ಒಟ್ಟು 607 ಕಡೆಗಳಲ್ಲಿ , 81 ದಾಸರು , 442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುನಾಮ ಗುರುವಂದಿತ ಶ್ರೀರಾಮ ಪ ಅಹಿಭೂಷಣ ನುತರಾಮ | ಮಹಿಜಾಪ್ರಿಯ ಶ್ರೀರಾಮ ಅ.ಪ ದಶರಥೇಂದ್ರ ಸುಕುಮಾರ | ನಿಶಿಚರಾಳಿ ಸಂಹಾರ | ಕೌಶಿಕ ಭಯ ಪರಿಹಾರ | ಪರಮಶೂರ ಶ್ರೀರಾಮ 1 ಮುನಿಗೌತಮ ಸತಿಪಾವನ | ಜನಕಾತ್ಮಜ ಮನಮೋಹನ | ಮುನಿಸನ್ನುತ ಸುರಜೀವನ | ವನಜೇಕ್ಷಣ ಶ್ರೀರಾಮ 2 ಜನಕಜಾ ಸುಮಿತ್ರಜಾಯುತ | ವನವನಾಂತರ ಸಂಚರಿತ | ಸನಕಾನತ ಶ್ರೀರಾಮ 3 ಭರತಾನತ ಪೂಜ್ಯಪಾದ | ಪರಮಾದ್ಭುತ ಶರ ವಿನೋದ | ಸುರಭೀಕರ ದೈತ್ಯಸೂದ | ಅಭಯಪ್ರದ ಶ್ರೀರಾಮ 4 ಖಚರಾಧಿಪ ಪ್ಲವಗೇಶ್ವರರಾಮ ವರದಾಯಕ ಭಯಹಾರಕ ರಾಮ | ಶುಭಕಾರಕ ಶ್ರೀರಾಮ 5 ನಿಶಿಚರ ಕಾಲಾಂತಕ ರಣಭೀಮ | ಸನ್ನುತ ಶ್ರೀರಾಮ 6 ಭುವನೋದ್ಧಾರಣ ಕಂಕಣ ರಾಮಾ | ಭುವನಾನಂದದ ಶ್ರೀರಾಮಾ 7 ದಾವಾನಲ ಸಮರಂಜಕ ರಾಮಾ | ರಾವಣಕುಲ ವಿಧ್ವಂಸಕ ರಾಮಾ | ಸೀತಾನಾಯಕ ಶ್ರೀರಾಮಾ 8 ರಾಕಾಚಂದ್ರ ಸುಧಾಕರ ರಾಮಾ | ಏಕಚಕ್ರಾಧಿಪ ರಘುರಾಮ | ಲೋಕಸುಖಂಕರ ಶ್ರೀರಾಮ 9 ಅಂಗದ ಹನುಮತ್ಸೇವಿತರಾಮ | ಮಂಗಳಕರ ಸೀತಾರಾಮ | ಮಾಂಗಿರಿನಿಲಯ ಶುಭಾನ್ವಿತ ರಾಮ | ಜಗವಂದಿತ ಶ್ರೀರಾಮ10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಮ್ಮನಿರಬಾರದೆ ಮನವೆ ನೀನು ಸುಮ್ಮನಿರಬಾರದೆ ಹಮ್ಮುಅಹಂಕಾರ ಹೆಮ್ಮೆಗಳೆದು ಪನ್ನಗಾದ್ರಿಯ ಧ್ಯಾನಮಾಡುತ್ತ ಪ ಚಿಂತೆಯನು ತೊರೆದು ಮನವೆ ಲಕ್ಷೀಕಾಂತನೊಳು ಬೆರೆದು ಅಂತರಂಗದಿ ಕಂತುಜನಕನ ಸಂತತವಿಟ್ಟು ಪಂತವನು ಬಿಟ್ಟು 1 ಆಸೆಯನು ತೊರೆದು ಮನವೆ ನೀ ಶ್ರೀಶನೋಳು ಬೆರೆದು ಘಾಸಿಯಾಗದೆ ವಾಸುದೇವನ ದಾಸನಾಗಿ ಉಲ್ಲಾಸದಿಂದಲೆ 2 ಯಾರು ಬೈದರೇನು ಈ ದೇಹ ಇನ್ಯಾರು ಕೊಯ್ದರೇನು ಘೋರಮಾಯೆ ದೂರಮಾಡಿ ನೀ ವಾರಿಜಾಕ್ಷನ ಪಾದವನು ಸೇರಿ 3 ಎಲ್ಲರಲ್ಲಿ ವಾಸುದೇವನಿಲ್ಲದಿಲ್ಲೆನುತ ಹುಲ್ಲು ಹುಳುವಿನೊಳು ಸೊಲ್ಲು ಪಾಡುತ್ತ 4 ಸೃಷ್ಟಿಯೊಳಗಧಿಕ ಮೂಡಲಗಿರಿ ಬೆಟ್ಟದೊಳಗಿರುವ ದಿಟ್ಟವೆಂಕಟನ ಮುಟ್ಟಿ ಭಜಿಸಿ ನೀ ಮಾಡಿದಷ್ಟು ಪಾಪವ ನಷ್ಟ ಮಾಡುತ್ತ 5
--------------
ಯದುಗಿರಿಯಮ್ಮ
ಸುವ್ವಿ ಪದ ಪಂಚಶರ ಪಿತನೆ ಅಹಿಮಂಚದಲಿ ಮಲಗಿಹನೆ |ಪಂಚಾನನಾದಿ ಸುರವಂದ್ಯ | ಸುರವಂದ್ಯ ದುರಿತಾರಿ |ಪಂಚಾಸ್ಯ ವದನ ಸಲಹೆಮ್ಮ 1 ಅಂಬುಜಾಸನ ವಾಯು ಶಂಭುಸುರಮುಖ ಪೂಜ್ಯ |ಅಂಬುಜಾನಾಭಿ ಅರ್ಕಾಭಾ | ಅರ್ಕಾಭಾ ಎನ್ನ ಕು- |ಟುಂಬ ಸಲಹುವದೊ ನರಸಿಂಹ 2 ಘೋರ ದುರಿತಗಳ ಪರಿಹಾರ ಮಾಳ್ಪರ ಕಾಣೆ |ನಾರಸಿಂಹನೆ ನಿನ್ನ ವ್ಯತಿರಿಕ್ತ | ವ್ಯತಿರಿಕ್ತ |ಕಾರುಣ್ಯಸಿಂಧು ಸಂಸಾರಾಬ್ಧಿಯಿಂದ ಕಡೆಗೆತ್ತೊ 3 ಕಲಿಕಲುಷದಿಂ ಮನಸು ಮಲಿನವಾಗಿದೆ ದೇವಉಳಿವ ಬಗಿ ಕಾಣೆ ಕಲಿಕಾಲ | ಕಲಿಕಾಲ ಕರುಣ |ದಲಿ ಸಲಹುವದು ನೀನೆ ಬಲ್ಲಿ 4 ನೀನೊಲಿದು ಕೊಟ್ಟದ್ದು ಏನಾದರೂ ಇರಲಿ |ಸಾನುರಾಗದಲಿ ಸವಿವಂಥ | ಸವಿವಂಥ ಮತಿ | ಇತ್ತು ಗುರು ಪ್ರಾಣೇಶ ವಿಠಲಾ ಪೊರಿಯಮ್ಮಾ5
--------------
ಗುರುಪ್ರಾಣೇಶವಿಠಲರು
ಸುಳ್ಳಿಗೆ ನಗರೇನೊರಂಗಯ್ಯನಿನ್ನ ಕಳ್ಳತನವ ನೋಡಿ ಪ. ಹಾರುವ ಹದ್ದನೇರಿ ತಿರುಗಾಡುವಿಜಾರಿಬಿದ್ದರೆ ತೆರನೇನೊ ಜಾರಿಬಿದ್ದರೆ ತೆರನೇನೊ ನಿನಗೆ ಬುದ್ಧಿಯಾರು ಹೇಳುವರೊ ಧರೆ ಮ್ಯಾಲ1 ಕ್ಷೀರ ಸಮುದ್ರಶಾಯಿ ಎಂದರೆ ಹಿಗ್ಗುವಿಯಾರು ಅರಿಯರು ನಿನ್ನ ಹುಳುಕುಯಾರು ಅರಿಯರು ನಿನ್ನ ಹುಳುಕು ಅತ್ತೆಮನೆ ಸೇರಿದವನೆಂದು ನಗತಾರೊ 2 ನೀರೊಳು ನಿನ್ನ ಮನೆ ಹಾವಿನ ಮ್ಯಾಲೆ ನಿದ್ರೆ ಹಾರುವ ಹದ್ದನೇರುವಿಹಾರುವ ಹದ್ದನೇರುವಿ ತಿರುತಿಂಬೊಮೂರು ಅಹಂಕಾರ ನಿನಗ್ಯಾಕೊ3 ಮಗಳ ಕೊಟ್ಟೆನೆಂದು ಮಮಕಾರದಿಂದಲೆಸುಗುಣ ಸಮುದ್ರ ಉಳುಹಿದಸುಗುಣ ಸಮುದ್ರ ಉಳುಹಿದ ಕಚ್ಚುವ ಶೇಷಖಗರಾಜನಿಂದ ಕೈಕಾಯ್ದ4 ಕರವ ಕರವ ನೆಗಹಿದ ಕಾರಣ ಹಾರುವ ಗರುಡ ಕೈ ಕಾಯ್ದ5 ಕಾಲ ಯವನನ ಕೂಡ ಕಲಹವ ಮಾಡಿಬಂದು ಮೂಲೆಲೆ ಹೋಗಿ ಅಡಗಿದಿಮೂಲೆಲೆ ಹೋಗಿ ಅಡಗಿದಿ ಮುಚಕುಂದ ರಾಯ ನಿಂತಾಗ ಉಳದೆಲ್ಲೊ6 ಮಧುವೈರಿ ನೀನು ಗೆಲಲಿಲ್ಲಮಧುವೈರಿ ನೀನು ಗೆಲಲಿಲ್ಲ ರಮಿಯರಸ ಮಧೂಕದಿಂದ ಅವರ ಮುಡುಹಿದ 7
--------------
ಗಲಗಲಿಅವ್ವನವರು
ಸುಳ್ಳು ಪೇಳುವೆ ನಿಮಗೆ ಸುಳ್ಳು ನಮ್ಮನೆ ದೈವ ಕಳ್ಳನ ಬಂಟರು ನಮಗೆ ಕಡೆ ಮೊದಲಿಲ್ಲಾ ಪ ನಾಮವಿಲ್ಲದೆ ಬೂದಿ ನೇಮ ಮಾಡೋದು ಸುಳ್ಳು ನಾಮವೆಂಬುದೆ ಬುದ್ಧಿ ಮಿಕ್ಕವೆಲ್ಲ ಸುಳ್ಳು 1 ಒಂದು ಅಹುದು ಎರಡು ಎಂದೆಂದಿಗೆ ಸುಳ್ಳು ಮುಂದರಿದು ನೋಡು ಯಿಂಥ ಅಂದವೆಲ್ಲ ಸುಳ್ಳು 2 ಸೃಷ್ಟಿಯ ಮತ್ತೊಬ್ಬ ಪುಟ್ಟಿಸುವುದೆ ಸುಳ್ಳು ಧಿಟ್ಟ ವಿಜಯವಿಠ್ಠಲನಲ್ಲದೆ ಶ್ರೇಷ್ಠನೆಂಬುವರು ಸುಳ್ಳು3
--------------
ವಿಜಯದಾಸ
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ
ಸ್ಮರಿಸು ಗುರು ಸಂತತಿಯನು ಮನವೇ ಪ ಪೊರೆವ ಹರಿ ಚತುರವಿಧ ಪುರುಷಾರ್ಥಗಳನಿತ್ತು ಅ.ಪ. ಪರಮಹಂಸಾಖ್ಯ ಹರಿ ಗುರುತಮನೆನಿಸುತಿಪ್ಪ ಪರಮೇಷ್ಠಿ ತತ್ಸುತರು ಸನಕಾದ್ಯರಾ ಕರಕಮಲ ಸಂಜಾತ ಕೂರ್ಮಾಸ ಜ್ಞಾನನಿಧಿ ಕೈವಲ್ಯ ಯತಿವರರ 1 ಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞ ಸೂನು ಸುತಪೋರಾಜ ವರಕುಮಾರಾ ಅಚ್ಯುತ ಪ್ರೇಕ್ಷರಂಘ್ರಿಗಳ ಆ ನಮಿಪೆನನವರತ ಭಕ್ತಿ ಪೂರ್ವಕದೀ 2 ಅಚ್ಛಿನ್ನ ಭಕ್ತ ಮರುತವತಾರ ಮಧ್ವಮುನಿ ಪ್ರೋಚ್ಚಾಬ್ಜನಾಭ ನರಹರಿ ಮಾಧವಾ ಸಚ್ಚರಿತ ಅಕ್ಷೋಭ್ಯ ಮುನಿಪ ಪ್ರತಿವಾದಿ ಭೂ ತೋಚ್ಛಾಟನವಗೈದ ಜಯತೀರ್ಥ ಗುರುವರರ 3 ವಿದ್ಯಾಧಿರಾಜ ರಾಜೇಂದ್ರ ಸುತಪೋನಿಧಿ ಜ ಯಧ್ವಜರ ಪುರುಷೋತ್ತಮ ಬ್ರಹ್ಮಣ್ಯರಾ ಮಧ್ವ ಸಿದ್ಧಾಂತ ಸ್ಥಾಪಕ ವ್ಯಾಸರಾಯ ಪ್ರ ಸಿದ್ಧ ಶ್ರೀನಿವಾಸಯತಿಗಳ ಪವಿತ್ರ ಪದ 4 ಲಕ್ಷ್ಮೀ ಕಾಂತರನ ಶ್ರೀಪತಿ ರಾಮಚಂದ್ರರನ ಲಕ್ಷ್ಮೀ ವಲ್ಲಭ ಲಕ್ಷ್ಮೀ ನಾಥಪತಿಯಾ ಲಕ್ಷ್ಮೀ ನಾರಾಯಣರ ಶ್ರೀ ರಘುನಾಥ ಸು ಭಿಕ್ಷುಗಳ ಜಗನ್ನಾಥ ಗುರುಗಳನಾ 5 ಮೂರ್ತಿ ವಿ ಶ್ರೀನಾಥ ಗುರುವರರ ಕರಕಮಲಜಾತ ವಿ ದ್ಯಾನಾಥ ಯತಿಗಳನು ಅನುದಿನದಿ ಮರೆಯದಲೆ 6 ವಿಧ್ಯಾಧಿರಾಜರ ಕವೀಂದ್ರ ವಾಗೀಶರ ಸ್ವ ಸಿದ್ಧಾಂತ ಸ್ಥಾಪಿಸಿದ ರಾಮ ಚಂದ್ರಾ ಅದ್ವೈತ ಕುಮುದ ದಿನಪ ವಿಬುಧೇಂದ್ರಾರ್ಯ ಸದ್ವೈಷ್ಣವಾಗ್ರಣಿ ಜಿತಾಮಿತ್ರ ಮುನಿವರರ 7 ರಘುನಂದನ ಸುರೇಂದ್ರ ವಿಜಯೀಂದ್ರ ಸುಧೀಂದ್ರ ವಾರಿಧಿ ರಾಘವೇಂದ್ರಾರ್ಯರಾ ನಿಗಮಾರ್ಥ ಕೋವಿದ ಸುಯೋಗೀಂದ್ರ ಸೂರೀಂದ್ರ ಜಗತೀತಳದಿ ಪ್ರಸಿದ್ಧ ಸುಮತೀಂದ್ರರ 8 ಸಾಧುಜನಸನ್ನುತ ಉಪೇಂದ್ರರಾಯರ ವೇದ ವೇದಾಂಗ ಚತುರ ವಾದೀಂದ್ರ ಯತಿಯಾ ದ್ಯಾದಾನಾಸಕ್ತ ವರದೇಂದ್ರ ಯತಿವರರ 9 ರಾಮವೇದವ್ಯಾಸರಂಘ್ರಿ ಕಮಲಗಳ ಹೃ ತ್ತಾಮರಸದೊಳು ಪೂಜಿಸಿದ ಬಗೆಯನ್ನು ಧೀಮಂತರಿಗೆ ತಿಳಿಸಲೋಸುಗದಿ ನವರತ್ನ ಹೇಮ ಮಂಟಪ ವಿರಚಿಸಿದ ಭುವನೇಂದ್ರರಾ 10 ಪವಮಾನ ಮತ ಪ್ರವರ್ತಕರೊಳುತ್ತಮರೆನಿಪ ಭವ ಗೆದ್ದಾ ಸುಬೋಧ ಸುಜನೇಂದ್ರರಾ ಅವನಿತ ದೊಳಗೆ ಅಭ್ಯಧಿಕರನ ಮಾಡಿ ಸ ತ್ಕವಿಗಳನೆ ಸಂತೈಸಲೆಂದು ಸ್ಥಾಪಿಸಿದವರಾ 11 ಹರಿಯ ಸಂಸ್ಮರಣೆ ಅಹರ್ನಿಶಿಗಳಲಿ ಮಹ ವಿಪ ತ್ಪರಿಹಾರಗೈಸುವುದು ಗುರುಗಳ ಸ್ಮರಣೇ ಪರಮ ಸೌಖ್ಯವನೀವದಾದಾವ ಕಾಲದಲಿ ಪೊರೆವ ಜಗನ್ನಾಥ ವಿಠ್ಠಲವೊಲಿದು ನಿರುತಾ12 ನವ ವೃಂದಾವನ
--------------
