ಒಟ್ಟು 717 ಕಡೆಗಳಲ್ಲಿ , 87 ದಾಸರು , 622 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ
ಬಿಡಬೇಡ ರಂಗಯ್ಯ ಬಡವನೂ ಪಿಡಿಕಯ್ಯ ಒಡೆಯ ನಿನ್ನಡಿ ಪಿಡಿದೆ ದಯೆಮಾಡೊ ಜೀಯ ಪ ಕಡಲಣುಗಿಯಣ್ಮನೇ ಕಡೆಹಾಯ್ಸೊ ಕಷ್ಟದಿಂ ಕಡುಮುದದಿ ಕೊಂಡಾಡಿ ಬೇಡುವೆನೊ ದೊರೆಯೆ ಅ.ಪ ಸಪ್ತ ಋಷಿಗಳು ಸತತ ಗುಪ್ತದಿಂ ಧ್ಯಾನಿಸುತ ತೃಪ್ತರಪ್ಪರು ಅಪ್ತ ನಿನ್ನ ನುತಿಸಿ ಅಪ್ಪ ನೀನವರಿಂದೆ ವಿಪ್ರತ್ವವಂ ತೋರಿ ಅಪ್ರತಿಮ ತಾರಕ ಬ್ರಹ್ಮ ಬೋಧಿಸಿದೆ 1 ಉತ್ತರೆಯ ಬಸುರೊಳಗೆ ಬ್ರಹ್ಮಾಸ್ತ್ರ ಬಾಧಿಸಲು ಅತ್ಯಗತ್ಯದಿ ಪ್ರಭುವೆ ಚಕ್ರ ಪಿಡಿದು ಸುತ್ತೆತ್ತಲಾಶಿಶುವ ಸಂರಕ್ಷಣೆಯಗೈದೆ ಉತ್ತಮೋತ್ತಮ ದೈವ ನೀನೆ ಜಗದಯ್ಯ 2 ಅಂಬರೀಷನ ಮೇಲೆ ಜಂಭದಿಂ ಮುನಿ ಮುನಿಯೆ ಕಂಬುಧಾರಿಯೆನೀಂ ಸುನಾಭ ಕಳುಹಿ ಬೆಂಬಿಡದೆ ಸುತ್ತಿಸಲು ಇಂಬಿನಿಂ ಪದಪಡಿಯೆ ಸಂಭ್ರಮದಿ ಕಾಯ್ದಂಥ ಸದ್ಭಕ್ತ ಬಂಧು 3 ಗಜರಾಜನಂ ಸರದಿ ಮೊಸಳೆ ಪೀಡಿಸುತಿರಲು ನಿಜರಥಾಂಗವ ಕಳುಹಿ ನಕ್ರನಂ ಸೀಳಿ ಅಜಪಿತನೆ ನೀನವರ ವಕ್ರ ಹರಿಸುತ ಕಾಯ್ದೆ ತ್ರಿಜಗಾದಿ ನಾಥನೇ ಭಕ್ತಪಾಲ 4 ಶರಣ ರಕ್ಷಣೆಗಾಗಿ ನೀಂ ಸುದರ್ಶನ ಪಿಡಿದೆ ವರದ ವೇಂಕಟರಮಣ ವೈಷ್ಣವೋದ್ಧರಣ ಕರುಣಿ ನನ್ನಪರಾಧವಪರಿಮಿತವಿದೆ ಕ್ಷಮಿಸು ತರಳನಂ ಕಾಪಾಡು ಜಾಜೀಶ ನೋಡು 5
--------------
ಶಾಮಶರ್ಮರು
