನ ಜರಿದು ಬಲು ಸಂ ತಾಪದಿ ಬಳಲಿದೆನೊ ಕುಕ್ಕಿ 1 ಹಿಂಸೆಯ ಮಾಡುವಲ್ಲಿ ಹೇಸದೆ ಧ್ವಂಸಗೈಸು ವೇಗಾ 2 ಕಠಿಣ ಉತ್ತರ ನುಡಿದು ಮತ್ಸರ ಕುಟಿಲತನವಾ ಮರಿಯೆ ಸಟೆ ಮಾತುಗಳನಾಡಿ ನಿನ್ನಾ ನಿ ಚ್ಚಟದ ಮರಿದೆನೊ ಹರಿಯೆ 3 ಕಲಹವೆಂದರೆ ಕಾಲು ಕೆದರುವೆ ಕೆಲಸಾರದಲೇವೇ ಮಲಿತು ಎದುರು ನೆಲೆಗಾಣದೇ ಪೋದೆ4 ವ್ಯಾಧೆ ವೇದನೆಯಿಂದ ಬಲು ಕಷ್ಟ ವಾದದು ಈ ದೇಹಕ್ಕೆ ಮೋದ ವಿಜಯವಿಠ್ಠಲ ನಿನ್ನಿಂ ದಾದದ್ದು ತೊಲಗಿಸಿ 5
--------------
ವಿಜಯದಾಸ
ದುರ್ಗೆ ಪಾಲಿಸೆ ಕರುಣದಿ | ಮಹಾ ಲಕುಮಿ ದುರ್ಗೆ ಪಾಲಿಸೆ ಕರುಣದಿ ಪ. ಅಪವರ್ಗ ಪದವಿ ಇತ್ತು ದುರ್ಗಮವಾಗಿಹ ದುಃಖವ ಬಿಡಿಸಿ ಭಾರ್ಗವಿರಮಣನ ಮಾರ್ಗವ ತೋರೆ ಭೋರ್ಗರೆಯುತ ಖಳರ ನಿಗ್ರಹಿಸುವಳೆ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ರಮಣನ ಜಾಯೆ ನಾರಸಿಂಹನ ಅರಸಿಯೆ ಸಾರಿದೆ ನಿನ ಪದ ತೋರಿಸೆ ಹರಿಪದ ಕಾರುಣ್ಯಾತ್ಮಳೆ ಕರುಣವ ಬೀರೆ ವಾರವಾರಕೆ ನಿನ್ನ ಆರಾಧಿಸುವಂಥ ಚಾರುಮತಿಯ ನೀಡೆ ನಾರಿರನ್ನಳೆ 1 ಪದ್ಮಾವತಿಯೆ ಪದ್ಮಿನಿ | ಪದ್ಮಾಕ್ಷಿದೇವಿ ಪದ್ಮಸಂಭವೆ ಕಾಮಿನಿ ಪದ್ಮನಾಭ ಶ್ರೀ ಶ್ರೀನಿವಾಸನ ಪದ್ಮಪಾದವ ಹೃತ್ಪದ್ಮದಿ ತೋರೆ ಪದ್ಮಸರೋವರ ತೀರವಾಸಿ ಕರ ಪದ್ಮಯುತಳೆ ಮುಖಪದ್ಮವ ತೋರೆ2 ರೂಪತ್ರಯಳೆ ಕಾಮಿನಿ | ಕಾಮಪೂರಿಣೀ ತಾಪಹರಿಸೆ ಭಾಮಿನಿ ಪಾಪಗಳÉಲ್ಲವ ನೀ ಪರಿಹರಿಸುತ ಗೋಪಾಲಕೃಷ್ಣವಿಠ್ಠಲನನು ತೋರುತ ನೀ ಪರಿ ನುಡಿವೆನೆ ನೀ ಪಾಲಿಸುವುದು ಆಪವರ್ಗದಲಿ 3
--------------
ಅಂಬಾಬಾಯಿ
