ಒಟ್ಟು 508 ಕಡೆಗಳಲ್ಲಿ , 69 ದಾಸರು , 385 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವನೆ ಜೀವಾಂಕಿತ ಪ್ರೇತ ನೋಡಿಭುವಿಗೆ ಭಾರನು ಅವನುಹರಿಹಗೆಯನುಪ.ಹರಿಕಥೆಗೆ ಬೇಸತ್ತು ಹರಟೆಯನೆ ಕೇಳುವವಹರಿಯಗುಣ ಹೊಗಳದೊಣಪಂಟ ಬಡಿವವಹರಿಮರೆದು ಮಲಭಾಂಡವನು ತುಂಬಿಕೊಳುವವಹರಿಭಟರ ನಡೆನುಡಿಗೆ ಸೈರಿಸದವ 1ಹರಿಪ್ರಿಯರ ನೆರೆಗಾರದತ್ತತ್ತ ಜಾರುವವಹರಿಯವರಿಗುಣಿಸದೆ ಧನ ಕಳೆವವಹರಿಯಾತ್ರೆಗಂಜಿ ಬಲವನೆ ಕೊಳುವವಹರಿವ್ರತವ ಬಿಟ್ಟಿತರ ವ್ರತ ಕೊಳುವವ 2ಹರಿಪದಾಂಬುಜವಜರಿದುಹಲವು ನೀರ್ಕುಡಿವವಹರಿಲಾಂಛನಿಲ್ಲದ ಚೆಲುವಿಕೆಯವಹರಿಪ್ರಸನ್ವೆಂಕಟೇಶನ ಪಾದಾಬ್ಜವ ಭಜಿಸಿಹರಿಪರದೈವವೆನ್ನದ್ಹೊಲೆಮನದವ3
--------------
ಪ್ರಸನ್ನವೆಂಕಟದಾಸರು
ಆರೇನ ಮಾಡುವರು ಆರಿಂದಲೇನಹುದುಪೂರ್ವಜನ್ಮದ ಕರ್ಮವಿಧಿ ಬೆನ್ನಬಿಡದು ಪಐದು ವರುಷದತರಳ ತಾನೆತ್ತ ತಪವೆತ್ತ |ಬೈದು ಮಲತಾಯಿ ಅಡವಿಗೆ ನೂಕಲು ||ಸುಯ್ದು ಕೋಪಾಗ್ನಿಯಲಿ ಪೊರಮಟ್ಟು ಪೋಪಾಗ |ಐದೆ ಬಂಧುಗಳಿದ್ದು ಏನ ಮಾಡಿದರು1ನೃಪರೊಳಗೆಅತಿ ಶ್ರೇಷ್ಠ ಬಲವಂತ ರಘುರಾಮ |ಅಪರಿಮಿತ ಶೂರ ಲಕ್ಷ್ಮಣದೇವರು |ಚಪಲಾಕ್ಷಿ ಸೀತೆಯನು ಖಳನು ಕದ್ದೊಯ್ವಾಗ |ವಿಪರೀತ ವೀರರಿದ್ದೇನ ಮಾಡಿದರು ? 2ಪಾಪಿ ದುಶ್ಯಾಸ ದ್ರೌಪದಿಯ ಸೀರೆಯ ಸೆಳೆದು |ಕೋಪದಿಂ ಮಾನಭಂಗವ ಮಾಡಲು ||ಆಪತ್ತು ಬೆನ್ನಟ್ಟಿ ಹಾ ಕೃಷ್ಣ | - ಎನುವಾಗ |ಭೂಪತಿಗಳೈವರಿದ್ದೇನ ಮಾಡಿದರು ? 3ರಣದೊಳಗೆ ಅಭಿಮನ್ಯು ಚಕ್ರವ್ಯೂಹವ ಪೊಕ್ಕು |ಸೆಣಸಿ ಷಡುರಥದೊಡನೆ ಹೊಯ್ದಾಡಲು ||ಅಣಕವಿಲ್ಲದೆ ಕಾದಿ ಅಸುವಳಿದು ಪೋಪಾಗ |ತ್ರಿಣಯಸಖಿ ಪಾರ್ಥರಿದ್ದೇನ ಮಾಡಿದರು 4ಬ್ರಹ್ಮಶಿರ ಕರಕಟ್ಟಿ ಶಿವನ ಪೀಡಿಸುತಿರಲು |ಸುಮ್ಮನೇ ಜಗವನೆಲ್ಲವ ತಿರುಗಿದ ||ಬೊಮ್ಮಮೂರುತಿಯಾದ ಪುರಂದರವಿಠಲನೇನಮ್ಮಅಳವಲ್ಲ ವಿಧಿಮೀರಿ ಬಾಳುವರೆ5
--------------
ಪುರಂದರದಾಸರು
ಇದೀಗ ಭಕುತಿಯು ಮತ್ತಿದೀಗ ಮುಕುತಿಯುಪ.ಮಧುದ್ವಿಷನ ಪದಕಮಲಕೆಮಧುಪನಂತೆ ಎರಗುತಿಹುದು ಅಪಶ್ರೀಕಾಂತ ಮೂರುತಿ ಬಾಹ್ಯಾಂತರದಿಏಕಾಂತದಿ ನೆನೆದಾನಂದ ತುಳುಕಾಡಿ ||ಮುಖ ವಿಕಾಸದಿ ತನುವ ಮರೆದುವಿಕಳ ಭಾವದಿ ಉಬ್ಬುಬ್ಬಿ ಕುಣಿವುದು 1ಡಂಭವ ಸಾರುವರತ್ತತ್ತಜಡಿದುಕುಂಭಕ ರೇಚಕ ಪೂರಕವಿಡಿದು ||ಅಂಬುಧಿಶಾಯಿ ಪದಾಂಬುಜ ವೀಕ್ಷಿಸಿಬಿಂಬವ ಕಾಂಬುವ ಹಂಬಲವಿಡಿವುದು 2ಕಂಡವರ ಕಾಲಿಗೆ ಕುಮನುಜರಿಗೆಮಂಡೆಯ ಬಾಗದೆ ಪರೇಶ ಕೊಟ್ಟಷ್ಟು ||ಉಂಡು ಸಜ್ಜನರ ಕಂಡು ಸುಖಿಸಿ ಪಾಷಂಡ ಸಂಭಾಷಣೆ ಸೋಕದೆ ಬಾಳ್ವುದು 3ತಪುತಾರ - ಕಂಬುಲಾಂಛನ ಪಿಡಿದುಗುಪಿತ ಮಂತ್ರಗಳೊರೆವ ಗುರುಗ -ಳುಪದೇಶ ಕ್ರಮವ ಮೀರದೆ ಇತರಕಪಟಬಿಟ್ಟು ನಲಿದು ಸುಖಿಪುದು4ಸದ್ಭಕ್ತಿ ಸದ್ಧರ್ಮ ಮಾಡುತ ನೋಡುತಸದ್ವಿಷ್ಣು ಸಚ್ಛಾಸ್ತ್ರ ಹೇಳುತ ಕೇಳುತ ||ದುಗ್ಧ ಸಮುದ್ರೇಶ ಪುರಂದರವಿಠಲಗೆಇದ್ದ ಸಂಪದವ ತಪ್ಪದೆ ಒಪ್ಪಿಸುವುದು 5
--------------
ಪುರಂದರದಾಸರು
ಇಲ್ಲಿ ನೋಡಲು ರಾಮ ಅಲ್ಲಿ ನೋಡಲು ರಾಮ |ಎಲ್ಲೆಲ್ಲಿ ನೋಡಲು ರಾಯಚಂದ್ರನು ಪಮೂಲೋಕದಲ್ಲಿ ತ್ರೈಮೂರ್ತಿರೂಪಗಳಲ್ಲಿಎಲ್ಲೆಲ್ಲಿ ನೋಡಲು ಅಲ್ಲಲ್ಲಿ ರಾಮರೂಪ ಅ.ಪರಾವಣನ ಮೂಲಬಲವ ಕಂಡು ಕಪಿಗಳುಆವಾಗಲೆ ಹೊರಟೋಡುತಿರೆಈವಾಗ ನರನಾಗಿ ಇರಬಾರದೆಂದೆನುತದೇವ ರಾಮಚಂದ್ರ ಬಹುರೂಪ ತಾನಾದ 1ಅವನಿಗೆ ಇವ ರಾಮ ಇವನಿಗೆ ಅವ ರಾಮಬುವಿಯೊಳಗೆ ಬೇರೆ ರೂಪವುಂಟೆಅವನಿಯೊಳಿರುತಿಪ್ಪದುರುಳ ಜನರೆಲ್ಲಅವರವರೆ ಹೊಡೆದಾಡಿ ಹತವಾಗಿ ಹೋದರು 2ಹನುಮಂತಾದಿ ಸಾಧುಜನರು ಅಪ್ಪಿಕೊಂಡುಕುಣಿದಾಡಿದರು ಅತಿ ಹರುಷದಲಿಕ್ಷಣದಲಿ ಪುರಂದರವಿಠಲರಾಯನುಕೊನೆಗೆ ರಾಮಚಂದ್ರನೊಬ್ಬನಾಗಿ ನಿಂತ 3
--------------
ಪುರಂದರದಾಸರು
ಎಂತಹ ಸಣ್ಣವನೆ-ನಿನ್ನ ಮಗನಂತಹರೆಲ್ಲಿಲ್ಲವೆ |ಹೊಂತಕಾರಿಬಲವಂತರಿಗಧಿಕನುಪತರಳನಂತಿಪ್ಪನು ತರಳೆಯರೊಡನಾಡುವ |ಕಿರುಬೆರಳುಗುರಲಿ ಗಿರಿಯನೆತ್ತಿದವ 1ಕಾಳಿಯ ಸರ್ಪನ ಕಾಲಲ್ಲಿ ತುಳಿದವ |ಪಲಾಯನ ಮಾಡಿ ಕಾಲಯವನನ ಸುಟ್ಟ 2ಕಿಚ್ಚು ಪಾನವ ಮಾಡಿ ಅಚ್ಚರಿ ತೋರಿದ |ರಚ್ಚೆಮಾಡುವಿರೆಂದು ಮುಚ್ಚಿಕೊಂಬುವಿಯಲ್ಲೆ3ಬಾಯಿ ತೆರೆದನಲ್ಲೆ ನೀನಂಜುವಂದದಿ |ಆಯಮಳಾರ್ಜುನರಾಯಾಸ ಬಿಡಿಸಿದ 4ದಿಟ್ಟತನದಿ ಮೊಲೆಗೊಟ್ಟವಳನು ಕೊಂದ |ಪುಟ್ಟ ಪುರಂದರವಿಠಲರಾಯನು 5
--------------
ಪುರಂದರದಾಸರು
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಂಥ ಬಲವಂತನೊ-ಕುಂತಿಯ ಸಂಜಾತನೋ |ಭಾರತಿಗೆ ಕಾಂತನೊ-ನಿತ್ಯ ಶ್ರೀಮಂತನೋ ಪರಾಮಚಂದ್ರನ ಪ್ರಾಣನೊ-ಅಸುರ ಹೃದಯ ಬಾಣನೊ |ಖಳರ ಗಂಟಲ ಗಾಣನೊ-ಜಗದೊಳಗೆ ಪ್ರವೀಣನೊ 1ಬಂಡಿಯನ್ನವನುಂಡನೊ-ಬಕನ ಪ್ರಾಣವ ಕೊಂಡನೊ |ಭೀಮಪ್ರಚಂಡನೊ-ದ್ರೌಪದಿಗೆ ಗಂಡನೊ 2ಕುಂತಿಯ ಕಂದನೊ ಸೌಗಂಧಿಕವ ತಂದನೋ |ಕುರುಕ್ಷೇತ್ರಕೆ ಬಂದನೊ-ಕೌರವರ ಕೊಂದನೋ 3ವೈಷ್ಣವಾಗ್ರಗಣ್ಯನೋ-ಸಂಚಿತಾಗ್ರಪುಣ್ಯನೋ |ದೇವವರೇಣ್ಯನೊ-ದೇವ ಶರಣ್ಯನೋ 4ಮಧ್ವಶಾಸ್ತ್ರವ ರಚಿಸಿದನೊ-ಸದ್ವೈಷ್ಣವರ ಸಲಹಿದನೊ |ಉಡುಪಿಕೃಷ್ಣನ ನಿಲಿಸಿದನೊ-ಪುರಂದರವಿಠಲನ ಒಲಿಸಿದನೊ 5
--------------
ಪುರಂದರದಾಸರು
