ಒಟ್ಟು 570 ಕಡೆಗಳಲ್ಲಿ , 81 ದಾಸರು , 504 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನೆಯೊಳಗಾಡೋ ನೆನೆವರ ನೋಡೋ ಪ ಮುನಿÀಸಬೇಡವೋ ಎನ್ನ ಮಾನಸವೆಂದೆಂಬ ಅ.ಪ ನಸುನಗೆಯನು ತೋರಿ ನುಸುಳಿ ಪೋಗುವೆಯೇಕೆ ಬಿಸಿಬಿಸಿ ಪಾಲನಿತ್ತು ಬೀಸಿ ಬೀಸಿ ತೂಗುವೆನು 1 ಬಡಮುನಿಗಳು ನಿನ್ನ ಪಿಡಿದೆಳೆಯೆ ಚಿಣ್ಣ ನುಡಿಯಿದು ಸಟೆಯೆನಬೇಡ ಕದ್ದೋಡಬೇಡ 2 ಎನ್ನದೆಂಬುದೆಲ್ಲ ನಿನ್ನದೋ ಮಾಂಗಿರೀಶ ನಿನ್ನ ನಾಮದ ನೆಲೆ ಎನ್ನದೆನ್ನಿಸೋ ರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಹಾಲಕ್ಷ್ಮಿ ಇಂದಿರೇ ಪಾಲಿಸು ಕಮಲಮಂದಿರೆ ಪ ಇಂದಿರೆ ಇಂದುನಿಭಾಸ್ಯೆ - ಗುಣ - ವೃಂದ ಶೋಭಿತೆ ಶುಭಗಾತ್ರೆ - ಆಹಾ ಇಂದು ಶೇಖರಸುರವಂದಿತಪಾದ ದ್ವಂದಾರವಿಂದಳೆ ಮಂದಸ್ಮಿತಾನನೆ ಅ.ಪ ಅರುಣದಿಂದೊಪ್ಪುವ ಚರಣ ಯುಗಳಾ - ಭರಣ ಭೂಷಿತ ಯೋಗಿಶರಣಾ ನಿಜ ಶರಣರ್ಗೆ ರನ್ನದರ್ಪಣಾಭವ - ಅರಣತಾರಣಕಾರಣ - ಆಹಾ ಶರಣು ಪೊಕ್ಕೆನು ದೇವಿ ಚರಣಕಮಲಯುಗ ವರಣಿಸಲಳವಲ್ಲ ಕರುಣಿಸು ನೀ ಎನ್ನ 1 ಶ್ರುತಿನುತವಿತತಸÀಚ್ಚರಿಯೆ ಸದಾ- ನತÀರ ಸಂತೈಪೊದಾಶ್ಚರಿಯೆ ನಿನ್ನ ಸ್ತುತಿಸಿದವಗೆ ಮಹಾ ಶಿರಿಯೆ ಮತ್ತೆ ನಿರಯ ಅಹಾ ಸತತ ನಿನ್ನಲಿ ಮನೋರತಿನಿತ್ತು ಶೋಕದ ವ್ರತತಿ ಖಂಡಿಸಿ ಸುಖತತಿಯ ಪಾಲಿಸು ದೇವೀ 2 ಜಗಕೆ ಸೃಷ್ಟಿಸ್ಥಿತಿನಾಶಕಾರಿ ಬಗೆ ಬಗೆ ಭವನದಲ್ಲಿ ಕ್ಲೇಶ-ಹರಸಿ ಸುಗಮದಿಂದ ಪರಿತೋಷ-ಬಡಿಸಿ ನಗಿಸುವಿ ಎನ್ನಭಿಲಾಷಾ ಅಹಾ ನಗೆಮುಖದಲಿ ಗುರು ಜಗನ್ನಾಥ ವಿಠಲನ್ನ ನಿತ್ಯ ಸೊಗಸಾಗಿ ಇರುತಿಪ್ಪಿ 3
--------------
ಗುರುಜಗನ್ನಾಥದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾರನಯ್ಯನ ಚದುರನ ತಂದುತೋರು ವೆಂಕಟರಮಣನ ಪ. ನಲ್ಲ ನುಡಿದರೆ ನುಡಿದರಗಿಣಿಯನು ನಾಚಿಸುವಚೆಲ್ವಮೊಗದಿ ಶಶಿಯನುಗೆಲ್ವ ಭಾರಿಯ ಸೊಬಗ ತೋರಿಫುಲ್ಲಬಾಣನ ಜರೆವನೊ 1 ಕಂಬನಿಯ ತೊಡೆದು ತನ್ನ ಮೊಗವಚುಂಬಿಸಲು ತರುಣಿ ತನ್ನ ಬಾಯತಾಂಬೂಲವನಿತ್ತು ಎನ್ನಮನ ದ್ಹಂಬಲ ಸಲಿಸಲು ಪೂರ್ಣ 2 ಇಂದೆನ್ನನಗಲಿದರೆ ಮನದಕುಂದು ಬಿಡಿಸುವನದಾರೆಇಂದುಮುಖಿ ಕರೆದು ತಾರೆ ಹಯವದನನಬಂದು ಬೇಗದಲಿ ಸಾರೆ 3