ದುರ್ಗೇ ಪಾಲಿಸೆ ಹೇ ದುರ್ಗೇ ಪಾಲಿಸೆ ಪ ಭಾರ್ಗವಿ ಭಜಕರ ವರ್ಗವ ಕರುಣದಿ ಅ.ಪ ಸರ್ಗಸ್ಥಿತಿ ಲಯಕಾರಣೆ ಜಗಕೆ ಸು ಮಾರ್ಗದಿ ನಡೆಯಲನುಗ್ರಹ ಮಾಡೆ 1 ವಂದಿಸುವೆನು ಭವಬಂಧವ ಬಿಡಿಸ್ಯಾ ನಂದವ ಕರುಣಿಸು ನಂದಾತ್ಮಜಳೆ 2 ಕಡಲತನುಜೆ ತವಕಡು ಕರುಣದಲಿ ಬಡಜಭವ ಮುಖರು ಪಡೆದರು ಪದವನು 3 ನಭ ಸಂಚಾರಿಣೆ ಆಯುಧ ಭವ ಭಯಹಾರಿಣಿ ನಮೊನಮೋ4 ಇಂದಿರೆ ಪದುಮ ಸುಮಂದಿರೆ ತವಪದ ದ್ವಂದ್ವದಿ ಭಕುತಿಯ ಪೊಂದಿ ಸುಖಿಸುವಂತೆ 5 ವೀರರೂಪಿ ಅಸÀುರಾರಿಯೆ ತವಪರಿ ವಾರದ ಭಯವನು ತಾರದಿರೆಂದಿಗೂ 6 ಮಂಗಳಕೃಷ್ಣ ತರಂಗಿಣೆ ಕಾರ್ಪರ ತುಂಗಮಹಿಮೆ ನರಸಿಂಗನ ರಾಣಿ7
--------------
ಕಾರ್ಪರ ನರಹರಿದಾಸರು
ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ ಭಂಗ ರಂಗ 1 ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ2 ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ3 ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ 4 ಭಂಗ 5
--------------
ಕನಕದಾಸ
ದುರ್ಜನರ ಸಂಗವನು ತ್ಯಜಿಸು ಮನವೆ, ಸಾಧು ಸಜ್ಜನರ ಸಂಗವನು ಭಜಿಸಿ ಸುಖಿಯಾಗೆಲವೊ ಪ ದುಷ್ಟ ವ್ಯಾಘ್ರನ ಕೈಯ ಮುಟ್ಟಿ ಹಿಡಿ ತರಬಹುದು ಅಟ್ಟಿಬಹ ಮದಕರಿಯ ಕಟ್ಟಬಹುದು ಕೃಷ್ಣಸರ್ಪನ ಹುತ್ತ ಕಲಕಿ ಜೀವಿಸಬಹುದು ದುಷ್ಟಾತ್ಮರಾದವರ ಬಿಟ್ಟು ಕಳೆ ಮನವೆ 1 ಚೇಳಬಾಲದ ಉರಿಯ ಜ್ವಾಲೆ ತಾಳಲುಬಹುದು ಕಾಲಮೇಘದ ಸಿಡಿಲು ಬೀಳಬಹುದು ಶೂಲಪಾಣಿಯ ಫಣೆಯ ಆಲಿ ಕೀಳಲುಬಹುದು ಕಾಳುಮೂಳರ ಸಂಗ ಮರೆದು ಕಳೆ ಮನವೆ 2 ಹರಿವ ಗರಗಸಿನಲ್ಲಿ ಶಿರವನೊಡ್ಡಲುಬಹುದು ಬೆರಸಿಬಹ ಕಾಡ್ಗಿಚ್ಚ ಧರಿಸಬಹುದು ಸರಿಸದಲಿ ನಿಂತು ಕೇಸರಿಯ ಕೆಣಕಲುಬಹುದು ಮರೆಸಿ ಕೊರಳನು ಕೊಯ್ವ ನರರ ಮರೆ ಮನವೆ 3 ಒಂದು ಜಾತಿಗೆ ವಿಷವು ಪುಚ್ಚದೊಳಗಿರುತಿಹುದು ಮ- ತ್ತೊಂದು ಜಾತಿಗೆ ದಂತದೊಳಗೆ ವಿಷವು ಒಂದು ಜಾತಿಗೆ ಮೈಯ ಅಂದವೆಲ್ಲವು ವಿಷವು ಹಿಂದೆಯಾಡುವ ನುಡಿಯು ಘೋರ ವಿಷ ಮನವೆ 4 