ಒಟ್ಟು 422 ಕಡೆಗಳಲ್ಲಿ , 63 ದಾಸರು , 380 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೇಷದೇವರು ಸ್ಮರಿಸುವೆ ಹರ ವಟತರುಣ ಮೂಲದಿ ಮೃಗಚರ್ಮತಳದಿ ಕೂತು ಹರಿಯ ಭಜಿಪೆನೆ ಪ ನಾಲ್ಕು ರೂಪಗಳನ್ನು ಸ್ವೀಕರಿಸುತ ದಕ್ಷಆ ಕಥಾರಂಭದಿ ಕೂತು ಕೇಳಿದನೇ 1 ಶುಕ ಕೂಸು ದ್ರೋಣನು ದೂ-ರ್ವಾಸ ಮುನಿಪ ಜೈಗೀಷವತಾರಾ 2 ಈಸು ಕರುಣಕೆನ್ನ ಏಸು ಜನ್ಮದ ಪುಣ್ಯಶೇಷ ಒದಗೆ ಇಂದಿರೇಶನ ಶಯ್ಯಾ 3
--------------
ಇಂದಿರೇಶರು
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಶ್ರದ್ಧಾ ಪಾಲಿಸೇ ಮಾತೇ | ನಂಬಿದೆ ಶೇಷಾರುದ್ರಾದಿ ಸುರ | ವಿನುತೇ ಪ ಉದ್ಧರಿಸುವುದೆನ್ನ | ಅವಿದ್ಯವ ನೀಗಿ ಹೇಬುದ್ಯಭಿಮಾನಿ ಸ | ದ್ಬುದ್ಧಿ ಪ್ರದಾತೇ ಅ.ಪ. ಪುತ್ಥಳಿ ಬೊಂಬೆ 1 ಕೃತಿ ಕುಮಾರಿ | ಬ್ರಹ್ಮಮಾನಸಮಂದಿರೆ ಸಜ್ಜನೋದ್ಧಾರಿ ||ಚಂದಿರೆ ಎನ ಮನ | ಮಂದಿರದಲಿ ಬಲುಸುಂದರ ಶ್ರೀ ಗೋ | ವಿಂದ ಪಾದಾಬ್ಜವತೋರೆ - ಹೇ ನೀರೆ - ವೈಯ್ಯಾರೆ | ಸದ್ಗುಣಗಣ ಗಂಭೀರೆ 2 ನಿತ್ಯ ಕಲ್ಯಾಣೀ ||ಚತುರ ಮೂರುತಿ ಗುರು | ಗೋವಿಂದ ವಿಠಲನಸತತ ಭಜಿಪ ಮತಿ | ಸುಸ್ಥಿರದಲಿ ಕೊಡುನೀನೆ - ಬಲು ಜಾಣೆ :ಎನ್ನಾಣೆ | ಪತಿತ ಪಾವನ್ನೇ 3
--------------
ಗುರುಗೋವಿಂದವಿಠಲರು
ಶ್ರೀ ಮಧ್ವಾಚಾರ್ಯರು ಸ್ಮರಿಸು ಸಂತತ ಗುರುಗಳಾ ಬಿಡದೆ ಅನುದಿನಾ ಪ ವಾತ ಭೀಮನ ಒಡೆಯ ವೇದವ್ಯಾಸಯುತ ಸಾರಂಗಧರನಆ ಪ್ರೇಮದಿಂದಲಿ ಭಜಿಪೆನಡಿಗಳ ಬಿಡದೆ ಅ.ಪ. ಮಂದ್ರಜಾಸನ ಸುತನ ವಚನ ಕೊಂಡು ಧರೆಯೊಳು ಬಂದು ಭಜಿಸುತ ಪೊಂದಿಪವರ ವೃಂದ ಹರಿಸಿ ಸುಗುಣ ಸುವೃಂದಗಳಿಗೆ ಬಂಧುಪರ ಗೋವಿಂದನೆಂಬುದ ಬೋಧಿಸಿದನ 1 ಮಂಗಳಾಂಗನ ಕೊಂಡು ತುಂಗಕುಲ ತೀರ್ಥರ ಶರದೀ ಬಂದೂ ಭೂಮಿಯೊಳು ಅನಂಗಪಿತನ ಒಲಿಸಿರಂಗರಾಜನ ದೂತನಿಂದಾ ವಿದ್ಯವಾ ಕೊಂಡು ಬಂದು ಪರಮಾದರದಿ ವ್ಯಾಸತ್ರಯಯುತ ಸುಧೆಯನಗರದನಂಘ್ರಿಯಾ 2 ರಘುಕುಲಾ ಜಲಧೀಗೆ ಜಲಜವೈರಿಯಂತೊಪ್ಪುವಾಮಾರನಯ್ಯ ಶಿರಿ ಪರಶು ಪಾಣೀ ಯಾತ ಜಡೆಧಾರ ತುರೀಯನಾಶ್ರಯಿಸೀ ಬಾಣರೂಪವಾ ಬಿಡದೆಬಾಣವಾ ಗುರಿ ಮಾಡಿಬಾಣವರದನ ಸರಿಯೆಂದೆನಿಸಿ ಬಾಣ ಭೇದವನೆ ಬೋಧಿಸಿಬೋಧತೀರ್ಥರ ಮತಾಧಿಪನ ತಂದೆವರದಗೋಪಾಲವಿಠಲನಭಜಕಾ 3
--------------
ತಂದೆವರದಗೋಪಾಲವಿಠಲರು
ಶ್ರೀ ರಘುಕಾಂತ ತೀರ್ಥರ ಸ್ತೋತ್ರ ಪದಕಂಜಸಾರಿಭಜಿಪ ಭಕ್ತರ ದೂರವೋಡಿಸುವ ಶಕ್ತ ವಿರಕ್ತ ಪ ದಿನಕರ ಕುಲಜಾತ ವನಜಾರಾಧ್ಯಸು - ಮನಸವ್ರಾತ ಸನ್ನುತ ಇನಕೋಟಿಪ್ರಭೆಗಾತ್ರ ಮನಸಿಜ ಪಿತಸ - ನ್ಮುನಿಗಣನುತ ರಾಮಚಂದ್ರ ಪಾದಭೃಂಗ 1 ಯತಿಕುಲ ರತುನ ಭಕುತಸುರತರುವೆ ಸ - ದ್ಗತಿ ದಾತಾ ಜಿತಮದನ ಪತಿತಪಾವನ ಮುನಿ ಯತಿ ರಘುದಾಂತತೀ ಪಾದ ಪಂಕೇಜ 2 ಕಾಮಿತಫಲದ ನಿಸ್ಸೀಮ ಮಹಿಮ ಭಕ್ತ ಪ್ರೇಮ ಪಾವನ ಚರಿತ ಸಾಮಜವರದ ಶ್ರೀ ವರದೇಶವಿಠಲನ ಪ್ರೇಮ ಪಾತ್ರ ಮಹಾ ಮಹಿಮ ನಿಷ್ಕಾಮ3
--------------
ವರದೇಶವಿಠಲ
ಶ್ರೀ ರಮಣಿಯರಸ ಕಂ ಜೋದ್ಬವಾರ್ಚಿತ ಪುಣ್ಯ | ಚಾರುತರ ಯುಗ್ಮಪದ ರಂಜನಾಸುರ ಸಂ | ಹಾರ ಸುರ ಜನ ಪಾಲ ಪರಮಾನಂದ ಸಾ | ಕಾರನಲಿದುಪ್ಪವಡಿಸಾ ಹರಿಯೇ ಪ ಹರಿವೇಗ ಮಂಮೀರ್ವ ಹರಿಗಳೇಳಂಗಳದಲಿ | ಹರಿಯಾಗ್ರಜನನಿಂದ ಹರಿಪದದೊಳಗ ಜವದಿ ಹರಿವುತಿಹ ಝಗ ಝಗಿಪ ಹರಿಮಯದ ರಥದೊಳಗ | ಹರುಷಾದೊಳಡರ್ದು ಬಳಿಕಾ || ಹರಿದಿಕ್ಕಿ ಲಿಂದೊಗೆದು ಹರಿಜಗಳ ವಿಸ್ತರಿಸಿ | ಹರಿಯುಮೊದಲಾದವರ ಹರಿಸಿ ತೇಜವ ಜಗಕ | ಪರಿ ಹರಿಸಿ ಉದಿಸಿದಹರಿಯು ನರಹರಿಯೆ ಉಪ್ಪವಡಿಸಾಹರಿಯೇ1 ಪವನಜ ಖಗರಾಜ | ಭಜಿಪಧ್ರುವದ ಶಶಿರಾನುಜ ಭಿಷ್ಮಾ ತನ್ನ ಆ | ತ್ಮ ಜರಿತ್ತ ರಿಕ್ಷಪತಿ ರಜನೀಶ ವಾನ್ನರ | ಧ್ವಜ ವಿಧುರ ಅಂಬರೀಷಾ || ದ್ವಿಜ ಪುಂಡಲೀಕ ಪದ್ಮಜ ಮುಖ್ಯರಾದ ನಾ | ಶುಕ ಉದ್ಧವ ಬಲಿ ಜಯ ವಿಜಯರ ಕೂಡಿ | ಸುಜನರೈ ತಂದ | ರಂಬುಜ ಪದಕ ನಮಿಸೆ ವಾ | ರಿಜನಾಭ ಉಪ್ಪವಡಿಸಾ ಹರಿಯೇ 2 ಪಾಕ ಶಾಸನ ಅಗ್ನಿ ಆಕಾಳ ನೈಋತಿರ | ತ್ನಾಕರ ಪ್ರಭಂಜನಪಿ ನಾಕಿವರ ಕೌಬೇರ | ನಾಕೆರಡು ದಿಕ್ಕಿನವರೇಕೋ ಭಾವದಲಿಂದ ನಾಕ ಪುರಗಜ ಅಜಮಹಾ ಕೋಣ ಮನುಜ ಮಕ | ಹಾಕುರಂಗಂದಣವು ಗೋಕುಲೆಂದ್ರನು ಇಂತು | ವಾಹನ ವಿವೇಕದೇರಿ ಬಂದಿದೆ | ಲೋಕೇಶ ಉಪ್ಪವಡಿಸಾ ಹರಿಯೇ3 ಶ್ರೇಷ್ಠ ಕಶ್ಯಪ ಋಷಿ ವಶಿಷ್ಠ ಗಾರ್ಗೇಯ ತಪೋ | ನಿಷ್ಠ ವಿಶ್ವಾಮಿತ್ರ ಸೃಷ್ಠಿಯೊಳ ಜಲದ ಸಂ | ದಷ್ಟ ವರುಣನ ಗರ್ವ ಭಷ್ಟ ಮಾಡಿದಗಸ್ತಿ | ಅಷ್ಟಾದಶ ಧ್ವಯ ಬಾರಿ ಸೃಷ್ಟಿರ ಚನೆಯ ಕಂಡ | ತುಷ್ಟ ಬಕದಾಲ್ಪ್ಯ ಉತ್ಕøಷ್ಟ ಸನಕಾದಿಗಳು | ದೃಷಮಾನಿಸರಾಗಿ ಮುಟ್ಟಿಸ್ತುತಿ ಸುತಲಿದೇ | ಕೃಷ್ಣ ನೊಲಿ ದುಪ್ಪವಡಿಸಾ ಹರಿಯೇ 4 ವರ ವಾಮ ದೇವಾತ್ರಿ ಪರಮಗಾಲ ವನುಸೌ | ಭರಿಯ ಕೌಡಿಣ್ಯ ಸುಖ ಭರಿತ ಕೌಸಿರ ಮತಿ | ಪರಿಪೂರ್ಣ ಜಯಾಮುನೀರ್ವರು ಭರತರುಸುಗುಣ ಶರಧಿ ವೈಶಂ ಪಾಯನಾ|| ಸುರಪುರೋಹಿತ ಮಹಾ ಸುರರ ವಂಶಾವಳಿಯು | ತರಣಿಜ ಬುಧಾದಿಗಳ | ಕರದೊಳು ಸುಫಲವಿರಿಸಿ ಹರುಷಾದಲಿ ನಿಂದಿದೆ || ಪರಬೊಮ್ಮ ಉಪ್ಪ ವಡಿಸಾ ಹರಿಯೇ 5 ಡಮರುಧರ ಜಡೆಯೊಳಗ ಸಮುಲ್ಲಾಸದಲಿ ಮೆರೆವ ಅಮರ ನದಿ ಪಾಪಹರ ಸಮಕೃಷ್ಣ ವೇಣಿ ಸು | ವಿಮಲ ಗೋದಾವರಿ ಕುಮುದ್ವತಿ ಕಾವೇರಿ | ಶ್ರಮಹಾರಿ ತುಂಗ ಭದ್ರಿ || ಯಮುನಿ ಫಲ್ಗುಣಿ ಮಹೋತ್ತಮ ಸರಸ್ವತಿ-ಕಪಿಲ | ನರ್ಮದಿ ಮೊಲಾಗಿ ಅಮಲಗ್ರೋದ ಕವ | ಕ್ರಮದಿಂ ಕೊಂಡು ನದಿ ಚಮು ಬಂದಿದೇ ಪೊರಗ | ಕಮಲಾಕ್ಷ ಉಪ್ಪವಡಿಸಾ ಹರಿಯೇ6 ದಾರುಣೀ ಚರರಾದಾ ಚಾರುಗೋ ಬ್ರಾಹ್ಮಣರು | ಸಂರಕ್ಷಣೆಯ ಮಾಳ್ವ ಧೀರಯ ಯಾತಿ | ಮೇರು ಸಮ ಹರಿಶ್ಚಂದ್ರ ವೈರಾಟ ಪತಿಜನಕ | ಆರಾಯ ನಳ ನಹುಷನು || ಶೂರ ಹಂಸಧ್ವಜನು ಸಾರಿ ವಿಷ್ಟಕ್ಸೇನ | ವೀರ ಪಾಂಚಾಲನ - ಕ್ರೂರ ಚಂದ್ರಹಾಸ ಮ | ಯೂರ ಧ್ವಜ ಪ್ರಮುಖರಾರತದಿ ಬಂದರಿದೆ | ಕಾರುಣನೆ ಉಪ್ಪಾವಡಿಸಾ ಹರಿಯೇ 7 ವಾರಿಯೋಳ್ ನಡೆವಹತೇರಗಜ ಶೃಂಗರಿಸಿ | ಏರಿಬಂದಿಳಿದು ಮಹಾ ವೀರ ಭಟರೋಗ್ಗೀನೊಳು | ಬಾರಿ ಬಾರಿಗೆ ನಿಮ್ಮ ಚೀರುತ ಬಿರುದಂಗಳನು ಭೂರಿಜನ ಸಚಿದಣಿಸುತಾ || ಪಾರವಿಲ್ಲದ ಪಟಹ ಭೇರಿ ನಿಸ್ಸಾಳತಹ | ಳಾರವರಿದು ಊದುತಲಿ ಈ ರೀತಿ ನೃಪರದಳ | ಚಾರುವಾಲಗವ ಮನವಾರಗುಡುತಿದೆ ಪರಮ ಶೌರಿ ವಲಿದು ಪ್ಪವಡಿಸಾಹರಿಯೇ 8 ಕೇಣವನು ಗೊಳ್ಳದಿಹ ಜಾಣ ಕಲೆಯಿಂದ ಗೀ | ರ್ವಾಣ ಸ್ತ್ರೀಯರು ನೃತ್ಯ ಮಾಣುತಲಿ ಬರೆಕರದಿ | ವೀಣೆಯನು ತಾಂ ಪಿಡಿದು ವಾಣಿ ತುಂಬರ ಸುಪ್ರ ವೀಣನಾರದ ಗಣಪನು || ಶ್ರೇಣಿಯಿಂ ತೊಡಗೂಡಿ ತ್ರಾಣದಿಂದಲಿ ನಾಮ | ವಾಣಿಯಲಿ ವಚಿಸುತಿದೆ ಕಾಣಲ್ಕೆ ನಿಂದಿದೆ | ಏಣಾಂಕನುಜೆ ಮುಗಿದು ಪಾಣಿಯನು ಗುರು ಮಹಿಪತಿ ಪ್ರಾಣನೊಲಿದುಪ್ಪವಡಿ ಸಾ ಹರಿಯೇ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ರಾಘವೇಂದ್ರರು (4) ಈತನೆ ಶ್ರೀ ಪ್ರಲ್ಹಾದನು ಆಹ್ಲಾದಕರನು ಪ ಈತನೆ ಪ್ರಲ್ಹಾದ ಜಗನ್ಮಾತಾಲಕುಮಿಪತಿಯ ಗುಣವಭೂತಳದಲ್ಲಿ ತೋರಿ ಬಹು ನಿರ್ಭಿತಿಯಿಂದ ಮೆರೆದ ಗುರು ಅ.ಪ. ದುಷ್ಟ ಹಿರಣ್ಯಕ ಬಹುವಿಧದಲ್ಲಿ ನಿಷ್ಕರುಣಿಯಾಗೆಕಷ್ಟ ಬಡಿಸೆ ಸುತಗೆ ಜವದಲಿಸೃಷ್ಟಿಗೊಡೆಯ ಸ್ತಂಭದಿಂದ ದೃಷ್ಟನಾಗಿ ಅಸುರನಂದನಶ್ರೇಷ್ಠ ನಖದಿಂ ಬಗೆಯ ನಿಷ್ಠೆಯಿಂದ ನಮಿಸಿದ ಗುರು 1 ಶೂರ ಬಾಲ್ಹೀಕನೆನಿಸಿದ ಬ್ರಹ್ಮಣಮುನಿ ಪಾದಾರವಿಂದ ದಯದಿ ಭಜಿಸಿದಘೋರ ಮಾಯಾವಾದಿಗಳನು ವಿದಾರಣ ಮಾಡಿ ಸುಧಾಸಾರಪಾನ ಮಾಡಿ ವಿಭುದಚಾರು ಚಂದ್ರಿಕಾ ರಚಿಸಿದ ಗುರು 2 ಸಿಂಧುಶಯನ ಶ್ರೀ ರಮಾಪತಿ ವಿಠ್ಠಲನ ಭಕುತಿಯಿಂದ ಭಜಿಪ ರಾಘವೇಂದ್ರಯತಿಎಂದೆನಿಸುತ ಮಂತ್ರನಿಲಯ ಮಂದಿರವನು ಮಾಡಿ ಭಕುತವೃಂದದ ಪುರುಷಾರ್ಥಗಳನು ತಂದು ಕೊಡುವ ಕಲ್ಪದ್ರುಮನು 3
