ಒಟ್ಟು 783 ಕಡೆಗಳಲ್ಲಿ , 82 ದಾಸರು , 637 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದನು ಹನುಮಂತ ಗೃಹಕೇ | ಕಾರ್ಯಸಂಧಿಸಲು ಅನುಗ್ರಹಕೇ ಪ ಮಂದಿರವು ಒಂಟೀಲು ವಂಶ ಸಿ | ಕಂದರಾಬಾದಿನಿಂದಲಿಸುಂದರನು ಬಹುನಂದ ವೀಯುತ | ಮಂದವಾರದಿ ಬಂದ ಹನುಮ ಅ.ಪ. ಮಾಸ | ವೈಶಾಖ ನಿಜ ವಿಶಾಖಾಭಾದಾಸನ ಮನೆಗತಿ ಪ್ರಭಾ | ಯುತ | ಆ ಸಮೀರನು ಅಸ್ಮಲ್ಲಾಭಾ ||ಹರ್ಷದಲಿ ಹನುಮಂತರಾಯರ | ವಶದಿ ಇದ್ದವನಲ್ಪ ಕಾಲದಿವಶವ ಪಡಿಸಲು ವೆಂಕಟಾರ್ಯಗೆ | ನಸುಕಿಲೀ ನಸನಗುತ ಬಂದ 1 ಪರಿ ಮಣಿ |ವರ ಖಚಿತ ರತ್ನ ವಿಶಾಲಾಪರಿ ಪರಿಯ ಆಭರಣ ಭೂಷಿತ | ಸುರ ವಿರೋಧಿಗಳ್ಹನನ ಶಕುತನೆರೆ ಸುವಾನರ ಸೈನ್ಯ ಪರಿವೃತ | ಹರಿಯಲಿಂ ಪಟ್ಟಾಭಿಷಕ್ತ 2 ಭೃತ್ಯ ನಿತ್ಯ ಸೇವಾಸಕ್ತ ಮಾರುತ 3
--------------
ಗುರುಗೋವಿಂದವಿಠಲರು
ಬಂದನೊ ಸುಜನರ ಸಂದಣಿಯೊಳಗತಿಸುಂದರ ರಥವೇರಿ ಗುರುವರ ಬಂದನೊ ಪ ಬಂದಿ ಜನರು ಮುದದಿಂದ ಬಹುಪರಾಕೆಂದು ನುಡಿಯಲಾನಂದ ಬೀರುತ ಬಂದನೊ ಅ.ಪ. ಕ್ಷಿತಿ ಸುರಪತಿ ಶುಭಮತಿ ಬಲ್ಮತದವರೊಯತಿ ಪರರತಿಶಯ ದಶಮತಿ ಸಂ-ಸ್ಕøತ ಭಾಷಣದವರೊ ಭಯಹರಣನೆಂಬೊ ವಾ-ರುತಿಯ ಕೀರುತಿಯ ಪೂರುತಿಯ ಕೇ-ಳುತ ಮಹಿಮಾಂಗಣಕಥಿಸುತ ಗ್ರಂಥಿಸುತ ತುತಿಶುತನುತಿಸಿ ಯತಿ ಶಿರೋಮಣಿಗೆರತುನ ಖಚಿತವಾದಾರುತಿಯ ಬೆಳಗಿರೆ 1 ಸುರತರು ಶುಭ ಧೊರೆಯೋ ವಾಗ್ಝರಿಯೋಸರಸಾರ್ತಿ ಜನಗಳ ನೆರೆಸುತಾದರಿಸುತಾಬಲು ಸುಖ ಸುರಿಸುತಾ ದರಿದ್ರವ ತರಿದುಪೊರೆದೂ ಕರೆದವರಿಗೆ ಕೈ-ಶರೆಯಾಗುವೆನೆಂಧರುಷದಿ ಗುರುವರ ಬಂದನೊ 2 ವಾಲಗ ಘೊರ್ಮಿಡೆ ಭಟರುಗಳ ಹೆಗಲ ಮ್ಯಾಲೆಝಗ ಝಗಿಸುವ ಛಡಿಗಳೊ ಕುಣಿಕುಣಿದಾಡುವವರಹಿ ವೇಣಿಗಳೋ ವಾಣಿಗಳು ಶ್ರೀಣಿಗಳು ಶೋಭಿಸೆಸುಜನರು ಕೈ ಮುಗಿವರು ನಗುವರುಸಂಭ್ರಮದಿಂದ ಬಿಗಿವರು ದೃಗಾರೋಢನದಿಜಿಗಿದು ಅಘದೂರೊಗೆದ ಜನರೊಳುವೆಗ್ಗಳದಲಿಂದಿರೇಶನ ಭಕುತಾಗ್ರಣಿ ಬಂದನೊ 3 ಇಲ್ಲಿ ವರ್ಣಿತವಾದ ಯತಿಗಳು ಯಾರೆಂದು ತಿಳಿಯದು.