ತೇರ ಕಂಡರೆ ತೊಲಗು ಮಾರೈದನಾಕ್ಷಣದಿ ವಾರುವಗೆ ಕಡೆ ಸಾರು ಈರೈದು ಮಾರುವನು ದಾರಿಯನು ಬಿಡು ಗಜಕೆ ಮೂರು ಸಾವಿರವನ್ನು ಊರ ಬಿಡು ದುರ್ಜನರ ಸೇರದಿರು ಮನವೆ 5 ಸತ್ಯವಂತರ ಕಂಡರರ್ಥಿಯಿಂದಲೆ ಎರಗು ನಿತ್ಯದೊಳು ಶ್ರೀಹರಿಯ ಕೀರ್ತನೆಯ ಮಾಡು ಉತ್ತಮೋತ್ತಮ ಪದವ ಹತ್ತಿಸುವವರ ಬೇಡು ಧೂರ್ತಮನುಜರ ಸಂಗ ಕಿತ್ತು ಕಳೆ ಮನವೆ 6 ಶುದ್ಧಮನವೆ ಎನ್ನ ಬುದ್ಧಿಯೊಳಗಡಗಿರ್ದು ಉದ್ಧರಿಸು ವರಾಹತಿಮ್ಮಪ್ಪನನು ನೆನೆದು ಮದ್ದನರೆ ಜನ್ಮದೊಳು ಮರಳಿಬಾರದ ಹಾಗೆ ಗದ್ದುಗೆಯ ಹಾಯ್ಕೆನ್ನ ಹೃದಯ ಮಧ್ಯದಲಿ 7
--------------
ವರಹತಿಮ್ಮಪ್ಪ
ದುರ್ಯೋಧನ ಮಹರಾಜನೆ | ಅ ನಾರ್ಯ ಜನರ ಕಲ್ಪಭೂಜನೆ ಪ ನಿರ್ಹೇತುಕ ದ್ವೇಷ ಮಾಡುವೆ | ಹಾ ಹಾ ಅ.ಪ ಹರಿಭಕ್ತಿಗೆ ಮಾನಭಂಗ ಮಾಡಲಾಪೆಯ ದುರುಳ ಘೋಷಯಾತ್ರೆಯ ಜ್ಞಾಪಿಸಿಕೊ ದುಷ್ಟ 1 ಜಲದೊಳು ಮುಳುಗಿ ಸ್ವಬಲವನೆಬ್ಬಿಸುವೆನೆಂ ದೆಲೆ ಭೀಮಗೇಕಿದಿರಾದÀಯ್ಯ ನೀನು 2 ಶ್ರೀಪ ಗುರುರಾಮ ವಿಠಲಗೆ ದೂರನೆ | ಹಾ ಹಾ 3
--------------
ಗುರುರಾಮವಿಠಲ
ದುರ್ಲಭ ಇದು ಕಲಿಯುಗದೊಳಗೆ ಕಾಣಾ ಎಲ್ಲರಿಗೆ ದೊರಕಬಲ್ಲದೆ ಶ್ರೀ ವಲ್ಲಭನ ಪಾದಸೇವೆ ಮಾಡೋ ನೀ ನಲಿದಾಡೋ ಎಲೆ ಮನುಜಾ ಪ ಗಂಧರ್ವರು ಸಿದ್ಧರು ವಿದ್ಯಾ ದರಸಾಧ್ಯ ಗುಹ್ಯಕ ಸುರಮುನಿಗಣ ಗರುಡಾದ್ಯರೆ ನೆರೆದು ಪುರಹರ ಮೂವನ ಬಲ್ಲಿದರೀ ಇಲ್ಲವೆನುತಲಿ ಬರಿದು ರೇಖೆಯ ಬರಿಸಿದರೊ ಡಂಗುರ ಹೊಯಿಸಿದರೊ ಎಲೆ ಮನುಜಾ 1 ಹರಿಯೆಂತೆಂದವ ಧರ್ಮಕೆ ಸಂದವ ಕರದಲಿ ದಂಡಿಗೆ ಪಿಡಿದವ ಪುಣ್ಯವ ಪಡೆದವ ಚರಣದ್ವಯದಲಿ ಗೆಜ್ಜೆಯ ಕಟ್ಟಿದವ ಅಟ್ಟಿದವ ಯಮ ಭಟರ ಹರಿಹರಿದಾಡುತ ಕುಣಿದವ ಉತ್ತಮ ಗುಣದವ ಹಿರಿದಾಗಿ ಗಾಯನ ಪಾಡಿದವ ಸುರರನ ಗೂಡಿದವ ಮಾಯವ ಬಿಡೋ ಎಲೆ ಮನುಜಾ2 ಭವಾಬ್ಧಿ ದಾಟಿದವ ಇಂಬಾಗಿ ಕಡ್ಡಿ ವಾದ್ಯವ ಹಾಕಿದವ ದುರುತವ ನೂಕಿದವ ಸಂಭ್ರಮ ತಾಳ ಕಟದವ ಊಟದವ ಸುರರೊಡನೆ ತುಂಬಿದ ದಾಸರ ಸಭೆಯೊಳಗಿದ್ದವ ನರಕವನೊದ್ದವ ಕಂಬನಿ ಪುಳಕೋತ್ಸವ ಸುರಿದವ ತತ್ವವನರಿದವ ನೀ ಸುಖದಲಿ ಬಾಳೊ ಎಲೆ ಮನುಜಾ 3 ಬೇಸರದಲೆ ಹೇಳಿ ಏಕಾದಶಿಯ ವಾಸರದಲಿ ಜಾಗರವನು ಗೈದ ಮಾನೀಸನು ಅಘನಾಶನು ಚರಣಕೆ ಏರಿಸಿದನಿವ ಬೆರೆದು ಎಲೆ ಮನುಜಾ4 ಗೋಪಾಳವನು ಬೇಡಿ ನಿತ್ಯಸುಖಿಯಾಗಿ ತಾಪತ್ರೆಯ ಮೊದಲಾದ ದುಷ್ಕರ್ಮ ಪಾಪರಹಿತನಾಗಿ ಸಿರಿ ಪದ್ಮವ ಪೊಂದಿದ ಭಜಕರು ಒಂದೇ ಗೇಣೊ ಎಲೆ ಮನುಜಾ 5
--------------
ವಿಜಯದಾಸ
ದೂರಮಾಡು ದೂರಮಾಡು ದುರ್ಜನ ನೆರೆಯ ಸಾರಸಾಕ್ಷನೆ ಬೇಗ ದುಷ್ಟಸಂಗತಿಯ ಪ ಸೇಂದಿ ಸೆರೆ ಕುಡಿದು ಮನಬಂದಂತೆ ಕುಣದಾಡಿ ನಿಂದಿಸಿ ಕಂಡವರಿಂ ತಿಂದು ಲತ್ತೆಯನು ಮಂದಿಯೋಳ್ಮುಖದೋರ್ವ ಹಂದಿಮನುಜರ ದರ್ಶ ನೆಂದೆಂದು ಬೇಡೆನಗೆ ಮಂದರಾದ್ರಿನಿಲಯ 1 ನೂತನದ ಮಾತಾಡಿ ಖ್ಯಾತಿಯಿಂ ತೋರ್ಪಡಿಸಿ ಮಾತುಮಾತಿಗೆ ವಂಚಿಸಾತುರಕೆ ಪರರ ಘಾತಗೈಯುವ ಮಹಪಾತಕರ ಸಂಗ ಮಮ ದಾತ ಜಗನ್ನಾಥ 2 ಧ್ಯಾನದಾಸರ ಕಂಡು ಜ್ಞಾನವಿಲ್ಲದೆ ತುಸು ಹೀನಮಾತುಗಳಾಡಿ ಏನುಕಾಣದಲೆ ಶ್ವಾನನಂದದಿ ಚರಿಪ ಮಾನಹೀನರ ನೆರಳು ಏನಿರಲುಬೇಡ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ದೇವ ತ್ರಾಹಿ ಗೋಪಾಲಕೃಷ್ಣ ದೇವ ತ್ರಾಹಿ ಪ ದೇವ ತ್ರಾಹಿ ದಯಯಾ ವನಚತುರ ನಿರಾವರಣಾಖಿಲ ಭಾವಭರಿತ ನಿಜಪಾವನ ಭಕ್ತಜನಾವಳಿಸಂವೃತ ಭಾವಜಜನಕ ಅ.ಪ ನಿರ್ಗುಣ ನಿರುಪಮ ದುರ್ಗಮಗುಣಗಣ ನರ್ಗಳಾವಾಸನಾ ನಿರ್ಗಮಹೇತ್ವಪವರ್ಗದ ಕೃಷ್ಣಾ 1 ಇಂದಿರಾ ಮುನಿ ಮನೋಮಂದಿರ ವಿನತಾ ನಂದನವಾಹನ ಕುಂದರದನ ಕುರು ನಂದನ ಸೇನಾ ವೃಂದನಿಷೂದನ ನಂದನ ಕೃಷ್ಣಾ 2 ಅರ್ಜುನಪಾಲಕ ದುರ್ಜನಶಿಕ್ಷಕ ಸಜ್ಜನರಕ್ಷಕ ಭರ್ಜಿತಕರ್ಮ ಸುದುರ್ಜಯ ಮೋಕ್ಷದನಿರ್ಜರ ತಿರುಪತಿ ನಿರ್ಜಿತ ವೆಂಕಟಕೃಷ್ಣ 3
--------------
ತಿಮ್ಮಪ್ಪದಾಸರು
ದೇವ ದೇವ ತೋರು ದಯವ ಪ ಕಾವದೇವ ನೀನೆ ಎನ್ನ ಕೈಯಪಿಡಿದು ಕಾಯೊ ಅಭವ ಅ.ಪ ಧ್ಯಾನಿಪ ಭಕ್ತ ದೀನರಭಿಮಾನಿ ನೀನೆ ಕರುಣಿಸೊ ದೀನಸ್ವರದಿ ಬೇಡಿಕೊಂಬೆ ಮಾನರಕ್ಷಿಸಿ ಪೊರೆಯೊ ಜೀಯ 1 ನೀಗಿಸಲು ದುರ್ಬವಣೆಯನು ಬಾಗಿ ನಿಮ್ಮ ಮರೆಯ ಹೊಕ್ಕೆ ಭೋಗಿಶಯನ ಬಾಲನನ್ನು ಬಗಲೊಳಿಟ್ಟು ಸಲಹು ಜೀಯ 2 ಭಾಮೆಮಣಿಯ ಸಮಯಕೊದಗಿ ಪ್ರೇಮದಿಂದ ಮಾನ ಕಾಯ್ದಿ ಸ್ವಾಮಿ ನೀನೆ ಗತಿಯು ಎನಗೆ ಪ್ರೇಮದಿಂದ ಕಾಯೊ ಶ್ರೀರಾಮ 3
--------------
ರಾಮದಾಸರು
ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವ ನೀನಹುದೋ ದೇವರದೇವ ನೀನಹುದೋ ಪ ದೇವ ರಿಪುವನದಾವ ದುರಿತಾಖ್ಯನಾವ ನಮಿತರ ಕಾವ ಕರುಣಸಂಜೀವ ಜಿತಪೂರ್ಣಕಾಮ ಅ.ಪ ದೇವಕಿಯಲ್ಲವತರಿಸಿ ಗೋಕುಲವನ್ನು ಪಾವನವನ್ನು ಮಾಡಿ ಮಡುಹಿ ಮಾವನ ಮಧು- ರಾವನಿಯನುಗ್ರಸೇನಗಿತ್ತು ದೈತ್ಯಾಳಿಯ ಸವರಿ ಜೀವ ಸಖನಾಗಿ ಪಾಂಡವರಿಗೆ, ಪಾರ್ಥ ಸೇವೆಯಲಿ ಸಂದು ಕೀಲಿಸಿ ಕೌರವರನ್ನು ಭೂವರನ ಹಯಮೇಧಕೊಲಿದು ಬಂದಾ 1 ಧರ್ಮರಾಜನ ಯಜ್ಞತುರಗ ರಕ್ಷೆಗೆ ಕೃತ- ವರ್ಮಜರು ಕೂಡಿ ನಡಸಿ ನೀಲಾಂಕನ ಮರ್ಮವರಿತು ಸೋಲಿಸಿ ಹಂಸಧ್ವಜರನ್ನು ಮಾಮಳಿದಡರಿ ಕರ್ಮವಶದಿಂದ ಬಭ್ರುವಾಹನನ ಕೈಯ ದುರ್ಮರಣವಾದ ವಿಜಯ ಕರ್ಣರನು ನಿತ್ಯ ನಿರ್ಮಳಿಕನಹುದೊ 2 ಮುಂತೆ ನಡೆದರ್ಜುನಿಯ ಗೂಡಿ ತಾಮ್ರಧ್ವ ಜಂ ತುಡುಕಿ ಬರೆ ದ್ವಿಜನಾಗಿ ಶಿಖಿ ದಂತಿಪುರಕೆ ಬಂದರಸನ ಹಯಮೇಧ- ಮಂ ಪಾಲಿಸಿ ತ್ರಿಜಗವನು ಪಾಂಡವರಿ- ಗಿತ್ತೊಲಿದು ಸುರಪುರವ ಪೊರೆವ ಲಕ್ಷ್ಮೀಕಾಂತ ನೀನಹುದೋ 3
--------------
ಕವಿ ಲಕ್ಷ್ಮೀಶ
ದೇವತಾಸ್ತುತಿಗಳು ಅಂಧನೋ ನಾ ಬಲು ಅಂಧನೊ ಪ ಸುಂದರವಾದ ಹೃನ್ಮಂದಿರದಲಿ ನಿನ್ನಸುಂದರಮೂರ್ತಿಯ ಕಣ್ದೆರದು ಕಾಣದ ಅ.ಪ. ಕುಹಕ ಚಿಂತಿಸುವಅಹುದು ಸಜ್ಜನನೆಂದು ಬಹುಜನ ನುಡಿಯಲುಮಹಮೋದ ಮಡುವಿನೊಳ್ ಮಹದಜ್ಞನೆನಿಸಿದ 1 ವಿಷಮ ದುರ್ವಿಷಯಗಳಲಿ ಮನ ಹೊಗಿಸೀವಿಷವೆಂದು ತಿಳಿದು ವಿಷಯ ಸೇವಿಸೀಅಸಮ ಮಹಿಮ ನಮ್ಮ ಝಷಕೇತು ಜನಕನವಿಷಯಗಳ ಬಹು ವಿಷಯೀಕರಿಸಿದಂಥ 2 ಮಾನವ ನಾ3
--------------
ಗುರುಗೋವಿಂದವಿಠಲರು
ದೈತ್ಯರಲ್ಲೆ ದುರ್ಜನ ಸೇವೆ ಪ ಪರರ ಲಾಭವನು ಧರಿಯೊಳು ನೋಡುತ | ಧರಿಸಲಾರ ಧಿಕ್ಕರಿಸುತ ನುಡಿವನು | ಪರರ ಹಾನಿಯಲಿ ಮರುಗದೆ ಮನದೊಳು | ಹರುಷ ಬಡವುತ ಚರಿಸು-ನೈಯ್ಯಾ 1 ಖಳ್ಳೆದೆಯೊಳು ಮನದಲ್ಲಿ ಕಪಟವು | ಸೊಲ್ಲಿತೆ ನೋಡಲು ಬೆಲ್ಲನೆ ಬೀರುವಾ | ಒಳ್ಳಿತು ಗುಣಗಳ ಯಳ್ಳಿಲಿ ನಿತೈಣಿಸದೆ | ಕ್ಷುಲ್ಲತನದಿ ಕುಂದಲ್ಲಿಡುವ-ಕೈಯ್ಯಾ 2 ಸತಿ | ಎನ್ನ ಮಗÀನೆ ಮಗ ಯನ್ನ ಗುಣವೇಗುಣ | ತನ್ನನೆ ಹೊಗಳುತ ಅನ್ಯಕ್ಹಳಿವರೆ 3 ಆವದು ಅರಿಯದ ಭಾವಿಕ ಜನರನು | ತಾವೀಗ ಕಂಡರೆ ಆವನನುಗ್ರಹ | ಆವ ಮಂತ್ರ ನಿನಗಾವ ನ್ಯಾಸವೇ | ದಾವಾಗ ಛಲಣಿಯ ಭಾವಿಪರವರೇ 4 ತಂದೆ ಮಹಿಪತಿ ನಂದನ ಪ್ರಭುವಿನಾ | ಒಂದರಗಳಿಗೆಯ ಛಂದದಿ ಸ್ಮರಿಸದೆ | ನಿಂದೆಯ ಮನೆಯೊಳು ಸಂದಿಸಿ ಅನುದಿನಾ | ಮಂದ ಮತಿಯರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೋಷ ದೂರಿಸೈಯ್ಯಾ ಎನಗೆ ನೀ ತೋಷವೀವುದಯ್ಯಾ ಪ ಆಸವ ಶ್ರೀತುಲಸೀವಾಸನಿಲಯ ಸ- ರ್ವೇಶಹರಿಯ ದುರ್ವಾಸ ವಿಠಲರಾಯ ಅ.ಪ. ರಾಘವ ರಘುಕುಲ ಸೋಮನ ಸದಯ ಸ- ರ್ವಾಘ ಹರಿದ ನಿಖಿಳಾಗಮಗಳೊಡೆಯ 1 ಯಾದವ ಯದುಕುಲ ತಿಲಕಾವ್ಯಯ ಮಧು- ಸೂದನ ತ್ರಿದಶನು ವೇದ್ಯದಾಸ ವಂದ್ಯಾ 2 ನರಹರಿಕರುಣಾರ್ಣವ ಶರಣರ ಗುರು ಕರುಣವಿರಿಸು ನರಸಿಂಹವಿಠಲರಾಯ 3
--------------
ನರಸಿಂಹವಿಠಲರು