ಬಿಸಜ ಕಾನಮಿಪೇ ಪ ವಾತಸುತನೆನ್ನಿಸುತ | ಸೀತೆ ರಮಣನ ಕಂಡುಸೀತೆ ವಾರ್ತೆಯ ನರುಹಿ | ಖ್ಯಾತ ನೀನಾದೇ |ಮಾತರಿಶ್ವನೆ ಹರಿಯ | ಪ್ರೀತಿ ನಿನ್ನೊಳಗೆಂತೋಪೋತ ಭಾವ ದೊಳಾಂತೆ | ಪ್ರೀತಿ ಅಪ್ಪಿಗೆಯಾ 1 ಉರ ರಕ್ತವನು | ಕುಡಿದಂತೆ ತೋರಿ ಜಗನಡುಗುವಂತೆಸಗಿವೆಯೊ | ಕಡುಗಲಿಯ ಭೀಮಾ 2 ಸನ್ಯಾಸದಾಶ್ರಮವ ಅ | ನ್ಯಾಯದಲಿ ಗೊಂಡುಶೂನ್ಯ ಮತ ತತ್ವ ಪ್ರ | ಚ್ಛನ್ನದಲಿ ಪೇಳ್ದಾಅನ್ಯಾಯ ಕಳೆವುದಕೆ | ಜನ್ಯನಾಗುತ ಮಧ್ವಚೆನ್ನ ಪೆಸರಲಿ ಪೇಳ್ದ | ಘನ್ನ ತತ್ವಗಳಾ 3 ಆರು ಕೋಣ್ಯು ಪರಿಯಾ | ಕಾರದಲಿ ವಲಯಾಮೂರು ಕೋಟಿಯ ಸಂಖ್ಯೆ | ವಾನರಾಕೃತಿ ಬದ್ಧವೂ |ಚಾರು ಯಂತ್ರದಿ ಸೌಮ್ಯ | ದಾಕಾರದಲಿ ಜಪದಹಾರ ಪಿಡಿಯುತ ವ್ಯಾಸ | ತೀರಥಿರಿಗ್ವೊಲವೇ 4 ವಕ್ರ ಮನವನು ತ್ಯಜಿಸಿ | ಚಕ್ರತೀರ್ಥದಿ ಮಿಂದುವಕ್ರ ಬಕರಿಪು ನಿನ್ನ | ಚೊಕ್ಕ ರೂಪವ ಸೇವಿಸೀಅಕ್ರೂರ ವರದ ಗುರು | ಗೋವಿಂದ ವಿಠ್ಠಲನಅಕ್ಕರದಿ ಭಜಿಸುವಗೆ | ಚಕ್ರಿಪುರ ವೀವೇ5
--------------
ಗುರುಗೋವಿಂದವಿಠಲರು
ಬೃಂದಾವನದಿ ನೋಡುವ ಬಾರೆ ಗೋ-ಪ ವಿಂದನಾಡುವ ಸಂದಣಿ ಸಾಲದೆ ಸಖಿ ಅ.ಪ. ಮುನಿಗಳು ತರು ಪಕ್ಷಿ ಮೃಗಂಗಳಾಗಿರೆಸನಕಾದಿಗಳು ಗೋವುಗಳಾಗಿರೆಅನಿಮಿಷರೆಲ್ಲರು ಗೋಪಾಲರಾಗಿರೆದನುಜಾಂತಕನು ಮನುಜನಂತಾಗಿರೆ 1 ತಳಿತ ತೋರಣದಿಂ ತಂಪಿನ ನೆಳಲಿಂಮಳೆಯಾಗಿ ಸುರಿವಾ ಮಕರಂದ ಜಲದಿಂಫಲ ಪುಂಜಗಳಿಂ ಶುಕಚಾಟುಗಳಿಂನಳಿನನಾಭನನುಪಚರಿಪ ವೃಕ್ಷಗಳುಳ್ಳ 2 ತಳಿತ ತರುಗಳೆಲ್ಲ ತಂತಮ್ಮ ಜಾತಿಯಉಲುಹನುಳಿದು ಕಣ್ಣುಮುಚ್ಚಿ ತೆರೆಯುತ್ತನಳಿನನಾಭನ ವೇಣುಗೀತೆಯ ರಸದಲ್ಲಿಮುಳುಗಿ ಮುನಿಗಳಂತಿಪ್ಪ ಪÀಕ್ಷಿಗಳುಳ್ಳ 3 ಚಿತ್ತಜನೈಯನ ವೇಣುನಾದವಎತ್ತಿದ ಕಿವಿಯಿಂದ ಸವಿಯುತಲಿಮತ್ತಾದ ಸುಖಜಲ ಕಡಲಾಗಿ ಹರಿಯಲುಚಿತ್ತರದಂತಿಪ್ಪ ತುರುವಿಂಡುಗಳುಳ್ಳ 4 ನಖ ತಿಂಗಳ ಬೆಳಕಿಗೆತುಂಗ ಚಂದ್ರಕಾಂತ ಶಿಲೆ ಒಸರಿಹಿಂಗದೆ ಹರಿದು ಕಾಳಿಂದಿಯ ಕೂಡಲುಗಂಗೆ ಯಮುನೆಯರ ಸಂಗಮದಂತಿಪ್ಪ 5 ಚಕೋರ ಚಕ್ರವಾಕಇರುಳು ಹಗಲು ಎಂದು ಹೋಗುತಲಿರುತಿಪ್ಪ6 ಹರಿಯ ಕೊಳಲ ಸ್ವರದತಿ ಮೋಹನಕೆತರುಮೊಗ್ಗೆಗಳಿಂ ಪುಳುಕಿತವಾಗೆಗಿರಿಯು ಝರಿಯಾ ನೆವದಿಂ ಕರಗಲುತೊರೆಯು ಸುಳಿಯ ನೆವದಿಂದ ತಾ ನಿಲ್ಲುವ7 ಕುಂಡಲ ತಾಳಮೇಳದ ರಭಸಕ್ಕೆನಲಿನಲಿದಾಡುವ ನವಿಲ ಹಿಂಡುಗಳುಳ್ಳ 8 ನಳನಳಿಸುವ ವನಮಾಲೆ ಇಂದ್ರಚಾಪಪೊಳೆವ ಪೊಂಬಟ್ಟೆ ಮಿಂಚು ವೇಣುಗಾನಎಳೆಯ ಗರ್ಜನೆ ಶ್ಯಾಮಮೇಘ ಕೃಷ್ಣಮಳೆಯ ಮೇಘವೆಂದು ಚಾತಕ ನಲಿಯುತ9
--------------
ವ್ಯಾಸರಾಯರು
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಬೆಳಗಾಯಿ ತೇಳಿರಯ್ಯಾ ಪ ಕರ ಪುಷ್ಕರದ ನೆಲೆಯ ಲೊಗದು | ಬಲಿದ ವೈರಾಗ್ಯ ವೈರಾಗ್ಯ ಮುಂಬೆಳಗ ಸುಖ ತಂಗಾಳಿ | ರವಿ ಉದಯಿಸಿದ 1 ನ್ಮತ್ತದುರ್ವಾದಿ ನಕ್ಷತ್ರದೆಡೆಗೆ | ಭವ ದ್ವಿಜ ರಿಂದ ಸುತ್ತುಗಟ್ಟಿ ಭಜಿಸುತಿದೆ 2 ನೆರೆಭಾವ ಭಕುತಿ ರಥ ಚಕ್ರನೆರೆಯೆ | ದುರಿತೌಘ ಮಂಜು ಮುಸುಕು ದೆರಿಯೇ | ಸಂಚಿತ ಮೊದಲ | ಹಂಸನು ಮೆರಿಯೆ 3 ಸಾಲ ಸ-ಚ್ಚಾಸ್ತ್ರಾ ದೇಳಿಗೆಗೆವಿದ್ವಜ್ಜ | ನಾಳಿ ಝೇಂಕರಿಸುತಲಿ ಮ್ಯಾಲನಲಿಯಿ | ಮೂಲ ರಘು ಪತಿಯ ದೇವಾಲಯದ ವಾದ್ಯಗಳು | ಘೇಳೆನಿಪ ನಿಜ ವೇದ ಘೋಷ ಕೇಳ ಬರುತಿದೆ ಜನಕೆ4 ಘನ ಪುಣ್ಯ ಪೂರ್ವಾದ್ರಿ ಕೊನಿಗೆ ಅರುಣಾಂಬರದಿ | ವಿನುತ ಜ್ಞಾನದ ಕಿರಣವನೆ ಪಸರಿಸಿ | ಜನದ ವಿದ್ಯದ ನಿದ್ರೆಯನೇ - ಜಾರಿಸಿ ಹೋದ | ಮಹಿಪತಿ ನಂದನ ನುಭಿವದಿ ಕೀರ್ತಿ ಪಾಡಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳಗಾಯಿತು ಕೇಳಿ ಭ್ರೂಮಧ್ಯ ಮಂಟಪದೊಳಗೆಬೆಳಕು ಪಸರಿಸುತಿದೆಕೊ ಎತ್ತಿತ್ತ ನೋಡೆಮುಂಬೆಳಕು ಕಾಣಿಸುತ್ತ ರವಿಕೋಟಿಯಂ ಪಳಿಯುತಿದೆನಿರ್ಮಳ ನೋಡಲುಪ್ಪವಡಿಸ ಯತಿರಾಜ ಪ ಷೋಡಶಾಕಾರವಹ ಸೋಮ ಕಳೆಗುಂದಿಹುದುಖೋಡಿ ಜನನ ಮರಣ ಚಕ್ರ ತಾ ಕೊರಗಿದುದುಪಾಡಳಿದು ಜೀವಶಿವ ಶೈತ್ಯ ಬಿಟ್ಟಾಡಿದುದುಆರೂಢನೊಲಿದುಪ್ಪವಡಿಸ ಯತಿರಾಜ1 ತಾಪತ್ರಯಗಳೆಂಬ ರಾತ್ರಿ ತಾ ಜಗುಳಿದುದುಪಾಪಿ ಇಹಪರವೆಂಬ ಸುಳಿಗಾಳಿ ಜಾರಿದುದುಕೋಪಿ ಸಪ್ತವ್ಯಸನ ಗೂಗೆ ಕಣ್ಣುಡುಗಿದುದುನಿರ್ಲೇಪನುಪ್ಪವಡಿಸ ಯತಿರಾಜ2 ಅಷ್ಟ ಪ್ರಕೃತಿಗಳೆಂಬ ನಕ್ಷತ್ರವಡಗಿದವುದುಷ್ಟ ಪಂಚೇಂದ್ರಿಯದ ಕುಮುದಗಳು ಬಾಡಿದವುನಷ್ಟರಾರುವರೆಂಬ ಶಿವನಿಕರ ವೋಡಿದವುಶಿಷ್ಟ ನೀನೊಲಿದುಪ್ಪವಡಿಸ ಯತಿರಾಜ3 ಭ್ರಮರ ಕಮಲ ತಾನಿಲ್ಲಿ ಬಿರಿಯುತಿದೆನಿಶ್ಚಿಂತನೊಲಿದುಪ್ಪವಡಿಸ ಯತಿರಾಜ 4 ಮೂರ್ತಿ ಚಿದಾನಂದಗುರುನಾಥನುಪ್ಪವಡಿಸ ಯತಿರಾಜ 5
--------------
ಚಿದಾನಂದ ಅವಧೂತರು
ಬೆಳಗಿರೇ ಆರತಿಯ ಮುತ್ತೈದೆರೆಲ್ಲರೂ ಕೂಡಿಬೆಳಗಿರೇಆರತಿಯ ಪ ಶ್ರೀ ಗುರು ಗಣಪತಿ ಚರಣಾರವಿಂದಕೆ ಬಾಗಿ ಮಣಿದು ಶಾರದಾಂಬಿಕೆ ಅಮ್ಮನ ಆಗಮೋಕ್ತದಿ ಪೂಜಿಸುವೆ ಚರಿತವನೀಗಳು ಕರುಣಿಸುತಿಹ ವಿಘ್ನರಾಜಗೆ ಮೊದಲ ಆರತಿಯ ಬೆಳಗಿರೆ 1 ಸರಸಿಜೋದ್ಭವನ ರಾಣಿ ಕಲ್ಯಾಣಿ ವಿದ್ಯೆಗಧಿಕಾರಿ ಸುರವಂದ್ಯೆ ಸುಪ್ರದಾಯಕಿ ಶಾರದಾಂಬಿಕೆಗೆ 2 ಶಾರದಾಂಬಿಕೆಗೆ ಹರಳಿನಾರತಿಯ ಬೆಳಗಿರೆ 3 ಬಿರು ಮುಗುಳಿನ ಚಂಪಕದಂತೆ ನಾಸಿಕ ಕದಪು ಕನ್ನಡಿಯವೇಲ್ ಲೋಕಮಾತೆಗೆ ಪರಿಮಳ ದಾರತಿ ಬೆಳಗಿರೆ 4 ಮರೆಯಲು ಗರಳಸ್ವರವು ಕೋಗಿಲೆಯಂತೆ ನಳಿದೋಳೆರಡು ಬೆರಳು ಸಂಪಿಗೆಯ ಸರಳಿರುವಂತೆ ಮೆರೆವ ಈ ಶಾರದಾಂಬಿಕೆಗೆ ಹವಳದಾರತಿ ಬೆಳಗಿರೆ 5 ಕಿರುಬಸುರಿನ ಸುಳಿನಾಭಿ ಇಟ್ಟ ವೋಲೆ ತ್ರಿವಳಿಯ ಹರಿಮಧ್ಯ ನಡುವಿಗೆ ಉಟ್ಟ ಪೀತಾಂಬರದ ಶ್ರೀ ಶಾರದಾಂಬಿಕೆಗೆ ಬಟ್ಟಲಾರತಿ ಬೆಳಗಿರೆ 6 ಮಂದಗಮನೆ ಜಗದ್ವಂದ್ಯೆಗೆರಗಿ ನಾ ಮುಂದೆ ಪೇಳುವ ಪರಿಪರಿ ವಸ್ತ್ರ ಭೂಷಣದಿಂದ ಮೆರೆವ ಮಣಿ ಮಕುಟ ಫಣಿಗೆ ಶ್ರೀಗಂಧ ಕುಂಕುಮವಿಟ್ಟ ಶಾರದಾಂಬಿಕೆಗೆ ಕುಂದಣ ದಾರತಿ ಬೆಳಗಿರೆ 7 ಪುತ್ಥಳಿ ಹಾರಹೀರಾವಳಿ ಮುತ್ತಿನಸರ ಚಿನ್ನದಸರ ಚಕ್ರಸರ ಜ್ವಲಿಸುತ್ತಲಿರುವ ಮೆರೆವ ಶ್ರೀ ಶಾರದಾಂಬಿಕೆಗೆ ಮುತ್ತಿನಾರತಿ ಬೆಳಗಿರೆ 8 ರತ್ನದಸರ ಪದಕದಸರವು ಏಕಾವಳಿಸರ ಕೊರಳೊಳಗಳ ನಳಿನ ದಾರತಿ ಬೆಳಗಿರೆ 9 ಹರಳು ಮೌಕ್ತಿಕದಿಂದ ಮೆರೆವ ಮೂಗುತಿ ಚಂದ್ರನ ಹರಳು ಚೌಲಿಯ ತುಂಬುಪರಿಮಳಿಸುವ ಪೂವು ಕರಿ ಮಣಿ ಹರಳಿನಾರತಿ ಬೆಳಗಿರೆ 10 ಮೆರೆವಚೂಡವು ಕೈ ಚಳಕಿಗೆ ಕೆತ್ತಿದ ಹರಳಿನ ವಡ್ಯಾಣ ನಡುವಿಗೆ ಅಳವಟ್ಟು ರೂಢಿಸಿ ಬಕುತರ ಪಾಲಿಪ ಶಾರದಾ ದೇವಿಗೆ ಆರತಿ ಬೆಳಗಿರೆ 11 ಥರಥರ ನವರತ್ನ ಖಚಿತದಿಂದೊಪ್ಪುವ ಕರವೆರಡರ ಭುಜ ಕೀರ್ತಿ ವಜ್ರದೊಳ್ ಬಿರಿದ ತೋಳ್ ಬಳೆವಾಲೆ ಶಾರದಾದೇವಿಗಾರತಿ ಬೆಳಗಿರೆ 12 ಚಿನ್ನದ ಕಿರುಗೆಜ್ಜೆ ಅಂದಿಗೆ ಗಿಲಿಗಿಲಿರೆನ್ನಲು ಹಾರ ಹೊಯ್ದೊಡರು ಬಿರಿಚೊಕ್ಕ ಚಿನ್ನದ ಸರಪಳಿ ಭಾರಿಗಳ ನೆಳೆವ ಸುಪ್ರಸಂಗನೆಗಾರತಿಯ ಬೆಳಗಿರೆ 13 ಪಿಲ್ಲಿಯುಕಿರು ಬೆರಳಲಿ ಮಿಂಚಿನಂತಿಹುದಿಲ್ಲಹರಳು ಮಂಚಿಕೆ ಕೊಡೆ ಹೊಳೆಯುವ ಚೆಲುವ ಕಾಲುಂಗರ ವರ ವೀರ ಮುದ್ರಿಕೆಯಲಿ ಒಪ್ಪುತಲಿಹ ಶಾರದಾಂಬಿಕೆಗೆ ಮಲ್ಲಿಗೆ ಯಾರತಿಯ ಬೆಳಗಿರೆ 14 ಭಾರಕೆ ಶಾರದೆ ಒಲಿಯುತ ದೇಹದ ಕಾಂತಿ ಯಿಂದ ದಿಕ್ಕನು ಮುತ್ತೀನಾರತಿಯ ಬೆಳಗಿರೆ 15 ಕರುಣಾಂಬೆ ಕಾಶ್ಮೀರ ಪುರವರಧೀಶ್ವರಿ ಪರಮಹಂಸವರ್ಯ ಪರಿ ಪರಿ ರುದ್ರನ ಪೋಲ್ವ ನಿಶದದುತಿ ಮೂರ್ತಿ ಪರಿಪರಿ ಆರತಿಯ ಬೆಳಗಿರೆ 16 ಪುಷ್ಪ ಧೂಪ ದೀಪಗಳಿಂದ ಸಡಗgದಿಂದಲಿ ಸಮರ್ಪಿಸಿ ಜಯ ಜಗದರೂಪೆ ರಕ್ಷಿಸು ಮಾತಾಯೆ ಕರುಣಿಸು ಎಂದು ಕಡು ಬೆಡಗಿನ ಆರತಿಯ ಬೆಳಗಿರೆ 17 ಕಡುಬು ಕಜ್ಜಾಯ ಪಾಯಸಕ್ಷೀರ ದಧಿಘೃತತಡೆಯಿಲ್ಲ ತುಂಬಿ ದೇವಿಗೆ ಕರಿಯ ಕಬ್ಬಿನ ಕೋಲು ಆರತಿಯ ಬೆಳಗಿರೆ 18 ಹರಿವಾಣ ನೇವೇದ್ಯಜಗನ್ಮಾತೆ ತಾಬೂಲವನಿತ್ತು ಶರಣೆಂದು ನೂತರದಾರತಿಯ ಬೆಳಗಿರೆ 19 ತಮ್ಮಟೆ ಭೇರಿ ಬುರುಗು ಶಂಖ ಮೃದಂಗವು ನೀಲದಾರತಿಯ ಬೆಳಗಿರೆ 20 ಭೋರಿಡುವವಾದ್ಯವು ಉಡುಕು ಕೊಳಲು ತಂಬೂರಿ ತಾಳಗಳಿಂದ ಸ್ವರವೆತ್ತಿಪಾಡಿ ಆರತಿಯ ಎತ್ತಿರೆ 21 ಬೇಡುತ ಪೂಮಳೆಗರೆಯುತ ಹೊಡೆದು ಕೊಂಡಾಡಿ ವಂದಿಸಿದರು ಶಾರದಾಂಬಿಕೆಗೆ ಹೂವಿನಾರತಿಯ ಎತ್ತಿರೆ 22 ವರದಾಂಬೆ ಶಾರದಾಂಬಿಕೆಯನು ಪೂಜಿಸಿದವರಿಗೆ ಪರಿಪರಿ ವಿದ್ಯವ ಕರುಣಿಸೆ ನರರಿಗೆ ಇಷ್ಟಾರ್ಥದ ವರವಿತ್ತು ಕೊಡುವಳು ಮರಕತದಾರತಿ ಬೆಳಗಿರೆ 23 ಹಿರಿಯಮಗನ ರಾಣಿ ಶಾರದಾಂಬಿಕೆಯ ಸುರಮುನಿ ಜನರಿಗಿಷ್ಟಾರ್ಥವ ವರವಿತ್ತು ಮಂಗಳಾರತಿಯ ಬೆಳಗಿರೆ 24
--------------
ಕವಿ ಪರಮದೇವದಾಸರು
ಬೇಡುವೆನು ಶ್ರೀಕೃಷ್ಣ | ಕಾಡುತಿಹ ಭವರೋಗಓಡಿಸುವುದು ತಡೆಯದೇ ಪ ನಾಡಾಡಿ ದೈವಗಳ | ಬೇಡ್ವನಲ್ಲವೊ ಕೃಷ್ಣನೋಡೆನ್ನ ದಯದಿಂದ | ಸಾರ್ವಭೌಮಾ ಅ.ಪ. ಪರ ಕಂಬು ಚಕ್ರಾಂಕಿತನೆನಂಬಿಹೆನೊ ನಿನ್ನ ಪದವ ||ಕುಂಭಿಣಿಯ ಪರಿಪಾಲ | ಅಂಭ್ರಣಿಯ ಸುವಿಲೋಲಇಂಬಿಟ್ಟು ವದಗಿಸುತ | ಸಂಭ್ರಮದಿ ಕಾಯೋ | ಕರುಣೀ 1 ಪ್ರೇರ್ಯ ಪ್ರೇರಕ ನೀನೆ | ಬಾಧ್ಯ ಬಾಧಕ ನೀನೆಸೇವ್ಯ ಸೇವಕನೆ ಹರಿಯೇ ||ವಾಪ್ಯ ವ್ಯಾಪಕ ಸ್ವಾಮಿ | ಪೋಷ್ಯ ಪೋಷಕ ರೂಪಿಕಾರ್ಯ ಕಾರಣ ರೂಪನೇ ||ಭಾವ್ಯನೇ ನಿನ್ನಿಂದ | ಧಾರ್ಯ ಈ ಜಗವೆಲ್ಲವೀರ್ಯ ಔದಾರ್ಯ ಶೌರ್ಯ ||ಪೂಜ್ಯ ಪೂಜಕನೆನಿಪ | ಬಹಿರಂತರಾತ್ಮಕನೆಪ್ರಾಪ್ಯ ಪ್ರಾಪಕ ನಿನ್ನ | ಪ್ರಾಪ್ತಿಯನೆ ತಿಳಿಸೋ | ಸ್ವಾಮಿ 2 ತಾರತಮ್ಯ ಜ್ಞಾನ ಸದ್ | ವೈರಾಗ್ಯ ಹರಿ ಭಕುತಿಬಾರಿ ಬಾರಿಗೆ ಬೇಡುವೇ ||ಸೂರಿ ಸಂಗವ ನೀಯೊ | ದೂರಗೈ ದುಸ್ಸಂಗಮಾರಪಿತ ದಯಾಪಾಂಗನೆ ||ಕಾರುಣಿಕ ನೀನೆಂದು | ಸಾರಿರುವ ತವಪಾದದೂರ ಮಾಡಲಿ ಬೇಡವೊ ||ಆರು ಕಾಯುವರಿಲ್ಲ | ವಾರೀಜ ಜಾಂಡದೊಳುಧೀರ ಗುರು ಗೋವಿಂದ | ವಿಠಲ ಬಹು ಆಪ್ತಾ | ಗೋಪ್ತಾ 3
--------------
ಗುರುಗೋವಿಂದವಿಠಲರು