--------------
ಇಂದಿರೇಶರು
ಬಂದವನಾವನೋ ನಾ ಕಾಣೆ ಇಂದೀವರ ನೇತ್ರಾ ಸುಗಾತ್ರಾ ಪ ಮೆಲ್ಲಡಿ ಇಡುವ ಮರೆಯಲಿ ನಿಲುವಾ ಕಾಂತಿಯ ಚೆಲ್ಲುವ ನೋಡಲು ನಗುವಾ ಅ.ಪ ಆಕಳ ಕರೆವಾಗ ಸಾಕೆಂದೆನುವಾ ಆಕಳ ಬೆಣ್ಣೆಯೇ ಬೇಕೆನುತಿರುವಾ ಏಕೆಲೊ ಮರೆಯಾಗಿ ನಿಂತಿಹೆ ಪೇಳೆನೆ ನೀ ಕೊಡೆ ನಾ ಬಿಡೆ ಕೇಳೆಂಬಾ 1 ಮೊಸರನು ಕಡೆವಾಗ ಹಸಿವೆಂದೆನುವ ಬಿಸಿಯನ್ನವನಿಡೆ ಹಸುವಿಗೆ ಕೊಡುವಾ ನುಸುಳಿ ಬಂದು ಕೆನೆಮೊಸರನೆ ಮೆಲ್ಲುವ ಕಿಸಿಕಿಸಿ ನಗುತಲಿ ಓಡುವನಾರೋ 2 ಕಣ್ಣು ಮುಚ್ಚಲು ಬೆಣ್ಣೆಯ ಕಳುವ ಹೆಣ್ಣುಗಳೆಡೆಯಲಿ ನಗುತಲಿ ಹುದುಗುವ ಚಿಣ್ಣನು ಮಾಂಗಿರಿರಂಗನೇ ಯೇನೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ
ಬರುವುದು ನೋಡೆ ಶ್ರೀಹರಿ ರಥವೇರಿ ಪ ಎಡಬಲದಲಿ ಹರಿ ಉಡುರಾಜ ಮುಖಿಯರ ಶೌರಿ 1 ಗುಣಮಣಿ ಶ್ರೀನಿವಾಸ ಮಣಿಯುವೋ ಭಕ್ತರ ದಣಿವು ಆರಿಪುದಕೆ ವಿನಯ ಪೂರ್ವಕವಾಗಿ2 ಬಗೆ ಬಗೆಯಲಿ ತನ್ನ ಭಜಿಸುವೊ ಭಕ್ತರ ಸುಗುಣ ಶ್ರೀ ಪ್ರಾಣನಾಥ ವಿಠಲ ರಾಯನು ನಗುತ 3
--------------
ಬಾಗೇಪಲ್ಲಿ ಶೇಷದಾಸರು
ಬಲು ದೊಡ್ಡಸ್ವಾಮಿ ಮೂಲೋಕದೊಡಿಯ ನಮ್ಮ ಧ್ರುವ ಅನಂತಕೋಟಿ ಬ್ರಹ್ಮಾಂಡ ಅನುದಿನನಾಳುತ ಪ್ರಚಂಡ ತಾನೆ ಆಗ್ಯಾನೆ ಅಖಂಡ ಘನಗುರು ಮಾರ್ತಾಂಡ 1 ವಿಭೀಷಣಗೆ ಸ್ಥಿರಕೊಟ್ಟ ದುಷ್ಟರ ಜನರ ಕುಟ್ಟಿ ನಿಷ್ಠುರ ನಿಜಶ್ರೇಷ್ಠ 2 ಶಿಷ್ಟರಜನರಿಗಭಯವ ನಿಜನೋಡಿ ಮುಟ್ಟಿ ಮುದ್ರಿಸಿ ದಯಮಾಡಿ ಪೃಷ್ಠದಲಿ ನೋಡಿ 3 ಗ್ರಾಸವು ತಂದಿಪ್ಪ ಚಿತ್ಪ್ರಕಾಶದ ಸ್ವರೂಪ ಭಕ್ತರ ಪಾಲಿಪ 4 ನಾಮದೊಲವಿಲೆ ತನುನಿಜಭಾಗ್ಯ ಸ್ವಾಮಿಸೇವೆಗೆ ಮಾಡಿದ ಯೋಗ್ಯ ಪ್ರೇಮದಂತಾಭೋಗ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲ್ಲವನಾದರೀ ತಳ್ಳಿಬೇಡ ಅಲ್ಲದ ಪಥವಿದರಾಸೆಯ ಬಿಡು ನೀನು ಪ ಸರ್ಪನ ಪಣೆಯೊಳು ಜೇನುತುಪ್ಪವ ಕಂಡು ಅಪ್ಪನೆ ತಾರೆಂದು ಅಳುತಿರಲು ತುಪ್ಪದ ಸವಿಯನು ಜನರುಂಡು ತೀರಲು ಮುಪ್ಪಾಗಿಯಿರುವುದ ಕಂಡು ಮೂದಲಿಸುವ 1 ನಂಬಿದ ಮನುಜರ ಹಂಬಲ ಮರವದು ಡೊಂಬಿಯವರು ಕಂಡು ತಡೆಯಲಾಗಿ ಅಂಬರವನು ಕಂಡು ನಗುತಿಪ್ಪ ಮನುಜನ 2 ಅಂಬರವಡಗಿಯೆ ಕುಂಭಿನಿ ಜಾರಿಯೆ ನಂಬಿದ ಮನುಜರು ನಡೆವೆಡೆಯ ಕುಂಭದ ನೀರನು ಚೆಲ್ಲುತ್ತ ಮಗುಳಲ್ಲಿ ಕಂಭದ ಹಾಗೆಲ್ಲ ನಿಂತಿಹ ಜನರನು 3 ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ ದುಷ್ಟನೊಬ್ಬನು ಬಂದು ನಿಂತಿಹನು ಇಟ್ಟಿಹ ಬಾಗಿಲ ಕಾಣದೆ ತಾ ಬಂದು ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ 4 ಕಡಹದ ಪಲ್ಲಕ್ಕಿ ಬೆಡಗನ್ನು ಕಾಣುತ್ತ ಮೃಗ ಬಂದು ಕುಳಿತಿರ್ದುದ ಒಡನೆ ಕಟ್ಟಿದ ವಾಹಕರ್ಹದಿನಾರು ಮಂದಿಯು ಕಡಿಮೆಯ ಸಂಬಳ ಕಡವಿಡುವವರನ್ನು 5 ಅಕ್ಕಿಯ ರಾಶಿಯು ತೀರಲು ಕೊಳಗವು ಬೆಕ್ಕನೆ ಬೆರಗಾಗಿ ಕುಳಿತಿಪ್ಪುದು ಬಿಕ್ಕಿದ ಅಕ್ಕಿಯ ಹಕ್ಕಿಯು ಹೆಕ್ಕಿಯೆ ಗಕ್ಕನೆ ಹಾರುವ ಪಕ್ಷಿಯ ನೋಡುತ್ತ 6 ರವಿಶಶಿಯೊಂದಾಗಿ ಇರುತಿಹ ಗಣಿತದಿ ಧರೆಯೊಳು ಸಾವಿರಯೆಲೆ ಬೀಳ್ವುದು ಎರವಿನಾಭರಣವ ಅವರವರೊಯ್ಯಲು ವರಾಹತಿಮ್ಮಪ್ಪನ ಮರೆ ಬೀಳು ಕಂಡ್ಯ 7
--------------
ವರಹತಿಮ್ಮಪ್ಪ
ಬಲ್ಲೆ ಬಲ್ಲೆ ನಿಮ್ಮೆಲ್ಲರ ಗುಣವನು ನಾನು ಪಾರ್ಥಅವರ ಹೊಲ್ಲತನವ ಹೇಳಲು ಹೋಗುವಿ ಕೋಪಿಸಿ ನೀನು ಪ. ಒರಲಿ ಒರಲಿಬಾಯಿ ತೆರೆಯಬಾರದು ದಯಸಾಕೊಹಿರಿಯನೆಂಬೊ ಹರಲಿಗೆ ತಕ್ಕವನಲ್ಲಇವ ಹರಲಿಗೆ ತಕ್ಕವನಿವನಲ್ಲನಿಮ್ಮ ಚರಿಯವ ಕೇಳುತ ಅಂಜರೊ ನರರೆಲ್ಲ 1 ಕುಂಭಿಪಾಕದೊಳು ಕುದಿಸುವ ಕೆಲವರು ಕೇಳೋ ಅದು ದಯವೆಂಬೊಮಾತಿದು ಮಂದಿಗೆ ಇರದು ಹೇಳೊಜಂಬವೆಂಬುದು ತುಂಬಿದೆ ಇವನಲ್ಲೆಷ್ಟು ಇದುನಮ್ಮ ಅಂಬುಜಾಕ್ಷನಲಿ ಅತಿ ಬ್ಯಾಗ ಬಾಹೋದು ಸಿಟ್ಟು 2 ಅನ್ಯ ಲೋಕದವರ ನ್ಯಾಯ ಕೇಳುವನಿವನಲ್ಲತನ್ನ ಬುದ್ದಿಯನು ತಾ ಕಳೆದನು ಧರ್ಮನು ಎಲ್ಲಮಾನ್ಯ ಮಾನ್ಯರೊಳು ಮಾನ ಭಂಗಿಸುವುದು ಇರುವುದು ಏನೊನಮ್ಮ ಚದುರ ರಾಮೇಶನು ಚನ್ನಾಗಿ ನಗುತಿಹನುತಾನು 3
--------------
ಗಲಗಲಿಅವ್ವನವರು
ಬಳೆಯ ತೊಡಿಸಿದ ಭಾಗ್ಯಪುರುಷನೂ ನಳಿನಾಕ್ಷಿಕೈಗೆ ಪ ಮಣಿ ಕರಗಳಿಗೆ ತಕ್ಕ ಅರುಣಮಯ1 ಬಳೆಗಳನೆ ತಂದು ಕರಗಳನೆ ಪಿಡಿದು 1 ಇಳೆಯಪತಿ ಬಳೆಗಾರನಾಗುತ ಪೊಳಲು ಎಲ್ಲ ಸಂಚರಿಸುತ ನಳಿನಮುಖಿಯ2 ಕಂಡು ನಗುತಲಿ ಕರವ ಪಿಡಿದು3 2 ಮಾನನಿಧಿ ಪ್ರಾಣನಾಥವಿಠಲನುಸಾನುರಾಗದಿಭಜಿಸುವರ ಸುರ ಧೇನು ವಂದದಿ ಸಲಹುವನಂತೆ ಮಾನಿನಿಯಮನಕೆ ಒಪ್ಪುವೊ 3
--------------
ಬಾಗೇಪಲ್ಲಿ ಶೇಷದಾಸರು
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾದರಾಯಣನ ಪಾದವ ನಂಬದೆ ಪ ತುಂಬಿ ತುಳುಕುತಿರೆ ವದನದಿ ಮಂತ್ರವ ಪಠಿಸಿ ಫಲವೇನು ಉದರ ಪೋಷಣೆಗಾಗಿಯೆ ಮಾಡುವ ಕರ್ಮ ನೋಡಿ ನಗುವರು 1 ಕಂಣನು ಮುಚ್ಚಿ ಮೌನದಿ ಕುಳಿತು ಪರ ಹೆಂಣಿನ ರೂಪವ ಮನದೊಳು ನೆನೆದು ಚಿಂಣತನದಿ ಅವಳ ಬೆರೆಯಲು ಯೋಚಿಸಿ ಹೊನ್ನು ಕೂಡಿಸುವ ಪರಿಯದಲ್ಲದೆ 2 ಗುಟ್ಟಲಿ ಪೂಜಿಪ ಗುರುತನು ಅರಿಯದೆ ಪಟ್ಟೆ ನಾಮವ ಹಚ್ಚಿ ಮಡಿಗಳನು ದಿಟ್ಟ ರಂಗೇಶವಿಠಲನ ಮರೆದು 3
--------------
ರಂಗೇಶವಿಠಲದಾಸರು
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್