--------------
ವಾದಿರಾಜ
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಟ್ಟು ದೋರಿತು ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ಒಂದಿಷ್ಟು ಕೊರತೆ ಕೃಷ್ಣನೆಂಬ ಅ.ಪ ಹೇಯಗುಣವಿಲ್ಲ ಮುನಿಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ 1 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ಮಿಥ್ಯಾವಚನಿಲ್ಲವೆಂಬೊಂದಿತ್ಯಧಿಕ ಕೊರತೆಯೆಂಬ 2 ಜ್ಷಾನವಂತನೆಯ ಬಹುಮಾನವಂತನಾದರೂ ಅ ಜ್ಞಾನಶೂನ್ಯನೆಂಬ ದೊಡ್ಡ ಹಾನಿಯೊಂದಿರುವುದೆಂಬ3 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ 4 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳನಪಹರಿಪ ದೀಪನಾ ಬಿಡದು ಎಂಬ 5 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರಿವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ 6 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ 7 ನಿತ್ಯತೃಪ್ತನಾದರೂ ನಿಜ ಭೃತ್ಯರನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನುನೀನಲ್ಲವೆಂಬ 8 ಕಷ್ಟಪಡಬೇಡವೆನ್ನೊಳೆಷ್ಟು ದುರ್ಗುಣಂಗಳಿಹ ವಷ್ಟನು ಒಪ್ಪಿಸಿ ನಿನಗಿಷ್ಟ ನಾಗಬೇಕೆಂಬ 9 ಕ್ಷೀರದಧಿನವನೀತ ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ 10 ಕೊರತೆಯೆಂಬಾ ಜನರಿಗೆಲ್ಲಾ ವರವನಿತ್ತು ಪೊರೆವೆನೆಂಬ ಸ್ಥಿರವಾಗಿ ಶ್ರೀ ವ್ಯಾಘ್ರಗಿರಿಯೊಳಿರುವ ವರದ ವಿಠಲನೆಂಬ11
--------------
ವೆಂಕಟವರದಾರ್ಯರು
ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1 ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2 ಸುಜನ | ಆರ್ತರುದ್ಧರಣಾ 3 ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4 ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುರಳೀ ಮನೋಹರ ವಿಠಲ | ಪೊರೆ ಇವಳಾ ಪ ಗುರು ರಾಘವೇಂದ್ರರ್ಗೆ | ತೋರ್ದ ಶಿರಿಕೃಷ್ಣಾ ಅ.ಪ. ಸಿರಿ | ನರಸಿಂಹ ಮೂರುತಿಯೆಚಂದದಲಿ ಸುಜ್ಞಾನ | ದೊಂದು ಅಂಕುರವಾ |ಸಂದೇಹ ವಿಲ್ಲದಲೆ | ಅಂದು ಸ್ವಪ್ನದಿ ತೋರಿಮಂದಳನ ಉದ್ಧಾರ | ವೆಂದು ಸೂಚಿಸಿದೇ 1 ಭಯ ಕೃತುವು ಭಯನಾಶ | ವಿಯದಧಿಪ ಗೊಲಿದವನೆನಯ ವಿನಯದಿಂ ಬೇಡ್ವ | ಹಯಮೊಗನ ದಾಸ್ಯದಯದಿ ಕೊಟ್ಟವಳೀಗೇ | ಭಾಗ್ಯ ವೈರಾಗ್ಯವನುದಯೆಗೈದು ಹೇಯೊ ಸಾ | ದೇಯಗಳ ತಿಳಿಸೋ 2 ಹರಿಯು ನೀ ನಿತ್ತುದಕೆ | ಉರುತರದ ತೃಪ್ತಿಯನುಅರಿತಿಹಳು ಈ ಗೃಹಿಣಿ | ಪರಿಸರೇಡ್ಯಾ |ದುರಿತ ರಾಶಿಗಳಳಿದು | ಹರುಷವನೆ ಸುಡಿಸುವುದುಶರಣ ಜನ ಮಂದಾರ | ಕರುಣಾಬ್ಧಿ ಹರಿಯೇ 3 ಮಧ್ವಮತ ಪದ್ಧತಿಗ | ಳುದ್ಧರಿಸ ಇವಳಲ್ಲಿಶ್ರದ್ಧೆ ಭಕುತಿಯು ಜ್ಞಾನ | ಮಧ್ವಮತದೀಕ್ಷಾವೃದ್ಧಿಗೈಸಿವಳಲ್ಲಿ | ಶುದ್ಧ ಆನಂದಾತ್ಮಅಧ್ವರೇಡ್ಯನೆ ಅನಿ | ರುದ್ಧ ಮೂರುತಿಯೇ 4 ಮೋದ ಮೋದ ಬಡಿಸಿವಳಾ 5
--------------
ಗುರುಗೋವಿಂದವಿಠಲರು
ಮೂರ್ತಿ ನೀ ಕರುಣಿಸೊ ಪ್ರಭುವೇ ಪ ಎಲ್ಲೆಲ್ಲಿ ನೋಡಲಲ್ಲಿಲ್ಲಿ ನಿಮ್ಮಯ ಕೀರ್ತಿಯನು ಮೊರೆಹೊಕ್ಕ ಸುಜನರ ಪೊರೆವರೆಂಬ ಬಿರುದು ಕೇಳಿ ತ್ವರಿತದಿಂದಲಿ ಬಂದೆನೋ ಭರದೀ ಹಾರೈಸು ಕರುಣಾ ಶರಧೀ 1 ಇಷ್ಟಾರ್ಥಗಳನಿತ್ತು ಸಲಹಿದೆ ತುಪ್ಪರಾಗುತಲವರ ಕಷ್ಟಗಳನೇ ಕಳೆದೆ ಉದ್ಧರಿಸಿದೆ ಅಷ್ಟ ಸೌಭಾಗ್ಯವ ಕೊಟ್ಟು ರಕ್ಷಿಸಿದೇ - ಕೈಬಿಡದೇ 2 ಅಡಿಗಳಿಗೆರಗುತಲಿ ನುಡಿ ನುಡಿಗೆ ತುತಿಸಲಿ ಬಿಡದೆ ನಿನ್ನನು ಕೊಂಡಾಡುತಲಿ ತಡಮಾಡದೆ ಯಡರುಗಳ ಪರಿಹರಿಸಿದೆ ನಿಮ್ಮ ಮಹಿಮೆಗೆ ಸರಿಗಾಣೆ ಭೂಮಂಡಲದೊಳಗೇ ಪ್ರಭವೇ 3
--------------
ರಾಧಾಬಾಯಿ
ಮೂರ್ತಿ ಪ ಪಾದ ನಂಬಿದ ದಾಸನ ಮೇಲೆ ಅ ಎಡರಿಗಾಗುವರಿಲ್ಲ ಕಡನ ನಂಬುವರಿಲ್ಲಬಡವನೆಂದು ವಸ್ತ್ರವ ಕೊಡುವರಿಲ್ಲದೃಢದೊಳಿದ್ದರು ಬವಣೆ ಬಂದೊಡನೆ ಕಾಡುವುವುಒಡೆಯ ಕಂಡೂ ಕಾಣದಿರುವುದುಚಿತವಲ್ಲ1 ಮೊರೆಯ ಕೇಳುವರಿಲ್ಲ ಸಿರಿವಂತ ನಾನಲ್ಲಪರಮಾತ್ಮ ನಿನ್ನೊಳಗೆ ನಾನರಿತಿಲ್ಲಬೆರೆತುಕೊಂಡಿರಲು ಸಜ್ಜನರ ಗೆಳೆತನವಿಲ್ಲಪರಮಹಂಸನೆ ಹರಿಸೊ ಇಂಥ ಕೊರತೆಗಳೆಲ್ಲ 2 ನೀಲವರ್ಣದ ಲೋಲ ಕಾಲನವರಿಗೆ ಶೂಲಬಾಲ್ಯದಿ ಯಶೋದೆಯ ಹಾಲ ಸವಿದ ಗೋಪಾಲನಾಲಗೆಗೆ ನಿನ್ನ ವಿಶಾಲ ಅಷ್ಟಾಕ್ಷರಿಯನಿತ್ತುಪಾಲಿಸೋ ಶ್ರೀ ಕಾಗಿನೆಲೆಯಾದಿಕೇಶವನೆ3
--------------
ಕನಕದಾಸ