--------------
ರಮಾಪತಿವಿಠಲರು
ಶ್ರೀ ಲಕ್ಷ್ಮೀ ದೇವಿಯರು ಕಾಯೆ_ಕಾಯೆ _ ಶ್ರೀ ಹರಿಜಾಯೆ ಪ ಕಾಯೆ ಕಾಯೆ ಸಂತೋಷವೀಯೆ ಮೂರು ಜಗ ಕಾಯೆ ವಿಷ್ಣುಮನ ಛಾಯೆ ಭಕುತಿವರವೀಯೆ ನಿತ್ಯ ಎಳೆಕಾಯೆ ಸುಜನಗಣ ಧ್ಯೇಯೆ ನಿಗಮತತಿಗೇಯೆ ಮಾಯೆ ಅ.ಪ. ಶರಣು-ಶರಣು-ಶರಣು ಗುಣಭರಣಿ ಭವ ತರಣೀ ಶರಣು ತ್ರಿಗುಣ ಧಣಿ ಶರಣು ಸೊಬಗು ಖಣಿ ಶರಣು ನಿಗಮಧ್ವನಿ ಮಣಿ ಸಿರಿ 1 ಅಂಬೇ-ಅಂಬೇ-ಅಂಬೇ-ಅಂಬೇ ನಿರುತಹರಿ ಕಾಂಬೆ ಉರದಲಿಹೆ ಎಂಬೆ ಪಡೆದೆ ಜಗ- ವೆಂಬೆ ಭಕುತಿ ಜನಸ್ತಂಭೆ ಅಮಿತಶಶಿ ವಿಧಿ ಯಿಂಬೆ ತ್ರಿಗುಣ ಹರಿ ಕೃತಿ 2 ರಾಣೀ_ರಾಣೀ-ಶ್ರೀ ಅನಿರುದ್ಧನ ರಾಣಿ ಲಕ್ಷಣ ಶ್ರೇಣಿ ಪಂಕಜಪಾಣಿ ಭುಜಂಗ ಸು- ನಿತ್ಯ ಕಲ್ಯಾಣಿ ಮಂಗಳವಾಣಿ ದುಃಖವ ಕಾಣಿ ನೀ ಬಹು ಜಾಣಿ ವಲಿದಿಹ ಹರಿ 3 ಅಮ್ಮ-ಅಮ್ಮ-ನೀಜಗದಮ್ಮ ಅಮ್ಮ ಕಣ್ ತೆಗೆಯಮ್ಮ ಸಿರಿಸುರಿಸಮ್ಮ ಉರಿಹರಿಸಮ್ಮ ದಯಮಾಡಮ್ಮ ವಿಧಿಗುರುವಮ್ಮ ಭುಜಿಸೊಸೆಯಮ್ಮ ಹರಿಗ್ಹೇಳಮ್ಮ ದಕ್ಷಣೆ 4 ಶೀಲೆ-ಶೀಲೆ- ನಿರುತ ಹರಿಯ ಜಪ ಶೀಲೆ ಕುಂಕುಮ ವಾಲೆ ಇಟ್ಟಹೆ ಬಾಲೇ, ಚಂಚಲ ಲೀಲೆ ನತಜನ ಪಾಲೆ ಖಳರೆದೆಶೂಲೆ ಹರಿಗಿಹೆಮಾಲೆ 5 ಹೇತು-ಹೇತು-ಕಾರ್ಯ ಕಾರಣ ನೀ ಒಡವೆಗಳಾಗಿ ವಸ್ತ್ರಗಳಾಗಿ ಶಸ್ತ್ರಗಳಾಗಿ ಚರಣದಿ ಬಾಗಿ ಹರಿಗನುವಾಗಿ ಸಾಧಕಳಾಗಿ ಧೊರೆವಶಳಾಗಿ ಗಂಡನ ಭಜಿಪೆ 6 ಇಲ್ಲ-ಇಲ್ಲ-ಹರಿಯಗಲಿಕೆ ನಿನಗಿಲ್ಲ ಕ್ಲೇಶವು ಇಲ್ಲ ದೋಷಗಳಿಲ್ಲ ಪಾಶಗಳಿಲ್ಲ ಹರಿ ಬಿಡನಲ್ಲ ಸರಿಯಾರಿಲ್ಲ ಮುಕ್ತರಿಗೆಲ್ಲ ಒಡೆಯಳೆ ಚೆಲ್ವೆ ನೀ ಆಕಾಶೆ7 ನೀರೆ-ನೀರೆ-ಹರಿ ಸಮಾಸಮನೀರೆ ಘನ ಗಂಭೀರೆ-ಶ್ರುತಿಗಳ ಮೇರೆ ಮೀರುತ ಧೀರೆ ಹರಿಮನಸಾರೆ-ಪೊಗಳುವೆ ಬೇರೆ ಸಾಟಿಯು ಯಾರೆ-ಹರಿಪುರ ತೋರೆ ಕರುಣದಿ 8 ಕಂದ-ಕಂದ-ನಾನಿಹೆ ನಿನ್ನ ನಂದದ ಶ್ರೀ ಕೃಷ್ಣವಿಠಲನ ರಾಣಿ ಇಂದಿರೆಸಲಹೆ ಕುಂದುಗಳಳಿಸೆ ತಂದೆಯ ತೋರೆ ಚೆಂದದ ಭಕುತಿ ಮುಂದಕೆ ತಂದೂ 9
--------------
ಕೃಷ್ಣವಿಠಲದಾಸರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ವ್ಯಾಸರಾಯರು ನೋಡಿದೇ ನಾ ನೋಡಿದೆ ಪ ನೋಡಿದೆನೊ ಗುರು ವ್ಯಾಸರಾಯರ ನೋಡಿದೆನೊ ಶುಭಕಾಯರಾ ಮಾಡಿದೆ ಶಿರಬಾಗಿ ನಮನವ ಬೇಡಿದರ್ಥವ ಕೊಡುವ ವಡೆಯರ ಅ.ಪ ಭಿದುರಮಯವಾದ ವೇದಿಕಾಗ್ರದಿ ಚದುರದಿಕ್ಕಿಲಿ ಶೋಭಿಸುವ ಶುಭ ತ್ರಿದಿಶವರ ಮುಖ ದಿವಿಜರೈವರು ಮುದದಿ ಇರುತಿಹರಿವರ ಮಧ್ಯದಿ ಪದುಮನಾಭನ ಚತುರರೂಪವÀ ಹೃದಯ ಮಂದಿರದಲ್ಲಿ ಭಜಿಸುವ ಪದುಮನಾಭನ ಪ್ರೀತಿಪಾತ್ರರ ಸದಮಲಾಗುರು ವ್ಯಾಸರಾಯರ 1 ಶ್ರೀನಿವಾಸನು ಶಿರಸಿನೊಳಗಿಹ ಆನನಾಗ್ರದಿ ಬಾದರಾಯಣ ಙÁ್ಞನಮಯ ಶಿರಿ ಹಂಸ ಅಚ್ಯುತ ಮೌನಿ ಕಪಿಲಾನಂತ ಭಾರ್ಗವ ಮಾನನಿಧಿ ಹಯಗ್ರೀವ ಹಂಸನು ದಾನವಾಂತಕ ರಾಮಚಂದ್ರ ಸ - ದಾನುರಾಗದಿ ತೆನೆಗಳಲ್ಲಿ ಭಾನುನಂದದಿ ಪೊಳೆವ ಬಗೆಯನು 2 ಮಧ್ಯಭಾಗದಿ ಕೃಷ್ಣದೇವನು ಇದ್ದು ಇವರನು ಸೇವೆ ಮಾಳ್ಪರ ಶುದ್ಧ ಮಾಡÀ್ಯವರರ್ಥ ಸರ್ವದ ಶಿದ್ಧಿಮಾಡಿ ಇವರನತಿ ಪ್ರ ಶಿದ್ಧಮಾಡಿವರಲ್ಲಿ ಪ್ರತ್ಯಕ್ಷ ಸಿದ್ಧನಾಗಿರುತಿಹನು ನಮ್ಮ ಗುರು ಮಧ್ವಗುರುಜಗನ್ನಾಥವಿಠಲನ ಮಧ್ಯಹೃದಯದಿ ಭಜಿಪ ಗುರುಗಳ 3
--------------
ಗುರುಜಗನ್ನಾಥದಾಸರು
ಶ್ರೀ ಶ್ರೀ ರಾಘವೇಂದ್ರತೀರ್ಥರು ಆನೆಂತು ತುತಿಪೆ ನಿನ್ನ - ಮಂಚಾಲಿ ರನ್ನ ಪ ಆನೆಂತು ತುತಿಪೆ ನಾ - ಮಾನಮೇಯದಿನಿಪುಣಗಾನ ವಿಶಾರದ - ಶ್ರೀನಿವಾಸನ ದೂತ ಅ.