ಒಟ್ಟು 390 ಕಡೆಗಳಲ್ಲಿ , 77 ದಾಸರು , 339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡುವೆ ನಿನ್ನನು ಜೋಡಿಸಿ ಕರಗಳ |ಕೂಡಲೆ ವರಗಳ | ನೀಡುವದೀಶನೆ ಪನಂದನ ಕಂದ ಮುಕುಂದ ಮುರಾರೆ |ಸುಂದರ ಶುಭಕರ | ಮಂದರೋದ್ಧಾರ 1ಶಂಕರ ಹಿತನೇ ಪಂಕಜನಾಭನೇ |ವೆಂಕಟರಮಣನೆ | ಶಂಖಚಕ್ರಧರನೇ 2ಸುರನರಕಿನ್ನರ| ತುಂಬುರ ನಾರದರ್ |ಪರಿಪರಿಯಲಿ ನಿನ್ನ | ಸ್ಮರಿಸುತಲಿಹರೂ 3ಅಸುರರ ಬಾಧೆಯೊಳ್ | ಸುರರೆಲ್ಲ ಭಜಿಸಲು |ಕುಶಲದಿ ಭಕ್ತರ|ಪೊರೆದೆ | ಗೋವಿಂದನೇ 4
--------------
ಗೋವಿಂದದಾಸ
ಭಾರತೀ ದೇವೀ ನಿನ್ನನು ದಿನಾ | ಸಾರುವರ ಕಾಯ್ವೀ ||ಮಾರಮಣನಪಾದವಾರಿಜಯುಗದಲೀ |ಚಾರುಭಕುತಿ ಕೊಡು ನಾರೀ ಶಿರೋಮಣಿ ಪಇಂದ್ರಸೇನಳೆವಿಪ್ರಕನ್ನಿಕೆ | ಚಂದ್ರೇ ಶ್ರೀಕಾಳೆ |ನೊಂದೆನೆ ಬಹಭವ| ಬಂಧನದೊಳು ವೇಗಾ |ದಿಂದ ಕಾಯೆ ಕರುಣಾಸಿಂಧುದ್ರೌಪದಿ ದೇವಿ 1ಮಾತೆ ಕೇಳೆಲೆ ಭವಟವಗೆ | ವೀತಿಹೋತ್ರಳೆ ||ಮಾತು ಮಾತಿಗೆ ಜಲಜಾತನಾಭನ ಸ್ತುತೀ |ಆತುಕೊಂಡಿರಲೆ ಶ್ರೀ | ಮಾತರಿಶ್ವನಾ ರಾಣೀ 2ಪತಿತ ಪಾವನೆ | ಶಿವ ಕನ್ಯಾ ಜಗದ್ವಿತತೆ ಜೀವನೆ ||ನುತಿಸಿಬೇಡಿಕೊಂಬೆನೆ | ಕ್ಷಿತಿಯೊಳೆಲ್ಲರೂ ಸನು |ಮತವನೈದಿ ಈ ಕೃತಿಗೆ ಮಂಗಳವೀಯೆ 3ದೋಷ ದೂರಳೇ | ಹರಿಭಕ್ತಿಯಲ್ಲಿ ಮೋಸ ತೋರಳೆ ||ಕಾಶಿ ನಂದನೆಯನ್ನಾ | ಯಾಸ ಬಡಿಸದಲೀ |ಶ್ರೀಶನ ಕಥಿಗೆ ವಿಶೇಷ ಬುದ್ಧಿಯನೀಯೆ 4ಮಾನನಿನ್ನದೆ | ಸತತ ಪೇಳ್ವದೇನು ಮಾಣದೇ ||ಪ್ರಾಣೇಶ ವಿಠಲನ ಧ್ಯಾನದೊಳಿರುವಂತೆ |ಪೋಣಿಸುವದು ಮತಿ ಬಾಣ ವರದ ನುತೆ5
