ಒಟ್ಟು 11788 ಕಡೆಗಳಲ್ಲಿ , 134 ದಾಸರು , 6185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡುವುದಿಲ್ಲನ್ಯ ನಾನೇನು ನಿನ್ನ ನೋಡಿ ಕರುಣದಿ ಬಾರೋ ಭಜಕನ ತ್ರಾಣ ಪ ಬೇಡುತಕ್ಕುದನೆ ನಾ ಬೇಡುವೆನೆಲೆ ಸ್ವಾಮಿ ನೀಡುತಕ್ಕುದನೆ ನೀ ನೀಡಿ ಕಾಪಾಡಯ್ಯ ಮೃಡಮಿತ್ರ ಜಡಜಾಕ್ಷ ಒಡೆಯ ವೈಕುಂಠ ಅ.ಪ ಎನ್ನಮನೆ ಬಾಗಿಲವ ಕಾಯೆನ್ನದಿಲ್ಲ ಎನ್ನುಳಿಸು ತಂದೆಯನು ತರಿದೆನ್ನದಿಲ್ಲ ಅಣ್ಣನ್ನ ಕೊಲ್ಲಿರಾಜ್ಯಕೊಡು ಎನ್ನದಿಲ್ಲ ಎನ್ನ ಮನೆಯಾಳಾಗಿ ದುಡಿಯೆನ್ನದಿಲ್ಲ ನಿನ್ನ ದಾಸರ ಸಂಗವನ್ನು ಕರುಣಿಸಿ ಎನ್ನನನ್ಯರಿಗೆ ಬಾಗಿಸೆ ಮನ್ನಿಸಿ ಸಲಹೆಂಬೆ ಭಿನ್ನವೇನಿದರೊಳು ಉನ್ನತಮಹಿಮ 1 ಲಲನೆಯಳ ಕೊಡಿಸಣ್ಣನ್ಹೊಡಿದೆನ್ನದಿಲ್ಲ ಬಲವಾಗೆನ್ನಯ್ಯ ಬಂಧುಗಳ ನಾಶಕೆನ್ನೊದಿಲ್ಲ ಬಲಿದೆನ್ನಿಂ ತವ ಭಕ್ತ ನೋಡಿಸೆನ್ನದಿಲ್ಲ ಸುಲಭದೆನ್ನಿಂದ್ಹೆಡಮುರಿ ಕಟ್ಟಿಸಿಕ್ಕೆನ್ನದಿಲ್ಲ ಎಲೆದೇವ ತವಪಾದನಳಿನ ನಿರ್ಮಲಧ್ಯಾನ ನಿಲಿಸು ಸ್ಥಿರವಾಗೆನ್ನ ನಾಲಗೆಯೊಳನುದಿನ ಇಳೆಭೋಗದಳಸದೆ ಸಲೆ ಸುಖದಿ ಸಲಹೆಂಬೆ 2 ಭಿನ್ನವಿಲ್ಲದೆ ಬಾ ನೀ ಕರೆದಲ್ಲಿಗೆನೆನು ಎನ್ನ ಹೊಡೆತದ ಪೆಟ್ಟು ಸೈರಿಸೆಂದೆನೆನು ಉನ್ನತ ಕುಲಗೆಡು ಎನ್ನೊಳುಂಡೆನೆನು ಅನ್ಯಮಾತೊಂದು ನಿನ್ನ ಬಯಸಿ ಬೇಡೆನು ನಾನು ಅನ್ಯರನು ಬೇಡದಂತುನ್ನತ ಪದ ನೀಡಿ ನಿನ್ನ ಮೂರುತಿಯೆನ್ನ ಕಣ್ಣೊಳು ನಿಲ್ಲಿಸಿ ಬನ್ನಬಡಿಸದೆ ಕಾಯೊ ಎನ್ನಯ ಶ್ರೀರಾಮ 3
--------------
ರಾಮದಾಸರು
ಬೇಡುವುದೂ ಬಲು ಕಷ್ಟ ಪ ನೀಡದಿದ್ದವನೇ ನಷ್ಟ ಅ.ಪ. ನಾಚಿಕೆ ಎಲ್ಲನು ತೊರೆದು ಮಹಾ ನೀಚರಿಗೆ ಬಾಯ್ತೆರದು 1 ಕೊಟ್ಟಾರೆಂಬ ದುರಾಶಾ ಕ್ರಿಯಾ ಭ್ರಷ್ಟರರಿಯರೂ ಕ್ಲೇಶಾ 2 ಚಿತ್ತವೃತ್ತಿಯನು ಕಂಡೂ ಅಧಮರ ಹೊತ್ತುಹೊತ್ತಿಗೆ ಕಾಣಿಸಿಕೊಂಡು 3 ಗುಣಹೀನರ ಕೊಂಡಾಡೀ ಬಂದು ಕ್ಷಣಕ್ಷಣಕವರನು ನೋಡೀ 4 ಶ್ರೀದವಿಠಲನ ಬಿಟ್ಟೂ ಅಧಮಾಧಮರಿಗೆ ದೈನಬಟ್ಟು 5
--------------
ಶ್ರೀದವಿಠಲರು