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕ್ತವತ್ಸಲಭಯನಿವಾರಣ ಭಾಗವತರ ಪ್ರಿಯ ನಿತ್ಯತೃಪ್ತನೆ ನೀರಜನಯನ ಸತ್ಯಭಾಮೆಪತಿ ಸರಸಿಜವದನ ಪ ಮಂಗಳ ಚರಣದಿ ಗಂಗೆಯ ಪಡೆದ ಭು- ಜಂಗನ ತುಳಿದ ಪದಾಂಬುಜಕೆ ನಮೊ1 ವಿನತೆಸುತನ ಹೆಗಲು ಘಮಿಕಿಲಿಂದೇರಿಪ ಕಣಕಾಲಂದಿಗೆಮಣಿಕಾಲಿಗೆ ನಮೊ 2 ಉಟ್ಟ ಪೀತಾಂಬರ ಕಟ್ಟಿದ ಉಡಿದಾ- ತ್ರಿಜಗ ಊರ್ಹೊಟ್ಟೆಗೆ ನಮೊ 3 ನಾಲ್ಕುಮುಖದ ಅಜನಂದನರುದಿಸಿದ ನಾರಾಯಣ ನಾಭಿಕಮಲಕ್ಕೆ ನಮೊ 4 ಕರ್ಣಕುಂಡಲವು ಕಪೋಲದಲ್ಹೊಳೆಯುತ ಸಣ್ಣ ನಾಮದರವಿಂದನೇತ್ರಕೆ ನಮೊ5 ವರ ಶಂಖಚಕ್ರದ ಕರಕÀಮಲಕೆ ನಮೊ 6 ನಾಸಿಕ ಚೆಲುವ ಪ್ರಕಾಶ ಕಿರೀಟ ಭೀ- ಮೇಶಕೃಷ್ಣನ ಮುಖಪದ್ಮಕೆ ನಮೊ 7
--------------
ಹರಪನಹಳ್ಳಿಭೀಮವ್ವ
ಭಕ್ತಿ ಪಾಶದಿ ಕಟ್ಟುತ ಹರಿಯನು ನಿತ್ಯದಲಿರು ಮನವೇ ಪ. ಭಕ್ತಿಗೆ ಮೆಚ್ಚುತ ಅಚ್ಚುತ ತಾನೆ ಬಹ ನಿಶ್ಚಯವಿದು ಮನವೆ ಅ.ಪ. ಅನುದಿನ ನಾರಾಯಣನೆಂದಣುಗಗೆ ಕ್ಷಣದಿ ಕಂಬದಿ ಬಂದ ದನುಜನ ಮುರಿದ ಗುಣನಿಧಿಯನು ನೀ ಕ್ಷಣ ಬಿಡದನುದಿನ ನೆನೆ ಮನವೇ 1 ಕಲ್ಲಾಗಿದ್ದಹಲ್ಲೆ ಪೊರೆದು ಶಿವ ಬಿಲ್ಲ ಮುರಿದ ರಾಮನ ನಲ್ಲೆ ಕುಬ್ಜೆಯ ಡೊಂಕನೆ ತಿದ್ದಿದ ಖುಲ್ಲ ಕಂಸನ ಗೆದ್ದಾ ಕೃಷ್ಣನ 2 ಅಂಬರೀಷ ದ್ವಾದಶಿ ವ್ರತವನು ಮಾಡೆ ಮುನಿ ಪುಂಗವ ಜರಿಯುತಿರೆ ರಂಗನ ಚಕ್ರದಿಂದ್ಹುಟ್ಟಿದನರಿಯ ದೇವ ಈ ಅಂಗ ಭಂಗರಕೆ ಚಾಟಿ ಶ್ರೀ ಶ್ರೀನಿವಾಸನು 3
--------------
ಸರಸ್ವತಿ ಬಾಯಿ
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