--------------
ಪ್ರಾಣೇಶದಾಸರು
ಭಾರತೀ ರಮಣಾ ಪವಮಾನಾ ಜಗದೊಳುಸುತ್ರಾಣ|ಘೋರದುರಿತಾರಣ್ಯ ದಹನ |ಮಾರಕದನಜಿತವಾರವಾರಕೆ ಶ್ರೀ ನಾರಾಯಣನ ಪದ ಆರಾಧನೆ ಕೊಡು ಪಮೈಗಣ್ಣಪದವಾಳ್ದವಾತ | ಲೋಕ ವಿಖ್ಯಾತ |ನಾಗಜನಕ ಭಜಕ ಪ್ರೀತ ||ಯೋಗೇಶ ಜಡಜಂಗಮ ವಿತತ | ಅದ್ಭುತ ಚರಿತ |ಬಾಗುವೆ ಲಾಲಿಸೋ ಮಾತ ||ಹೋಗುತಲಿದೆ ಹೊತ್ತೀಗಲೆ | ತವಕದಲಿಭಾಗವತರೊಳಗೆ ||ಭಾಗೀರಥೀ ಪಿತನಾಗುಣಪೊಗಳಿಸೊ |ಜಾಗುಮಾಡದಲೆ |ನಾಗಾದಿ ರೂಪನೆ ಗರುಡಾರ್ಚಿತ 1ಗೀರ್ವಾಣವಂದ್ಯ ಹರಿದಶ್ವ |ತೇಜಪೃಷದಶ್ವ |ದೂರ್ವಾಸಾರ್ಚಿತಮಾತರಿಶ್ವ||ಪಾರ್ವತೀಪತಿ ವಂದ್ಯ | ದುಸ್ವಭಾವಗತನಭಸ್ವ |ತ್ಪೂರ್ವಿಕಾ ದೇವ ಹಂಸಾಶ್ವ ||ತೋರ್ವುದು ಜ್ಞಾನವ | ಬೀರ್ವುದು ಕರುಣವ |ಪೂರ್ವದೇವ ಸಾರ್ವೆ ನಿನ್ನನು ಯನ್ನ ||ಚಾರ್ವಾಕ ಮತಿಯನು | ಬೇರೂರೆ ಸಳಿಯಾಲು |ಉರ್ವಿಯೊಳಗೆ ಮತ್ತೋರ್ವರ ಕಾಣೆ2ತ್ರಿಗುಣ ವರ್ಜಿತ | ಪ್ರಾಣೇಶ ವಿಠಲನ ದಾಸ |ನಗಪಾಲಾ ಕೊಡು ಯನಗೆ ಲೇಸ ||ಅಗಣಿತಮಹಿಮನೆ | ಕಾಷಾಯವಸನಭೂಷ |ನಿಗಮವೇದ್ಯನೆ ನಿರ್ದೋಷ ||ನಗಸ್ತೋಮಗಳಿಗೆ | ಪಗೆಯಾಗಿರ್ಪನ |ಮಗನ ಧ್ವಜದಿ ನಿಂದಿ ಗಡಕುರುಜರೆದೆ ||ಭುಗಿಲೆಂಬುವ ತೆರ ಮೃಗಧ್ವನಿ ಮಾಡಿದನಘ |ಪೊರೆವುದುಕರವಮುಗಿವೆ ಚರಣಕೆ 3
--------------
ಪ್ರಾಣೇಶದಾಸರು
ಮಂಡೆಬಾಗಿಕರವಮುಗಿವೆ ಕಾಯೊ ಹರಿಹರಿ |ಪುಂಡರೀಕನಯನ ಮರೆಯಬೇಡವೊ ಹರಿಹರಿ ಪಕರಿವರದನೆ ಸರ್ವಾಂತರ್ಯಾಮಿ ಹರಿಹರಿ |ಕರುಣಾಸಾಂದ್ರ ತರುಣಿ ಮಾನಕಾಯ್ದ ಹರಿಹರಿ ||ಶರಧಿಸುತೆಯ ರಮಣ ದೀನಬಂಧು ಹರಿಹರಿ |ಅರಿಯೆ ನಿನ್ನನುಳಿದು ಕಾಯ್ವರನ್ನು ಹರಿಹರಿ 1ಮೀನನಾಗಿ ವೇದಗಳನು ತಂದೆಹರಿಹರಿ|ಆ ನಗವನು ಪೊತ್ತು ಅಮೃತವೆರೆದೆಹರಿಹರಿ||ನೀನೇ ವರಾಹನಾಗಿಯವನಿಯ ತಂದೆಹರಿಹರಿ|ದಾನವನುದರವ ಬಗೆದು ಅಂದುಹರಿಹರಿ 2ಚಿಕ್ಕ ರೂಪದಿಂದ ಬಲಿಯ ತುಳಿದೆಹರಿಹರಿ|ಸೊಕ್ಕಿದರಸುಗಳನು ಸವರಿಬಿಟ್ಟೆಹರಿಹರಿ||ರಕ್ಕಸರನು ಕೊಂದು ಸತಿಯ ತಂದೆಹರಿಹರಿ|ಅಕ್ಕರದಲಿ ಪಾರಿಜಾತ ತಂದೆಹರಿಹರಿ3ಅಂಬರವನು ತೊರೆದೆ ಬೌದ್ಧನಾಗಿ ಹರಿಹರಿ |ಕುಂಭಿಣಿಯೊಳು ಕುದುರೆಯೇರಿ ಮೆರೆದೆಹರಿಹರಿ||ಶಂಬರಾಂ ಜನಕ ಧರ್ಮತನಯಹರಿಹರಿ|ಅಂಬುಜಾಸನಾದಿ ದಿವಿಜವಂದ್ಯಹರಿಹರಿ4ಶೌರಿರಘುಜ ಮುನಿಜ ಪ್ರಾಣೇಶ ವಿಠಲಹರಿಹರಿ|ಸಾರಿದ ಶರಣರಿಗೆ ಕಲ್ಪತರುವೆಹರಿಹರಿ||ಘೋರದುರಿತವನಕೆ ಧನಂಜಯನೆ ಹರಿಹರಿ |ಭಾರನಿನ್ನದೆವೆ ಹೇಳಲ್ಯಾಕೆಹರಿಹರಿ 5
--------------
ಪ್ರಾಣೇಶದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಮೋಸ ಹೋದೆನಲ್ಲ -ವಿಠಲ- ಮೋಸ ಹೋದೆನಲ್ಲಾ ಪಆಸೆಬಿಟ್ಟು ಹಂಬಲಿಸಿ |ಹೇಸಿ ನರಕದೊಳಗೆ ಸಿಲುಕಿ ಅ.ಪಪುಷ್ಪ ಶ್ರೀ ತುಳಸಿಯನ್ನು |ಒಪ್ಪದಿಂದ ಮನೆಗೆ ತಂದು ||ಅಪ್ಪ ಕೃಷ್ಣನ ಪೂಜೆಯ ಮಾಡಿ - ಮೇ-|ಲಿಪ್ಪ ಲೋಕದ ಸೂರೆಗೊಳದೆ 1ಕಾಯದಾಸೆಗೆ ಕಂಡುದ ಬಯಸಿ |ನಾಯಿಯಂತೆ ಮನೆಮನೆ ತಿರುಗಿ ||ಮಾಯಾಪಾಶದೋಳಗೆ ಸಿಲುಕಿ |ಜೀಯನಿನ್ನನು ಧ್ಯಾನಿಸಲರಿಯದೆ2ಸತಿಸುತರು- ಪಿತೃ-ಬಾಂಧವರು |ಪಥವ ತೋರಿಸಬಲ್ಲರೆ ಇವರು ||ಗತಿನೀನೇಪುರಂದರವಿಠಲ |ಹಿತವ ತಾಯಿ ತಂದೆ ನೀನು 3
--------------
ಪುರಂದರದಾಸರು
ರಕ್ಷಿ ರಕ್ಷಿ ರಕ್ಷಿಸಯ್ಯ ಚಿದಾನಂದ ಸ್ವಾಮಿರಕ್ಷ ಶಿಕ್ಷ ಕರ್ತನಾದ ದಯದಿಂದಪದಾಸ ನಿಜವಲ್ಲವೆನೆ ಸಾಕ್ಷಿ ಬೇಕೆ ನಿನ್ನದಾಸರ ದಾಸನಾಗಲಿಕೆಏಸುಕಾಲ ಪರೀಕ್ಷೆ ನಿನ್ನ ನೋಡಲಿಕೆ ಎನ್ನಲೇಸುಹೊಲಬುನಿನ್ನನು ಬಿಡದು ಜೋಕೆ1ನಿನ್ನ ನೋಡೆ ನಾನು ಬೇರೆಯಲ್ಲವಯ್ಯಇದು ಮಾಡಿ ಬಂದ ಸುಕೃತವೇಯೆಲ್ಲನಿನ್ನವನ ನೀನೆ ಕೈವಿಡಿದೆಲ್ಲ ಕೇಳುನಿನ್ನೊಳಗೆನ್ನೊಳಗೆ ಭೇದವೇನೂ ಇಲ್ಲ2ಖೂನವಿಲ್ಲದ ಖೂನದಿಂದ ನಿನ್ನ ಕಂಡೆ ನಾಖೂನವಿದ್ದೂ ವಿಲ್ಲದಂತೆ ಬಲಗೊಂಡೆಧ್ಯಾನ ಮೌನವೆಲ್ಲವ ನಾ ಕಳಕೊಂಡೆಧ್ಯಾನವೆಂತು ನಿನ್ನನೆ ಭಜನೆಗೊಂಡೆ3ನಿನ್ನ ಪಾದವ ನಂಬಿಯೆ ಸಂತೋಷನಾದೆ ನಾನಿನ್ನ ಪಾಡಿ ಪೊಗಳಿ ವಿಶೇಷನಾದೆನಿನ್ನ ಲೀಲೆ ನೆನೆದು ನಾನೀಶನಾದೆನಿನ್ನ ನೋಡಿಯೆ ಕಂಡು ಜಗದೀಶನಾದೆ4ಕೋಟಿ ಶತಶಶಿ ಪ್ರಭೆಯ ತಾಳ್ದ ಅಂದವನ್ನುಪಾಟಿಸಿ ಪೊಗಳಬಲ್ಲೆನೆ ಮುಂದಾನೀಟೆನಿಪದೇವಗುರುಚಿದಾನಂದ ನಿನ್ನನೀಟಿನಂತೆ ನಿಲ್ಲಿಸು ಕರುಣದಿಂದ5
--------------
ಚಿದಾನಂದ ಅವಧೂತರು
ರಕ್ಷಿಸೆನ್ನ ರಕ್ಷಿಸೆನ್ನನು ಸುರಯಕ್ಷರಕ್ಷಕ ಮಹಾದಕ್ಷ ಯತಿ ಮುನಿ ಪಕ್ಷ ವಿರೂಪಾಕ್ಷಕುಕ್ಷಿಯೊಳು ನೀ ನೆಲಸಿ ಎನ್ನ ಕೃಪೇಕ್ಷಣದಿ ಕೈವಿಡಿದುರಕ್ಷಿಪಅಕ್ಷಯರಾಕ್ಷಸಾಂತಕ ಪಕ್ಷಿವಾಹನ ದೇವಪ್ರಿಯಪವೇದವೇದ್ಯಸುಜನರಕ್ಷ ನಾದಭೇದ್ಯಸಾಧನ ನಾಲ್ಕನು ಸಾಧಿಪ ಸಾಧಕನಾದ ದೇವನೆ ನಿನ್ನ ಪಾದವ ಸ್ತುತಿಪೆನುವೇದ ಸ್ಮøತಿಗಳು ಆದಿಶೇಷನುಸಾಧಿಸುತ ಭೇದಿಸಿಯೆ ನಿನ್ನನುಹಾದಿ ಕಾಣದು ಪೊಗಳ್ವಡೆನಗೆ ಅರಿಯದಾ-ಗಿದೆ ಅನಾದಿ ಮೂರುತಿ1ಹಾರಹೀರ ಫಲಿಸಿದಂಥಾ ಶೂರ ವೀರಸಾರವಿಲ್ಲದ ಸಂಸಾರ ದೂರ ವಿ-ದೂರ ಭಯ ಜರ್ಜರ ಕರುಣಾಕರಸಾರಪೂರಿತಕಾರಣಾತ್ಮಕಮಾರವೈರಿಯೆ ಧೀರ ಜಗದುದ್ಧಾರ ಎನಗೆತೋರಿ ಶಕುತಿಯಸಾರಹೃದಯನೆಗೌರಿ ವಲ್ಲಭನೆ2ಪರಮಪುರುಷ ಪಾರ್ವತೀಪ್ರಿಯಶರಣ ಹೃದಯ ನಿರುತ ಪಾಲಿಪ ಶಂಭುಹರಪಿನಾಕಿಶಿವವರಚಿದಾನಂದಗುರುಅವಧೂತಾತ್ಮ ನಿರುಪಮ ನಿರ್ಮಾಯನಿರವಯ ನಿರುತಪರಮಶಿವ ವಿಶ್ವಹೃದಯಪರತರಾತ್ಮಕಪರಮಮಂಗಳಪರಮಚೈತನ್ಯಾತ್ಮ ವಸ್ತುವೇ3
--------------
ಚಿದಾನಂದ ಅವಧೂತರು
ರಂಗ ಬಾ ಮೋಹನಾಂಗ ಬಾ ದೇವೋತ್ತುಂಗ ಬಾರೆಂದು ಕರೆದಳುಗೋಪಿಪ.ಚೀರುತ ಬಂದ ಚಿನ್ನ ಹಸಿದನೆಂದುಘೃತಕ್ಷೀರವೆರೆಸಿ ಕೊಟ್ಟರೆ ಒಲ್ಲದೆಚೋರತನಕೆ ಮೆಚ್ಚಿ ಪೋಗುವೆ ನಿನ್ನನುದೂರುತ ನಿರುತ ಬಾಹರು ಗೋವಳೆಯರು 1ತುರುಗಾವೊ ನೆವದಲಿ ಪೋಗಿ ಗೋಪಾಲರಕುರುಳಿಗೆ ತುರದ ಬಾಲಕೆ ಗಂಟಿಕ್ಕಿದÀುರುಳತನಗಳನ್ನು ಮಾಡಿ ಮಾಡಿ ಮತ್ತ್ತೆಅರಿಯದಂತೆ ಬಿಕ್ಕಿ ಬಿರಿಯಬೇಡೆಲೆ ಕಂದ 2ಚೆಲ್ಲೆಗಂಗಳೆಯರ ಶಯನಕೆ ಪೊಂದಿಹನಲ್ಲರ ಬಡಿದೋಡಿ ಬರುತಲಿಹೆಸಲ್ಲದು ನಿನಗಿದು ಬಾಲಕತನದೊಳುಫುಲ್ಲಲೋಚನ ಮುದ್ದು ಗೋಪಾಲಕೃಷ್ಣ 3ಶಕಟ ಪೂತನಿತೃಣಾವರ್ತಮೊದಲಾದಶಕುತ ದನುಜರ ಮರ್ದನ ಕೃಷ್ಣಯ್ಯಭಕುತರ ಬವಣೆಯನಳಿಯದಿದ್ದರೆ ಗಡಸಕಲರುಜಾರಚೋರೆಂದು ಸಾರುವರೊ4ಎನ್ನ ಬೇಡು ನೀ ಮನದಣಿ ನೀಡುವೆಅನ್ಯರ ಮನೆಗೆ ಪೋಗಲಿ ಬೇಡವೊಚಿನ್ಮಯ ಮೂರುತಿ ಪ್ರಸನ್ವೆಂಕಟ ಕೃಷ್ಣನನ್ನಾಣೆ ಮನೆಯ ಬಿಟ್ಟಗಲದಿರೊ 5