ಜಗನ್ನಾಥದಾಸರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ವಾಮಿ ಅವಧೂತ ಕಾವ ಕರುಣನೆ ಪೂರ್ಣ ನೀನೆ ಸದೋದಿತ ಧ್ರುವ ಕರುಣ ದಯದ ಹುದಯ್ಯ ನೀಆಧಾರ ಶರಣ ಜನರಿಗಹುದಯ್ಯ ನೀಆಧಾರ ತಾರಿಸುವ ಸ್ವಾಮಿ ಅಹುದಯ್ಯ ನೀ ನಿರ್ಧಾರ ಪರಮ ದಯಾನಿಧಿ ನೀ ಸುಙÁ್ಞನದ ಸಾಗರ 1 ಅನಾಥನಾಥನಹುದೊ ಪೂರ್ಣ ದೀನಾನಾಥ ಸನಾಥ ಮಾಡುತಿಹ್ಯ ಶ್ರೀಸದ್ಗುರು ನೀ ಸಾಕ್ಷಾತ ಅನಾದಿ ನಿಜವಸ್ತು ಅಹುದಯ್ಯ ನೀ ಪ್ರಖ್ಯಾತ ಮುನಿ ಜನರಿಗೆ ನೀ ಆನಂದ ಸುಪಥ 2 ದೇಶಿಕರ ದೇವನಹುದಯ್ಯ ಕೃಪಾಕರ ಲೇಸು ಲೇಸಾಗೆನ್ನ ಪಾಲಿಸುವ ನೀ ದಾತಾರ ಭಾಸುತಿಹ ಭಾನುಕೋಟಿತೇಜ ಮನೋಹರ ದಾಸ ಮಹಿಪತಿ ಗುರು ನೀನೆ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
ಹರಿ ಪರಮಾನಂದಾ ಗೋವಿಂದಾ ಪ ಪಾಲನ ಅಸುರ ವಿದಾರಣ | ವರಯದು ಕುಲನಿಧಿ ಚಂದ್ರಾ 1 ಅಜಮಿಳ ತಾರಣ ಅಹಲ್ಯೋದ್ಧಾರಣ | ಅಜಭವನನುತ ಶ್ರೀ ಮುಕುಂದಾ 2 ಮಹಿಪತಿ ನಂದನ ಅಹಿತ ಸಂಹಾರಣ | ಸ್ವಹಿತದಾಯಕ ಗೋಪೀ ಕಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಮುಖಿ ಹರಿವಾಣಿ ಹರಿವೇಣಿ ಹರಿಣಾಕ್ಷಿಹರಿಮಧ್ಯೆ ಹರಿಗಮನೆ ಪ ಹರಿಯ ನಂದನ ಸಖನೆನಿಪ ಅಹೋಬಲದಹರಿಯ ನೀ ತಂದು ತೋರೆ ಅ ಎರವಿನ ತಲೆಯವನಣ್ಣನಯ್ಯನಪರಮ ಸಖನ ಸುತನಹಿರಿಯಣ್ಣನಯ್ಯನ ಮೊಮ್ಮನ ಮಾವನತಂದೊಟ್ಟಿದನ ಹಗೆಯಗುರುವಿನ ಮುಂದೆ ಮುಂದಿಹ ಬಾಹನಕಿರಿಯ ಮಗನ ರಾಣಿಯದುರುಳತನದಿ ಸೆಳೆದುಕೊಂಡನ ಕೊಂದನತರಳೆ ನೀ ತಂದು ತೋರೆ 1 ಸೋಮನ ಜನಕನ ಸತಿಯ ಧರಿಸಿದನರೋಮ ಕೋಟಿಯೊಳಿಟ್ಟಹನಕಾಮಿನಿ ಸತಿಯ ಕಂದನ ತಮ್ಮಗೊಲಿದನಭಾಮೆ ನೀ ತಂದು ತೋರೆ 2 ಶ್ರುತಿಯನುದ್ಧರಿಸಿ ಭೂಮಿಯ ಪೊತ್ತು ಅಡವಿಯಪಥದೊಳು ತಿರುಗಿದನ ಅತಿಶಯ ನರಹರಿ ವಾಮನ ರೂಪಿನಪಿತನ ಮೋಹದ ರಾಣಿಯ ಹತ ಮಾಡಿ ಸತ್ಯಕ್ಕೆ ನಿಂತು ನಗವ ಹೊತ್ತುಪತಿವ್ರತೆಯರ ಭಂಗಿಸಿಕ್ಷಿತಿಯೊಳು ರಾಹುತನಾದ ಬಾಡದಾದಿಕೇಶವನ ತಂದು ತೋರೆ3
--------------
ಕನಕದಾಸ
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು