ಒಟ್ಟು 834 ಕಡೆಗಳಲ್ಲಿ , 99 ದಾಸರು , 717 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾನವ ಮಾಡುವೆನು ನಾಮನದಣಿಯ ನಾಮಾಮೃತವ ಪಾನವ ಮಾಡುವೆನು ಪ. ಶ್ರೀನಿವಾಸನ ನಾಮಸುಧಾರಸಏನುರುಚಿಯೋ ಕಾಣೆ ಜೇನುತುಪ್ಪದಂತೆ1 ಸಕ್ಕರೆ ಬೆರೆಸಿದ ಚೊಕ್ಕಪಾನಕವನ್ನುಮಿಕ್ಕು ಮೀರುತಲಿದೆ ರಕ್ಕಸಾರಿಯ ಧ್ಯಾನ 2 ಕದಳಿ ಖರ್ಜುರ ದ್ರಾಕ್ಷಿ ಅಡಕೆಯಿಮ್ಮಿಗಿಲಾಗಿಮುದಕೊಡುವುದು ಜಿಹ್ವೆಗೊದಗಿದ ತತ್‍ಕ್ಷಣ 3 ಕಾಸಿದ ಕೆನೆಹಾಲ ದೂಷಿಸುವಂತಿದೆಏಸುರುಚಿಯೋ ಹರಿದಾಸರೆ ಬಲ್ಲರು 4 ಹಯವದನನ ನಿರ್ಭಯದಿಂ ಭಜಿಸಲುದಯಮಾಡುವ ಸಾಯುಜ್ಯಪದವನಿತ್ತು5
--------------
ವಾದಿರಾಜ
ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ
ಪಾರ್ವತೀಶ ಎನ್ನಿರೋ ಮನಸಾರೆ ಪಾರ್ವತೀಶ ಎನ್ನಿರೊ ಪ. ಪಾರ್ವತೀಶನ ಭಜಿಸಿ ನಿಮ್ಮನು ದ್ಧಾರ ಮಾಡುತ ಹರಿಯ ಮಹಿಮೆಯ ಸಾರಿ ಭಜಿಸಲು ಮನವನೀಯುವ ಕಾರ್ಯ ದುರಂಧರ ಈಶನನ್ನು ಅ.ಪ. ತರುಣಿ ಅಸ್ತಂಗತನಾಗುತಿರೆ ಹರುಷದೊಳೊಮ್ಮೆ ಶಂಭೊ ಎಂದು ವರ ಉಚ್ಚಾರವ ಮಾಡಲಾಕ್ಷಣ ತರಿದು ನಿಮ್ಮಯ ಸಕಲ ಪಾಪವ ಪೊರೆವ ಕರುಣಿ ಈಶನೆನ್ನುತ ಸ್ಮರಿಸಿ ಸುಖದೊಳು ಬಾಳಿ ಜಗದೊಳು 1 ಪಾದ ನೆನವ ಶಂಭೋ ಎಂ ದೀ ಸುನುಡಿಯ ತಿಳಿದು ಭಾಸುರಾಂಗನ ಮೊಮ್ಮಗನ ಸ್ತುತಿ ಲೇಸು ಎಂದು ಧ್ಯಾನವ ಮಾಡಲು ಸೂಸಿ ಕರುಣವ ಬೀರಿ ನಿಮಗೆ ಲೇಸು ಮಾಡುತ ಹರಿಯ ತೋರುತ 2 ಪಾಶಾಂಕುಶಧರನೆನಲು ನಿಮ್ಮಯ ಪಾಪ ರಾಶಿ ಖಂಡಿಸಿ ಪೊರೆದು ಶ್ರೀ ಶ್ರೀನಿವಾಸ ಪದವನು ಈಶ ಧ್ಯಾನಿಪ ಮನವನೀವನು ಸೂಸಿ ಭಕ್ತಿಯೊಳ್ ಶ್ರೀಶ ಭಕ್ತರು ವಿಶ್ವಾಸದಿಂದಲಿ ಈಶ ಎನ್ನಿರೋ ಈ ಸಂಸಾರ ಈಸಲೋಸುಗ 3
--------------
ಸರಸ್ವತಿ ಬಾಯಿ
ಪಾಲಿಪರೊಬ್ಬರಿಲ್ಲ ಪ ದಂಡಾದಿ ರಾಜ್ಯವು ಕೆಟ್ಟು ಪೋಕ ಪುಂಡರು ಹೆಚ್ಚಿ ಮಾರ್ಗವತೋರಿ ಕೊಟ್ಟು ಪೆಂಡಾರರಿಗೆ ಸುಲಿಗೆ ಕೊಟ್ಟು ಭೂ ಮಂಡಲದೊಳಗಣ ಜನರೆಲ್ಲ ಕೆಟ್ಟು 1 ಎತ್ತು ಮುಟ್ಟುಗಳೆಲ್ಲ ಹೋಗಿ ಬೀಳು ಬಿದ್ದು ಗದ್ದೆಯ ಪೈರು ನಿಸ್ಥಳವಾಗಿ ತುತ್ತುರಿಗಳು ಸುಟ್ಟು ಹೋಗಿ ದಂಡು ನಿತ್ತು ಪ್ರಜೆಗೆ ಮನೆ ಮುಖವಿಲ್ಲದಾಗಿ 2 ಕರಿದೋ ಬಿಳಿದೋ ಕಾಣೆ ಕ್ಷೀರ ಕೊಡುವ ತರುಗಳಿಲ್ಲವು ಮರ ಒಣಗಿ ಅರಮನೆ ಯತ್ತಣಿಂ ಘೋರ ಕರೆ ಕರೆಯೊಳು ಬಂದಿತಯ್ಯ ಗ್ರಹಚಾರ 3 ಗಂಜಿ ಗಾಸ್ಪದವಿಲ್ಲವಾಯ್ತು ಮೂರು ಸಂಜೆಯ ದೀಪಕೆ ಕೊಳ್ಳಿ ಬೆಳಕಾಯ್ತು ಅಂಜನ ಪಾತ್ರೆ ಹೆಚ್ಚಾಯ್ತು ಬದುಕಲು ನಾಲ್ಕು ವರ್ಣ ಒಂದಾಯ್ತು 4 ಕಾಲಗತಿಯು ಬಲು ಬಿರುಸು ಮುಂದೆ ಬಾಳುವ ಜನರಿಗೆ ನೃಪರಿಂದ ಹೊಲಸು ಶೂಲಿ ಸಾಯುಜ್ಯವ ಬಯಸು ಲಕ್ಷ್ಮೀ ಲೋಲನ ನಾಮವ ಮನದೊಳುಚ್ಚರಿಸು 5
--------------
ಕವಿ ಪರಮದೇವದಾಸರು
ಪಾಲಿಸೀ ಪಸುಳೆಯನು ಪರಮ ಪುರುಷ ಪ. ಬಾಲೆ ನಿನ್ನವಳೆಂದು ಶ್ರೀ ಕರಿಗಿರೀಶ ಅ.ಪ. ನರಹರಿಯೆ ಲಕ್ಷೀಶ ತರಳೆ ನಿನ್ನವಳಿನ್ನು ತ್ವರಿತದಲಿ ಕಾಪಾಡು ತಡಮಾಡದೆ ಕರಕರೆಯ ರೋಗ ಬಾಧೆಯ ಬಿಡಿಸಿ ಹರಿ ನಿನ್ನ ಕರುಣಾಮೃತವಗರೆದು ಕಡುಕೃಪೆಯೊಳಿನ್ನು 1 ಫಣಿರಾಜಶಯನ ಪರ್ಯಂಕ ದೇವರದೇವ ಬಿನಗು ದೇವರ ಗಂಡ ಎಣೆಯುಂಟೆ ನಿನಗೆ ಮಣಿಯದಾಗ್ರಹದೇವಗಣ ಉಂಟೆ ನಿನಗಿನ್ನು ಕ್ಷಣ ಬಿಡದೆ ಸರ್ವಬಾಧೆಯ ಬಿಡಿಸಿ ಸತತ 2 ಪ್ರಾಣದೇವನೆ ಸರ್ವ ದೇವತೆಗಳಧಿನಾಥ ಪ್ರಾಣದೇವನು ನಿನ್ನ ಪ್ರಾಣ ಪದಕ ಪ್ರಾಣದೇವಗೆ ಪೇಳಿ ಪ್ರಾಣ ಭಯವನೆ ಬಿಡಿಸಿ ಪ್ರಾಣಸೂತ್ರವ ನಡಿಸಿ ತ್ರಾಣಗೆಡದಂತೆ 3 ನಿನ್ನ ದಾಸರ ದಾಸಳಿವಳು ಶ್ರೀಹರಿ ಕೇಳು ಎನ್ನ ಬಿನ್ನಪವ ನೀ ಬರಿದೆನಿಸದೆ ಚನ್ನಾಗಿ ಆಯುರಾರೋಗ್ಯ ಸಂಪದವಿತ್ತು ಮನ್ನಿಸಿ ಕಾಪಾಡು ಮಂಗಳಾತ್ಮಕನೆ 4 ಗುರುಕರುಣ ವರಬಲದಿ ಪುಟ್ಟಿದಾ ಶಿಶು ಇವಳು ಪರಮ ಮಂಗಳೆ ಎನಿಸಿ ಪಾಲಿಸೈ ಜಗದಿ ನಿರುತದಲಿ ನಿನ್ನ ಪದಭಕ್ತಿ ಜ್ಞಾನವ ಕೊಟ್ಟು ಹರಸಿ ಪೊರೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಪಾಲಿಸು ಪರಮಪಾವನ ಪದ್ಮಾವತೀರಮಣ ಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ. ಪಾಹಿಪಾರ್ಥಸಾರಥಿಅ.ಪ. ಮದನಜನಕ ಮಹಿಮಾಂಬುಧಿ ನಿನ್ನ ಪದಕಮಲವ ನಾ ಸ್ಮರಿಸದೆ ಎನ್ನ ಮದಮುಖತನವನು ಒದರುವದೆನ್ನ ಪದುಮನಾಭ ರಕ್ಷಿಸು ನೀ ಮುನ್ನ ಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧ ಉದುಭವಿಸುವುದು ನಿಜವೇ ಭಕ್ತವಾತ್ಸಲ್ಯ ಇದಕೆ ನೀ ಊನ ತರುವೆ ಸಾಕು ಈ ಮರವೆ ಒದಗಿಸು ಸರ್ವಮನಸಿನೊಳ್ ಪುದು- ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ- ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತ ಮಧುಸೂದನ ಮಂದರಗಿರಿಧರ ನೀ- ರದ ನಿಭ ನಿರ್ಮಲ ನಿಜರೂಪ ಗುಣ ಸದನಾಚ್ಯುತ ರವಿಕುಲದೀಪ ನಿರ- ವಧಿ ಆನಂದ ರಸಾಲಾಪ ಬುಧಜನೋಪಲಾಲಿತ ಲೀಲಾಯತ ಉದಧಿಶಾಯಿ ಮಾನದ ಮಧುಸೂದನ1 ನಾಮಸ್ಮರಣೆಯೆ ನರಕೋದ್ಧಾರ ನೇಮವಿಲ್ಲೆಂಬುದು ನಿನ್ನ ವಿಚಾರ ಸಾಮಾರ್ಥದ ಗುಣಕೆಲ್ಲನುಸಾರ ಪಾಮರ ಮನಕಿದು ಈ ಗುಣಭಾರ ಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿ ಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬ ಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊ ಸಾಮಗಾನಲೋಲ ಸುಜನ ಸ್ತೋಮ ಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬ ತಾಮಸ ಪರಿಹರಿಸಿ ಜ್ಞಾನೋದಯದ ಸದಾನಂದ ಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆ ನೀ ಮಾಡುವುದೆಲ್ಲವು ಸಹಜ ಗುಣ ಧಾಮಾಶ್ರಿತ ನಿರ್ಜರಭೂಜ ಸುಜನ ಸ್ತೋಮಾರ್ಕಾಮಿತ ವಿಭ್ರಾಜ ಶ್ರೀಮಚ್ಛೇಷಾಚಲ ಮಂದಿರ ಸು- ತ್ರಾಮಾರ್ಚಿತ ಸದ್ರಾಮ ಶ್ರೀರಾಮ2 ಉಡುವ ಸೀರೆಯ ಸೆಳೆಯಲು ದ್ರುಪಜೆಯ ಕೊಡಲಿಲ್ಲವೆ ಬಹುವಸನ ಸಂತತಿಯ ಹಿಡಿಯವಲಕ್ಕಿಗೆ ದ್ವಾರಕ ಪತಿಯ ಕಡು ಸರಾಗವಾಯ್ತಿಂದಿನ ಪರಿಯ ಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನ ಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟ ಕೊಡು ದಯವಿಟ್ಟು ಮುದದಿ ಕರುಣಾವುದಧಿ ಕಡುಲೋಭಿತನ ಬಿಡು ಮಹರಾಯ ಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತ ಕರ್ಮ ವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯ ಒಡೆಯ ಶ್ರೀ ಲಕ್ಷ್ಮೀನಾರಾಯಣ ನಡುನೀರೊಳು ಕೈಬಿಡುವೆಯ ನೀ ತೊಡಕೊಂಡ ಬಿರುದೇನಯ್ಯ ಈ ಕಡು ಕೃಪಣತನ ಸಾಕಯ್ಯ ಪೊಡವಿಯೊಳಗೆ ಪಡುತಿರುಪತಿಯೆಂಬ ದೃಢಕಾರ್ಕಳದೊಡೆಯ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೆನ್ನನು ಜಾನಕೀ ಅರವಿಂದ ನಾಯಕಿ ಪ. ಫಾಲಲೋಚನನುತೆ ತ್ರೈಲೊಕ್ಯ ವಿಖ್ಯಾತೆ ಬಾಲಾರ್ಕದ್ಯುತಿ ಭಾಸುರಾನನೆ ನೀಲಾಳಕೆ ನಿತ್ಯನಿರ್ಮಲೆ ಅ.ಪ. ಜನನಿಯಲ್ಲವೆ ನೀನು ತನುಭವರೊಳು ಇನಿತು ನಿರ್ದಯವೇನು ಮನಕೆ ತಾರಲು ನೀನಾಕ್ಷಣದೊಳೇ ದೀನನಂ ಅನಘ ಸಂಪದವಿತ್ತು ಮೆರೆಯಿಪ ಘನತೆಯಾಂತವಳಲ್ಲವೇನು 1 ಬಾಗುತೆ ಶಿರವಿಳೆಗೆ ಬೇಡುವ ಬಗೆ ಕೂಗು ಬೀಳದೆ ಕಿವಿಗೆ ಭಾಗವತಾರ್ಚಿತೆ ಭಾರ್ಗವೀ ನಾಮಖ್ಯಾತೆ ಬೇಗೆಯೆಲ್ಲವ ಪರಿದು ಯೆನ್ನ ರಾಗದಿಂದಲಿ ನೋಡು ಭರದಲಿ 2 ನೀನಲ್ಲದನ್ಯರಂ ಕಾಣೆನು ಹಿತರಂ ಮಾನಿತ ಗುಣಯುತರಂ ಆನತರಾಗುವ ಸೂನೃತವ್ರತಿಗಳಿ ಗಾನಂದವಿತ್ತು ಪೊರೆವ ದಾನಿ ಶೇಷಗಿರೀಶರಮಣಿ 3
--------------
ನಂಜನಗೂಡು ತಿರುಮಲಾಂಬಾ
ಪಾಲಿಸೊ ಜಗನ್ನಾಥ ದಾಸಾ | ವರ್ಯಕಳೆಯೊ ಯನ್ನ ಕಲಿಕಲ್ಮಷ ಪ ಶೀಲ ಗೋಪಾಲನ ದಾಸಾರ್ಯರ ಕರಜನೆಲಾಲಿಸೋಗುಣನಿಧಿ ಬಾಲನ ಬಿನ್ನಪ ಅ.ಪ. ಹರಿಕಥಾಮೃತ ವಕ್ತಗುರುವೇ | ಕಾಯೊಪರಮ ಭಕ್ತರ ಕಲ್ಪತರುವೆ |ಹರಿಗುರು ಕರುಣ ಸಂಪೂರ್ಣಪಾತ್ರನೆ ಭವಸೆರೆಯ ಬಿಡಿಸಿ ಕಾಯೊ ಪರಮ ಪವಿತ್ರ1 ಅದ್ವೈತ ಗಜಸಿಂಹ 2 ಭವಜಲಧಿ ನವಪೋತ ಹರಿಯಾ | ಗುರುಗೋವಿಂದ ವಿಠಲನ ಪದವಾ |ಅವಿರತ ಹೃದಯದಿ ನೋಡುವ ಸೌಭಾಗ್ಯಜವದಿ ಪಾಲಿಸೊ ಜಗನ್ನಾಥ ದಾಸಾರ್ಯನೆ 3
--------------
ಗುರುಗೋವಿಂದವಿಠಲರು
ಪಾಲಿಸೋ ಗಂಗಾಧರ ಪಾಲಿಸೋ ಪ. ಪಾಲಿಸೊ ಗಂಗಾಧರನೆ | ಮಧ್ಯ ಫಾಲದಿ ನಯನ ಉಳ್ಳವನೆ | ಆಹ ಶ್ರೀಲೋಲನ ಗುಣಜಾಲವ ಸ್ಮರಿಸುತ್ತ ಲೀಲೆಯಿಂ ಭಕ್ತರ ಪಾಲಿಸುತಿಪ್ಪನೆ ಅ.ಪ. ಬ್ರಹ್ಮನ ಭ್ರೂಮಧ್ಯೆ ಜನಿಸಿ | ಬಹು ದುರ್ಮತಿಗಳನೆ ಮೋಹಿಸಿ | ಕು ಧರ್ಮದ ಶಾಸ್ತ್ರವ ರಚಿಸಿ | ಅಂ ಧತಮ್ಮಸಿಗವರ ಕಳಿಸಿ | ಆಹ ನಿರ್ಮಲ ಮನದಲ್ಲಿ ಬೊಮ್ಮನಯ್ಯನ ಭಜಿಸಿ ನಿತ್ಯ ರಮಿಸುತಲಿಪ್ಪನೆ 1 ಕಂಜನಾಭನ ಮೊಮ್ಮಗನೆ | ಖಳರ ಭಂಜಿಸುವಂಥ ಬಲಯುತನೆ | ಮನ ರಂಜನ ರೂಪಾಕೃತನೆ | ಖಳ ಗಂಜಿ ಹರಿಯಿಂದ ರಕ್ಷಿತನೆ | ಆಹ ಅಮೃತ ಮಥಿಸುವಾಗ ನಂಜುದ್ಭವಿಸೆ ಕುಡಿದು ನಂಜುಂಡನೆನಿಸಿದೆ 2 ಕಪಿಲನದಿ ತೀರದಲ್ಲಿ | ಬಹು ತಪಸಿಗಳಿಗೆ ಒಲಿಯುತಲಿ | ಭಕ್ತ ರಪರಿಮಿತ ಬರುತಿಲ್ಲಿ | ನಿತ್ಯ ಜಪಿಸುತ್ತ ನಿನ್ನ ಸ್ತೋತ್ರದಲಿ | ಆಹ ಗುಪಿತದಿಂದ್ಹರಿ ಭಕ್ತರಪವರ್ಗದೊಡೆಯ ನಿನ್ನ ಲ್ಲಿಪ್ಪನೆಂತೆಂದು ಜಪಿಸುತ್ತಲಿಪ್ಪರೊ3 ಗಂಗಾಧರನೆನಿಸಿದನೆ | ಅಂತ ರಂಗದಿ ಹರಿಯ ತೋರುವನೆ | ಉಮೆ ಕಂಗಳಿಗಾನಂದಪ್ರದನೆ | ನಿತ್ಯ ರಂಗನಾಥನ ಪೂಜಿಸುವನೆ | ಆಹ ಜಂಗಮ ಜೀವರ ಮನದಭಿಮಾನಿಯೆ ಲಿಂಗರೂಪದಿ ಜನರ ಕಂಗಳರಂಜನೆ4 ಅಪಾರ ಮಹಿಮನ ಗುಣವ | ಬಹು ರೂಪಗಳನೆ ನೋಡುತಿರುವ | ನಿತ್ಯ ಶ್ರೀಪತಿ ನರಹರಿಯ ನೆನೆವ | ಮುಂದಿ ನಾ ಪದವಿಗೆ ಶೇಷನಾಗ್ವ | ಆಹ ಪರಿ ಪರಿ ಗೋಪಾಲಕೃಷ್ಣವಿಠ್ಠಲನ ಧ್ಯಾನವ ನೀಡೊ5
--------------
ಅಂಬಾಬಾಯಿ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪೊರೆ ದೊರೆಯೆ ಪ. ನಿನ್ನ ಮಾಯ ಅ.ಪ. ಎಷ್ಟು ಛಲವೋ ಎನ್ನಿಂದಲಿ ಸೇವೆಯನು ಕೈಕೊಳ್ಳು ಇನ್ನು ಶ್ರೇಷ್ಠರಾದ ಶ್ರೀ ಗುರುಗಳ ಆಜ್ಞೆಯಲಿ ಬಂಧಿಸಿ ಎನ್ನಿಲ್ಲಿ ಮಹ ಮಹಿಮನೊ ನೀನು ಗುಟ್ಟು ಪೇಳಲು ಎನ್ನಿಂದಲಿ ಅಳವೇ ನಿತ್ಯದಿ ನಿನ್ನ ನೆನವೆ 1 ನಾನಾ ರೂಪ ಧ್ಯಾನದಲಿ ಬಂದ್ಯೊ ಎನ್ನಲಿ ನಿಂದ್ಯೊ ಮಾನವ ಜನ್ಮ ಸಾರ್ಥಕವೆನಿಸಿದ್ಯೊ ಶ್ರೀ ಗುರುದಯ ನೀಡ್ದ್ಯೊ ನಿನ್ನ ಪಾದದಲಿ ಮಮತೆ ಸಾನುರಾಗದಿ ಕೊಟ್ಟು ಎನ್ನ ಸಲಹೊ ಬಿಡೆನು ನಿನ್ನೆಲವೊ 2 ಮಚ್ಛಕೂರ್ಮ ಹರಿ ಸ್ವಚ್ಛ ವರಹರೂಪ ನರಹರಿ ಪ್ರತಾಪ ಸ್ವಚ್ಛಮನದಲಿಹ ಬಲಿಯನೆ ಬಂಧಿಸಿದ್ಯೊ ರಾಜರ ಮರ್ಧಿಸಿದ್ಯೊ ಅಚ್ಚ ಜೀವೋತ್ತಮಗಜನ ಪದವನಿತ್ಯೊ ಗೋಪಿಗೆ ಮುದವಿತ್ಯೊ ಬಿಚ್ಚಿ ವಸನವ ಹಯವನೇರಿದ್ಯಲ್ಲಾ ಗೋಪಾಲಕೃಷ್ಣವಿಠಲಾ 3
--------------
ಅಂಬಾಬಾಯಿ