--------------
ಪ್ರಸನ್ನವೆಂಕಟದಾಸರು
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ರಾಘವೇಂದ್ರಾ - ಸದ್ಗುಣಸಾಂದ್ರಾ ಪರಾಘವೇಂದ್ರಾ ಅನು - ರಾಗದಿ ಭಕ್ತರರೋಗವ ಕಳೆದು ಸು - ಭೋಗವ ಸಲಿಸೋ ಅ.ಪಧೀಮಂತರಿಗತಿ - ಕಾಮಿತವೀವೊಶ್ರೀಮಂತನೆ ಎನ - ಕಾಮಿತ ಸಲಿಸೋ 1ಆಪದ್ಬಾಂಧವ - ಕೋಪವ ಮಾಡದೆನೀ ಪಾಲಿಸೋ ಎನ್ನ - ಪಾಪವ ನೋಡದೆ 2ಅನ್ಯನಲ್ಲವೊ - ನಿನ್ನ ಸುಭಕ್ತನುಮನ್ನಿಸಿ ದಯದಿ ನೀ - ಎನ್ನನು ಕಾಯೋ 3ಜನ್ಯನ ಜನಕನು - ಮನ್ನಿಸದಿರಲುಅನ್ಯರು ಕಾಯ್ವರನನ್ಯಪಾಲಕನೇ 4ಈಶನು ನೀನೈ - ದಾಸನು ಎನ್ನನು -ದಾಶಿನ ಮಾಡದೆ - ಪೋಷಿಸಿ ಪೊರೆಯೈ 5ಎಂದಿಗೆ ನಿನ್ನನು - ಪೊಂದುವೆ ಗುರುವರತಂದೆಯೆ ತೋರಿಸೋ - ಮುಂದಿನ ಗತಿಯಾ 6ಪೋತನು ನಾನೈ - ಮಾತನು ಲಾಲಿಸೊನೀತ ಗುರುಜಗನ್ನಾಥ ವಿಠಲ ಪ್ರಿಯ 7
--------------
ಗುರುಜಗನ್ನಾಥದಾಸರು
ರಾಮನಾಥಸ್ವಾಮಿ ಪಾಲಿಸೋ |ರಘುನಾಥಸ್ವಾಮಿ ಪಾಲಿಸೊಪಪಾಮರನಾದೆನ್ನಪರಾಧವ |ಪ್ರೇಮದಿ ಪಾಲಿಸಿಕೊಳ್ಳೋ ದೇವಾಚಭೂಮಿಜೆಸೀತೆಗೆ | ಪ್ರೇಮನೆಂದೆನಿಸಿದ1ನಿನ್ನನು ನಂಬಿದ ನಾಥನನೂ |ಮನ್ನಿಸದಿರೆ ಕೇಳ್ವರ್ಯಾರೋ ಇನ್ನೂ ||ಸನ್ನುತಗುಣಾಕರನೆನ್ನುವ ಬಿರುದನು |ಎನ್ನೊಳು ತೋರಿಸೊ ರಾಮ ನೀನೂ2ಎಂದಿಗೆ ನಿನ್ನಯ ಪಾದವನೂ |ಪೊಂದುವ ಸುಖವನು ಪೇಳೋ ನೀನೂ |ಮಂದರಧರಗೋವಿಂದನೆ ನಿನ್ನಯ |ಸುಂದರ ಚರಣಕೆ ನಮಿಸುವೆನೂ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ರೂಪತೋರೆನಗೆ ಗುರುವೆರೂಪತೋರೆನಗೆರೂಪನಾಮಕೆ ವಿರಹಿತನಾದ ದೇವನೆರೂಪತೋರೆನಗೆಪಬ್ರಹ್ಮಾಂಡ ತಂಡಗಳೊಳು ಹೊರಗಾವರಸಿಕೊಂಡುಬ್ರಹ್ಮಾಂಡ ಖಂಡಗಳ ಬೆಳಗುವೆ ವಿರೂಪವೆಡೆಗೊಂಡು1ನಿನ್ನ ತೇಜಸ್ಸಿನಿಂದ ತೋರ್ಪುದು ತೋರ್ಪ ಜಗವೆಲ್ಲನಿನ್ನನುಳಿದೇ ಬೇರೆ ತೋರೆನಲವಕಾಶವ ಇಲ್ಲ2ನಾದ ಬಿಂದುಕಳೆ ನೀನೆಂಬೆನೆ ದೃಶ್ಯವು ಇವು ಎಲ್ಲನಾದ ಬಿಂದುಕಳೆ ಸಾಧಕಗಳು ವಸ್ತು ನಿಜವಲ್ಲ3ಬೋಧಾನಂದ ತುರೀಯಗಳೆಂಬೆನೆ ಆ ಅವಸ್ಥೆಗಳೆಲ್ಲಬೋಧಾನಂದ ತುರೀಯದಿ ನೋಡಲು ಎದುರಿದ್ದವು ಎಲ್ಲ4ನಿರ್ವಿಕಾರ ನಿರ್ಗುಣ ನಿರವಯನಿರಂಜನಸ್ಪೂರ್ತಿ ಪರಮಗುರು ಪರಬ್ರಹ್ಮ ಚಿದಾನಂದಮೂರ್ತಿ5
--------------
ಚಿದಾನಂದ ಅವಧೂತರು
ಲೇಸ ಪಾಲಿಸು ಜಗದೀಶನೆ ದಯದಿ |ದೋಷರಹಿತ ಪರಮೇಶನೆ ಮುದದಿ ಪದಾಸ ಜನರ ಮನದಾಸೆಯ ಸಲಿಸುವ |ಸಾಸಿರ ನಾಮ ಸರ್ವೇಶ ಶ್ರೀಶಂಕರ ಅ.ಪಕಾಮ ವ್ಯಾಮೋಹ ಮದಾಂಧಕಾರವು ಬಂದುಪ್ರೇಮದಿ ನಿನ್ನನು ಭಜಿಸಲು ಬಿಡದೂ |ಕಾಮಹರನೆ ಕಾಯೋ ಕಾಮಿತಾರ್ಥವನಿತ್ತು |ಪ್ರೇಮ ಗಿರಿಜಾರಮಣ |ಸೋಮಶೇಖರ ನಿನ್ನ ಲೇಸ ಪಾಲಿಸು 1ಫಾಲಲೋಚನಭವ|ಭಾರನಿವಾರಣ |ಶೂಲಪಾಣಿಯೆ ಮುನಿಜಾಲಸಂರಕ್ಷಣ |ಮಹಾಲಿಂಗೇಶನೆ | ಭಕ್ತಪಾಲಕನೆಂಬುವ |ಮೂಲ ಚರಿತ್ರವಕೇಳಿಬಂದೆನು ದೇವಾ 2ಹಿಂದೆ ಮಾರ್ಕಾಂಡೇಯ ಮುನಿವರ ನಿನ್ನನು |ಚಂದದಿ ಪೂಜಿಸಿ ವಲಿಸಲಾ ಯಮನೂ |ಬಂದು ಪಾಶವ ಕೊರಳ ಸಂದಿನೋಳ್ ಸೇರಿಸ- |ಲಂದು ಮೈದೋರಿ ಗೋವಿಂದಸಖ ನೀ ಕಾಯ್ದೆ 3
--------------
ಗೋವಿಂದದಾಸ