ಪ. ಕೃತಯುಗದಲಿ ನೀನು | ದಿತಿಜ ವಂಶದಿ ಬಂದುವಿತತ ವಿಶ್ವಾಧಾರ | ಕೃತಿಪತಿಯ ತುತಿಸಿ ಮುಕುತಿ ಪಥಕೆ ಸತ್ತರ ತಮ ಪಂಚಭೇದಮತಿಯೆ ಸಾರ್ಥಕವೆಂದು | ಹಿತದಿಂದ ಸಾಧಿಸೆಮತಿಭ್ರಾಂತನಾದಂಥ | ದಿತಿಜ ಗುರುವು ತಾನುಖತಿಯಿಂದ ನೋಡುತ್ತಲೀ || ಬಾಲಕರೆಲ್ಲಹತಭಾಗ್ಯರೆನ್ನುತ್ತಲೀ | ನೃಪಗೆ ಪೇಳೆಖತಿ ನಿನ್ನೋಳ್ ತೋರುತ್ತಲೀ | ದಂಡಿಸೆ ನಿನ್ನಪಿತಗೆ ಬುದ್ಧಿಯ ಪೇಳ್ದ | ಅತುಳ ಪರಾಕ್ರಮೀ 1 ಕಡು ವೇಗದಲಿ ಬಂದ | ಶಂಡ ಮರ್ಕನ ಕಳುಹಿಒಡ ಹುಟ್ಟಿದವನನ | ದಾಡೆದಂತಗಳಿಂದಬಿಡದೆ ಶೀಳಿದ ಹರಿಯ | ದೃಢದಿ ಪೂಜಿಪೆ ನೀನುಬಿಡು ಬಿಡು ಈ ಮತಿ | ಮೃಡನೆ ನಮ್ಮಯ ದೇವಪುಡುಕಿ ಆ ಹರಿಯನ್ನೆ | ಖಡುಗದಿಂದಲಿ ಅವನಕಡಿದು ಹಾಕುವೆನೆನ್ನುತ್ತ || ಕರೆದು ನಿನ್ನಕಡು ಭಾಗ್ಯ ಕೋ ಎನ್ನುತ್ತ | ಪೇಳಲು ನೀನುಮಿಡುಕದೆ ಬೇಡೆನ್ನುತ್ತ | ಬುದ್ದಿಯ ಮಾತದೃಢದಿ ಪಿತಗೆ ಪೇಳ್ದೆ | ಬಿಡೆನು ಹರಿಯ ಎನ್ನುತ್ತ 2 ಸಹೋದರಿ | ವರಲಕ್ಷ್ಮಿ ಮಾತೆಯಸ್ಮರಿಸಿ ಜೀವಿಸೆ ಅವನೂ || ರಕ್ಕಸ ನೋಡಿಭರದಿ ಖಡ್ಗವ ಸೆಳೆದೂ | ತೋರೊ ಕಂಬದಿಹರಿಯ ಎಂದು ಒದೆದೂ | ನಿಲ್ಲಲು ಪಿತಗೆನರಹರಿ ರೂಪವ ತೋರ್ದೆ | ಕ್ರೂರನ ಜರಿದೂ 3 ದಿಟ್ಟ ತರಳನ ಸಲಹೆ | ಗಟ್ಟಿ ಕಂಬದಿ ಬರೆಛಟ ಛಟ ಶಬ್ದಾ | ಜಾಂಡ ಕಟಹ ಬಿಚ್ಚೆಕಠಿಣ ಖಳನ ಪಿಡಿದು | ಜಠರವ ಭೇದಿಸಿಹಠದಿ ಕರುಳಿನ ಮಾಲೆ | ಕಂಠದಿ ಧರಿಸುತ್ತತೃಟಿಯು ಬಿಡದೆ ತನ್ನ | ಹಠದಿ ಭಜಿಪನಿನ್ನಸ್ಫುಟದಿ ಕರದೋಳತ್ತಿದ || ಮುದ್ದಿಸಿ ಬಲುದಿಟ ಭಟ ಎನೆ ಎನಿಸೀದ | ಮಗನ ಮಾತುದಿಟವ ಜಗಕೆ ತೋರಿದ | ವೆಂಕಟನ್ನಪಟುತರ ವ್ಯಾಪ್ತಿಯ | ಮಹಿಮೆ ಸ್ಫುಟದಿ ತೋರ್ದ 4 ದಶಶಿರ | ದೂತ ಹನುಮನ್ನವ್ಯಥೆಯ ಪಡಿಸೆ ಪೋಗಲೂ || ಖತಿಯಲಿ ಲಂಕೆಹುತವಹನಿಗೆ ಈಯಲೂ | ವಾತನ ನೀಪ್ರೀತಿಯಲ್ಲಾಶ್ರಯಿಸಲೂ | ಲಂಕೆಯ ಪುರನೀತಿಯಿಂದಲಿ ಆಳ್ದ | ಖ್ಯಾತ ದೂತನೆನಿಸಲೂ 5 ಪಾದ ಭಜಿಸಿದಿ 6 ಶೇಷಾವೇಶದಿ ಪುಟ್ಟಿ | ವ್ಯಾಸ ತೀರ್ಥರಾಗಿಮೀಸಲಾದ ಮತ | ದಾಶಯಗಳನೆಲ್ಲಸೂಸಿ ಪೇಳುತ್ತಲಿ | ಶೇಷಾಚಲದಿ ಶ್ರೀನಿವಾಸನ ದ್ವಾದಶ | ವರ್ಷ ಸೇವಿಸಿ ನೃಪತೀಶನ ಕುಹುಯೋಗ | ಲೇಸಾಗಿ ಕಳೆಯುತಆಶುಗತಿಯ ತತ್ವ ಮತವ || ಸ್ಥಾಪಿಸಿ ಬಲುಮೀಸಲು ತರ್ಕತಾಂಡವ | ನ್ಯಾಯಾಮೃತಭೂಸುರರ್ಗಿತ್ತು ನಾಯಕರ | ಪುರಂದರದಾಸರಾಯರ ಮಾಡ್ದ | ದಾಸ ಪಂಥೋದ್ಧಾರ 7 ವಿಹಂಗ ವಾಹನ ಶ್ರೇಷ್ಠನೂ || ಎಂದೆನಿಸುತ್ತತುಂಗ ತೀರದಲಿ ನೀನೂ | ರಾಮರ ಪಾದಭೃಂಗನೆಂದೆನಿಸಿ ಇನ್ನೂ | ವ್ಯಾಖ್ಯಾನದಿಶೃಂಗರಿಸಿದೆ ನಿನ್ನ | ಬಿಂಬ ಮೂರುತಿಯನ್ನೂ 8 ಮಾಸ ಭವ ವನಧಿಯತರಣೋಪಾಯವ ತೋರುತ್ತ | ಪವನಾಂತಸ್ಥಗುರುಗೋವಿಂದ ವಿಠಲನೆಂಬಾತ | ಗುಣ ಪೂರ್ಣಸರ್ವೋತ್ತಮನೆನ್ನುತ್ತ | ಕೀರ್ತಿಪೆ ನೀನು ನಿರುತ9
--------------
ಗುರುಗೋವಿಂದವಿಠಲರು
ಶ್ರೀಕರಾರ್ಚಿತ ವಿಠಲ | ಸಾಕ ಬೇಕಿವಳಾ ಪ ವಾಕು ಮನ್ನಿಸುತಾ ಅ.ಪ. ಕಂಸಾರಿ ತವಪಾದಪಾಂಸು ಸೇವಾ ಸಕ್ತೆ | ಸಂಶಯ ನಿರಹಿತಾಅಂಶ ಆವೇಶ ಅವ | ತಾರಗಳ ತಿಳಿಸುತಲಿಶಂಸನದಿ ತವನಾಮ | ಸಂಪ್ರೀತನಾಗೊ 1 ದುಷ್ಕರ್ಮಗಳ ಭಾದೆ | ದೂರಾಗುವಂತೆಸಗೊನಿಷ್ಕಾಮ ಕರ್ಮಕ್ಕೆ | ಮಾರ್ಗವನೆ ತೊರೋ |ಶುಷ್ಕ ಆಚಾರಗಳ | ತ್ಯಜಿಸುತ್ತ ತವನಾಮಅಕ್ಕರದಿ ಭಜಿಪಂಥ | ಚೊಕ್ಕಮನವೀಯೊ 2 ಶರ್ವವಂದ್ಯನೆ ದೇವ | ತವನಾಮ ಸಂಸ್ಕøತಿಯಸರ್ವದಾ ಸರ್ವತ್ರ | ಇವಳಿಗೊದಗಿಸುತಾಭವವನದಿ ಉತ್ತರಿಸೊ | ಭವರೋಗ ಭೇಷಜನೆದರ್ವಿಜೀವಿಯ ಕಾಯೊ | ಪವನಂತರಾತ್ಮ 3 ಸೃಷ್ಟಾದಿಕರ್ತನೇ | ಸುಗುಣಮೂರುತಿ ದೇವಕಷ್ಟಂಗಳ ಪರಿಹರಿಸಿ | ಕಾಪಾಡೊ ಹರಿಯೇಕೃಷ್ಣಮೂರುತಿ ದೇವ | ಕಾರುಣ್ಯ ಸಾಗರನೆಸುಷ್ಠಮನ ನಿಲಿಸೊ ತವ | ಚರಣದೊಳು ಹರಿಯೆ 4 ಸೂಚಿಸಲು ತೈಜಸನು | ಯೋಚನೆಯ ಕೈಕೊಂಡುವಾಚಿಸಿಹೆ ಅಂಕಿತದಿ | ದಾಸ ಸದ್ವೀಕ್ಷಾ |ಮೋಚ ಕೇಚ್ಛೆಯ ಮಾಡಿ | ಕೈಪಿಡಿಯೊ ಈಕೆಯನುಖೇಚರಾಂತಕ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