ಬೇಡೆಲೊ ಜೀವಾ ಜನಿಸಲೆ ಬೇಡೋ ಪ ಬೇಡ ನಿಜಸುಖ ದೊರೆಯದು ನೋಡೋ ಅ.ಪ ಹೆಣ್ಣೋ ಗಂಡೋ ಆಗಿ ಮೆರೆಯುವೆಮಣ್ಣು ಹೊನ್ನಿಗೆ ನೀ ಹಾತೊರೆಯುವೆಉಣ್ಣುತ ಪ್ರಾರಬ್ಧವ ಬಾಯ್ದೆರೆಯುವೆಹಣ್ಣಾಗುವೆ ನೀ ಪರೀಕ್ಷೆ ಮಾಡೊ 1 ಆರು ಹಗೆಗಳು ಗಡ ಮುತ್ತುವವೊಮೂರು ತಾಪಗಳು ಕಡು ಹೊತ್ತುವವೊನೂರೊಂದೊಗಟಗಳಿರದೊತ್ತುವವೊಪಾರಾಗಲು ಬಿಡವೆಂದಿಗು ಕೇಡೋ 2 ಹುಟ್ಟು ಸಾವುಗಳ ಸುಳಿಯಲಿ ಸುತ್ತುವೆಒಟ್ಟು ಮರಳಿ ಸಂಚಿತವನು ಬಿತ್ತುವೆ ಗಟ್ಟಿಸಿ ಗದುಗಿನ ವೀರನಾರಾಯಣನೆಹುಟ್ಟಿಸಬೇಡೆಂದಿಚ್ಛಿಸಿ ಬೇಡೋ 3
--------------
ವೀರನಾರಾಯಣ
ಬೇರೊಬ್ಬರನು ಕಾಣೆನೋ ಪ ಗರ್ಭದೊತ್ತಿನಲಿ ಇರಿಸಿದವರಾರೋ ಕೈಕಾಲಸುತ್ತಿನರದಲಿ ಬಿಗಿದವರಾರೋ ನೇತ್ರವನು ರಚಿಸಿದವರಾರೋ ತುಂಬಿ ತುತ್ತುಗಳ ನಡಸಿದವರಾರೋ 1 ನೇಮದಲಿ ಕಲ್ಪಿಸಿದವರಾರೋ ಪಲ್ಲವೋರಣದಿ ಪವಣಿಸಿದವರಾರೋ ನಿರ್ಮಿಸಿ ನವದ್ವಾರವನು ತಿದ್ದಿದವರಾರೋ ಪಾಪಗಳ ಕಾವಲನೆ ಮಾಡಿದವರಾರೋ 2 ನೀಲ ಕುರುಳಿಸಿದವರಾರೋ ಪಲ್ಲವಿಸಿ ಪಸರಿಸಿದರಾರೋ ಅಲ್ಲಿ ತೊಟ್ಟಿಲೊಳಿಕ್ಕಿದವರಾರೋ ಮೈಮರೆತಿಹರು ಮೂಢಜನರು 3 ಪ್ರತಿಬಿಂಬಿಸುತ ಪರಿಪೂರ್ಣನೆನಿಸಲಾರೋ ನೆಂಬುದಲ್ಲದೆ ಮತ್ತದಾರೋ ಅಂಬರೀಶನೆ ಸಾಕ್ಷಿಯಲ್ಲದಾರೋ 4 ಪತ್ತು ಬಿಡಸದೇನೋ ನೀ ಪರೀಕ್ಷಿಸಿದ ಮಾತ್ರದಿಂದೆನ್ನ ಪಾಪಗಳು ಪೋಗವೇನೋ ಶ್ರೀ ಲಕ್ಷ್ಮೀ ರಮಣಗರಿದೇನೋ 5
--------------
ಕವಿ ಪರಮದೇವದಾಸರು
ಬೈಯದವನಿಗಿಂತಲೂ ಬೈಯುವವನೇ ಮೇಲು ಹೊಯ್ಯದವಗಿಂತಲೂ ಹೊಯ್ಯುವವನೆ ಮೇಲು ಪ ಬಾಯೆನಲು ಬರಲೊಲ್ಲೆ ಮಾಯಾಕಾರ ನಿನ್ನಅ.ಪ ಒಬ್ಬ ಧರಣಿಯನೊಯ್ದ ಒಬ್ಬ ಖಡ್ಗವ ಹಿಡಿದ ಒಬ್ಬ ಧರಣಿಯನೆ ಕದ್ದ ಒಬ್ಬ ಬೈದಾ ಉಬ್ಬಿ ನೀ ಸಂತಸದಿ ಅಬ್ಬರಿಸಿ ಪರಿದೈದೆ ಒಬ್ಬೊಬ್ಬರಿಗೂ ದಿವ್ಯ ದರ್ಶನವನು 1 ಜಾರನೆಂದರು ಕೆಲರು ಚೋರನೆಂದರು ಕೆಲರು ಪೋರನಿವನೆಂದರು ನಾರಿಯರು ಪಲರು ಆರೇನ ಬೈದರೂ ದೂರಿ ನಿಂದಿಸಿದರೂ ಸ್ಮರಿಸಿದಾ ನಿಮಿಷಾರ್ಧ ಹರಿ ನಿನ್ನ ಭಕ್ತರ 2 ಇರಬಹುದು ಹಸಿವು ಬಾಯಾರಿಕೆಗಳಿಂದ ಅರಿವು ನಿದ್ರಾ ನೀರಡಿಕೆಗಳ ತೊರೆದು ಅರಸುವಾ ಸಮಯದಲಿ ಬರುವೆ ನೀನದರಿಂದ 3 ಇಳೆಯನೇ ತೆತ್ತವನ ತುಳಿದು ಕೈಸೆರೆ [ಮಾಡ್ದೆ] ಹಳಿದು ನಿಂದಿಸಿದವನ ಬಳಿಗೆ ಹೋದೆ ಮುಳಿಸಿನಿಂದೊದ್ದವನ ಕಾಲುಗಳ ನೀತೊಳೆದೆ ಹಳಿವು ಬೈಗಳು ನಿನಗೆ ಹಿತವು ಮಾಂಗಿರಿಯ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬೊಮ್ಮ ಬಂದನೆಂದು ತಮ್ಮ ಲೋಕದಿ ನಮ್ಮ ಮಾರುತ ಬಂದನೆ ಧಿಮ್ಮಿ ಧಿಮ್ಮಿ ಧಿಮ್ಮಿ ಧಿಮಕು ಎನುತಲೆ ರಮ್ಮಿ ರಮಣಿಯರ ಕುಣಿಸುತ ಪ. ರುದ್ರ ಬಂದನೆಂದು ಸಿದ್ದಜನ ಕೂಡಿಪ್ರಸಿದ್ದ ಇಂದ್ರನು ಬಂದನೆ ಅಲ್ಲಿದ್ದÀ ಪರಿವಾರ ಎಲ್ಲ ಸಹಿತಾಗಿಶುದ್ಧ ಅಗ್ನಿಯು ಬಂದನೆ 1 ವಾಹನ ವರುಣ ಬಂದನೆರಮಣಿ ಗಂಗೆಯು ಬಂದಳೆ2 ವಾತ ಬಂದನೆಂದು ಖ್ಯಾತಿಯಿಂದಲೆಆತಪನು ಬಂದನೆ ವೀತ ದೋಷ ರಮೇಶನಲ್ಲಿಗೆ ನೂತನದ ಮುಯ್ಯ ನೋಡಲು3
--------------
ಗಲಗಲಿಅವ್ವನವರು
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು
ಬೋಧದ ಘನಮಳೆಯುಸುರಿದು ಮುಕುತಿಬೆಳೆಯು ಬಂದುದು ಪ ಮಾಯೆಯ ಬಲು ಬಿಸಿಲುತಾಪ ಕಾಯದೊಳಗೆ ಹೆಚ್ಚುತಿರಲು ಹೇಯವೆನಿಸಿ ಜನನಮರಣ ಮುಮುಕ್ಷುತ್ವ ಮೋಡಗವಿದು 1 ಸುವಿಚಾರದ ಮಿಂಚು ಹೊಳೆದು ಶ್ರುತಿಶಿರಗಳ ಗುಡುಗು ಹೊಡೆದು ಶ್ರವಣದ ಸುಳಿಗಾಳಿ ಬೀಸಿ ಭವತಾಪವ ಹರಿಸುತಿರಲು 2 ವೈರಾಗ್ಯದ ರಂಟೆ ಹೊಡೆದು ಶಮೆದಮೆಗಳ ಹರತೆಯಾಗಿ ಪರಮಾರ್ಥದ ಬೀಜ ಬಿದ್ದ ನರಜನ್ಮದ ಹೊಲದ ಮೇಲೆ 3 ದೃಷ್ಟಿಯೊಳಗಿನಾನಂದ ಸೃಷ್ಟಿಯಾಗಿ ತೋರಿ ಚಂದ ಶ್ರೇಷ್ಠನಾದ ಶಂಕರಗುರುವರನ ಸಹಜಕರುಣೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಬೋಧಿಸು ಗುರುವರನೇ ಆತ್ಮರೂಪನೇ ಬಾಧೆಯ ನೀಗುಸು ಬೋಧಾತ್ಮನೇ ಶಾಂತಿಯನೀವಾ ಭ್ರಾಂತಿಯ ಕಳೆವಾ ಏಕಾಂತಪೂರ್ಣ ನಿರಾತಂಕವಾದ ಚಿಂತೆದೂರಮಾಡುವಾ ಅಂತರಾತ್ಮಜ್ಞಾನವಾ ಸಂತೋಷದಿಂದ ತಿಳಿಸೈ ಮಹಾತ್ಮನೆ ಸದ್ಗುರುರಾಯಾ ಕರುಣಿಸು ಜೀಯಾ ಮಾಯಾ ಮಹಾಮೋಹನಿಧಿಯಾ ಜ್ಞಾನಬೋಧ ನೀಡುವಾ ಸ್ವಾನುಭಾವ ತೋರುವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