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಏನಾಯಿತು ರಂಗನೆ ನೋಡಿರಮ್ಮ-ನಿ-|ಧಾನಿಸಿ ಎನಗೊಂದು ಪೇಳಿರಮ್ಮ ಪಪುಟ್ಟಿದಾರಭ್ಯ ಕಣ್ಣ ಮುಚ್ಚನಮ್ಮ-ತಾನು |ಎಷ್ಟಾದರೂ ಮೊಲೆಯುಣ್ಣನಮ್ಮ ||ಸೊಟ್ಟಾದ ಮುಖ ಮೇಲಕ್ಕೆತ್ತನಮ್ಮ-ಹೀಗೆ |ಎಷ್ಟು ಹೇಳಲಿ ಬಾಯ ಮುಚ್ಚನಮ್ಮ 1ಕಾಯಇದ್ದಂತಿದ್ದು ಹೆಚ್ಚಿತಮ್ಮ-ಹೆತ್ತ |ತಾಯಿಯ ಬಲವಿಲ್ಲದಾಯಿತಮ್ಮ ||ನೋಯೆ ನೋಟಕೆಅಬ್ಧಿಬತ್ತಿತಮ್ಮ-ಅವನ |ಬಾಯಿಯೊಳಗೆವಿಶ್ವತೋರಿತಮ್ಮ2ಅತ್ಯಂತ ಮಾತುಗಳನಾಡಿದನಮ್ಮ-ಮುಂದೆ |ಸತ್ಯವು ಕುದುರೆಯನೇರುವನಮ್ಮ ||ನಿತ್ಯನಿರ್ದೋಷಪುರಂದರವಿಠಲ ತನ್ನ-|ಭಕ್ತರ ಸಲಹುವದೇವನಮ್ಮ 3
--------------
ಪುರಂದರದಾಸರು
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು
ಕಂಡೀರೆ ನೀವೆಲ್ಲರೂ ಶ್ರೀಕೃಷ್ಣನ ಕಂಡೀರೆ ಪಕಂಡೀರೆ ಪಾಂಡುರಂಗನನೂ ಕಳಕೊಂಡಿರೆಪಾಪ ಸರ್ವವನೂ ಅಂಡಜವಾಹನನಾಗಿಸಂಚರಿಸುವಪುಂಡರೀಕಾಕ್ಷಬ್ರಹ್ಮಾಂಡ ನಾಯಕನನ್ನೂ 1ಎಂಟನೆ ಅವತಾರಿಯೆನಿಸಿ ದೇವಕಿ ಎಂಟನೇಗರ್ಭದಿ ಜನಿಸಿ ಎಂಟನೆಮಾಸಶ್ರಾವಣಕೃಷ್ಣಾಷ್ಟಮಿ ದಿನ ನಟ್ಟಿರುಳಿನಲಿಸೃಷ್ಟಿಗಿಳಿದ ಶ್ರೀಕೃಷ್ಣನ 2ಮಧುರಾ ಪಟ್ಟಣದಿ ಮೈದೋರಿ ಬಹುವಿಧವಾಗಿ ಗೋಕುಲದೊಳಗಾದಧಿಘೃತಚೋರಕನೆಂದು ಯಶೋದೆಗೆಪದುಮಾಕ್ಷಿಯರು ಬಂದು ದೂರುವ ಕೃಷ್ಣನ 3ದನುಜೆ ಪೂತನೆಯಸುಗೊಂಡು ತನ್ನಜನನಿಗೋಪಿಗೆ ಬಾಯೊಳ್ ತೋರ್ದ ಬ್ರಹ್ಮಾಂಡವನಜಾಕ್ಷಿಯರ ಕೂಡಿ ಯಮುನಾ ತೀರದೊಳಾಡಿವನಿತೆಯರುಡುವ ಶೀರೆಗಳೊಯ್ದ ಕೃಷ್ಣನೇ 4ಗೋವಳರರಸನೆಂದೆನಿಸಿ ಶಿರಿಗೋವರ್ಧನವೆತ್ತಿಗೋವ್ಗಳ ಮೇಸಿ ಪಾವಕನುಕಾಳಿಮರ್ದನ ಗೈದು ಮಾವ ಕಂಸನ ಗೆಲ್ದಮಧುರೆಯೊಳ್ ಕೃಷ್ಣನಾ 5ದ್ವಾರಕಾಪುರವೊಂದ ರಚಿಸಿ ಬಲವೀರರಾಮನ ದೊರೆರಾಯನೆಂದೆನಿಸಿನಾರಿಯರ್ ಹದಿನಾರು ಸಾವಿರ ವಡಗೂಡಿಮಾರಕೇಳಿಯೊಳ್ ಮುದ್ದು ತೋರುವ ಕೃಷ್ಣನ 6ಶರದ ಸೇತುವಿಗೆ ಮೈಯ್ಯಾಂತ ಉಟ್ಟಶೆರಗೀಗೆ ವರವ ದ್ರೌಪದಿಗೊಲಿದಿತ್ತನರನ ಸಾರಥಿಯಾಗಿ ಕುರುನೃಪರನು ಗೆಲ್ದುಧರೆಯ ಪಟ್ಟವ ಧರ್ಮಜನಿಗಿತ್ತ ಕೃಷ್ಣನೆ 7ದುಷ್ಟ ನಿಗ್ರಹನೆಂಬ ಬಿರುದೂ ಭಕ್ತರಕ್ಷಕನೆಂದು ಮೂರ್ಲೋಕವದೆಂದೂಸೃಷ್ಟಿಯೊಳ್ ನರಜನರು ನಮಿಸಿ ಪೂಜಿಸಲೆಂದುಬಿಟ್ಟರು ದ್ವಾರಕಾಪುರವ ರಾಮಕೃಷ್ಣರು 8ಹಡಗಿನ ಮೇಲೇರಿ ಬಂದೂ ನಮ್ಮಉಡುಪಿಅನಂತೇಶನಿದಿರಾಗಿ ನಿಂದೂಕಡು ಕೃಪೆಯೊಳ್ ಭಕ್ತ ಕನಕನಿಗೊಲಿದವೊಡೆಯ ಗೊೀವಿಂದ ಗೋಪಾಲಕೃಷ್ಣನ 9
--------------
ಗೋವಿಂದದಾಸ
ಕರವೊಡ್ಡಿ ಬೇಡುವೆನು ಕಮಲದಳನೇತ್ರಕರುಣದಲಿ ಸಲಹೆನ್ನ ಕಾಮಹರ ಮಿತ್ರ ಪಕಾಯದಲಿ ಬಲವಿಲ್ಲ ಕಂಗಳಿಗೆ ಸುಖವಿಲ್ಲಕೈಯ್ಯೊಳಗೆ ಹಣವಿಲ್ಲ ಬಾಯಬಲವಿಲ್ಲಕಾಯವಿದು ನೀನಿಟ್ಟ ಮಾಯಪಾಶಕೆ ಸಿಕ್ಕಿಹೇಯವಾದುದು ಸಲಹೋ ಹೇ ಲಕ್ಷ್ಮೀರಮಣ 1ಕಾಲನಾಳುಗಳೆಮ್ಮ ಕಾಲಕೈಗಳಕಟ್ಟಿಕಾಲದಂಡದಿ ಬಡಿದು ಕಾಲನೆಡೆಗೈದೂಕಾಲಮೇಘದ ತೆರದಿ ಕಾಲನಂತೆ ಘರ್ಜಿಸುವಕಾಲದಲಿ ಕಾಯ್ವವರ ಕಾಣೆ ನಾಳಿನಲೀ 2ಕರಿರಾಜನನು ಕಾಯ್ದೆ ಕಂಬದಲಿ ಮೈತೋರ್ದೆಖರ ದೂಷಣ ನಿನ್ನ ಕರದಿ ಶಿರ ವರಿದೀಕರುಣದಿಂದಲಿ ದ್ರೌಪದಿಯ ಸೆರಗಿಗಕ್ಷಯವಿತ್ತೆಕರವಿಡಿದು ಸಲಹೆನ್ನ ಕಲುಶ ಸಂಹಾರಾ 3ಕಂದನಪರಾಧವನು ತಂದೆ ಕ್ಷಮಿಸುವ ತೆರದಿಕಂದುಕುಂದುಗಳೆನ್ನೊಳಿರಲು ನೀ ಕ್ಷಮಿಸಿಕಂದನಂದದಿ ನೋಡಿಕಂದರ್ಪಜನಕನೆಚಂದದಲಿ ಸಲಹೊ ಗೋವಿಂದದಾಸನನೂ 4
--------------
ಗೋವಿಂದದಾಸ
ಕೆಟ್ಟಿತು ಕೆಲಸವೆಲ್ಲ - ಲೋಕದಿ ಕಾಮನಟ್ಟುಳಿದಶನವಾಯಿತು ಪ.ಬಟ್ಟೆ ತಪ್ಪಿ ಮುಂದೆ ಕೆಟ್ಟು ಕರ್ಮಿಯಾಗಿಬಿಟ್ಟು ಮುಂದಣ ಪಥವ - ಹೇ ದೇವಾ ಅಪಸತ್ಯ ಕಾಮ ಕರ್ಮವು ಧರ್ಮದ ಬಲಮತ್ತೆ ಅಡಗಿಹೋಯಿತುಎತ್ತ ನೋಡಲು ನೀಚವೃತ್ತಿಯೆತುಂಬಿಅತ್ಯಂತ ಪ್ರಬಲವಾಯ್ತೋ ಹೇ ದೇವಾ 1ಹೊತ್ತುಹೊತ್ತಿಗೆ ಹಲವು ಲಂಪಟತನದಲಿಚಿತ್ತ ಚಂಚಲವಾಯಿತುಸತ್ತು ಹುಟ್ಟುವ ಸುಳಿಯಲ್ಲದೆ ಮತ್ತೊಂದುಗೊತ್ತು ಇಲ್ಲದೆ ಹೋಯಿತ್ತೋ ಹೆ ದೇವಾ 2ಪೇಳುವುದೇನಿನ್ನು ದುರ್ಜನರ ಸಂಗದೋಲಾಟ ಸೊಗಸಾಯಿತುಕೀಳು ಮೇಲು ಮೇಲು ಕೀಳಾಗಿ ನಡೆಯುವಕಾಲವೆಗ್ಗಳವಾಯಿತೋ ಹೇ ದೇವಾ3ಆಳುವ ಅರಸರಿಗೆಲ್ಲ ಕಾಂತನದಾಸೆಮೇಲು ಮೇಲಾಯಿತಯ್ಯನೀಲ ಮೇಘಶ್ಯಾಮ ನಿನ್ನಾಳೆಂಬರಿಗೆಕೂಳು ಹುಟ್ಟದೆ ಹೋಯಿತೋ ಹೇ ದೇವಾ 4ಅರಿಷಡ್ವರ್ಗದಲಿ ಸಿಲುಕಿ ಸುಜ್ಞಾನದಅರಿವು ಇಲ್ಲದೆ ಹೋಯಿತುಕರಣಾಳು ಶ್ರೀ ಪುರಂದರವಿಠಲನೆ ನಿನ್ನಸ್ಮರಣೆಯಿಲ್ಲದೆ ಹೋಯಿತೋ ಹೇ ದೇವಾ 5
--------------
ಪುರಂದರದಾಸರು
ಕೇಶವ -ಮಾಧವ - ಗೋವಿಂದ ವಿಠಲೆಂಬದಾಸಯ್ಯ ಬಂದ ಕಾಣೆ ಪ.ದೋಷರಹಿತ ನರವೇಷವ ಧರಿಸಿದ ದಾಸಯ್ಯ ಬಂದ ಕಾಣೆಘಳಿಲನೆ ಕೂರ್ಮ ತಾನಾಗಿ ಗಿರಿಯಪೊತ್ತ ದಾಸಯ್ಯ ಬಂದ ಕಾಣೆಇಳೆಯಕದ್ದ ಸುರನ ಕೋರೆದಾಡಿಯ ಅಳಿದ ದಾಸಯ್ಯ ಬಂದ ಕಾಣೆಛಲದಿ ಕಂಬದಿ ಬಂದು ಅಸುರನ ಸೀಳಿದ ದಾಸಯ್ಯ ಬಂದ ಕಾಣೆ 1ಬಲಿಯ ದಾನವಬೇಡಿ ನೆಲವನಳೆದು ನಿಂದ ದಾಸಯ್ಯ ಬಂದ ಕಾಣೆಮತಿತ ಕ್ಷತ್ರಿಯರ ಕು¯ವ ಸಂಹರಿಸಿದ ದಾಸಯ್ಯ ಬಂದ ಕಾಣೆಲಲನೆಯ ನೊಯ್ಯೆ ತಾ ತಲೆ ಹತ್ತಾರನು ಕೊಂದ ದಾಸಯ್ಯ ಬಂದ ಕಾಣೆನೆಲ ಕೊತ್ತಿಕಂಸನ ಬಲವನಳಿದ ಮುದ್ದು ದಾಸಯ್ಯ ಬಂದ ಕಾಣೆ 2ಪುಂಡತನದಿ ಪೋಗಿ ಪುರವನುರುಪಿಬಂದ ದಾಸಯ್ಯ ಕಾಣೆಲಂಡರಸದೆಯಲು ತುರಗವನೇರಿದ ದಾಸಯ್ಯ ಬಂದ ಕಾಣೆಹಿಂಡುವೇದಗಳೆಲ್ಲ ಅರಸಿ ನೋಡಲು ಸಿಗದದಾಸಯ್ಯ ಬಂದ ಕಾಣೆಪಾಂಡುರಂಗ ನಮ್ಮಪುರಂದರ ವಿಠಲದಾಸಯ್ಯ ಬಂದ ಕಾಣೆ 3
--------------
ಪುರಂದರದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು