ಒಟ್ಟು 15236 ಕಡೆಗಳಲ್ಲಿ , 134 ದಾಸರು , 5865 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಸಂಸಾರ ಶರಧಿಯ ಗುರು ಅಂಬಿಗ ದಾಟಿಸಿದಶಿವನ ಮಾಡುತಲೆನ್ನ ಮುಕ್ತಿಗೇರಿಸಿದ ಪ ಬಯಕೆಗಳೆಂಬ ತೆರೆಯು ತಾಪತ್ರಯಗಳೆ ಲಹರಿಯುಪ್ರಿಯಗಳೆಂಬುವೆ ನೊರೆಯು ಕ್ಲೇಶವೆಂಬುದೆ ಹರಿಯು 1 ತಿಳಿವು ಇಲ್ಲದ ಮಡುವು ಕಸಿವಿಸಿ ಎಂಬುದೆ ದಡವುಬಲು ಅವಿವೇಕವೆ ಗುಡುಗು ಸುಖದುಃಖಗಳೆಂಬುವು ತೆರೆಯು 2 ಸುಳಿ 3 ಸಂದಣಿಯೆಂಬುವು ಜಲಚರವು ಸಡಗರವೆಂಬುದೆ ತಳವುಹೊಂದಿಹ ಚಿಂತೆಯೆ ದಡವು ಸ್ಥಿರವಿಲ್ಲದುದೇ ಗಡುವು 4 ಜ್ಞಾನದ ನಾವೆಗಳಿಂದ ಪ್ರಣವದ ಹುಟ್ಟುಗಳಿಂದದಾಟಿಸಿದ ಚಿದಾನಂದ ಅಂಬಿಗ ಛಲದಿಂದ 5
--------------
ಚಿದಾನಂದ ಅವಧೂತರು
ಭವಗಳನು ಖಂಡಿಸೆಂದು ಬಂದು ಬೇಡಿದೆ ಪ ಅರುಹಿನೊಳಗೆ ಇರಿಸಿಯೆನ್ನ ಮರವೆಯನ್ನು ಅಳಿಸೊಮುನ್ನಾ ಪರಮ ನೀನೆಯಾಗಿಯಾ ನಿಜದರುಹ ತೋರಿಸೈ 1 ಅಣುವಿನೊಳಗೆ ಅಣುವೆಯಾದ ಪ್ರಣವ ಜ್ಯೋತಿಯನ್ನು ತೋರೊ ತ್ರಿಣೆಯ ನೀನೆಯಾದಡೆ ನಾಂ ಪ್ರಣಿತನಾಗುವೇ 2 ಮೂರು ಐದರಿವುಗಳನ್ನು ಮೀರಿಹೋಗುವಂಥ ಮನವಾ ನಾರಿಕೈಯೊಳ್ ಕೋಟ್ಯಾತಕಿಂತು ನಟಿಸುತಿರುವಿಯೋ 3 ಪಾರುಗಾಣಿಸಯ್ಯ ನೀ ಸಂಸಾರ ಶರಧಿಯನ್ನು ಶಂಭು ಕೋರಿಕೆ ಈಡೇರಿಸಯ್ಯ ಅಪಾರಲಿಂಗವೇ 4 ಪರಮ ತತ್ವೋಕ್ತಾಧಿಕಾರಿ ಸುರಮುನೀಂದ್ರಾಕಾಶಪತಿ ಗುರುವು ತುಲಶಿರಾಮನೆ ತ್ವಚ್ಚರಣ ಶರಣಯ್ಯ5
--------------
ಚನ್ನಪಟ್ಟಣದ ಅಹೋಬಲದಾಸರು
ಭವದ ಬಂಧವಿನ್ನೆನಗೆ ಯಾಕೆ ಭವಹರಣ ನಾಮ ಎನ್ನ ಜಿಹ್ವೆಯೊಳಗೆ ಇರುತಿರಲು ಪ ದುರಿತ ಭೀತಿ ಯಾಕೆ ಎನಗೆ ಕರ್ಮದ ಲೇಪವ್ಯಾಕೆ ಎನಗೆ ಕುಲ ಚಲಗಳ್ಯಾಕೆ ಎನಗೆ ಮಡಿಯು ಮೈಲಿಗ್ಯಾಕೆ ಅನುದಿನದಿ ಪಾವನಾತ್ಮಕನ ನೆನವು ಎನ್ನ ಮನದೊಳಿರಲು 1 ನಷ್ಟ ಪ್ರಪಂಚಂಟಿನ್ನ್ಯಾತಹೆÉ ಬಿಟ್ಟ ಬಡತನ ತಂತಿನಗ್ಯಾಕೆ ಹುಟ್ಟು ಸಾವು ಕಷ್ಟ ಮತ್ತ್ಯಾಕೆ ಕೆಟ್ಟ ಯಮನ ಅಂಜಿಕಿನ್ನ್ಯಾಕೆ ಸೃಷ್ಟಿ ಕರ್ತನ ಶಿಷ್ಟಪಾದ ನಿಷ್ಠೆಯೆನ್ನೊಳು ಗಟ್ಟಿಯಿರಲು 2 ನಿತ್ಯ ನೇಮ ಪೂಜೆ ಯಾಕೊ ಮತ್ತೆ ಜಪ ತಪವು ಯಾಕೊ ನಿತ್ಯ ನಿರ್ಮಲಾನಂದ ರೂಪಿ ಸತ್ತು ಚಿತ್ತನಂದದಾತ ಮುಕ್ತಿದಾಯಕ ಶ್ರೀರಾಮ ಪಾದ ಭಕ್ತನಾಗಿ ನಾ ಮೆರೆಯುತಿರಲು 3
--------------
ರಾಮದಾಸರು
ಭವರೋಗ ಹರವಾದೊಂದೌಷಧಿತ್ರೈಭುವನ ವಿಖ್ಯಾತವಾಗಿದೆ ಬುದ್ಧಿವಂತರಿಗೆ ಪ ಚತುರ ವೇದಶಾಸ್ತ್ರ ಮೇಣಷ್ಟಾದಶವಾದಸ್ಮøತಿತರ್ಕ ಪೌರಾಣದಡವಿಯಲ್ಲಿಮತಿವಂತ ಮುನಿಗಳಾರಿಸಿ ತಂದು ತಾವುಪ್ರತಿಗಂಡು ಲೋಕಕ್ಕೆ ಹಿತವಾಗಿ ತೋರುವ 1 ಅಡವಿಯೊಳರಸಿ ಅಗಿಯಲಿಲ್ಲ ತಂದುಇಡಿದು ಚೂರ್ಣವಮಾಡಿ ಒಣಗಿಸಲಿಲ್ಲಕುಡಿದು ಕಹಿಖಾರವೆಂದೆನಲಿಲ್ಲ ನೋಡೆಬಡವ ಬಲ್ಲಿದರೆಲ್ಲರಿಗೆ ಸಾಧ್ಯವಾಗಿಪ್ಪ 2 ಪಥ್ಯಪಾನದ ನೇಮಗಳಿಲ್ಲ ಹೋಗಿಸ್ತೋತ್ರ ಮಾಡಿ ವೈದ್ಯನ ಬೇಡಲಿಲ್ಲನಿತ್ಯಸೇವಿಸೆ ಆಲಸ್ಯಗಳಿಲ್ಲ ನೋಡೆಮತ್ಯಾರ ಮಾತ ನಡೆಸುವ ಬಗೆಯಿಲ್ಲ3 ರಸಪಾಷಾಣಾದಿ ಮೂಲಿಕೆಯನು ತಂದುಕುಶಲದಿ ಶೋಧಿಪ ಕೋಟಲೆಯಿಲ್ಲಮಿಸುಣಿ ವರ್ಣದ ಭಸ್ಮ ತೈಲಗಳೆಂತೆಂಬಫಸಣೆಯಿಲ್ಲದೆ ಗಾಂಧರ್ವರು ಸೇವಿಪ 4 ಒಮ್ಮೆ ಸೇವಿಸೆ ಜನ್ಮ ಜನ್ಮಂಗಳ ದು-ಷ್ಕರ್ಮ ಸವೆದು ಸಕಲಾನಂದವೀವಘಮ್ಮನೆ ಕೃಷ್ಣರಾಯನ ಪುರದಲಿ ಬಿಡದÉಮ್ಮ ರಕ್ಷಿಪ ಮುದ್ದುಕೃಷ್ಣ ಕೃಷ್ಣಯೆಂಬ 5
--------------
ವ್ಯಾಸರಾಯರು
ಭಳಿರೆ ನಿಮ್ಮಯ ಗುಣವ ವರ್ಣಿಸಲಳವೆಜಲಧಿಸಮಗಂಭೀರ ಜಯತೀರ್ಥವರ್ಯ ಪ. ನಿನ್ನ ಕೃತಿಯೆಂಬಂಜನವ ದೃಷ್ಟಿಯೊಳಿಟ್ಟುಸನ್ನ್ಯಾಯ ವಿವೃತ್ತಿ ಮತ ಭೇದಗಳಲ್ಲಿಪನ್ನಂಗಶಯನನ ಭಕ್ತಿಯಿಂದ ಪ್ರ-ಸನ್ನವನೆ ಮಾಡಿ ಪುರುಷಾರ್ಥವೀವುದೊ 1 ಆವ ಪರಿಯಿಂದ ಅರ್ಜುನನು ರಣದೊಳು ಪೊಕ್ಕುದೇವನುದರದಿ ಕಂಡನೀ ವಿಶ್ವರೂಪಆವಂದದಿ ಗುರು ಶ್ರೀಮದಾನಂದತೀರ್ಥರಭಾವಗಳನೆ ತಿಳಿದೆ ಭಾಷ್ಯಾದಿಗಳಲಿ 2 ಬುಧರು ನಿನ್ನಯ ನ್ಯಾಯಸುಧೆಯ ಶ್ರವಣವ ಸ-ವಿದು ಉದ್ಧರಿಸಿ ಮೋಹಂಗಳ ಮುಪ್ಪುಗಳ ಕಳೆದುಒಂದಧಿಕ ಬಲದಿಂದ ಒದ್ದು ಮಾಯಿ ದಿತಿಜರನುಒದಗಿ ಕಾಮವೆಂಬ ಕ್ಷುಧೆಗಳ ಅಳಿವರೊ 3 ಮಧ್ವರಾಯರೆಂಬುದು ಮತ್ತೊಂದು ರೂಪದಲಿಇದ್ದು ನುಡಿದಂದದಲಿ ಸಿದ್ಧಾಂತವನು ನೀ ಉದ್ಧರಿಸಿ ಲೋಕದಲಿಅದ್ವೈತ ಮತದವರ ಉದ್ಯೋಗದಿಂದ ಬಲುಮುಗ್ಧರನು ಮಾಡಿದೆ4 ಬರಿದೆ ಮಾತುಗಳಿಂದ ಬಂದ ವಿದ್ಯಾರಣ್ಯನಮರುಳು ಮಾಡಿದೆ ಗ್ರಂಥsÀಕರಣದಿಂದ ಪರರನರಿಗಳನು ಮಾಡಿದಾಶ್ಚರ್ಯ ಕಾರಣಪುರುಷವರ ಹಯವದನನ ಪಾದಸರಸಿಜಭೃಂಗ 5
--------------
ವಾದಿರಾಜ
ಭಳಿರೆ ಮೆಚ್ಚಿದೆ ರಮಣಿ ಒಳಿತು ನಿನ್ನಯ ವಾಣಿ ಬಲುಹು ತೋರಿದೆ ತರುಣಿ ಒಲಿದೆ ರಾಣಿ ಬಳಬಳನೆ ಕಣ್ಣೀರನಿಳಿಸುತಳುತೆ ಕೋರಿದುದ ತಂದೀಯಲಾರದಿಹ ಪುರುಷರಂ ದೂರುವುದೆ ನಾರಿಯರ ಧರ್ಮವೇನು ಉಡುಪುತೊಡುವೆಂದೆನುತ ಸಡಗರದಿ ಹಿಗ್ಗುತ ಬಡಿವಾರ ತೋರುವುದೆ ನಡತೆಯೇನು ಸಜ್ಜೇಸುಖಶಯೈ ಯಿದನೆ ನಂಬಿ ಲಜ್ಜೆಯಲಿಕರ್ತವ್ಯವÀನೆ ಮರೆದು ದೌರ್ಜನ್ಯಕೀಡಾಗಬಹುದೆ ಸಾಧ್ವಿ ಸಜ್ಜನೆಯೆನಿಸು ಶೇಷಗಿರೀಶನೆಣಿಸು
--------------
ನಂಜನಗೂಡು ತಿರುಮಲಾಂಬಾ
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗವತರ ನೋಡುವಾ ಭಾಗ್ಯಸ್ವರೂಪಾ ಪ ಯೋಗಜನಗಳನು ರಾಗದಿ ಧ್ಯಾನಿಪ ಭೋಗಿಶಯನ ಸಂಪನ್ನ ಸದ್ಗುಣಪೂರ್ಣ ಭಾರ್ಗವೀಸತಿ ಬಿಡದೆ ವರಿಸಿರುವಾ ತಾಂಝಂ ತಂಝಂತ ತಂತಕನಾ ತಧಿಂಗಿಣತೋಂ ತಧಿಂಗೀಣತೋಂ ತಧಿಂಗಿಣತೋಂ 1 ನಿನ್ನಮುಖಕೇ ಸರಿಬಾರದೆ ಚಂದ್ರಮನು ಉನ್ನತ ಕಳಂಕಿಯಾಗಿರುತಿಹನೋ ಕಣ್ಣು ಸಾಹಸ್ರಕ್ಕೂ ಸರಿಬರದೆ ತಾಂಝಂ ತಂಝಂತ 2,ತಂಝಂ...ತಂತ 2 ಹೊಳೆವ ನಿನ್ನಯ ಕೊರಳಿಗೆ ಪಡಿಯಾಗದೆ ನಲಿದು ನಾರಾಯಣ ಎನ್ನುತ್ತಿದೆ ಶಂಖವು ನಳಿನಶರ ರೂಪಕ್ಕೆ ಸರಿಬರವೆ ತಾಝಂ ತಝಂತ 2,ತಝಂ...(ತ್ವಂತ) 3 ಭಕ್ತರು ಪಡೆವತಿ ಸೌಖ್ಯಕ್ಕೆ ಹೋಲದ ನಿತ್ಯವಾದ ಲೌಕಿದದಾಶೆ ಬಿಡಿಸಯ್ಯ ಮುಕ್ತಿಕೊಡುತೆನ್ನನ್ನು ನಿನ್ನಡಿಯ ತಾಝಂ ತಂಝಂತ ತಂತಕನಾ ತಧಿಗಿಣತೋಂ ತಧಿಗಿಣತೋಂ ತಧಿಗಿಣತೋಂ 4
--------------
ಶಾಮಶರ್ಮರು
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಭಾಗವತರಿಗೇ ನಮೋ ನಮೋ ಹರಿ | ಯೋಗವುಳ್ಳವರಿಗೆ ನಮೋ ನಮೋ ಪ ನಂದನದೊಳಗ ಅಳಿಕುಳಗಳು ಪುಳಕುತ | ನಲುವ ಪರಿಲಿ ಗುರುವಲುವಿನಲಿ | ಕಳವಳದಳಕವಗಳದುಳದಿಳೆಯೊಳು | ಹೊಳೆಯುತಲಿಹರಿಗೆ ನಮೋ ನಮೋ 1 ಸಿರಿ ಮದಜರಿದರಿಹರಿಯಂಕುರಮುರಿ | ದರಿಸಖರನು ಸರಿಯರಿದಿರುತಾ | ಪರಿಪರಿ ಮುಮ್ಮುಳಿ ತರುತರಿತರಿವುತ | ಚರಿಪರಿಗ್ಹರುಷದಿ ನಮೋ ನಮೋ | 2 ಸುಜನ ಕುಜನರೊಳಗ | ಘನವನು ಸಮತಿಳಿದನು ಭವದೀ | ಅನುದಿನ ಮಹಿಪತಿ ನಂದನ ಪ್ರಭುವಿನ | ನೆನೆಯುತಲಿಹರಿಗೆ ನಮೋ ನಮೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾಗೀರಥಿ ಭಾಗೀರಥೀ ದೇವಿ ಭಯ ನಿವಾರಣ ಗಂಗೆ ಸಾಗರ ನಿಜರಾಣಿ ಸಕಲ ಕಲ್ಯಾಣಿ ಪ ಒಮ್ಮೆ ಶ್ರೀವಿಷ್ಣು ಪಾದದಲಿ ಉದ್ಭವಿಸಿದೇ ಕರ ಪಾತ್ರೆಯಲ್ಲಿ ಬಂದೆ ಪಾದ ತೀರ್ಥವಾದಿ ಬ್ರಹ್ಮಾಂಡವೆಲ್ಲ ಪಾದನ್ನವೆಂದಿನಿಸಿದೆ 1 ದೇವಿ ನೀ ವಿಷ್ಣು ಪಾದದಲಿ ಉದ್ಭವಿಸಿದೆ ದೇವತೆಗಳೆಲ್ಲ ನಿಮ್ಮಾಧೀನವೊ ಆವ ಮಹಾದೇವನು ತಲೆಬಾಗಿರಲಾಗಿ ಮಹ ದೇವ ಶಿರಸಿನಲಿ ಉದ್ಭವಿಸಿದೆ ಜಗವರಿಯೆ 2 ದೃಷ್ಟಿಸಿ ನೋಡಲು ನೂರು ಜನ್ಮದ ಕೃತ್ಪಾಪ ಮುಟ್ಟಿದರೆ ಮುನ್ನೂರು ಜನ್ಮದ ಪಾಪವು ಮುಟ್ಟಿಮಾಡಲಿ ಬಂದು ಸ್ನಾನ ಮಾತ್ರದಿಂದ ಸುಟ್ಟುಹೋಗುವುದು ಸಹಸ್ರ ಜನ್ಮದ ಪಾಪ 3 ಜಹ್ನು ಋಷಿಯಿಂದಲಿ ಬಿದ್ದ ಕಾರಣದಿಂದ ಜಾಹ್ನವಿಯಂತೆಂದು ನೀ ಕರೆಸಿಕೊಂಡೇ ವನ್ನು ನೀ ಪಿಂತೆ ಪಾವನ ಮಾಡಬಂದೆ 4 ವಿಸ್ತಾರದಲಿ ಪೊಳಿವ ಮುತ್ತಿನಾ ಸರಗಳು ಮತ್ತೆ ರಂಗಮ್ಮ ಪವಡಿಸಿದ ನೋಡೀ ಮತ್ತೆ ಮಹಾಲಕ್ಷ್ಮಿಯೆ ಉರಸ್ಥಳದಲಿರಲಾಗಿ ಇತ್ತ ಶ್ರೀದವಿಠಲ ನನರಸಿ ಬಂದೆ 5
--------------
ಶ್ರೀದವಿಠಲರು
ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ. ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1 ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2 ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3 ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4 ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5
--------------
ಗಲಗಲಿಅವ್ವನವರು